Homeಮುಖಪುಟ"ನಾವು ರಾಜಕೀಯದೊಂದಿಗೆ ಧರ್ಮವನ್ನು ಬೆರೆಸಿ ತಪ್ಪು ಮಾಡಿದ್ದೆವು": ಉದ್ಧವ್‌ ಠಾಕ್ರೆ

“ನಾವು ರಾಜಕೀಯದೊಂದಿಗೆ ಧರ್ಮವನ್ನು ಬೆರೆಸಿ ತಪ್ಪು ಮಾಡಿದ್ದೆವು”: ಉದ್ಧವ್‌ ಠಾಕ್ರೆ

"ನಮ್ಮ ಸರ್ಕಾರ ರಿಕ್ಷಾದಲ್ಲಿ ಪ್ರಯಾಣಿಸುವವರಿಗಾಗಿರುತ್ತದೆ ಹೊರತು ಬುಲೆಟ್ ರೈಲುಗಳಲ್ಲಿ ಪ್ರಯಾಣಿಸುವವರಿಗೆ ಅಲ್ಲ" ಎಂದು ಅವರು ಕೇಂದ್ರದಲ್ಲಿನ ಆಡಳಿತಾರೂಢ ಬಿಜೆಪಿಗೆ ಟಾಂಗ್‌ ನೀಡಿದ್ದಾರೆ.

- Advertisement -
- Advertisement -

ಧರ್ಮವನ್ನು ರಾಜಕೀಯದೊಂದಿಗೆ ಬೆರೆಸಿದ್ದಿದು ಮತ್ತು ಬಿಜೆಪಿಯೊಂದಿಗೆ ಸೇರಿಕೊಂಡಿದ್ದು ತಮ್ಮ ಪಕ್ಷ ಶಿವಸೇನೆ ಮಾಡಿದ ತಪ್ಪು ಎಂದು ಮಹಾರಾಷ್ಟ್ರದ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಹೇಳಿದ್ದಾರೆ. ಇದು ಹಿಂದೂತ್ವ ಪರ ರಾಜಕಾರಣಕ್ಕೆ ಹೆಸರುವಾಸಿಯಾದ ಫೈರ್‌ಬ್ರಾಂಡ್ ಶಿವಸೇನೆಯ ಮುಖ್ಯಸ್ಥರ ಗಮನಾರ್ಹವಾದ ಹೇಳಿಕೆಯಾಗಿದ್ದು ದೇಶದ್ಯಂತ ಚರ್ಚೆಗೆ ಗ್ರಾಸವಾಗಿದೆ.

ತಮ್ಮ ರಾಜಕೀಯ ಜೀವನದಲ್ಲಿ ಮೊದಲ ಬಾರಿಗೆ ಆಡಳಿತಾತ್ಮಕ ಪಾತ್ರವನ್ನು ವಹಿಸಿಕೊಂಡ ನಂತರ ಕಳೆದ ವಾರ ಮಹಾರಾಷ್ಟ್ರ ವಿಧಾನಸಭೆಯಲ್ಲಿ ಅವರು ಈ ಹೇಳಿಕೆ ನೀಡಿದ್ದರು. ಕಾಂಗ್ರೆಸ್ ಮತ್ತು ಎನ್‌ಸಿಪಿಯೊಂದಿಗೆ ಸೇರಿಕೊಂಡ ಬಿಜೆಪಿ ಪಕ್ಷದ ಸಿದ್ಧಾಂತಕ್ಕೆ ಬೆನ್ನು ತಿರುಗಿಸಿದ್ದಕ್ಕೆ ಖಂಡಿಸಿದ ಮಾಜಿ ಮಿತ್ರ ದೇವೇಂದ್ರ ಫಡ್ನವಿಸ್‌ಗೆ ಪ್ರತಿಕ್ರಿಯಿಸುತ್ತಾ ಅವರು ಈ ಮೇಲಿನ ಮಾತುಗಳನ್ನಾಡಿದ್ದಾರೆ.

ಮಮತಾ ಬ್ಯಾನರ್ಜಿ, ರಾಮ್ ವಿಲಾಸ್ ಪಾಸ್ವಾನ್ ಮತ್ತು ಪಿಡಿಪಿಯಂತಹ ವಿರುದ್ಧವಾದ ಸಿದ್ಧಾಂತಗಳ ಪಕ್ಷಗಳೊಂದಿಗೆ ಬಿಜೆಪಿ ಮೈತ್ರಿ ಮಾಡಿಕೊಂಡಿದ್ದನ್ನು ನೆನಪಿಸುತ್ತಾ, ಉದ್ಧವ್ ಠಾಕ್ರೆ ಅವರು ಧರ್ಮ ಮತ್ತು ರಾಜಕೀಯವನ್ನು ಬೆರೆಸಿ ಬಿಜೆಪಿಯೊಂದಿಗೆ ಉಳಿಯುವುದು ತಪ್ಪು ಎಂದು ಹೇಳಿದ್ದರು.

