Homeಅಂಕಣಗಳುಇಬ್ರಾಹಿಂ ಏನು ಅಂತ ನಮಗೆ ಚನ್ನಾಗಿ ಗೊತ್ತು; ನಮ್ಮ ತಂದೆಯವರಿಗೆ ಇನ್ನೂ ಗೊತ್ತು..

ಇಬ್ರಾಹಿಂ ಏನು ಅಂತ ನಮಗೆ ಚನ್ನಾಗಿ ಗೊತ್ತು; ನಮ್ಮ ತಂದೆಯವರಿಗೆ ಇನ್ನೂ ಗೊತ್ತು..

- Advertisement -
- Advertisement -

ಕಾಂಗೈಗಳನ್ನು ಟೀಕಿಸುವ ಸಾಮಗ್ರಿಯನ್ನು ಖಾಲಿ ಮಾಡಿಕೊಂಡ ಈ ಬಿಜೆಪಿಗಳು ನಿಮ್ಮದು ರಾವಣನ ಪಕ್ಷ ನಮ್ಮದು ರಾಮನ ಪಕ್ಷ ಎಂದುಬಿಟ್ಟಿವೆಯಲ್ಲಾ. ಇದಕ್ಕೆ ತಕ್ಕ ಉತ್ತರ ಕೊಡಲು ತಡಕಾಡುತ್ತಿರುವ ಕಾಂಗೈಗಳು ಹಾಗೇ ಸ್ವಲ್ಪ ಯೋಚಿಸಿದ್ದರೆ ರಾವಣ ಎಂತವನು ಎಂಬುದು ಅರಿವಾಗುತ್ತಿತ್ತು. ರಾವಣನ ಹತ್ತು ತಲೆ ಅವನ ಶಕ್ತಿ ಸಾಮರ್ಥ್ಯದ ಸಂಕೇತ. ಆತ ಅಪ್ಪಟ ಶಿವಭಕ್ತ, ಸಂಗೀತಗಾರ, ಮಹಾವೈಣಿಕ, ನೃತ್ಯಪಟು, ಅಜೇಯ, ಒಳ್ಳೆ ಆಡಳಿತಗಾರ, ಕುಬೇರರನ್ನು ಸೋಲಿಸಿ ಪುಷ್ಪಕ ವಿಮಾನ ಪಡೆದವನು. ಭುಜಂಗ ಸ್ತೋತ್ರ ರಚಿಸಿದ ಕರ್ತೃ. ಜ್ವಲಿಸುವ ಅಗ್ನಿಯಂತಿದ್ದ ರಾಜಲಕ್ಷಣದಿಂದ ಶೋಭಿತನಾದ ಆತ ಈ ಪ್ರಪಂಚಕ್ಕೆ ಮೊದಲು ಮೀಸಲಾತಿ ತಂದವನು. ಲಂಕೆಯನ್ನು ರಕ್ಷಿಸಲು ಲಂಕಿಣಿ, ದಂಡಕಾರಣ್ಯ ರಕ್ಷಿಸಲು ತಾಟಕಿ, ಲಂಕೆ ಹೆಬ್ಬಾಗಿಲು ಕಾಯಲು ಸಿಂಹಿಣಿ, ಅಶೋಕವನ ನೋಡಿಕೊಳ್ಳಲು ತ್ರಿಜಟಿಯನ್ನು ನೇಮಿಸಿದ್ದ. ಹೆಣ್ಣನ್ನು ಮೋಸ ಮಾಡಿ ಕೊಂದವನಲ್ಲ. ಮರದ ಮರೆಯಲ್ಲಿ ನಿಂತು ಯುದ್ಧ ಮಾಡಿದವನಲ್ಲ. ಯಾರದೋ ಮಾತಿಗೆ ಮಡದಿಯನ್ನೇ ಕಾಡಿಗಟ್ಟಿದವನಲ್ಲ. ಹೆಂಡತಿ ಬಗ್ಗೆ ಸಂಶಯಗೊಂಡು ಬೆಂಕಿ ಮುಟ್ಟಲು ಹೇಳಿದವನಲ್ಲ ರಾವಣ. ಹೀಗೆ ರಾವಣನ ಗುಣಗಳನ್ನು ಪಟ್ಟಿಮಾಡಿ ಬಿಜೆಪಿಗೆ ಕಾಂಗೈಗಳು ಸವಾಲೆಸೆಯುವ ಬದಲು ಗೊಂದಲಕ್ಕೆ ಬಿದ್ದಿವೆಯಲ್ಲಾ. ಈ ಗೊಂದಲಕ್ಕೆ ಕಾರಣ ಬಿಜೆಪಿಗಳು ನಿಮ್ಮನ್ನು ರಾವಣ ಪಕ್ಷ ಎಂದ ಕೂಡಲೇ ನಮ್ಮಲ್ಲಿ ರಾವಣ ಸಿದ್ದರಾಮಯ್ಯನೊ ಅಥವಾ ಡಿ.ಕೆ ಶಿವಕುಮಾರನೊ ಎಂದು ಯೋಚಿಸುತ್ತ ಕುಳಿತಿವೆಯಂತಲ್ಲಾ ಥೂತ್ತೇರಿ.

