Homeಕರ್ನಾಟಕಪ್ರಧಾನಿ ಹುದ್ದೆಯೆ ತಿರಸ್ಕರಿಸಿದ ನಾವು ಯಕಶ್ಚಿತ್‌ ಮಂತ್ರಿ ಸ್ಥಾನಕ್ಕೆ ಆಸೆ ಪಡಲ್ಲ: ಕುಮಾರಸ್ವಾಮಿ

ಪ್ರಧಾನಿ ಹುದ್ದೆಯೆ ತಿರಸ್ಕರಿಸಿದ ನಾವು ಯಕಶ್ಚಿತ್‌ ಮಂತ್ರಿ ಸ್ಥಾನಕ್ಕೆ ಆಸೆ ಪಡಲ್ಲ: ಕುಮಾರಸ್ವಾಮಿ

ಜೆಡಿಎಸ್‌ ಅನ್ನು ಮುಗಿಸುವ ಪ್ರಯತ್ನಗಳೆಲ್ಲ ವಿಫಲವಾಗಿವೆ ಎಂಬುದು ಗ್ರಾಮ ಪಂಚಾಯಿತಿ ಚುನಾವಣೆ ಫಲಿತಾಂಶದ ಮೂಲಕ ಬಿಜೆಪಿಗೆ ಮನವರಿಕೆಯಾಗಿದೆ. ಈ ಕಾರಣಕ್ಕೆ ಮೈತ್ರಿಯ ಕಪಟ ನಾಟಕವಾಡಲು ನಿಂತಿದೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

- Advertisement -
- Advertisement -

ಜೆಡಿಎಸ್ ಎನ್‌ಡಿಎ ಭಾಗವಾಗಲಿದೆ ಎಂದು ಹರಿದಾಡುತ್ತಿರುವ ಸುದ್ದಿಯ ಬಗ್ಗೆ ಸ್ಫಷ್ಟನೆ ನೀಡಿರುವ ಕುಮಾರಸ್ವಾಮಿ, ಈ ಹಿಂದೆ ವಾಜಪೇಯಿ ದೇವೇಗೌಡರಿಗೆ, ಜನತಾದಳಕ್ಕೆ ಬೆಂಬಲ ನೀಡುವುದಾಗಿ ಹೇಳಿದ್ದರು. ಆಗಲೇ ಪ್ರಧಾನಿ ಹುದ್ದೆ, ಕೇಂದ್ರದ ಅಧಿಕಾರ ತಿರಸ್ಕರಿಸಿದ ನಾವು, ಯಕಶ್ಚಿತ್‌ ಮಂತ್ರಿ ಸ್ಥಾನಕ್ಕೆ ಆಸೆ ಪಡಲ್ಲ ಎಂದು ಹೇಳಿದ್ದಾರೆ.

ಈ ಬಗ್ಗೆ ಸರಣಿ ಟ್ವೀಟ್‌ ಮಾಡಿರುವ ಕುಮಾರಸ್ವಾಮಿ, “ಜೆಡಿಎಸ್‌ ಅನ್ನು ಮುಗಿಸುವ ಪ್ರಯತ್ನಗಳೆಲ್ಲ ವಿಫಲವಾಗಿವೆ ಎಂಬುದು ಗ್ರಾಮ ಪಂಚಾಯಿತಿ ಚುನಾವಣೆ ಫಲಿತಾಂಶದ ಮೂಲಕ ಬಿಜೆಪಿಗೆ ಮನವರಿಕೆಯಾಗಿದೆ. ಇದೇ ಕಾರಣಕ್ಕೆ ಮೈತ್ರಿಯ ಕಪಟ ನಾಟಕವಾಡಲು ಬಿಜೆಪಿ ನಿಂತಿದೆ. ಇದಕ್ಕಾಗಿಯೇ ಜೆಡಿಎಸ್‌ ಎನ್‌ಡಿಎ ಸೇರಲಿದೆ ಎಂಬ ಕಲ್ಪಿತ ಸುದ್ದಿಗಳನ್ನು ವ್ಯವಸ್ಥಿತವಾಗಿ ಹರಡುತ್ತಿದೆ. ಇದೆಲ್ಲವೂ ಅಪ್ಪಟ ಸುಳ್ಳು” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಜೆಡಿಎಸ್‌‌ನ ಜಾತ್ಯಾತೀತತೆ ಪರೀಕ್ಷಿಸಿದವರಿಗೆ ಈ ಸಾವು ಉತ್ತರ ನೀಡಿರಬಹುದು: ಕುಮಾರಸ್ವಾಮಿ

