Homeಅಂಕಣಗಳುಇಬ್ರಾಹಿಂ ಏನು ಅಂತ ನಮಗೆ ಚನ್ನಾಗಿ ಗೊತ್ತು; ನಮ್ಮ ತಂದೆಯವರಿಗೆ ಇನ್ನೂ ಗೊತ್ತು..

ಇಬ್ರಾಹಿಂ ಏನು ಅಂತ ನಮಗೆ ಚನ್ನಾಗಿ ಗೊತ್ತು; ನಮ್ಮ ತಂದೆಯವರಿಗೆ ಇನ್ನೂ ಗೊತ್ತು..

- Advertisement -
- Advertisement -

ಕಾಂಗೈಗಳನ್ನು ಟೀಕಿಸುವ ಸಾಮಗ್ರಿಯನ್ನು ಖಾಲಿ ಮಾಡಿಕೊಂಡ ಈ ಬಿಜೆಪಿಗಳು ನಿಮ್ಮದು ರಾವಣನ ಪಕ್ಷ ನಮ್ಮದು ರಾಮನ ಪಕ್ಷ ಎಂದುಬಿಟ್ಟಿವೆಯಲ್ಲಾ. ಇದಕ್ಕೆ ತಕ್ಕ ಉತ್ತರ ಕೊಡಲು ತಡಕಾಡುತ್ತಿರುವ ಕಾಂಗೈಗಳು ಹಾಗೇ ಸ್ವಲ್ಪ ಯೋಚಿಸಿದ್ದರೆ ರಾವಣ ಎಂತವನು ಎಂಬುದು ಅರಿವಾಗುತ್ತಿತ್ತು. ರಾವಣನ ಹತ್ತು ತಲೆ ಅವನ ಶಕ್ತಿ ಸಾಮರ್ಥ್ಯದ ಸಂಕೇತ. ಆತ ಅಪ್ಪಟ ಶಿವಭಕ್ತ, ಸಂಗೀತಗಾರ, ಮಹಾವೈಣಿಕ, ನೃತ್ಯಪಟು, ಅಜೇಯ, ಒಳ್ಳೆ ಆಡಳಿತಗಾರ, ಕುಬೇರರನ್ನು ಸೋಲಿಸಿ ಪುಷ್ಪಕ ವಿಮಾನ ಪಡೆದವನು. ಭುಜಂಗ ಸ್ತೋತ್ರ ರಚಿಸಿದ ಕರ್ತೃ. ಜ್ವಲಿಸುವ ಅಗ್ನಿಯಂತಿದ್ದ ರಾಜಲಕ್ಷಣದಿಂದ ಶೋಭಿತನಾದ ಆತ ಈ ಪ್ರಪಂಚಕ್ಕೆ ಮೊದಲು ಮೀಸಲಾತಿ ತಂದವನು. ಲಂಕೆಯನ್ನು ರಕ್ಷಿಸಲು ಲಂಕಿಣಿ, ದಂಡಕಾರಣ್ಯ ರಕ್ಷಿಸಲು ತಾಟಕಿ, ಲಂಕೆ ಹೆಬ್ಬಾಗಿಲು ಕಾಯಲು ಸಿಂಹಿಣಿ, ಅಶೋಕವನ ನೋಡಿಕೊಳ್ಳಲು ತ್ರಿಜಟಿಯನ್ನು ನೇಮಿಸಿದ್ದ. ಹೆಣ್ಣನ್ನು ಮೋಸ ಮಾಡಿ ಕೊಂದವನಲ್ಲ. ಮರದ ಮರೆಯಲ್ಲಿ ನಿಂತು ಯುದ್ಧ ಮಾಡಿದವನಲ್ಲ. ಯಾರದೋ ಮಾತಿಗೆ ಮಡದಿಯನ್ನೇ ಕಾಡಿಗಟ್ಟಿದವನಲ್ಲ. ಹೆಂಡತಿ ಬಗ್ಗೆ ಸಂಶಯಗೊಂಡು ಬೆಂಕಿ ಮುಟ್ಟಲು ಹೇಳಿದವನಲ್ಲ ರಾವಣ. ಹೀಗೆ ರಾವಣನ ಗುಣಗಳನ್ನು ಪಟ್ಟಿಮಾಡಿ ಬಿಜೆಪಿಗೆ ಕಾಂಗೈಗಳು ಸವಾಲೆಸೆಯುವ ಬದಲು ಗೊಂದಲಕ್ಕೆ ಬಿದ್ದಿವೆಯಲ್ಲಾ. ಈ ಗೊಂದಲಕ್ಕೆ ಕಾರಣ ಬಿಜೆಪಿಗಳು ನಿಮ್ಮನ್ನು ರಾವಣ ಪಕ್ಷ ಎಂದ ಕೂಡಲೇ ನಮ್ಮಲ್ಲಿ ರಾವಣ ಸಿದ್ದರಾಮಯ್ಯನೊ ಅಥವಾ ಡಿ.ಕೆ ಶಿವಕುಮಾರನೊ ಎಂದು ಯೋಚಿಸುತ್ತ ಕುಳಿತಿವೆಯಂತಲ್ಲಾ ಥೂತ್ತೇರಿ.

