Homeಕರ್ನಾಟಕಸಚಿವ ಆರ್‌. ಅಶೋಕ್‌ ಆರೋಪಗಳಿಗೆ ಪ್ರೊ. ಬರಗೂರು ಸ್ಪಷ್ಟನೆ

ಸಚಿವ ಆರ್‌. ಅಶೋಕ್‌ ಆರೋಪಗಳಿಗೆ ಪ್ರೊ. ಬರಗೂರು ಸ್ಪಷ್ಟನೆ

ನಾವು ಕಮ್ಯುನಿಷ್ಠರಾಗಿ ಪಠ್ಯ ಪರಿಷ್ಕರಣೆ ಮಾಡಲಿಲ್ಲ, ಶಿಕ್ಷಣ ನಿಷ್ಠರಾಗಿ ಮಾಡಿದೆವು ಎಂದು ಅವರು ಹೇಳಿದ್ದಾರೆ

- Advertisement -
- Advertisement -

ಪಠ್ಯಪುಸ್ತಕ ಹಗರಣದ ಬಗ್ಗೆ ಗುರುವಾರ ಮಾತನಾಡಿದ್ದ ಸಚಿವ ಆರ್‌. ಅಶೋಕ್ ಅವರು ಈ ಹಿಂದಿನ ಪಠ್ಯಪುಸ್ತಕದ ಬಗ್ಗೆ ಹಲವು ವಿಚಾರಗಳನ್ನು ಉಲ್ಲೇಖಿಸಿದ್ದರು. ಸಚಿವರ ಈ ಎಲ್ಲಾ ಹೇಳಿಕೆಗೆ ಹಿಂದಿನ ಪಠ್ಯಪುಸ್ತಕ ಪರಿಷ್ಕರಣೆ ಸಮಿತಿಯ ಸರ್ವಾಧ್ಯಕ್ಷರಾಗಿದ್ದ, ಹಿರಿಯ ಸಾಹಿತಿ ಪ್ರೊಫೆಸರ್‌ ಬರಗೂರು ರಾಮಚಂದ್ರಪ್ಪ ಅವರು ಶುಕ್ರವಾರ ಸ್ಪಷ್ಟನೆ ನೀಡಿದ್ದು, ನಾವು ಶಿಕ್ಷಣ ನಿಷ್ಠರಾಗಿ ಪಠ್ಯವನ್ನು ಪರಿಷ್ಕರಣೆ ಮಾಡಿದೆವು ಎಂದು ಹೇಳಿದ್ದಾರೆ.

“ಯಾರೇ ಪಠ್ಯಪರಿಷ್ಕರಣೆ ಮಾಡಿದರೂ ಕೆಲವು ಪಾಠಗಳನ್ನು ಬಿಡುವ ಮತ್ತು ಸೇರಿಸುವ ಪ್ರಕ್ರಿಯೆ ನಡೆಯುತ್ತದೆ. ಸಕಾರಣ ಮತ್ತು ಸೂಕ್ತ ಮಾನದಂಡಗಳ ಮೂಲಕ ಈ ಪ್ರಕ್ರಿಯೆ ನಡೆಯಬೇಕು. ನಮ್ಮ ಪರಿಷ್ಕರಣೆಯಲ್ಲಿ ಪ್ರತಿಯೊಂದಕ್ಕೂ ಕಾರಣಗಳನ್ನು ದಾಖಲಿಸಿದ್ದೇವೆ. ರಾಷ್ಟ್ರೀಯ ಹಾಗೂ ರಾಜ್ಯ ಪಠ್ಯಕ್ರಮ ಚೌಕಟ್ಟು ಮತ್ತು ಸಂವಿಧಾನಾತ್ಮಕ ಆಶಯಗಳನ್ನು ಪಾಲಿಸಿದ್ದೇವೆ” ಎಂದು ಬರಗೂರು ರಾಮಚಂದ್ರಪ್ಪ ಅವರು ತಿಳಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಮೈಸೂರು ಒಡೆಯರ ಕಾಲದ ವಿವರಗಳನ್ನು ನಾವು ಬಿಟ್ಟಿದ್ದೇವೆ ಎಂದು ಸಚಿವರು ಹೇಳಿದ್ದಾರೆ. ವಾಸ್ತವವಾಗಿ 6ನೇ ತರತಿಯ ಸಮಾಜ ವಿಜ್ಞಾನದಲ್ಲಿದ್ದ ಪಾಠವನ್ನು ಹೆಚ್ಚು ವಿವರಗಳ ಸಮೇತ, 7ನೇ ತರಗತಿಯ (ಭಾಗ-1 ಪುಟ 45 ರಿಂದ 58) ಪಠ್ಯಕ್ಕೆ ನಾವು ವರ್ಗಾಯಿಸಿದ್ದೆವು. ಇಡೀ ಅಧ್ಯಾಯವನ್ನು ಮರುಪರಿಷ್ಕರಣೆಯಲ್ಲಿ ತೆಗೆದುಹಾಕಿ ನಮ್ಮ ಮೇಲೆ ಆರೋಪ ಹೊರಿಸುತ್ತಿದ್ದಾರೆ”

