Homeಮುಖಪುಟ‘ನಮಗೆ ಕುಲಪತಿ ಬೇಕು, ಸಾವರ್ಕರ್‌ ಅಲ್ಲ': ರಾಜ್ಯಪಾಲರ ವಿರುದ್ಧ ವಿದ್ಯಾರ್ಥಿಗಳ ಪ್ರತಿಭಟನೆ

‘ನಮಗೆ ಕುಲಪತಿ ಬೇಕು, ಸಾವರ್ಕರ್‌ ಅಲ್ಲ’: ರಾಜ್ಯಪಾಲರ ವಿರುದ್ಧ ವಿದ್ಯಾರ್ಥಿಗಳ ಪ್ರತಿಭಟನೆ

- Advertisement -
- Advertisement -

ಕೇರಳದಲ್ಲಿ ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್ ಮತ್ತು ಪಿಣರಾಯಿ ವಿಜಯನ್ ನೇತೃತ್ವದ ಎಡರಂಗ ಸರ್ಕಾರದ ನಡುವಿನ ಕಿತ್ತಾಟ ಸದ್ಯಕ್ಕೆ ಕೊನೆಗೊಳ್ಳುವ ಲಕ್ಷಣ ಕಾಣುತಿಲ್ಲ.

ತಮ್ಮನ್ನು ಗೂಂಡಾಗಳು, ಕ್ರಿಮಿನಲ್‌ಗಳು ಎಂದಿರುವ ರಾಜ್ಯಪಾಲರ ವಿರುದ್ಧ ರೊಚ್ಚಿಗೆದ್ದಿರುವ ಸ್ಟೂಡೆಂಟ್ ಫೆಡರೇಶನ್‌ ಆಫ್ ಇಂಡಿಯಾ(ಎಸ್‌ಎಫ್‌ಐ) ಕಾರ್ಯಕರ್ತರು, ಕಳೆದ ಒಂದು ವಾರದಿಂದ ರಾಜ್ಯಪಾಲರು ಹೋದಲ್ಲಿ ಬಂದಲ್ಲಿ ಕಪ್ಪು ಬಟ್ಟೆ ಪ್ರದರ್ಶಿಸಿ ಪ್ರತಿಭಟಿಸುತ್ತಿದ್ದಾರೆ.

ಕಳೆದ ಮಂಗಳವಾರ ರಾಜ್ಯಪಾಲರು ಚಿಕಿತ್ಸೆಯ ಸಲುವಾಗಿ ತಿರುವನಂತಪುರಂನ ಮೆಡಿಕಲ್‌ ಕಾಲೇಜಿಗೆ ತೆರಳಿದ್ದರು. ಈ ವಿಷಯ ತಿಳಿದು ಕಾಲೇಜು ಬಳಿ ಬಂದ ಎಸ್‌ಎಫ್‌ಐ ಕಾರ್ಯಕರ್ತರು, ‘ನಮಗೆ ಕುಲಪತಿ ಬೇಕು, ಸಾವರ್ಕರ್ ಅಲ್ಲ’ ಎಂಬ ಬ್ಯಾನರ್ ಪ್ರದರ್ಶಿಸಿ ರಾಜ್ಯಪಾಲರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ವಿದ್ಯಾರ್ಥಿಗಳ ಈ ಪ್ರತಿಭಟನೆ ದೇಶದ ಗಮನ ಸೆಳೆದಿದೆ.

ರಾಷ್ಟ್ರಪತಿ, ಪ್ರಧಾನಿಗೆ ಪತ್ರ ಬರೆದ ಸಿಎಂ:

ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್ ಅವರನ್ನು ವಾಪಸ್‌ ಕರೆಸಿಕೊಳ್ಳಿ ಎಂದು ಆಗ್ರಹಿಸಿ ರಾಷ್ಟ್ರಪತಿ ದ್ರೌಪದಿ ಮುರ್ಮು ಮತ್ತು ಪ್ರಧಾನಿ ನರೇಂದ್ರ ಮೋದಿಯವರಿಗೆ ಗುರುವಾರ ಸಿಎಂ ಪಿಣರಾಯಿ ವಿಜಯನ್‌ ಪತ್ರ ಬರೆದಿದ್ದಾರೆ. ರಾಜ್ಯಪಾಲರು ಸಾಂವಿಧಾನಿಕ ಕರ್ತವ್ಯಗಳನ್ನು ಸರಿಯಾಗಿ ನಿಭಾಯಿಸುತ್ತಿಲ್ಲ. ಪದೇ ಪದೇ ಶಿಷ್ಟಾಚಾರ ಉಲ್ಲಂಘಿಸುತ್ತಿದ್ದಾರೆ ಎಂದು ಸಿಎಂ ತನ್ನ ಪತ್ರದಲ್ಲಿ ಆರೋಪಿಸಿದ್ದಾರೆ.