ಕಾಂಗೈ ಮತ್ತು ಬಿಜೆಪಿಗಳ ಕತೆ ಹೀಗಿದ್ದರೆ ಇನ್ನ ಯಾತ್ರೆ ಆರಂಭಿಸಿದ ದಿನದಿಂದಲೂ ಹಲವಾರು ಅಡ್ಡಿ ಆತಂಕಗಳನ್ನು ಎದುರಿಸುತ್ತಿರುವ ನಮ್ಮ ಕುಮಾರಣ್ಣನನ್ನು ಮಾತನಾಡಿಸಿ ಬಹಳ ದಿನಗಳಾದವು. ಪಂಚರತ್ನ ಯಾತ್ರೆ ಸ್ಥಗಿತಗೊಳಿಸಿ ಸುಧಾರಿಸಿಕೊಳ್ಳುತ್ತಿರುವ ಈ ಸಮಯದಲ್ಲಿ ಮಾತಿಗೆ ಸಿಕ್ಕಬಹುದೆಂದು ಪೋನ್ ಮಾಡಲಾಗಿ ಪೋನ್ ರಿಂಗಾಯ್ತು, ರಿಂಗ್ ಟೋನು “ಮುರುಳಿಯ ಮರೆಸಿ ನಗುತಿಹೆ ಸರಸಿ..” ಹಲೋ ಯಾರು?

“ನಾನು ಸಾರ್, ಯಾಹೂ.”

“ಏನ್ರಿ ಯಾಹೂ ಇತ್ತೀಚೆಗೆ ಪೋನ್ ಮಾಡದನ್ನು ಬಿಟ್ರಿ. ಭೇಟಿಯಾಗದನ್ನು ಬಿಟ್‌ರಲ್ರಿ.”

“ಅಂಗೇನು ಯಿಲ್ಲ ಸಾರ್, ನೀವು ಬಿಜಿಲಿದ್ರಿ. ಅದಕ್ಕಿಂತ್ಲೂ, ಎಷ್ಟೋ ದಿನ ನಾವು ಮುನಿಸಿಕೊಂಡಿದ್ರೂ ಸಹ ಪುನಹ ನಿಮ್ಮತ್ರ ಬರಬೇಕಾಗತ್ತೆ, ಜಿ.ಟಿ ದೇವೇಗೌಡರ ತರ.”