ಇದನ್ನೂ ಓದಿ: ನಾರಾಯಣ ಗುರುಗಳ ಪಠ್ಯಕ್ಕೆ ಕತ್ತರಿ: ‘ನನಗೆ ಅದು ನೆನಪಾಗುತ್ತಿಲ್ಲ’ ಎಂದ ಪಠ್ಯ ಪುಸ್ತಕ ಸಮಿತಿ ಸದಸ್ಯ ಡಾ. ಅನಂತಕೃಷ್ಣ ಭಟ್

“ಹೀಗೆ 7ನೇ ತರಗತಿಯಿಂದ ತೆಗೆದು ಹತ್ತನೇ ತರಗತಿಯಲ್ಲಿ ಮುಕ್ಕಾಲು ಪುಟದಷ್ಟು ಮಾತ್ರ ಮೈಸೂರು ಒಡೆಯರ ವಿವರ ಕೊಟ್ಟು ಅನ್ಯಾಯ ಮಾಡಿದ್ದಾರೆ. ನಾಲ್ವಡಿ ಕೃಷ್ಣರಾಜ ಒಡೆಯರು ತಂದ ಮೀಸಲಾತಿ, ಮಹಿಳೆಯರಿಗೆ ಮತದಾನದ ಹಕ್ಕಿನ ಮಹತ್ವದ ವಿವರಗಳೇ ಇಲ್ಲ. ನಮ್ಮ ಪಠ್ಯದಲ್ಲಿದ್ದ ಮುಮ್ಮಡಿ ಕೃಷ್ಣರಾಜ ಒಡೆಯರ್, ಸರ್.ಎಂ.ವಿಶ್ವೇಶ್ವರಯ್ಯನವರು ಮತ್ತು ಮಿರ್ಜಾ ಇಸ್ಮಾಯಿಲ್ ಅವರ ಪೂರ್ಣ ವಿವರಗಳನ್ನು ಮರುಪರಿಷ್ಕರಣೆಯಲ್ಲಿ ಕೈಬಿಟ್ಟಿದ್ದಾರೆ. ಆದರೆ ನಮ್ಮ ಮೇಲೆ ಮಿಥ್ಯಾರೋಪ ಮಾಡಿದ್ದಾರೆ” ಎಂದು ಪ್ರೊಫೆಸರ್‌ ಬರಗೂರು ಹೇಳಿದ್ದಾರೆ.

“ನಾಡಪ್ರಭು ಕೆಂಪೇಗೌಡರ ಪಾಠ ನಮ್ಮ ಪರಿಷ್ಕರಣೆ ಪಠ್ಯದಲ್ಲಿ ಇರಲಿಲ್ಲ ಎಂಬುದು ಇನ್ನೊಂದು ಮಿಥ್ಯಾರೋಪ. ನಾವು 7ನೇ ತರಗತಿಯ ಸಮಾಜ ವಿಜ್ಞಾನ (ಭಾಗ-1 ಪುಟ 43-44) ರಲ್ಲಿ ಎರಡು ಪುಟಗಳ ವಿವರಗಳನ್ನು ಕೊಟ್ಟಿದ್ದೆವು. ಮರುಪರಿಷ್ಕರಣೆಯಲ್ಲಿ ಒಂದು ಪುಟಕ್ಕೆ ಇಳಿಸಿದ್ದಲ್ಲದೆ, ಕೆಂಪೇಗೌಡರ ಆಡಳಿತಕ್ಕೆ ರಾಮನಗರ, ಕೋಲಾರ ಮತ್ತು ತುಮಕೂರು ಭಾಗಗಳು ಒಳಪಟ್ಟಿದ್ದವೆಂದು ನಾವು ಕೊಟ್ಟಿದ್ದ ವಿವರವನ್ನು ತೆಗೆದು ಕೆಂಪೇಗೌಡರ ಮಹತ್ವವನ್ನು ಇವರೇ ಕುಗ್ಗಿಸಿದ್ದಾರೆ” ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