ಕಾಂಗೈ ಮತ್ತು ಬಿಜೆಪಿಗಳ ಕತೆ ಹೀಗಿದ್ದರೆ ಇನ್ನ ಯಾತ್ರೆ ಆರಂಭಿಸಿದ ದಿನದಿಂದಲೂ ಹಲವಾರು ಅಡ್ಡಿ ಆತಂಕಗಳನ್ನು ಎದುರಿಸುತ್ತಿರುವ ನಮ್ಮ ಕುಮಾರಣ್ಣನನ್ನು ಮಾತನಾಡಿಸಿ ಬಹಳ ದಿನಗಳಾದವು. ಪಂಚರತ್ನ ಯಾತ್ರೆ ಸ್ಥಗಿತಗೊಳಿಸಿ ಸುಧಾರಿಸಿಕೊಳ್ಳುತ್ತಿರುವ ಈ ಸಮಯದಲ್ಲಿ ಮಾತಿಗೆ ಸಿಕ್ಕಬಹುದೆಂದು ಪೋನ್ ಮಾಡಲಾಗಿ ಪೋನ್ ರಿಂಗಾಯ್ತು, ರಿಂಗ್ ಟೋನು “ಮುರುಳಿಯ ಮರೆಸಿ ನಗುತಿಹೆ ಸರಸಿ..” ಹಲೋ ಯಾರು?

“ನಾನು ಸಾರ್, ಯಾಹೂ.”

“ಏನ್ರಿ ಯಾಹೂ ಇತ್ತೀಚೆಗೆ ಪೋನ್ ಮಾಡದನ್ನು ಬಿಟ್ರಿ. ಭೇಟಿಯಾಗದನ್ನು ಬಿಟ್‌ರಲ್ರಿ.”

“ಅಂಗೇನು ಯಿಲ್ಲ ಸಾರ್, ನೀವು ಬಿಜಿಲಿದ್ರಿ. ಅದಕ್ಕಿಂತ್ಲೂ, ಎಷ್ಟೋ ದಿನ ನಾವು ಮುನಿಸಿಕೊಂಡಿದ್ರೂ ಸಹ ಪುನಹ ನಿಮ್ಮತ್ರ ಬರಬೇಕಾಗತ್ತೆ, ಜಿ.ಟಿ ದೇವೇಗೌಡರ ತರ.”

“ದೇವೇಗೌಡ್ರು ಮುನಿಸಿಕೊಂಡಿದ್ದಕ್ಕೆ ಹಲವಾರು ಕಾರಣಗಳು ಇವೆ. ಅವನ್ನೆಲ್ಲ ಮಾತನಾಡತಕ್ಕಂತ ತೀರ್ಮಾನ ತಗೊಳತಕ್ಕಂತ ಸಮಯ ಇದಲ್ಲ. ನಮ್ಮ ಮೈಸೂರು ಭಾಗದಲ್ಲಿ ಅವರು ದಳಕ್ಕೆ ಒಂದು ಶಕ್ತಿಯಾಗಿರತಕ್ಕಂತದ್ದು, ಈಗಾಗ್ಲೆ ತೀರ್ಮಾನ ಆಗಿರತಕ್ಕಂತ ವಿಚಾರ ಆದ್ದರಿಂದ ನಮ್ಮ ತಂದೆಯವರು, ಮಾಜಿ ಪ್ರಧಾನಿಗಳಾದ ಮಾನ್ಯ ದೇವೇಗೌಡ್ರು ಕರದ ಕೂಡಲೆ ಬಂದು ಅಳತೆ ಗೌರವ ತೋರಿರತಕ್ಕಂತ ವಿಷಯ ಏನಿದೆ ಅದ್ಯಲ್ಲ ಮುಗದು ಈಗ ಅವರು ದಳದ ಸಂಘಟನೆಲಿ ಸಕ್ರಿಯವಾಗಿರತಕ್ಕಂತದ್ದು ನೀವೆ ನೋಡಿದ್ದಿರಿ.”