“ದೇವೇಗೌಡ್ರು ಮುನಿಸಿಕೊಂಡಿದ್ದಕ್ಕೆ ಹಲವಾರು ಕಾರಣಗಳು ಇವೆ. ಅವನ್ನೆಲ್ಲ ಮಾತನಾಡತಕ್ಕಂತ ತೀರ್ಮಾನ ತಗೊಳತಕ್ಕಂತ ಸಮಯ ಇದಲ್ಲ. ನಮ್ಮ ಮೈಸೂರು ಭಾಗದಲ್ಲಿ ಅವರು ದಳಕ್ಕೆ ಒಂದು ಶಕ್ತಿಯಾಗಿರತಕ್ಕಂತದ್ದು, ಈಗಾಗ್ಲೆ ತೀರ್ಮಾನ ಆಗಿರತಕ್ಕಂತ ವಿಚಾರ ಆದ್ದರಿಂದ ನಮ್ಮ ತಂದೆಯವರು, ಮಾಜಿ ಪ್ರಧಾನಿಗಳಾದ ಮಾನ್ಯ ದೇವೇಗೌಡ್ರು ಕರದ ಕೂಡಲೆ ಬಂದು ಅಳತೆ ಗೌರವ ತೋರಿರತಕ್ಕಂತ ವಿಷಯ ಏನಿದೆ ಅದ್ಯಲ್ಲ ಮುಗದು ಈಗ ಅವರು ದಳದ ಸಂಘಟನೆಲಿ ಸಕ್ರಿಯವಾಗಿರತಕ್ಕಂತದ್ದು ನೀವೆ ನೋಡಿದ್ದಿರಿ.”

“ಆದ್ರು ಜಿ.ಟಿ ದೇವೇಗೌಡ್ರ ನಂಬಿದ್ದೋರು ಐದು ಜನ ಕಾಂಗ್ರಸ್ಸಿಗೋದರಲ್ಲ ಸಾರ್?”

“ಅವುರ ಬಗ್ಗೆ ಹೆಚ್ಚಿಗೆ ಮಾತಾಡತಕ್ಕಂತ ವಿಷಯಕ್ಕೆ ಹೋಗಲ್ಲ. ಅಲ್ಲಿ ನಾಲ್ಕೆ ಜನ ಸಾಕು ಅನತಕ್ಕಂತ ತೀರ್ಮಾನವ ಅವರೇ ತಗಂಡು ಈಗಾಗ್ಲೆ ಒಬ್ಬ ವಾಪಸು ಪುನಹ ನಮ್ಮ ಪಾರ್ಟಿಗೆ ಬಂದವುರೆ, ನಾನು ಯಾವತ್ತು ಕೂಡ ನಮ್ಮ ಪಾರ್ಟಿ ಬಿಟ್ಟು ಹೋಗುವರ ಬಗ್ಗೆಯಾಗಲಿ ಬರತಕ್ಕಂತ ವ್ಯಕ್ತಿಗಳ ಬಗೆಯಾಗ್ಲಿ ಕಾಳಜಿ ವಹಿಸದೆ ಇರತಕ್ಕತಂದ್ದು ಮೊದಲಿನಿಂದಲೂ ನಾವು ರೂಢಿಸಿಕೊಂಡು ಬಂದಂತ ತೀರ್ಮಾನಗಳೇನಿವೆ ಅವನ್ನ ಪಾಲನೆ ಮಾಡತಕ್ಕಂತದ್ದು ನಮ್ಮ ಜವಾಬ್ದಾರಿ.”

“ಮತ್ತೆ ಜಿ.ಟಿ ದೇವೇಗೌಡ್ರನ್ನ ಕಾಡಿ ಬೇಡಿ ಕರಕೊಂಡ್ರಲ್ಲ ಸಾರ್?”

“ಅದು ನಮ್ಮ ರಾಷ್ಟ್ರೀಯ ಅಧ್ಯಕ್ಷರ ತೀರ್ಮಾನ. ಅವುರು ತೆಗೆದುಕೊಳ್ಳತಕ್ಕಂತ ತೀರ್ಮಾನ ಏನಿದೆ ಅವುನ್ನ ಗೌರವಿಸತಕ್ಕಂತದ್ದು ನಮ್ಮ ಕರ್ತವ್ಯ”

“ಇನ್ನೊಂದು ಗಂಭೀರ ವಿಷಯ ಸಾರ್, ನೀವು ಇಬ್ರಾಹಿಂ ಮುಖ್ಯಮಂತ್ರಿಯಾಗದರಲ್ಲಿ ತಪ್ಪೇನಿದೆ ಅವುರೇನು ಅಸ್ಪೃಶ್ಯರೆ ಅಂದುಬಿಟ್ಟಿದ್ದಿರಿ. ಈ ಮಾತಿಗೆ ಈಗಾಗ್ಲೆ ಕಂಪ್ಲೇಟು ಆಗಿದೆ, ಯಾಕಂಗದ್ರಿ ಸಾರ್?”

