Homeಕರ್ನಾಟಕಪ್ರಧಾನಿ ಹುದ್ದೆಯೆ ತಿರಸ್ಕರಿಸಿದ ನಾವು ಯಕಶ್ಚಿತ್‌ ಮಂತ್ರಿ ಸ್ಥಾನಕ್ಕೆ ಆಸೆ ಪಡಲ್ಲ: ಕುಮಾರಸ್ವಾಮಿ

ಪ್ರಧಾನಿ ಹುದ್ದೆಯೆ ತಿರಸ್ಕರಿಸಿದ ನಾವು ಯಕಶ್ಚಿತ್‌ ಮಂತ್ರಿ ಸ್ಥಾನಕ್ಕೆ ಆಸೆ ಪಡಲ್ಲ: ಕುಮಾರಸ್ವಾಮಿ

ಜೆಡಿಎಸ್‌ ಅನ್ನು ಮುಗಿಸುವ ಪ್ರಯತ್ನಗಳೆಲ್ಲ ವಿಫಲವಾಗಿವೆ ಎಂಬುದು ಗ್ರಾಮ ಪಂಚಾಯಿತಿ ಚುನಾವಣೆ ಫಲಿತಾಂಶದ ಮೂಲಕ ಬಿಜೆಪಿಗೆ ಮನವರಿಕೆಯಾಗಿದೆ. ಈ ಕಾರಣಕ್ಕೆ ಮೈತ್ರಿಯ ಕಪಟ ನಾಟಕವಾಡಲು ನಿಂತಿದೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

- Advertisement -
- Advertisement -

ಜೆಡಿಎಸ್ ಎನ್‌ಡಿಎ ಭಾಗವಾಗಲಿದೆ ಎಂದು ಹರಿದಾಡುತ್ತಿರುವ ಸುದ್ದಿಯ ಬಗ್ಗೆ ಸ್ಫಷ್ಟನೆ ನೀಡಿರುವ ಕುಮಾರಸ್ವಾಮಿ, ಈ ಹಿಂದೆ ವಾಜಪೇಯಿ ದೇವೇಗೌಡರಿಗೆ, ಜನತಾದಳಕ್ಕೆ ಬೆಂಬಲ ನೀಡುವುದಾಗಿ ಹೇಳಿದ್ದರು. ಆಗಲೇ ಪ್ರಧಾನಿ ಹುದ್ದೆ, ಕೇಂದ್ರದ ಅಧಿಕಾರ ತಿರಸ್ಕರಿಸಿದ ನಾವು, ಯಕಶ್ಚಿತ್‌ ಮಂತ್ರಿ ಸ್ಥಾನಕ್ಕೆ ಆಸೆ ಪಡಲ್ಲ ಎಂದು ಹೇಳಿದ್ದಾರೆ.

ಈ ಬಗ್ಗೆ ಸರಣಿ ಟ್ವೀಟ್‌ ಮಾಡಿರುವ ಕುಮಾರಸ್ವಾಮಿ, “ಜೆಡಿಎಸ್‌ ಅನ್ನು ಮುಗಿಸುವ ಪ್ರಯತ್ನಗಳೆಲ್ಲ ವಿಫಲವಾಗಿವೆ ಎಂಬುದು ಗ್ರಾಮ ಪಂಚಾಯಿತಿ ಚುನಾವಣೆ ಫಲಿತಾಂಶದ ಮೂಲಕ ಬಿಜೆಪಿಗೆ ಮನವರಿಕೆಯಾಗಿದೆ. ಇದೇ ಕಾರಣಕ್ಕೆ ಮೈತ್ರಿಯ ಕಪಟ ನಾಟಕವಾಡಲು ಬಿಜೆಪಿ ನಿಂತಿದೆ. ಇದಕ್ಕಾಗಿಯೇ ಜೆಡಿಎಸ್‌ ಎನ್‌ಡಿಎ ಸೇರಲಿದೆ ಎಂಬ ಕಲ್ಪಿತ ಸುದ್ದಿಗಳನ್ನು ವ್ಯವಸ್ಥಿತವಾಗಿ ಹರಡುತ್ತಿದೆ. ಇದೆಲ್ಲವೂ ಅಪ್ಪಟ ಸುಳ್ಳು” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಜೆಡಿಎಸ್‌‌ನ ಜಾತ್ಯಾತೀತತೆ ಪರೀಕ್ಷಿಸಿದವರಿಗೆ ಈ ಸಾವು ಉತ್ತರ ನೀಡಿರಬಹುದು: ಕುಮಾರಸ್ವಾಮಿ

