Homeಅಂಕಣಗಳುಇಬ್ರಾಹಿಂ ಏನು ಅಂತ ನಮಗೆ ಚನ್ನಾಗಿ ಗೊತ್ತು; ನಮ್ಮ ತಂದೆಯವರಿಗೆ ಇನ್ನೂ ಗೊತ್ತು..

ಇಬ್ರಾಹಿಂ ಏನು ಅಂತ ನಮಗೆ ಚನ್ನಾಗಿ ಗೊತ್ತು; ನಮ್ಮ ತಂದೆಯವರಿಗೆ ಇನ್ನೂ ಗೊತ್ತು..

- Advertisement -
- Advertisement -

ಕಾಂಗೈಗಳನ್ನು ಟೀಕಿಸುವ ಸಾಮಗ್ರಿಯನ್ನು ಖಾಲಿ ಮಾಡಿಕೊಂಡ ಈ ಬಿಜೆಪಿಗಳು ನಿಮ್ಮದು ರಾವಣನ ಪಕ್ಷ ನಮ್ಮದು ರಾಮನ ಪಕ್ಷ ಎಂದುಬಿಟ್ಟಿವೆಯಲ್ಲಾ. ಇದಕ್ಕೆ ತಕ್ಕ ಉತ್ತರ ಕೊಡಲು ತಡಕಾಡುತ್ತಿರುವ ಕಾಂಗೈಗಳು ಹಾಗೇ ಸ್ವಲ್ಪ ಯೋಚಿಸಿದ್ದರೆ ರಾವಣ ಎಂತವನು ಎಂಬುದು ಅರಿವಾಗುತ್ತಿತ್ತು. ರಾವಣನ ಹತ್ತು ತಲೆ ಅವನ ಶಕ್ತಿ ಸಾಮರ್ಥ್ಯದ ಸಂಕೇತ. ಆತ ಅಪ್ಪಟ ಶಿವಭಕ್ತ, ಸಂಗೀತಗಾರ, ಮಹಾವೈಣಿಕ, ನೃತ್ಯಪಟು, ಅಜೇಯ, ಒಳ್ಳೆ ಆಡಳಿತಗಾರ, ಕುಬೇರರನ್ನು ಸೋಲಿಸಿ ಪುಷ್ಪಕ ವಿಮಾನ ಪಡೆದವನು. ಭುಜಂಗ ಸ್ತೋತ್ರ ರಚಿಸಿದ ಕರ್ತೃ. ಜ್ವಲಿಸುವ ಅಗ್ನಿಯಂತಿದ್ದ ರಾಜಲಕ್ಷಣದಿಂದ ಶೋಭಿತನಾದ ಆತ ಈ ಪ್ರಪಂಚಕ್ಕೆ ಮೊದಲು ಮೀಸಲಾತಿ ತಂದವನು. ಲಂಕೆಯನ್ನು ರಕ್ಷಿಸಲು ಲಂಕಿಣಿ, ದಂಡಕಾರಣ್ಯ ರಕ್ಷಿಸಲು ತಾಟಕಿ, ಲಂಕೆ ಹೆಬ್ಬಾಗಿಲು ಕಾಯಲು ಸಿಂಹಿಣಿ, ಅಶೋಕವನ ನೋಡಿಕೊಳ್ಳಲು ತ್ರಿಜಟಿಯನ್ನು ನೇಮಿಸಿದ್ದ. ಹೆಣ್ಣನ್ನು ಮೋಸ ಮಾಡಿ ಕೊಂದವನಲ್ಲ. ಮರದ ಮರೆಯಲ್ಲಿ ನಿಂತು ಯುದ್ಧ ಮಾಡಿದವನಲ್ಲ. ಯಾರದೋ ಮಾತಿಗೆ ಮಡದಿಯನ್ನೇ ಕಾಡಿಗಟ್ಟಿದವನಲ್ಲ. ಹೆಂಡತಿ ಬಗ್ಗೆ ಸಂಶಯಗೊಂಡು ಬೆಂಕಿ ಮುಟ್ಟಲು ಹೇಳಿದವನಲ್ಲ ರಾವಣ. ಹೀಗೆ ರಾವಣನ ಗುಣಗಳನ್ನು ಪಟ್ಟಿಮಾಡಿ ಬಿಜೆಪಿಗೆ ಕಾಂಗೈಗಳು ಸವಾಲೆಸೆಯುವ ಬದಲು ಗೊಂದಲಕ್ಕೆ ಬಿದ್ದಿವೆಯಲ್ಲಾ. ಈ ಗೊಂದಲಕ್ಕೆ ಕಾರಣ ಬಿಜೆಪಿಗಳು ನಿಮ್ಮನ್ನು ರಾವಣ ಪಕ್ಷ ಎಂದ ಕೂಡಲೇ ನಮ್ಮಲ್ಲಿ ರಾವಣ ಸಿದ್ದರಾಮಯ್ಯನೊ ಅಥವಾ ಡಿ.ಕೆ ಶಿವಕುಮಾರನೊ ಎಂದು ಯೋಚಿಸುತ್ತ ಕುಳಿತಿವೆಯಂತಲ್ಲಾ ಥೂತ್ತೇರಿ.

