Homeಮುಖಪುಟ"ನಾವು ರಾಜಕೀಯದೊಂದಿಗೆ ಧರ್ಮವನ್ನು ಬೆರೆಸಿ ತಪ್ಪು ಮಾಡಿದ್ದೆವು": ಉದ್ಧವ್‌ ಠಾಕ್ರೆ

“ನಾವು ರಾಜಕೀಯದೊಂದಿಗೆ ಧರ್ಮವನ್ನು ಬೆರೆಸಿ ತಪ್ಪು ಮಾಡಿದ್ದೆವು”: ಉದ್ಧವ್‌ ಠಾಕ್ರೆ

"ನಮ್ಮ ಸರ್ಕಾರ ರಿಕ್ಷಾದಲ್ಲಿ ಪ್ರಯಾಣಿಸುವವರಿಗಾಗಿರುತ್ತದೆ ಹೊರತು ಬುಲೆಟ್ ರೈಲುಗಳಲ್ಲಿ ಪ್ರಯಾಣಿಸುವವರಿಗೆ ಅಲ್ಲ" ಎಂದು ಅವರು ಕೇಂದ್ರದಲ್ಲಿನ ಆಡಳಿತಾರೂಢ ಬಿಜೆಪಿಗೆ ಟಾಂಗ್‌ ನೀಡಿದ್ದಾರೆ.

- Advertisement -
- Advertisement -

ಧರ್ಮವನ್ನು ರಾಜಕೀಯದೊಂದಿಗೆ ಬೆರೆಸಿದ್ದಿದು ಮತ್ತು ಬಿಜೆಪಿಯೊಂದಿಗೆ ಸೇರಿಕೊಂಡಿದ್ದು ತಮ್ಮ ಪಕ್ಷ ಶಿವಸೇನೆ ಮಾಡಿದ ತಪ್ಪು ಎಂದು ಮಹಾರಾಷ್ಟ್ರದ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಹೇಳಿದ್ದಾರೆ. ಇದು ಹಿಂದೂತ್ವ ಪರ ರಾಜಕಾರಣಕ್ಕೆ ಹೆಸರುವಾಸಿಯಾದ ಫೈರ್‌ಬ್ರಾಂಡ್ ಶಿವಸೇನೆಯ ಮುಖ್ಯಸ್ಥರ ಗಮನಾರ್ಹವಾದ ಹೇಳಿಕೆಯಾಗಿದ್ದು ದೇಶದ್ಯಂತ ಚರ್ಚೆಗೆ ಗ್ರಾಸವಾಗಿದೆ.

ತಮ್ಮ ರಾಜಕೀಯ ಜೀವನದಲ್ಲಿ ಮೊದಲ ಬಾರಿಗೆ ಆಡಳಿತಾತ್ಮಕ ಪಾತ್ರವನ್ನು ವಹಿಸಿಕೊಂಡ ನಂತರ ಕಳೆದ ವಾರ ಮಹಾರಾಷ್ಟ್ರ ವಿಧಾನಸಭೆಯಲ್ಲಿ ಅವರು ಈ ಹೇಳಿಕೆ ನೀಡಿದ್ದರು. ಕಾಂಗ್ರೆಸ್ ಮತ್ತು ಎನ್‌ಸಿಪಿಯೊಂದಿಗೆ ಸೇರಿಕೊಂಡ ಬಿಜೆಪಿ ಪಕ್ಷದ ಸಿದ್ಧಾಂತಕ್ಕೆ ಬೆನ್ನು ತಿರುಗಿಸಿದ್ದಕ್ಕೆ ಖಂಡಿಸಿದ ಮಾಜಿ ಮಿತ್ರ ದೇವೇಂದ್ರ ಫಡ್ನವಿಸ್‌ಗೆ ಪ್ರತಿಕ್ರಿಯಿಸುತ್ತಾ ಅವರು ಈ ಮೇಲಿನ ಮಾತುಗಳನ್ನಾಡಿದ್ದಾರೆ.