“ಆದ್ರು ಜಿ.ಟಿ ದೇವೇಗೌಡ್ರ ನಂಬಿದ್ದೋರು ಐದು ಜನ ಕಾಂಗ್ರಸ್ಸಿಗೋದರಲ್ಲ ಸಾರ್?”

“ಅವುರ ಬಗ್ಗೆ ಹೆಚ್ಚಿಗೆ ಮಾತಾಡತಕ್ಕಂತ ವಿಷಯಕ್ಕೆ ಹೋಗಲ್ಲ. ಅಲ್ಲಿ ನಾಲ್ಕೆ ಜನ ಸಾಕು ಅನತಕ್ಕಂತ ತೀರ್ಮಾನವ ಅವರೇ ತಗಂಡು ಈಗಾಗ್ಲೆ ಒಬ್ಬ ವಾಪಸು ಪುನಹ ನಮ್ಮ ಪಾರ್ಟಿಗೆ ಬಂದವುರೆ, ನಾನು ಯಾವತ್ತು ಕೂಡ ನಮ್ಮ ಪಾರ್ಟಿ ಬಿಟ್ಟು ಹೋಗುವರ ಬಗ್ಗೆಯಾಗಲಿ ಬರತಕ್ಕಂತ ವ್ಯಕ್ತಿಗಳ ಬಗೆಯಾಗ್ಲಿ ಕಾಳಜಿ ವಹಿಸದೆ ಇರತಕ್ಕತಂದ್ದು ಮೊದಲಿನಿಂದಲೂ ನಾವು ರೂಢಿಸಿಕೊಂಡು ಬಂದಂತ ತೀರ್ಮಾನಗಳೇನಿವೆ ಅವನ್ನ ಪಾಲನೆ ಮಾಡತಕ್ಕಂತದ್ದು ನಮ್ಮ ಜವಾಬ್ದಾರಿ.”

“ಮತ್ತೆ ಜಿ.ಟಿ ದೇವೇಗೌಡ್ರನ್ನ ಕಾಡಿ ಬೇಡಿ ಕರಕೊಂಡ್ರಲ್ಲ ಸಾರ್?”

“ಅದು ನಮ್ಮ ರಾಷ್ಟ್ರೀಯ ಅಧ್ಯಕ್ಷರ ತೀರ್ಮಾನ. ಅವುರು ತೆಗೆದುಕೊಳ್ಳತಕ್ಕಂತ ತೀರ್ಮಾನ ಏನಿದೆ ಅವುನ್ನ ಗೌರವಿಸತಕ್ಕಂತದ್ದು ನಮ್ಮ ಕರ್ತವ್ಯ”

“ಇನ್ನೊಂದು ಗಂಭೀರ ವಿಷಯ ಸಾರ್, ನೀವು ಇಬ್ರಾಹಿಂ ಮುಖ್ಯಮಂತ್ರಿಯಾಗದರಲ್ಲಿ ತಪ್ಪೇನಿದೆ ಅವುರೇನು ಅಸ್ಪೃಶ್ಯರೆ ಅಂದುಬಿಟ್ಟಿದ್ದಿರಿ. ಈ ಮಾತಿಗೆ ಈಗಾಗ್ಲೆ ಕಂಪ್ಲೇಟು ಆಗಿದೆ, ಯಾಕಂಗದ್ರಿ ಸಾರ್?”