ಡಿಸೆಂಬರ್ 11ರಂದು ಆಡಳಿತಾರೂಢ ಸಿಪಿಐ(ಎಂ)ನ ವಿದ್ಯಾರ್ಥಿ ಘಟಕವಾದ ಸ್ಟೂಡೆಂಟ್ಸ್ ಫೆಡರೇಶನ್ ಆಫ್ ಇಂಡಿಯಾ (ಎಸ್‌ಎಫ್‌ಐ) ಕಾರ್ಯಕರ್ತರು ಕಪ್ಪು ಬಾವುಟ ಪ್ರದರ್ಶಿಸಿ ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್ ಅವರ ಕಾರಿಗೆ ಮುತ್ತಿಗೆ ಹಾಕಿದ್ದರು.

ರಾಜ್ಯಪಾಲರು ದೆಹಲಿಗೆ ಪ್ರಯಾಣಿಸಲು ತಿರುವನಂತಪುರಂ ವಿಮಾನ ನಿಲ್ದಾಣಕ್ಕೆ ತೆರಳುವ ದಾರಿ ಮಧ್ಯೆ ಈ ಘಟನೆ ನಡೆದಿತ್ತು. ತಕ್ಷಣ ಕಾರಿನಿಂದ ಕೆಳಗಿಳಿದಿದ್ದ ರಾಜ್ಯಪಾಲರು, ಸಿಎಂ ಕಳಿಸಿದ ಗೂಂಡಾಗಳು ನನ್ನ ಮೇಲೆ ದಾಳಿಗೆ ಯತ್ನಿಸಿದ್ದಾರೆ. ನನ್ನ ಮೇಲೆ ದೈಹಿಕವಾಗಿ ಹಲ್ಲೆ ಮಾಡುವ ಉದ್ದೇಶ ಅವರಿಗಿತ್ತು ಎಂದು ಮಾಧ್ಯಮಗಳ ಮುಂದೆ ಹೇಳಿದ್ದರು.

ತಮ್ಮ ಮೇಲೆ ಆರೋಪ ಹೊರಿಸಿದ ರಾಜ್ಯಪಾಲರ ವಿರುದ್ದ ಆಕ್ರೋಶ ವ್ಯಕ್ತಪಡಿಸಿದ ಎಸ್‌ಎಫ್‌ಐ ಕಾರ್ಯಕರ್ತರು, ಕ್ಯಾಲಿಕಟ್ ವಿಶ್ವ ವಿದ್ಯಾನಿಯಲದ ಅತಿಥಿ ಗೃಹದಲ್ಲಿ ರಾಜ್ಯಪಾಲರು ವಾಸ್ತವ್ಯ ಹೂಡಿದ್ದ ವೇಳೆ, ವಿವಿಯ ಹೊರಗಡೆ ಕಪ್ಪು ಬಟ್ಟೆಗಳನ್ನು ಕಟ್ಟಿ ಪ್ರತಿಭಟನೆ ನಡೆಸಿದ್ದರು.

ಇದಕ್ಕೆ ಪ್ರತಿಕ್ರಿಯಿಸಿದ್ದ ರಾಜ್ಯಪಾಲರು, “ಅವರು(ಎಸ್‌ಎಫ್‌ಐ ಕಾರ್ಯಕರ್ತರು) ಸಿಎಂ ಕಡೆಯ ಕ್ರಿಮಿನಲ್‌ಗಳು, ಗೂಂಡಾಗಳು ಎಂದಿದ್ದರು. ರಾಜ್ಯಪಾಲರ ಈ ಹೇಳಿಕೆಗೆ ಪ್ರತಿಕ್ರಿಯಿಸಿದ್ದ ಸಿಎಂ ಪಿಣರಾಯಿ ವಿಜಯನ್, ರಾಜ್ಯಪಾಲರು ರಾಜ್ಯದಲ್ಲಿ ಶಾಂತಿ ಕದಡುವ ಪ್ರಯತ್ನ ಮಾಡುತ್ತಿದ್ದಾರೆ ಎಂದು ಕಿಡಿಕಾರಿದ್ದರು.