“ನೀವು (ದೇವೇಂದ್ರ ಫಡ್ನವೀಸ್) ಜನರ ಆದೇಶದ ಬಗ್ಗೆ ಮಾತನಾಡಿದ್ದೀರಿ. ಆದರೆ ಇದು ರಾಜಕೀಯ. ನಾವು ರಾಜಕೀಯ ಮತ್ತು ಧರ್ಮವನ್ನು ಬೆರೆಸಿ ಬಹುಶಃ ತಪ್ಪು ಮಾಡಿದ್ದೇವೆ. ಆದರೆ ಆ ಸಮಯದಲ್ಲಿ ನಾವು ‘ಧರ್ಮ’ದ ಅನುಯಾಯಿಗಳು ಸಹ ಜೂಜಿನಲ್ಲಿ ಸೋತಿದ್ದೇವೆ ಎಂಬುದನ್ನು ಮರೆತಿದ್ದೇವೆ (ಉಲ್ಲೇಖ ಮಹಾಭಾರತಕ್ಕೆ). ರಾಜಕೀಯವು ಒಂದು ಜೂಜು. ನೀವು ಧರ್ಮವನ್ನು ಸರಿಯಾದ ಸ್ಥಳದಲ್ಲಿ ಇಟ್ಟುಕೊಳ್ಳಬೇಕು. ನಾವು ಇದನ್ನು ಮರೆತಿದ್ದೇವೆ. ನಾವು ಧರ್ಮ ಮತ್ತು ರಾಜಕೀಯವನ್ನು ಬೆರೆಸಲು ಪ್ರಾರಂಭಿಸಿದ್ದೇವೆ ಮತ್ತು ಅದಕ್ಕಾಗಿ ನಾವು ಯಶಸ್ವಿಯಾಗಿದ್ದೇವೆ. ನಾವು 25 ವರ್ಷಗಳ ಕಾಲ ಒಟ್ಟಿಗೆ ಇದ್ದೆವು ಮತ್ತು ನಾವು ಹಿಂದುತ್ವದ ಕಾರಣದಿಂದಾಗಿ ಉಳಿದಿದ್ದೇವೆ. ನಾವು ಧರ್ಮವನ್ನು ಬದಲಾಯಿಸಿಲ್ಲ. ನಾವು ನಿನ್ನೆ, ಇಂದು ಮತ್ತು ನಾಳೆ ಹಿಂದೂಗಳಾಗಿದ್ದೆವು. ಆದರೆ ನಿಮ್ಮ ಬಗ್ಗೆ ಏನು? ಮಮತಾ ಬ್ಯಾನರ್ಜಿ, ರಾಮ್‌ವಿಲಾಸ್ ಪಾಸ್ವಾನ್ ಮತ್ತು ಪಿಡಿಪಿಯಂತಹ ವಿರುದ್ಧ ಸಿದ್ಧಾಂತಗಳಿಂದ ನೀವು ಎಲ್ಲರೊಂದಿಗೆ ಮೈತ್ರಿ ಮಾಡಿಕೊಂಡಿದ್ದೀರಿ.” ಎಂದು ಉದ್ಧವ್‌ ಹೇಳಿದ್ದರು.

“ಧರ್ಮದ ಬಗ್ಗೆ ಕೇವಲ ಮಾತನಾಡುವುದು ಮಾತ್ರವಲ್ಲ, ಅದನ್ನು ಅನುಸರಿಸಬೇಕು. ಧರ್ಮವು ಪುಸ್ತಕಗಳಲ್ಲಿ ಮಾತ್ರವಲ್ಲ, ಅದು ನಿಜ ಜೀವನದಲ್ಲಿ ಉಳಿಯಬೇಕು” ಎಂದು ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಪುನರುಚ್ಚರಿಸಿದರು.

