Homeಮುಖಪುಟ"ನಾವು ರಾಜಕೀಯದೊಂದಿಗೆ ಧರ್ಮವನ್ನು ಬೆರೆಸಿ ತಪ್ಪು ಮಾಡಿದ್ದೆವು": ಉದ್ಧವ್‌ ಠಾಕ್ರೆ

“ನಾವು ರಾಜಕೀಯದೊಂದಿಗೆ ಧರ್ಮವನ್ನು ಬೆರೆಸಿ ತಪ್ಪು ಮಾಡಿದ್ದೆವು”: ಉದ್ಧವ್‌ ಠಾಕ್ರೆ

"ನಮ್ಮ ಸರ್ಕಾರ ರಿಕ್ಷಾದಲ್ಲಿ ಪ್ರಯಾಣಿಸುವವರಿಗಾಗಿರುತ್ತದೆ ಹೊರತು ಬುಲೆಟ್ ರೈಲುಗಳಲ್ಲಿ ಪ್ರಯಾಣಿಸುವವರಿಗೆ ಅಲ್ಲ" ಎಂದು ಅವರು ಕೇಂದ್ರದಲ್ಲಿನ ಆಡಳಿತಾರೂಢ ಬಿಜೆಪಿಗೆ ಟಾಂಗ್‌ ನೀಡಿದ್ದಾರೆ.

- Advertisement -
- Advertisement -

ಧರ್ಮವನ್ನು ರಾಜಕೀಯದೊಂದಿಗೆ ಬೆರೆಸಿದ್ದಿದು ಮತ್ತು ಬಿಜೆಪಿಯೊಂದಿಗೆ ಸೇರಿಕೊಂಡಿದ್ದು ತಮ್ಮ ಪಕ್ಷ ಶಿವಸೇನೆ ಮಾಡಿದ ತಪ್ಪು ಎಂದು ಮಹಾರಾಷ್ಟ್ರದ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಹೇಳಿದ್ದಾರೆ. ಇದು ಹಿಂದೂತ್ವ ಪರ ರಾಜಕಾರಣಕ್ಕೆ ಹೆಸರುವಾಸಿಯಾದ ಫೈರ್‌ಬ್ರಾಂಡ್ ಶಿವಸೇನೆಯ ಮುಖ್ಯಸ್ಥರ ಗಮನಾರ್ಹವಾದ ಹೇಳಿಕೆಯಾಗಿದ್ದು ದೇಶದ್ಯಂತ ಚರ್ಚೆಗೆ ಗ್ರಾಸವಾಗಿದೆ.

ತಮ್ಮ ರಾಜಕೀಯ ಜೀವನದಲ್ಲಿ ಮೊದಲ ಬಾರಿಗೆ ಆಡಳಿತಾತ್ಮಕ ಪಾತ್ರವನ್ನು ವಹಿಸಿಕೊಂಡ ನಂತರ ಕಳೆದ ವಾರ ಮಹಾರಾಷ್ಟ್ರ ವಿಧಾನಸಭೆಯಲ್ಲಿ ಅವರು ಈ ಹೇಳಿಕೆ ನೀಡಿದ್ದರು. ಕಾಂಗ್ರೆಸ್ ಮತ್ತು ಎನ್‌ಸಿಪಿಯೊಂದಿಗೆ ಸೇರಿಕೊಂಡ ಬಿಜೆಪಿ ಪಕ್ಷದ ಸಿದ್ಧಾಂತಕ್ಕೆ ಬೆನ್ನು ತಿರುಗಿಸಿದ್ದಕ್ಕೆ ಖಂಡಿಸಿದ ಮಾಜಿ ಮಿತ್ರ ದೇವೇಂದ್ರ ಫಡ್ನವಿಸ್‌ಗೆ ಪ್ರತಿಕ್ರಿಯಿಸುತ್ತಾ ಅವರು ಈ ಮೇಲಿನ ಮಾತುಗಳನ್ನಾಡಿದ್ದಾರೆ.

