Homeಕರ್ನಾಟಕಮೋದಿಯ ಕರ್ನಾಟಕ ವಿರೋಧಿ ನೀತಿಯನ್ನು ಕನ್ನಡಿಗರು ಸಹಿಸಿಕೊಳ್ಳುವುದಿಲ್ಲ: ಸಿದ್ದರಾಮಯ್ಯ

ಮೋದಿಯ ಕರ್ನಾಟಕ ವಿರೋಧಿ ನೀತಿಯನ್ನು ಕನ್ನಡಿಗರು ಸಹಿಸಿಕೊಳ್ಳುವುದಿಲ್ಲ: ಸಿದ್ದರಾಮಯ್ಯ

- Advertisement -
- Advertisement -

ನೆರೆ ಇಲ್ಲವೆ ಬರ ಪರಿಸ್ಥಿತಿ ಎದುರಿಸಿದ ಸಂದರ್ಭಗಳಲ್ಲಿ, ವಾಜಪೇಯಿ ಸರ್ಕಾರವೂ ಸೇರಿದಂತೆ ಹಿಂದಿನ ಯಾವ ಕೇಂದ್ರ ಸರ್ಕಾರವೂ, ಯಾವ ಪ್ರಧಾನಿಯೂ ಕರ್ನಾಟಕ ರಾಜ್ಯವನ್ನು ಈ ರೀತಿ ನಿರ್ಲಕ್ಷಿಸಿಲ್ಲ. ಮುಖ್ಯಮಂತ್ರಿಗಳನ್ನು ಈ ರೀತಿ ಅವಮಾನಿಸಿಲ್ಲ. ಸ್ವಾಭಿಮಾನಿ, ಸ್ವಾವಲಂಬಿ ಕರ್ನಾಟಕ ಇದನ್ನು ಸಹಿಸುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಪರೋಕ್ಷವಾಗಿ ನರೇಂದ್ರ ಮೋದಿಯ ವಿರುದ್ಧ ವಾಗ್ಧಾಳಿ ನಡೆಸಿದ್ದಾರೆ.

ನಿನ್ನೆ ಸಿಎಂ ಯಡಿಯೂರಪ್ಪನವರು ಪ್ರವಾಹ ಪರಿಹಾರಕ್ಕೆ ಮನವಿ ಸಲ್ಲಿಸಲು ದೆಹಲಿಗೆ ತೆರಳಿದ್ದರು. ಪ್ರಧಾನಿ ಸೇರಿದಂತೆ ಹಲವು ಸಚಿವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ್ದರು. ಆದರೂ ಕೇಂದ್ರ ಸರ್ಕಾರ ಯಾವುದೇ ಪರಿಹಾರ ನೀಡದೇ, ಅಧ್ಯಯನ ತಂಡ ಕಳಿಸುವುದಾಗಿ ಹೇಳಿದೆ. ಅಂದರೆ ಕರ್ನಾಟಕದ ಜನರ ಮೇಲೆ ವಿಶ್ವಾಸವಿಡದೇ ಇಂತಹ ಸಂಕಷ್ಟದ ಕಾಲದಲ್ಲಿ ಪರಿಹಾರ ನೀಡದೇ ಮುಂದೂಡುತ್ತಿರುವುದು ಸರಿಯಲ್ಲ ಎಂದು ಹಲವರು ಟೀಕಿಸಿದ್ದರು. ಈ ಹಿನ್ನೆಲೆಯಲ್ಲಿ ಸಿದ್ದರಾಮಯ್ಯನವರು ಮೋದಿಯವರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

ಕರ್ನಾಟಕದಿಂದ 25 ಎಂಪಿಗಳು ಬಿಜೆಪಿಯಿಂದ ಗೆದ್ದು ಹೋಗಿದ್ದರೂ ಸಹ ಬಿಜೆಪಿ ಕರ್ನಾಟಕಕ್ಕೆ ಅವಮಾನ ಮಾಡುತ್ತಿದೆ. ಅತಿ ದೊಡ್ಡ ಪ್ರವಾಹದಿಂದ ಕರ್ನಾಟಕ ನಲುಗಿಹೋಗಿರುವುದನ್ನು ಅಮಿತ್ ಶಾ ಮತ್ತು ನಿರ್ಮಲಾ ಸೀತಾರಾಮನ್ ಕಣ್ಣಾರೆ ಕಂಡಿದ್ದಾರೆ. ಸಾಲದಕ್ಕೆ ಸದ್ಯ ಬಿಜೆಪಿ ಸರ್ಕಾರವೇ ಅಸ್ತಿತ್ವದಲ್ಲಿದೆ ಆದರೂ ಪರಿಹಾರಕ್ಕೆ ಮೀನಾಮೇಷ ಎಣಿಸುತ್ತಿರುವುದನ್ನು ಕನ್ನಡಿಗರು ಸಹಿಸುವುದಿಲ್ಲ ಎಂದಿದ್ದಾರೆ.

