Homeಮುಖಪುಟ‘ನಮಗೆ ಕುಲಪತಿ ಬೇಕು, ಸಾವರ್ಕರ್‌ ಅಲ್ಲ': ರಾಜ್ಯಪಾಲರ ವಿರುದ್ಧ ವಿದ್ಯಾರ್ಥಿಗಳ ಪ್ರತಿಭಟನೆ

‘ನಮಗೆ ಕುಲಪತಿ ಬೇಕು, ಸಾವರ್ಕರ್‌ ಅಲ್ಲ’: ರಾಜ್ಯಪಾಲರ ವಿರುದ್ಧ ವಿದ್ಯಾರ್ಥಿಗಳ ಪ್ರತಿಭಟನೆ

- Advertisement -
- Advertisement -

ಕೇರಳದಲ್ಲಿ ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್ ಮತ್ತು ಪಿಣರಾಯಿ ವಿಜಯನ್ ನೇತೃತ್ವದ ಎಡರಂಗ ಸರ್ಕಾರದ ನಡುವಿನ ಕಿತ್ತಾಟ ಸದ್ಯಕ್ಕೆ ಕೊನೆಗೊಳ್ಳುವ ಲಕ್ಷಣ ಕಾಣುತಿಲ್ಲ.

ತಮ್ಮನ್ನು ಗೂಂಡಾಗಳು, ಕ್ರಿಮಿನಲ್‌ಗಳು ಎಂದಿರುವ ರಾಜ್ಯಪಾಲರ ವಿರುದ್ಧ ರೊಚ್ಚಿಗೆದ್ದಿರುವ ಸ್ಟೂಡೆಂಟ್ ಫೆಡರೇಶನ್‌ ಆಫ್ ಇಂಡಿಯಾ(ಎಸ್‌ಎಫ್‌ಐ) ಕಾರ್ಯಕರ್ತರು, ಕಳೆದ ಒಂದು ವಾರದಿಂದ ರಾಜ್ಯಪಾಲರು ಹೋದಲ್ಲಿ ಬಂದಲ್ಲಿ ಕಪ್ಪು ಬಟ್ಟೆ ಪ್ರದರ್ಶಿಸಿ ಪ್ರತಿಭಟಿಸುತ್ತಿದ್ದಾರೆ.

ಕಳೆದ ಮಂಗಳವಾರ ರಾಜ್ಯಪಾಲರು ಚಿಕಿತ್ಸೆಯ ಸಲುವಾಗಿ ತಿರುವನಂತಪುರಂನ ಮೆಡಿಕಲ್‌ ಕಾಲೇಜಿಗೆ ತೆರಳಿದ್ದರು. ಈ ವಿಷಯ ತಿಳಿದು ಕಾಲೇಜು ಬಳಿ ಬಂದ ಎಸ್‌ಎಫ್‌ಐ ಕಾರ್ಯಕರ್ತರು, ‘ನಮಗೆ ಕುಲಪತಿ ಬೇಕು, ಸಾವರ್ಕರ್ ಅಲ್ಲ’ ಎಂಬ ಬ್ಯಾನರ್ ಪ್ರದರ್ಶಿಸಿ ರಾಜ್ಯಪಾಲರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ವಿದ್ಯಾರ್ಥಿಗಳ ಈ ಪ್ರತಿಭಟನೆ ದೇಶದ ಗಮನ ಸೆಳೆದಿದೆ.