ಮಮತಾ ಬ್ಯಾನರ್ಜಿ, ರಾಮ್ ವಿಲಾಸ್ ಪಾಸ್ವಾನ್ ಮತ್ತು ಪಿಡಿಪಿಯಂತಹ ವಿರುದ್ಧವಾದ ಸಿದ್ಧಾಂತಗಳ ಪಕ್ಷಗಳೊಂದಿಗೆ ಬಿಜೆಪಿ ಮೈತ್ರಿ ಮಾಡಿಕೊಂಡಿದ್ದನ್ನು ನೆನಪಿಸುತ್ತಾ, ಉದ್ಧವ್ ಠಾಕ್ರೆ ಅವರು ಧರ್ಮ ಮತ್ತು ರಾಜಕೀಯವನ್ನು ಬೆರೆಸಿ ಬಿಜೆಪಿಯೊಂದಿಗೆ ಉಳಿಯುವುದು ತಪ್ಪು ಎಂದು ಹೇಳಿದ್ದರು.

“ನೀವು (ದೇವೇಂದ್ರ ಫಡ್ನವೀಸ್) ಜನರ ಆದೇಶದ ಬಗ್ಗೆ ಮಾತನಾಡಿದ್ದೀರಿ. ಆದರೆ ಇದು ರಾಜಕೀಯ. ನಾವು ರಾಜಕೀಯ ಮತ್ತು ಧರ್ಮವನ್ನು ಬೆರೆಸಿ ಬಹುಶಃ ತಪ್ಪು ಮಾಡಿದ್ದೇವೆ. ಆದರೆ ಆ ಸಮಯದಲ್ಲಿ ನಾವು ‘ಧರ್ಮ’ದ ಅನುಯಾಯಿಗಳು ಸಹ ಜೂಜಿನಲ್ಲಿ ಸೋತಿದ್ದೇವೆ ಎಂಬುದನ್ನು ಮರೆತಿದ್ದೇವೆ (ಉಲ್ಲೇಖ ಮಹಾಭಾರತಕ್ಕೆ). ರಾಜಕೀಯವು ಒಂದು ಜೂಜು. ನೀವು ಧರ್ಮವನ್ನು ಸರಿಯಾದ ಸ್ಥಳದಲ್ಲಿ ಇಟ್ಟುಕೊಳ್ಳಬೇಕು. ನಾವು ಇದನ್ನು ಮರೆತಿದ್ದೇವೆ. ನಾವು ಧರ್ಮ ಮತ್ತು ರಾಜಕೀಯವನ್ನು ಬೆರೆಸಲು ಪ್ರಾರಂಭಿಸಿದ್ದೇವೆ ಮತ್ತು ಅದಕ್ಕಾಗಿ ನಾವು ಯಶಸ್ವಿಯಾಗಿದ್ದೇವೆ. ನಾವು 25 ವರ್ಷಗಳ ಕಾಲ ಒಟ್ಟಿಗೆ ಇದ್ದೆವು ಮತ್ತು ನಾವು ಹಿಂದುತ್ವದ ಕಾರಣದಿಂದಾಗಿ ಉಳಿದಿದ್ದೇವೆ. ನಾವು ಧರ್ಮವನ್ನು ಬದಲಾಯಿಸಿಲ್ಲ. ನಾವು ನಿನ್ನೆ, ಇಂದು ಮತ್ತು ನಾಳೆ ಹಿಂದೂಗಳಾಗಿದ್ದೆವು. ಆದರೆ ನಿಮ್ಮ ಬಗ್ಗೆ ಏನು? ಮಮತಾ ಬ್ಯಾನರ್ಜಿ, ರಾಮ್‌ವಿಲಾಸ್ ಪಾಸ್ವಾನ್ ಮತ್ತು ಪಿಡಿಪಿಯಂತಹ ವಿರುದ್ಧ ಸಿದ್ಧಾಂತಗಳಿಂದ ನೀವು ಎಲ್ಲರೊಂದಿಗೆ ಮೈತ್ರಿ ಮಾಡಿಕೊಂಡಿದ್ದೀರಿ.” ಎಂದು ಉದ್ಧವ್‌ ಹೇಳಿದ್ದರು.