ಮಮತಾ ಬ್ಯಾನರ್ಜಿ, ರಾಮ್ ವಿಲಾಸ್ ಪಾಸ್ವಾನ್ ಮತ್ತು ಪಿಡಿಪಿಯಂತಹ ವಿರುದ್ಧವಾದ ಸಿದ್ಧಾಂತಗಳ ಪಕ್ಷಗಳೊಂದಿಗೆ ಬಿಜೆಪಿ ಮೈತ್ರಿ ಮಾಡಿಕೊಂಡಿದ್ದನ್ನು ನೆನಪಿಸುತ್ತಾ, ಉದ್ಧವ್ ಠಾಕ್ರೆ ಅವರು ಧರ್ಮ ಮತ್ತು ರಾಜಕೀಯವನ್ನು ಬೆರೆಸಿ ಬಿಜೆಪಿಯೊಂದಿಗೆ ಉಳಿಯುವುದು ತಪ್ಪು ಎಂದು ಹೇಳಿದ್ದರು.

“ನೀವು (ದೇವೇಂದ್ರ ಫಡ್ನವೀಸ್) ಜನರ ಆದೇಶದ ಬಗ್ಗೆ ಮಾತನಾಡಿದ್ದೀರಿ. ಆದರೆ ಇದು ರಾಜಕೀಯ. ನಾವು ರಾಜಕೀಯ ಮತ್ತು ಧರ್ಮವನ್ನು ಬೆರೆಸಿ ಬಹುಶಃ ತಪ್ಪು ಮಾಡಿದ್ದೇವೆ. ಆದರೆ ಆ ಸಮಯದಲ್ಲಿ ನಾವು ‘ಧರ್ಮ’ದ ಅನುಯಾಯಿಗಳು ಸಹ ಜೂಜಿನಲ್ಲಿ ಸೋತಿದ್ದೇವೆ ಎಂಬುದನ್ನು ಮರೆತಿದ್ದೇವೆ (ಉಲ್ಲೇಖ ಮಹಾಭಾರತಕ್ಕೆ). ರಾಜಕೀಯವು ಒಂದು ಜೂಜು. ನೀವು ಧರ್ಮವನ್ನು ಸರಿಯಾದ ಸ್ಥಳದಲ್ಲಿ ಇಟ್ಟುಕೊಳ್ಳಬೇಕು. ನಾವು ಇದನ್ನು ಮರೆತಿದ್ದೇವೆ. ನಾವು ಧರ್ಮ ಮತ್ತು ರಾಜಕೀಯವನ್ನು ಬೆರೆಸಲು ಪ್ರಾರಂಭಿಸಿದ್ದೇವೆ ಮತ್ತು ಅದಕ್ಕಾಗಿ ನಾವು ಯಶಸ್ವಿಯಾಗಿದ್ದೇವೆ. ನಾವು 25 ವರ್ಷಗಳ ಕಾಲ ಒಟ್ಟಿಗೆ ಇದ್ದೆವು ಮತ್ತು ನಾವು ಹಿಂದುತ್ವದ ಕಾರಣದಿಂದಾಗಿ ಉಳಿದಿದ್ದೇವೆ. ನಾವು ಧರ್ಮವನ್ನು ಬದಲಾಯಿಸಿಲ್ಲ. ನಾವು ನಿನ್ನೆ, ಇಂದು ಮತ್ತು ನಾಳೆ ಹಿಂದೂಗಳಾಗಿದ್ದೆವು. ಆದರೆ ನಿಮ್ಮ ಬಗ್ಗೆ ಏನು? ಮಮತಾ ಬ್ಯಾನರ್ಜಿ, ರಾಮ್‌ವಿಲಾಸ್ ಪಾಸ್ವಾನ್ ಮತ್ತು ಪಿಡಿಪಿಯಂತಹ ವಿರುದ್ಧ ಸಿದ್ಧಾಂತಗಳಿಂದ ನೀವು ಎಲ್ಲರೊಂದಿಗೆ ಮೈತ್ರಿ ಮಾಡಿಕೊಂಡಿದ್ದೀರಿ.” ಎಂದು ಉದ್ಧವ್‌ ಹೇಳಿದ್ದರು.