ರಾಷ್ಟ್ರಪತಿ, ಪ್ರಧಾನಿಗೆ ಪತ್ರ ಬರೆದ ಸಿಎಂ:

ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್ ಅವರನ್ನು ವಾಪಸ್‌ ಕರೆಸಿಕೊಳ್ಳಿ ಎಂದು ಆಗ್ರಹಿಸಿ ರಾಷ್ಟ್ರಪತಿ ದ್ರೌಪದಿ ಮುರ್ಮು ಮತ್ತು ಪ್ರಧಾನಿ ನರೇಂದ್ರ ಮೋದಿಯವರಿಗೆ ಗುರುವಾರ ಸಿಎಂ ಪಿಣರಾಯಿ ವಿಜಯನ್‌ ಪತ್ರ ಬರೆದಿದ್ದಾರೆ. ರಾಜ್ಯಪಾಲರು ಸಾಂವಿಧಾನಿಕ ಕರ್ತವ್ಯಗಳನ್ನು ಸರಿಯಾಗಿ ನಿಭಾಯಿಸುತ್ತಿಲ್ಲ. ಪದೇ ಪದೇ ಶಿಷ್ಟಾಚಾರ ಉಲ್ಲಂಘಿಸುತ್ತಿದ್ದಾರೆ ಎಂದು ಸಿಎಂ ತನ್ನ ಪತ್ರದಲ್ಲಿ ಆರೋಪಿಸಿದ್ದಾರೆ.

ಡಿಸೆಂಬರ್ 11ರಂದು ಆಡಳಿತಾರೂಢ ಸಿಪಿಐ(ಎಂ)ನ ವಿದ್ಯಾರ್ಥಿ ಘಟಕವಾದ ಸ್ಟೂಡೆಂಟ್ಸ್ ಫೆಡರೇಶನ್ ಆಫ್ ಇಂಡಿಯಾ (ಎಸ್‌ಎಫ್‌ಐ) ಕಾರ್ಯಕರ್ತರು ಕಪ್ಪು ಬಾವುಟ ಪ್ರದರ್ಶಿಸಿ ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್ ಅವರ ಕಾರಿಗೆ ಮುತ್ತಿಗೆ ಹಾಕಿದ್ದರು.

ರಾಜ್ಯಪಾಲರು ದೆಹಲಿಗೆ ಪ್ರಯಾಣಿಸಲು ತಿರುವನಂತಪುರಂ ವಿಮಾನ ನಿಲ್ದಾಣಕ್ಕೆ ತೆರಳುವ ದಾರಿ ಮಧ್ಯೆ ಈ ಘಟನೆ ನಡೆದಿತ್ತು. ತಕ್ಷಣ ಕಾರಿನಿಂದ ಕೆಳಗಿಳಿದಿದ್ದ ರಾಜ್ಯಪಾಲರು, ಸಿಎಂ ಕಳಿಸಿದ ಗೂಂಡಾಗಳು ನನ್ನ ಮೇಲೆ ದಾಳಿಗೆ ಯತ್ನಿಸಿದ್ದಾರೆ. ನನ್ನ ಮೇಲೆ ದೈಹಿಕವಾಗಿ ಹಲ್ಲೆ ಮಾಡುವ ಉದ್ದೇಶ ಅವರಿಗಿತ್ತು ಎಂದು ಮಾಧ್ಯಮಗಳ ಮುಂದೆ ಹೇಳಿದ್ದರು.

ತಮ್ಮ ಮೇಲೆ ಆರೋಪ ಹೊರಿಸಿದ ರಾಜ್ಯಪಾಲರ ವಿರುದ್ದ ಆಕ್ರೋಶ ವ್ಯಕ್ತಪಡಿಸಿದ ಎಸ್‌ಎಫ್‌ಐ ಕಾರ್ಯಕರ್ತರು, ಕ್ಯಾಲಿಕಟ್ ವಿಶ್ವ ವಿದ್ಯಾನಿಯಲದ ಅತಿಥಿ ಗೃಹದಲ್ಲಿ ರಾಜ್ಯಪಾಲರು ವಾಸ್ತವ್ಯ ಹೂಡಿದ್ದ ವೇಳೆ, ವಿವಿಯ ಹೊರಗಡೆ ಕಪ್ಪು ಬಟ್ಟೆಗಳನ್ನು ಕಟ್ಟಿ ಪ್ರತಿಭಟನೆ ನಡೆಸಿದ್ದರು.

