Homeಕರ್ನಾಟಕ‘14 ಶಾಸಕರು, 4 ಸಚಿವರು ನಮ್ಮಲ್ಲಿ ಲಂಚ ಕೇಳಿದ್ದಕ್ಕೆ ದಾಖಲೆ ಇವೆ’: ಗುತ್ತಿಗೆದಾರ ಸಂಘದ ಕಾರ್ಯಾಧ್ಯಕ್ಷ

‘14 ಶಾಸಕರು, 4 ಸಚಿವರು ನಮ್ಮಲ್ಲಿ ಲಂಚ ಕೇಳಿದ್ದಕ್ಕೆ ದಾಖಲೆ ಇವೆ’: ಗುತ್ತಿಗೆದಾರ ಸಂಘದ ಕಾರ್ಯಾಧ್ಯಕ್ಷ

- Advertisement -
- Advertisement -

ರಾಜ್ಯದ ಅಧಿಕಾರಿಗಳು, ಶಾಸಕರು ಮತ್ತು ಸಚಿವರು ಎಲ್ಲಾ ಸರ್ಕಾರಿ ಗುತ್ತಿಗೆಗಳಿಗೆ 40% ಲಂಚವನ್ನು ಕೇಳುತ್ತಾರೆ ಎಂದು ಆರೋಪಿಸಿದ ಸುಮಾರು ತಿಂಗಳ ನಂತರ, ಕರ್ನಾಟಕ ರಾಜ್ಯ ಗುತ್ತಿಗೆದಾರರ ಸಂಘ (ಕೆಎಸ್‌ಸಿಎ)ವು ತಮ್ಮ ಪ್ರತಿಪಾದನೆಯನ್ನು ನಿರೂಪಿಸಲು ಆಡಿಯೊ ಕ್ಲಿಪ್ ಅನ್ನು ಬಿಡುಗಡೆ ಮಾಡಿತ್ತು. ಇದೀಗ 15 ಶಾಸಕರು ಮತ್ತು ನಾಲ್ವರು ಸಚಿವರ ವಿರುದ್ಧ ಭ್ರಷ್ಟಾಚಾರದ ದಾಖಲೆಗಳು ತಮ್ಮ ಬಳಿ ಇದೆ ಎಂದು ಕೆಎಸ್‌ಸಿಎ ಕಾರ್ಯಾಧ್ಯಕ್ಷ ಆರ್. ಮಂಜುನಾಥ್ ಖ್ಯಾತ ಇಂಗ್ಲಿಷ್ ಸುದ್ದಿ ಮಾಧ್ಯಮ ದಿ ನ್ಯೂಸ್ ಮಿನಿಟ್‌ ಜೊತೆಗೆ ಮಾತನಾಡುತ್ತಾ ಹೇಳಿದ್ದಾರೆ.

ರಾಜ್ಯ ಸರ್ಕಾರವು ಬಾಕಿ ಇರುವ ಬಿಲ್‌ಗಳನ್ನು ತೆರವುಗೊಳಿಸದಿದ್ದರೆ, ಈ ದಾಖಲೆಗಳನ್ನು ಬಿಡುಗಡೆ ಮಾಡುತ್ತೇವೆ ಎಂದು ಕೆಎಸ್‌ಸಿಎ ಕಾರ್ಯಾಧ್ಯಕ್ಷರು ಎಚ್ಚರಿಕೆ ನೀಡಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಲಂಚ ನೀಡಲಾಗುತ್ತಿದೆ ಎಂಬುವುದನ್ನು ನಿರೂಪಿಸಲು ನಮ್ಮ ಬಳಿ ದಾಖಲೆಗಳಿವೆ. ಆದರೆ ಸಂತೋಷ್ ಪಾಟೀಲ್ ನಿಧನದ ನಂತರ ಭ್ರಷ್ಟಾಚಾರದ ದಾಖಲೆಗಳನ್ನು ಬಹಿರಂಗಪಡಿಸಲು ಹಿಂಜರಿಯುತ್ತಿದ್ದಾರೆ. ಅಲ್ಲದೆ ಈ ವಿವಾದದ ಬಿಂದುವಾಗಿದ್ದ ಸಚಿವರನ್ನೂ ಬಂಧಿಸಿರಲಿಲ್ಲ. ಇದು ಏನು ತೋರಿಸುತ್ತದೆ ಎಂದು ಮಂಜುನಾಥ್ ಪ್ರಶ್ನಿಸಿದ್ದಾರೆ.