“ಧರ್ಮದ ಬಗ್ಗೆ ಕೇವಲ ಮಾತನಾಡುವುದು ಮಾತ್ರವಲ್ಲ, ಅದನ್ನು ಅನುಸರಿಸಬೇಕು. ಧರ್ಮವು ಪುಸ್ತಕಗಳಲ್ಲಿ ಮಾತ್ರವಲ್ಲ, ಅದು ನಿಜ ಜೀವನದಲ್ಲಿ ಉಳಿಯಬೇಕು” ಎಂದು ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಪುನರುಚ್ಚರಿಸಿದರು.

ನಂತರ ಅವರು “ದೇವೇಂದ್ರಜಿ, ಕಾಂಗ್ರೆಸ್‌ನೊಂದಿಗೆ ಸರ್ಕಾರ ರಚಿಸುವುದಿಲ್ಲ ಎಂದು ನಾನು ಬಾಳಾಸಾಹೇಬರಿಗೆ ಭರವಸೆ ನೀಡಿದ್ದೇ ಎಂದು ನೀವು ಹೇಳುತ್ತಿದ್ದೀರಿ. ಇಲ್ಲ ನಾನು ಅಂತಹ ಭರವಸೆ ನೀಡಿರಲಿಲ್ಲ. ಆದರೆ ನೀವು ಕೊಟ್ಟ ಭರವಸೆಯನ್ನು ಉಳಿಸಿಕೊಳ್ಳುತ್ತೀರಾ? ನಾನು ನೀಡಿದ ಭರವಸೆಯನ್ನು ಈಡೇರಿಸಿದ್ದೇನೆ ಮತ್ತು ನಾವು ನೀಡುವ ಯಾವುದೇ ಭರವಸೆಗಳನ್ನು ನಾವು ಉಳಿಸಿಕೊಳ್ಳುತ್ತೇವೆ” ಎಂದಿದ್ದಾರೆ.

“ನಮ್ಮ ಸರ್ಕಾರ ರಿಕ್ಷಾದಲ್ಲಿ ಪ್ರಯಾಣಿಸುವವರಿಗಾಗಿರುತ್ತದೆ ಹೊರತು ಬುಲೆಟ್ ರೈಲುಗಳಲ್ಲಿ ಪ್ರಯಾಣಿಸುವವರಿಗೆ ಅಲ್ಲ” ಎಂದು ಅವರು ಕೇಂದ್ರದಲ್ಲಿನ ಆಡಳಿತಾರೂಢ ಬಿಜೆಪಿಗೆ ಟಾಂಗ್‌ ನೀಡಿದ್ದಾರೆ.

ಇಂದೂ ಕೂಡ ಉದ್ಧವ್‌ ಠಾಕ್ರೆ ಎನ್‌ಆರ್‌ಸಿಯನ್ನು ಮಹಾರಾಷ್ಟ್ರದಲ್ಲಿ ಯಾವುದೇ ಕಾರಣಕ್ಕೂ ಜಾರಿಗೊಳಿಸುವುದಿಲ್ಲ ಮತ್ತು ಯಾವುದೇ ಬಂಧನ ಕೇಂದ್ರಗಳನ್ನು ತೆರೆಯುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಖಮೇನಿ ಪುತ್ರ ಮೊಜ್ತಬಾ ಅವರನ್ನು ಸರ್ವೋಚ್ಚ ನಾಯಕನನ್ನಾಗಿ ಹೆಸರಿಸಿದ ಇರಾನ್ ತಜ್ಞರ ಸಭೆ?