“ಪ್ರಧಾನಿ ಅವರೊಂದಿಗೆ ರಾಜ್ಯ ಬಿಜೆಪಿ ನಾಯಕರಿಗಿಂತಲೂ ಉತ್ತಮ ಬಾಂಧವ್ಯ ನನಗಿದೆ. ಯಡಿಯೂರಪ್ಪ ಹಿರಿಯರು ಎಂಬ ಗೌರವವೂ ಇದೆ. ವಿರೋಧಕ್ಕಾಗಿ ವಿರೋಧ ಪಕ್ಷವಾಗಿರಬಾರದು ಎಂಬ ಆಶಯವೂ ಇದೆ. ಬಿಜೆಪಿ ಅಪಪ್ರಚಾರಕ್ಕೆ ಕೈ ಹಾಕಿದರೆ, ಬಾಂಧವ್ಯ, ಗೌರವ, ಆಶಯಗಳಿಗೆ ಧಕ್ಕೆಯಾಗಲಿದೆ. ಜೆಡಿಎಸ್‌ ವಿಚಾರದಲ್ಲಿ ಬಿಜೆಪಿಯು ಎಚ್ಚರವಾಗಿರಲಿ” ಎಂದು ಅವರು ಎಚ್ಚರಿಸಿದ್ದಾರೆ.

ಇದನ್ನೂ ಓದಿ: ರೈತರು ಕೃಷಿ ಕಾಯ್ದೆಗೆ ಅವಕಾಶ ನೀಡುವುದು ಉಚಿತ: ಮೋದಿ ಪರ ಕುಮಾರಸ್ವಾಮಿ ಬ್ಯಾಟಿಂಗ್

“ಜೆಡಿಎಸ್‌ ಜೊತೆಗೆ ಮಿತ್ರತ್ವದ ನಾಟಕವಾಡಿ, ಕಡೆಗೆ ಪಕ್ಷವನ್ನೇ ಒಡೆಯಲು ಯತ್ನಿಸಿದವರು ಅನೇಕರು. ಈಗ ಬಿಜೆಪಿ ಸರದಿ. ಅಷ್ಟಕ್ಕೂ ಮೈತ್ರಿಗೆ ಜೆಡಿಎಸ್‌ನಿಂದ ಬಿಜೆಪಿಗೆ ಅರ್ಜಿ ಹಾಕಿದವರು ಯಾರು? ಜೆಡಿಎಸ್‌ನೊಂದಿಗೆ ಮೈತ್ರಿ ಇಲ್ಲವೆಂದಿರುವ ಬಿಜೆಪಿ ಉಸ್ತುವಾರಿ ಅರ್ಜುನ್ ಸಿಂಗ್ ಎದುರು ಮೈತ್ರಿ ಪ್ರಸ್ತಾಪ ಇಟ್ಟವರ್ಯಾರು?” ಎಂದು ಪ್ರಶ್ನಿಸಿದ್ದಾರೆ.