ಈ ಕುರಿತು ಟ್ವಿಟ್ಟರ್ ನಲ್ಲಿ ಸರಣಿ ಟ್ವೀಟ್ ಮಾಡಿರುವ ಸಿದ್ದರಾಮಯ್ಯ, ನಮ್ಮ ಸರ್ಕಾರವು ಪ್ರಾರಂಭಿಸಿದ ಕೆಲವು ಜನರ ಪರವಾದ ಯೋಜನೆಗಳನ್ನು ಬಿಜೆಪಿ ಸರ್ಕಾರವು ಕಡಿತಗೊಳಿಸುತ್ತಿದೆ ಅಥವಾ ನಿರ್ಲಕ್ಷಿಸುತ್ತಿದೆ. ಅಂತಹ ಕ್ರಮವನ್ನು ಖಂಡಿಸುತ್ತೇವೆ ಮತ್ತು ಸಾಮಾನ್ಯ ಜನರ ಹಿತಾಸಕ್ತಿಗಳನ್ನು ಕಾಪಾಡಲು ರಾಜ್ಯದ್ಯಂತ ವ್ಯಾಪಕವಾದ ಪ್ರತಿಭಟನೆಗಳನ್ನು ನಡೆಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.

ನರೇಂದ್ರ ಮೋದಿಯವರ ನೀತಿ ನಿರೂಪಣೆಯ ಕಡೆಗಿನ ನಿರ್ಲಕ್ಷ್ಯ ಮತ್ತು ಅಸಡ್ಡೆ ವಿಧಾನದಿಂದ ಉಂಟಾಗಿರುವ ಈ ಆರ್ಥಿಕ ಕುಸಿತದಲ್ಲಿಯೂ ನಾವು ತಂದಿದ್ದ ಯೋಜನೆಗಳು ಜನರಿಗೆ ಬೆಂಬಲವಾಗಿ ಕಾರ್ಯನಿರ್ವಹಿಸುತ್ತಿವೆ. ನಮ್ಮ ಬಡವರ ಪರ ಯೋಜನೆಗಳಿಗೆ ಯಾವುದೇ ಅಡ್ಡಿ ಉಂಟು ಮಾಡಿದ್ದಲ್ಲಿ ಅನೇಕ ಕುಟುಂಬಗಳ ಜೀವನೋಪಾಯಕ್ಕೆ ಭಂಗ ತರುತ್ತದೆ ಎಂದು ಸಿದ್ದರಾಮಯ್ಯನವರು ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂಪೂರ್ಣ ಒಳಮೀಸಲಾತಿ ಜಾರಿಗೆ ಆಗ್ರಹಿಸಿ ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಬೃಹತ್ ಪ್ರತಿಭಟನೆ

ಈ ವರ್ಷದ ಬಜೆಟ್ ಅಧಿವೇಶನದಲ್ಲಿ ಬಹುಕಾಲದ ಸಂಪೂರ್ಣ ಒಳಮೀಸಲಾತಿ ಜಾರಿಗೆ ಆಗ್ರಹಿಸಿ ಪರಿಶಿಷ್ಟ ಜಾತಿ (ಎಸ್‌ಸಿ) ಎಡಗೈ ಸಂಬಂಧಿತ ಜಾತಿ ಮುಖಂಡರು ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಮೆರವಣಿಗೆ ನಡೆಸಿ, ಜಿಲ್ಲಾಧಿಕಾರಿಗಳು ಮತ್ತು...

“ಇಲ್ಲಿ 60 ವರ್ಷ ವಾಸಿಸಿದ್ದೆವು, ಒಂದೇ ದಿನದಲ್ಲಿ ನಿರಾಶ್ರಿತರಾದೆವು”: ಅಜಿ ನದಿ ದಡದ ಅಕ್ರಮ ಅತಿಕ್ರಮಣ ತೆರವಿನಲ್ಲಿ ಮನೆ ಕಳೆದುಕೊಂಡವರ ಮಾತು

ಗುಜರಾತ್‌ನ ರಾಜ್‌ಕೋಟ್ ಮುನ್ಸಿಪಲ್ ಕಾರ್ಪೊರೇಷನ್ (ಆರ್‌ಎಂಸಿ) ಜಂಗಲೇಶ್ವರದಲ್ಲಿ ನೂರಾರು ವಸತಿ ರಚನೆಗಳನ್ನು ನೆಲಸಮಗೊಳಿಸಿ ಹಲವಾರು ಕುಟುಂಬಗಳನ್ನು ನಿರಾಶ್ರಿತರನ್ನಾಗಿ ಮಾಡಿರುವ ಅಜಿ ನದಿಯ ದಡದಲ್ಲಿ ಅಕ್ರಮ ಅತಿಕ್ರಮಣಗಳನ್ನು ತೆಗೆದುಹಾಕಲು ದೊಡ್ಡ ಪ್ರಮಾಣದ ನೆಲಸಮ ಕಾರ್ಯಾಚರಣೆಯ...

