Homeಕರ್ನಾಟಕ‘14 ಶಾಸಕರು, 4 ಸಚಿವರು ನಮ್ಮಲ್ಲಿ ಲಂಚ ಕೇಳಿದ್ದಕ್ಕೆ ದಾಖಲೆ ಇವೆ’: ಗುತ್ತಿಗೆದಾರ ಸಂಘದ ಕಾರ್ಯಾಧ್ಯಕ್ಷ

‘14 ಶಾಸಕರು, 4 ಸಚಿವರು ನಮ್ಮಲ್ಲಿ ಲಂಚ ಕೇಳಿದ್ದಕ್ಕೆ ದಾಖಲೆ ಇವೆ’: ಗುತ್ತಿಗೆದಾರ ಸಂಘದ ಕಾರ್ಯಾಧ್ಯಕ್ಷ

- Advertisement -
- Advertisement -

ರಾಜ್ಯದ ಅಧಿಕಾರಿಗಳು, ಶಾಸಕರು ಮತ್ತು ಸಚಿವರು ಎಲ್ಲಾ ಸರ್ಕಾರಿ ಗುತ್ತಿಗೆಗಳಿಗೆ 40% ಲಂಚವನ್ನು ಕೇಳುತ್ತಾರೆ ಎಂದು ಆರೋಪಿಸಿದ ಸುಮಾರು ತಿಂಗಳ ನಂತರ, ಕರ್ನಾಟಕ ರಾಜ್ಯ ಗುತ್ತಿಗೆದಾರರ ಸಂಘ (ಕೆಎಸ್‌ಸಿಎ)ವು ತಮ್ಮ ಪ್ರತಿಪಾದನೆಯನ್ನು ನಿರೂಪಿಸಲು ಆಡಿಯೊ ಕ್ಲಿಪ್ ಅನ್ನು ಬಿಡುಗಡೆ ಮಾಡಿತ್ತು. ಇದೀಗ 15 ಶಾಸಕರು ಮತ್ತು ನಾಲ್ವರು ಸಚಿವರ ವಿರುದ್ಧ ಭ್ರಷ್ಟಾಚಾರದ ದಾಖಲೆಗಳು ತಮ್ಮ ಬಳಿ ಇದೆ ಎಂದು ಕೆಎಸ್‌ಸಿಎ ಕಾರ್ಯಾಧ್ಯಕ್ಷ ಆರ್. ಮಂಜುನಾಥ್ ಖ್ಯಾತ ಇಂಗ್ಲಿಷ್ ಸುದ್ದಿ ಮಾಧ್ಯಮ ದಿ ನ್ಯೂಸ್ ಮಿನಿಟ್‌ ಜೊತೆಗೆ ಮಾತನಾಡುತ್ತಾ ಹೇಳಿದ್ದಾರೆ.

ರಾಜ್ಯ ಸರ್ಕಾರವು ಬಾಕಿ ಇರುವ ಬಿಲ್‌ಗಳನ್ನು ತೆರವುಗೊಳಿಸದಿದ್ದರೆ, ಈ ದಾಖಲೆಗಳನ್ನು ಬಿಡುಗಡೆ ಮಾಡುತ್ತೇವೆ ಎಂದು ಕೆಎಸ್‌ಸಿಎ ಕಾರ್ಯಾಧ್ಯಕ್ಷರು ಎಚ್ಚರಿಕೆ ನೀಡಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಲಂಚ ನೀಡಲಾಗುತ್ತಿದೆ ಎಂಬುವುದನ್ನು ನಿರೂಪಿಸಲು ನಮ್ಮ ಬಳಿ ದಾಖಲೆಗಳಿವೆ. ಆದರೆ ಸಂತೋಷ್ ಪಾಟೀಲ್ ನಿಧನದ ನಂತರ ಭ್ರಷ್ಟಾಚಾರದ ದಾಖಲೆಗಳನ್ನು ಬಹಿರಂಗಪಡಿಸಲು ಹಿಂಜರಿಯುತ್ತಿದ್ದಾರೆ. ಅಲ್ಲದೆ ಈ ವಿವಾದದ ಬಿಂದುವಾಗಿದ್ದ ಸಚಿವರನ್ನೂ ಬಂಧಿಸಿರಲಿಲ್ಲ. ಇದು ಏನು ತೋರಿಸುತ್ತದೆ ಎಂದು ಮಂಜುನಾಥ್ ಪ್ರಶ್ನಿಸಿದ್ದಾರೆ.

