Homeಕರ್ನಾಟಕಪ್ರಧಾನಿ ಹುದ್ದೆಯೆ ತಿರಸ್ಕರಿಸಿದ ನಾವು ಯಕಶ್ಚಿತ್‌ ಮಂತ್ರಿ ಸ್ಥಾನಕ್ಕೆ ಆಸೆ ಪಡಲ್ಲ: ಕುಮಾರಸ್ವಾಮಿ

ಪ್ರಧಾನಿ ಹುದ್ದೆಯೆ ತಿರಸ್ಕರಿಸಿದ ನಾವು ಯಕಶ್ಚಿತ್‌ ಮಂತ್ರಿ ಸ್ಥಾನಕ್ಕೆ ಆಸೆ ಪಡಲ್ಲ: ಕುಮಾರಸ್ವಾಮಿ

ಜೆಡಿಎಸ್‌ ಅನ್ನು ಮುಗಿಸುವ ಪ್ರಯತ್ನಗಳೆಲ್ಲ ವಿಫಲವಾಗಿವೆ ಎಂಬುದು ಗ್ರಾಮ ಪಂಚಾಯಿತಿ ಚುನಾವಣೆ ಫಲಿತಾಂಶದ ಮೂಲಕ ಬಿಜೆಪಿಗೆ ಮನವರಿಕೆಯಾಗಿದೆ. ಈ ಕಾರಣಕ್ಕೆ ಮೈತ್ರಿಯ ಕಪಟ ನಾಟಕವಾಡಲು ನಿಂತಿದೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

- Advertisement -
- Advertisement -

ಜೆಡಿಎಸ್ ಎನ್‌ಡಿಎ ಭಾಗವಾಗಲಿದೆ ಎಂದು ಹರಿದಾಡುತ್ತಿರುವ ಸುದ್ದಿಯ ಬಗ್ಗೆ ಸ್ಫಷ್ಟನೆ ನೀಡಿರುವ ಕುಮಾರಸ್ವಾಮಿ, ಈ ಹಿಂದೆ ವಾಜಪೇಯಿ ದೇವೇಗೌಡರಿಗೆ, ಜನತಾದಳಕ್ಕೆ ಬೆಂಬಲ ನೀಡುವುದಾಗಿ ಹೇಳಿದ್ದರು. ಆಗಲೇ ಪ್ರಧಾನಿ ಹುದ್ದೆ, ಕೇಂದ್ರದ ಅಧಿಕಾರ ತಿರಸ್ಕರಿಸಿದ ನಾವು, ಯಕಶ್ಚಿತ್‌ ಮಂತ್ರಿ ಸ್ಥಾನಕ್ಕೆ ಆಸೆ ಪಡಲ್ಲ ಎಂದು ಹೇಳಿದ್ದಾರೆ.

ಈ ಬಗ್ಗೆ ಸರಣಿ ಟ್ವೀಟ್‌ ಮಾಡಿರುವ ಕುಮಾರಸ್ವಾಮಿ, “ಜೆಡಿಎಸ್‌ ಅನ್ನು ಮುಗಿಸುವ ಪ್ರಯತ್ನಗಳೆಲ್ಲ ವಿಫಲವಾಗಿವೆ ಎಂಬುದು ಗ್ರಾಮ ಪಂಚಾಯಿತಿ ಚುನಾವಣೆ ಫಲಿತಾಂಶದ ಮೂಲಕ ಬಿಜೆಪಿಗೆ ಮನವರಿಕೆಯಾಗಿದೆ. ಇದೇ ಕಾರಣಕ್ಕೆ ಮೈತ್ರಿಯ ಕಪಟ ನಾಟಕವಾಡಲು ಬಿಜೆಪಿ ನಿಂತಿದೆ. ಇದಕ್ಕಾಗಿಯೇ ಜೆಡಿಎಸ್‌ ಎನ್‌ಡಿಎ ಸೇರಲಿದೆ ಎಂಬ ಕಲ್ಪಿತ ಸುದ್ದಿಗಳನ್ನು ವ್ಯವಸ್ಥಿತವಾಗಿ ಹರಡುತ್ತಿದೆ. ಇದೆಲ್ಲವೂ ಅಪ್ಪಟ ಸುಳ್ಳು” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಜೆಡಿಎಸ್‌‌ನ ಜಾತ್ಯಾತೀತತೆ ಪರೀಕ್ಷಿಸಿದವರಿಗೆ ಈ ಸಾವು ಉತ್ತರ ನೀಡಿರಬಹುದು: ಕುಮಾರಸ್ವಾಮಿ