ದಿವಂಗತ ಅಯತೊಲ್ಲಾ ಅಲಿ ಖಮೇನಿಯವರ ಪುತ್ರ 56 ವರ್ಷದ ಮೊಜ್ತಬಾ ಖಮೇನಿ ಅವರನ್ನು ತಜ್ಞರ ಸಭೆಯು ಇರಾನ್‌ನ ಹೊಸ ಸರ್ವೋಚ್ಚ ನಾಯಕನನ್ನಾಗಿ ಆಯ್ಕೆ ಮಾಡಿದೆ ಎಂದು ಬಲ್ಲ ಮೂಲಗಳನ್ನು ಉಲ್ಲೇಖಿಸಿ ಇರಾನ್ ಅಂತಾರಾಷ್ಟ್ರೀಯ...

ಲೋಕಸಭೆ ಹಕ್ಕುಬಾಧ್ಯತಾ ಸಮಿತಿಗೆ 15 ಸದಸ್ಯರ ಆಯ್ಕೆ; ರವಿಶಂಕರ್ ಪ್ರಸಾದ್ ನೇತೃತ್ವ

ಹದಿನೆಂಟನೇ ಲೋಕಸಭೆ ರಚನೆಯಾಗಿ ಸುಮಾರು ಎರಡು ವರ್ಷಗಳ ನಂತರ, ಸ್ಪೀಕರ್ ಓಂ ಬಿರ್ಲಾ ಅವರು ಮಂಗಳವಾರ (ಮಾ.3) ಹಕ್ಕುಬಾಧ್ಯತಾ ಸಮಿತಿಗೆ 15 ಸದಸ್ಯರನ್ನು ನಾಮನಿರ್ದೇಶನ ಮಾಡಿದ್ದಾರೆ. ಸದನ ಮತ್ತು ಅದರ ಸದಸ್ಯರ ಹಕ್ಕುಚ್ಯುತಿಗೆ...

ಪಶ್ಚಿಮ ಬಂಗಾಳ : ಚುನಾವಣೆ ಹೊಸ್ತಿಲಲ್ಲಿ ತ್ವರಿತಗೊಂಡ ಸಿಎಎ ಜಾರಿ ಪ್ರಕ್ರಿಯೆ

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆ ಹತ್ತಿರವಾಗುತ್ತಿದ್ದಂತೆ ರಾಜ್ಯದಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ ಜಾರಿ ಪ್ರಕ್ರಿಯೆಯು ಅತ್ಯಂತ ವೇಗ ಪಡೆದುಕೊಂಡಿದೆ. ಇತ್ತೀಚಿನ ಬೆಳವಣಿಗೆಗಳು ರಾಜ್ಯದ ರಾಜಕೀಯ ಸಮೀಕರಣಗಳನ್ನು ಬದಲಿಸುವ ಮುನ್ಸೂಚನೆ ನೀಡುತ್ತಿವೆ. ಕೇಂದ್ರ ಗೃಹ ಸಚಿವಾಲಯವು...

ರಾಜಸ್ಥಾನದ ಭಿವಾಡಿಯಲ್ಲಿ ಗೋ ಕಳ್ಳಸಾಗಣೆದಾರರು ಮತ್ತು ಗೋರಕ್ಷಕರ ನಡುವೆ ಘರ್ಷಣೆ: ಯುವಕ ಸಾವು

ಜೈಪುರ: ರಾಜಸ್ಥಾನದ ಭಿವಾಡಿಯಲ್ಲಿ ಸೋಮವಾರ ಬೆಳಗಿನ ಜಾವ ಗೋ ಕಳ್ಳಸಾಗಣೆದಾರರು ಮತ್ತು ಗೋರಕ್ಷಕರ ನಡುವೆ ನಡೆದ ಘರ್ಷಣೆಯಲ್ಲಿ ಯುವಕನೊಬ್ಬ ಸಾವನ್ನಪ್ಪಿದ್ದಾನೆ. ಈ ಘಟನೆಯಿಂದಾಗಿ ಮೃತನ ಕುಟುಂಬ ಪ್ರತಿಭಟನೆ ನಡೆಸಿದ್ದು, ಆತನನ್ನು ಗುಂಡಿಕ್ಕಿ ಕೊಲ್ಲಲಾಗಿದೆ ಎಂದು...

