Homeಕರ್ನಾಟಕಶಿರಾ ಉಪಚುನಾವಣೆ: ಪಕ್ಷಕ್ಕೆ ಸತ್ವಪರೀಕ್ಷೆಯಾಗಿದ್ದು, ಚುನಾವಣೆ ಗೆಲ್ಲಲೇಬೇಕು -ಎಚ್.ಡಿ.ಕೆ

ಶಿರಾ ಉಪಚುನಾವಣೆ: ಪಕ್ಷಕ್ಕೆ ಸತ್ವಪರೀಕ್ಷೆಯಾಗಿದ್ದು, ಚುನಾವಣೆ ಗೆಲ್ಲಲೇಬೇಕು -ಎಚ್.ಡಿ.ಕೆ

ಈ ಹಿಂದೆ ಕಾಂಗ್ರೆಸ್ ಜೊತೆ ಸರ್ಕಾರ ರಚಿಸಿದಾಗ ನಾನು ಕಾರಕೂನನಂತೆ ಕೆಲಸ ಮಾಡಬೇಕಾಯಿತು. ಕಾಂಗ್ರೆಸ್ ಮುಖಂಡರು ಸಹಿ ಹಾಕಬೇಕೆಂದ ಕಡೆ ಸಹಿ ಹಾಕುವಂತಹ ಪರಿಸ್ಥಿತಿ ಇತ್ತು ಎಂದು ಕುಮಾರಸ್ವಾಮಿ ಆರೋಪಿಸಿದ್ದಾರೆ.

- Advertisement -
- Advertisement -

ಶಿರಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಪಕ್ಷ ಗೆಲ್ಲಲೇಬೇಕು. ಇದು ನಮಗೆ ಸತ್ವ ಪರೀಕ್ಷೆಯಾಗಿದೆ. ಗೆಲುವಿಗೆ ಕಾರ್ಯಕರ್ತರ ವಿಶ್ವಾಸ ಮುಖ್ಯವಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.

ಬೆಂಗಳೂರಿನಲ್ಲಿ ಪಕ್ಷದ ಕಚೇರಿಯಲ್ಲಿ ನಡೆದ ಶಿರಾ ಕ್ಷೇತ್ರದ ಮುಖಂಡರು ಮತ್ತು ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ಉಪಚುನಾವಣೆ ಸಾಮಾನ್ಯವಲ್ಲ, ಇದನ್ನು ಕಾರ್ಯಕರ್ತರು ಅರ್ಥಮಾಡಿಕೊಂಡು ಪಕ್ಷದ ಅಭ್ಯರ್ಥಿಯನ್ನು ಒಗ್ಗಟ್ಟಿನಿಂದ ಗೆಲ್ಲಿಸಿಕೊಳ್ಳಬೇಕು ಎಂದು ಮನವಿ ಮಾಡಿದ್ದಾರೆ.

ಉಪಚುನಾವಣೆಯಲ್ಲಿ ಬಿಜೆಪಿ ಹಣದ ಹೊಳೆ ಹರಿಸುತ್ತಿದೆ. ದೇವಾಲಯಗಳಿಗೆ ಹಣ ನೀಡುತ್ತಿದೆ. ಬಿಜೆಪಿ ಮತ್ತು ಕಾಂಗ್ರೆಸ್ ಪ್ರಚಾರ ಆರಂಭಿಸಿವೆ. ಜೆಡಿಎಸ್ ನಲ್ಲಿ ಯಾವುದೇ ಚಟುವಟಿಕೆ ನಡೆಯುತ್ತಿಲ್ಲ ಎಂಬ ಬಗ್ಗೆ ಮಾಧ್ಯಮಗಳಲ್ಲಿ ಸುದ್ದಿಗಳು ಬರುತ್ತಿರುವುದನ್ನು ಗಮನಿಸುತ್ತಿದ್ದೇನೆ’. ಬಿಜೆಪಿ ಮುಖಂಡರ ದಂಡೇ ಶಿರಾದತ್ತ ಹೋಗುತ್ತಿದೆ. ಆಮಿಷಗಳನ್ನು ಒಡ್ಡುತ್ತಿದೆ. ದೇವಾಲಯಗಳಿಗೆ ಹಣ ನೀಡುವುದಾಗಿ ಹೇಳುತ್ತಿದೆ. ಆದರೆ ರಾಜ್ಯ ಸರ್ಕಾರ ಪ್ರವಾಹ ಸಂತ್ರಸ್ತರಿಗೆ ಮನೆ ಕಟ್ಟಿಸಿಕೊಡುವ ಭರವಸೆ ಈಡೇರಿಸಿಲ್ಲ. ಕೊರೊನ ನಿಯಂತ್ರಣವನ್ನೂ ಸಮರ್ಪಕವಾಗಿ ನಿರ್ವಹಿಸಿಲ್ಲ. ಕೊರೊನ ಹಣವನ್ನು ಲೂಟಿ ಮಾಡುತ್ತಿದೆ. ನಿತ್ಯವೂ ಪತ್ರಿಗಳಲ್ಲಿ ಸರ್ಕಾರದ ವೈಫಲ್ಯದ ಕುರಿತು ಸುದ್ದಿ ಬರುತ್ತಲೇ ಇದೆ ಎಂದು ಅವರು ತಿಳಿಸಿದ್ದಾರೆ.

