Homeಮುಖಪುಟರೈತ ಹೋರಾಟದಿಂದ ನಾವು ಸ್ಥಳೀಯ ಚುನಾವಣೆಯಲ್ಲಿ ಕೆಟ್ಟದಾಗಿ ಸೋತಿದ್ದೇವೆ: ಪಂಜಾಬ್ ಬಿಜೆಪಿ ಮುಖಂಡ ಅನಿಲ್ ಜೋಶಿ

ರೈತ ಹೋರಾಟದಿಂದ ನಾವು ಸ್ಥಳೀಯ ಚುನಾವಣೆಯಲ್ಲಿ ಕೆಟ್ಟದಾಗಿ ಸೋತಿದ್ದೇವೆ: ಪಂಜಾಬ್ ಬಿಜೆಪಿ ಮುಖಂಡ ಅನಿಲ್ ಜೋಶಿ

ನಿಮ್ಮನ್ನು ನಂಬಿದವರ ಸಮಸ್ಯೆಗಳನ್ನು ನಿಭಾಯಿಸಲು ನಿಮಗೆ ಸಾಧ್ಯವಾಗದಿದ್ದರೆ, ನೀವು ರಾಜಕೀಯದಲ್ಲಿ ಬದುಕುಳಿಯುತ್ತೀರಿ ಎಂದು ಇನ್ನೂ ಯೋಚಿಸುತ್ತಿದ್ದೀರಾ?’ ಎಂದು ಬಿಜೆಪಿ ನಾಯಕತ್ವವನ್ನು ಕಟುವಾಗಿ ಟೀಕಿಸಿದ್ದಾರೆ.

- Advertisement -
- Advertisement -

`ರೈತರ ನೋವನ್ನು ಅರ್ಥಮಾಡಿಕೊಳ್ಳುವಲ್ಲಿ ನಮ್ಮ ಪಕ್ಷದ ನಾಯಕತ್ವವು ವಿಫಲವಾಗಿದೆ. ಆದ್ದರಿಂದಲೇ ಕೃಷಿ ಕಾನೂನುಗಳ ಬಗ್ಗೆ ಒಮ್ಮತ ಮೂಡಿಸಲು ಸಾಧ್ಯವಾಗಿಲ್ಲ’ ಎಂದು ಮಾಜಿ ಕೇಂದ್ರ ಸಚಿವ ಹಾಗೂ ಬಿಜೆಪಿ ಮುಖಂಡ ಅನಿಲ್‌ ಜೋಶಿ ಕೇಂದ್ರ ಮತ್ತು ಪಂಜಾಬ್ ರಾಜ್ಯ ಬಿಜೆಪಿ ನಾಯಕತ್ವವನ್ನು ಟೀಕಿಸಿದ್ದಾರೆ.

ಅಮೃತಸರ ಉತ್ತರ ವಿಧಾನಸಭೆಯಿಂದ ಎರಡು ಬಾರಿ ಶಾಸಕರಾಗಿದ್ದ ಜೋಶಿಯವರು, ‘ತಮ್ಮ ಪಕ್ಷದ ಹಿರಿಯ ನಾಯಕರು ಪಂಜಾಬ್‌ ರಾಜಕೀಯದಲ್ಲಿ ಜೀವಂತವಾಗಿ ಇರಬೇಕಾದರೆ ‘ಹಠ ಯೋಗ’ವನ್ನು ದೂರವಿಡಬೇಕು ಮತ್ತು ರೈತರ ವಿಷಯದಲ್ಲಿ ಪ್ರಾಮಾಣಿಕತೆ ತೋರಿಸಬೇಕು’ ಎಂದಿದ್ದಾರೆ ಎಂದು ಟೈಮ್ಸ್ ಆಫ್ ಇಂಡಿಯಾ ವರದಿ ಮಾಡಿದೆ.

