Homeಮುಖಪುಟ'ನಾವು ಸತ್ಯದೊಂದಿಗೆ ನಿಂತು, ಅಹಿಂಸಾ ಮಾರ್ಗ ಅನುಸರಿಸಬೇಕು': ರಾಹುಲ್ ಗಾಂಧಿ

‘ನಾವು ಸತ್ಯದೊಂದಿಗೆ ನಿಂತು, ಅಹಿಂಸಾ ಮಾರ್ಗ ಅನುಸರಿಸಬೇಕು’: ರಾಹುಲ್ ಗಾಂಧಿ

- Advertisement -
- Advertisement -

‘ಯಾರನ್ನೂ ಹೆದರಿಸಬೇಡಿ ಮತ್ತು ಯಾವುದಕ್ಕೂ ಹೆದರಬೇಡಿ ಎಂದು ಪ್ರತಿಯೊಂದು ಧರ್ಮವೂ ನಮಗೆ ಕಲಿಸುತ್ತದೆ’ ಎಂದು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ. ‘ಪ್ರತಿ ಧರ್ಮವೂ ಸಹ ಸತ್ಯದ ಜೊತೆಗೆ ನಿಲ್ಲುವ ಮತ್ತು ಅಹಿಂಸೆಯ ಮಾರ್ಗವನ್ನು ಅನುಸರಿಸುವ ಪಾಠವನ್ನು ನೀಡುತ್ತದೆ’ ಎಂದು ಅವರು ಲೋಕಸಭೆಯಲ್ಲಿ ಬಿಜೆಪಿ-ಆರ್‌ಎಸ್‌ಎಸ್‌ ವಿರುದ್ಧದ ತಮ್ಮ ಬೆಂಕಿಯುಗುಳುವ ಭಾಷಣದ ನಂತರ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿದ್ದಾರೆ.

“ಪ್ರತಿ ಧರ್ಮವು ಕಲಿಸುತ್ತದೆ.. ಯಾರನ್ನೂ ಹೆದರಿಸಬೇಡಿ ಮತ್ತು ಯಾವುದಕ್ಕೂ ಹೆದರಬೇಡಿ. ಸತ್ಯದ ಜೊತೆಗೆ ನಿಲ್ಲಿರಿ, ಹಿಂದೆ ಸರಿಯಬೇಡಿ ಮತ್ತು ಅಹಿಂಸೆಯ ಮಾರ್ಗವನ್ನು ಅನುಸರಿಸಿ. ಯಾವಾಗ ಬಿಜೆಪಿ ದೇಶದಲ್ಲಿ ಭಯವನ್ನು ಹರಡುತ್ತದೆ, ಇಂಡಿಯಾ ಒಕ್ಕೂಟವು ಸಂವಿಧಾನ ಮತ್ತು ಪ್ರಜಾಪ್ರಭುತ್ವವನ್ನು ರಕ್ಷಿಸಲು ಈ ಚಿಂತನೆಯನ್ನು ಅಳವಡಿಸಿಕೊಂಡಿದೆ” ಎಂದಿದ್ದಾರೆ.

ಸೋಮವಾರದ ಲೋಕಸಭೆ ಅಧಿವೇಶನದಲ್ಲಿ ವಿರೋಧ ಪಕ್ಷದ ನಾಯಕರಾಗಿ ರಾಹುಲ್ ಗಾಂಧಿ ಮಾಡಿದ ಚೊಚ್ಚಲ ಭಾಷಣವು ಬಿಜೆಪಿ ನಾಯಕರು “ಸುಳ್ಳು ಮಾತನಾಡುತ್ತಿದ್ದಾರೆ, ಸದನವನ್ನು ದಾರಿ ತಪ್ಪಿಸುತ್ತಿದ್ದಾರೆ ಮತ್ತು ಇಡೀ ಹಿಂದೂ ಸಮುದಾಯವನ್ನು ಹಿಂಸಾತ್ಮಕ ಎಂದು ಕರೆದಿದ್ದಾರೆ” ಎಂದು ಆರೋಪಿಸುವುದರೊಂದಿಗೆ ರಾಜಕೀಯ ಬಿಸಿಯನ್ನು ಸೃಷ್ಟಿಸಿತು.