ಬಾಕಿ ಇರುವ ಬಿಲ್‌ಗಳನ್ನು ಕ್ಲಿಯರ್ ಮಾಡಲು ಮಾಜಿ ಸಚಿವ ಕೆಎಸ್ ಈಶ್ವರಪ್ಪ ಅವರು ಲಂಚಕ್ಕೆ ಬೇಡಿಕೆ ಇಟ್ಟಿದ್ದಾರೆ ಎಂದು ಆರೋಪಿಸಿದ್ದ ಗುತ್ತಿಗೆದಾದ ಸಂತೋಷ್ ಪಾಟೀಲ್ ಅವರು 2022ರ ಏಪ್ರಿಲ್‌ನಲ್ಲಿ ಉಡುಪಿಯ ಹೋಟೆಲ್ ಕೊಠಡಿಯೊಂದರಲ್ಲಿ ಶವವಾಗಿ ಪತ್ತೆಯಾಗಿದ್ದರು.

ಮಂಜುನಾಥ್ ಅವರು ಚಿತ್ರದುರ್ಗದ ಬಿಜೆಪಿ ಶಾಸಕ ಜಿ.ಎಚ್.ತಿಪ್ಪಾರೆಡ್ಡಿ ನಡುವೆ ನಡೆದ ಸಂಭಾಷಣೆಯ ಆಡಿಯೋ ಕ್ಲಿಪ್ ಅನ್ನು ಪತ್ರಿಕಾಗೋಷ್ಠಿಯಲ್ಲಿ ಪ್ಲೇ ಮಾಡಿದ್ದರು. ಈ ಸಂಭಾಷಣೆಯಲ್ಲಿ, ಮಂಜುನಾಥ್ ಅವರ ಧ್ವನಿಯು ಕೇಳಿಸುತ್ತದೆ,“(ಗುತ್ತಿಗೆ ಕಾಮಗಾರಿ) ಬಿಲ್ ಮಾಡಬೇಡಿ ಎಂದು ನೀವು ಹೇಗೆ ಹೇಳುತ್ತೀರಿ? ಅದು ತಪ್ಪಲ್ಲವೆ.(ಉಳಿದ ಲಂಚದ ಮೊತ್ತ) ನಾನು ನಿಮಗೆ ನೀಡುತ್ತೇನೆ… 5 ರಿಂದ 6 ಕೋಟಿ ರೂ. ಬಾಕಿ ಇವೆ. ನಾನು ಹೇಗೆ ಜೀವನ ನಡೆಸುವುದು?” ಎಂದು ಕೇಳಿದ್ದರು.

“ಶಾಸಕ ಲಂಚ ಕೇಳಿದ್ದಕ್ಕೆ ನನ್ನ ಬಳಿ ಆಡಿಯೋ ಕ್ಲಿಪ್‌ಗಳು, ವಾಟ್ಸ್‌ಆ್ಯಪ್ ಚಾಟ್‌ಗಳು ಮತ್ತು ಇತರ ದಾಖಲೆಗಳಿವೆ. ಹಾಗಾಗಿ ಇದನ್ನು ಮಾಧ್ಯಮಗಳ ಮುಂದೆ ಇಡಲು ಬಯಸಿದ್ದೇನೆ. ಇತರ ಗುತ್ತಿಗೆದಾರರಿಗೆ ಮಾದರಿಯಾಗಲು ಬೇಕಾಗಿ ನಾನು ಮುಂದೆ ನಿಂತಿದ್ದೇನೆ. 2019 ರಿಂದ ಹಿರಿಯ ಶಾಸಕರೊಬ್ಬರಿಗೆ ನಾನು ಹಣ ಕೊಡಬೇಕಾಗಿತ್ತು” ಎಂದು ಮಂಜುನಾಥ್ ತಿಳಿಸಿದ್ದಾರೆ.