`ರೈತರ ಆಂದೋಲನದಿಂದಾಗಿ ನಾವು ಪಂಜಾಬ್‌ನ ಪುರಸಭೆ ಚುನಾವಣೆಗಳಲ್ಲಿ ಕೆಟ್ಟದಾಗಿ ಸೋತಿದ್ದೇವೆ. ಅವರು ನಮಗೆ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ಅವಕಾಶ ನೀಡುತ್ತಾರೆ ಎಂದು ನೀವು ಭಾವಿಸುತ್ತೀರಾ? ಕಳೆದ ಆರು ತಿಂಗಳುಗಳಿಂದ ದೆಹಲಿ ಗಡಿಗಳಲ್ಲಿ ಭದ್ರವಾಗಿ ನೆಲೆಯೂರಿರುವ ರೈತರು ಈಗ ನಮಗೆ ಬಗ್ಗುತ್ತಾರೆ ಎಂದು ನೀವು ಭಾವಿಸುತ್ತೀರಾ? ನಿಮ್ಮನ್ನು ನಂಬಿದವರ ಸಮಸ್ಯೆಗಳನ್ನು ನಿಭಾಯಿಸಲು ನಿಮಗೆ ಸಾಧ್ಯವಾಗದಿದ್ದರೆ, ನೀವು ರಾಜಕೀಯದಲ್ಲಿ ಬದುಕುಳಿಯುತ್ತೀರಿ ಎಂದು ಇನ್ನೂ ಯೋಚಿಸುತ್ತಿದ್ದೀರಾ?’ ಎಂದು ಬಿಜೆಪಿ ನಾಯಕತ್ವವನ್ನು ಕಟುವಾಗಿ ಟೀಕಿಸಿದ್ದಾರೆ.

ರೈತರ ಮಾತುಗಳನ್ನು ಕೇಳುವಂತೆ ಬಿಜೆಪಿ ಸರ್ಕಾರವನ್ನು ಒತ್ತಾಯಿಸಿರುವ ಜೋಶಿ, ‘ಬಿಜೆಪಿ ನಾಯಕರು ಉನ್ನತ ಮಟ್ಟದಲ್ಲಿ ಚರ್ಚಿಸಿ ಸಮಸ್ಯೆಯನ್ನು ಪರಿಹರಿಸಬಹುದು ಎಂದು ರೈತರು ಭಾವಿಸುತ್ತಾರೆ. ಆದರೆ ನಮ್ಮ ಮಾತನ್ನು ರಾಜ್ಯಾಧ್ಯಕ್ಷರೇ ಕೇಳುವುದಿಲ್ಲ ಎಂಬುದು ರೈತರಿಗೆ ತಿಳಿದಿಲ್ಲ, ಎಂದು ಪಕ್ಷದ ನಾಯಕತ್ವದ ವಿರುದ್ಧ ಕಿಡಿಕಾರಿದ್ದಾರೆ.

ರೈತರು ದೆಹಲಿ ಗಡಿಗಳಲ್ಲಿ ಬೀಡುಬಿಟ್ಟು ಪ್ರತಿಭಟನೆ ಆರಂಭಿಸಿ ಆರು ತಿಂಗಳು ಕಳೆದಿವೆ. ನಮ್ಮ ಕುಟುಂಬದ ಸದಸ್ಯರು, ಸ್ನೇಹಿತರು ಸೇರಿದಂತೆ ಸುಮಾರು 500 ಜನ ರೈತರು ಹುತಾತ್ಮರಾಗಿದ್ದಾರೆ. ಇದರ ನೋವು ನಮ್ಮೆಲ್ಲರಿಗೂ ಇರಬೇಕು ಎಂದು ಜೋಶಿ ತಿಳಿಸಿದ್ದಾರೆ.

ಕೃಪೆ: ಅನ್ನದ ಋಣ


ಇದನ್ನೂ ಓದಿ: ಪೊಲೀಸ್ ಠಾಣೆಗೆ ಮುತ್ತಿಗೆ ಹಾಕಿದ ರೈತರು: ತಪ್ಪೊಪ್ಪಿಕೊಂಡು ಕ್ಷಮೆಯಾಚಿಸಿದ ಜೆಜೆಪಿ ಶಾಸಕ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

“50 ಗ್ರಾಂ ಡ್ರಗ್ಸ್ ಇಟ್ಟು ಕೇಸ್ ಹಾಕ್ತೀನಿ!”: ಪ್ರತಿಭಟನಾ ನಿರತ ವಿದ್ಯಾರ್ಥಿಗಳಿಗೆ ಮಾದಕದ್ರವ್ಯ ಪ್ರಕರಣದ ಬೆದರಿಕೆಯೊಡ್ಡಿದ ಮುಂಬೈ ಪೊಲೀಸ್!