“ನಾನಂಗಂದಿರದು ಕಂಪ್ಲೇಟು ದಾಖಲಾಗಿರದನ್ನ ಗಮನಿಸಿದ್ದಿನಿ. ನಾನು ಹೇಳಿರತಕ್ಕಂತ ಮಾತೇನಿದೆ ಅದು ಕಾಂಗ್ರೆಸಿನವರಾಡೊ ಮಾತು; ಈ ದೇಶದಲ್ಲಿ ಅಸ್ಪೃಶ್ಯರು ಅವರೆ, ಅವುರು ಇನ್ನ ಇದ್ದಾರೆ ಅನ್ನದಾದ್ರೆ ಇಷ್ಟು ವರ್ಷ ದೇಶ ಆಳಿದ ಕಾಂಗ್ರೆಸಿನವರು ಅವರು ಇಲ್ದಂಗೆ ಮಾಡಬೇಕಾಗಿತ್ತು. ಅದು ಆಡಳಿತ ನ್ಯಡಸತಕ್ಕಂತ ಅವುರ ಜವಬ್ದಾರಿ ಆಗಿತ್ತು. ಅಸ್ಪೃಶ್ಯತೆ ಪದ ಹಿಡಕಂಡು ನಮ್ಮನ್ನ ಕೆಣಕತಕ್ಕಂತ ಸಾಹಸವ ಈ ಕಾಂಗ್ರೆಸ್ಸಿನವರು ಮಾಡ್ತ ಅವುರೆ. ಅವುರಿಗೆ ನಾನು ಈ ಮುಖಾಂತರ ಎಚ್ಚರಿಕೆ ಕೋಡ್ತಿನಿ.”

“ಪ್ರಶ್ನೆ ಕೇಳಿದ್ದು ಪತ್ರಿಕೆಯವರಲ್ಲವ ಸಾರ್?”

“ಇರಬಹುದು ಅವುರ್‍ಯಾರು ಎಂಬತಕ್ಕಂತ ಮಾಹಿತಿ ನಮ್ಮತ್ರ ಇದೆ. ನಾವು ಯಾವತ್ತೂ ಅಸ್ಪೃಶ್ಯರ ಬಗ್ಗೆ ಕೀಳಾಗಿ ನಡಕೊಂಡಿಲ್ಲ, ತಪ್ಪಾಗಿ ನ್ಯಡಕೊಂಡಿಲ್ಲ. ಅವರ ಭುಜದ ಮೇಲೆ ಕೈಹಾಕಿ ಮಾತನಾಡಿಸಿದ್ದೀನಿ. ರಾಮಕೃಷ್ಣ ಹೆಗಡೆ ಕಾಲದಲ್ಲಿ ಜಿಲ್ಲಾ ಪಂಚಾಯ್ತಿ ಚುನಾವಣೆ ಆದಾಗ ನಮ್ಮ ತಂದೆಯವರು ಒಬ್ಬ ದಲಿತರನ್ನು ಹಾಸನ ಜಿಲ್ಲಾ ಪಂಚಾಯ್ತಿ ಅಧ್ಯಕ್ಷರನ್ನಾಗಿ ಮಾಡಿದ್ರು. ಇದೇ ಕಾಂಗ್ರೆಸ್ಸಿಗರು ಮಾಡಿದ್ರಾ? ಅವುರಿಗೆ ಪವರ್ ಬಂದಾಗ ಪರಮೇಶ್ವರನ್ನ ಮಾಡಿದ್ರ? ಅದ್ಕೂ ಹಿಂದೆ ರಂಗನಾಥ ಬಸವಲಿಂಗಪ್ಪ ಇದ್ರಲ್ಲ ಮಾಡಿದ್ರಾ, ಖರ್ಗೆಯವರನ್ನ ಮಾಡಿದ್ರಾ?”

“ಖರ್ಗೆಯವರನ್ನ ಮಾಡದಂಗೆ ದೇವೇಗೌಡ್ರು ತಡೆಹಾಕಿದ್ರಲ್ಲ ಸಾರ್?”

“ದೇವೇಗೌಡ್ರು ಅಂತ ಕ್ಯಲಸ ಯಾವಾಗ್ಲು ಮಾಡಿಲ್ಲ.”