“2019 ರಲ್ಲಿ ನಾನು PWD ಕಚೇರಿಯನ್ನು ನಿರ್ಮಿಸಿದೆ. ಆದರೆ ಅದರ ಬಿಲ್ ಇನ್ನೂ ಕ್ಲಿಯರ್ ಆಗಿಲ್ಲ. ನಾನು ಚಿತ್ರದುರ್ಗದಲ್ಲಿ ವಿಭಾಗ ಕಚೇರಿಯನ್ನು ನಿರ್ಮಿಸಿದ್ದೇನೆ, ಅದಕ್ಕೂ 5% ಕ್ಕಿಂತ ಹೆಚ್ಚು ಲಂಚ ನೀಡಬೇಕಾಗಿತ್ತು. ಮೊದಲ ಕೋವಿಡ್-19 ಲಾಕ್‌ಡೌನ್ ಸಮಯದಲ್ಲಿ, ನಾನು 250 ಹಾಸಿಗೆಗಳ ಆಸ್ಪತ್ರೆಗಾಗಿ ವೈದ್ಯಕೀಯ ಗ್ಯಾಸ್ ಪೈಪ್‌ಲೈನ್ (MGS) ವ್ಯವಸ್ಥೆಯನ್ನು ನಿರ್ಮಿಸಿದೆ. ಇದು 12 ಕೋಟಿ ರೂಪಾಯಿ ಮೌಲ್ಯದ ಯೋಜನೆಯಾಗಿದ್ದು, ಇದಕ್ಕಾಗಿ ನಾನು 12.5 ಲಕ್ಷ ರೂಪಾಯಿ ಲಂಚ ನೀಡಬೇಕಾಯಿತು” ಎಂದು ಅವರು ಹೇಳಿದ್ದಾರೆ.

ಸುಮಾರು 25,000 ಕೋಟಿ ಮೌಲ್ಯದ ಬಿಲ್‌ಗಳು ಸರ್ಕಾರದ ಬಳಿ ಬಾಕಿ ಇವೆ ಎಂದು ಸಂಘದ ಸದಸ್ಯರು ಆರೋಪಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಡದಿ ರೈತರ ವಿಚಾರದಲ್ಲಿ ಸರ್ಕಾರದ ನಿರ್ಧಾರ ಸ್ವಾಗತಾರ್ಹ ಆದರೆ.., ಸಂಯುಕ್ತ ಹೋರಾಟ ಸಮಿತಿಯ ಎಚ್ಚರಿಕೆಯ ಮಾತು

ಬಿಡದಿ ಟೌನ್‌ಶಿಪ್ ವಿಚಾರದಲ್ಲಿ ಬಲವಂತವಾಗಿ ಯಾವುದೇ ರೈತರ ಭೂಮಿ ಕಿತ್ತುಕೊಳ್ಳುವುದಿಲ್ಲ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳುತ್ತಿರುವುದು ಕೇವಲ ಮಾತಿನ ಜಾಣ್ಮೆಯಷ್ಟೇ. ಬಿಡದಿ ಭಾಗದ ಮೂರು ಗ್ರಾಮಗಳಿಗೆ ಹೊರಡಿಸಲಾಗಿರುವ ಭೂಸ್ವಾಧೀನದ ಅಂತಿಮ ಅಧಿಸೂಚನೆಯನ್ನು ಸಂಪೂರ್ಣವಾಗಿ...

“8.5 ಕೆಜಿ ತೂಕ ಇಳಿಸಿಕೊಂಡ ಸೋನಮ್ ವಾಂಗ್‌ಚುಕ್ ಜೀವಕ್ಕೆ ಅಪಾಯ: ಬಲವಂತ ಆಹಾರ ನೀಡುವಂತೆ ದೆಹಲಿ ಹೈಕೋರ್ಟ್‌ನಲ್ಲಿ ಪಿಐಎಲ್”

ದೇಶದ ಶೈಕ್ಷಣಿಕ ವ್ಯವಸ್ಥೆಯ ಭವಿಷ್ಯವನ್ನು ಗಾಳಿಗೆ ತೂರಿರುವ ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಸಾಲು ಸಾಲು ಭ್ರಷ್ಟಾಚಾರದ ವಿರುದ್ಧ ಸಿಡಿದೆದ್ದು, ದೆಹಲಿಯ ಜಂತರ್ ಮಂತರ್‌ನಲ್ಲಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಪ್ರಖ್ಯಾತ ಹವಾಮಾನ ಮತ್ತು...

ಇನ್‌ಸ್ಟಾಮಾರ್ಟ್‌ನಲ್ಲಿ ಸಿಗಲಿದೆ ಎಲ್‌ಪಿಜಿ ಸಿಲಿಂಡರ್: ಬೆಂಗಳೂರಿನಲ್ಲಿ ಹೊಸ ಸೇವೆ ಆರಂಭ!