“ಪ್ರಧಾನಿ ಅವರೊಂದಿಗೆ ರಾಜ್ಯ ಬಿಜೆಪಿ ನಾಯಕರಿಗಿಂತಲೂ ಉತ್ತಮ ಬಾಂಧವ್ಯ ನನಗಿದೆ. ಯಡಿಯೂರಪ್ಪ ಹಿರಿಯರು ಎಂಬ ಗೌರವವೂ ಇದೆ. ವಿರೋಧಕ್ಕಾಗಿ ವಿರೋಧ ಪಕ್ಷವಾಗಿರಬಾರದು ಎಂಬ ಆಶಯವೂ ಇದೆ. ಬಿಜೆಪಿ ಅಪಪ್ರಚಾರಕ್ಕೆ ಕೈ ಹಾಕಿದರೆ, ಬಾಂಧವ್ಯ, ಗೌರವ, ಆಶಯಗಳಿಗೆ ಧಕ್ಕೆಯಾಗಲಿದೆ. ಜೆಡಿಎಸ್‌ ವಿಚಾರದಲ್ಲಿ ಬಿಜೆಪಿಯು ಎಚ್ಚರವಾಗಿರಲಿ” ಎಂದು ಅವರು ಎಚ್ಚರಿಸಿದ್ದಾರೆ.

ಇದನ್ನೂ ಓದಿ: ರೈತರು ಕೃಷಿ ಕಾಯ್ದೆಗೆ ಅವಕಾಶ ನೀಡುವುದು ಉಚಿತ: ಮೋದಿ ಪರ ಕುಮಾರಸ್ವಾಮಿ ಬ್ಯಾಟಿಂಗ್

“ಜೆಡಿಎಸ್‌ ಜೊತೆಗೆ ಮಿತ್ರತ್ವದ ನಾಟಕವಾಡಿ, ಕಡೆಗೆ ಪಕ್ಷವನ್ನೇ ಒಡೆಯಲು ಯತ್ನಿಸಿದವರು ಅನೇಕರು. ಈಗ ಬಿಜೆಪಿ ಸರದಿ. ಅಷ್ಟಕ್ಕೂ ಮೈತ್ರಿಗೆ ಜೆಡಿಎಸ್‌ನಿಂದ ಬಿಜೆಪಿಗೆ ಅರ್ಜಿ ಹಾಕಿದವರು ಯಾರು? ಜೆಡಿಎಸ್‌ನೊಂದಿಗೆ ಮೈತ್ರಿ ಇಲ್ಲವೆಂದಿರುವ ಬಿಜೆಪಿ ಉಸ್ತುವಾರಿ ಅರ್ಜುನ್ ಸಿಂಗ್ ಎದುರು ಮೈತ್ರಿ ಪ್ರಸ್ತಾಪ ಇಟ್ಟವರ್ಯಾರು?” ಎಂದು ಪ್ರಶ್ನಿಸಿದ್ದಾರೆ.