“ಧರ್ಮದ ಬಗ್ಗೆ ಕೇವಲ ಮಾತನಾಡುವುದು ಮಾತ್ರವಲ್ಲ, ಅದನ್ನು ಅನುಸರಿಸಬೇಕು. ಧರ್ಮವು ಪುಸ್ತಕಗಳಲ್ಲಿ ಮಾತ್ರವಲ್ಲ, ಅದು ನಿಜ ಜೀವನದಲ್ಲಿ ಉಳಿಯಬೇಕು” ಎಂದು ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಪುನರುಚ್ಚರಿಸಿದರು.

ನಂತರ ಅವರು “ದೇವೇಂದ್ರಜಿ, ಕಾಂಗ್ರೆಸ್‌ನೊಂದಿಗೆ ಸರ್ಕಾರ ರಚಿಸುವುದಿಲ್ಲ ಎಂದು ನಾನು ಬಾಳಾಸಾಹೇಬರಿಗೆ ಭರವಸೆ ನೀಡಿದ್ದೇ ಎಂದು ನೀವು ಹೇಳುತ್ತಿದ್ದೀರಿ. ಇಲ್ಲ ನಾನು ಅಂತಹ ಭರವಸೆ ನೀಡಿರಲಿಲ್ಲ. ಆದರೆ ನೀವು ಕೊಟ್ಟ ಭರವಸೆಯನ್ನು ಉಳಿಸಿಕೊಳ್ಳುತ್ತೀರಾ? ನಾನು ನೀಡಿದ ಭರವಸೆಯನ್ನು ಈಡೇರಿಸಿದ್ದೇನೆ ಮತ್ತು ನಾವು ನೀಡುವ ಯಾವುದೇ ಭರವಸೆಗಳನ್ನು ನಾವು ಉಳಿಸಿಕೊಳ್ಳುತ್ತೇವೆ” ಎಂದಿದ್ದಾರೆ.

“ನಮ್ಮ ಸರ್ಕಾರ ರಿಕ್ಷಾದಲ್ಲಿ ಪ್ರಯಾಣಿಸುವವರಿಗಾಗಿರುತ್ತದೆ ಹೊರತು ಬುಲೆಟ್ ರೈಲುಗಳಲ್ಲಿ ಪ್ರಯಾಣಿಸುವವರಿಗೆ ಅಲ್ಲ” ಎಂದು ಅವರು ಕೇಂದ್ರದಲ್ಲಿನ ಆಡಳಿತಾರೂಢ ಬಿಜೆಪಿಗೆ ಟಾಂಗ್‌ ನೀಡಿದ್ದಾರೆ.

ಇಂದೂ ಕೂಡ ಉದ್ಧವ್‌ ಠಾಕ್ರೆ ಎನ್‌ಆರ್‌ಸಿಯನ್ನು ಮಹಾರಾಷ್ಟ್ರದಲ್ಲಿ ಯಾವುದೇ ಕಾರಣಕ್ಕೂ ಜಾರಿಗೊಳಿಸುವುದಿಲ್ಲ ಮತ್ತು ಯಾವುದೇ ಬಂಧನ ಕೇಂದ್ರಗಳನ್ನು ತೆರೆಯುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತ 6ನೇ ಅತ್ಯಂತ ಕಲುಷಿತ ರಾಷ್ಟ್ರ; ಉತ್ತರ ಪ್ರದೇಶದ ಲೋನಿ ವಿಶ್ವದ ಅತ್ಯಂತ ಕಲುಷಿತ ನಗರ: ವರದಿ

ಪ್ರಮುಖ ವಾಯು ಮಾಲಿನ್ಯಕಾರಕ ಸೂಕ್ಷ್ಮ ಕಣಗಳ ಮಟ್ಟದಲ್ಲಿ ಭಾರತ ಆರನೇ ಅತ್ಯಂತ ಕಲುಷಿತ ರಾಷ್ಟ್ರವಾಗಿದ್ದರೆ, ಉತ್ತರ ಪ್ರದೇಶದ ಲೋನಿ ಜಗತ್ತಿನಾದ್ಯಂತ ಅತ್ಯಂತ ಕಲುಷಿತ ನಗರವಾಗಿದೆ. ದೆಹಲಿ ನಾಲ್ಕನೇ ಸ್ಥಾನದಲ್ಲಿದೆ ಎಂದು ವಿಶ್ವ ವಾಯು...