ಬಾಕಿ ಇರುವ ಬಿಲ್‌ಗಳನ್ನು ಕ್ಲಿಯರ್ ಮಾಡಲು ಮಾಜಿ ಸಚಿವ ಕೆಎಸ್ ಈಶ್ವರಪ್ಪ ಅವರು ಲಂಚಕ್ಕೆ ಬೇಡಿಕೆ ಇಟ್ಟಿದ್ದಾರೆ ಎಂದು ಆರೋಪಿಸಿದ್ದ ಗುತ್ತಿಗೆದಾದ ಸಂತೋಷ್ ಪಾಟೀಲ್ ಅವರು 2022ರ ಏಪ್ರಿಲ್‌ನಲ್ಲಿ ಉಡುಪಿಯ ಹೋಟೆಲ್ ಕೊಠಡಿಯೊಂದರಲ್ಲಿ ಶವವಾಗಿ ಪತ್ತೆಯಾಗಿದ್ದರು.

ಮಂಜುನಾಥ್ ಅವರು ಚಿತ್ರದುರ್ಗದ ಬಿಜೆಪಿ ಶಾಸಕ ಜಿ.ಎಚ್.ತಿಪ್ಪಾರೆಡ್ಡಿ ನಡುವೆ ನಡೆದ ಸಂಭಾಷಣೆಯ ಆಡಿಯೋ ಕ್ಲಿಪ್ ಅನ್ನು ಪತ್ರಿಕಾಗೋಷ್ಠಿಯಲ್ಲಿ ಪ್ಲೇ ಮಾಡಿದ್ದರು. ಈ ಸಂಭಾಷಣೆಯಲ್ಲಿ, ಮಂಜುನಾಥ್ ಅವರ ಧ್ವನಿಯು ಕೇಳಿಸುತ್ತದೆ,“(ಗುತ್ತಿಗೆ ಕಾಮಗಾರಿ) ಬಿಲ್ ಮಾಡಬೇಡಿ ಎಂದು ನೀವು ಹೇಗೆ ಹೇಳುತ್ತೀರಿ? ಅದು ತಪ್ಪಲ್ಲವೆ.(ಉಳಿದ ಲಂಚದ ಮೊತ್ತ) ನಾನು ನಿಮಗೆ ನೀಡುತ್ತೇನೆ… 5 ರಿಂದ 6 ಕೋಟಿ ರೂ. ಬಾಕಿ ಇವೆ. ನಾನು ಹೇಗೆ ಜೀವನ ನಡೆಸುವುದು?” ಎಂದು ಕೇಳಿದ್ದರು.

“ಶಾಸಕ ಲಂಚ ಕೇಳಿದ್ದಕ್ಕೆ ನನ್ನ ಬಳಿ ಆಡಿಯೋ ಕ್ಲಿಪ್‌ಗಳು, ವಾಟ್ಸ್‌ಆ್ಯಪ್ ಚಾಟ್‌ಗಳು ಮತ್ತು ಇತರ ದಾಖಲೆಗಳಿವೆ. ಹಾಗಾಗಿ ಇದನ್ನು ಮಾಧ್ಯಮಗಳ ಮುಂದೆ ಇಡಲು ಬಯಸಿದ್ದೇನೆ. ಇತರ ಗುತ್ತಿಗೆದಾರರಿಗೆ ಮಾದರಿಯಾಗಲು ಬೇಕಾಗಿ ನಾನು ಮುಂದೆ ನಿಂತಿದ್ದೇನೆ. 2019 ರಿಂದ ಹಿರಿಯ ಶಾಸಕರೊಬ್ಬರಿಗೆ ನಾನು ಹಣ ಕೊಡಬೇಕಾಗಿತ್ತು” ಎಂದು ಮಂಜುನಾಥ್ ತಿಳಿಸಿದ್ದಾರೆ.