“ನಾನಂಗಂದಿರದು ಕಂಪ್ಲೇಟು ದಾಖಲಾಗಿರದನ್ನ ಗಮನಿಸಿದ್ದಿನಿ. ನಾನು ಹೇಳಿರತಕ್ಕಂತ ಮಾತೇನಿದೆ ಅದು ಕಾಂಗ್ರೆಸಿನವರಾಡೊ ಮಾತು; ಈ ದೇಶದಲ್ಲಿ ಅಸ್ಪೃಶ್ಯರು ಅವರೆ, ಅವುರು ಇನ್ನ ಇದ್ದಾರೆ ಅನ್ನದಾದ್ರೆ ಇಷ್ಟು ವರ್ಷ ದೇಶ ಆಳಿದ ಕಾಂಗ್ರೆಸಿನವರು ಅವರು ಇಲ್ದಂಗೆ ಮಾಡಬೇಕಾಗಿತ್ತು. ಅದು ಆಡಳಿತ ನ್ಯಡಸತಕ್ಕಂತ ಅವುರ ಜವಬ್ದಾರಿ ಆಗಿತ್ತು. ಅಸ್ಪೃಶ್ಯತೆ ಪದ ಹಿಡಕಂಡು ನಮ್ಮನ್ನ ಕೆಣಕತಕ್ಕಂತ ಸಾಹಸವ ಈ ಕಾಂಗ್ರೆಸ್ಸಿನವರು ಮಾಡ್ತ ಅವುರೆ. ಅವುರಿಗೆ ನಾನು ಈ ಮುಖಾಂತರ ಎಚ್ಚರಿಕೆ ಕೋಡ್ತಿನಿ.”

“ಪ್ರಶ್ನೆ ಕೇಳಿದ್ದು ಪತ್ರಿಕೆಯವರಲ್ಲವ ಸಾರ್?”

“ಇರಬಹುದು ಅವುರ್‍ಯಾರು ಎಂಬತಕ್ಕಂತ ಮಾಹಿತಿ ನಮ್ಮತ್ರ ಇದೆ. ನಾವು ಯಾವತ್ತೂ ಅಸ್ಪೃಶ್ಯರ ಬಗ್ಗೆ ಕೀಳಾಗಿ ನಡಕೊಂಡಿಲ್ಲ, ತಪ್ಪಾಗಿ ನ್ಯಡಕೊಂಡಿಲ್ಲ. ಅವರ ಭುಜದ ಮೇಲೆ ಕೈಹಾಕಿ ಮಾತನಾಡಿಸಿದ್ದೀನಿ. ರಾಮಕೃಷ್ಣ ಹೆಗಡೆ ಕಾಲದಲ್ಲಿ ಜಿಲ್ಲಾ ಪಂಚಾಯ್ತಿ ಚುನಾವಣೆ ಆದಾಗ ನಮ್ಮ ತಂದೆಯವರು ಒಬ್ಬ ದಲಿತರನ್ನು ಹಾಸನ ಜಿಲ್ಲಾ ಪಂಚಾಯ್ತಿ ಅಧ್ಯಕ್ಷರನ್ನಾಗಿ ಮಾಡಿದ್ರು. ಇದೇ ಕಾಂಗ್ರೆಸ್ಸಿಗರು ಮಾಡಿದ್ರಾ? ಅವುರಿಗೆ ಪವರ್ ಬಂದಾಗ ಪರಮೇಶ್ವರನ್ನ ಮಾಡಿದ್ರ? ಅದ್ಕೂ ಹಿಂದೆ ರಂಗನಾಥ ಬಸವಲಿಂಗಪ್ಪ ಇದ್ರಲ್ಲ ಮಾಡಿದ್ರಾ, ಖರ್ಗೆಯವರನ್ನ ಮಾಡಿದ್ರಾ?”

“ಖರ್ಗೆಯವರನ್ನ ಮಾಡದಂಗೆ ದೇವೇಗೌಡ್ರು ತಡೆಹಾಕಿದ್ರಲ್ಲ ಸಾರ್?”