ನಿಷ್ಕ್ರಿಯ ದಯಾಮರಣಕ್ಕೆ ಅನುಮತಿ ಪಡೆದ ಭಾರತದ ಮೊದಲ ವ್ಯಕ್ತಿ ಹರೀಶ್ ರಾಣಾ ದೆಹಲಿ ಏಮ್ಸ್‌ನಲ್ಲಿ ನಿಧನ

ಕಳೆದ 13 ವರ್ಷಗಳಿಂದ ಕೋಮಾದಲ್ಲಿದ್ದು ಜೀವನ್ಮರಣ ಹೋರಾಟ ನಡೆಸಿ, ಅಂತಿಮವಾಗಿ 2026ರ ಮಾರ್ಚ್ 11ರಂದು ನಿಷ್ಕ್ರಿಯ ದಯಾಮರಣಕ್ಕೆ ಸುಪ್ರೀಂ ಕೋರ್ಟ್‌ನಿಂದ ಅನುಮತಿ ಪಡೆದ 32 ವರ್ಷದ ಯುವಕ ಹರೀಶ್ ರಾಣಾ, ಮಂಗಳವಾರ (ಮಾ.24)...

ಪಶ್ಚಿಮ ಏಷ್ಯಾ ಸಂಘರ್ಷ: ಪಾಕಿಸ್ತಾನ ಮಧ್ಯವರ್ತಿಯಾದರೆ ಅದು ಭಾರತದ ರಾಜತಾಂತ್ರಿಕ ಹಿನ್ನೆಡೆಯಾಗಬಹುದು; ಕಾಂಗ್ರೆಸ್ 

ಅಮೆರಿಕ, ಇಸ್ರೇಲ್ ಮತ್ತು ಇರಾನ್ ನಡುವಿನ ಸಂವಹನದಲ್ಲಿ ಪಾಕಿಸ್ತಾನ ಮಧ್ಯವರ್ತಿಯಾಗಿ ಕಾರ್ಯನಿರ್ವಹಿಸುತ್ತಿದೆ ಎಂಬ ವರದಿಗಳು ದೃಢಪಟ್ಟರೆ ಭಾರತಕ್ಕೆ ರಾಜತಾಂತ್ರಿಕ ಹಿನ್ನಡೆಯಾಗಬಹುದು ಎಂದು ಕಾಂಗ್ರೆಸ್ ಪಕ್ಷ ಮಂಗಳವಾರ ಹೇಳಿದೆ. ಪಶ್ಚಿಮ ಏಷ್ಯಾದಲ್ಲಿ ನಡೆಯುತ್ತಿರುವ ಸಂಘರ್ಷದ ಮಧ್ಯೆ,...

ಭಯೋತ್ಪಾದಕ ಚಟುವಟಿಕೆಗಳ ಆರೋಪ; ಕಾಶ್ಮೀರಿ ಪ್ರತ್ಯೇಕತಾವಾದಿ ಆಸಿಯಾ ಅಂದ್ರಾಬಿಗೆ ಜೀವಾವಧಿ ಶಿಕ್ಷೆ