ಇದರ ಬಳಿಕ ರಾಜ್ಯಪಾಲರು ತಿರುವನಂತಪುರಂನ ಮೆಡಿಕಲ್‌ ಕಾಲೇಜಿಗೆ ಹೋಗಿದ್ದಾಗ ಎಸ್‌ಎಫ್‌ಐ ಕಾರ್ಯಕರ್ತರು ವಿಶೇಷ ಪ್ರತಿಭಟನೆ ನಡೆಸಿದ್ದಾರೆ.

ಕೇರಳದಲ್ಲಿ ರಾಜ್ಯಪಾಲರು ಮತ್ತು ಸರ್ಕಾರದ ನಡುವೆ ಇರುವ ಸಮಸ್ಯೆ ಏನು? ಇಲ್ಲಿದೆ ಸಂಪೂರ್ಣ ಮಾಹಿತಿ.

ಓದಿ : Explained: ರಾಜ್ಯಪಾಲ-ಸಿಎಂ ಜಗಳದಲ್ಲಿ ಕೇರಳ ಬಡವಾಯ್ತು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನರಿಗೆ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿ

ಹಿರಿಯ ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನ ಹಿರಿಯ ಸಾಧಕರು 2026ನೇ ಸಾಲಿನ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿಗೆ ಭಾಜನರಾಗಿದ್ದಾರೆ. ರಾಯಚೂರು ಜಿಲ್ಲೆಯ ಹಿರಿಯ ದಲಿತ ಹೋರಾಟಗಾರ...

ಗಾಜಾ; ಗೊಂಬೆಯೊಂದಿಗೆ ‘ಅಂತ್ಯಕ್ರಿಯೆ’ ಆಟ ಆಡುವ ಎಳೆಯ ಮಕ್ಕಳ ವಿಡಿಯೋ ವೈರಲ್; ಸುತ್ತಲಿನ ಘಟನೆಯನ್ನು ಪುನರಾವರ್ತಿಸುವ ಮಕ್ಕಳು

ಅಕ್ಟೋಬರ್ 2023 ರಲ್ಲಿ ಇಸ್ರೇಲಿ ಮಿಲಿಟರಿ ದಾಳಿಯನ್ನು ಪ್ರಾರಂಭಿಸಿದ ನಂತರ ಗಾಜಾದಿಂದ ದುಃಖಕರ ದೃಶ್ಯಗಳು ಹೊರಹೊಮ್ಮುತ್ತಿವೆ. ಇತ್ತೀಚಿನ ಒಂದು ಘಟನೆಯಲ್ಲಿ, ಚಿಕ್ಕ ಮಕ್ಕಳು ಅಂತ್ಯಕ್ರಿಯೆಗಾಗಿ ಗೊಂಬೆಯನ್ನು ಹೊತ್ತುಕೊಂಡು ಹೋಗುವುದನ್ನು ಕಾಣಬಹುದು - ಇದು ಅವರು...

ದೆಹಲಿ| ಆಳವಾದ ಚರಂಡಿಗೆ ಬಿದ್ದು ನೈರ್ಮಲ್ಯ ಕಾರ್ಮಿಕ ಸಾವು; ನ್ಯಾಯಕ್ಕೆ ಆಗ್ರಹಿಸಿದ ಮೃತನ ಕುಟುಂಬ

ಮಾರ್ಚ್ 30 ರಂದು ಪೂರ್ವ ದೆಹಲಿಯ ದಿಲ್ಶಾದ್ ಗಾರ್ಡನ್ ಪ್ರದೇಶದಲ್ಲಿ ಸುರಕ್ಷತಾ ಸಾಧನಗಳಿಲ್ಲದೆ ಆಳವಾದ ಚರಂಡಿ ಸ್ವಚ್ಛಗೊಳಿಸುವ ಸಮಯದಲ್ಲಿ ಯುವ ನೈರ್ಮಲ್ಯ ಕಾರ್ಮಿಕ ರಾಹುಲ್ ಎಂಬುವವರು ಸಾವನ್ನಪ್ಪಿದ್ದಾರೆ. ಮಧ್ಯಾಹ್ನ 2:00 ರ ಸುಮಾರಿಗೆ...

