Homeಅಂಕಣಗಳುಇಬ್ರಾಹಿಂ ಏನು ಅಂತ ನಮಗೆ ಚನ್ನಾಗಿ ಗೊತ್ತು; ನಮ್ಮ ತಂದೆಯವರಿಗೆ ಇನ್ನೂ ಗೊತ್ತು..

ಇಬ್ರಾಹಿಂ ಏನು ಅಂತ ನಮಗೆ ಚನ್ನಾಗಿ ಗೊತ್ತು; ನಮ್ಮ ತಂದೆಯವರಿಗೆ ಇನ್ನೂ ಗೊತ್ತು..

- Advertisement -
- Advertisement -

ಕಾಂಗೈಗಳನ್ನು ಟೀಕಿಸುವ ಸಾಮಗ್ರಿಯನ್ನು ಖಾಲಿ ಮಾಡಿಕೊಂಡ ಈ ಬಿಜೆಪಿಗಳು ನಿಮ್ಮದು ರಾವಣನ ಪಕ್ಷ ನಮ್ಮದು ರಾಮನ ಪಕ್ಷ ಎಂದುಬಿಟ್ಟಿವೆಯಲ್ಲಾ. ಇದಕ್ಕೆ ತಕ್ಕ ಉತ್ತರ ಕೊಡಲು ತಡಕಾಡುತ್ತಿರುವ ಕಾಂಗೈಗಳು ಹಾಗೇ ಸ್ವಲ್ಪ ಯೋಚಿಸಿದ್ದರೆ ರಾವಣ ಎಂತವನು ಎಂಬುದು ಅರಿವಾಗುತ್ತಿತ್ತು. ರಾವಣನ ಹತ್ತು ತಲೆ ಅವನ ಶಕ್ತಿ ಸಾಮರ್ಥ್ಯದ ಸಂಕೇತ. ಆತ ಅಪ್ಪಟ ಶಿವಭಕ್ತ, ಸಂಗೀತಗಾರ, ಮಹಾವೈಣಿಕ, ನೃತ್ಯಪಟು, ಅಜೇಯ, ಒಳ್ಳೆ ಆಡಳಿತಗಾರ, ಕುಬೇರರನ್ನು ಸೋಲಿಸಿ ಪುಷ್ಪಕ ವಿಮಾನ ಪಡೆದವನು. ಭುಜಂಗ ಸ್ತೋತ್ರ ರಚಿಸಿದ ಕರ್ತೃ. ಜ್ವಲಿಸುವ ಅಗ್ನಿಯಂತಿದ್ದ ರಾಜಲಕ್ಷಣದಿಂದ ಶೋಭಿತನಾದ ಆತ ಈ ಪ್ರಪಂಚಕ್ಕೆ ಮೊದಲು ಮೀಸಲಾತಿ ತಂದವನು. ಲಂಕೆಯನ್ನು ರಕ್ಷಿಸಲು ಲಂಕಿಣಿ, ದಂಡಕಾರಣ್ಯ ರಕ್ಷಿಸಲು ತಾಟಕಿ, ಲಂಕೆ ಹೆಬ್ಬಾಗಿಲು ಕಾಯಲು ಸಿಂಹಿಣಿ, ಅಶೋಕವನ ನೋಡಿಕೊಳ್ಳಲು ತ್ರಿಜಟಿಯನ್ನು ನೇಮಿಸಿದ್ದ. ಹೆಣ್ಣನ್ನು ಮೋಸ ಮಾಡಿ ಕೊಂದವನಲ್ಲ. ಮರದ ಮರೆಯಲ್ಲಿ ನಿಂತು ಯುದ್ಧ ಮಾಡಿದವನಲ್ಲ. ಯಾರದೋ ಮಾತಿಗೆ ಮಡದಿಯನ್ನೇ ಕಾಡಿಗಟ್ಟಿದವನಲ್ಲ. ಹೆಂಡತಿ ಬಗ್ಗೆ ಸಂಶಯಗೊಂಡು ಬೆಂಕಿ ಮುಟ್ಟಲು ಹೇಳಿದವನಲ್ಲ ರಾವಣ. ಹೀಗೆ ರಾವಣನ ಗುಣಗಳನ್ನು ಪಟ್ಟಿಮಾಡಿ ಬಿಜೆಪಿಗೆ ಕಾಂಗೈಗಳು ಸವಾಲೆಸೆಯುವ ಬದಲು ಗೊಂದಲಕ್ಕೆ ಬಿದ್ದಿವೆಯಲ್ಲಾ. ಈ ಗೊಂದಲಕ್ಕೆ ಕಾರಣ ಬಿಜೆಪಿಗಳು ನಿಮ್ಮನ್ನು ರಾವಣ ಪಕ್ಷ ಎಂದ ಕೂಡಲೇ ನಮ್ಮಲ್ಲಿ ರಾವಣ ಸಿದ್ದರಾಮಯ್ಯನೊ ಅಥವಾ ಡಿ.ಕೆ ಶಿವಕುಮಾರನೊ ಎಂದು ಯೋಚಿಸುತ್ತ ಕುಳಿತಿವೆಯಂತಲ್ಲಾ ಥೂತ್ತೇರಿ.