ಮುಂಬೈ: ದೇಶಾದ್ಯಂತ ವಿದ್ಯಾರ್ಥಿ ಸಮುದಾಯದ ಆಕ್ರೋಶ ತೀವ್ರಗೊಳ್ಳುತ್ತಿರುವ ಬೆನ್ನಲ್ಲೇ, ತಮ್ಮ ಹಕ್ಕುಗಳಿಗಾಗಿ ಧ್ವನಿ ಎತ್ತುತ್ತಿರುವ ಯುವಜನರನ್ನು ಹತೋಟಿಗೆ ತರಲು ಪೊಲೀಸರು ಯಾವ ಮಟ್ಟದ ದಮನಕಾರಿ ಮಾರ್ಗಗಳನ್ನು ತುಳಿಯುತ್ತಿದ್ದಾರೆ ಎಂಬುದಕ್ಕೆ ಮುಂಬೈನಲ್ಲಿ ನಡೆದ ಘಟನೆಯೊಂದು...

ಬಿಡದಿ ಟೌನ್‌ಶಿಪ್: 80% ರೈತರ ಒಪ್ಪಿಗೆ ಇದೆ ಎಂಬ ವಾದ ಸಾಬೀತುಪಡಿಸಿ – ಸರ್ಕಾರಕ್ಕೆ ಸಂಯುಕ್ತ ಹೋರಾಟ ಸವಾಲು

ಬಿಡದಿ ಟೌನ್‌ಶಿಪ್ ಯೋಜನೆಗೆ ಭೂಮಿ ನೀಡಲು ಉದ್ದೇಶಿತ ಪ್ರದೇಶದ ಶೇಕಡಾ 80 ರಷ್ಟು ರೈತರು ಒಪ್ಪಿದ್ದಾರೆ ಎಂಬ ಸರ್ಕಾರದ ವಾದಕ್ಕೆ ಯಾವುದೇ ವಾಸ್ತವಿಕ ಆಧಾರವಿಲ್ಲ. ಸರ್ಕಾರಕ್ಕೆ ಧೈರ್ಯವಿದ್ದರೆ ತನ್ನ ಈ ಹೇಳಿಕೆಯನ್ನು ಜನರ...

ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯ: ವಿಚಾರಣೆ ತಿರಸ್ಕರಿಸಿದ ಸುಪ್ರೀಂ; “ವಿಡಿಯೋ ನೋಡಲು ನಮಗೆ ಆಸಕ್ತಿಯೂ ಇಲ್ಲ, ಸಮಯವೂ ಇಲ್ಲ” ಎಂದ ನ್ಯಾಯಮೂರ್ತಿ ಸೂರ್ಯಕಾಂತ್

ನವದೆಹಲಿ: ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಶಾಂತಿಯುತವಾಗಿ ಹೋರಾಡುತ್ತಿದ್ದ ಯುವ ಸಮೂಹದ ಮೇಲೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯದ ವಿರುದ್ಧ ನ್ಯಾಯದ ನಿರೀಕ್ಷೆಯಲ್ಲಿದ್ದ ವಿದ್ಯಾರ್ಥಿಗಳಿಗೆ ದೇಶದ ಅತ್ಯುನ್ನತ ನ್ಯಾಯಾಲಯದಿಂದ...

ರಾಹುಲ್ ಗಾಂಧಿ ವಿದ್ಯಾರ್ಥಿಗಳನ್ನು ‘ರಾಜಕೀಯ ದಾಳ’ವಾಗಿ ಬಳಸುತ್ತಿದ್ದಾರೆ ಎಂದ ಧರ್ಮೇಂದ್ರ ಪ್ರಧಾನ್ ವಿರುದ್ಧ ವ್ಯಾಪಕ ಆಕ್ರೋಶ

ನವದೆಹಲಿ: ದೇಶಾದ್ಯಂತ ನೀಟ್ (NEET) ಪರೀಕ್ಷೆಯ ಅಕ್ರಮಗಳು, ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಶಿಕ್ಷಣ ಇಲಾಖೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ವಿದ್ಯಾರ್ಥಿಗಳು ಮತ್ತು ವಿರೋಧ ಪಕ್ಷಗಳು ತೀವ್ರ ಪ್ರತಿಭಟನೆ ನಡೆಸುತ್ತಿದ್ದು, ಶಿಕ್ಷಣ ಸಚಿವ ಧರ್ಮೇಂದ್ರ...