ಲೋಕಸಭೆ ಪ್ರಚಾರದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ‘ವಿಭಜನಾಕಾರಿ’ ಭಾಷಣ ಮಾಡಿದ್ದಾರೆ ಎಂದು ಆರೋಪಿಸಿ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರ ಹೇಳಿಕೆಗೆ ಬಿಜೆಪಿ ಸದಸ್ಯರು ಪದೇಪದೆ ಆಕ್ಷೇಪ ವ್ಯಕ್ತಪಡಿಸುವ ವಾತಾವರಣ ರಾಜ್ಯಸಭೆಯಲ್ಲೂ ವ್ಯಕ್ತವಾಯಿತು.

ಉಭಯ ಸದನಗಳು ಅಧ್ಯಕ್ಷರ ಭಾಷಣದ ಮೇಲಿನ ಧನ್ಯವಾದ ನಿರ್ಣಯದ ಮೇಲೆ ಚರ್ಚೆಯನ್ನು ಕೈಗೆತ್ತಿಕೊಂಡವು, ಪ್ರಧಾನಿ ಮೋದಿ ತಮ್ಮ ಭಾಷಣದ ಸಮಯದಲ್ಲಿ ರಾಹುಲ್ ಗಾಂಧಿಯವರ ‘ಮೋದಿ ವಿರುದ್ಧ’ದ ಹೇಳಿಕೆಯನ್ನು ‘ಹಿಂದೂ ವಿರೋಧಿ’ ಎಂದು ಬಿಂಬಿಸಲು ಯತ್ನಿಸಿದರು.

ಇಡೀ ಹಿಂದೂ ಸಮುದಾಯವನ್ನು ಹಿಂಸಾತ್ಮಕ ಎಂದು ಕರೆಯುವುದು ಬಹಳ ಗಂಭೀರವಾದ ವಿಷಯ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ. ರಾಹುಲ್ ಗಾಂಧಿ ಕ್ಷಮೆಯಾಚಿಸಬೇಕು ಎಂದು ಗೃಹ ಸಚಿವ ಅಮಿತ್ ಶಾ ಆಗ್ರಹಿಸಿದ್ದಾರೆ. ರಾಹುಲ್ ಗಾಂಧಿ ಹೇಳಿಕೆಯನ್ನು ಖಂಡಿಸಲು ಬಿಜೆಪಿ ನಂತರ ಪತ್ರಿಕಾಗೋಷ್ಠಿ ನಡೆಸಿದರೆ, ಕೇಂದ್ರದ ಆಡಳಿತ ಪಕ್ಷವನ್ನು ತರಾಟೆಗೆ ತೆಗೆದುಕೊಳ್ಳಲು ಕಾಂಗ್ರೆಸ್ ಸಂಜೆ ಪತ್ರಿಕಾಗೋಷ್ಠಿಯನ್ನು ನಡೆಸಿತು.

ಲೋಕಸಭೆ ಪ್ರಚಾರ, ನೀಟ್‌-ಯುಜಿ ವಿವಾದ, ಅಗ್ನಿವೀರ್‌ ಸ್ಕೀಮ್‌ ಕುರಿತಂತೆ ಬಿಜೆಪಿಯನ್ನು ಗುರಿಯಾಗಿಸಿಕೊಂಡು ರಾಹುಲ್‌ ಗಾಂಧಿ ಅವರು ಬಿಜೆಪಿ ವಿರುದ್ಧ ಬಹುಮುಖ ವಾಗ್ದಾಳಿ ನಡೆಸಿದರು. ರಾಷ್ಟ್ರಪತಿಗಳ ಭಾಷಣದ ಮೇಲಿನ ವಂದನಾ ನಿರ್ಣಯದ ಮೇಲಿನ ಚರ್ಚೆಯಲ್ಲಿ ಪಾಲ್ಗೊಂಡು ಮಾತನಾಡಿದ ರಾಹುಲ್ ಗಾಂಧಿ, ಅಗ್ನಿವೀರ್ ಯೋಜನೆ ಬಗ್ಗೆ ಬಿಜೆಪಿ ನೇತೃತ್ವದ ಸರ್ಕಾರವನ್ನು ಗುರಿಯಾಗಿಸಿಕೊಂಡರು ಮತ್ತು ಅಗ್ನಿವೀರ್ ಅವರನ್ನು ‘ಜವಾನ್’ ಎಂದು ಕರೆಯುವುದಿಲ್ಲ ಮತ್ತು ನಾಲ್ಕು ವರ್ಷಗಳ ಅವಧಿಗೆ ಸೇವೆ ಸಲ್ಲಿಸುವ ಅಗ್ನಿವೀರರನ್ನು ಕರೆಯುವುದಿಲ್ಲ ಎಂದು ಹೇಳಿದರು.