“2019 ರಲ್ಲಿ ನಾನು PWD ಕಚೇರಿಯನ್ನು ನಿರ್ಮಿಸಿದೆ. ಆದರೆ ಅದರ ಬಿಲ್ ಇನ್ನೂ ಕ್ಲಿಯರ್ ಆಗಿಲ್ಲ. ನಾನು ಚಿತ್ರದುರ್ಗದಲ್ಲಿ ವಿಭಾಗ ಕಚೇರಿಯನ್ನು ನಿರ್ಮಿಸಿದ್ದೇನೆ, ಅದಕ್ಕೂ 5% ಕ್ಕಿಂತ ಹೆಚ್ಚು ಲಂಚ ನೀಡಬೇಕಾಗಿತ್ತು. ಮೊದಲ ಕೋವಿಡ್-19 ಲಾಕ್‌ಡೌನ್ ಸಮಯದಲ್ಲಿ, ನಾನು 250 ಹಾಸಿಗೆಗಳ ಆಸ್ಪತ್ರೆಗಾಗಿ ವೈದ್ಯಕೀಯ ಗ್ಯಾಸ್ ಪೈಪ್‌ಲೈನ್ (MGS) ವ್ಯವಸ್ಥೆಯನ್ನು ನಿರ್ಮಿಸಿದೆ. ಇದು 12 ಕೋಟಿ ರೂಪಾಯಿ ಮೌಲ್ಯದ ಯೋಜನೆಯಾಗಿದ್ದು, ಇದಕ್ಕಾಗಿ ನಾನು 12.5 ಲಕ್ಷ ರೂಪಾಯಿ ಲಂಚ ನೀಡಬೇಕಾಯಿತು” ಎಂದು ಅವರು ಹೇಳಿದ್ದಾರೆ.

ಸುಮಾರು 25,000 ಕೋಟಿ ಮೌಲ್ಯದ ಬಿಲ್‌ಗಳು ಸರ್ಕಾರದ ಬಳಿ ಬಾಕಿ ಇವೆ ಎಂದು ಸಂಘದ ಸದಸ್ಯರು ಆರೋಪಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ವೆಟ್ಟುವಂ’ ಪಾ.ರಂಜಿತ್ ಅವರ ಅದ್ಭುತ ಅಪೋಕಲಿಪ್ಟಿಕ್ ಆಕ್ಷನ್ ಸಿನಿಮಾ: ರಂಗನಾಥ್ ಆರ್. ವಿ

ತಮಿಳಿನ ಖ್ಯಾತ ನಿರ್ದೇಶಕ ಪಾ.ರಂಜಿತ್ ಅವರ ನಿರ್ದೇಶನದಲ್ಲಿ ಮೂಡಿಬರುತ್ತಿರುವ 'ವೆಟ್ಟುವಂ' ಚಿತ್ರವನ್ನು 'ಲರ್ನ್ ಆಂಡ್ ಟೀಚ್ ಪ್ರೊಡಕ್ಷನ್' ಸಂಸ್ಥೆಯ ಸಹಯೋಗದೊಂದಿಗೆ, ಪಾ.ರಂಜಿತ್ ಅವರ 'ನೀಲಂ ಪ್ರೊಡಕ್ಷನ್ಸ್' ನಿರ್ಮಿಸಿದೆ. ಈ ಚಿತ್ರದ ಜಗತ್ತನ್ನು ಪರಿಚಯಿಸುವ...

SIR ಮೋಸ: ಅಗತ್ಯಬಿದ್ದರೆ ಕಾಂಗ್ರೆಸ್‌ನಿಂದ ಕಾನೂನು ಹೋರಾಟ ಬಿ.ಕೆ. ಹರಿಪ್ರಸಾದ್ ಎಚ್ಚರಿಕೆ

ಕರ್ನಾಟಕದಲ್ಲಿ ಪ್ರಸ್ತುತ ನಡೆಯುತ್ತಿರುವ 2026ರ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಭಾರಿ ಪ್ರಮಾಣದ ತಾಂತ್ರಿಕ ಲೋಪಗಳು, ಅಂಕಿಅಂಶಗಳ ವ್ಯತ್ಯಾಸ ಹಾಗೂ ಮತದಾರರ ಪಟ್ಟಿಗೆ ಸಂಬಂಧಿಸಿದಂತೆ ಸ್ಪಷ್ಟತೆಯ ಕೊರತೆ ಎದ್ದುಕಾಣುತ್ತಿದೆ ಎಂದು...

ವಿಚಾರಣೆಯಿಲ್ಲದೆ ಆರು ವರ್ಷ ಜೈಲುವಾಸ: ಉಮರ್ ಖಾಲಿದ್ ಹೋರಾಟದ ಹಾದಿ

ಸೆಪ್ಟೆಂಬರ್ 13, 2020 ರಂದು, ಮಾನವ ಹಕ್ಕುಗಳ ಯುವ ಕಾರ್ಯಕರ್ತ ಉಮರ್ ಖಾಲಿದ್ ಅವರನ್ನು ದೇಶದ ರಾಜಧಾನಿಯಲ್ಲಿ ಗುರಿಯಾಗಿಸಿಕೊಳ್ಳಲಾಯಿತು. ವಿಚಾರಣೆಯೇ ಇಲ್ಲದೆ ಅವರು ಜೈಲಿನಲ್ಲಿ ಆರು ವರ್ಷಗಳನ್ನು ಪೂರೈಸಿದ್ದಾರೆ. ಸರ್ಕಾರದ ವಿರುದ್ಧದ ರಾಜಕೀಯ...