ಕಾಂಗೈ ಮತ್ತು ಬಿಜೆಪಿಗಳ ಕತೆ ಹೀಗಿದ್ದರೆ ಇನ್ನ ಯಾತ್ರೆ ಆರಂಭಿಸಿದ ದಿನದಿಂದಲೂ ಹಲವಾರು ಅಡ್ಡಿ ಆತಂಕಗಳನ್ನು ಎದುರಿಸುತ್ತಿರುವ ನಮ್ಮ ಕುಮಾರಣ್ಣನನ್ನು ಮಾತನಾಡಿಸಿ ಬಹಳ ದಿನಗಳಾದವು. ಪಂಚರತ್ನ ಯಾತ್ರೆ ಸ್ಥಗಿತಗೊಳಿಸಿ ಸುಧಾರಿಸಿಕೊಳ್ಳುತ್ತಿರುವ ಈ ಸಮಯದಲ್ಲಿ ಮಾತಿಗೆ ಸಿಕ್ಕಬಹುದೆಂದು ಪೋನ್ ಮಾಡಲಾಗಿ ಪೋನ್ ರಿಂಗಾಯ್ತು, ರಿಂಗ್ ಟೋನು “ಮುರುಳಿಯ ಮರೆಸಿ ನಗುತಿಹೆ ಸರಸಿ..” ಹಲೋ ಯಾರು?

“ನಾನು ಸಾರ್, ಯಾಹೂ.”

“ಏನ್ರಿ ಯಾಹೂ ಇತ್ತೀಚೆಗೆ ಪೋನ್ ಮಾಡದನ್ನು ಬಿಟ್ರಿ. ಭೇಟಿಯಾಗದನ್ನು ಬಿಟ್‌ರಲ್ರಿ.”

“ಅಂಗೇನು ಯಿಲ್ಲ ಸಾರ್, ನೀವು ಬಿಜಿಲಿದ್ರಿ. ಅದಕ್ಕಿಂತ್ಲೂ, ಎಷ್ಟೋ ದಿನ ನಾವು ಮುನಿಸಿಕೊಂಡಿದ್ರೂ ಸಹ ಪುನಹ ನಿಮ್ಮತ್ರ ಬರಬೇಕಾಗತ್ತೆ, ಜಿ.ಟಿ ದೇವೇಗೌಡರ ತರ.”