“ಪ್ರಧಾನಿ ಅವರೊಂದಿಗೆ ರಾಜ್ಯ ಬಿಜೆಪಿ ನಾಯಕರಿಗಿಂತಲೂ ಉತ್ತಮ ಬಾಂಧವ್ಯ ನನಗಿದೆ. ಯಡಿಯೂರಪ್ಪ ಹಿರಿಯರು ಎಂಬ ಗೌರವವೂ ಇದೆ. ವಿರೋಧಕ್ಕಾಗಿ ವಿರೋಧ ಪಕ್ಷವಾಗಿರಬಾರದು ಎಂಬ ಆಶಯವೂ ಇದೆ. ಬಿಜೆಪಿ ಅಪಪ್ರಚಾರಕ್ಕೆ ಕೈ ಹಾಕಿದರೆ, ಬಾಂಧವ್ಯ, ಗೌರವ, ಆಶಯಗಳಿಗೆ ಧಕ್ಕೆಯಾಗಲಿದೆ. ಜೆಡಿಎಸ್‌ ವಿಚಾರದಲ್ಲಿ ಬಿಜೆಪಿಯು ಎಚ್ಚರವಾಗಿರಲಿ” ಎಂದು ಅವರು ಎಚ್ಚರಿಸಿದ್ದಾರೆ.

ಇದನ್ನೂ ಓದಿ: ರೈತರು ಕೃಷಿ ಕಾಯ್ದೆಗೆ ಅವಕಾಶ ನೀಡುವುದು ಉಚಿತ: ಮೋದಿ ಪರ ಕುಮಾರಸ್ವಾಮಿ ಬ್ಯಾಟಿಂಗ್

“ಜೆಡಿಎಸ್‌ ಜೊತೆಗೆ ಮಿತ್ರತ್ವದ ನಾಟಕವಾಡಿ, ಕಡೆಗೆ ಪಕ್ಷವನ್ನೇ ಒಡೆಯಲು ಯತ್ನಿಸಿದವರು ಅನೇಕರು. ಈಗ ಬಿಜೆಪಿ ಸರದಿ. ಅಷ್ಟಕ್ಕೂ ಮೈತ್ರಿಗೆ ಜೆಡಿಎಸ್‌ನಿಂದ ಬಿಜೆಪಿಗೆ ಅರ್ಜಿ ಹಾಕಿದವರು ಯಾರು? ಜೆಡಿಎಸ್‌ನೊಂದಿಗೆ ಮೈತ್ರಿ ಇಲ್ಲವೆಂದಿರುವ ಬಿಜೆಪಿ ಉಸ್ತುವಾರಿ ಅರ್ಜುನ್ ಸಿಂಗ್ ಎದುರು ಮೈತ್ರಿ ಪ್ರಸ್ತಾಪ ಇಟ್ಟವರ್ಯಾರು?” ಎಂದು ಪ್ರಶ್ನಿಸಿದ್ದಾರೆ.