ಕನ್ವರ್ ಯಾತ್ರೆ ವೇಳೆ 18 ದ್ವೇಷ ಘಟನೆಗಳು: ಮುಸ್ಲಿಮರು, ಅವರ ವ್ಯಾಪಾರಗಳನ್ನು ಗುರಿಯಾಗಿಸಿಕೊಂಡ ಪ್ರಕರಣಗಳೇ ಹೆಚ್ಚು; APCR ವರದಿ

ನವದೆಹಲಿ: 2026ರ ಕನ್ವರ್ ಯಾತ್ರೆಯ 13 ದಿನಗಳ ಅವಧಿಯಲ್ಲಿ ಹಿಂಸಾಚಾರ, ಬಲವಂತ, ತಾರತಮ್ಯ, ಆರ್ಥಿಕ ಬಹಿಷ್ಕಾರ ಹಾಗೂ ಸಾರ್ವಜನಿಕ ಅಶ್ಲೀಲ ವರ್ತನೆಗೆ ಸಂಬಂಧಿಸಿದ ಕನಿಷ್ಠ 18 ಘಟನೆಗಳು ವರದಿಯಾಗಿವೆ ಎಂದು ನಾಗರಿಕ ಹಕ್ಕುಗಳ...

ಸಿಐಟಿಯು ಕಾನೂನು ಹೋರಾಟಕ್ಕೆ ಮೊದಲ ಜಯ: ಕನಿಷ್ಠ ವೇತನ ತಡೆಹಿಡಿದಿದ್ದ ಸರ್ಕಾರದ ಮೂರು ಸುತ್ತೋಲೆಗಳಿಗೆ ಹೈಕೋರ್ಟ್ ತಡೆ

ಸರ್ಕಾರಿ ಇಲಾಖೆಗಳು ಮತ್ತು ಸ್ಥಳೀಯ ಸಂಸ್ಥೆಗಳಲ್ಲಿ ಕೆಲಸ ಮಾಡುವ ಲಕ್ಷಾಂತರ ಕಾರ್ಮಿಕರ ಹೊಸ ಕನಿಷ್ಠ ವೇತನವನ್ನು ತಡೆಹಿಡಿದಿದ್ದ ಸರ್ಕಾರದ ನಿರ್ಧಾರಕ್ಕೆ ಹೈಕೋರ್ಟ್ ಬ್ರೇಕ್ ಹಾಕಿದೆ. ಹೊಸ ವೇತನ ನೀಡುವುದನ್ನು ಅಮಾನತಿನಲ್ಲಿಟ್ಟಿದ್ದ ಸರ್ಕಾರದ ಮೂರು...

ಟಿಎಂಸಿ ಹೆಸರು, ಚಿಹ್ನೆ ಫ್ರೀಜ್: ಮಮತಾ ಬ್ಯಾನರ್ಜಿಗೆ ‘ಫುಟ್‌ಬಾಲ್ ಪ್ಲೇಯರ್’, ಬಂಡಾಯ ಬಣಕ್ಕೆ ‘ಲಕೋಟೆ’ ಚಿಹ್ನೆ ನೀಡಿದ ಚುನಾವಣಾ ಆಯೋಗ

ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂಲ ಹೆಸರು ಮತ್ತು ಸಾಂಪ್ರದಾಯಿಕ 'ಹೂವು-ಹುಲ್ಲು' ಚಿಹ್ನೆಯನ್ನು ಮುಟ್ಟುಗೋಲು (ಫ್ರೀಜ್) ಹಾಕಿದ ನಂತರ, ಭಾರತೀಯ ಚುನಾವಣಾ ಆಯೋಗವು ಶುಕ್ರವಾರ ಎರಡೂ ಎದುರಾಳಿ ಬಣಗಳಿಗೆ ಪ್ರತ್ಯೇಕ ಮಧ್ಯಂತರ ಹೆಸರು...