ಖಮೇನಿ ಹತ್ಯೆ ಬಗ್ಗೆ ಪ್ರಧಾನಿ ಮೋದಿ ತಮ್ಮ ನಿಲುವು ತಿಳಿಸಬೇಕು: ರಾಹುಲ್ ಗಾಂಧಿ ಒತ್ತಾಯ

ಇರಾನ್‌ನ ಪರಮೋಚ್ಚ ನಾಯಕ ಆಯತೊಲ್ಲಾ ಅಲಿ ಖಮೇನಿ ಹತ್ಯೆಯ ಬಗ್ಗೆ ತಮ್ಮ ನಿಲುವನ್ನು ಸ್ಪಷ್ಟವಾಗಿ ತಿಳಿಸುವಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮಂಗಳವಾರ ಪ್ರಧಾನಿ ನರೇಂದ್ರ ಮೋದಿ ಅವರನ್ನು ಕೇಳಿದ್ದಾರೆ. ಅಮೆರಿಕ ಮತ್ತು...

ಇರಾನ್‌ ಮೇಲೆ ಇಸ್ರೇಲ್ ದಾಳಿ: ಟೆಹ್ರಾನ್‌ನಿಂದ 200ಕ್ಕೂ ಹೆಚ್ಚು ಭಾರತೀಯ ವಿದ್ಯಾರ್ಥಿಗಳು ಕೋಮ್‌ಗೆ ಸ್ಥಳಾಂತರ

ನವದೆಹಲಿ: ಇರಾನ್ ಮೇಲೆ ಅಮೆರಿಕ-ಇಸ್ರೇಲ್ ದಾಳಿಗಳು ತೀವ್ರಗೊಳ್ಳುತ್ತಿರುವ ಮಧ್ಯೆ, ಟೆಹ್ರಾನ್‌ನಿಂದ ಸ್ಥಳಾಂತರಿಸಲ್ಪಟ್ಟ ಭಾರತೀಯ ವಿದ್ಯಾರ್ಥಿಗಳನ್ನು ಕೋಮ್‌ಗೆ ಸುರಕ್ಷಿತವಾಗಿ ಸ್ಥಳಾಂತರಿಸಲಾಗಿದೆ, ಆದರೆ ಭಾರತೀಯ ರಾಯಭಾರ ಕಚೇರಿಯು ಮುನ್ನೆಚ್ಚರಿಕೆ ಕ್ರಮವಾಗಿ ತನ್ನ ಪ್ರಜೆಗಳನ್ನು ಮನೆಯೊಳಗೆ ಇರುವಂತೆ...

‘ಪಿಟಿಸಿಎಲ್‌ ಕಾಯ್ದೆ’ ಸಮರ್ಪಕ ಜಾರಿಗೆ ಆಗ್ರಹಿಸಿ ಆಹೋರಾತ್ರಿ ಧರಣಿ ಸತ್ಯಾಗ್ರಹ

'ಪಿಟಿಸಿಎಲ್‌ (PTCL) ಕಾಯ್ದೆ' ಸಮರ್ಪಕ ಜಾರಿಗೆ ಆಗ್ರಹಿಸಿ ಆಹೋರಾತ್ರಿ ಧರಣಿ ಸತ್ಯಾಗ್ರಹ ನಡೆಸಲಾಗುವುದು ಎಂದು 'ಪಿಟಿಸಿಎಲ್‌ ಕಾಯ್ದೆ ಭೂಮಿ ವಂಚಿತರ ಹೋರಾಟ ಸಮಿತಿ' ಮುಖಂಡರು ಘೋಷಿಸಿದರು. ಬೆಂಗಳೂರಿನ ಪ್ರೆಸ್‌ ಕ್ಲಬ್‌ನಲ್ಲಿ ಇಂದು ನಡೆದ ಸುದ್ದಿಗೋಷ್ಠಿಯಲ್ಲಿ...