ಕಾಶ್ಮೀರಿ ಪ್ರತ್ಯೇಕತಾವಾದಿ ಆಸಿಯಾ ಅಂದ್ರಾಬಿಗೆ ಕಾನೂನುಬಾಹಿರ ಚಟುವಟಿಕೆಗಳು (ತಡೆಗಟ್ಟುವಿಕೆ) ಕಾಯ್ದೆ (ಯುಎಪಿಎ) ಅಡಿಯಲ್ಲಿ ಭಯೋತ್ಪಾದನಾ ಚಟುವಟಿಕೆಗಳ ಆರೋಪದ ಮೇಲೆ ದೆಹಲಿಯ ವಿಶೇಷ ನ್ಯಾಯಾಲಯವು ಮಂಗಳವಾರ ಜೀವಾವಧಿ ಶಿಕ್ಷೆ ವಿಧಿಸಿದೆ. ಆಕೆಯ ಸಹಚರರಾದ ಸೋಫಿ...

ಬಿಜೆಪಿ ಸೀಲ್ ಇರುವ ಚು.ಆಯೋಗದ ಪತ್ರದ ಕುರಿತ ಪೋಸ್ಟ್‌ಗಳನ್ನು ತೆಗೆದು ಹಾಕಲು ಕೇರಳ ಪೊಲೀಸರಿಂದ ಸೂಚನೆ

ಚುನಾವಣಾ ಆಯೋಗದ ಪತ್ರದಲ್ಲಿ ಬಿಜೆಪಿ ಕೇರಳ ರಾಜ್ಯ ಘಟಕದ ಸೀಲ್ ಇದ್ದ ಬಗ್ಗೆ ಸೋಮವಾರದಿಂದ (ಮಾ.23) ಭಾರೀ ಚರ್ಚೆಯಾಗುತ್ತಿದೆ. ಸಿಪಿಐ(ಎಂ), ಕಾಂಗ್ರೆಸ್, ಟಿಎಂಸಿ ಸೇರಿದಂತೆ ಪ್ರತಿಪಕ್ಷಗಳು ಮತ್ತು ಸಾಮಾಜಿಕ ಜಾಲತಾಣ ಬಳಕೆದಾರರು ಚುನಾವಣಾ...

ಪಂಜಾಬ್: ಮಾಜಿ ಸಚಿವ ಲಾಲ್‌ಜಿತ್ ಸಿಂಗ್ ಭುಲ್ಲರ್ ಕಿರುಕುಳಕ್ಕೆ ಅಧಿಕಾರಿ ಆತ್ಮಹತ್ಯೆ; ಅಮೃತಸರದಲ್ಲಿ ಶವಪರೀಕ್ಷೆಗೆ ಕುಟುಂಬ ಒಪ್ಪಿಗೆ

ಪಂಜಾಬ್‌ನ ಮಾಜಿ ಸಚಿವ ಲಾಲ್‌ಜಿತ್ ಸಿಂಗ್ ಭುಲ್ಲರ್ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಿ ಆತ್ಮಹತ್ಯೆ ಮಾಡಿಕೊಂಡ ಗೋದಾಮು ನಿಗಮದ ಅಧಿಕಾರಿ ಗಗನ್‌ದೀಪ್ ಸಿಂಗ್ ರಾಂಧವ ಅವರ ಮರಣೋತ್ತರ ಪರೀಕ್ಷೆಯನ್ನು ಮಂಗಳವಾರ ಅಮೃತಸರದಲ್ಲಿ ನಡೆಸಲಾಗುವುದು...

ಮುಸ್ಲಿಂ ಮಹಿಳೆಯರು ‘ನಮಾಜ್’ ಮಾಡುತ್ತಿದ್ದ ಕೊಠಡಿಯಲ್ಲಿ ಮಂತ್ರ ಪಠಿಸಿದ ಬಿಜೆಪಿ ನಾಯಕಿ ಮಾಧವಿ ಲತಾ

ತೆಲಂಗಾಣದ ಭಾರತೀಯ ಜನತಾ ಪಕ್ಷದ (ಬಿಜೆಪಿ)ದ ವಿವಾದಾತ್ಮಕ ನಾಯಕಿ ಮಾಧವಿ ಲತಾ ಮತ್ತೆ ಸಾಮಾಜಿಕ ಮಾಧ್ಯಮದಲ್ಲಿ ಸುದ್ದಿಯಾಗಿದ್ದಾರೆ. ನಮಾಜ್‌ ಮಾಡುತ್ತಿದ್ದವರ ಹಿಂದೆ ಮಂತ್ರ ಪಠಿಸುತ್ತಿರುವ ಅವರ ವೀಡಿಯೊವೊಂದು ಮತ್ತೆ ಸಾಮಾಜಿಕ ಮಾಧ್ಯಮದಲ್ಲಿ ವೈರಲ್...

