Homeಕರ್ನಾಟಕಶಿರಾ ಉಪಚುನಾವಣೆ: ಪಕ್ಷಕ್ಕೆ ಸತ್ವಪರೀಕ್ಷೆಯಾಗಿದ್ದು, ಚುನಾವಣೆ ಗೆಲ್ಲಲೇಬೇಕು -ಎಚ್.ಡಿ.ಕೆ

ಶಿರಾ ಉಪಚುನಾವಣೆ: ಪಕ್ಷಕ್ಕೆ ಸತ್ವಪರೀಕ್ಷೆಯಾಗಿದ್ದು, ಚುನಾವಣೆ ಗೆಲ್ಲಲೇಬೇಕು -ಎಚ್.ಡಿ.ಕೆ

ಈ ಹಿಂದೆ ಕಾಂಗ್ರೆಸ್ ಜೊತೆ ಸರ್ಕಾರ ರಚಿಸಿದಾಗ ನಾನು ಕಾರಕೂನನಂತೆ ಕೆಲಸ ಮಾಡಬೇಕಾಯಿತು. ಕಾಂಗ್ರೆಸ್ ಮುಖಂಡರು ಸಹಿ ಹಾಕಬೇಕೆಂದ ಕಡೆ ಸಹಿ ಹಾಕುವಂತಹ ಪರಿಸ್ಥಿತಿ ಇತ್ತು ಎಂದು ಕುಮಾರಸ್ವಾಮಿ ಆರೋಪಿಸಿದ್ದಾರೆ.

- Advertisement -
- Advertisement -

ಶಿರಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಪಕ್ಷ ಗೆಲ್ಲಲೇಬೇಕು. ಇದು ನಮಗೆ ಸತ್ವ ಪರೀಕ್ಷೆಯಾಗಿದೆ. ಗೆಲುವಿಗೆ ಕಾರ್ಯಕರ್ತರ ವಿಶ್ವಾಸ ಮುಖ್ಯವಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.

ಬೆಂಗಳೂರಿನಲ್ಲಿ ಪಕ್ಷದ ಕಚೇರಿಯಲ್ಲಿ ನಡೆದ ಶಿರಾ ಕ್ಷೇತ್ರದ ಮುಖಂಡರು ಮತ್ತು ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ಉಪಚುನಾವಣೆ ಸಾಮಾನ್ಯವಲ್ಲ, ಇದನ್ನು ಕಾರ್ಯಕರ್ತರು ಅರ್ಥಮಾಡಿಕೊಂಡು ಪಕ್ಷದ ಅಭ್ಯರ್ಥಿಯನ್ನು ಒಗ್ಗಟ್ಟಿನಿಂದ ಗೆಲ್ಲಿಸಿಕೊಳ್ಳಬೇಕು ಎಂದು ಮನವಿ ಮಾಡಿದ್ದಾರೆ.

ಉಪಚುನಾವಣೆಯಲ್ಲಿ ಬಿಜೆಪಿ ಹಣದ ಹೊಳೆ ಹರಿಸುತ್ತಿದೆ. ದೇವಾಲಯಗಳಿಗೆ ಹಣ ನೀಡುತ್ತಿದೆ. ಬಿಜೆಪಿ ಮತ್ತು ಕಾಂಗ್ರೆಸ್ ಪ್ರಚಾರ ಆರಂಭಿಸಿವೆ. ಜೆಡಿಎಸ್ ನಲ್ಲಿ ಯಾವುದೇ ಚಟುವಟಿಕೆ ನಡೆಯುತ್ತಿಲ್ಲ ಎಂಬ ಬಗ್ಗೆ ಮಾಧ್ಯಮಗಳಲ್ಲಿ ಸುದ್ದಿಗಳು ಬರುತ್ತಿರುವುದನ್ನು ಗಮನಿಸುತ್ತಿದ್ದೇನೆ’. ಬಿಜೆಪಿ ಮುಖಂಡರ ದಂಡೇ ಶಿರಾದತ್ತ ಹೋಗುತ್ತಿದೆ. ಆಮಿಷಗಳನ್ನು ಒಡ್ಡುತ್ತಿದೆ. ದೇವಾಲಯಗಳಿಗೆ ಹಣ ನೀಡುವುದಾಗಿ ಹೇಳುತ್ತಿದೆ. ಆದರೆ ರಾಜ್ಯ ಸರ್ಕಾರ ಪ್ರವಾಹ ಸಂತ್ರಸ್ತರಿಗೆ ಮನೆ ಕಟ್ಟಿಸಿಕೊಡುವ ಭರವಸೆ ಈಡೇರಿಸಿಲ್ಲ. ಕೊರೊನ ನಿಯಂತ್ರಣವನ್ನೂ ಸಮರ್ಪಕವಾಗಿ ನಿರ್ವಹಿಸಿಲ್ಲ. ಕೊರೊನ ಹಣವನ್ನು ಲೂಟಿ ಮಾಡುತ್ತಿದೆ. ನಿತ್ಯವೂ ಪತ್ರಿಗಳಲ್ಲಿ ಸರ್ಕಾರದ ವೈಫಲ್ಯದ ಕುರಿತು ಸುದ್ದಿ ಬರುತ್ತಲೇ ಇದೆ ಎಂದು ಅವರು ತಿಳಿಸಿದ್ದಾರೆ.