“ದೇವೇಗೌಡ್ರು ಮುನಿಸಿಕೊಂಡಿದ್ದಕ್ಕೆ ಹಲವಾರು ಕಾರಣಗಳು ಇವೆ. ಅವನ್ನೆಲ್ಲ ಮಾತನಾಡತಕ್ಕಂತ ತೀರ್ಮಾನ ತಗೊಳತಕ್ಕಂತ ಸಮಯ ಇದಲ್ಲ. ನಮ್ಮ ಮೈಸೂರು ಭಾಗದಲ್ಲಿ ಅವರು ದಳಕ್ಕೆ ಒಂದು ಶಕ್ತಿಯಾಗಿರತಕ್ಕಂತದ್ದು, ಈಗಾಗ್ಲೆ ತೀರ್ಮಾನ ಆಗಿರತಕ್ಕಂತ ವಿಚಾರ ಆದ್ದರಿಂದ ನಮ್ಮ ತಂದೆಯವರು, ಮಾಜಿ ಪ್ರಧಾನಿಗಳಾದ ಮಾನ್ಯ ದೇವೇಗೌಡ್ರು ಕರದ ಕೂಡಲೆ ಬಂದು ಅಳತೆ ಗೌರವ ತೋರಿರತಕ್ಕಂತ ವಿಷಯ ಏನಿದೆ ಅದ್ಯಲ್ಲ ಮುಗದು ಈಗ ಅವರು ದಳದ ಸಂಘಟನೆಲಿ ಸಕ್ರಿಯವಾಗಿರತಕ್ಕಂತದ್ದು ನೀವೆ ನೋಡಿದ್ದಿರಿ.”

“ಆದ್ರು ಜಿ.ಟಿ ದೇವೇಗೌಡ್ರ ನಂಬಿದ್ದೋರು ಐದು ಜನ ಕಾಂಗ್ರಸ್ಸಿಗೋದರಲ್ಲ ಸಾರ್?”

“ಅವುರ ಬಗ್ಗೆ ಹೆಚ್ಚಿಗೆ ಮಾತಾಡತಕ್ಕಂತ ವಿಷಯಕ್ಕೆ ಹೋಗಲ್ಲ. ಅಲ್ಲಿ ನಾಲ್ಕೆ ಜನ ಸಾಕು ಅನತಕ್ಕಂತ ತೀರ್ಮಾನವ ಅವರೇ ತಗಂಡು ಈಗಾಗ್ಲೆ ಒಬ್ಬ ವಾಪಸು ಪುನಹ ನಮ್ಮ ಪಾರ್ಟಿಗೆ ಬಂದವುರೆ, ನಾನು ಯಾವತ್ತು ಕೂಡ ನಮ್ಮ ಪಾರ್ಟಿ ಬಿಟ್ಟು ಹೋಗುವರ ಬಗ್ಗೆಯಾಗಲಿ ಬರತಕ್ಕಂತ ವ್ಯಕ್ತಿಗಳ ಬಗೆಯಾಗ್ಲಿ ಕಾಳಜಿ ವಹಿಸದೆ ಇರತಕ್ಕತಂದ್ದು ಮೊದಲಿನಿಂದಲೂ ನಾವು ರೂಢಿಸಿಕೊಂಡು ಬಂದಂತ ತೀರ್ಮಾನಗಳೇನಿವೆ ಅವನ್ನ ಪಾಲನೆ ಮಾಡತಕ್ಕಂತದ್ದು ನಮ್ಮ ಜವಾಬ್ದಾರಿ.”

“ಮತ್ತೆ ಜಿ.ಟಿ ದೇವೇಗೌಡ್ರನ್ನ ಕಾಡಿ ಬೇಡಿ ಕರಕೊಂಡ್ರಲ್ಲ ಸಾರ್?”

“ಅದು ನಮ್ಮ ರಾಷ್ಟ್ರೀಯ ಅಧ್ಯಕ್ಷರ ತೀರ್ಮಾನ. ಅವುರು ತೆಗೆದುಕೊಳ್ಳತಕ್ಕಂತ ತೀರ್ಮಾನ ಏನಿದೆ ಅವುನ್ನ ಗೌರವಿಸತಕ್ಕಂತದ್ದು ನಮ್ಮ ಕರ್ತವ್ಯ”

“ಇನ್ನೊಂದು ಗಂಭೀರ ವಿಷಯ ಸಾರ್, ನೀವು ಇಬ್ರಾಹಿಂ ಮುಖ್ಯಮಂತ್ರಿಯಾಗದರಲ್ಲಿ ತಪ್ಪೇನಿದೆ ಅವುರೇನು ಅಸ್ಪೃಶ್ಯರೆ ಅಂದುಬಿಟ್ಟಿದ್ದಿರಿ. ಈ ಮಾತಿಗೆ ಈಗಾಗ್ಲೆ ಕಂಪ್ಲೇಟು ಆಗಿದೆ, ಯಾಕಂಗದ್ರಿ ಸಾರ್?”