“ಪೋರ್ಚುಗೀಸರ ವಿರುದ್ಧ ಹೋರಾಡಿದ ಚೆನ್ನ ಬೈರಾದೇವಿಯವರ ಬಗ್ಗೆ ಹೊಸ ಪಾಠ ಸೇರಿಸಿದ್ದನ್ನು ಸ್ವಾಗತಿಸುತ್ತೇನೆ. ಆದರೆ ನಾವು ಸೇರಿಸಿದ್ದ ಇದೇ ಪೋರ್ಚುಗೀಸರ ವಿರುದ್ಧ ಹೋರಾಡಿದ ರಾಣಿ ಅಬ್ಬಕ್ಕನವರ ಪಾಠವನ್ನು ತೆಗೆದು ಹಾಕಿದ್ದಾರೆ. ಅಷ್ಟೇ ಅಲ್ಲ ನಾವು 7ನೇ ತರಗತಿಯ ಸಮಾಜ ವಿಜ್ಞಾನದಲ್ಲಿ (ಭಾಗ-2 84 ರಿಂದ 90ನೇ ಪುಟ) ಹೊಸದಾಗಿ ಸೇರಿಸಿದ್ದ ಮಹಿಳಾ ಸ್ವಾತಂತ್ರ್ಯ ಹೋರಾಟಗಾರರನ್ನು ಕುರಿತ ಇಡೀ ಅಧ್ಯಾಯವನ್ನು ಕೈಬಿಟ್ಟಿದ್ದಾರೆ.

ಇದನ್ನೂ ಓದಿ: ಪಠ್ಯ ಪರಿಷ್ಕರಣೆ ಅಸಂವಿಧಾನಿಕ-ಅಪ್ರಜಾಸತ್ತಾತ್ಮಕ –ಅಪಾರದರ್ಶಕ- ಅಸಿಂಧು: ಸಿಎಂಗೆ ನಿರಂಜನಾರಾಧ್ಯರ ಪತ್ರ

ಈ ಅಧ್ಯಾಯದಲ್ಲಿದ್ದ ರಾಣಿ ಅಬ್ಬಕ್ಕ, ಯಶೋಧರಮ್ಮ ದಾಸಪ್ಪ, ಬಳ್ಳಾರಿ ಸಿದ್ದಮ್ಮ, ಕಮಲಾದೇವಿ ಚಟ್ಟೋಪಾಧ್ಯಾಯ, ಉಮಾಬಾಯಿ ಕುಂದಾಪುರ ಅವರ ಎಲ್ಲಾ ವಿವರಗಳನ್ನು ತೆಗೆದಿದ್ದಾರೆ. ಇದು ಕರ್ನಾಟಕದ ಮಹಿಳಾ ಸ್ವಾತಂತ್ರ್ಯ ಹೋರಾಟಗಾರರಿಗೆ ಮಾಡಿದ ಅವಮಾನ” ಎಂದು ಅವರು ಹೇಳಿದ್ದಾರೆ.

“7ನೇ ತರಗತಿಯ ಸಮಾಜ ವಿಜ್ಞಾನ ಭಾಗ-1 ರ ಭಕ್ತಿಪಂಥ ಮತ್ತು ಸೂಫಿ ಪರಂಪರೆಯೆಂಬ ಅಧ್ಯಾಯದಲ್ಲಿದ್ದ ಅಕ್ಕಮಹಾದೇವಿ, ಶಿಶುನಾಳ ಶರೀಫರು, ಪುರಂದರದಾಸರು, ಕನಕದಾಸರು-ಇವರ ಎಲ್ಲಾ ವಿವರ ತೆಗೆದು ಉತ್ತರ ಭಾರತದವರನ್ನು ಮಾತ್ರ ಉಳಿಸಿಕೊಂಡಿದ್ದಾರೆ. 9ನೇ ತರಗತಿಯ ಭಾಗ-2ರಲ್ಲಿದ್ದ ಇವರ ವಿವರಗಳನ್ನೂ ತೆಗೆದಿದ್ದಾರೆ. ಇದು ಕರ್ನಾಟಕದ ಅಸ್ಮಿತೆಗೆ ಮಾಡಿದ ಅನ್ಯಾಯ” ಎಂದು ಅವರು ತಿಳಿಸಿದ್ದಾರೆ.