ಇದನ್ನೂ ಓದಿ: ಶಿರಾ ಉಪಚುನಾವಣೆ: ಜಯಚಂದ್ರ ಅವರಿಗೆ ‘ಒಳೇಟು’ ನೀಡುವರೇ ಕೆಎನ್ಆರ್?

ಮಳೆಯಿಂದ ಸಂತ್ರಸ್ತರಾದ ಕುಟುಂಬಗಳಿಗೆ ಸರ್ಕಾರ 5 ಲಕ್ಷ ನೀಡುವುದಾಗಿ ಭರವಸೆ ನೀಡಿತು. ಆದರೆ ಒಂದು ಲಕ್ಷ ರೂಪಾಯಿ ಪರಿಹಾರವನ್ನು ಸರ್ಕಾರ ಕೊಟ್ಟಿಲ್ಲ. ಈ ಹಿಂದೆ ಹಲವು ಗ್ರಾಮಗಳನ್ನು ದತ್ತು ಪಡೆಯುವುದಾಗಿ ಹೇಳಿದ್ದರು. ಎಷ್ಟು ಗ್ರಾಮಗಳನ್ನು ದತ್ತು ಪಡೆದು ಅಭಿವೃದ್ಧಿ ಮಾಡಿದ್ದಾರೆ? ಎಂದು ಕುಮಾರಸ್ವಾಮಿ ಪ್ರಶ್ನಿಸಿದರು.

ಈ ಹಿಂದೆ ಕಾಂಗ್ರೆಸ್ ಜೊತೆ ಸರ್ಕಾರ ರಚಿಸಿದಾಗ ನಾನು ಕಾರಕೂನನಂತೆ ಕೆಲಸ ಮಾಡಬೇಕಾಯಿತು. ಕಾಂಗ್ರೆಸ್ ಮುಖಂಡರು ಸಹಿ ಹಾಕಬೇಕೆಂದ ಕಡೆ ಸಹಿ ಹಾಕುವಂತಹ ಪರಿಸ್ಥಿತಿ ಇತ್ತು. ಇಂತಹ ಪರಿಸ್ಥಿತಿಯ ನಡುವೆಯೂ ನಾನು ಸ್ವಾಮೀಜಿ ಜೊತೆ ನ್ಯೂಜರ್ಸಿಗೆ ಹೋದೆ. ಸರ್ಕಾರ ಬಿದ್ದುಹೋಗುತ್ತೆ, ಹೋಗಬೇಡಿ ಎಂದು ಹೇಳಿದರು. ಆದರೂ ಹೋದೆ. ಕಾಂಗ್ರೆಸ್ ಹಿಂಸೆಯನ್ನು ಸಹಿಸಲು ಆಗಲಿಲ್ಲ. ಹಾಗಾಗಿಯೇ ನ್ಯೂಜರ್ಸಿಗೆ ಹೋಗಿ ಎಂಟು ದಿನ ಉಳಿದೆ ಎಂದು ತಮ್ಮ ನಡೆಯನ್ನು ಸಮರ್ಥಿಸಿಕೊಂಡಿದ್ದಾರೆ.

ನನಗೆ ಆರೋಗ್ಯ ಸರಿಯಿಲ್ಲ. ದೇವೇಗೌಡರಿಗೆ ವಯಸ್ಸಾಗಿದೆ. ಇಂತಹ ಸಂದರ್ಭದಲ್ಲಿ ಶಿರಾ ಕ್ಷೇತ್ರದ ಮುಖಂಡರು ಮತ್ತು ಕಾರ್ಯಕರ್ತರು ಒಂದೆಡೆ ಕುಳಿತು ಚರ್ಚೆ ಮಾಡಬೇಕು. ವಿಶ್ವಾಸಕ್ಕೆ ಬರಬೇಕು. ನಾನು ನಿಮ್ಮನ್ನು ಇಲ್ಲಿ ಕರೆದಿರುವುದು ಅಭ್ಯರ್ಥಿಯ ಹೆಸರನ್ನು ಘೋಷಿಸಲು ಅಲ್ಲ. ನೀವು ಸಭೆ ಸೇರಿ ಒಮ್ಮತದ ತೀರ್ಮಾನಕ್ಕೆ ಬನ್ನಿ. ನಿಮ್ಮ ವಿಶ್ವಾಸವಿಲ್ಲದೆ ನಾನು ಏನನ್ನೂ ಮಾಡಲು ಸಾಧ್ಯವಿಲ್ಲ ಎಂದರು.

ಇದೇ ವೇಳೆ ಶಿರಾ ಕ್ಷೇತ್ರದ ಮುಖಂಡರು ಮತ್ತು ಕುಮಾರಸ್ವಾಮಿ ರಹಸ್ಯ ಸಭೆ ನಡೆಸಿದ್ದು ಉಪಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿ ಗೆಲುವಿಗೆ ಕೈಗೊಳ್ಳಬೇಕಾದ ತಂತ್ರಗಳ ಕುರಿತು ಚರ್ಚೆ ನಡೆಯುತು ಎಂದು ತಿಳಿದುಬಂದಿದೆ.


ಇದನ್ನೂ ಓದಿ: ಶಿರಾ ಉಪ ಚುನಾವಣೆ: ಶಿರಾ ಕ್ಷೇತ್ರದಿಂದ ಬಿ.ಸುರೇಶ್ ಗೌಡ ಕಣಕ್ಕೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...