“ಜೆಡಿಎಸ್‌ ಎನ್‌ಡಿಎ ಮೈತ್ರಿಕೂಟ ಸೇರುತ್ತದೆ, ಕುಮಾರಸ್ವಾಮಿ ಅವರನ್ನು ಕೇಂದ್ರ ಮಂತ್ರಿ ಮಾಡಲಾಗುತ್ತದೆ ಎಂಬುದೆಲ್ಲವೂ ಸುಳ್ಳಿನ ಕಂತೆ. ಈ ರೀತಿಯ ಆಮಿಷಗಳ ಮೂಲಕ ಬಿಜೆಪಿಯು ಜೆಡಿಎಸ್‌ ಕಾರ್ಯಕರ್ತರು, ಜೆಡಿಎಸ್‌ ಬೆಂಬಲಿಸುವ ಜನರ ಮನಸ್ಸುಗಳಿಗೆ ವಿಷ ಬಿತ್ತುವ ಕೆಲಸ ಮಾಡುತ್ತಿದೆ. ಇದು ನೈತಿಕವಲ್ಲದ ರಾಜಕಾರಣ ಎಂಬುದನ್ನು ಬಿಜೆಪಿ ತಿಳಿಯಲಿ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಈ ದೇಶದಲ್ಲಿ ಯಾವ ಪಕ್ಷಕ್ಕೂ ಯಾವ ಸಿದ್ಧಾಂತವೂ ಇಲ್ಲ: ಎಚ್.ಡಿ ಕುಮಾರಸ್ವಾಮಿ

“1997ರಲ್ಲಿ ದೇವೇಗೌಡರು ಪ್ರಧಾನಿ ಸ್ಥಾನದಿಂದ ಇಳಿಯುವಾಗ ಇದೇ ಬಿಜೆಪಿಯ ಅಗ್ರಮಾನ್ಯ ಸಾರ್ವಕಾಲಿಕ ನಾಯಕ ದಿ. ವಾಜಪೇಯಿ ಅವರು ದೇವೇಗೌಡರಿಗೆ, ಜನತಾದಳಕ್ಕೆ ಬೆಂಬಲ ನೀಡುವುದಾಗಿ ಹೇಳಿದ್ದರು. ಆಗಲೇ ಪ್ರಧಾನಿ ಹುದ್ದೆ, ಕೇಂದ್ರದ ಅಧಿಕಾರ ತಿರಸ್ಕರಿಸಿ ಬಂದವರು ನಾವು. ಇನ್ನು ಯಕಶ್ಚಿತ್‌ ಮಂತ್ರಿ ಸ್ಥಾನಕ್ಕೆ ಆಸೆ ಪಡುವ ವ್ಯಕ್ತಿ ನಾನಲ್ಲ” ಎಂದು ತಿಳಿಸಿದ್ದಾರೆ.

“ಸದ್ಯ ಯಾವ ಪಕ್ಷಕ್ಕೆ ಯಾರ ಅಗತ್ಯವೂ ಇಲ್ಲ. ನಮಗಂತೂ ಬಿಜೆಪಿ ಸ್ನೇಹ ಬೇಕಿಲ್ಲ. ನಮಗೆ ಬೇಕಿರುವುದು ರಾಜ್ಯದ ಅಭಿವೃದ್ಧಿ ಹಾಗೂ ನಮ್ಮ ಕಾರ್ಯಕರ್ತರು. ಪ್ರತಿಕೂಲ ಪರಿಸ್ಥಿತಿ ಇದ್ದರೂ ಕಾರ್ಯಕರ್ತರಲ್ಲಿ ಉತ್ಸಾಹ, ಚೈತನ್ಯವಿದೆ ಎಂಬುದು ಗ್ರಾ.ಪಂ. ಚುನಾವಣೆ ಫಲಿತಾಂಶದಿಂದ ಎಲ್ಲರಿಗೂ ಗೊತ್ತಾಗಿದೆ. ಈಗ ನಮ್ಮ ಮುಂದಿರುವುದು ಪಕ್ಷದ ಸಂಘಟನೆ ಮಾತ್ರ” ಎಂದು ಕುಮಾರಸ್ವಾಮಿ ಹೇಳಿದ್ದಾರೆ.

ಇದನ್ನೂ ಓದಿ: ಜೆಡಿಎಸ್‌ನವರಿಗಿಂತಲೂ ಹೆಚ್ಚು ಬಿಜೆಪಿಗರಿಂದ ಹುಟ್ಟುಹಬ್ಬದ ಅಭಿನಂದನೆ ಪಡೆದುಕೊಂಡ ಎಚ್‌ ಡಿ ಕುಮಾರಸ್ವಾಮಿ! ಏನಿದರ ಮರ್ಮ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....