ನಿವೃತ್ತ ನ್ಯಾಯಮೂರ್ತಿ ಸಂತೋಷ್‌ ಹೆಗ್ಡೆ ಆಸ್ಪತ್ರೆಗೆ ದಾಖಲು; ಕಾರ್ಯಕ್ರಮದಲ್ಲಿ ಏಕಾಏಕಿ ಕುಸಿದು ಬಿದ್ದು ಅಸ್ವಸ್ಥ

ಬೆಂಗಳೂರು: ಕರ್ನಾಟಕದ ನಿವೃತ್ತ ಲೋಕಾಯುಕ್ತ ಎನ್‌.ಸಂತೋಷ್‌ ಹೆಗ್ಡೆ ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದು, ಭಾಷಣದ ವೇಳೆ ಕುಸಿದು ಬಿದ್ದು ಅಸ್ವಸ್ಥರಾಗಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಏಪ್ರಿಲ್ 4ರ, ಶುಕ್ರವಾರ ಬೆಂಗಳೂರಿನ ಕೊಂಡಜಿ ಬಸಪ್ಪ ಸಭಾಂಗಣದಲ್ಲಿ...

ಎಸ್‌ಎಸ್‌ಎಲ್‌ಸಿಯಲ್ಲಿ ತೃತೀಯ ಭಾಷೆಗೆ ಗ್ರೇಡ್: ನಿರ್ಧಾರ ಪರಿಶೀಲಿಸುವಂತೆ ರಾಜ್ಯ ಸರ್ಕಾರಕ್ಕೆ ಸೂಚಿಸಿದ ರಾಜ್ಯಪಾಲ ಗೆಹ್ಲೋಟ್ 

ಬೆಂಗಳೂರು: 10ನೇ ತರಗತಿ ಪರೀಕ್ಷೆಯಲ್ಲಿ ತೃತೀಯ ಭಾಷೆಯ ವಿಷಯಕ್ಕೆ ಅಂಕಗಳನ್ನು ಬದಲಿಸುವ ನಿರ್ಧಾರವನ್ನು ಮರುಪರಿಶೀಲಿಸುವಂತೆ ಕರ್ನಾಟಕ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ರಾಜ್ಯ ಸರ್ಕಾರವನ್ನು ಕೇಳಿದ್ದಾರೆ. ಸರ್ಕಾರವು ಈ ನಿರ್ಧಾರವನ್ನು "ಸಮಗ್ರವಾಗಿ ಪರಿಶೀಲಿಸಬೇಕು" ಎಂದು ಲೋಕಭವನವು...

ತಿರುಚ್ಚಿ ಪೂರ್ವದ ಪೆರಂಬೂರಿನಲ್ಲಿ ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಅಫಿಡವಿಟ್‌ಗಳಲ್ಲಿ ಹಲವು ವ್ಯತ್ಯಾಸಗಳಿರುವುದಾಗಿ ವರದಿ  

ಚೆನ್ನೈ: ನಟ ಮತ್ತು ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಎರಡು ಪ್ರತ್ಯೇಕ ಚುನಾವಣಾ ಅಫಿಡವಿಟ್‌ಗಳಲ್ಲಿ ವ್ಯತ್ಯಾಸಗಳು ಕಾಣಿಸಿಕೊಂಡಿದ್ದು, ವಿಧಾನಸಭಾ ಚುನಾವಣೆಗೆ ಮುನ್ನ ಕಾನೂನು ಮತ್ತು ರಾಜಕೀಯ ಪರಿಶೀಲನೆಗೆ ಅವಕಾಶ ನೀಡುವ ಸಾಧ್ಯತೆಯಿದೆ. ಪೆರಂಬೂರು ಮತ್ತು...