“ನಮ್ಮ ಕಣ್ಣೆದುರೆ ಮಾಡಿದ್ರಲ್ಲ ಸಾರ್. ಆಗ ಸಮ್ಮಿಶ್ರ ಸರಕಾರ ಮಾಡುವಾಗ ಸೋನಿಯಾ ಗಾಂಧಿ ಮುಖ್ಯಮಂತ್ರಿ ಪದವಿನೆ ತಗೊಳಿ ಅಂದ್ರು. ಆಗ ಗೌಡ್ರು ಬೇಡ ಬೇಡ ನಮಗೆ ಉಪಮುಖ್ಯಮಂತ್ರಿ ಸಾಕು ಅಂದ್ರು. ಯಾಕೆ ಅಂತ ಪತ್ತೆಹಚ್ಚಿದಾಗ, ಮುಂದೆ ಧರ್ಮಸಿಂಗ್‌ಗೆ ಕೊಟ್ಟ ಬೆಂಬಲ ವಾಪಸ್ ತಗಂಡಾಗ ಯಾರೂ ಪ್ರತಿಭಟಿಸಲಿಲ್ಲ; ಅದೇ ಖರ್ಗೆ ಮುಖ್ಯಮಂತ್ರಿಯಾಗಿದ್ದು ಬೆಂಬಲ ಹಿಂತಗಂಡ್ರೆ ಇಡೀ ಕರ್ನಾಟಕದ ದಲಿತರು ಪ್ರತಿಭಟಿಸತಿದ್ರು. ಇದು ಗೊತ್ತಾಗಿ ದೇವೇಗೌಡ್ರು ಧರ್ಮಸಿಂಗ್‌ಗೆ ಸಪೋರ್ಟ್ ಮಾಡಿ ವಾಪಸ್ ತಗೊ ಅಂತ ನಿಮಗೇಳೀದ್ರಂತೆ, ಪಾಪ ಗೌಡ್ರು ಪ್ಲಾನು ನಿಮಗೂ ಗೊತ್ತಾಗಲಿಲ್ಲ ಅಲವಾ ಸಾರ್?”

“ಇದ್ಯಲ್ಲ ಕಟ್ಟುಕತೆ ಕಂಡ್ರಿ, ಇದೇ ಡಿ.ಕೆ ಶಿವಕುಮಾರ ನಮ್ಮ ಪಾರ್ಟಿ ಜನನ ಯಳಿಯಕ್ಕೆ ನೋಡಿದಾಗ, ನಾನೇ ಪಾರ್ಟಿ ಉಳಿಸಿಗಳಕ್ಕೆ ಅಂಗೆ ಮಾಡಿದ್ದೆ.”

“ಈಗ್ಲು ಉಸಾರಾಗಿರಿ ಸಾರ್. ಇಬ್ರಾಹಿಂ ನಿಮ್ಮ ಬಗುಲಲ್ಲೇ ಅವುರೆ. ಆತ ಕಾಂಗ್ರೆಸ್‌ನಲ್ಲಿದ್ದು ಯಡಿಯೂರಪ್ಪನಿಗೆ ಮುವ್ವತ್ತು ಸಾವುರ ಓಟಾಕ್ಸಿದನಂತೆ. ಅವುರೆ ಅಂಗಂದವುರೆ. ನಿಮ್ಮ ಕ್ಷೇತ್ರದ ಮುಸ್ಲಿಮರು ಯಂಗವ್ರೆ ನೋಡಿಕಳಿ.”

“ಇಬ್ರಾಹಿಂ ಏನು ಅಂತ ನಮಗೆ ಚನ್ನಾಗಿ ಗೊತ್ತು. ನಮ್ಮ ತಂದೆಯವರಿಗೆ ಇನ್ನು ಗೊತ್ತು.”

“ಥೂತ್ತೇರಿ”


ಇದನ್ನೂ ಓದಿ: ಉಗ್ರರನ್ನೇ ಬಿಡದ ಮೋದಿ ರೌಡಿಗಳನ್ನು ಬಿಟ್ಟಾರಾ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...

ಮಹಿಳಾ ಮೀಸಲು ಮಸೂದೆ 2023ರಲ್ಲೇ ಗೆದ್ದಿದೆ, ಈಗ ಸೋತಿರುವುದು ಮೋದಿ ಸರ್ಕಾರ

ಮೋದಿ ಸರ್ಕಾರ ಮಂಡಿಸಿದ್ದ ಮಹಿಳಾ ಮೀಸಲಾತಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾಗಿದೆ ಎಂಬುವುದು ದೇಶದಲ್ಲಿ ಪ್ರಸ್ತುತ ದೊಡ್ಡ ಚರ್ಚೆಯ ವಿಷಯವಾಗಿದೆ. ಕಾಂಗ್ರೆಸ್‌ ನೇತೃತ್ವದಲ್ಲಿ ವಿಪಕ್ಷಗಳು ಮಸೂದೆಯನ್ನು ಸೋಲಿಸುವ ಮೂಲಕ ದೇಶದ ಮಹಿಳೆಯರ ಸಬಲೀಕರಣಕ್ಕೆ...