ನಂತರ ಅವರು “ದೇವೇಂದ್ರಜಿ, ಕಾಂಗ್ರೆಸ್‌ನೊಂದಿಗೆ ಸರ್ಕಾರ ರಚಿಸುವುದಿಲ್ಲ ಎಂದು ನಾನು ಬಾಳಾಸಾಹೇಬರಿಗೆ ಭರವಸೆ ನೀಡಿದ್ದೇ ಎಂದು ನೀವು ಹೇಳುತ್ತಿದ್ದೀರಿ. ಇಲ್ಲ ನಾನು ಅಂತಹ ಭರವಸೆ ನೀಡಿರಲಿಲ್ಲ. ಆದರೆ ನೀವು ಕೊಟ್ಟ ಭರವಸೆಯನ್ನು ಉಳಿಸಿಕೊಳ್ಳುತ್ತೀರಾ? ನಾನು ನೀಡಿದ ಭರವಸೆಯನ್ನು ಈಡೇರಿಸಿದ್ದೇನೆ ಮತ್ತು ನಾವು ನೀಡುವ ಯಾವುದೇ ಭರವಸೆಗಳನ್ನು ನಾವು ಉಳಿಸಿಕೊಳ್ಳುತ್ತೇವೆ” ಎಂದಿದ್ದಾರೆ.

“ನಮ್ಮ ಸರ್ಕಾರ ರಿಕ್ಷಾದಲ್ಲಿ ಪ್ರಯಾಣಿಸುವವರಿಗಾಗಿರುತ್ತದೆ ಹೊರತು ಬುಲೆಟ್ ರೈಲುಗಳಲ್ಲಿ ಪ್ರಯಾಣಿಸುವವರಿಗೆ ಅಲ್ಲ” ಎಂದು ಅವರು ಕೇಂದ್ರದಲ್ಲಿನ ಆಡಳಿತಾರೂಢ ಬಿಜೆಪಿಗೆ ಟಾಂಗ್‌ ನೀಡಿದ್ದಾರೆ.

ಇಂದೂ ಕೂಡ ಉದ್ಧವ್‌ ಠಾಕ್ರೆ ಎನ್‌ಆರ್‌ಸಿಯನ್ನು ಮಹಾರಾಷ್ಟ್ರದಲ್ಲಿ ಯಾವುದೇ ಕಾರಣಕ್ಕೂ ಜಾರಿಗೊಳಿಸುವುದಿಲ್ಲ ಮತ್ತು ಯಾವುದೇ ಬಂಧನ ಕೇಂದ್ರಗಳನ್ನು ತೆರೆಯುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಧರ್ಮದ ಕಾರಣಕ್ಕೆ ಹೈದರಾಬಾದ್ ಮೂಲದ ಮುಸ್ಲಿಂ ವ್ಯಕ್ತಿಗೆ ಹಲವು ಬಾರಿ ಇರಿತ: ಅಮೆರಿಕದ ಮಾಲ್‌ನಲ್ಲಿ ಕೃತ್ಯ

ಅಮೆರಿಕದ ಉತಾಹ್‌ನಲ್ಲಿರುವ ಶಾಪಿಂಗ್ ಮಾಲ್‌ನಲ್ಲಿ ಹೈದರಾಬಾದ್ ಮೂಲದ ಮುಸ್ಲಿಂ ವ್ಯಕ್ತಿಯೊಬ್ಬನಿಗೆ ಹಲವು ಬಾರಿ ಇರಿತದ ಆರೋಪ ಹೊರಿಸಲಾಗಿದೆ. ಹೈದರಾಬಾದ್‌ ನಗರದ ಟೋಲಿಚೌಕಿಯ ನಿವಾಸಿ ಸೈಯದ್ ಸೊಹೈಲ್ ಉದ್ದೀನ್, ಉತಾಹ್‌ನ ಸಾಲ್ಟ್ ಲೇಕ್ ಕೌಂಟಿಯ...

47 ವರ್ಷಗಳ ನಂತರ ಸಾಮೂಹಿಕ ಅತ್ಯಾಚಾರ ಪ್ರಕರಣದ ಶಿಕ್ಷೆ ಎತ್ತಿಹಿಡಿದ ಅಲಹಾಬಾದ್ ಹೈಕೋರ್ಟ್

1979 ರಲ್ಲಿ ನಡೆದಿದ್ದ ಅಪ್ರಾಪ್ತೆ ಮೇಲಿನ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ 71 ವರ್ಷದ ವ್ಯಕ್ತಿಯ ಶಿಕ್ಷೆಯನ್ನು ಅಲಹಾಬಾದ್ ಹೈಕೋರ್ಟ್ ಎತ್ತಿಹಿಡಿದಿದೆ. ಆದರೆ, ಕ್ರಿಮಿನಲ್ ಮೇಲ್ಮನವಿಯ 43 ವರ್ಷಗಳ ಸುದೀರ್ಘ ವಿಚಾರಣೆ ಮತ್ತು ಆತನ...