“ಜೆಡಿಎಸ್‌ ಎನ್‌ಡಿಎ ಮೈತ್ರಿಕೂಟ ಸೇರುತ್ತದೆ, ಕುಮಾರಸ್ವಾಮಿ ಅವರನ್ನು ಕೇಂದ್ರ ಮಂತ್ರಿ ಮಾಡಲಾಗುತ್ತದೆ ಎಂಬುದೆಲ್ಲವೂ ಸುಳ್ಳಿನ ಕಂತೆ. ಈ ರೀತಿಯ ಆಮಿಷಗಳ ಮೂಲಕ ಬಿಜೆಪಿಯು ಜೆಡಿಎಸ್‌ ಕಾರ್ಯಕರ್ತರು, ಜೆಡಿಎಸ್‌ ಬೆಂಬಲಿಸುವ ಜನರ ಮನಸ್ಸುಗಳಿಗೆ ವಿಷ ಬಿತ್ತುವ ಕೆಲಸ ಮಾಡುತ್ತಿದೆ. ಇದು ನೈತಿಕವಲ್ಲದ ರಾಜಕಾರಣ ಎಂಬುದನ್ನು ಬಿಜೆಪಿ ತಿಳಿಯಲಿ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಈ ದೇಶದಲ್ಲಿ ಯಾವ ಪಕ್ಷಕ್ಕೂ ಯಾವ ಸಿದ್ಧಾಂತವೂ ಇಲ್ಲ: ಎಚ್.ಡಿ ಕುಮಾರಸ್ವಾಮಿ

“1997ರಲ್ಲಿ ದೇವೇಗೌಡರು ಪ್ರಧಾನಿ ಸ್ಥಾನದಿಂದ ಇಳಿಯುವಾಗ ಇದೇ ಬಿಜೆಪಿಯ ಅಗ್ರಮಾನ್ಯ ಸಾರ್ವಕಾಲಿಕ ನಾಯಕ ದಿ. ವಾಜಪೇಯಿ ಅವರು ದೇವೇಗೌಡರಿಗೆ, ಜನತಾದಳಕ್ಕೆ ಬೆಂಬಲ ನೀಡುವುದಾಗಿ ಹೇಳಿದ್ದರು. ಆಗಲೇ ಪ್ರಧಾನಿ ಹುದ್ದೆ, ಕೇಂದ್ರದ ಅಧಿಕಾರ ತಿರಸ್ಕರಿಸಿ ಬಂದವರು ನಾವು. ಇನ್ನು ಯಕಶ್ಚಿತ್‌ ಮಂತ್ರಿ ಸ್ಥಾನಕ್ಕೆ ಆಸೆ ಪಡುವ ವ್ಯಕ್ತಿ ನಾನಲ್ಲ” ಎಂದು ತಿಳಿಸಿದ್ದಾರೆ.

“ಸದ್ಯ ಯಾವ ಪಕ್ಷಕ್ಕೆ ಯಾರ ಅಗತ್ಯವೂ ಇಲ್ಲ. ನಮಗಂತೂ ಬಿಜೆಪಿ ಸ್ನೇಹ ಬೇಕಿಲ್ಲ. ನಮಗೆ ಬೇಕಿರುವುದು ರಾಜ್ಯದ ಅಭಿವೃದ್ಧಿ ಹಾಗೂ ನಮ್ಮ ಕಾರ್ಯಕರ್ತರು. ಪ್ರತಿಕೂಲ ಪರಿಸ್ಥಿತಿ ಇದ್ದರೂ ಕಾರ್ಯಕರ್ತರಲ್ಲಿ ಉತ್ಸಾಹ, ಚೈತನ್ಯವಿದೆ ಎಂಬುದು ಗ್ರಾ.ಪಂ. ಚುನಾವಣೆ ಫಲಿತಾಂಶದಿಂದ ಎಲ್ಲರಿಗೂ ಗೊತ್ತಾಗಿದೆ. ಈಗ ನಮ್ಮ ಮುಂದಿರುವುದು ಪಕ್ಷದ ಸಂಘಟನೆ ಮಾತ್ರ” ಎಂದು ಕುಮಾರಸ್ವಾಮಿ ಹೇಳಿದ್ದಾರೆ.

ಇದನ್ನೂ ಓದಿ: ಜೆಡಿಎಸ್‌ನವರಿಗಿಂತಲೂ ಹೆಚ್ಚು ಬಿಜೆಪಿಗರಿಂದ ಹುಟ್ಟುಹಬ್ಬದ ಅಭಿನಂದನೆ ಪಡೆದುಕೊಂಡ ಎಚ್‌ ಡಿ ಕುಮಾರಸ್ವಾಮಿ! ಏನಿದರ ಮರ್ಮ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...