ಇದಕ್ಕೆ ಪ್ರತಿಕ್ರಿಯಿಸಿದ್ದ ರಾಜ್ಯಪಾಲರು, “ಅವರು(ಎಸ್‌ಎಫ್‌ಐ ಕಾರ್ಯಕರ್ತರು) ಸಿಎಂ ಕಡೆಯ ಕ್ರಿಮಿನಲ್‌ಗಳು, ಗೂಂಡಾಗಳು ಎಂದಿದ್ದರು. ರಾಜ್ಯಪಾಲರ ಈ ಹೇಳಿಕೆಗೆ ಪ್ರತಿಕ್ರಿಯಿಸಿದ್ದ ಸಿಎಂ ಪಿಣರಾಯಿ ವಿಜಯನ್, ರಾಜ್ಯಪಾಲರು ರಾಜ್ಯದಲ್ಲಿ ಶಾಂತಿ ಕದಡುವ ಪ್ರಯತ್ನ ಮಾಡುತ್ತಿದ್ದಾರೆ ಎಂದು ಕಿಡಿಕಾರಿದ್ದರು.

ಇದರ ಬಳಿಕ ರಾಜ್ಯಪಾಲರು ತಿರುವನಂತಪುರಂನ ಮೆಡಿಕಲ್‌ ಕಾಲೇಜಿಗೆ ಹೋಗಿದ್ದಾಗ ಎಸ್‌ಎಫ್‌ಐ ಕಾರ್ಯಕರ್ತರು ವಿಶೇಷ ಪ್ರತಿಭಟನೆ ನಡೆಸಿದ್ದಾರೆ.

ಕೇರಳದಲ್ಲಿ ರಾಜ್ಯಪಾಲರು ಮತ್ತು ಸರ್ಕಾರದ ನಡುವೆ ಇರುವ ಸಮಸ್ಯೆ ಏನು? ಇಲ್ಲಿದೆ ಸಂಪೂರ್ಣ ಮಾಹಿತಿ.

ಓದಿ : Explained: ರಾಜ್ಯಪಾಲ-ಸಿಎಂ ಜಗಳದಲ್ಲಿ ಕೇರಳ ಬಡವಾಯ್ತು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪೆಂಗ್ವಿನ್ ಇಂಡಿಯಾ ಹಿಂದೆ ಸರಿದ ನಂತರ ಸೋನಿಯಾ ಗಾಂಧಿ ಅವರ ಆತ್ಮಚರಿತ್ರೆ ‘ಬಿಲಾಂಗಿಂಗ್’ ಅನ್ನು ಪ್ರಕಟಿಸಲಿರುವ ‘ಹಾರ್ಪರ್‌ಕಾಲಿನ್ಸ್’ 

ನವದೆಹಲಿ: ಕಾಂಗ್ರೆಸ್‌ನ ಹಿರಿಯ ನಾಯಕಿ ಸೋನಿಯಾ ಗಾಂಧಿ ಅವರ ಬಹುನಿರೀಕ್ಷಿತ ಆತ್ಮಚರಿತ್ರೆ ‘ಬಿಲಾಂಗಿಂಗ್: ಎ ಜರ್ನಿ ಆಫ್ ಲವ್’ ಇದೀಗ ಭಾರತದಲ್ಲಿ ಹಾರ್ಪರ್‌ಕಾಲಿನ್ಸ್ ಇಂಡಿಯಾ ಮೂಲಕ ಪ್ರಕಟವಾಗಲಿದೆ. ಪೆಂಗ್ವಿನ್ ರ‍್ಯಾಂಡಮ್ ಹೌಸ್ ಇಂಡಿಯಾ...