ಸಿಜೆಪಿ ಪ್ರತಿಭಟನಾಕಾರರ ಮೇಲೆ ಪೆಲೆಟ್ ಗನ್ ಬಳಕೆ, ವಿದ್ಯುತ್ ಲಾಠಿ ಪ್ರಹಾರ: ಆರೋಪ ನಿರಾಕರಿಸಿದ ಪೊಲೀಸರು

ಸೋಮವಾರ (ಜುಲೈ 20) ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಕರೆ ನೀಡಿದ್ದ ಸಂಸತ್ ಚಲೋ ಮೆರವಣಿ ಸಂದರ್ಭದಲ್ಲಿ ನಡೆದ ಪೊಲೀಸರ ದೌರ್ಜನ್ಯದಲ್ಲಿ ಗಾಯಗೊಂಡ 80 ಪ್ರತಿಭಟನಾಕಾರರಲ್ಲಿ ಕನಿಷ್ಠ ಒಬ್ಬರಿಗೆ ಪೆಲೆಟ್ ಗನ್ ಗಾಯಗಳಾಗಿವೆ...

ಪ್ರತಿಭಟನಾನಿರತ ಮಹಿಳೆಯ ಕೆನ್ನೆಗೆ ಹೊಡೆದ ದೆಹಲಿ ಪೊಲೀಸ್ ಅಧಿಕಾರಿ ಸಂದೀಪ್ ಲಂಬಾ: ವಿಡಿಯೋ ವೈರಲ್ ನಂತರ ವ್ಯಾಪಕ ಟೀಕೆ

ದೆಹಲಿ: ಶಾಂತಿಯುತವಾಗಿ ತಮ್ಮ ಹಕ್ಕುಗಳಿಗಾಗಿ ಹೋರಾಡುತ್ತಿದ್ದ ಪ್ರತಿಭಟನಾಕಾರರ ಮೇಲೆ ದೆಹಲಿ ಪೊಲೀಸರು ನಡೆಸಿದ ಕ್ರೂರ ದಮನ ಕಾರ್ಯಾಚರಣೆಯ ಭೀಕರ ಮುಖವಾಡವೊಂದು ಮತ್ತೆ ಜಗಜ್ಜಾಹೀರಾಗಿದೆ. ಸೋಮವಾರ ಸಂಸತ್ತಿನ ಮೆರವಣಿಗೆಯಲ್ಲಿ ಭಾಗವಹಿಸಿದ್ದ ಪ್ರತಿಭಟನಾಕಾರರನ್ನು ಹತ್ತಿಕ್ಕುವ ನೆಪದಲ್ಲಿ,...

‘ಪೊಲೀಸರನ್ನು ನಿಯಂತ್ರಿಸದಿದ್ದರೆ ಜರ್ಮನಿಯ ನಾಜಿಗಳಂತೆ ಆಗಬಹುದು’: ದಲಿತ ವ್ಯಕ್ತಿಯ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಪಾಟ್ನಾ ಹೈಕೋರ್ಟ್ ಕಳವಳ

ದಲಿತ ವ್ಯಕ್ತಿಯೊಬ್ಬರ ಜಾತಿ ತಿಳಿದ ನಂತರ ಅವರ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಬಿಹಾರದ ಮಾಜಿ ಪೊಲೀಸ್ ಅಧಿಕಾರಿಯ ವಿರುದ್ಧ ತಕ್ಷಣವೇ ಎಫ್‌ಐಆರ್ (FIR) ದಾಖಲಿಸುವಂತೆ ಪಾಟ್ನಾ ಹೈಕೋರ್ಟ್ ನಿರ್ದೇಶಿಸಿದೆ....

“ಎಷ್ಟೊಂದು ದುರಹಂಕಾರ!”: ಜೆ.ಪಿ.ನಡ್ಡಾ ಹೇಳಿಕೆಗೆ ಕಪಿಲ್ ಸಿಬಲ್ ತೀವ್ರ ಆಕ್ಷೇಪ; ಪ್ರತಿಭಟನಾನಿರತ ಸಿಜೆಪಿ ಬೆಂಬಲಿಸಿ ವೀಡಿಯೋ ಸಂದೇಶ

ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಕ್ರಾಂತಿಕಾರಿ ಜಿರಳೆ ಜನತಾ ಪಕ್ಷ (ಸಿಜೆಪಿ) ನಡೆಸುತ್ತಿರುವ ವಿದ್ಯಾರ್ಥಿ ಪ್ರತಿಭಟನೆಯ ವಿಚಾರದಲ್ಲಿ ಕೇಂದ್ರ ಸರ್ಕಾರದ ನಡೆಗೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ನಡುವೆ ಕೇಂದ್ರ ಸಚಿವ ಜೆ.ಪಿ....

ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ: ಮೋದಿ-ಅಮಿತ್ ಶಾ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ 'ಸಂಸತ್ ಚಲೋ' ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಕಾಂಗ್ರೆಸ್ ನಾಯಕ ರಾಹುಲ್...

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...