ರಾಜಸ್ಥಾನ| ‘ನೀವು ಕೆಳಜಾತಿಯವರು, ಎಲ್‌ಎಲ್‌ಬಿ ನಿಮಗೆ ಸೂಕ್ತವಲ್ಲ..’; ದಲಿತ ವಿದ್ಯಾರ್ಥಿನಿಗೆ ಪ್ರಾಧ್ಯಾಪಕರಿಂದ ಜಾತಿ ನಿಂದನೆ

ರಾಜಸ್ಥಾನದ ಚುರುವಿನ ಸರ್ಕಾರಿ ಕಾನೂನು ಕಾಲೇಜಿನ ಮೂರನೇ ಸೆಮಿಸ್ಟರ್ ದಲಿತ ಎಲ್‌ಎಲ್‌ಬಿ ವಿದ್ಯಾರ್ಥಿನಿಯೊಬ್ಬರು, ಇಬ್ಬರು ಪ್ರಾಧ್ಯಾಪಕರಿಂದ ಜಾತಿ ಆಧಾರಿತ ನಿಂದನೆ, ಬೆದರಿಕೆ ಮತ್ತು ತಾರತಮ್ಯ ಆರೋಪದ ಮೇಲೆ ಪೊಲೀಸ್ ದೂರು ದಾಖಲಿಸಿದ್ದಾರೆ. ಎಸ್‌ಸಿ...

ಬೆಂಗಳೂರು: ಮೂರು ಅಂತಸ್ತಿನ ಕಟ್ಟಡದಲ್ಲಿ ಬೆಂಕಿ ಅವಘಡ: ಮಹಿಳೆ ಸಾವು, ಮೂವರ ರಕ್ಷಣೆ

ಬೆಂಗಳೂರು: ಸೋಮವಾರ ರಾತ್ರಿ ಉತ್ತರ ಬೆಂಗಳೂರಿನಲ್ಲಿರುವ ಮನೆಯೊಂದರಲ್ಲಿ ಸಂಭವಿಸಿದ ಬೆಂಕಿ ಅವಘಡದಲ್ಲಿ ಮಹಿಳೆಯೊಬ್ಬರು ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ಮಂಗಳವಾರ ತಿಳಿಸಿದ್ದಾರೆ. ಮೃತರನ್ನು 55 ವರ್ಷದ ಸವಿತಾ ಎಂದು ಗುರುತಿಸಲಾಗಿದೆ. ಅವರ ಪತಿ ಗುತ್ತಿಗೆದಾರ ರಮೇಶ್...

ಲಕ್ನೋ | 12 ವರ್ಷದ ಬಾಲಕ ಉನೈಝ್ ಗುಂಡೇಟಿಗೆ ಬಲಿ : ಸಂಚು ರೂಪಿಸಿ ಕೊಲೆ ಮಾಡಲಾಗಿದೆ ಎಂದ ಕುಟುಂಬ

ಉತ್ತರ ಪ್ರದೇಶದ ಲಕ್ನೋದಲ್ಲಿ 12 ವರ್ಷದ ಬಾಲಕನೊಬ್ಬ ಗುಂಡೇಟಿನಿಂದ ಮೃತಪಟ್ಟಿದ್ದು, ಆತನನ್ನು ಕೊಲೆ ಮಾಡಲಾಗಿದೆ. ಕೃತ್ಯವನ್ನು ಮುಚ್ಚಿ ಹಾಕಲು ಪ್ರಯತ್ನಿಸಲಾಗುತ್ತಿದೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ. ಈ ಘಟನೆ ದೇಶದ ಗಮನ ಸೆಳೆದಿದ್ದು, ಸಾಮಾಜಿಕ...