ಜೈಲಿನಲ್ಲಿ ಕಂಬಿ ಎಣಿಸುತ್ತಿರುವ 25 ಕ್ರಿಮಿನಲ್‌ಗಳು, ದೆಹಲಿಯ ಜಂತರ್-ಮಂತರ್‌ಗೆ ಬರುಲು ಹೇಗೆ ಸಾಧ? ತನಿಖಾ ವರದಿಯಲ್ಲಿ ಬಯಲಾಯ್ತು ಪೊಲೀಸರ ಕುತಂತ್ರ

ದೆಹಲಿಯ ಜಂತರ್ ಮಂತರ್‌ನಲ್ಲಿ ನಡೆದ ನೀಟ್-ಯುಜಿ (NEET-UG) ಪರೀಕ್ಷಾ ಅಕ್ರಮ ವಿರೋಧಿ ಪ್ರತಿಭಟನೆ ವೇಳೆ ದೆಹಲಿ ಪೊಲೀಸರು ಬಳಸಿದ್ದ ‘ಅಟೋಮೇಟೆಡ್ ಫೇಶಿಯಲ್ ರೆಕಗ್ನಿಷನ್ ಸಿಸ್ಟಮ್’ (AFRS - ಮುಖಚರ್ಯೆ ಗುರುತಿಸುವ ತಂತ್ರಜ್ಞಾನ) ಗಂಭೀರ...

ಪಶ್ಚಿಮ ಬಂಗಾಳ: ವರ್ಷದಲ್ಲಿ 1,000 ಆರ್‌ಎಸ್‌ಎಸ್‌ ಶಾಲೆ: ಶಿಕ್ಷಣ ವ್ಯವಸ್ಥೆಯನ್ನೇ ‘ರಾಷ್ಟ್ರೀಯತಾವಾದಿ’ಗೊಳಿಸುವುದಾಗಿ ಘೋಷಿಸಿದ ಸುವೇಂದು ಅಧಿಕಾರಿ

ಕೋಲ್ಕತ್ತಾ: ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಶೈಕ್ಷಣಿಕ ವಿಭಾಗವಾಗಿರುವ ವಿದ್ಯಾ ಭಾರತಿಯ ಶಾಲೆಗಳ ಸಂಖ್ಯೆಯನ್ನು ಪಶ್ಚಿಮ ಬಂಗಾಳದಲ್ಲಿ ಭಾರಿ ಪ್ರಮಾಣದಲ್ಲಿ ಹೆಚ್ಚಿಸುವುದಾಗಿ ಮುಖ್ಯಮಂತ್ರಿ ಸುವೇಂದು ಅಧಿಕಾರಿ ಘೋಷಿಸಿದ್ದಾರೆ. ರಾಜ್ಯದ ಪ್ರತಿಯೊಂದು ಜಿಲ್ಲೆ, ಪುರಸಭೆ...

SIR ನ್ಯಾಯಸಮ್ಮತವಾಗಿಲ್ಲ ಮಾಜಿ ಚುನಾವಣಾ ಆಯುಕ್ತ ಅಶೋಕ್ ಲಾವಾಸ ಆತಂಕ

ಭಾರತೀಯ ಚುನಾವಣಾ ಆಯೋಗವು (ಇಸಿಐ) ದೇಶಾದ್ಯಂತ ಕೈಗೊಂಡಿರುವ ಮತದಾರರ ಪಟ್ಟಿಯ ‘ವಿಶೇಷ ತೀವ್ರ ಪರಿಷ್ಕರಣೆ’ (SIR) ಪ್ರಕ್ರಿಯೆಯು ಶಾಸನಾತ್ಮಕವಾಗಿ ಕಾನೂನುಬದ್ಧವಾಗಿದ್ದರೂ, ನೈತಿಕವಾಗಿ ನ್ಯಾಯಸಮ್ಮತವಾಗಿಲ್ಲ ಎಂದು ಮಾಜಿ ಚುನಾವಣಾ ಆಯುಕ್ತ ಅಶೋಕ್ ಲಾವಾಸ ತೀವ್ರ...