ಕಾಂಗೈ ಮತ್ತು ಬಿಜೆಪಿಗಳ ಕತೆ ಹೀಗಿದ್ದರೆ ಇನ್ನ ಯಾತ್ರೆ ಆರಂಭಿಸಿದ ದಿನದಿಂದಲೂ ಹಲವಾರು ಅಡ್ಡಿ ಆತಂಕಗಳನ್ನು ಎದುರಿಸುತ್ತಿರುವ ನಮ್ಮ ಕುಮಾರಣ್ಣನನ್ನು ಮಾತನಾಡಿಸಿ ಬಹಳ ದಿನಗಳಾದವು. ಪಂಚರತ್ನ ಯಾತ್ರೆ ಸ್ಥಗಿತಗೊಳಿಸಿ ಸುಧಾರಿಸಿಕೊಳ್ಳುತ್ತಿರುವ ಈ ಸಮಯದಲ್ಲಿ ಮಾತಿಗೆ ಸಿಕ್ಕಬಹುದೆಂದು ಪೋನ್ ಮಾಡಲಾಗಿ ಪೋನ್ ರಿಂಗಾಯ್ತು, ರಿಂಗ್ ಟೋನು “ಮುರುಳಿಯ ಮರೆಸಿ ನಗುತಿಹೆ ಸರಸಿ..” ಹಲೋ ಯಾರು?

“ನಾನು ಸಾರ್, ಯಾಹೂ.”

“ಏನ್ರಿ ಯಾಹೂ ಇತ್ತೀಚೆಗೆ ಪೋನ್ ಮಾಡದನ್ನು ಬಿಟ್ರಿ. ಭೇಟಿಯಾಗದನ್ನು ಬಿಟ್‌ರಲ್ರಿ.”

“ಅಂಗೇನು ಯಿಲ್ಲ ಸಾರ್, ನೀವು ಬಿಜಿಲಿದ್ರಿ. ಅದಕ್ಕಿಂತ್ಲೂ, ಎಷ್ಟೋ ದಿನ ನಾವು ಮುನಿಸಿಕೊಂಡಿದ್ರೂ ಸಹ ಪುನಹ ನಿಮ್ಮತ್ರ ಬರಬೇಕಾಗತ್ತೆ, ಜಿ.ಟಿ ದೇವೇಗೌಡರ ತರ.”

“ದೇವೇಗೌಡ್ರು ಮುನಿಸಿಕೊಂಡಿದ್ದಕ್ಕೆ ಹಲವಾರು ಕಾರಣಗಳು ಇವೆ. ಅವನ್ನೆಲ್ಲ ಮಾತನಾಡತಕ್ಕಂತ ತೀರ್ಮಾನ ತಗೊಳತಕ್ಕಂತ ಸಮಯ ಇದಲ್ಲ. ನಮ್ಮ ಮೈಸೂರು ಭಾಗದಲ್ಲಿ ಅವರು ದಳಕ್ಕೆ ಒಂದು ಶಕ್ತಿಯಾಗಿರತಕ್ಕಂತದ್ದು, ಈಗಾಗ್ಲೆ ತೀರ್ಮಾನ ಆಗಿರತಕ್ಕಂತ ವಿಚಾರ ಆದ್ದರಿಂದ ನಮ್ಮ ತಂದೆಯವರು, ಮಾಜಿ ಪ್ರಧಾನಿಗಳಾದ ಮಾನ್ಯ ದೇವೇಗೌಡ್ರು ಕರದ ಕೂಡಲೆ ಬಂದು ಅಳತೆ ಗೌರವ ತೋರಿರತಕ್ಕಂತ ವಿಷಯ ಏನಿದೆ ಅದ್ಯಲ್ಲ ಮುಗದು ಈಗ ಅವರು ದಳದ ಸಂಘಟನೆಲಿ ಸಕ್ರಿಯವಾಗಿರತಕ್ಕಂತದ್ದು ನೀವೆ ನೋಡಿದ್ದಿರಿ.”