ಇದನ್ನೂ ಓದಿ: ಶಿರಾ ಉಪಚುನಾವಣೆ: ಜಯಚಂದ್ರ ಅವರಿಗೆ ‘ಒಳೇಟು’ ನೀಡುವರೇ ಕೆಎನ್ಆರ್?

ಮಳೆಯಿಂದ ಸಂತ್ರಸ್ತರಾದ ಕುಟುಂಬಗಳಿಗೆ ಸರ್ಕಾರ 5 ಲಕ್ಷ ನೀಡುವುದಾಗಿ ಭರವಸೆ ನೀಡಿತು. ಆದರೆ ಒಂದು ಲಕ್ಷ ರೂಪಾಯಿ ಪರಿಹಾರವನ್ನು ಸರ್ಕಾರ ಕೊಟ್ಟಿಲ್ಲ. ಈ ಹಿಂದೆ ಹಲವು ಗ್ರಾಮಗಳನ್ನು ದತ್ತು ಪಡೆಯುವುದಾಗಿ ಹೇಳಿದ್ದರು. ಎಷ್ಟು ಗ್ರಾಮಗಳನ್ನು ದತ್ತು ಪಡೆದು ಅಭಿವೃದ್ಧಿ ಮಾಡಿದ್ದಾರೆ? ಎಂದು ಕುಮಾರಸ್ವಾಮಿ ಪ್ರಶ್ನಿಸಿದರು.

ಈ ಹಿಂದೆ ಕಾಂಗ್ರೆಸ್ ಜೊತೆ ಸರ್ಕಾರ ರಚಿಸಿದಾಗ ನಾನು ಕಾರಕೂನನಂತೆ ಕೆಲಸ ಮಾಡಬೇಕಾಯಿತು. ಕಾಂಗ್ರೆಸ್ ಮುಖಂಡರು ಸಹಿ ಹಾಕಬೇಕೆಂದ ಕಡೆ ಸಹಿ ಹಾಕುವಂತಹ ಪರಿಸ್ಥಿತಿ ಇತ್ತು. ಇಂತಹ ಪರಿಸ್ಥಿತಿಯ ನಡುವೆಯೂ ನಾನು ಸ್ವಾಮೀಜಿ ಜೊತೆ ನ್ಯೂಜರ್ಸಿಗೆ ಹೋದೆ. ಸರ್ಕಾರ ಬಿದ್ದುಹೋಗುತ್ತೆ, ಹೋಗಬೇಡಿ ಎಂದು ಹೇಳಿದರು. ಆದರೂ ಹೋದೆ. ಕಾಂಗ್ರೆಸ್ ಹಿಂಸೆಯನ್ನು ಸಹಿಸಲು ಆಗಲಿಲ್ಲ. ಹಾಗಾಗಿಯೇ ನ್ಯೂಜರ್ಸಿಗೆ ಹೋಗಿ ಎಂಟು ದಿನ ಉಳಿದೆ ಎಂದು ತಮ್ಮ ನಡೆಯನ್ನು ಸಮರ್ಥಿಸಿಕೊಂಡಿದ್ದಾರೆ.

ನನಗೆ ಆರೋಗ್ಯ ಸರಿಯಿಲ್ಲ. ದೇವೇಗೌಡರಿಗೆ ವಯಸ್ಸಾಗಿದೆ. ಇಂತಹ ಸಂದರ್ಭದಲ್ಲಿ ಶಿರಾ ಕ್ಷೇತ್ರದ ಮುಖಂಡರು ಮತ್ತು ಕಾರ್ಯಕರ್ತರು ಒಂದೆಡೆ ಕುಳಿತು ಚರ್ಚೆ ಮಾಡಬೇಕು. ವಿಶ್ವಾಸಕ್ಕೆ ಬರಬೇಕು. ನಾನು ನಿಮ್ಮನ್ನು ಇಲ್ಲಿ ಕರೆದಿರುವುದು ಅಭ್ಯರ್ಥಿಯ ಹೆಸರನ್ನು ಘೋಷಿಸಲು ಅಲ್ಲ. ನೀವು ಸಭೆ ಸೇರಿ ಒಮ್ಮತದ ತೀರ್ಮಾನಕ್ಕೆ ಬನ್ನಿ. ನಿಮ್ಮ ವಿಶ್ವಾಸವಿಲ್ಲದೆ ನಾನು ಏನನ್ನೂ ಮಾಡಲು ಸಾಧ್ಯವಿಲ್ಲ ಎಂದರು.

ಇದೇ ವೇಳೆ ಶಿರಾ ಕ್ಷೇತ್ರದ ಮುಖಂಡರು ಮತ್ತು ಕುಮಾರಸ್ವಾಮಿ ರಹಸ್ಯ ಸಭೆ ನಡೆಸಿದ್ದು ಉಪಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿ ಗೆಲುವಿಗೆ ಕೈಗೊಳ್ಳಬೇಕಾದ ತಂತ್ರಗಳ ಕುರಿತು ಚರ್ಚೆ ನಡೆಯುತು ಎಂದು ತಿಳಿದುಬಂದಿದೆ.


ಇದನ್ನೂ ಓದಿ: ಶಿರಾ ಉಪ ಚುನಾವಣೆ: ಶಿರಾ ಕ್ಷೇತ್ರದಿಂದ ಬಿ.ಸುರೇಶ್ ಗೌಡ ಕಣಕ್ಕೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....