Homeಮುಖಪುಟಯಾವುದೇ ಬೆಲೆ ತೆತ್ತಾದರೂ ನಾವು ಮಹಾರಾಷ್ಟ್ರದಲ್ಲಿ ಸರ್ಕಾರ ರಚಿಸಬೇಕು: ಶರದ್ ಪವಾರ್

ಯಾವುದೇ ಬೆಲೆ ತೆತ್ತಾದರೂ ನಾವು ಮಹಾರಾಷ್ಟ್ರದಲ್ಲಿ ಸರ್ಕಾರ ರಚಿಸಬೇಕು: ಶರದ್ ಪವಾರ್

- Advertisement -
- Advertisement -

ಮುಂಬರುವ ಮಹಾರಾಷ್ಟ್ರ ವಿಧಾನಸಭಾ ಚುನಾವಣೆಗೆ 8 ರಿಂದ 10 ದಿನಗಳಲ್ಲಿ ಮಹಾ ವಿಕಾಸ್ ಅಘಾಡಿ (ಎಂವಿಎ) ತನ್ನ ಸೀಟು ಹಂಚಿಕೆ ಮಾತುಕತೆಯನ್ನು ಮುಕ್ತಾಯಗೊಳಿಸಲಿದೆ ಎಂದು ಎನ್‌ಸಿಪಿ (ಎಸ್‌ಪಿ) ಮುಖ್ಯಸ್ಥ ಶರದ್ ಪವಾರ್ ಭಾನುವಾರ ಹೇಳಿದ್ದಾರೆ.

“ಯಾವುದೇ ಬೆಲೆ ತೆತ್ತಾದರೂ ನಾವು ರಾಜ್ಯದಲ್ಲಿ ಅಧಿಕಾರಕ್ಕೆ ಬರಲು ಪ್ರತಿಪಕ್ಷಗಳ ಮೈತ್ರಿಯು ಶ್ರಮಿಸಬೇಕಾಗಿದೆ. ಎಂದು ಪ್ರತಿಪಾದಿಸಿದರು. ತಮ್ಮ ಪಕ್ಷ ತೊರೆದವರನ್ನು ಗುರಿಯಾಗಿಸಿದ ಪವಾರ್, “ಅವರಲ್ಲಿ ಬೆರಳೆಣಿಕೆಯಷ್ಟು ಮಂದಿಯೂ ರಾಜ್ಯ ಚುನಾವಣೆಯಲ್ಲಿ ಗೆಲ್ಲುವುದಿಲ್ಲ” ಎಂದು ಭವಿಷ್ಯ ನುಡಿದಿದ್ದಾರೆ.

288 ಸದಸ್ಯ ಬಲದ ರಾಜ್ಯ ವಿಧಾನಸಭೆಗೆ ನವೆಂಬರ್ ಮಧ್ಯದಲ್ಲಿ ಚುನಾವಣೆ ನಡೆಯುವ ಸಾಧ್ಯತೆಯಿದೆ ಎಂದು ಎನ್‌ಸಿಪಿ (ಎಸ್‌ಪಿ) ಮುಖ್ಯಸ್ಥರು ಪುಣೆಯ ಬಾರಾಮತಿ ಪಟ್ಟಣದಲ್ಲಿ ತಮ್ಮ ಪಕ್ಷದ ಕಾರ್ಯಕರ್ತರನ್ನು ಉದ್ದೇಶಿಸಿ ಹೇಳಿದರು.

ಅಭ್ಯರ್ಥಿಗಳ ಆಯ್ಕೆಗೆ ಗೆಲುವು ಮಾತ್ರ ಅರ್ಹತೆಯಾಗಿದೆ. ಸಮ್ಮಿಶ್ರದಲ್ಲಿ ಹೊಂದಾಣಿಕೆಗಳು ಮತ್ತು ಹೊಂದಿಕೊಳ್ಳುವ ವಿಧಾನವು ಅತ್ಯಗತ್ಯವಾಗಿರುತ್ತದೆ ಎಂದು ಮಾಜಿ ಕೇಂದ್ರ ಸಚಿವರು ಹೇಳಿದರು.

ಎಂವಿಎ ಮೈತ್ರಗಕೂಟವು ಎನ್‌ಸಿಪಿ (ಎಸ್‌ಪಿ), ಕಾಂಗ್ರೆಸ್ ಮತ್ತು ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ) ಅನ್ನು ಒಳಗೊಂಡಿದೆ.