“ಆದ್ರು ಜಿ.ಟಿ ದೇವೇಗೌಡ್ರ ನಂಬಿದ್ದೋರು ಐದು ಜನ ಕಾಂಗ್ರಸ್ಸಿಗೋದರಲ್ಲ ಸಾರ್?”

“ಅವುರ ಬಗ್ಗೆ ಹೆಚ್ಚಿಗೆ ಮಾತಾಡತಕ್ಕಂತ ವಿಷಯಕ್ಕೆ ಹೋಗಲ್ಲ. ಅಲ್ಲಿ ನಾಲ್ಕೆ ಜನ ಸಾಕು ಅನತಕ್ಕಂತ ತೀರ್ಮಾನವ ಅವರೇ ತಗಂಡು ಈಗಾಗ್ಲೆ ಒಬ್ಬ ವಾಪಸು ಪುನಹ ನಮ್ಮ ಪಾರ್ಟಿಗೆ ಬಂದವುರೆ, ನಾನು ಯಾವತ್ತು ಕೂಡ ನಮ್ಮ ಪಾರ್ಟಿ ಬಿಟ್ಟು ಹೋಗುವರ ಬಗ್ಗೆಯಾಗಲಿ ಬರತಕ್ಕಂತ ವ್ಯಕ್ತಿಗಳ ಬಗೆಯಾಗ್ಲಿ ಕಾಳಜಿ ವಹಿಸದೆ ಇರತಕ್ಕತಂದ್ದು ಮೊದಲಿನಿಂದಲೂ ನಾವು ರೂಢಿಸಿಕೊಂಡು ಬಂದಂತ ತೀರ್ಮಾನಗಳೇನಿವೆ ಅವನ್ನ ಪಾಲನೆ ಮಾಡತಕ್ಕಂತದ್ದು ನಮ್ಮ ಜವಾಬ್ದಾರಿ.”

“ಮತ್ತೆ ಜಿ.ಟಿ ದೇವೇಗೌಡ್ರನ್ನ ಕಾಡಿ ಬೇಡಿ ಕರಕೊಂಡ್ರಲ್ಲ ಸಾರ್?”

“ಅದು ನಮ್ಮ ರಾಷ್ಟ್ರೀಯ ಅಧ್ಯಕ್ಷರ ತೀರ್ಮಾನ. ಅವುರು ತೆಗೆದುಕೊಳ್ಳತಕ್ಕಂತ ತೀರ್ಮಾನ ಏನಿದೆ ಅವುನ್ನ ಗೌರವಿಸತಕ್ಕಂತದ್ದು ನಮ್ಮ ಕರ್ತವ್ಯ”

“ಇನ್ನೊಂದು ಗಂಭೀರ ವಿಷಯ ಸಾರ್, ನೀವು ಇಬ್ರಾಹಿಂ ಮುಖ್ಯಮಂತ್ರಿಯಾಗದರಲ್ಲಿ ತಪ್ಪೇನಿದೆ ಅವುರೇನು ಅಸ್ಪೃಶ್ಯರೆ ಅಂದುಬಿಟ್ಟಿದ್ದಿರಿ. ಈ ಮಾತಿಗೆ ಈಗಾಗ್ಲೆ ಕಂಪ್ಲೇಟು ಆಗಿದೆ, ಯಾಕಂಗದ್ರಿ ಸಾರ್?”

