Homeಕರ್ನಾಟಕಶಿರಾ ಉಪಚುನಾವಣೆ: ಪಕ್ಷಕ್ಕೆ ಸತ್ವಪರೀಕ್ಷೆಯಾಗಿದ್ದು, ಚುನಾವಣೆ ಗೆಲ್ಲಲೇಬೇಕು -ಎಚ್.ಡಿ.ಕೆ

ಶಿರಾ ಉಪಚುನಾವಣೆ: ಪಕ್ಷಕ್ಕೆ ಸತ್ವಪರೀಕ್ಷೆಯಾಗಿದ್ದು, ಚುನಾವಣೆ ಗೆಲ್ಲಲೇಬೇಕು -ಎಚ್.ಡಿ.ಕೆ

ಈ ಹಿಂದೆ ಕಾಂಗ್ರೆಸ್ ಜೊತೆ ಸರ್ಕಾರ ರಚಿಸಿದಾಗ ನಾನು ಕಾರಕೂನನಂತೆ ಕೆಲಸ ಮಾಡಬೇಕಾಯಿತು. ಕಾಂಗ್ರೆಸ್ ಮುಖಂಡರು ಸಹಿ ಹಾಕಬೇಕೆಂದ ಕಡೆ ಸಹಿ ಹಾಕುವಂತಹ ಪರಿಸ್ಥಿತಿ ಇತ್ತು ಎಂದು ಕುಮಾರಸ್ವಾಮಿ ಆರೋಪಿಸಿದ್ದಾರೆ.

- Advertisement -
- Advertisement -

ಶಿರಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಪಕ್ಷ ಗೆಲ್ಲಲೇಬೇಕು. ಇದು ನಮಗೆ ಸತ್ವ ಪರೀಕ್ಷೆಯಾಗಿದೆ. ಗೆಲುವಿಗೆ ಕಾರ್ಯಕರ್ತರ ವಿಶ್ವಾಸ ಮುಖ್ಯವಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.

ಬೆಂಗಳೂರಿನಲ್ಲಿ ಪಕ್ಷದ ಕಚೇರಿಯಲ್ಲಿ ನಡೆದ ಶಿರಾ ಕ್ಷೇತ್ರದ ಮುಖಂಡರು ಮತ್ತು ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ಉಪಚುನಾವಣೆ ಸಾಮಾನ್ಯವಲ್ಲ, ಇದನ್ನು ಕಾರ್ಯಕರ್ತರು ಅರ್ಥಮಾಡಿಕೊಂಡು ಪಕ್ಷದ ಅಭ್ಯರ್ಥಿಯನ್ನು ಒಗ್ಗಟ್ಟಿನಿಂದ ಗೆಲ್ಲಿಸಿಕೊಳ್ಳಬೇಕು ಎಂದು ಮನವಿ ಮಾಡಿದ್ದಾರೆ.

ಉಪಚುನಾವಣೆಯಲ್ಲಿ ಬಿಜೆಪಿ ಹಣದ ಹೊಳೆ ಹರಿಸುತ್ತಿದೆ. ದೇವಾಲಯಗಳಿಗೆ ಹಣ ನೀಡುತ್ತಿದೆ. ಬಿಜೆಪಿ ಮತ್ತು ಕಾಂಗ್ರೆಸ್ ಪ್ರಚಾರ ಆರಂಭಿಸಿವೆ. ಜೆಡಿಎಸ್ ನಲ್ಲಿ ಯಾವುದೇ ಚಟುವಟಿಕೆ ನಡೆಯುತ್ತಿಲ್ಲ ಎಂಬ ಬಗ್ಗೆ ಮಾಧ್ಯಮಗಳಲ್ಲಿ ಸುದ್ದಿಗಳು ಬರುತ್ತಿರುವುದನ್ನು ಗಮನಿಸುತ್ತಿದ್ದೇನೆ’. ಬಿಜೆಪಿ ಮುಖಂಡರ ದಂಡೇ ಶಿರಾದತ್ತ ಹೋಗುತ್ತಿದೆ. ಆಮಿಷಗಳನ್ನು ಒಡ್ಡುತ್ತಿದೆ. ದೇವಾಲಯಗಳಿಗೆ ಹಣ ನೀಡುವುದಾಗಿ ಹೇಳುತ್ತಿದೆ. ಆದರೆ ರಾಜ್ಯ ಸರ್ಕಾರ ಪ್ರವಾಹ ಸಂತ್ರಸ್ತರಿಗೆ ಮನೆ ಕಟ್ಟಿಸಿಕೊಡುವ ಭರವಸೆ ಈಡೇರಿಸಿಲ್ಲ. ಕೊರೊನ ನಿಯಂತ್ರಣವನ್ನೂ ಸಮರ್ಪಕವಾಗಿ ನಿರ್ವಹಿಸಿಲ್ಲ. ಕೊರೊನ ಹಣವನ್ನು ಲೂಟಿ ಮಾಡುತ್ತಿದೆ. ನಿತ್ಯವೂ ಪತ್ರಿಗಳಲ್ಲಿ ಸರ್ಕಾರದ ವೈಫಲ್ಯದ ಕುರಿತು ಸುದ್ದಿ ಬರುತ್ತಲೇ ಇದೆ ಎಂದು ಅವರು ತಿಳಿಸಿದ್ದಾರೆ.