ಉತ್ತಮ್ ನಗರದಲ್ಲಿ ಶಾಂತಿ ಕಾಪಾಡುವಲ್ಲಿ ದೆಹಲಿ ಪೊಲೀಸರ ಪ್ರಯತ್ನಗಳನ್ನು ಶ್ಲಾಘಿಸಿದ ಎಪಿಸಿಆರ್

ಈದ್ ಅಲ್-ಫಿತರ್, ರಾಮ ನವಮಿ ಮತ್ತು ಹನುಮಾನ್ ಜಯಂತಿ ಸೇರಿದಂತೆ ಧಾರ್ಮಿಕ ಹಬ್ಬಗಳ ಆಚರಣೆಯ ಸಂದರ್ಭದಲ್ಲಿ ರಾಷ್ಟ್ರ ರಾಜಧಾನಿಯ ಉತ್ತಮ್ ನಗರ ಪ್ರದೇಶದಲ್ಲಿ ಶಾಂತಿ ಮತ್ತು ಭದ್ರತೆಯನ್ನು ಕಾಪಾಡಿದ್ದಕ್ಕಾಗಿ ನಾಗರಿಕ ಹಕ್ಕುಗಳ ರಕ್ಷಣಾ...

ದಲಿತ ಸಮುದಾಯಕ್ಕೆ ಕ್ಷಮೆಯಾಚಿಸಿದ ನೇಪಾಳದ ಹೊಸ ಸರ್ಕಾರ

ಪ್ರಧಾನಿ ಬಾಲೇಂದ್ರ ಶಾ ಅವರ ನೇಪಾಳದ ಹೊಸ ಸರ್ಕಾರದ 100 ಅಂಶಗಳ ಸುಧಾರಣಾ ಕಾರ್ಯಸೂಚಿಯಡಿಯಲ್ಲಿ, ಮುಂದಿನ 15 ದಿನಗಳ ಒಳಗೆ ದಲಿತರು ಮತ್ತು ಐತಿಹಾಸಿಕವಾಗಿ ಹೊರಗಿಡಲ್ಪಟ್ಟ ಇತರೆ ಸಮುದಾಯಗಳಿಗೆ 'ಔಪಚಾರಿಕ ಕ್ಷಮೆಯಾಚನೆ' ಕೇಳುವುದಾಗಿ...

‘ಯಾರು ಹೆದರುತ್ತಾನೋ ಅವನು ಸತ್ತಂತೆ’: ರಾಘವ್ ಛಡ್ಡಾಗೆ ತೀವ್ರವಾಗಿ ಪ್ರತಿಕ್ರಿಯೆ ನೀಡಿದ ಎಎಪಿ ನಾಯಕ ಸೌರಭ್ ಭಾರದ್ವಾಜ್ 

ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕ ಮತ್ತು ದೆಹಲಿ ಘಟಕದ ಮುಖ್ಯಸ್ಥ ಸೌರಭ್ ಭಾರದ್ವಾಜ್ ಅವರು ವೀಡಿಯೊ ಸಂದೇಶದಲ್ಲಿ ಆಪ್ ಸಂಸದ ರಾಘವ್ ಛಡ್ಡಾ ಅವರು ಸಂಸತ್ತಿನಲ್ಲಿ "ಸಾಫ್ಟ್ ಪಿಆರ್" ನಲ್ಲಿ ತೊಡಗಿದ್ದಾರೆ...

ಚಂಡೀಗಢ ಬಿಜೆಪಿ ಕಚೇರಿ ಸ್ಫೋಟ: ಪಂಜಾಬ್ ಕೌಂಟರ್ ಇಂಟೆಲಿಜೆನ್ಸ್ ಪಡೆಯಿಂದ ಇಬ್ಬರು ಶಂಕಿತರ ಮನೆಗಳ ಮೇಲೆ ದಾಳಿ

ಚಂಡೀಗಢದಲ್ಲಿರುವ ಪಂಜಾಬ್ ಬಿಜೆಪಿ ಕಚೇರಿಯ ಹೊರಗೆ ಸ್ಫೋಟ ನಡೆಸಿದ ಆರೋಪದ ಮೇಲೆ ಇಬ್ಬರು ಶಂಕಿತರ ಮನೆಗಳ ಮೇಲೆ  ಪಂಜಾಬ್ ಪೊಲೀಸರ ಗುಪ್ತಚರ ನಿಗ್ರಹ ದಳವು ಇಂದು ಮುಂಜಾನೆ ದಾಳಿ ನಡೆಸಿದೆ.  ರೋಪರ್ ಜಿಲ್ಲೆಯ ಮೊರಿಂಡಾ ಪ್ರದೇಶದ...