“ನೀವು ಎಲ್ಲ ಸ್ಥಾನಗಳಲ್ಲಿ ಸ್ಪರ್ಧಿಸಲು ಸಾಧ್ಯವಿಲ್ಲ, ಇತರ ಇಬ್ಬರು ಪಾಲುದಾರರಿಗೆ ಅಭ್ಯರ್ಥಿಗಳನ್ನು ಕಣಕ್ಕಿಳಿಸಲು ಅವಕಾಶ ನೀಡಬೇಕು ಮತ್ತು ನೀವು ಅವರಿಗಾಗಿಯೂ ಕೆಲಸ ಮಾಡಬೇಕು. ಯಾವುದೇ ಬೆಲೆ ತೆತ್ತಾದರೂ ನಾವು ನಮ್ಮದೇ ಸರ್ಕಾರವನ್ನು ಪಡೆಯಬೇಕು” ಎಂದು ಪವಾರ್ ಪ್ರತಿಪಾದಿಸಿದರು.

ಮೂರು ಎಂವಿಎ ಮಿತ್ರಪಕ್ಷಗಳು ನಿರ್ದಿಷ್ಟ ಸ್ಥಾನಕ್ಕಾಗಿ “ಮೂಲ ಆಕಾಂಕ್ಷಿ” ಕುರಿತು ಪಕ್ಷದ ಕಾರ್ಯಕರ್ತರ ಅಭಿಪ್ರಾಯಗಳನ್ನು ಪಡೆಯಲಿವೆ. ಪ್ರತಿ ತಾಲೂಕಿನಲ್ಲಿ ಸಮೀಕ್ಷೆ ನಡೆಸಲಾಗುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ತಿಳಿಸಿದರು.

ರಾಜಕೀಯ ಪಕ್ಷದ ನಾಯಕರು ತಮ್ಮದೇ ಆದ ನಿರ್ಧಾರ ತೆಗೆದುಕೊಳ್ಳಬಹುದು. ಆದರೆ, ಕಾರ್ಯಕರ್ತರು ನೇರವಾಗಿ ಜನರೊಂದಿಗೆ ಸಂಪರ್ಕ ಹೊಂದಿದ್ದಾರೆ ಎಂದು ಪವಾರ್ ಹೇಳಿದರು.

2024ರ ಲೋಕಸಭೆ ಚುನಾವಣೆಯಲ್ಲಿ ಉತ್ತಮ ಪ್ರದರ್ಶನ ನೀಡಿರುವುದರಿಂದ ಪಕ್ಷದ ಕಾರ್ಯಕರ್ತರಲ್ಲಿ ನಿರೀಕ್ಷೆ ಹೆಚ್ಚಿದೆ. ಆದರೆ, ಎಲ್ಲ ಮಿತ್ರಪಕ್ಷಗಳು ಹೊಂದಾಣಿಕೆ ಮಾಡಿಕೊಳ್ಳಬೇಕಿದೆ. ಲೋಕಸಭೆ ಚುನಾವಣೆಯಂತೆ ವಿಧಾನಸಭೆ ಚುನಾವಣೆಗೂ ನೀವು ಶ್ರಮಿಸುತ್ತೀರಿ ಎಂದು ಭಾವಿಸುತ್ತೇನೆ ಎಂದು ಪವಾರ್ ತಮ್ಮ ಪಕ್ಷದ ಕಾರ್ಯಕರ್ತರಿಗೆ ಕರೆ ನೀಡಿದರು.

ಮಹಾರಾಷ್ಟ್ರದ 40 ಲೋಕಸಭಾ ಸ್ಥಾನಗಳ ಪೈಕಿ ಎಂವಿಎ 30 ಸ್ಥಾನಗಳನ್ನು ಗೆದ್ದಿದೆ. ಕಾಂಗ್ರೆಸ್ 13, ಶಿವಸೇನೆ (ಯುಬಿಟಿ) 9 ಮತ್ತು ಎನ್‌ಸಿಪಿ (ಎಸ್‌ಪಿ) 8 ಸ್ಥಾನಗಳನ್ನು ಪಡೆದಿದೆ.