ಇಂಡಿಯಾ ಬಣದ ಸಂಚಾಲಕರಾಗಲು ಸ್ಟಾಲಿನ್ ಸೂಕ್ತ: ಮಣಿಶಂಕರ್ ಅಯ್ಯರ್

"ಡಿಎಂಕೆ ಮುಖ್ಯಸ್ಥ ಎಂಕೆ ಸ್ಟಾಲಿನ್ ಅವರು ಇಂಡಿಯಾ ಬಣದ ಸಂಚಾಲಕರಾಗಲು ಸೂಕ್ತ" ಎಂದು ಹಿರಿಯ ಕಾಂಗ್ರೆಸ್ ನಾಯಕ ಮಣಿಶಂಕರ್ ಅಯ್ಯರ್ ಪ್ರತಿಪಾದಿಸಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅಯ್ಯರ್, ತಮಿಳುನಾಡು ಮುಖ್ಯಮಂತ್ರಿ ಇಂಡಿಯಾ ಬಣದ ಸಂಚಾಲಕರಾಗಲು ಉತ್ತಮ...

ಬೆಂಗಳೂರು: ಮತ್ತು ಬೆರೆಸಿದ ಪಾನೀಯ ನೀಡಿ ಗೆಳೆಯ ಮತ್ತು ಆತನ ಸ್ನೇಹಿತನಿಂದ ಅತ್ಯಾಚಾರ, ಬೆದರಿಕೆ: ಕಾಲೇಜು ವಿದ್ಯಾರ್ಥಿನಿಯಿಂದ ದೂರು

19 ವರ್ಷದ ಖಾಸಗಿ ಕಾಲೇಜು ವಿದ್ಯಾರ್ಥಿನಿಯೊಬ್ಬಳು ತನ್ನ ಗೆಳೆಯ ಮತ್ತು ಅವನ ಸ್ನೇಹಿತನ ವಿರುದ್ಧ ಮಾದಕ ದ್ರವ್ಯ ಸೇವಿಸಿ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ದೂರು ದಾಖಲಿಸಿದ್ದಾಳೆ. ಜಕ್ಕೂರಿನಲ್ಲಿ ಈ ಘಟನೆ ನಡೆದಿದ್ದು, ವಿದ್ಯಾರ್ಥಿನಿಗೆ...

ಮಕ್ಕಳಲ್ಲಿ ಹಿಂಸಾತ್ಮಕ ಪ್ರವೃತ್ತಿ ತಡೆಯಲು ಮೀನು-ಮಾಂಸ ಮಾರಾಟ ನಿಷೇಧ: ಬಿಹಾರ ಉಪಮುಖ್ಯಮಂತ್ರಿ

ಮಕ್ಕಳಲ್ಲಿ 'ಹಿಂಸಾತ್ಮಕ ಪ್ರವೃತ್ತಿ'ಗಳನ್ನು ನಿಲ್ಲಿಸುವ ಪ್ರಯತ್ನದಲ್ಲಿ ಧಾರ್ಮಿಕ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಅಥವಾ ಜನದಟ್ಟಣೆಯ ಸ್ಥಳಗಳ ಬಳಿ ಮಾಂಸ ಮತ್ತು ಮೀನು ಮಾರಾಟವನ್ನು ನಿಷೇಧಿಸುವ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ ಎಂದು ಬಿಹಾರ ಉಪಮುಖ್ಯಮಂತ್ರಿ ವಿಜಯ್...

ದೆಹಲಿಯಲ್ಲಿ ಅರುಣಾಚಲದ ಮಹಿಳೆಯರಿಗೆ ಜನಾಂಗೀಯ ನಿಂದನೆ : ಪ್ರಕರಣ ದಾಖಲು

ದೆಹಲಿಯ ಮಾಳವೀಯ ನಗರದಲ್ಲಿ ಅರುಣಾಚಲ ಪ್ರದೇಶದ ಮೂವರು ಮಹಿಳೆಯರಿಗೆ ಜನಾಂಗೀಯ ನಿಂದನೆ ಮಾಡಿ, ಕಿರುಕುಳ ನೀಡಿದ ಆರೋಪ ಕೇಳಿ ಬಂದಿದೆ. ಫೆಬ್ರವರಿ 20 ಎಸಿ ದುರಸ್ತಿ ಸಂದರ್ಭದಲ್ಲಿ ಉಂಟಾದ ಸಣ್ಣ ಜಗಳವೊಂದು ಜನಾಂಗೀಯ ನಿಂದನೆಗೆ...