ಪಶ್ಚಿಮ ಬಂಗಾಳ: ಮುರ್ಷಿದಾಬಾದ್‌ನಲ್ಲಿ ಶಾಲಾ ವ್ಯಾನ್‌ಗೆ ರೈಲು ಡಿಕ್ಕಿ: ಇಬ್ಬರು ವಿದ್ಯಾರ್ಥಿಗಳು ಸೇರಿ 3 ಮಂದಿ ಸಾವು

ಮುರ್ಷಿದಾಬಾದ್: ದೇಶದಲ್ಲಿ ರೈಲ್ವೆ ಸುರಕ್ಷತೆಯ ಕುರಿತು ಸರ್ಕಾರಗಳು ದೊಡ್ಡ ದೊಡ್ಡ ಭರವಸೆ ಹಾಗೂ ಯೋಜನೆಗಳನ್ನು ಮಂಡಿಸುತ್ತಿದ್ದರೂ, ತಳಮಟ್ಟದ ವಾಸ್ತವ ಮಾತ್ರ ಇಂದಿಗೂ ಅತ್ಯಂತ ಭೀಕರವಾಗಿದೆ ಎಂಬುದಕ್ಕೆ ಪಶ್ಚಿಮ ಬಂಗಾಳದಲ್ಲಿ ನಡೆದ ಈ ಘೋರ...

ವಿಜಯ್ ನೇತೃತ್ವದ ಟಿವಿಕೆ ಸರ್ಕಾರವನ್ನು ಅಸ್ಥಿರಗೊಳಿಸಲು ‘ಪ್ರಾಜೆಕ್ಟ್ ಮೇಘಾಲಯ’ ಸಂಚು ಆರೋಪ : ಪತ್ರಕರ್ತನ ವಿಚಾರಣೆ

ತಮಿಳುನಾಡಿನ ಆಡಳಿತಾರೂಢ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷದ ಶಾಸಕ ಎನ್. ಇಲೈಯರಾಜ ಅವರಿಗೆ ಹಣದ ಆಮಿಷವೊಡ್ಡಲು ಯತ್ನಿಸಿದ ಆರೋಪ ಪ್ರಕರಣ ಸಂಬಂಧ ಚೆನ್ನೈ ಪೊಲೀಸರು 'ಪುದಿಯಾ ತಲೈಮುರೈ' ವಾಹಿನಿಯ ಪತ್ರಕರ್ತ ವಿಜಯನ್...

ಜಂತರ್ ಮಂತರ್ ಉಪವಾಸ ಸತ್ಯಾಗ್ರಹ ಸ್ಥಳಕ್ಕೆ ಕೇಜ್ರಿವಾಲ್ ಭೇಟಿ

ದೇಶಾದ್ಯಂತ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿರುವ ನೀಟ್ (NEET) ಪರೀಕ್ಷಾ ಅಕ್ರಮ ಹಾಗೂ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಜಂತರ್ ಮಂತರ್‌ನಲ್ಲಿ ಆಮರಣಾಂತ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಖ್ಯಾತ ಶಿಕ್ಷಣ ತಜ್ಞ ಹಾಗೂ ಪರಿಸರ...

E20 ಪೆಟ್ರೋಲ್ ಪ್ರಕರಣ : ‘ಗ್ರ್ಯಾಂಡ್ ವಿಟಾರಾ’ ಕಾರು ಬದಲಾಯಿಸಿ ಕೊಡಲು ಮಾರುತಿ ಸುಝುಕಿಗೆ ಗ್ರಾಹಕ ನ್ಯಾಯಾಲಯ ಆದೇಶ

ಛತ್ತೀಸ್‌ಗಢದ ರಾಯ್‌ಪುರದ ಜಿಲ್ಲಾ ಗ್ರಾಹಕ ವಿವಾದಗಳ ಪರಿಹಾರ ಆಯೋಗವು (ಡಿಸಿಡಿಆರ್‌ಸಿ), E20 ಇಂಧನ (ಪೆಟ್ರೋಲ್) ಬಳಕೆಯಿಂದಾಗಿ ಕಾರು ಕೆಟ್ಟುಹೋಗಿದೆ ಎಂದು ಆರೋಪಿಸಿದ ವ್ಯಕ್ತಿಗೆ ಹೊಸ 'ಗ್ರಾಂಡ್ ವಿಟಾರಾ' ಕಾರನ್ನು ನೀಡುವಂತೆ ಕಾರು ತಯಾರಿಕಾ...