“ನಾನಂಗಂದಿರದು ಕಂಪ್ಲೇಟು ದಾಖಲಾಗಿರದನ್ನ ಗಮನಿಸಿದ್ದಿನಿ. ನಾನು ಹೇಳಿರತಕ್ಕಂತ ಮಾತೇನಿದೆ ಅದು ಕಾಂಗ್ರೆಸಿನವರಾಡೊ ಮಾತು; ಈ ದೇಶದಲ್ಲಿ ಅಸ್ಪೃಶ್ಯರು ಅವರೆ, ಅವುರು ಇನ್ನ ಇದ್ದಾರೆ ಅನ್ನದಾದ್ರೆ ಇಷ್ಟು ವರ್ಷ ದೇಶ ಆಳಿದ ಕಾಂಗ್ರೆಸಿನವರು ಅವರು ಇಲ್ದಂಗೆ ಮಾಡಬೇಕಾಗಿತ್ತು. ಅದು ಆಡಳಿತ ನ್ಯಡಸತಕ್ಕಂತ ಅವುರ ಜವಬ್ದಾರಿ ಆಗಿತ್ತು. ಅಸ್ಪೃಶ್ಯತೆ ಪದ ಹಿಡಕಂಡು ನಮ್ಮನ್ನ ಕೆಣಕತಕ್ಕಂತ ಸಾಹಸವ ಈ ಕಾಂಗ್ರೆಸ್ಸಿನವರು ಮಾಡ್ತ ಅವುರೆ. ಅವುರಿಗೆ ನಾನು ಈ ಮುಖಾಂತರ ಎಚ್ಚರಿಕೆ ಕೋಡ್ತಿನಿ.”

“ಪ್ರಶ್ನೆ ಕೇಳಿದ್ದು ಪತ್ರಿಕೆಯವರಲ್ಲವ ಸಾರ್?”

“ಇರಬಹುದು ಅವುರ್‍ಯಾರು ಎಂಬತಕ್ಕಂತ ಮಾಹಿತಿ ನಮ್ಮತ್ರ ಇದೆ. ನಾವು ಯಾವತ್ತೂ ಅಸ್ಪೃಶ್ಯರ ಬಗ್ಗೆ ಕೀಳಾಗಿ ನಡಕೊಂಡಿಲ್ಲ, ತಪ್ಪಾಗಿ ನ್ಯಡಕೊಂಡಿಲ್ಲ. ಅವರ ಭುಜದ ಮೇಲೆ ಕೈಹಾಕಿ ಮಾತನಾಡಿಸಿದ್ದೀನಿ. ರಾಮಕೃಷ್ಣ ಹೆಗಡೆ ಕಾಲದಲ್ಲಿ ಜಿಲ್ಲಾ ಪಂಚಾಯ್ತಿ ಚುನಾವಣೆ ಆದಾಗ ನಮ್ಮ ತಂದೆಯವರು ಒಬ್ಬ ದಲಿತರನ್ನು ಹಾಸನ ಜಿಲ್ಲಾ ಪಂಚಾಯ್ತಿ ಅಧ್ಯಕ್ಷರನ್ನಾಗಿ ಮಾಡಿದ್ರು. ಇದೇ ಕಾಂಗ್ರೆಸ್ಸಿಗರು ಮಾಡಿದ್ರಾ? ಅವುರಿಗೆ ಪವರ್ ಬಂದಾಗ ಪರಮೇಶ್ವರನ್ನ ಮಾಡಿದ್ರ? ಅದ್ಕೂ ಹಿಂದೆ ರಂಗನಾಥ ಬಸವಲಿಂಗಪ್ಪ ಇದ್ರಲ್ಲ ಮಾಡಿದ್ರಾ, ಖರ್ಗೆಯವರನ್ನ ಮಾಡಿದ್ರಾ?”

“ಖರ್ಗೆಯವರನ್ನ ಮಾಡದಂಗೆ ದೇವೇಗೌಡ್ರು ತಡೆಹಾಕಿದ್ರಲ್ಲ ಸಾರ್?”

“ದೇವೇಗೌಡ್ರು ಅಂತ ಕ್ಯಲಸ ಯಾವಾಗ್ಲು ಮಾಡಿಲ್ಲ.”