ಇದನ್ನೂ ಓದಿ; ರಾಜಕೀಯ ತಜ್ಞನ ಸಕ್ರಿಯ ರಾಜಕಾರಣ; ಗಾಂಧಿ ಜಯಂತಿಯಂದು ಪ್ರಶಾಂತ್ ಕಿಶೋರ್‌ ಅವರಿಂದ ಪಕ್ಷದ ಹೆಸರು ಘೋಷಣೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಬಜೆಟ್ 2026: ‘ಇದು ನನ್ನ ರಾಜಕೀಯ ಜೀವನದ ಅತ್ಯಂತ ನಿರಾಶಾದಾಯಕ ಬಜೆಟ್’: ಸಿಎಂ ಸಿದ್ದರಾಮಯ್ಯ

‘ಮೋದಿ ಸರ್ಕಾರ ಆರ್ಥಿಕ ದೂರದೃಷ್ಟಿಕೋನಗಳಿಲ್ಲದೆ, ದೇಶವನ್ನು ಯಾವ ದಿಕ್ಕಿನತ್ತ ಮುನ್ನಡೆಸಬೇಕು ಎನ್ನುವುದರ ಬಗ್ಗೆ ಸ್ಪಷ್ಟತೆ ಇಲ್ಲದೆ ದಣಿದಿದೆ ಎಂಬುದರ ಸಂಕೇತ ಈ 2026 ಬಜೆಟ್’ ಎಂದು ಸಿಎಂ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ.  ಕಲಬುರಗಿ ವಿಮಾನ...

ಕೇಂದ್ರ ಬಜೆಟ್ 2026: ಅಪರೂಪದ ಭೂಮಿಯ ಕಾರಿಡಾರ್‌ನಿಂದ ಹೈಸ್ಪೀಡ್ ರೈಲಿನವರೆಗೆ: ಚುನಾವಣೆ ನಡೆಯಲಿರುವ ರಾಜ್ಯಗಳಿಗೆ ಕೇಂದ್ರ ಬಜೆಟ್ ನಲ್ಲಿ ಸಿಕ್ಕಿದ್ದೇನು?

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಲೋಕಸಭೆಯಲ್ಲಿ ತಮ್ಮ ಸತತ 9 ನೇ ಬಜೆಟ್ ಅನ್ನು ಮಂಡಿಸಿದ್ದಾರೆ. ಈ ಬಜೆಟ್ ನಲ್ಲಿ ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಂತಹ ಚುನಾವಣೆ...

ಬಲೂಚಿಸ್ತಾನ: ಭದ್ರತಾ ಕಾರ್ಯಾಚರಣೆಯಲ್ಲಿ 15 ಪಾಕ್ ಸೈನಿಕರು, 92 ಭಯೋತ್ಪಾದಕರು ಸಾವು

ಬಲೂಚಿಸ್ತಾನ ಪ್ರಾಂತ್ಯದ ಸುಮಾರು 12 ಸ್ಥಳಗಳಲ್ಲಿ ನಡೆದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಲ್ಲಿ ಕನಿಷ್ಠ 15 ಪಾಕಿಸ್ತಾನಿ ಸೈನಿಕರು ಮತ್ತು 92 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನಿ ಸೇನೆ ತಿಳಿಸಿರುವುದಾಗಿ ಪಿಟಿಐ ವರದಿ...

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...

ಗಾಜಾದಲ್ಲಿ ಇಸ್ರೇಲ್ ನಡೆಸಿದ ಹೊಸ ಕದನ ವಿರಾಮ ಉಲ್ಲಂಘನೆಯಲ್ಲಿ ಮಕ್ಕಳು ಸೇರಿದಂತೆ 31 ಮಂದಿ ಸಾವು

ಮೇ 2024ರ ನಂತರ ಇಸ್ರೇಲ್ ಮೊದಲ ಬಾರಿಗೆ ಈಜಿಪ್ಟ್‌ನೊಂದಿಗೆ ರಫಾ ಕ್ರಾಸಿಂಗ್ ಅನ್ನು ಮತ್ತೆ ತೆರೆಯಲು ಸಜ್ಜಾಗುತ್ತಿರುವ ಒಂದು ದಿನ ಮೊದಲು, ಅಲ್ ಜಜೀರಾ ಜೊತೆ ಮಾತನಾಡಿದ ವೈದ್ಯಕೀಯ ಮೂಲಗಳು, ಬೆಳಗಿನ ಜಾವದಿಂದ...

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...