ಜಂತರ್ ಮಂತರ್ ಹಲ್ಲೆ: ‘ತಲೆಬುರುಡೆ ಒಡೆದೆ, ಜೈಲಿಗೆ ಹೋಗಲಿಲ್ಲ; ಕಪಿಲ್ ಮಿಶ್ರಾ ನನ್ನ ಅಣ್ಣ’: ಬಿಜೆಪಿ ಬೆಂಬಲದ ಬಗ್ಗೆ ದಾಳಿ ಆರೋಪಿ ಬಹಿರಂಗ ಹೇಳಿಕೆ

ನವದೆಹಲಿ: ದೆಹಲಿಯ ಜಂತರ್ ಮಂತರ್‌ನಲ್ಲಿ ವಿದ್ಯಾರ್ಥಿಗಳ ಪ್ರತಿಭಟನೆಯ ವೇಳೆ ಪ್ರತಿಭಟನಾಕಾರಿಯ ತಂದೆಯ ಮೇಲೆ ನಡೆದ ಹಲ್ಲೆ ಪ್ರಕರಣ ಇದೀಗ ರಾಜಕೀಯ ವಿವಾದದ ಕೇಂದ್ರವಾಗಿದೆ. ಪ್ರಕರಣದ ಆರೋಪಿಯಾಗಿರುವ ಸ್ವತಃ ಬಲಪಂಥೀಯ ಹಾಗೂ ಹಿಂದೂತ್ವ ಕಾರ್ಯಕರ್ತ...

ದೆಹಲಿ: ‘ಖಾನ್’ ಎಂಬ ಹೆಸರಿನ ಕಾರಣಕ್ಕೆ ಪತ್ರಕರ್ತೆಯರ ಮೇಲೆ ಹಲ್ಲೆ ಆರೋಪ, FIR ದಾಖಲಿಸುವಂತೆ ಸಾಕೇತ್ ಠಾಣೆಯಲ್ಲಿ ಧರಣಿ

ದೆಹಲಿಯ ಸಾಕೇತ್ ಮ್ಯಾಕ್ಸ್ ಆಸ್ಪತ್ರೆಯ ಹೊಸ ವಿಭಾಗದ ಉದ್ಘಾಟನಾ ಕಾರ್ಯಕ್ರಮದ ವರದಿಗೆ ತೆರಳಿದ್ದ '4PM ನ್ಯೂಸ್ ನೆಟ್‌ವರ್ಕ್'ನ ಮುಸ್ಲಿಂ ಮಹಿಳಾ ಪತ್ರಕರ್ತೆಯರಾದ ಶಾಹೀನ್ ಖಾನ್ ಮತ್ತು ನಫೀಸಾ ಖಾನ್ ಅವರ ಮೇಲೆ ದಿಲ್ಲಿ...

ಮುಖ್ಯಮಂತ್ರಿಗಳನ್ನು ಪ್ರಶ್ನಿಸಿದ್ದಕ್ಕೆ ದೆಹಲಿ ಪೊಲೀಸರಿಂದ ಬಂಧನ-ಹಲ್ಲೆ: ಇಬ್ಬರು ಪತ್ರಕರ್ತೆಯರ ಆರೋಪ

ಸುದ್ದಿ ಮಾಡುತ್ತಿದ್ದಾಗ ದಕ್ಷಿಣ ದೆಹಲಿಯಲ್ಲಿ ದೆಹಲಿ ಪೊಲೀಸ್ ಸಿಬ್ಬಂದಿ ತಮ್ಮನ್ನು ವಶಕ್ಕೆ ಪಡೆದು ಥಳಿಸಿದ್ದಾರೆ ಎಂದು ಇಬ್ಬರು ಮುಸ್ಲಿಂ ಸ್ವತಂತ್ರ ಮಹಿಳಾ ಪತ್ರಕರ್ತೆಯರು ಆರೋಪಿಸಿದ್ದಾರೆ. '4 ಪಿಎಮ್ ನ್ಯೂಸ್ ನೆಟ್‌ವರ್ಕ್' (4 PM News...