ಹಿಂದುತ್ವ ಗುಂಪಿನಿಂದ ಮುಸ್ಲಿಂ ವ್ಯಕ್ತಿಯನ್ನು ರಕ್ಷಿಸಿದ್ದ ಜಿಮ್ ಟ್ರೈನರ್ ‘ಮೊಹಮ್ಮದ್ ದೀಪಕ್’ ಅವರನ್ನು ಭೇಟಿಯಾದ ರಾಹುಲ್ ಗಾಂಧಿ 

ನವದೆಹಲಿ: ಕಳೆದ ತಿಂಗಳು ಕೋಟ್ದ್ವಾರದಲ್ಲಿರುವ ಅಹ್ಮದ್ ಅವರ ಬಾಬಾ ಸ್ಕೂಲ್ ಡ್ರೆಸ್ & ಮ್ಯಾಚಿಂಗ್ ಸೆಂಟರ್‌ನ ರಕ್ಷಣೆಗೆ ಬಂದು ಸುದ್ದಿಯಲ್ಲಿದ್ದ ಜಿಮ್ ತರಬೇತುದಾರ ದೀಪಕ್ ಅವರನ್ನು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್...

‘ಸಂಘದವರ ಚಡ್ಡಿಗಳನ್ನು ತಲೆ ಮೇಲೆ ಹೊರುವುದು ದಲಿತತ್ವವಲ್ಲ..’; ಛಲವಾದಿಗೆ ಸಚಿವ ಪ್ರಿಯಾಂಕ್‌ ತಿರುಗೇಟು

"ಸಂವಿಧಾನ ವಿರೋಧಿಸಿ ಕರಡು ಪ್ರತಿಯನ್ನು ಸುಟ್ಟಿದ್ದ ಸಂಘದವರ ಚಡ್ಡಿಗಳನ್ನು ತಲೆ ಮೇಲೆ ಹೊರುವುದು ದಲಿತತ್ವವಲ್ಲ" ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರಿಗೆ ಸಚಿವ ಪ್ರಿಯಾಂಕ್‌ ಖರ್ಗೆ ತಿರುಗೇಟು ನೀಡಿದ್ದಾರೆ. ಈ ಬಗ್ಗೆ...

ಅಮೆರಿಕದಿಂದ ದಾಳಿ ಬೆದರಿಕೆ : ಇರಾನ್ ತೊರೆಯುವಂತೆ ಭಾರತೀಯ ಪ್ರಜೆಗಳಿಗೆ ಸೂಚನೆ

ಅಮೆರಿಕದ ದಾಳಿ ಬೆದರಿಕೆ ಹಾಗೂ ಮತ್ತೆ ಪ್ರತಿಭಟನೆಗಳು ಭುಗಿಲೆದ್ದಿರುವ ಕಾರಣ, ಇರಾನ್‌ನಲ್ಲಿರುವ ಎಲ್ಲಾ ಭಾರತೀಯರು ವಾಣಿಜ್ಯ ವಿಮಾನಗಳು ಸೇರಿದಂತೆ ಲಭ್ಯವಿರುವ ಸಾರಿಗೆ ವ್ಯವಸ್ಥೆಯ ಮೂಲಕ ತಕ್ಷಣ ದೇಶ ತೊರೆಯುವಂತೆ ತೆಹ್ರಾನ್‌ನಲ್ಲಿರುವ ಭಾರತೀಯ ರಾಯಭಾರ...

ಆರ್‌ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ವಿರುದ್ಧ ಮತ್ತೊಂದು ಎಫ್‌ಐಆರ್

ಕೇಂದ್ರ ಅಪರಾಧ ಶಾಖೆ (ಸಿಸಿಬಿ) ವಶಕ್ಕೆ ಪಡೆದು ವಿಚಾರಣೆ ನಡೆಸಿದ ಕೆಲವು ದಿನಗಳ ನಂತರ, ಆರ್‌ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ವಿರುದ್ಧ ಮತ್ತೊಂದು ಎಫ್‌ಐಆರ್ ದಾಖಲಾಗಿದೆ.  ಪವಿತ್ರಾ ಬಿ.ಎನ್ ಸಲ್ಲಿಸಿದ ದೂರಿನ ಆಧಾರದ ಮೇಲೆ...