“ಒಬ್ಬ ಅಗ್ನಿವೀರ್ ನೆಲಬಾಂಬ್ ಸ್ಫೋಟದಲ್ಲಿ ತನ್ನ ಪ್ರಾಣವನ್ನು ಕಳೆದುಕೊಂಡಿದ್ದಾನೆ. ಆದರೆ ಅವನನ್ನು ‘ಹುತಾತ್ಮ’ ಎಂದು ಕರೆಯಲಾಗುವುದಿಲ್ಲ… ‘ಅಗ್ನಿವೀರ್’ ಒಂದು ಯೂಸ್ ಅಂಡ್ ಥ್ರೋ ಕಾರ್ಮಿಕ ಯೋಜನೆ” ಎಂದು ರಾಹುಲ್ ಗಾಂಧಿ ಆರೋಪಿಸಿದರು, ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರದ ಯೋಜನೆ ಬಗ್ಗೆ ವಾಗ್ದಾಳಿ ನಡೆಸಿದರು.

ನಿರ್ಭಯತೆ, ಭರವಸೆ ಮತ್ತು ಸುರಕ್ಷತೆಯನ್ನು ಸೂಚಿಸುವ ಹಿಂದೂ ಚಿಹ್ನೆ ‘ಅಭಯಮುದ್ರ’ವನ್ನು ಅವರು ಕಾಂಗ್ರೆಸ್ ಪಕ್ಷದ ಚಿಹ್ನೆ ಎಂದು ಕರೆದರು.

“ಅಭಯಮುದ್ರವು ಕಾಂಗ್ರೆಸ್‌ನ ಸಂಕೇತವಾಗಿದೆ… ಅಭಯಮುದ್ರವು ನಿರ್ಭಯತೆಯ ಸಂಕೇತವಾಗಿದೆ, ಇದು ಭಯವನ್ನು ಹೋಗಲಾಡಿಸುತ್ತದೆ ಮತ್ತು ಹಿಂದೂ ಧರ್ಮ, ಇಸ್ಲಾಂ, ಸಿಖ್ ಧರ್ಮ, ಬೌದ್ಧ ಧರ್ಮ ಮತ್ತು ಇತರ ಭಾರತೀಯ ಧರ್ಮಗಳಲ್ಲಿ ದೈವಿಕ ರಕ್ಷಣೆ ಮತ್ತು ಆನಂದವನ್ನು ನೀಡುವ ಭರವಸೆ ಮತ್ತು ಸುರಕ್ಷತೆಯ ಸೂಚಕವಾಗಿದೆ. ನಮ್ಮ ಎಲ್ಲ ಮಹಾಪುರುಷರು ಅಹಿಂಸೆ ಮತ್ತು ಭಯವನ್ನು ಮುಗಿಸುವ ಬಗ್ಗೆ ಮಾತನಾಡಿದ್ದಾರೆ… ಆದರೆ, ತಮ್ಮನ್ನು ತಾವು ಹಿಂದೂ ಎಂದು ಕರೆದುಕೊಳ್ಳುವವರು ಹಿಂಸೆ, ದ್ವೇಷ, ಅಸತ್ಯದ ಬಗ್ಗೆ ಮಾತ್ರ ಮಾತನಾಡುತ್ತಾರೆ… ನೀವು ಹಿಂದೂ ಅಲ್ಲವೇಅಲ್ಲ” ಎಂದು ಕಾಂಗ್ರೆಸ್ ನಾಯಕ ಬಿಜೆಪಿ-ಆರ್‌ಎಸ್‌ಎಸ್‌ ವಿರುದ್ಧ ವಾಗ್ದಾಳಿ ನಡೆಸಿದರು.

ಇದನ್ನೂ ಓದಿ; ಸಂಸತ್ ಅಧಿವೇಶನ : ರಾಹುಲ್ ಗಾಂಧಿಯ ಹೇಳಿಕೆಯನ್ನು ತಿರುಚಿ ಹಂಚಿಕೊಂಡ ಬಿಜೆಪಿಗರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...

