Homeಮುಖಪುಟರೈತ ಹೋರಾಟದಿಂದ ನಾವು ಸ್ಥಳೀಯ ಚುನಾವಣೆಯಲ್ಲಿ ಕೆಟ್ಟದಾಗಿ ಸೋತಿದ್ದೇವೆ: ಪಂಜಾಬ್ ಬಿಜೆಪಿ ಮುಖಂಡ ಅನಿಲ್ ಜೋಶಿ

ರೈತ ಹೋರಾಟದಿಂದ ನಾವು ಸ್ಥಳೀಯ ಚುನಾವಣೆಯಲ್ಲಿ ಕೆಟ್ಟದಾಗಿ ಸೋತಿದ್ದೇವೆ: ಪಂಜಾಬ್ ಬಿಜೆಪಿ ಮುಖಂಡ ಅನಿಲ್ ಜೋಶಿ

ನಿಮ್ಮನ್ನು ನಂಬಿದವರ ಸಮಸ್ಯೆಗಳನ್ನು ನಿಭಾಯಿಸಲು ನಿಮಗೆ ಸಾಧ್ಯವಾಗದಿದ್ದರೆ, ನೀವು ರಾಜಕೀಯದಲ್ಲಿ ಬದುಕುಳಿಯುತ್ತೀರಿ ಎಂದು ಇನ್ನೂ ಯೋಚಿಸುತ್ತಿದ್ದೀರಾ?’ ಎಂದು ಬಿಜೆಪಿ ನಾಯಕತ್ವವನ್ನು ಕಟುವಾಗಿ ಟೀಕಿಸಿದ್ದಾರೆ.

- Advertisement -
- Advertisement -

`ರೈತರ ನೋವನ್ನು ಅರ್ಥಮಾಡಿಕೊಳ್ಳುವಲ್ಲಿ ನಮ್ಮ ಪಕ್ಷದ ನಾಯಕತ್ವವು ವಿಫಲವಾಗಿದೆ. ಆದ್ದರಿಂದಲೇ ಕೃಷಿ ಕಾನೂನುಗಳ ಬಗ್ಗೆ ಒಮ್ಮತ ಮೂಡಿಸಲು ಸಾಧ್ಯವಾಗಿಲ್ಲ’ ಎಂದು ಮಾಜಿ ಕೇಂದ್ರ ಸಚಿವ ಹಾಗೂ ಬಿಜೆಪಿ ಮುಖಂಡ ಅನಿಲ್‌ ಜೋಶಿ ಕೇಂದ್ರ ಮತ್ತು ಪಂಜಾಬ್ ರಾಜ್ಯ ಬಿಜೆಪಿ ನಾಯಕತ್ವವನ್ನು ಟೀಕಿಸಿದ್ದಾರೆ.

ಅಮೃತಸರ ಉತ್ತರ ವಿಧಾನಸಭೆಯಿಂದ ಎರಡು ಬಾರಿ ಶಾಸಕರಾಗಿದ್ದ ಜೋಶಿಯವರು, ‘ತಮ್ಮ ಪಕ್ಷದ ಹಿರಿಯ ನಾಯಕರು ಪಂಜಾಬ್‌ ರಾಜಕೀಯದಲ್ಲಿ ಜೀವಂತವಾಗಿ ಇರಬೇಕಾದರೆ ‘ಹಠ ಯೋಗ’ವನ್ನು ದೂರವಿಡಬೇಕು ಮತ್ತು ರೈತರ ವಿಷಯದಲ್ಲಿ ಪ್ರಾಮಾಣಿಕತೆ ತೋರಿಸಬೇಕು’ ಎಂದಿದ್ದಾರೆ ಎಂದು ಟೈಮ್ಸ್ ಆಫ್ ಇಂಡಿಯಾ ವರದಿ ಮಾಡಿದೆ.

`ರೈತರ ಆಂದೋಲನದಿಂದಾಗಿ ನಾವು ಪಂಜಾಬ್‌ನ ಪುರಸಭೆ ಚುನಾವಣೆಗಳಲ್ಲಿ ಕೆಟ್ಟದಾಗಿ ಸೋತಿದ್ದೇವೆ. ಅವರು ನಮಗೆ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ಅವಕಾಶ ನೀಡುತ್ತಾರೆ ಎಂದು ನೀವು ಭಾವಿಸುತ್ತೀರಾ? ಕಳೆದ ಆರು ತಿಂಗಳುಗಳಿಂದ ದೆಹಲಿ ಗಡಿಗಳಲ್ಲಿ ಭದ್ರವಾಗಿ ನೆಲೆಯೂರಿರುವ ರೈತರು ಈಗ ನಮಗೆ ಬಗ್ಗುತ್ತಾರೆ ಎಂದು ನೀವು ಭಾವಿಸುತ್ತೀರಾ? ನಿಮ್ಮನ್ನು ನಂಬಿದವರ ಸಮಸ್ಯೆಗಳನ್ನು ನಿಭಾಯಿಸಲು ನಿಮಗೆ ಸಾಧ್ಯವಾಗದಿದ್ದರೆ, ನೀವು ರಾಜಕೀಯದಲ್ಲಿ ಬದುಕುಳಿಯುತ್ತೀರಿ ಎಂದು ಇನ್ನೂ ಯೋಚಿಸುತ್ತಿದ್ದೀರಾ?’ ಎಂದು ಬಿಜೆಪಿ ನಾಯಕತ್ವವನ್ನು ಕಟುವಾಗಿ ಟೀಕಿಸಿದ್ದಾರೆ.