“ಜೆಡಿಎಸ್‌ ಎನ್‌ಡಿಎ ಮೈತ್ರಿಕೂಟ ಸೇರುತ್ತದೆ, ಕುಮಾರಸ್ವಾಮಿ ಅವರನ್ನು ಕೇಂದ್ರ ಮಂತ್ರಿ ಮಾಡಲಾಗುತ್ತದೆ ಎಂಬುದೆಲ್ಲವೂ ಸುಳ್ಳಿನ ಕಂತೆ. ಈ ರೀತಿಯ ಆಮಿಷಗಳ ಮೂಲಕ ಬಿಜೆಪಿಯು ಜೆಡಿಎಸ್‌ ಕಾರ್ಯಕರ್ತರು, ಜೆಡಿಎಸ್‌ ಬೆಂಬಲಿಸುವ ಜನರ ಮನಸ್ಸುಗಳಿಗೆ ವಿಷ ಬಿತ್ತುವ ಕೆಲಸ ಮಾಡುತ್ತಿದೆ. ಇದು ನೈತಿಕವಲ್ಲದ ರಾಜಕಾರಣ ಎಂಬುದನ್ನು ಬಿಜೆಪಿ ತಿಳಿಯಲಿ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಈ ದೇಶದಲ್ಲಿ ಯಾವ ಪಕ್ಷಕ್ಕೂ ಯಾವ ಸಿದ್ಧಾಂತವೂ ಇಲ್ಲ: ಎಚ್.ಡಿ ಕುಮಾರಸ್ವಾಮಿ

“1997ರಲ್ಲಿ ದೇವೇಗೌಡರು ಪ್ರಧಾನಿ ಸ್ಥಾನದಿಂದ ಇಳಿಯುವಾಗ ಇದೇ ಬಿಜೆಪಿಯ ಅಗ್ರಮಾನ್ಯ ಸಾರ್ವಕಾಲಿಕ ನಾಯಕ ದಿ. ವಾಜಪೇಯಿ ಅವರು ದೇವೇಗೌಡರಿಗೆ, ಜನತಾದಳಕ್ಕೆ ಬೆಂಬಲ ನೀಡುವುದಾಗಿ ಹೇಳಿದ್ದರು. ಆಗಲೇ ಪ್ರಧಾನಿ ಹುದ್ದೆ, ಕೇಂದ್ರದ ಅಧಿಕಾರ ತಿರಸ್ಕರಿಸಿ ಬಂದವರು ನಾವು. ಇನ್ನು ಯಕಶ್ಚಿತ್‌ ಮಂತ್ರಿ ಸ್ಥಾನಕ್ಕೆ ಆಸೆ ಪಡುವ ವ್ಯಕ್ತಿ ನಾನಲ್ಲ” ಎಂದು ತಿಳಿಸಿದ್ದಾರೆ.

“ಸದ್ಯ ಯಾವ ಪಕ್ಷಕ್ಕೆ ಯಾರ ಅಗತ್ಯವೂ ಇಲ್ಲ. ನಮಗಂತೂ ಬಿಜೆಪಿ ಸ್ನೇಹ ಬೇಕಿಲ್ಲ. ನಮಗೆ ಬೇಕಿರುವುದು ರಾಜ್ಯದ ಅಭಿವೃದ್ಧಿ ಹಾಗೂ ನಮ್ಮ ಕಾರ್ಯಕರ್ತರು. ಪ್ರತಿಕೂಲ ಪರಿಸ್ಥಿತಿ ಇದ್ದರೂ ಕಾರ್ಯಕರ್ತರಲ್ಲಿ ಉತ್ಸಾಹ, ಚೈತನ್ಯವಿದೆ ಎಂಬುದು ಗ್ರಾ.ಪಂ. ಚುನಾವಣೆ ಫಲಿತಾಂಶದಿಂದ ಎಲ್ಲರಿಗೂ ಗೊತ್ತಾಗಿದೆ. ಈಗ ನಮ್ಮ ಮುಂದಿರುವುದು ಪಕ್ಷದ ಸಂಘಟನೆ ಮಾತ್ರ” ಎಂದು ಕುಮಾರಸ್ವಾಮಿ ಹೇಳಿದ್ದಾರೆ.

ಇದನ್ನೂ ಓದಿ: ಜೆಡಿಎಸ್‌ನವರಿಗಿಂತಲೂ ಹೆಚ್ಚು ಬಿಜೆಪಿಗರಿಂದ ಹುಟ್ಟುಹಬ್ಬದ ಅಭಿನಂದನೆ ಪಡೆದುಕೊಂಡ ಎಚ್‌ ಡಿ ಕುಮಾರಸ್ವಾಮಿ! ಏನಿದರ ಮರ್ಮ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...