“ನಾನಂಗಂದಿರದು ಕಂಪ್ಲೇಟು ದಾಖಲಾಗಿರದನ್ನ ಗಮನಿಸಿದ್ದಿನಿ. ನಾನು ಹೇಳಿರತಕ್ಕಂತ ಮಾತೇನಿದೆ ಅದು ಕಾಂಗ್ರೆಸಿನವರಾಡೊ ಮಾತು; ಈ ದೇಶದಲ್ಲಿ ಅಸ್ಪೃಶ್ಯರು ಅವರೆ, ಅವುರು ಇನ್ನ ಇದ್ದಾರೆ ಅನ್ನದಾದ್ರೆ ಇಷ್ಟು ವರ್ಷ ದೇಶ ಆಳಿದ ಕಾಂಗ್ರೆಸಿನವರು ಅವರು ಇಲ್ದಂಗೆ ಮಾಡಬೇಕಾಗಿತ್ತು. ಅದು ಆಡಳಿತ ನ್ಯಡಸತಕ್ಕಂತ ಅವುರ ಜವಬ್ದಾರಿ ಆಗಿತ್ತು. ಅಸ್ಪೃಶ್ಯತೆ ಪದ ಹಿಡಕಂಡು ನಮ್ಮನ್ನ ಕೆಣಕತಕ್ಕಂತ ಸಾಹಸವ ಈ ಕಾಂಗ್ರೆಸ್ಸಿನವರು ಮಾಡ್ತ ಅವುರೆ. ಅವುರಿಗೆ ನಾನು ಈ ಮುಖಾಂತರ ಎಚ್ಚರಿಕೆ ಕೋಡ್ತಿನಿ.”

“ಪ್ರಶ್ನೆ ಕೇಳಿದ್ದು ಪತ್ರಿಕೆಯವರಲ್ಲವ ಸಾರ್?”

“ಇರಬಹುದು ಅವುರ್‍ಯಾರು ಎಂಬತಕ್ಕಂತ ಮಾಹಿತಿ ನಮ್ಮತ್ರ ಇದೆ. ನಾವು ಯಾವತ್ತೂ ಅಸ್ಪೃಶ್ಯರ ಬಗ್ಗೆ ಕೀಳಾಗಿ ನಡಕೊಂಡಿಲ್ಲ, ತಪ್ಪಾಗಿ ನ್ಯಡಕೊಂಡಿಲ್ಲ. ಅವರ ಭುಜದ ಮೇಲೆ ಕೈಹಾಕಿ ಮಾತನಾಡಿಸಿದ್ದೀನಿ. ರಾಮಕೃಷ್ಣ ಹೆಗಡೆ ಕಾಲದಲ್ಲಿ ಜಿಲ್ಲಾ ಪಂಚಾಯ್ತಿ ಚುನಾವಣೆ ಆದಾಗ ನಮ್ಮ ತಂದೆಯವರು ಒಬ್ಬ ದಲಿತರನ್ನು ಹಾಸನ ಜಿಲ್ಲಾ ಪಂಚಾಯ್ತಿ ಅಧ್ಯಕ್ಷರನ್ನಾಗಿ ಮಾಡಿದ್ರು. ಇದೇ ಕಾಂಗ್ರೆಸ್ಸಿಗರು ಮಾಡಿದ್ರಾ? ಅವುರಿಗೆ ಪವರ್ ಬಂದಾಗ ಪರಮೇಶ್ವರನ್ನ ಮಾಡಿದ್ರ? ಅದ್ಕೂ ಹಿಂದೆ ರಂಗನಾಥ ಬಸವಲಿಂಗಪ್ಪ ಇದ್ರಲ್ಲ ಮಾಡಿದ್ರಾ, ಖರ್ಗೆಯವರನ್ನ ಮಾಡಿದ್ರಾ?”

“ಖರ್ಗೆಯವರನ್ನ ಮಾಡದಂಗೆ ದೇವೇಗೌಡ್ರು ತಡೆಹಾಕಿದ್ರಲ್ಲ ಸಾರ್?”