ರೈತರ ಮಾತುಗಳನ್ನು ಕೇಳುವಂತೆ ಬಿಜೆಪಿ ಸರ್ಕಾರವನ್ನು ಒತ್ತಾಯಿಸಿರುವ ಜೋಶಿ, ‘ಬಿಜೆಪಿ ನಾಯಕರು ಉನ್ನತ ಮಟ್ಟದಲ್ಲಿ ಚರ್ಚಿಸಿ ಸಮಸ್ಯೆಯನ್ನು ಪರಿಹರಿಸಬಹುದು ಎಂದು ರೈತರು ಭಾವಿಸುತ್ತಾರೆ. ಆದರೆ ನಮ್ಮ ಮಾತನ್ನು ರಾಜ್ಯಾಧ್ಯಕ್ಷರೇ ಕೇಳುವುದಿಲ್ಲ ಎಂಬುದು ರೈತರಿಗೆ ತಿಳಿದಿಲ್ಲ, ಎಂದು ಪಕ್ಷದ ನಾಯಕತ್ವದ ವಿರುದ್ಧ ಕಿಡಿಕಾರಿದ್ದಾರೆ.

ರೈತರು ದೆಹಲಿ ಗಡಿಗಳಲ್ಲಿ ಬೀಡುಬಿಟ್ಟು ಪ್ರತಿಭಟನೆ ಆರಂಭಿಸಿ ಆರು ತಿಂಗಳು ಕಳೆದಿವೆ. ನಮ್ಮ ಕುಟುಂಬದ ಸದಸ್ಯರು, ಸ್ನೇಹಿತರು ಸೇರಿದಂತೆ ಸುಮಾರು 500 ಜನ ರೈತರು ಹುತಾತ್ಮರಾಗಿದ್ದಾರೆ. ಇದರ ನೋವು ನಮ್ಮೆಲ್ಲರಿಗೂ ಇರಬೇಕು ಎಂದು ಜೋಶಿ ತಿಳಿಸಿದ್ದಾರೆ.

ಕೃಪೆ: ಅನ್ನದ ಋಣ


ಇದನ್ನೂ ಓದಿ: ಪೊಲೀಸ್ ಠಾಣೆಗೆ ಮುತ್ತಿಗೆ ಹಾಕಿದ ರೈತರು: ತಪ್ಪೊಪ್ಪಿಕೊಂಡು ಕ್ಷಮೆಯಾಚಿಸಿದ ಜೆಜೆಪಿ ಶಾಸಕ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹೊಸ ಹಿಂದೂ ದೇವಾಲಯಕ್ಕೆ ಭೂಮಿ ಮಂಜೂರು ಮಾಡಿದ ಸಿಂಗಾಪುರ ಆಡಳಿತ

ಸಿಂಗಪುರದಲ್ಲಿ ಹೆಚ್ಚುತ್ತಿರುವ ಹಿಂದೂ ಸಮುದಾಯದ ಅಗತ್ಯಗಳನ್ನು ಪೂರೈಸಲು ಸಿಂಗಾಪುರ ಸರ್ಕಾರವು ನಗರ-ರಾಜ್ಯದ ಯಿಶುನ್ ಅವೆನ್ಯೂ 3 ರಲ್ಲಿ ಹೊಸ ಹಿಂದೂ ದೇವಾಲಯವನ್ನು ನಿರ್ಮಿಸಲು ಭೂಮಿ ಮಂಜೂರು ಮಾಡಿದೆ. ಏಪ್ರಿಲ್ 1 ರ ಬುಧವಾರದ ಮಾಧ್ಯಮ...

