Homeಮುಖಪುಟ"ನಾವು ರಾಜಕೀಯದೊಂದಿಗೆ ಧರ್ಮವನ್ನು ಬೆರೆಸಿ ತಪ್ಪು ಮಾಡಿದ್ದೆವು": ಉದ್ಧವ್‌ ಠಾಕ್ರೆ

“ನಾವು ರಾಜಕೀಯದೊಂದಿಗೆ ಧರ್ಮವನ್ನು ಬೆರೆಸಿ ತಪ್ಪು ಮಾಡಿದ್ದೆವು”: ಉದ್ಧವ್‌ ಠಾಕ್ರೆ

"ನಮ್ಮ ಸರ್ಕಾರ ರಿಕ್ಷಾದಲ್ಲಿ ಪ್ರಯಾಣಿಸುವವರಿಗಾಗಿರುತ್ತದೆ ಹೊರತು ಬುಲೆಟ್ ರೈಲುಗಳಲ್ಲಿ ಪ್ರಯಾಣಿಸುವವರಿಗೆ ಅಲ್ಲ" ಎಂದು ಅವರು ಕೇಂದ್ರದಲ್ಲಿನ ಆಡಳಿತಾರೂಢ ಬಿಜೆಪಿಗೆ ಟಾಂಗ್‌ ನೀಡಿದ್ದಾರೆ.

- Advertisement -
- Advertisement -

ಧರ್ಮವನ್ನು ರಾಜಕೀಯದೊಂದಿಗೆ ಬೆರೆಸಿದ್ದಿದು ಮತ್ತು ಬಿಜೆಪಿಯೊಂದಿಗೆ ಸೇರಿಕೊಂಡಿದ್ದು ತಮ್ಮ ಪಕ್ಷ ಶಿವಸೇನೆ ಮಾಡಿದ ತಪ್ಪು ಎಂದು ಮಹಾರಾಷ್ಟ್ರದ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಹೇಳಿದ್ದಾರೆ. ಇದು ಹಿಂದೂತ್ವ ಪರ ರಾಜಕಾರಣಕ್ಕೆ ಹೆಸರುವಾಸಿಯಾದ ಫೈರ್‌ಬ್ರಾಂಡ್ ಶಿವಸೇನೆಯ ಮುಖ್ಯಸ್ಥರ ಗಮನಾರ್ಹವಾದ ಹೇಳಿಕೆಯಾಗಿದ್ದು ದೇಶದ್ಯಂತ ಚರ್ಚೆಗೆ ಗ್ರಾಸವಾಗಿದೆ.

ತಮ್ಮ ರಾಜಕೀಯ ಜೀವನದಲ್ಲಿ ಮೊದಲ ಬಾರಿಗೆ ಆಡಳಿತಾತ್ಮಕ ಪಾತ್ರವನ್ನು ವಹಿಸಿಕೊಂಡ ನಂತರ ಕಳೆದ ವಾರ ಮಹಾರಾಷ್ಟ್ರ ವಿಧಾನಸಭೆಯಲ್ಲಿ ಅವರು ಈ ಹೇಳಿಕೆ ನೀಡಿದ್ದರು. ಕಾಂಗ್ರೆಸ್ ಮತ್ತು ಎನ್‌ಸಿಪಿಯೊಂದಿಗೆ ಸೇರಿಕೊಂಡ ಬಿಜೆಪಿ ಪಕ್ಷದ ಸಿದ್ಧಾಂತಕ್ಕೆ ಬೆನ್ನು ತಿರುಗಿಸಿದ್ದಕ್ಕೆ ಖಂಡಿಸಿದ ಮಾಜಿ ಮಿತ್ರ ದೇವೇಂದ್ರ ಫಡ್ನವಿಸ್‌ಗೆ ಪ್ರತಿಕ್ರಿಯಿಸುತ್ತಾ ಅವರು ಈ ಮೇಲಿನ ಮಾತುಗಳನ್ನಾಡಿದ್ದಾರೆ.

ಮಮತಾ ಬ್ಯಾನರ್ಜಿ, ರಾಮ್ ವಿಲಾಸ್ ಪಾಸ್ವಾನ್ ಮತ್ತು ಪಿಡಿಪಿಯಂತಹ ವಿರುದ್ಧವಾದ ಸಿದ್ಧಾಂತಗಳ ಪಕ್ಷಗಳೊಂದಿಗೆ ಬಿಜೆಪಿ ಮೈತ್ರಿ ಮಾಡಿಕೊಂಡಿದ್ದನ್ನು ನೆನಪಿಸುತ್ತಾ, ಉದ್ಧವ್ ಠಾಕ್ರೆ ಅವರು ಧರ್ಮ ಮತ್ತು ರಾಜಕೀಯವನ್ನು ಬೆರೆಸಿ ಬಿಜೆಪಿಯೊಂದಿಗೆ ಉಳಿಯುವುದು ತಪ್ಪು ಎಂದು ಹೇಳಿದ್ದರು.