ತ್ರಿಪುರಾ: ‘ದನ ಕಳ್ಳ’ ಎಂದು, ಖರೀದಿಸಿದ ದನಗಳೊಂದಿಗೆ ಹಿಂತಿರುಗುತ್ತಿದ್ದ ಮುಸ್ಲಿಂ ವ್ಯಾಪಾರಿ ಮೇಲೆ ಗುಂಪು ಹಲ್ಲೆ: 46 ವರ್ಷದ ಜಲೀಲುರ್ ರೆಹಮಾನ್ ಸಾವು

ಅಗರ್ತಲಾ: ಖರೀದಿಸಿದ ಎರಡು ದನಗಳನ್ನು ತೆಗೆದುಕೊಂಡು ಹೋಗುತ್ತಿದ್ದ ಮುಸ್ಲಿಂ ದನ ವ್ಯಾಪಾರಿಯೊಬ್ಬರನ್ನು ‘ದನ ಕಳ್ಳ’ ಎಂದು ಆರೋಪಿಸಿ ಗುಂಪೊಂದು ಥಳಿಸಿದ ಪರಿಣಾಮ ಅವರು ಮೃತಪಟ್ಟಿರುವ ಘಟನೆ ತ್ರಿಪುರಾದ ಕಲ್ಯಾಣಪುರ ಪೊಲೀಸ್ ಠಾಣೆ ವ್ಯಾಪ್ತಿಯ...

ಪ್ರಶ್ನಿಸುವವರನ್ನು ‘ದಿಮಾಗಿ ನಕ್ಸಲ್’ ಎಂದು ಕರೆಯುವುದು ಸೂಕ್ಷ್ಮತೆಯಿಲ್ಲದ ನಡವಳಿಕೆ: ಗೀತಾಂಜಲಿ ಅಂಗಮೋ

ಪ್ರಶ್ನೆ ಕೇಳುವ ವ್ಯಕ್ತಿಯನ್ನು ‘ದಿಮಾಗಿ ನಕ್ಸಲ್’ (ಬುದ್ಧಿಜೀವಿ ನಕ್ಸಲರು) ಎಂದು ಕರೆಯುವುದು ಅತ್ಯಂತ ಸೂಕ್ಷ್ಮತೆಯಿಲ್ಲದ ರೀತಿಯಾಗಿದೆ ಎಂದು ಪ್ರಸಿದ್ಧ ಹವಾಮಾನ ಕಾರ್ಯಕರ್ತ ಮತ್ತು ಶಿಕ್ಷಣ ತಜ್ಞ ಸೋನಂ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ...

ಬಸವರಾಜ ಕನ್ನಾಳೆ ಸಿಂಡಿಕೇಟ್ ಸದಸ್ಯತ್ವ ರದ್ದಾಗುತ್ತಾ? ರಾಜಭವನದ ಮೌನಕ್ಕೆ ಮೂಡಿದ ಅನುಮಾನ

ತುಮಕೂರು ವಿಶ್ವವಿದ್ಯಾಲಯದ ರಾಜ್ಯಪಾಲರ ನಾಮನಿರ್ದೇಶಿತ ಸಿಂಡಿಕೇಟ್ ಸದಸ್ಯ ಬಸವರಾಜ ಕನ್ನಾಳೆ ಬಂಧನದ ಬೆನ್ನಲ್ಲೇ, ತನಿಖಾ ಸಂಸ್ಥೆಗಳು ತಮ್ಮ ಕಾರ್ಯಾಚರಣೆಯನ್ನು ತೀವ್ರಗೊಳಿಸಿವೆ. ಪ್ರಕರಣಕ್ಕೆ ಸಂಬಂಧಿಸಿದಂತೆ ತುಮಕೂರು ವಿವಿಯ ಪ್ರಭಾರ ಕುಲಪತಿ ಪ್ರೊ. ನಾಗಭೂಷಣ ಅವರಿಂದ...