ಚಲಿಸುತ್ತಿದ್ದ ಸ್ಲೀಪರ್ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ : ಚಾಲಕ, ಕಂಡಕ್ಟರ್ ಬಂಧನ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 2012ರಲ್ಲಿ ನಡೆದ ನಿರ್ಭಯಾ ಪ್ರಕರಣವನ್ನು ನೆನಪಿಸುವಂತಹ ಆಘಾತಕಾರಿ ಘಟನೆಯೊಂದು ನಡೆದಿದೆ. ಸ್ಲೀಪರ್‌ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಲಾಗಿದೆ. indiatoday.in ವರದಿಯ ಪ್ರಕಾರ, ಈ ಘಟನೆಯು ಆಗಸ್ಟ್ 4ರ...

ಜಗತ್ತಿನ ಪ್ರತಿಯೊಬ್ಬರಿಗೂ ಲ್ಯಾಪ್‌ಟಾಪ್ ಕೊಳ್ಳುವಷ್ಟು ಕಪ್ಪು ಹಣ ಪ್ರಪಂಚದಲ್ಲಿದೆ: ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್

ಅಕ್ರಮ ಹಣ ವರ್ಗಾವಣೆ (Money Laundering) ಮತ್ತು 'ಡಿಜಿಟಲ್ ಅರೆಸ್ಟ್' ನಂತಹ ಆನ್‌ಲೈನ್ ವಂಚನೆಗಳ ಪ್ರಮಾಣದ ಕುರಿತು ಭಾರತದ ಮುಖ್ಯ ನ್ಯಾಯಮೂರ್ತಿ (CJI) ಸೂರ್ಯ ಕಾಂತ್ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ಈ ರೀತಿಯ...

ಪೆಟ್ರೋಲ್‌ನಲ್ಲಿ ಎಥನಾಲ್ ಪ್ರಮಾಣ ಬಹಿರಂಗಪಡಿಸುವಂತೆ ಕೋರಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಪೆಟ್ರೋಲ್‌ನಲ್ಲಿ ಬೆರೆಸಲಾಗುವ ಎಥನಾಲ್ ಪ್ರಮಾಣವನ್ನು ಕಡ್ಡಾಯವಾಗಿ ನಮೂದಿಸಬೇಕು ಮತ್ತು ವಾಹನಗಳಿಗೆ ಎಥನಾಲ್ ಮಿಶ್ರಿತ ಇಂಧನದ ಹೊಂದಾಣಿಕೆಯ ಬಗ್ಗೆ ಹೆಚ್ಚಿನ ಪಾರದರ್ಶಕತೆ ತರಬೇಕು ಎಂದು ಕೋರಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ವಿಚಾರಣೆ...

ದೆಹಲಿ| ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ಒತ್ತುವರಿ ತೆರವು ಕಾರ್ಯಾಚರಣೆ ಆರಂಭಿಸಿದ ಎಂಸಿಡಿ

ದೆಹಲಿ ಹೈಕೋರ್ಟ್ ನಿರ್ದೇಶನದಂತೆ, ಮೊಘಲರ ಕಾಲದ ಐತಿಹಾಸಿಕ ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ನಿರ್ಮಾಣಗಳನ್ನು ಸಮೀಕ್ಷೆ ಮಾಡಿ, ಒತ್ತುವರಿಯನ್ನು ತೆರವುಗೊಳಿಸುವ ಬೃಹತ್ ಕಾರ್ಯಾಚರಣೆಯನ್ನು ದೆಹಲಿ ಮಹಾನಗರ ಪಾಲಿಕೆ (ಎಂಸಿಡಿ) ಸೋಮವಾರ (ಆ.31) ಪ್ರಾರಂಭಿಸಿದೆ...

ವೆನೆಜುವೆಲಾ ಮತ್ತೆ ಎದ್ದು ನಿಲ್ಲಲಿದೆ: ಬಂಧನದಲ್ಲಿರುವ ವೆನೆಜುವೆಲಾ ಮಾಜಿ ಅಧ್ಯಕ್ಷ ಮಡುರೊ ಮೊದಲ ಫೋಟೋ ಹಂಚಿಕೆ

ಜನವರಿಯಲ್ಲಿ ಅಮೆರಿಕ ಪಡೆಗಳಿಂದ ಬಂಧನಕ್ಕೊಳಗಾಗಿದ್ದ ವೆನೆಜುವೆಲಾದ ಮಾಜಿ ಅಧ್ಯಕ್ಷ ನಿಕೋಲಸ್ ಮಡುರೊ, ಅಮೆರಿಕದ ಬಂಧನ ಕೇಂದ್ರದಿಂದ ತಮ್ಮ ಎರಡು ಛಾಯಾಚಿತ್ರಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿದ್ದಾರೆ. ಬಂಧನದ ಬಳಿಕ ಮಡುರೊ ಅವರ ಫೋಟೋಗಳು ಹೊರಬಂದಿರುವುದು...