“ನಮ್ಮ ಕಣ್ಣೆದುರೆ ಮಾಡಿದ್ರಲ್ಲ ಸಾರ್. ಆಗ ಸಮ್ಮಿಶ್ರ ಸರಕಾರ ಮಾಡುವಾಗ ಸೋನಿಯಾ ಗಾಂಧಿ ಮುಖ್ಯಮಂತ್ರಿ ಪದವಿನೆ ತಗೊಳಿ ಅಂದ್ರು. ಆಗ ಗೌಡ್ರು ಬೇಡ ಬೇಡ ನಮಗೆ ಉಪಮುಖ್ಯಮಂತ್ರಿ ಸಾಕು ಅಂದ್ರು. ಯಾಕೆ ಅಂತ ಪತ್ತೆಹಚ್ಚಿದಾಗ, ಮುಂದೆ ಧರ್ಮಸಿಂಗ್‌ಗೆ ಕೊಟ್ಟ ಬೆಂಬಲ ವಾಪಸ್ ತಗಂಡಾಗ ಯಾರೂ ಪ್ರತಿಭಟಿಸಲಿಲ್ಲ; ಅದೇ ಖರ್ಗೆ ಮುಖ್ಯಮಂತ್ರಿಯಾಗಿದ್ದು ಬೆಂಬಲ ಹಿಂತಗಂಡ್ರೆ ಇಡೀ ಕರ್ನಾಟಕದ ದಲಿತರು ಪ್ರತಿಭಟಿಸತಿದ್ರು. ಇದು ಗೊತ್ತಾಗಿ ದೇವೇಗೌಡ್ರು ಧರ್ಮಸಿಂಗ್‌ಗೆ ಸಪೋರ್ಟ್ ಮಾಡಿ ವಾಪಸ್ ತಗೊ ಅಂತ ನಿಮಗೇಳೀದ್ರಂತೆ, ಪಾಪ ಗೌಡ್ರು ಪ್ಲಾನು ನಿಮಗೂ ಗೊತ್ತಾಗಲಿಲ್ಲ ಅಲವಾ ಸಾರ್?”

“ಇದ್ಯಲ್ಲ ಕಟ್ಟುಕತೆ ಕಂಡ್ರಿ, ಇದೇ ಡಿ.ಕೆ ಶಿವಕುಮಾರ ನಮ್ಮ ಪಾರ್ಟಿ ಜನನ ಯಳಿಯಕ್ಕೆ ನೋಡಿದಾಗ, ನಾನೇ ಪಾರ್ಟಿ ಉಳಿಸಿಗಳಕ್ಕೆ ಅಂಗೆ ಮಾಡಿದ್ದೆ.”

“ಈಗ್ಲು ಉಸಾರಾಗಿರಿ ಸಾರ್. ಇಬ್ರಾಹಿಂ ನಿಮ್ಮ ಬಗುಲಲ್ಲೇ ಅವುರೆ. ಆತ ಕಾಂಗ್ರೆಸ್‌ನಲ್ಲಿದ್ದು ಯಡಿಯೂರಪ್ಪನಿಗೆ ಮುವ್ವತ್ತು ಸಾವುರ ಓಟಾಕ್ಸಿದನಂತೆ. ಅವುರೆ ಅಂಗಂದವುರೆ. ನಿಮ್ಮ ಕ್ಷೇತ್ರದ ಮುಸ್ಲಿಮರು ಯಂಗವ್ರೆ ನೋಡಿಕಳಿ.”

“ಇಬ್ರಾಹಿಂ ಏನು ಅಂತ ನಮಗೆ ಚನ್ನಾಗಿ ಗೊತ್ತು. ನಮ್ಮ ತಂದೆಯವರಿಗೆ ಇನ್ನು ಗೊತ್ತು.”

“ಥೂತ್ತೇರಿ”


ಇದನ್ನೂ ಓದಿ: ಉಗ್ರರನ್ನೇ ಬಿಡದ ಮೋದಿ ರೌಡಿಗಳನ್ನು ಬಿಟ್ಟಾರಾ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹುಬ್ಬಳ್ಳಿಯಲ್ಲಿ ವಲಸೆ ಕಾರ್ಮಿಕನ ಎನ್‌ಕೌಂಟರ್ ಪ್ರಕರಣ: ನ್ಯಾಯಾಂಗ ತನಿಖೆಗೆ ಹೈಕೋರ್ಟ್ ಆದೇಶ