ಇದನ್ನೂ ಓದಿ: ಶಿರಾ ಉಪಚುನಾವಣೆ: ಜಯಚಂದ್ರ ಅವರಿಗೆ ‘ಒಳೇಟು’ ನೀಡುವರೇ ಕೆಎನ್ಆರ್?

ಮಳೆಯಿಂದ ಸಂತ್ರಸ್ತರಾದ ಕುಟುಂಬಗಳಿಗೆ ಸರ್ಕಾರ 5 ಲಕ್ಷ ನೀಡುವುದಾಗಿ ಭರವಸೆ ನೀಡಿತು. ಆದರೆ ಒಂದು ಲಕ್ಷ ರೂಪಾಯಿ ಪರಿಹಾರವನ್ನು ಸರ್ಕಾರ ಕೊಟ್ಟಿಲ್ಲ. ಈ ಹಿಂದೆ ಹಲವು ಗ್ರಾಮಗಳನ್ನು ದತ್ತು ಪಡೆಯುವುದಾಗಿ ಹೇಳಿದ್ದರು. ಎಷ್ಟು ಗ್ರಾಮಗಳನ್ನು ದತ್ತು ಪಡೆದು ಅಭಿವೃದ್ಧಿ ಮಾಡಿದ್ದಾರೆ? ಎಂದು ಕುಮಾರಸ್ವಾಮಿ ಪ್ರಶ್ನಿಸಿದರು.

ಈ ಹಿಂದೆ ಕಾಂಗ್ರೆಸ್ ಜೊತೆ ಸರ್ಕಾರ ರಚಿಸಿದಾಗ ನಾನು ಕಾರಕೂನನಂತೆ ಕೆಲಸ ಮಾಡಬೇಕಾಯಿತು. ಕಾಂಗ್ರೆಸ್ ಮುಖಂಡರು ಸಹಿ ಹಾಕಬೇಕೆಂದ ಕಡೆ ಸಹಿ ಹಾಕುವಂತಹ ಪರಿಸ್ಥಿತಿ ಇತ್ತು. ಇಂತಹ ಪರಿಸ್ಥಿತಿಯ ನಡುವೆಯೂ ನಾನು ಸ್ವಾಮೀಜಿ ಜೊತೆ ನ್ಯೂಜರ್ಸಿಗೆ ಹೋದೆ. ಸರ್ಕಾರ ಬಿದ್ದುಹೋಗುತ್ತೆ, ಹೋಗಬೇಡಿ ಎಂದು ಹೇಳಿದರು. ಆದರೂ ಹೋದೆ. ಕಾಂಗ್ರೆಸ್ ಹಿಂಸೆಯನ್ನು ಸಹಿಸಲು ಆಗಲಿಲ್ಲ. ಹಾಗಾಗಿಯೇ ನ್ಯೂಜರ್ಸಿಗೆ ಹೋಗಿ ಎಂಟು ದಿನ ಉಳಿದೆ ಎಂದು ತಮ್ಮ ನಡೆಯನ್ನು ಸಮರ್ಥಿಸಿಕೊಂಡಿದ್ದಾರೆ.

ನನಗೆ ಆರೋಗ್ಯ ಸರಿಯಿಲ್ಲ. ದೇವೇಗೌಡರಿಗೆ ವಯಸ್ಸಾಗಿದೆ. ಇಂತಹ ಸಂದರ್ಭದಲ್ಲಿ ಶಿರಾ ಕ್ಷೇತ್ರದ ಮುಖಂಡರು ಮತ್ತು ಕಾರ್ಯಕರ್ತರು ಒಂದೆಡೆ ಕುಳಿತು ಚರ್ಚೆ ಮಾಡಬೇಕು. ವಿಶ್ವಾಸಕ್ಕೆ ಬರಬೇಕು. ನಾನು ನಿಮ್ಮನ್ನು ಇಲ್ಲಿ ಕರೆದಿರುವುದು ಅಭ್ಯರ್ಥಿಯ ಹೆಸರನ್ನು ಘೋಷಿಸಲು ಅಲ್ಲ. ನೀವು ಸಭೆ ಸೇರಿ ಒಮ್ಮತದ ತೀರ್ಮಾನಕ್ಕೆ ಬನ್ನಿ. ನಿಮ್ಮ ವಿಶ್ವಾಸವಿಲ್ಲದೆ ನಾನು ಏನನ್ನೂ ಮಾಡಲು ಸಾಧ್ಯವಿಲ್ಲ ಎಂದರು.

ಇದೇ ವೇಳೆ ಶಿರಾ ಕ್ಷೇತ್ರದ ಮುಖಂಡರು ಮತ್ತು ಕುಮಾರಸ್ವಾಮಿ ರಹಸ್ಯ ಸಭೆ ನಡೆಸಿದ್ದು ಉಪಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿ ಗೆಲುವಿಗೆ ಕೈಗೊಳ್ಳಬೇಕಾದ ತಂತ್ರಗಳ ಕುರಿತು ಚರ್ಚೆ ನಡೆಯುತು ಎಂದು ತಿಳಿದುಬಂದಿದೆ.


ಇದನ್ನೂ ಓದಿ: ಶಿರಾ ಉಪ ಚುನಾವಣೆ: ಶಿರಾ ಕ್ಷೇತ್ರದಿಂದ ಬಿ.ಸುರೇಶ್ ಗೌಡ ಕಣಕ್ಕೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...