“ದೇವೇಗೌಡ್ರು ಅಂತ ಕ್ಯಲಸ ಯಾವಾಗ್ಲು ಮಾಡಿಲ್ಲ.”

“ನಮ್ಮ ಕಣ್ಣೆದುರೆ ಮಾಡಿದ್ರಲ್ಲ ಸಾರ್. ಆಗ ಸಮ್ಮಿಶ್ರ ಸರಕಾರ ಮಾಡುವಾಗ ಸೋನಿಯಾ ಗಾಂಧಿ ಮುಖ್ಯಮಂತ್ರಿ ಪದವಿನೆ ತಗೊಳಿ ಅಂದ್ರು. ಆಗ ಗೌಡ್ರು ಬೇಡ ಬೇಡ ನಮಗೆ ಉಪಮುಖ್ಯಮಂತ್ರಿ ಸಾಕು ಅಂದ್ರು. ಯಾಕೆ ಅಂತ ಪತ್ತೆಹಚ್ಚಿದಾಗ, ಮುಂದೆ ಧರ್ಮಸಿಂಗ್‌ಗೆ ಕೊಟ್ಟ ಬೆಂಬಲ ವಾಪಸ್ ತಗಂಡಾಗ ಯಾರೂ ಪ್ರತಿಭಟಿಸಲಿಲ್ಲ; ಅದೇ ಖರ್ಗೆ ಮುಖ್ಯಮಂತ್ರಿಯಾಗಿದ್ದು ಬೆಂಬಲ ಹಿಂತಗಂಡ್ರೆ ಇಡೀ ಕರ್ನಾಟಕದ ದಲಿತರು ಪ್ರತಿಭಟಿಸತಿದ್ರು. ಇದು ಗೊತ್ತಾಗಿ ದೇವೇಗೌಡ್ರು ಧರ್ಮಸಿಂಗ್‌ಗೆ ಸಪೋರ್ಟ್ ಮಾಡಿ ವಾಪಸ್ ತಗೊ ಅಂತ ನಿಮಗೇಳೀದ್ರಂತೆ, ಪಾಪ ಗೌಡ್ರು ಪ್ಲಾನು ನಿಮಗೂ ಗೊತ್ತಾಗಲಿಲ್ಲ ಅಲವಾ ಸಾರ್?”

“ಇದ್ಯಲ್ಲ ಕಟ್ಟುಕತೆ ಕಂಡ್ರಿ, ಇದೇ ಡಿ.ಕೆ ಶಿವಕುಮಾರ ನಮ್ಮ ಪಾರ್ಟಿ ಜನನ ಯಳಿಯಕ್ಕೆ ನೋಡಿದಾಗ, ನಾನೇ ಪಾರ್ಟಿ ಉಳಿಸಿಗಳಕ್ಕೆ ಅಂಗೆ ಮಾಡಿದ್ದೆ.”

“ಈಗ್ಲು ಉಸಾರಾಗಿರಿ ಸಾರ್. ಇಬ್ರಾಹಿಂ ನಿಮ್ಮ ಬಗುಲಲ್ಲೇ ಅವುರೆ. ಆತ ಕಾಂಗ್ರೆಸ್‌ನಲ್ಲಿದ್ದು ಯಡಿಯೂರಪ್ಪನಿಗೆ ಮುವ್ವತ್ತು ಸಾವುರ ಓಟಾಕ್ಸಿದನಂತೆ. ಅವುರೆ ಅಂಗಂದವುರೆ. ನಿಮ್ಮ ಕ್ಷೇತ್ರದ ಮುಸ್ಲಿಮರು ಯಂಗವ್ರೆ ನೋಡಿಕಳಿ.”

“ಇಬ್ರಾಹಿಂ ಏನು ಅಂತ ನಮಗೆ ಚನ್ನಾಗಿ ಗೊತ್ತು. ನಮ್ಮ ತಂದೆಯವರಿಗೆ ಇನ್ನು ಗೊತ್ತು.”

“ಥೂತ್ತೇರಿ”


ಇದನ್ನೂ ಓದಿ: ಉಗ್ರರನ್ನೇ ಬಿಡದ ಮೋದಿ ರೌಡಿಗಳನ್ನು ಬಿಟ್ಟಾರಾ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...