ಹುಬ್ಬಳ್ಳಿಯಲ್ಲಿ ಐದು ವರ್ಷದ ಬಾಲಕಿ ಮೇಲೆ ಅತ್ಯಾಚಾರವೆಸಗಿ ಕೊಲೆಗೈದ ಆರೋಪ ಎದುರಿಸುತ್ತಿದ್ದ ಬಿಹಾರ ಮೂಲದ ವಲಸೆ ಕಾರ್ಮಿಕ ರಿತೇಶ್ ಕುಮಾರ್ ಎನ್‌ಕೌಂಟರ್ ಪ್ರಕರಣವನ್ನು ನ್ಯಾಯಾಂಗ ಮ್ಯಾಜಿಸ್ಟ್ರೇಟ್ ಅವರಿಂದ ಸ್ವತಂತ್ರ ತನಿಖೆಗೆ ವಹಿಸಿ ಸೋಮವಾರ...

ಇದು ಇರಾಕ್ ಅಲ್ಲ, ಇರಾನ್ ಜೊತೆಗಿನ ಸಂಘರ್ಷ ‘ಅಂತ್ಯವಿಲ್ಲದ ಯುದ್ಧವಲ್ಲ’ : ಅಮೆರಿಕ ರಕ್ಷಣಾ ಕಾರ್ಯದರ್ಶಿ

ಇಸ್ರೇಲ್ ಜೊತೆಗೂಡಿ ಇರಾನ್ ಮೇಲೆ ಅಮೆರಿಕ ನಡೆಸುತ್ತಿರುವ ಜಂಟಿ ದಾಳಿಯು 'ಅಂತ್ಯವಿಲ್ಲದ್ದು' ಅಥವಾ ಸುದೀರ್ಘವಾದುದ್ದಲ್ಲ ಎಂದು ಅಮೆರಿಕದ ರಕ್ಷಣಾ ಕಾರ್ಯದರ್ಶಿ ಪೀಟ್ ಹೆಗ್ಸೆತ್ ಸೋಮವಾರ (ಮಾ.2) ತಿಳಿಸಿದ್ದಾರೆ. ಈ ಸಂಘರ್ಷವು ಅನಿರ್ದಿಷ್ಟಾವಧಿಯವರೆಗೆ ಮುಂದುವರಿಯುವುದಿಲ್ಲ...

ಉತ್ತರ ಪ್ರದೇಶ| ಶಾಲಾ ಬಸ್ಸಿನ ನೆಲಹಾಸು ಕುಸಿದು 7 ವರ್ಷದ ಬಾಲಕಿ ಸಾವು; ಇಬ್ಬರ ಬಂಧನ

ಉತ್ತರ ಪ್ರದೇಶದ ಅಲಿಗಢದಲ್ಲಿ ಶಾಲಾ ಬಸ್ಸಿನ ನೆಲಹಾಸು ಕುಸಿದು ಕೆಳಗೆ ಬಿದ್ದ ಏಳು ವರ್ಷದ ಬಾಲಕಿ ಸಾವನ್ನಪ್ಪಿದ ಘಟನೆ ಸೋಮವಾರ ನಡೆದಿದೆ. ಖಾಸಗಿ ಶಾಲೆಯ ವ್ಯವಸ್ಥಾಪಕ ಮತ್ತು ಬಸ್ ಚಾಲಕನನ್ನು ಬಂಧಿಸಲಾಗಿದೆ ಎಂದು...

ಇಸ್ರೇಲ್-ಇರಾನ್ ಸಂಘರ್ಷ: ನವದೆಹಲಿಯಲ್ಲಿ 24×7 ನಿಯಂತ್ರಣ ಕೊಠಡಿ ಸ್ಥಾಪಿಸಿದ ತೆಲಂಗಾಣ

ಹೈದರಾಬಾದ್: ಮುಖ್ಯಮಂತ್ರಿ ಎ ರೇವಂತ್ ರೆಡ್ಡಿ ಅವರ ನಿರ್ದೇಶನಗಳನ್ನು ಅನುಸರಿಸಿ, ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಉದ್ವಿಗ್ನತೆಯ ನಡುವೆ, ಮಧ್ಯಪ್ರಾಚ್ಯದಲ್ಲಿರುವ ತೆಲಂಗಾಣ ನಾಗರಿಕರಿಗೆ ಸಹಾಯ ಮಾಡಲು ನವದೆಹಲಿಯ ತೆಲಂಗಾಣ ಭವನದಲ್ಲಿ 24×7 ನಿಯಂತ್ರಣ ಕೊಠಡಿಯನ್ನು ಸ್ಥಾಪಿಸಲಾಗಿದೆ. ಪ್ರಯಾಣ...