ಬೆಂಗಳೂರು: ದೇಶದಲ್ಲೇ ಮೊದಲ ಬಾರಿಗೆ ಬೆಂಗಳೂರಿನ ಗ್ರಾಹಕರು ಇನ್ನು ಮುಂದೆ ಪ್ರಮುಖ ಕ್ವಿಕ್ ಕಾಮರ್ಸ್ ಸಂಸ್ಥೆಯಾದ 'ಇನ್‌ಸ್ಟಾಮಾರ್ಟ್' (Instamart) ಆ್ಯಪ್ ಮೂಲಕವೇ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ಗಳನ್ನು ಬುಕ್ ಮಾಡಬಹುದು. ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್...

ಬಿಡದಿ ರೈತರ ಹೋರಾಟಕ್ಕೆ ಜಯ: ಬಲವಂತವಾಗಿ ಒಬ್ಬೇ ಒಬ್ಬ ರೈತರ ಜಮೀನನ್ನೂ ಪಡೆಯಲ್ಲ ಸಿಎಂ ಡಿ.ಕೆ.ಶಿವಕುಮಾರ್

"ಬಿಡದಿ ಸ್ಮಾರ್ಟ್ ಸಿಟಿ/ಟೌನ್ ಶಿಪ್ ಯೋಜನೆಯ ಹೆಸರಿನಲ್ಲಿ ಬಲವಂತವಾಗಿ ಒಬ್ಬೇ ಒಬ್ಬ ರೈತರ ಅಥವಾ ರೈತ ಮಹಿಳೆಯರ ಜಮೀನನ್ನು ನಮ್ಮ ಸರ್ಕಾರ ಭೂಸ್ವಾಧೀನ ಮಾಡಿಕೊಳ್ಳುವುದಿಲ್ಲ," ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. ಬಿಡದಿ ಟೌನ್‌ಶಿಪ್...

ಪಶ್ಚಿಮ ಬಂಗಾಳ: TMC ಬಂಡಾಯ ನಾಯಕ ರಿತಬ್ರತ ಬ್ಯಾನರ್ಜಿಗೆ ವಿಪಕ್ಷ ಸ್ಥಾನ ನೀಡಿದ್ದಕ್ಕೆ ನ್ಯಾಯಾಧೀಶರ ತೀವ್ರ ಆಕ್ಷೇಪ

ತೃಣಮೂಲ ಕಾಂಗ್ರೆಸ್‌ನ ಬಂಡಾಯ ಬಣದ ಮುಖ್ಯಸ್ಥ ರಿತಬ್ರತ ಬ್ಯಾನರ್ಜಿ ಅವರನ್ನು ಪಶ್ಚಿಮ ಬಂಗಾಳದ ವಿಧಾನಸಭೆಯ ವಿರೋಧ ಪಕ್ಷದ ನಾಯಕರನ್ನಾಗಿ ನೇಮಕ ಮಾಡುವಲ್ಲಿ ಸ್ಪೀಕರ್ ರತೀಂದ್ರ ಬೋಸ್ ತೋರಿರುವ "ತರಾತುರಿ"ಯನ್ನು ಕಲ್ಕತ್ತಾ ಹೈಕೋರ್ಟ್‌ನ ನ್ಯಾಯಮೂರ್ತಿ...

ಎರಡು ವರ್ಷಗಳಲ್ಲಿ 1,679 ಜನರನ್ನು ಬಾಂಗ್ಲಾದೇಶಕ್ಕೆ ಕಳುಹಿಸಲಾಗಿದೆ; ಇವರಲ್ಲಿ 193 ಮಂದಿ ವಿದೇಶಿಯರೆಂದು ಘೋಷಿತರು: ಅಸ್ಸಾಂ ಸರ್ಕಾರ

ಗುವಾಹಟಿ: ಕಳೆದ ಎರಡು ವರ್ಷಗಳ ಅವಧಿಯಲ್ಲಿ ಗಡೀಪಾರು, ಗಡಿಯಿಂದ ಆಚೆಗೆ ತಳ್ಳುವಿಕೆ (ಪುಶ್‌ಬ್ಯಾಕ್) ಅಥವಾ ಉಚ್ಚಾಟನೆ ಪ್ರಕ್ರಿಯೆಯ ಮೂಲಕ ಒಟ್ಟು 1,679 ಜನರನ್ನು ಬಾಂಗ್ಲಾದೇಶಕ್ಕೆ ಕಳುಹಿಸಲಾಗಿದೆ ಎಂದು ಅಸ್ಸಾಂ ಸರ್ಕಾರ ರಾಜ್ಯ ವಿಧಾನಸಭೆಗೆ...