ಸಿಜೆಪಿ ಶಾಂತಿಯುತ ಪ್ರತಿಭಟನೆಗೆ ನಿರಂತರ ಪೊಲೀಸ್ ಕಣ್ಗಾವಲು ಪ್ರಶ್ನಿಸಿ ದೆಹಲಿ ಹೈಕೋರ್ಟ್‌ಗೆ ಅರ್ಜಿ

ರಾಷ್ಟ್ರ ರಾಜಧಾನಿ ದೆಹಲಿಯ ಜಂತರ್ ಮಂತರ್‌ನಲ್ಲಿ ಜಿರಳೆ ಜನತಾ ಪಕ್ಷ (ಸಿಜೆಪಿ) ಆಯೋಜಿಸಿರುವ ಶಾಂತಿಯುತ ಧರಣಿ ಮತ್ತು ಉಪವಾಸ ಸತ್ಯಾಗ್ರಹದಲ್ಲಿ ಭಾಗವಹಿಸುವ ನಾಗರಿಕರ ಮೇಲೆ ದೆಹಲಿ ಪೊಲೀಸರು ನಿರಂತರ ಮತ್ತು ವ್ಯಾಪಕ ಕಣ್ಗಾವಲು...

IAS ಆಗುವ ಮುನ್ನ ‘ಪರಿಪೂರ್ಣ ತಾಯಿ’ಯಾಗಿ ಎಂದ ರಾಜ್ಯಪಾಲರ ಸಲಹೆ ಪುರುಷ ಪ್ರಾಧ್ಯಾನ್ಯತೆಯ ಮುಂದುವರೆದ ಆಚರಣೆ ಅಲ್ಲವೆ?

ಇತ್ತೀಚೆಗೆ ಉತ್ತರ ಪ್ರದೇಶದ ರಾಜ್ಯಪಾಲರಾದ ಆನಂದಿಬೆನ್ ಪಟೇಲ್ ಅವರು, "ಮಹಿಳೆಯರು IAS ಅಧಿಕಾರಿ ಅಥವಾ ಶಿಕ್ಷಕಿಯಾಗುವ ಕನಸು ಕಾಣುವ ಮೊದಲು 'ಪರಿಣಿತ ತಾಯಿ' ಆಗುವುದನ್ನು ಕಲಿಯಬೇಕು ಎಂದು ಸಲಹೆ ನೀಡಿದ್ದರು. ಕಾನ್ಪುರದ ಛತ್ರಪತಿ...

ಹಿಂದಿನ ಮದುವೆ, ಮಗು ವಿಚಾರ ಮುಚ್ಚಿಟ್ಟಿದ್ದಕ್ಕೆ ಸಹೋದರನೊಂದಿಗಿನ ಸಂಬಂಧ ಮುರಿದುಕೊಂಡಿದ್ದ ಕಾನೂನು ವಿದ್ಯಾರ್ಥಿನಿಯನ್ನು ಇರಿದು ಕೊಂದ ತಮ್ಮ

ಬೆಂಗಳೂರು: ಮೊದಲ ಮದುವೆ ಹಾಗೂ ಮಗುವಿದ್ದ ವಿಷಯವನ್ನು ಮುಚ್ಚಿಟ್ಟು ವಂಚಿಸಿದ್ದ ಪ್ರಿಯಕರನೊಂದಿಗಿನ ಸಂಬಂಧವನ್ನು ಮುರಿದುಕೊಂಡ ಕಾರಣಕ್ಕೆ, ಆತನ ಸಹೋದರನಿಂದಲೇ ಚಾಕು ಇರಿತಕ್ಕೊಳಗಾಗಿದ್ದ ಕಾನೂನು ವಿದ್ಯಾರ್ಥಿನಿಯೊಬ್ಬಳು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಘಟನೆ ಸಿಲಿಕಾನ್ ಸಿಟಿಯಲ್ಲಿ...

ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ಅಮೆರಿಕ ದಾಳಿಗೆ ಇರಾನ್‌ನಿಂದ ಪ್ರತೀಕಾರ

ಕಳೆದ ಗುರುವಾರ (ಜು.16) ಖುಜೆಸ್ತಾನ್ ಪ್ರಾಂತ್ಯದಲ್ಲಿರುವ ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ನಡೆದ ದಾಳಿಗೆ ಪ್ರತೀಕಾರವಾಗಿ, ಕುವೈತ್ ಮತ್ತು ಬಹ್ರೇನ್ ಸೇರಿದಂತೆ ಗಲ್ಫ್ ರಾಷ್ಟ್ರಗಳಲ್ಲಿರುವ ಅಮೆರಿಕದ ವಾಯು ನೆಲೆಗಳ ಮೇಲೆ ಇರಾನ್ ಪ್ರತಿದಾಳಿ...