ಒಮಾನ್ ಕರಾವಳಿಯಲ್ಲಿ ತೈಲ ಟ್ಯಾಂಕರ್‌ಗೆ ಡ್ರೋನ್ ದೋಣಿ ಡಿಕ್ಕಿ; ಭಾರತೀಯ ಸಿಬ್ಬಂದಿ ಸಾವು

ಒಮಾನ್ ಕರಾವಳಿಯಲ್ಲಿ ತೈಲ ಟ್ಯಾಂಕರ್‌ಗೆ ಮಾನವರಹಿತ ಡ್ರೋನ್ ದೋಣಿ ಡಿಕ್ಕಿ ಹೊಡೆದ ಪರಿಣಾಮ ಭಾರತೀಯ ಸಿಬ್ಬಂದಿಯೊಬ್ಬರು ಸಾವನ್ನಪ್ಪಿದ್ದಾರೆ. ಇದರಿಂದಾಗಿ ಇಸ್ರೇಲ್ ಮತ್ತು ಇರಾನ್ ನಡುವಿನ ಹಗೆತನವು ಪ್ರದೇಶದಾದ್ಯಂತ ಉಲ್ಬಣಗೊಳ್ಳುತ್ತಿದ್ದಂತೆ ಬೆಂಕಿ ಕಾಣಿಸಿಕೊಂಡು ಹಡಗಿನಲ್ಲಿದ್ದ...

ನಾಗ್ಪುರ ಕಾರ್ಖಾನೆ ಸ್ಫೋಟ: ಸ್ಫೋಟಕ ಕಂಪನಿಯ ಒಂಬತ್ತು ನಿರ್ದೇಶಕರ ಬಂಧನ

ನಾಗ್ಪುರ: ಮಹಾರಾಷ್ಟ್ರದ ನಾಗ್ಪುರ ಜಿಲ್ಲೆಯಲ್ಲಿ ಸಂಭವಿಸಿದ ಸ್ಫೋಟದಲ್ಲಿ 18 ಜನರು ಸಾವನ್ನಪ್ಪಿದ್ದು, ಸ್ಫೋಟಕ ತಯಾರಿಕಾ ಕಂಪನಿಯ ಒಂಬತ್ತು ನಿರ್ದೇಶಕರನ್ನು ಪೊಲೀಸರು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ಸೋಮವಾರ ತಿಳಿಸಿದ್ದಾರೆ. ಇಲ್ಲಿನ ಕಲ್ಮೇಶ್ವರ ಪೊಲೀಸರು ಎಸ್‌ಬಿಎಲ್ ಎನರ್ಜಿ...

ಅಪ್ರಾಪ್ತ ಮಗಳ ಮರ್ಯಾದೆಗೇಡು ಹತ್ಯೆ : ದಂಪತಿಗೆ ಜೀವಾವಧಿ ಶಿಕ್ಷೆ ಖಾಯಂಗೊಳಿಸಿದ ಅಲಹಾಬಾದ್‌ ಹೈಕೋರ್ಟ್

ಮರ್ಯಾದೆಗೇಡು ಹತ್ಯೆ ಪ್ರಕರಣದಲ್ಲಿ, 2014ರಲ್ಲಿ ತಮ್ಮ ಅಪ್ರಾಪ್ತ ಮಗಳು ಮತ್ತು ಬಾಡಿಗೆದಾರರನ್ನು ಕೊಲೆ ಮಾಡಿದ್ದ ದಂಪತಿಗೆ ಜೀವಾವಧಿ ಶಿಕ್ಷೆಯನ್ನು ಅಲಹಾಬಾದ್ ಹೈಕೋರ್ಟ್ ಖಾಯಂಗೊಳಿಸಿದೆ. ನ್ಯಾಯಮೂರ್ತಿ ಜೆ.ಜೆ. ಮುನೀರ್ ಮತ್ತು ನ್ಯಾಯಮೂರ್ತಿ ವಿನಯ್ ಕುಮಾರ್ ದ್ವಿವೇದಿ...