ಕ್ಯಾಂಪಸ್ ಜಾತಿ ತಾರತಮ್ಯ ವಿರುದ್ಧದ ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ರಾಜ್ಯ ಸಚಿವ ಸಂಪುಟ ಗುರುವಾರ (ಏ.16) ರಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ'ಗೆ ಅನುಮೋದನೆ ನೀಡಿತು. ಜೊತೆಗೆ, ಪ್ರಮುಖ ಮೂಲಸೌಕರ್ಯ ಮತ್ತು...

ಮಧ್ಯಪ್ರದೇಶ| ವಂದೇ ಮಾತರಂ ಹಾಡಲು ನಿರಾಕರಣೆ; ಇಬ್ಬರು ಕಾಂಗ್ರೆಸ್ ಕೌನ್ಸಿಲರ್‌ಗಳ ವಿರುದ್ಧ ಎಫ್‌ಐಆರ್

ಏಪ್ರಿಲ್ 8 ರಂದು ಇಂದೋರ್ ಮುನ್ಸಿಪಲ್ ಕಾರ್ಪೊರೇಷನ್‌ನ ಬಜೆಟ್ ಅಧಿವೇಶನದಲ್ಲಿ ಧಾರ್ಮಿಕ ಮತ್ತು ಸಾಂವಿಧಾನಿಕ ಕಾರಣಗಳನ್ನು ಉಲ್ಲೇಖಿಸಿ ವಂದೇ ಮಾತರಂ ಹಾಡಲು ನಿರಾಕರಿಸಿದ್ದಕ್ಕಾಗಿ ಮಧ್ಯಪ್ರದೇಶ ಪೊಲೀಸರು ಇಬ್ಬರು ಕಾಂಗ್ರೆಸ್ ಕೌನ್ಸಿಲರ್‌ಗಳ ವಿರುದ್ಧ ಎಫ್‌ಐಆರ್...

ನ್ಯಾಯಾಂಗ ಸೇವೆಗಳು, ಸರ್ಕಾರಿ ಸಮಿತಿಗಳಲ್ಲಿ ಶೇ. 50 ಮಹಿಳಾ ಪ್ರಾತಿನಿಧ್ಯ ಕೋರಿ ಪಿಐಎಲ್ : ವಜಾಗೊಳಿಸಿದ ಸುಪ್ರೀಂ ಕೋರ್ಟ್

ಸರ್ಕಾರಿ ಸಮಿತಿಗಳು ಮತ್ತು ನ್ಯಾಯಾಂಗ ಸೇವೆಯ ಖಾಲಿ ಇರುವ ಸ್ಥಾನಗಳಲ್ಲಿ ಮಹಿಳೆಯರಿಗೆ ಶೇ. 50ರಷ್ಟು ಪ್ರಾತಿನಿಧ್ಯ ನೀಡಬೇಕೆಂದು ಕೋರಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ವಿಚಾರಣೆಗೆ ಸ್ವೀಕರಿಸಲು ಸುಪ್ರೀಂ ಕೋರ್ಟ್ ಗುರುವಾರ...

ರಷ್ಯಾ ತೈಲ ಖರೀದಿಸಲು ಭಾರತಕ್ಕೆ ನೀಡಿದ್ದ ಕಾಲಾವಕಾಶ ವಿಸ್ತರಿಸುವುದಿಲ್ಲ: ಅಮೆರಿಕ

ಇರಾನ್ ಮತ್ತು ರಷ್ಯಾದಿಂದ ತೈಲವನ್ನು ಖರೀದಿಸಲು ಭಾರತ ಸೇರಿದಂತೆ ವಿವಿಧ ದೇಶಗಳಿಗೆ ಈವರೆಗೆ ನೀಡಲಾಗಿದ್ದ ನಿರ್ಬಂಧ ಸಡಿಲಿಕೆಯನ್ನು ಇನ್ನು ಮುಂದೆ ಮುಂದುವರಿಸುವುದಿಲ್ಲ ಎಂದು ಅಮೆರಿಕದ ಖಜಾನೆ ಕಾರ್ಯದರ್ಶಿ ಸ್ಕಾಟ್ ಬೆಸೆಂಟ್ ಬುಧವಾರ (ಏ.15)...