“ನೀವು (ದೇವೇಂದ್ರ ಫಡ್ನವೀಸ್) ಜನರ ಆದೇಶದ ಬಗ್ಗೆ ಮಾತನಾಡಿದ್ದೀರಿ. ಆದರೆ ಇದು ರಾಜಕೀಯ. ನಾವು ರಾಜಕೀಯ ಮತ್ತು ಧರ್ಮವನ್ನು ಬೆರೆಸಿ ಬಹುಶಃ ತಪ್ಪು ಮಾಡಿದ್ದೇವೆ. ಆದರೆ ಆ ಸಮಯದಲ್ಲಿ ನಾವು ‘ಧರ್ಮ’ದ ಅನುಯಾಯಿಗಳು ಸಹ ಜೂಜಿನಲ್ಲಿ ಸೋತಿದ್ದೇವೆ ಎಂಬುದನ್ನು ಮರೆತಿದ್ದೇವೆ (ಉಲ್ಲೇಖ ಮಹಾಭಾರತಕ್ಕೆ). ರಾಜಕೀಯವು ಒಂದು ಜೂಜು. ನೀವು ಧರ್ಮವನ್ನು ಸರಿಯಾದ ಸ್ಥಳದಲ್ಲಿ ಇಟ್ಟುಕೊಳ್ಳಬೇಕು. ನಾವು ಇದನ್ನು ಮರೆತಿದ್ದೇವೆ. ನಾವು ಧರ್ಮ ಮತ್ತು ರಾಜಕೀಯವನ್ನು ಬೆರೆಸಲು ಪ್ರಾರಂಭಿಸಿದ್ದೇವೆ ಮತ್ತು ಅದಕ್ಕಾಗಿ ನಾವು ಯಶಸ್ವಿಯಾಗಿದ್ದೇವೆ. ನಾವು 25 ವರ್ಷಗಳ ಕಾಲ ಒಟ್ಟಿಗೆ ಇದ್ದೆವು ಮತ್ತು ನಾವು ಹಿಂದುತ್ವದ ಕಾರಣದಿಂದಾಗಿ ಉಳಿದಿದ್ದೇವೆ. ನಾವು ಧರ್ಮವನ್ನು ಬದಲಾಯಿಸಿಲ್ಲ. ನಾವು ನಿನ್ನೆ, ಇಂದು ಮತ್ತು ನಾಳೆ ಹಿಂದೂಗಳಾಗಿದ್ದೆವು. ಆದರೆ ನಿಮ್ಮ ಬಗ್ಗೆ ಏನು? ಮಮತಾ ಬ್ಯಾನರ್ಜಿ, ರಾಮ್‌ವಿಲಾಸ್ ಪಾಸ್ವಾನ್ ಮತ್ತು ಪಿಡಿಪಿಯಂತಹ ವಿರುದ್ಧ ಸಿದ್ಧಾಂತಗಳಿಂದ ನೀವು ಎಲ್ಲರೊಂದಿಗೆ ಮೈತ್ರಿ ಮಾಡಿಕೊಂಡಿದ್ದೀರಿ.” ಎಂದು ಉದ್ಧವ್‌ ಹೇಳಿದ್ದರು.

“ಧರ್ಮದ ಬಗ್ಗೆ ಕೇವಲ ಮಾತನಾಡುವುದು ಮಾತ್ರವಲ್ಲ, ಅದನ್ನು ಅನುಸರಿಸಬೇಕು. ಧರ್ಮವು ಪುಸ್ತಕಗಳಲ್ಲಿ ಮಾತ್ರವಲ್ಲ, ಅದು ನಿಜ ಜೀವನದಲ್ಲಿ ಉಳಿಯಬೇಕು” ಎಂದು ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಪುನರುಚ್ಚರಿಸಿದರು.

ನಂತರ ಅವರು “ದೇವೇಂದ್ರಜಿ, ಕಾಂಗ್ರೆಸ್‌ನೊಂದಿಗೆ ಸರ್ಕಾರ ರಚಿಸುವುದಿಲ್ಲ ಎಂದು ನಾನು ಬಾಳಾಸಾಹೇಬರಿಗೆ ಭರವಸೆ ನೀಡಿದ್ದೇ ಎಂದು ನೀವು ಹೇಳುತ್ತಿದ್ದೀರಿ. ಇಲ್ಲ ನಾನು ಅಂತಹ ಭರವಸೆ ನೀಡಿರಲಿಲ್ಲ. ಆದರೆ ನೀವು ಕೊಟ್ಟ ಭರವಸೆಯನ್ನು ಉಳಿಸಿಕೊಳ್ಳುತ್ತೀರಾ? ನಾನು ನೀಡಿದ ಭರವಸೆಯನ್ನು ಈಡೇರಿಸಿದ್ದೇನೆ ಮತ್ತು ನಾವು ನೀಡುವ ಯಾವುದೇ ಭರವಸೆಗಳನ್ನು ನಾವು ಉಳಿಸಿಕೊಳ್ಳುತ್ತೇವೆ” ಎಂದಿದ್ದಾರೆ.

“ನಮ್ಮ ಸರ್ಕಾರ ರಿಕ್ಷಾದಲ್ಲಿ ಪ್ರಯಾಣಿಸುವವರಿಗಾಗಿರುತ್ತದೆ ಹೊರತು ಬುಲೆಟ್ ರೈಲುಗಳಲ್ಲಿ ಪ್ರಯಾಣಿಸುವವರಿಗೆ ಅಲ್ಲ” ಎಂದು ಅವರು ಕೇಂದ್ರದಲ್ಲಿನ ಆಡಳಿತಾರೂಢ ಬಿಜೆಪಿಗೆ ಟಾಂಗ್‌ ನೀಡಿದ್ದಾರೆ.

ಇಂದೂ ಕೂಡ ಉದ್ಧವ್‌ ಠಾಕ್ರೆ ಎನ್‌ಆರ್‌ಸಿಯನ್ನು ಮಹಾರಾಷ್ಟ್ರದಲ್ಲಿ ಯಾವುದೇ ಕಾರಣಕ್ಕೂ ಜಾರಿಗೊಳಿಸುವುದಿಲ್ಲ ಮತ್ತು ಯಾವುದೇ ಬಂಧನ ಕೇಂದ್ರಗಳನ್ನು ತೆರೆಯುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...