‘ಮಹಿಳೆಯರು ಆಭರಣದಂತೆ ಮನೆಯಲ್ಲೇ ಇರಬೇಕು’ ಮುಸ್ಲಿಂ ಧರ್ಮಗುರು ವಿವಾದಾತ್ಮಕ ಹೇಳಿಕೆ

ಮಹಿಳೆಯರು ಮನೆಯಲ್ಲೇ ಇರಬೇಕು ಮತ್ತು ಸಾರ್ವಜನಿಕ ಕ್ಷೇತ್ರಕ್ಕೆ ಪ್ರವೇಶಿಸಬಾರದು ಎಂದು ಕೇರಳದ ಪ್ರಭಾವಿ ಮುಸ್ಲಿಂ ಧರ್ಮಗುರು ಶೇಖ್ ಅಬೂಬಕರ್ ಅಹ್ಮದ್ ನೀಡಿದ ಹೇಳಿಕೆ ಸಾಮಾಜಿಕ ಮಾಧ್ಯಮಗಳಲ್ಲಿ ಹಾಗೂ ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆ...

ಹಲ್ದ್ವಾನಿ ‘ಶುದ್ಧೀಕರಣ’ ವಿವಾದ : ರಾಹುಲ್ ಗಾಂಧಿ ವಿರುದ್ಧ ಎಫ್‌ಐಆರ್

ಉತ್ತರಾಖಂಡದ ಹಲ್ದ್ವಾನಿಯಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ರ್‍ಯಾಲಿ ನಡೆದ ಸ್ಥಳದಲ್ಲಿ ಬಿಜೆಪಿ ಬೆಂಬಲಿಗರು 'ಶುದ್ಧೀಕರಣ' ನಡೆಸಿದ ವಿವಾದ ಹೊಸ ರಾಜಕೀಯ ಮತ್ತು ಕಾನೂನು ತಿರುವು ಪಡೆದುಕೊಂಡಿದೆ. ಜಾತಿ ನಿಂದನೆಗೆ ಸಂಬಂಧಿಸಿದಂತೆ...

ಜೈಲಿನಲ್ಲಿದ್ದ KPSC ಅಧ್ಯಕ್ಷರ ಭೇಟಿಯಾಗಿದ್ದೇಕೆ HDK? ಪ್ರಿಯಾಂಕ್ ಖರ್ಗೆ ಪ್ರಶ್ನೆ

ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ನೇಮಕಾತಿ ವಿಚಾರವಾಗಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಿರುದ್ಧ ಕೇಳಿಬಂದಿರುವ ಗಂಭೀರ ಆರೋಪಗಳಿಗೆ ಅವರು ತಾರ್ಕಿಕ ಸ್ಪಷ್ಟನೆ ನೀಡುವ ಬದಲು, ಜಾರಿಕೊಳ್ಳುವ ರೀತಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ್ದಾರೆ ಎಂದು...

ನೇಪಾಳ: ಶಿಕ್ಷಕನ ಸಮಯಪ್ರಜ್ಞೆಯಿಂದ ಉಳಿಯಿತು 1643 ಮಕ್ಕಳ ಪ್ರಾಣ

ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಜಲಪ್ರಳಯಕ್ಕೆ ಬಲಿಯಾದವರ ಸಂಖ್ಯೆ 700ರ ಗಡಿ ದಾಟಿದೆ. 2,000ಕ್ಕೂ ಹೆಚ್ಚು ಜನರು ಇಂದಿಗೂ ನಾಪತ್ತೆಯಾಗಿದ್ದು, ರಕ್ಷಣಾ ಪಡೆಗಳು ಅವಿಶ್ರಾಂತವಾಗಿ ಶೋಧ ಕಾರ್ಯ ನಡೆಸುತ್ತಿವೆ. ಪ್ರಕೃತಿ ತನ್ನ...