17 ದಿನ, 9 ಕೆಜಿ ತೂಕ ಇಳಿಕೆ, ಸೋನಮ್ ವಾಂಗ್‌ಚುಕ್ ಆರೋಗ್ಯ ಸ್ಥಿತಿ ಗಂಭೀರ: ಉಪವಾಸ ಕೈಬಿಡುವಂತೆ ಅಖಿಲೇಶ್-ಕೇಜ್ರಿವಾಲ್ ಮನವಿ

ದೇಶದ ಶಿಕ್ಷಣ ವ್ಯವಸ್ಥೆಯನ್ನು ಜರ್ಜರಿತಗೊಳಿಸಿರುವ ಸರಣಿ ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು ಭ್ರಷ್ಟಾಚಾರವನ್ನು ವಿರೋಧಿಸಿ ಹಾಗೂ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ಖ್ಯಾತ ಪರಿಸರ ಕಾರ್ಯಕರ್ತ ಸೋನಮ್...

ಎನ್‌ಸಿಪಿಯ ಎರಡೂ ಬಣಗಳಲ್ಲೂ ಬಿರುಸಿನ ಬೆಳವಣಿಗೆ : ಬಿಜೆಪಿ ತೆಕ್ಕೆಗೆ ಮತ್ತೊಂದು ಪಕ್ಷ?

ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿಯ (ಎನ್‌ಸಿಪಿ) ಎರಡೂ ಬಣಗಳ ಮುಖ್ಯ ನಾಯಕರು ಮಂಗಳವಾರ (ಜು.14) ರಾತ್ರಿ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದ್ದಾರೆ. ಈ ಸಭೆಯು ಶರದ್ ಪವಾರ್ ಅವರ...

ಮೋದಿಯ ಮೌನವನ್ನು ಪ್ರಶ್ನಿಸುವ ರಾಹುಲ್ ಗಾಂಧಿ, ಸಾರ್ವಜನಿಕ ಹಿತಾಸಕ್ತಿಯ ಈ ವಿಷಯಗಳಲ್ಲಿ ತಾವೇಕೆ ಮೌನ?

ಪ್ರಧಾನಿ ಮೋದಿಯವರದ್ದು ಜಾಣ ಮೌನ ಎಂದು ಈಗಾಗಲೇ ಈ ದೇಶದ ಜನಕ್ಕೆ ಮನವರಿಕೆಯಾಗಿದೆ. ಕಳೆದ 14ವರ್ಷದಲ್ಲಿ ಒಂದೇ ಒಂದು ಪ್ರೆಸ್ ಮೀಟ್‌ಅನ್ನು ಅಡ್ರೆಸ್ ಮಾಡದೆ ಇರುವವರ ಬಗ್ಗೆ ಜನ ಹೆಚ್ಚಿನದ್ದೇನನ್ನು ನಿರೀಕ್ಷಿಸಲಾರರು, ಆದರೆ...

ಹೊಸ ಮತದಾರರ ಫಾರಂ 6ಕ್ಕೆ ಪೋಷಕರ ಎಸ್‌ಐಆರ್ ಕಡ್ಡಾಯಗೊಳಿಸಿದ ಚು. ಆಯೋಗ : ಸಂಪೂರ್ಣ ಕಾನೂನುಬಾಹಿರ ಎಂದ ಸಂಸದ ಜಾನ್ ಬ್ರಿಟ್ಟಾಸ್

ಹೊಸ ಮತದಾರರನ್ನು ನೋಂದಾಯಿಸಲು ಬಳಸುವ ತನ್ನ ಆನ್‌ಲೈನ್ ಅರ್ಜಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್) ಸಂಬಂಧಿಸಿದ ಹೊಸ ವಿಭಾಗವನ್ನು ಸೇರಿಸುವ ಮೂಲಕ ಚುನಾವಣಾ ಆಯೋಗವು (ಇಸಿ) "ಸಂಪೂರ್ಣವಾಗಿ ಕಾನೂನು ಅಧಿಕಾರವಿಲ್ಲದೆ ಕಾರ್ಯನಿರ್ವಹಿಸಿದೆ" ಎಂದು...