ಕೇರಳ ಚುನಾವಣೆಗೆ ಮುನ್ನ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಗೆ ಬೆಂಬಲ ಘೋಷಿಸಿದ ‘ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ’

ಎಡ ಸರ್ಕಾರ ಕೈಗೊಂಡ ಅಭಿವೃದ್ಧಿ ಉಪಕ್ರಮಗಳು ಆದಿವಾಸಿ, ದಲಿತ ಮತ್ತು ಇತರ ಅಂಚಿನಲ್ಲಿರುವ ಸಮುದಾಯಗಳನ್ನು ಬದಿಗಿಟ್ಟಿವೆ ಎಂದು ಆರೋಪಿಸಿ, ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ (ಎಡಿಎಫ್) ಬುಧವಾರ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಪ್ರಜಾಸತ್ತಾತ್ಮಕ ರಂಗ...

ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ತನಿಖೆಗೆ ಪೂರ್ವಾನುಮತಿ ನೀಡಲು ಹೈಕೋರ್ಟ್ ನಿರ್ದೇಶನ

ಪರಿಸರ ಸ್ನೇಹಿ ಬಟ್ಟೆ ಚೀಲಗಳ ಖರೀದಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳಿಗೆ ಸಂಬಂಧಿಸಿದಂತೆ, ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಅನುಮತಿಸುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ ಎಂದು ವರದಿಯಾಗಿದೆ....

ನ್ಯಾಯಾಂಗ ಅಧಿಕಾರಿಗಳನ್ನು ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಎಸ್‌ಐಆರ್ ಕಾರ್ಯದಲ್ಲಿ ತೊಡಗಿರುವ ನ್ಯಾಯಾಂಗ ಅಧಿಕಾರಿಗಳನ್ನು 'ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ' ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ದೂಷಿಸಿದ್ದಾರೆ. ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಬುಧವಾರ ಪ್ರತಿಭಟನಾಕಾರರು ಹಲವಾರು...

ಎಎಪಿಯ ರಾಜ್ಯಸಭಾ ಉಪನಾಯಕ ಸ್ಥಾನದಿಂದ ರಾಘವ್ ಚಡ್ಡಾಗೆ ಕೋಕ್, ಅಶೋಕ್ ಮಿತ್ತಲ್ ಗೆ ಅಧಿಕಾರ: ವರದಿ

ಮಹತ್ವದ ಬೆಳವಣಿಗೆಯೊಂದರಲ್ಲಿ, ಆಮ್ ಆದ್ಮಿ ಪಕ್ಷ (ಎಎಪಿ) ರಾಜ್ಯಸಭೆಯಲ್ಲಿ ರಾಘವ್ ಚಡ್ಡಾ ಅವರನ್ನು ಉಪನಾಯಕ ಹುದ್ದೆಯಿಂದ ಬದಲಾಯಿಸಲು ಮುಂದಾಗಿದ್ದು, ಇದು ಪಕ್ಷದೊಳಗಿನ ಆಂತರಿಕ ಬಿರುಕು ಉಂಟಾಗಿರುವ ಲಕ್ಷಣಗಳನ್ನು ಸೂಚಿಸುತ್ತದೆ. ಮೇಲ್ಮನೆಯಲ್ಲಿ ಪಕ್ಷದ ಹೊಸ...

ಜಾರ್ಖಂಡ್| ವಾಮಾಚಾರ ಆಚರಣೆಗೆ ಅಪ್ರಾಪ್ತ ಬಾಲಕಿ ಬಲಿ; ತಾಯಿ ಸೇರಿದಂತೆ ಮೂವರ ಬಂಧನ

ಜಾರ್ಖಂಡ್‌ನ ಹಜಾರಿಬಾಗ್ ಬಳಿಕ ಕುಸುಂಭ ಗ್ರಾಮದಲ್ಲಿ ಬಲಿದಾನದ ಆಚರಣೆಯಲ್ಲಿ ಕತ್ತು ಹಿಸುಕಿ ಕೊಂದ ಹದಿಹರೆಯದ ಹುಡುಗಿಯ 35 ವರ್ಷದ ತಾಯಿಯನ್ನು ಪೊಲೀಸರು ಬುಧವಾರ ಬಂಧಿಸಿದ್ದಾರೆ. ಜೊತೆಗೆ, ಮಾಂತ್ರಿಕ ಮತ್ತು ಓರ್ವ ವ್ಯಕ್ತಿಯನ್ನು ಬಂಧಿಸಿರುವುದಾಗಿ...