‘ರೋಹಿತ್ ವೇಮುಲಾ ಸ್ಥಿತಿ ನನಗೆ ಬಾರದಿರಲಿ..’; ವಿದೇಶದಲ್ಲಿ ಕಷ್ಟಕ್ಕೆ ಸಿಲುಕಿದ ತಮಿಳುನಾಡಿನ ದಲಿತ ಸಂಶೋಧಕ

ಮಲೇಷ್ಯಾದಲ್ಲಿ ಪಿಎಚ್‌ಡಿ ವ್ಯಾಸಂಗ ಮಾಡುತ್ತಿರುವ ತಮಿಳುನಾಡಿನ ದಲಿತ ಸಂಶೋಧನಾ ವಿದ್ಯಾರ್ಥಿ ಭಾರತಿ ದಾಸನ್ ರಾಮನ್, ತಮಿಳುನಾಡು ಸರ್ಕಾರದ ಸಾಮಾಜಿಕ ನ್ಯಾಯ ಇಲಾಖೆಯು ನನ್ನನ್ನು ಗುರಿಯಾಗಿಸಿಕೊಂಡಿದೆ ಎಂದು ಆರೋಪಿಸಿದ್ದಾರೆ ಎಂದು 'ದಿ ನ್ಯೂಸ್‌ ಮಿನಿಟ್'...

DUSU ಚುನಾವಣೆ: ಮತದಾನ ಆರಂಭ; ವಿಜಯೋತ್ಸವ ಮೆರವಣಿಗೆಗೆ ದೆಹಲಿ ಹೈಕೋರ್ಟ್ ತಡೆ

ದೆಹಲಿ ವಿಶ್ವವಿದ್ಯಾಲಯದ ವಿದ್ಯಾರ್ಥಿ ಸಂಘದ (DUSU) 2026-27ನೇ ಸಾಲಿನ ಚುನಾವಣೆಗೆ ಶುಕ್ರವಾರ (ಸೆ.18) ಮತದಾನ ಆರಂಭವಾಗಿದೆ. ಬೆಳಗಿನ ಅವಧಿಯ ಕಾಲೇಜುಗಳ ವಿದ್ಯಾರ್ಥಿಗಳಿಗೆ ಬೆಳಿಗ್ಗೆ 8:30ರಿಂದ ಮಧ್ಯಾಹ್ನ 1ರವರೆಗೆ ಹಾಗೂ ಸಂಜೆ ಕಾಲೇಜುಗಳ ವಿದ್ಯಾರ್ಥಿಗಳಿಗೆ...

ಕರಾವಳಿ ಇತಿಹಾಸದಲ್ಲೇ ಪ್ರಥಮ: ಮಂಗಳೂರಿನಲ್ಲಿ ಸಿಎಂ ‘ಡಿ.ಕೆ ಶಿವಕುಮಾರ್’ ನೇತೃತ್ವದಲ್ಲಿ ರಾಜ್ಯ ಸಚಿವ ಸಂಪುಟ ಸಭೆ

ಕರಾವಳಿ ಕರ್ನಾಟಕದ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ರಾಜ್ಯ ಸಚಿವ ಸಂಪುಟ (Cabinet) ಸಭೆಯು ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ಪಡೀಲ್‌ನಲ್ಲಿರುವ ನೂತನ 'ಪ್ರಜಾ ಸೌಧ'ದಲ್ಲಿ (ಜಿಲ್ಲಾಡಳಿತ ಸೌಧ) ಶುಕ್ರವಾರ ವಿಜೃಂಭಣೆಯಿಂದ ಆರಂಭವಾಗಿದೆ....

ಟಿಎಂಸಿ ಹೆಸರು, ಚಿಹ್ನೆ ಬಳಕೆಗೆ ತಡೆ: ಚುನಾವಣಾ ಆಯೋಗದ ಆದೇಶ ‘ಕಾನೂನಿಗೆ ವಿರುದ್ಧ’ ಎಂದ ಮಮತಾ ಬಣ, ಆದೇಶ ಸ್ವಾಗತಿಸಿದ ಬಂಡಾಯ ಪಾಳಯ 

ಕೊಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತ ರಾಜಕಾರಣದಲ್ಲಿ ಪ್ರಮುಖ ಶಕ್ತಿಯಾಗಿರುವ ತೃಣಮೂಲ ಕಾಂಗ್ರೆಸ್‌ (ಟಿಎಂಸಿ)ಯ ಆಂತರಿಕ ಬಿಕ್ಕಟ್ಟು ಇದೀಗ ಪಕ್ಷದ ಹೆಸರು ಮತ್ತು ಚುನಾವಣಾ ಚಿಹ್ನೆಯ ಮೇಲಿನ ಹಕ್ಕಿನ ಸಂಘರ್ಷವಾಗಿ ತೀವ್ರಗೊಂಡಿದೆ. ಟಿಎಂಸಿಯ ಎರಡು...