Homeಮುಖಪುಟಅವರು ಏನನ್ನು ಓದುತ್ತಿದ್ದಾರೆ ಎಂದು ನಮಗೆ ಗೊತ್ತು!: ‘ಪೆಗಾಸಸ್‌ ಪ್ರಾಜೆಕ್ಟ್‌’ಗೆ ರಾಹುಲ್ ಗಾಂಧಿ

ಅವರು ಏನನ್ನು ಓದುತ್ತಿದ್ದಾರೆ ಎಂದು ನಮಗೆ ಗೊತ್ತು!: ‘ಪೆಗಾಸಸ್‌ ಪ್ರಾಜೆಕ್ಟ್‌’ಗೆ ರಾಹುಲ್ ಗಾಂಧಿ

- Advertisement -
- Advertisement -

‘ಪೆಗಾಸಸ್’ ತಂತ್ರಾಂಶವನ್ನು ಬಳಸಿಕೊಂಡು ಭಾರತದ ವಿರೋಧ ಪಕ್ಷಗಳ ನಾಯಕರು, ಪತ್ರಕರ್ತರು, ಸಚಿವರ ಫೋನ್‌ಗಳನ್ನು ಟ್ಯಾಪ್‌ ಮಾಡಲಾಗುತ್ತಿದೆ ಎಂದು ಪ್ಯಾರಿಸ್ ಮೂಲದ ಪಾರ್ಬಿಡನ್ ಸ್ಟೋರಿಸ್ ತನಿಖಾ ವರದಿ ಬಹಿರಂಗ ಪಡಿಸಿದೆ. ಈ ಬಗ್ಗೆ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಒಕ್ಕೂಟ ಸರ್ಕಾರದ ವಿರುದ್ದ ಸೋಮವಾರ ವಾಗ್ದಾಳಿ ನಡೆಸಿದ್ದಾರೆ.

‘ಪೆಗಾಸಸ್’ ಇಸ್ರೇಲಿ ಕಂಪನಿ ಎನ್‌ಎಸ್‌ಒ ಗ್ರೂಪ್‌ನ ಗೂಢಚರ್ಯೆ ತಂತ್ರಾಂಶವಾಗಿದೆ. ಈ ತಂತ್ರಾಂಶವನ್ನು ಪರವಾನಗಿ ಪಡೆದಿರುವ ಅಧಿಕೃತ ಸರಕಾರಿ ಏಜೆನ್ಸಿಗಳಿಗೆ ಅಥವಾ ಗುಪ್ತಚರ ಸಂಸ್ಥೆಗಳಿಗೆ ಮಾತ್ರವೇ ಮಾರುತ್ತೇವೆ ಎಂದು ಎನ್‌ಎಸ್‌ಒ ಹೇಳಿತ್ತು.

ಇದನ್ನೂ ಓದಿ: ಇಸ್ರೇಲ್ ಮೂಲದ ಕಂಪೆನಿಯಿಂದ ಭಾರತದ 300 ಗಣ್ಯರ ಫೋನ್‌ಗಳು ಹ್ಯಾಕ್‌!

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮೂರು ದಿನದ ಹಿಂದೆಯೆ, “ಈ ದಿನಗಳಲ್ಲಿ ನೀವು ಏನನ್ನು ಓದುತ್ತಿರುವಿರೋ ಅದರ ಬಗ್ಗೆ ನನಗೆ ಆಶ್ಚರ್ಯವಾಗುತ್ತಿದೆ” ಎಂದು ಟ್ವೀಟ್ ಮಾಡಿದ್ದರು. ಇಂದು ಈ ಟ್ವೀಟ್‌ ಅನ್ನು ಮತ್ತೆ ರೀಟ್ವೀಟ್‌ ಮಾಡಿರುವ ಅವರು, “ಅವರು ಏನು ಓದುತ್ತಿದ್ದಾರೆಂದು ನಮಗೆ ಗೊತ್ತಿದೆ. ನಿಮ್ಮ ಪೋನಿನ ಎಲ್ಲವೂ” ಎಂದು ಆಶ್ಚರ್ಯಪಟ್ಟಿದ್ದಾರೆ. ಜೊತೆಗೆ ಪೆಗಾಸಸ್ ಹ್ಯಾಶ್‌ಟ್ಯಾಗ್ ಅನ್ನು ಕೂಡಾ ಅವರು ಬಳಸಿಕೊಂಡಿದ್ದಾರೆ.