ಪ. ಬಂಗಾಳ | ಎಸ್‌ಐಆರ್ ಕರ್ತವ್ಯದಲ್ಲಿದ್ದ ನ್ಯಾಯಾಧೀಶರನ್ನು ಒತ್ತೆಯಾಳಾಗಿಟ್ಟುಕೊಂಡ ಆರೋಪ : ತೀವ್ರ ಕಳವಳ ವ್ಯಕ್ತಪಡಿಸಿದ ಸುಪ್ರೀಂ ಕೋರ್ಟ್, ಕೇಂದ್ರ ಪಡೆಗಳ ನಿಯೋಜನೆಗೆ ನಿರ್ದೇಶನ

ನಿನ್ನೆ (ಏ.1) ಮಧ್ಯಾಹ್ನದಿಂದ ಮಧ್ಯರಾತ್ರಿಯವರೆಗೆ ಪಶ್ಚಿಮ ಬಂಗಾಳದಲ್ಲಿ ನಡೆದ ಪ್ರತಿಭಟನೆಯ ವೇಳೆ, ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಕಾರ್ಯದಲ್ಲಿ ತೊಡಗಿದ್ದ ನ್ಯಾಯಾಂಗ ಅಧಿಕಾರಿಗಳನ್ನು ಪ್ರತಿಭಟನಾಕಾರರು ಒತ್ತೆಯಾಳಾಗಿ ಇರಿಸಿಕೊಂಡಿದ್ದರು ಎಂದು ಆರೋಪಿಸಲಾಗಿದೆ....

ಉತ್ತರ ಪ್ರದೇಶ| ಮುಸ್ಲಿಂ ಯುವಕನನ್ನು ಥಳಿಸಿ ದರೋಡೆ ಮಾಡಿದ ಗುಂಪು; ಹಿಂದೂ ಶ್ಲೋಕ ಪಠಿಸುವಂತೆ ಒತ್ತಾಯ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯಲ್ಲಿ ಹಿಂದುತ್ವವಾದಿ ಗುಂಪೊಂದು ಮುಸ್ಲಿಂ ಯುವಕನನ್ನು ನಿರ್ದಯವಾಗಿ ಥಳಿಸಿ, ಅವಮಾನಿಸಿ, ಹಿಂದುತ್ವ ಶ್ಲೋಕಗಳನ್ನು ಪಠಿಸುವಂತೆ ಒತ್ತಾಯಿಸಿದೆ ಎಂದು ಪೊಲೀಸರನ್ನು ಉಲ್ಲೇಖಿಸಿ 'ಕ್ಲಾರಿಯನ್ ಇಂಡಿಯಾ' ವರದಿ ಮಾಡಿದೆ. ಮಾರ್ಚ್ 28...

‘ಇರಾನ್‌ಗೆ ಅಮೆರಿಕನ್ನರ ವಿರುದ್ಧ ಯಾವುದೇ ದ್ವೇಷವಿಲ್ಲ’: ಅಮೆರಿಕದ ಸಾರ್ವಜನಿಕರಿಗೆ ‘ಮುಕ್ತ ಪತ್ರ’ ಬರೆದ ಇರಾನ್ ಅಧ್ಯಕ್ಷ ಪೆಜೆಶ್ಕಿಯಾನ್

ಪಶ್ಚಿಮ ಏಷ್ಯಾ ಸಂಘರ್ಷ ತೀವ್ರವಾಗುತ್ತಿರುವಾಗಲೇ ಅಮೆರಿಕ ಸಾರ್ವಜನಿಕರನ್ನು ಉದ್ದೇಶಿಸಿ ದೀರ್ಘ ಪತ್ರ ಬರೆದಿರುವ ಇರಾನ್ ಅಧ್ಯಕ್ಷ ಮಸೌದ್ ಪಜೆಶ್ಕಿಯಾನ್, ಅಮೆರಿಕನ್ನರ ವಿರುದ್ಧ ಇರಾನ್ ಯಾವುದೇ ದ್ವೇಷವನ್ನು ಹೊಂದಿಲ್ಲ ಎಂದು ಹೇಳಿದ್ದಾರೆ. ಆದರೆ  ಜಾಗತಿಕ ನಿರೂಪಣೆಗಳಲ್ಲಿ...

ಬಿಜು ಪಟ್ನಾಯಕ್ ವಿರುದ್ಧ ಹೇಳಿಕೆ : ಬೇಷರತ್ ಕ್ಷಮೆಯಾಚಿಸಿದ ಬಿಜೆಪಿ ಸಂಸದ ನಿಶಿಕಾಂತ್ ದುಬೆ

ಒಡಿಶಾದ ಮಾಜಿ ಮುಖ್ಯಮಂತ್ರಿ ಬಿಜು ಪಟ್ನಾಯಕ್ ಅವರ ಕುರಿತು ನೀಡಿದ ಹೇಳಿಕೆ ವಿರುದ್ದ ದೇಶದಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾದ ಹಿನ್ನೆಲೆ, ಬಿಜೆಪಿ ಸಂಸದ ನಿಶಿಕಾಂತ್ ದುಬೆ ಬುಧವಾರ (ಏ.1) ಬೇಷರತ್ ಕ್ಷಮೆಯಾಚಿಸಿದ್ದಾರೆ. "ಬಿಜು ಬಾಬು...