“ಸಮಾಜ ವಿಜ್ಞಾನದ 7ನೇ ತರಗತಿಯ ಭಾಗ-2 ರಲ್ಲಿ ನಾವು ಹೊಸದಾಗಿ ಸೇರಿಸಿದ್ದ ಸಾವಿತ್ರಿ ಬಾಯಿ ಫುಲೆಯಾದಿಯಾಗಿ ಎಲ್ಲ ಮಹಿಳೆಯರ ವಿವರಗಳನ್ನು ತೆಗೆದು ಹಾಕಿದ್ದಾರೆ. ಕನ್ನಡ ಭಾಷಾ ಪಠ್ಯಗಳಲ್ಲಿದ್ದ ಎಲ್ಲಾ ದಲಿತ ಮೂಲದ ಸಾಹಿತಿಗಳು ಮತ್ತು ಬಹುಪಾಲು ಮಹಿಳಾ ಸಾಹಿತಿಗಳ ಬರಹಗಳನ್ನು ಬಿಟ್ಟು ಆ ಜಾಗದಲ್ಲಿ ಬಹಳಷ್ಟು ಒಂದೇ ಸಮುದಾಯದವರ ಬರಹಗಳನ್ನು ಹಾಕಿ ಸಾಮಾಜಿಕ ನ್ಯಾಯ ಮತ್ತು ಲಿಂಗ ಸಮಾನತೆಯಂತಹ ಸಂವಿಧಾನಾತ್ಮಕ ಆಶಯಗಳಿಗೆ ಧಕ್ಕೆ ತಂದಿದ್ದಾರೆ. ಸ್ವತಃ ಪರುಪರಿಷ್ಕರಣೆ ಸಮಿತಿಯ ಅಧ್ಯಕ್ಷರೇ ಸಾಮಾಜಿಕ ನ್ಯಾಯ ಮತ್ತು ಲಿಂಗ ಸಮಾನತೆಯ ವಿರುದ್ಧವಾಗಿ ಪಠ್ಯಪುಸ್ತಕದ ತಮ್ಮ ಮಾತುಗಳಲ್ಲೇ ಬರೆದಿರುವುದನ್ನು ಇಲ್ಲಿ ನೆನೆಯಬಹುದು” ಎಂದು ಅವರು ನೆನಪಿಸಿದ್ದಾರೆ.

ಇದನ್ನೂ ಓದಿ: ಪಠ್ಯ ಪರಿಷ್ಕರಣೆ ಅಸಂವಿಧಾನಿಕ-ಅಪ್ರಜಾಸತ್ತಾತ್ಮಕ –ಅಪಾರದರ್ಶಕ- ಅಸಿಂಧು: ಸಿಎಂಗೆ ನಿರಂಜನಾರಾಧ್ಯರ ಪತ್ರ

“ಹೀಗೆ ಅನೇಕ ಅಪಚಾರಗಳನ್ನು ಮರೆಮಾಚಲು ಕುವೆಂಪು ಅವರ ಹತ್ತು ಪಾಠ ಹಾಕಿರುವುದನ್ನು ಮುಂದೆ ಮಾಡುತ್ತಿದ್ದಾರೆ. ನಾವು ಕುವೆಂಪು ಅವರು ಪ್ರತಿಪಾದಿಸಿದ ಅಖಂಡ ಕರ್ನಾಟಕತ್ವ ಮತ್ತು ಸರ್ವಜನಾಂಗದ ಶಾಂತಿಯ ತೋಟವೆಂಬ ಆದರ್ಶಕ್ಕೆ ಅನುಗುಣವಾಗಿ ಕರ್ನಾಟಕದ ಎಲ್ಲಾ ಭಾಗಗಳ ಬರಹಗಾರರನ್ನು ಪ್ರಾತಿನಿಧಿಕವಾಗಿ ಸೇರಿಸಿದ್ದೇವೆ. ಕುವೆಂಪು ಅವರ ಆಶಯವನ್ನು ಈಡೇರಿಸಿದ್ದೇವೆ” ಎಂದು ಪ್ರೊಫೆಸರ್‌ ರಾಮಚಂದ್ರಪ್ಪ ಅವರು ಪ್ರತಿಪಾದಿಸಿದ್ದಾರೆ.