 

ಆದರೆ ಒಕ್ಕೂಟ ಸರ್ಕಾವು, ತನಿಖಾ ವರದಿಯನ್ನು ನಿರಾಕರಿಸಿದ್ದು, ನಿರ್ದಿಷ್ಟ ಜನರ ಮೇಲೆ ಸರ್ಕಾರ ಕಣ್ಗಾವಲು ಇಟ್ಟಿದೆ ಎಂಬುವುದಕ್ಕೆ ಯಾವುದೇ ದೃಡವಾದ ಆಧಾರವಿಲ್ಲ ಎಂದು ಹೇಳಿದೆ.

ವಿಶ್ವದಾದ್ಯಂತ 50,000 ಫೋನ್‌ಗಳನ್ನು ಟ್ಯಾಪ್‌ ಮಾಡಲಾಗಿದೆ ಎನ್ನಲಾಗಿದ್ದು, ತನಿಖಾ ವರದಿಯನ್ನು ಪ್ಯಾರಿಸ್‌ ಮೂಲದ ಲಾಭರಹಿತ ಮಾಧ್ಯಮ ಸಂಸ್ಥೆ ‘ಫಾರ್ಬಿಡೆನ್‌ ಸ್ಟೋರಿಸ್‌’, ಅಮ್ನೆಸ್ಟಿ ಇಂಟರ್‌ನ್ಯಾಷನಲ್‌, ಭಾರತದ ಆನ್‌ಲೈನ್‌ ಸುದ್ದಿ ಸಂಸ್ಥೆ ದಿ ವೈರ್‌, ಲೆ ಮಾಂಡೆ, ದಿ ಗಾರ್ಡಿಯನ್‌, ವಾಷಿಂಗ್ಟನ್‌ ಪೋಸ್ಟ್‌ ಸೇರಿದಂತೆ ಒಟ್ಟು 16 ಮೆಕ್ಸಿಕನ್‌, ಅರಬ್‌ ಮತ್ತು ಯುರೋಪಿನ ಸುದ್ದಿ ಸಂಸ್ಥೆಗಳು ಜಂಟಿಯಾಗಿ ನಡೆಸಿದೆ. ಈ ಸಂಸ್ಥೆಗಳು ಕೈಗೊಂಡಿರುವ ಈ ತನಿಖೆಗೆ ‘ಪೆಗಾಸಸ್‌ ಪ್ರಾಜೆಕ್ಟ್‌’ ಎಂದು ಕರೆಯಲಾಗಿದೆ.

ತನಿಖಾ ವರದಿಯಲ್ಲಿ, ನರೇಂದ್ರ ಮೋದಿ ಸರ್ಕಾರದ ಇಬ್ಬರು ಸಚಿವರು, ಮೂವರು ವಿರೋಧ ಪಕ್ಷದ ನಾಯಕರು, ಒಬ್ಬ ನ್ಯಾಯಾಂಗದ ವ್ಯಕ್ತಿ, 40 ಪತ್ರಕರ್ತರು, ವಿಜ್ಞಾನಿಗಳು ಹಾಗೂ ಮಾನವ ಹಕ್ಕುಗಳ ಹೋರಾಟಗಾರರು ಸೇರಿದಂತೆ ಹಲವು ಉದ್ಯಮಿಗಳ ಫೋನ್‌‌ಗಳನ್ನು ಹ್ಯಾಕ್ ಮಾಡಲಾಗಿದೆ ಎಂದು ಹೇಳಲಾಗಿದೆ.

ಇದನ್ನೂ ಓದಿ: ಬಿಎಸ್‌ವೈ ವಿರುದ್ಧ ಕತ್ತಿ ಮಸೆಯುತ್ತಿದ್ದ ಮೀರ್ ಸಾದಿಕ್ ಯಾರೆಂಬುದು ಗೊತ್ತಾಯಿತು..: ಕಾಂಗ್ರೆಸ್

2019 ರ ಲೋಕಸಭಾ ಸಾರ್ವತ್ರಿಕ ಚುನಾವಣೆಯ ಸಮಯದಲ್ಲಿ, ಸುಪ್ರೀಂ ಕೋರ್ಟ್ ನ್ಯಾಯಾಧೀಶರು, ನರೇಂದ್ರ ಮೋದಿ ಸರ್ಕಾರದಲ್ಲಿ ಸೇವೆ ಸಲ್ಲಿಸುತ್ತಿದ್ದ ಮಂತ್ರಿಗಳು ಸೇರಿದಂತೆ 2018 ಮತ್ತು 2019 ರ ನಡುವೆ ಹೆಚ್ಚಿನ ಜನರನ್ನು ಗುರಿಯಾಗಿಸಲಾಗಿತ್ತು ಎಂದು ದಿ ವೈರ್‌ ವರದಿ ಹೇಳಿದೆ.