ಇಸ್ರೇಲ್-ಇರಾನ್ ಸಂಘರ್ಷ: ಕೇರಳದ ಗಲ್ಫ್ ಕೇಂದ್ರಗಳಲ್ಲಿ ಎಸ್‌ಎಸ್‌ಎಲ್‌ಸಿ, ಪ್ಲಸ್-II ಪರೀಕ್ಷೆಗಳನ್ನು ಮುಂದೂಡಲು ನಿರ್ಧಾರ

ತಿರುವನಂತಪುರಂ: ಪಶ್ಚಿಮ ಏಷ್ಯಾ ಪ್ರದೇಶದಲ್ಲಿನ ಪ್ರಚಲಿತ ಅಶಾಂತಿಯನ್ನು ಗಮನದಲ್ಲಿಟ್ಟುಕೊಂಡು, ಸಾಮಾನ್ಯ ಶಿಕ್ಷಣ ಇಲಾಖೆಯು ಗಲ್ಫ್ ರಾಷ್ಟ್ರಗಳಲ್ಲಿನ ಕೇಂದ್ರಗಳಲ್ಲಿ ನಿಗದಿಯಾಗಿದ್ದ ಎಸ್‌ಎಸ್‌ಎಲ್‌ಸಿ ಮತ್ತು ಪ್ಲಸ್-II ಪರೀಕ್ಷೆಗಳನ್ನು ಮುಂದೂಡಲು ನಿರ್ಧರಿಸಿದೆ.   ಮಾರ್ಚ್ 5 ರಂದು ನಿಗದಿಯಾಗಿದ್ದ ಎಸ್‌ಎಸ್‌ಎಲ್‌ಸಿ...

ಚಿಕ್ಕಬಳ್ಳಾಪುರ| ಆಯತುಲ್ಲಾ ಖಮೇನಿ ಹತ್ಯೆ; ಅಲಿಪುರದಲ್ಲಿ ಮೂರು ದಿನಗಳ ಕಾಲ ಶೋಕಾಚರಣೆ

ಇಸ್ರೇಲ್-ಅಮೆರಿಕ ದಾಳಿಯಲ್ಲಿ ಇರಾನ್ ಸರ್ವೋಚ್ಚ ನಾಯಕ ಆಯತುಲ್ಲಾ ಖಮೇನಿ ಹತ್ಯೆಯಿಂದ ನೊಂದಿರುವ ಗೌರಿಬಿದನೂರು ತಾಲ್ಲೂಕಿನ ಅಲಿಪುರ ಗ್ರಾಮದ ಶಿಯಾ ಸಮುದಾಯವು, ಗ್ರಾಮದಲ್ಲಿ ಮೂರು ದಿನಗಳ ಕಾಲ ಶೋಕಾಚರಣೆ ಘೋಷಿಸಿದ್ದಾರೆ. ಚಿಕ್ಕಬಳ್ಳಾಪುರ ಜಿಲ್ಲೆ ಗೌರಿಬಿದನೂರು ತಾಲೂಕಿನ...

ಸೌದಿ ಅರೇಬಿಯಾ | ಡ್ರೋನ್ ದಾಳಿ ಬಳಿಕ ರಾಸ್ ತನುರಾ ಸಂಸ್ಕರಣಾಗಾರ ಮುಚ್ಚಿದ ತೈಲ ದೈತ್ಯ ಅರಾಮ್ಕೊ

ಸೌದಿ ಅರೇಬಿಯಾದ ಸರ್ಕಾರಿ ಸ್ವಾಮ್ಯದ ತೈಲ ದೈತ್ಯ ಸಂಸ್ಥೆ ಅರಾಮ್ಕೊ ಡ್ರೋನ್ ದಾಳಿಗೆ ಒಳಗಾದ ನಂತರ ತನ್ನ ರಾಸ್ ತನುರಾ ತೈಲ ಸಂಸ್ಕರಣಾಗಾರವನ್ನು ಮುಚ್ಚಿದೆ ಎಂದು ಮೂಲಗಳನ್ನು ಉಲ್ಲೇಖಿಸಿ ರಾಯಿಟರ್ಸ್ ಸೋಮವಾರ (ಫೆ.2)...