“ಕುವೆಂಪು ಅವರ ಹತ್ತು ಪಾಠಗಳ ವಿಷಯವನ್ನು ಮತ್ತೆ ಮತ್ತೆ ಹೇಳುವ ಇವರು ಕರ್ನಾಟಕ ಏಕೀಕರಣದ ವಿಷಯ ತಿಳಿಸುವಾಗ ಹಾಕಿದ್ದ ಕುವೆಂಪು ಭಾವಚಿತ್ರವನ್ನೇ ತೆಗೆದು ಹಾಕಿದ್ದಾರೆ. ಹುಯಿಲಗೋಳ ನಾರಾಯಣರಾಯರ ಭಾವಚಿತ್ರ ತೆಗೆದದ್ದಲ್ಲದೆ, ಕಯ್ಯಾರ ಕಿಞಣ್ಣರೈ ಅವರ ವಿವರ ಬಿಟ್ಟಿದ್ದಾರೆ. ಕರ್ನಾಟಕದಿಂದ ಪ್ರಧಾನಿ ಸ್ಥಾನಕ್ಕೆ ಏರಿದ ದೇವೇಗೌಡರ ಭಾವಚಿತ್ರ ಬಿಟ್ಟಿದ್ದಾರೆ. ದೇವನೂರು ಮಹಾದೇವರ ಭಾವಚಿತ್ರವೂ ಇಲ್ಲ” ಎಂದು ಅವರು ಹೇಳಿದ್ದಾರೆ.

“ನಮ್ಮ ಪಠ್ಯದಲ್ಲಿದ್ದ ಸಿದ್ಧಗಂಗೆ ಮತ್ತು ಆದಿ ಚುಂಚನಗಿರಿ ಮಠಗಳ ವಿವರಗಳನ್ನು ಒಂದೇ ಸಾಲಿಗೆ ಇಳಿಸಿ ಅನ್ಯಾಯ ಮಾಡಿದ್ದಾರೆ. ನಮ್ಮ ಪಠ್ಯದಲ್ಲಿದ್ದ ‘ವೇದಕಾಲದ ಸಂಸ್ಕೃತಿ’ ಎಂಬ ಪಾಠವನ್ನು ತೆಗೆದುಹಾಕಿರುವ ಇವರು ಭಾರತೀಯ ಪರಂಪರೆಯ ಬಗ್ಗೆ ಮಾತಾಡುವುದೇ ಒಂದು ವಿಚಿತ್ರ. ಇಷ್ಟು ಸಾಲದೆಂಬಂತೆ ಡಾ.ಅಂಬೇಡ್ಕರ್ ಅವರ ವಿಚಾರಧಾರೆಗೆ ಸಾಕಷ್ಟು ಕತ್ತರಿ ಪ್ರಯೋಗ ಮಾಡಿದ್ದಾರೆ. ಅಂಬೇಡ್ಕರ್ ಮತ್ತು ಬುದ್ಧ ಗುರು ಕುರಿತ ಪದ್ಯ ತೆಗೆದಿದ್ದಾರೆ. ಇಂಥ ಅನೇಕ ಅಂಶಗಳನ್ನು ಪಟ್ಟಿ ಮಾಡಬಹುದು” ಎಂದು ಅವರು ತಿಳಿಸಿದ್ದಾರೆ.

ಇದನ್ನೂ ಓದಿ: ಪಠ್ಯಪುಸ್ತಕ ವಿವಾದಕ್ಕೆ ಆರ್‌.ಅಶೋಕ್‌ ಸ್ಪಷ್ಟೀಕರಣ: ಒಕ್ಕಲಿಗರನ್ನು ಒಡೆದು ಆಳುವ ಹುನ್ನಾರವೇ?