ತೂತುಕುಡಿ ಸಾತನ್‌ಕುಳಂ ತಂದೆ ಮಗನ ಕಸ್ಟಡಿ ಸಾವು ಪ್ರಕರಣ : ಒಂಬತ್ತು ಪೊಲೀಸರು ದೋಷಿಗಳು ಎಂದ ಕೋರ್ಟ್

ತಮಿಳುನಾಡಿನ ತೂತುಕುಡಿ ಜಿಲ್ಲೆಯ ಸಾತನ್‌ಕುಳಂ ಪೊಲೀಸ್ ಠಾಣೆಯಲ್ಲಿ ಕೋವಿಡ್-19 ಲಾಕ್‌ಡೌನ್ ಸಮಯದಲ್ಲಿ ಸಂಭವಿಸಿದ, ವ್ಯಾಪಾರಿ ಪಿ. ಜಯರಾಜ್ (58) ಮತ್ತು ಅವರ ಮಗ ಜೆ. ಬೆನಿಕ್ಸ್ (31) ಅವರ ಕಸ್ಟಡಿ ಸಾವು ಪ್ರಕರಣದ...

4 ವರ್ಷದ ಬಾಲಕಿಯ ಮೇಲಿನ ಅತ್ಯಾಚಾರ ಪ್ರಕರಣ; ಗುರುಗ್ರಾಮ ಪೊಲೀಸರನ್ನು ತರಾಟೆಗೆ ತೆಗೆದುಕೊಂಡ ಸುಪ್ರೀಂ ಕೋರ್ಟ್

ಹರಿಯಾಣದ ಗುರುಗ್ರಾಮದಲ್ಲಿ ನಾಲ್ಕು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣವನ್ನು ನಿರ್ವಹಿಸಿದ ಬಗ್ಗೆ ಹರಿಯಾಣ ಪೊಲೀಸರು ಮತ್ತು ನ್ಯಾಯಾಂಗ ಮ್ಯಾಜಿಸ್ಟ್ರೇಟ್ ಅವರನ್ನು ಸುಪ್ರೀಂ ಕೋರ್ಟ್ ಸೋಮವಾರ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ. ಮಗುವಿನೊಂದಿಗೆ...

ದಾವಣಗೆರೆ: ನಿಮ್ಮ ದೇಶಭಕ್ತಿ ಪ್ರಶ್ನಿಸುವ ಅಯೋಗ್ಯರಿಗೆ ಮತ ಹಾಕಬೇಡಿ; ಮುಸ್ಲಿಮರಿಗೆ ಪ್ರದೀಪ್ ಈಶ್ವರ್ ಮನವಿ

ದಾವಣಗೆರೆ: ಮುಸ್ಲಿಮರ ದೇಶಭಕ್ತಿಯನ್ನು ಪ್ರಶ್ನಿಸಿದ, ಅವರ ಕುಟುಂಬಗಳ ಮಹಿಳೆಯರ ಬಗ್ಗೆ ಹೀನಾಯವಾಗಿ ಮಾತನಾಡಿದ್ದು ಬಿಜೆಪಿ. ಇವತ್ತು ಯಾವುದೋ ಅಸಮಾಧಾನಕ್ಕೆ ಬಿಜೆಪಿಗೆ ಮತ ಹಾಕದರೆ ನಿಮ್ಮ ಅಸ್ತಿತ್ವಕ್ಕೆ ಕುತ್ತು ಬರುತ್ತದೆ. ಇಂತಹ ಅಯೋಗ್ಯರಿಗೆ ಮತ...