“ದೇವೇಗೌಡ್ರು ಅಂತ ಕ್ಯಲಸ ಯಾವಾಗ್ಲು ಮಾಡಿಲ್ಲ.”

“ನಮ್ಮ ಕಣ್ಣೆದುರೆ ಮಾಡಿದ್ರಲ್ಲ ಸಾರ್. ಆಗ ಸಮ್ಮಿಶ್ರ ಸರಕಾರ ಮಾಡುವಾಗ ಸೋನಿಯಾ ಗಾಂಧಿ ಮುಖ್ಯಮಂತ್ರಿ ಪದವಿನೆ ತಗೊಳಿ ಅಂದ್ರು. ಆಗ ಗೌಡ್ರು ಬೇಡ ಬೇಡ ನಮಗೆ ಉಪಮುಖ್ಯಮಂತ್ರಿ ಸಾಕು ಅಂದ್ರು. ಯಾಕೆ ಅಂತ ಪತ್ತೆಹಚ್ಚಿದಾಗ, ಮುಂದೆ ಧರ್ಮಸಿಂಗ್‌ಗೆ ಕೊಟ್ಟ ಬೆಂಬಲ ವಾಪಸ್ ತಗಂಡಾಗ ಯಾರೂ ಪ್ರತಿಭಟಿಸಲಿಲ್ಲ; ಅದೇ ಖರ್ಗೆ ಮುಖ್ಯಮಂತ್ರಿಯಾಗಿದ್ದು ಬೆಂಬಲ ಹಿಂತಗಂಡ್ರೆ ಇಡೀ ಕರ್ನಾಟಕದ ದಲಿತರು ಪ್ರತಿಭಟಿಸತಿದ್ರು. ಇದು ಗೊತ್ತಾಗಿ ದೇವೇಗೌಡ್ರು ಧರ್ಮಸಿಂಗ್‌ಗೆ ಸಪೋರ್ಟ್ ಮಾಡಿ ವಾಪಸ್ ತಗೊ ಅಂತ ನಿಮಗೇಳೀದ್ರಂತೆ, ಪಾಪ ಗೌಡ್ರು ಪ್ಲಾನು ನಿಮಗೂ ಗೊತ್ತಾಗಲಿಲ್ಲ ಅಲವಾ ಸಾರ್?”

“ಇದ್ಯಲ್ಲ ಕಟ್ಟುಕತೆ ಕಂಡ್ರಿ, ಇದೇ ಡಿ.ಕೆ ಶಿವಕುಮಾರ ನಮ್ಮ ಪಾರ್ಟಿ ಜನನ ಯಳಿಯಕ್ಕೆ ನೋಡಿದಾಗ, ನಾನೇ ಪಾರ್ಟಿ ಉಳಿಸಿಗಳಕ್ಕೆ ಅಂಗೆ ಮಾಡಿದ್ದೆ.”

“ಈಗ್ಲು ಉಸಾರಾಗಿರಿ ಸಾರ್. ಇಬ್ರಾಹಿಂ ನಿಮ್ಮ ಬಗುಲಲ್ಲೇ ಅವುರೆ. ಆತ ಕಾಂಗ್ರೆಸ್‌ನಲ್ಲಿದ್ದು ಯಡಿಯೂರಪ್ಪನಿಗೆ ಮುವ್ವತ್ತು ಸಾವುರ ಓಟಾಕ್ಸಿದನಂತೆ. ಅವುರೆ ಅಂಗಂದವುರೆ. ನಿಮ್ಮ ಕ್ಷೇತ್ರದ ಮುಸ್ಲಿಮರು ಯಂಗವ್ರೆ ನೋಡಿಕಳಿ.”

“ಇಬ್ರಾಹಿಂ ಏನು ಅಂತ ನಮಗೆ ಚನ್ನಾಗಿ ಗೊತ್ತು. ನಮ್ಮ ತಂದೆಯವರಿಗೆ ಇನ್ನು ಗೊತ್ತು.”

“ಥೂತ್ತೇರಿ”


ಇದನ್ನೂ ಓದಿ: ಉಗ್ರರನ್ನೇ ಬಿಡದ ಮೋದಿ ರೌಡಿಗಳನ್ನು ಬಿಟ್ಟಾರಾ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...