ಇಷ್ಟೇ ಅಲ್ಲದೆ, ಭೀಮಾ ಕೋರೆಗಾಂವ್‌ ಪ್ರಕರಣದ ಆರೋಪಿಗಳಾದ 12 ಹೋರಾಟಗಾರರ ಫೋನ್‌ಗಳನ್ನು ಹ್ಯಾಕ್‌ ಮಾಡಲಾಗಿದ್ದು ಅವರ ಮೇಲೆ ಕಣ್ಗಾವಲು ಇಡಲಾಗಿದೆ ಎಂಬ ತನಿಖಾ ವರದಿಯು ಹೇಳಿದೆ. ವರದಿಯು ‘ಜಾಗತಿಕ ಪ್ರಜಾಪ್ರಭುತ್ವ ಅಪಾಯದಲ್ಲಿದೆ’ ಎಂದು ಉಲ್ಲೇಖಿಸಿದೆ.

ಫೋನ್‌ ಹ್ಯಾಕ್ ಮಾಡಲಾಗಿರುವ ಭಾರತೀಯ ಪತ್ರಕರ್ತರಲ್ಲಿ ಸುಶಾಂತ್ ಸಿಂಗ್, ಜೆ. ಗೋಪಿಕೃಷ್ಣನ್‌, ಶಿಶಿರ್‌ ಗುಪ್ತಾ, ರಿತಿಕಾ ಚೋಪ್ರಾ, ಪ್ರಶಾಂತ್‌ ಝಾ, ಪ್ರೇಮ್‌ ಶಂಕರ್‌ ಝಾ, ಸ್ವಾತಿ ಚತುರ್ವೇದಿ, ರಾಹುಲ್‌ ಸಿಂಗ್‌, ಮುಜಮ್ಮಿಲ್‌ ಜಲೀಲ್‌, ಇಫ್ತಿಕಾರ್‌ ಗೀಲಾನಿ, ಸಂದೀಪ್‌ ಉನ್ನಿತಾನ್‌, ದಿ ವೈರ್‌ನ ಸಂಸ್ಥಾಪಕ ಸಂಪಾದಕ ಸಿದ್ಧಾರ್ಥ್ ವರದರಾಜನ್ ಮತ್ತು ಎಂ.ಕೆ.ವೇಣು ಮುಂತಾದವರು ಸೇರಿದ್ದಾರೆ.

ಪೆಗಾಸಸ್ ತಂತ್ರಾಂಗಳನ್ನು ಬಳಸಿಕೊಂಡು ಫೋನ್‌ ಸಂಖ್ಯೆಗಳನ್ನು ಹ್ಯಾಕ್ ಮಾಡಲಾಗಿದೆ ಎಂದು ಈ ಹಿಂದೆ ಕೂಡಾ ವರದಿಯಾಗಿತ್ತು.

ಇದನ್ನೂ ಓದಿ: ಬಿಜೆಪಿ ಸೇರುತ್ತಿರುವ ಕೊಳ್ಳೇಗಾಲ ಶಾಸಕ ಎನ್‌. ಮಹೇಶ್‌; ಆಪ್ತರ ಹೇಳಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...

ಮಹಿಳಾ ಮೀಸಲು ಮಸೂದೆ 2023ರಲ್ಲೇ ಗೆದ್ದಿದೆ, ಈಗ ಸೋತಿರುವುದು ಮೋದಿ ಸರ್ಕಾರ

ಮೋದಿ ಸರ್ಕಾರ ಮಂಡಿಸಿದ್ದ ಮಹಿಳಾ ಮೀಸಲಾತಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾಗಿದೆ ಎಂಬುವುದು ದೇಶದಲ್ಲಿ ಪ್ರಸ್ತುತ ದೊಡ್ಡ ಚರ್ಚೆಯ ವಿಷಯವಾಗಿದೆ. ಕಾಂಗ್ರೆಸ್‌ ನೇತೃತ್ವದಲ್ಲಿ ವಿಪಕ್ಷಗಳು ಮಸೂದೆಯನ್ನು ಸೋಲಿಸುವ ಮೂಲಕ ದೇಶದ ಮಹಿಳೆಯರ ಸಬಲೀಕರಣಕ್ಕೆ...