“ಇನ್ನು ನಮ್ಮ ಪಠ್ಯ ಪರಿಷ್ಕರಣೆಯು ಕಮ್ಯುನಿಸ್ಟ್ ಸಿದ್ಧಾಂತವನ್ನು ಅಳವಡಿಸಿಕೊಂಡಿದೆ ಎಂಬ ಮಿಥ್ಯಾರೋಪಕ್ಕೆ ನಮ್ಮ ಪಠ್ಯಗಳೇ ಉತ್ತರ ಹೇಳುತ್ತವೆ. ನಾವು ಹೊಸದಾಗಿ ಬಸವಣ್ಣ, ಸಂಗೊಳ್ಳಿ ರಾಯಣ್ಣ, ಡಾ.ರಾಜಕುಮಾರ್ ಅವರ ಬಗ್ಗೆ ಪಾಠ ಸೇರಿಸಿದರೆ ಅದು ಕಮ್ಯುನಿಸ್ಟ್ ಪಠ್ಯವೆ?” ಎಂದು ಅವರು ಪ್ರಶ್ನಿಸಿದ್ದಾರೆ.

“ಮಾಸ್ತಿ, ಗೋಪಾಲಕೃಷ್ಣ ಅಡಿಗ, ಗೊರೂರು, ಮೂರ್ತಿರಾಯರು, ಲಂಕೇಶ್, ಶಾಂತರಸ, ಸಾರಾ ಅಬೂಬಕರ್, ಚೆನ್ನಣ್ಣ ವಾಲೀಕಾರ ಮುಂತಾದವರ ಬರಹಗಳನ್ನು ಹೊಸದಾಗಿ ಸೇರಿಸಿ ಸಮತೋಲನ ಸಾಧಿಸಿದರೆ ಅದು ಕಮ್ಯೂನಿಸ್ಟ್ ಸಿದ್ಧಾಂತವೇ? ಕರ್ನಾಟಕದ ಮಹಿಳಾ ಸ್ವಾತಂತ್ರ್ಯ ಹೋರಾಟಗಾರರು, ಭಕ್ತಿಪಂಥದವರು, ದೇಶದ ಮಹಿಳಾ ಸುಧಾರಕರು ಪಠ್ಯದಲ್ಲಿದ್ದರೆ ಅದು ಕಮ್ಯುನಿಸಂ ಎನ್ನುವಿರಾ?” ಎಂದು ಅವರು ಕೇಳಿದ್ದಾರೆ.

“ನಮ್ಮ ಪರಿಷ್ಕರಣೆಯ ಪಠ್ಯಗಳು ಜಾರಿಗೊಂಡು ಐದು ವರ್ಷಗಳ ನಂತರ ಕಮ್ಯುನಿಸ್ಟ್ ಎಂದು ಆರೋಪಿಸುವುದು ತಮ್ಮ ಮೂಲಭೂತವಾದಿ ಸಿದ್ಧಾಂತದ ಪಠ್ಯ ಪರಿಷ್ಕರಣೆಯ ಅನ್ಯಾಯಗಳನ್ನು ಮರೆಮಾಚುವುದಕ್ಕೆ ಎನ್ನುವುದು ಸ್ಪಷ್ಟ” ಎಂದು ಬರಗೂರು ಹೇಳಿದ್ದಾರೆ.

ಇದನ್ನೂ ಓದಿ: ಪಠ್ಯ ಪರಿಷ್ಕರಣೆ; ಕವಿಶೈಲದ ಜಾಥಾ ಪಡೆಯಬೇಕಿದೆ ಗೋಕಾಕ್ ಚಳವಳಿಯ ತೀವ್ರತೆ

“ನಾವು ಕಮ್ಯುನಿಷ್ಠರಾಗಿ ಪಠ್ಯಪರಿಷ್ಕರಣೆ ಮಾಡಲಿಲ್ಲ. ಶಿಕ್ಷಣ ನಿಷ್ಠರಾಗಿ ಮಾಡಿದೆವು. ಇನ್ನಾದರೂ ಮಿಥ್ಯಾರೋಪಗಳು ನಿಲ್ಲಲಿ ಮತ್ತು ಮಾನ್ಯ ಮುಖ್ಯಮಂತ್ರಿಗಳು ಮರುಪರಿಷ್ಕರಣೆಯನ್ನು ವಿರೋಧಿಸುತ್ತಿರುವ ಸಾಹಿತಿಗಳು ಮತ್ತು ಸಂಘಟನೆಗಳನ್ನು ಮಾತುಕತೆಗೆ ಆಹ್ವಾನಿಸಿ ಪ್ರಜಾಸತ್ತಾತ್ಮಕ ನಡೆಗೆ ಮುಂದಾಗಲಿ” ಎಂದು ಪ್ರೊಫೆಸರ್‌ ಬರಗೂರು ರಾಮಚಂದ್ರಪ್ಪ ಅವರು ಆಶಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...