Homeಮುಖಪುಟನಮಗೆ ಪಾಕಿಸ್ತಾನ, ಚೀನಾದ ಭೂಮಿ ಬೇಡ ಬದಲಿಗೆ ಶಾಂತಿ ಬೇಕು: ನಿತಿನ್ ಗಡ್ಕರಿ

ನಮಗೆ ಪಾಕಿಸ್ತಾನ, ಚೀನಾದ ಭೂಮಿ ಬೇಡ ಬದಲಿಗೆ ಶಾಂತಿ ಬೇಕು: ನಿತಿನ್ ಗಡ್ಕರಿ

ಮರಾಠಿ ಲೇಖಕ ಶಿವಾಜಿ ಸಾವಂತ್ ಬರೆದ ಪ್ರಸಿದ್ಧ ಕಾದಂಬರಿ ಮೃತುಂಜಯವನ್ನು ಉಲ್ಲೇಖಿಸಿದ ಅವರು ಸಮರ್ಥರು ಮಾತ್ರ ಶಾಂತಿ ಮತ್ತು ಅಹಿಂಸೆಯನ್ನು ಸ್ಥಾಪಿಸಬಹುದು ಎಂದು ಹೇಳಿದ್ದಾರೆ.

- Advertisement -
- Advertisement -

ಲಡಾಕ್‌ನ ನೈಜ ನಿಯಂತ್ರಣ ರೇಖೆಯಲ್ಲಿ ಚೀನಾದೊಂದಿಗಿನ ಉದ್ವಿಗ್ನತೆ ಕಡಿಮೆಯಾಗುತ್ತಿದ್ದಂತೆ, ಚೀನಾ ಮತ್ತು ಪಾಕಿಸ್ತಾನವನ್ನು ಟೀಕಿಸಿರುವ ಕೇಂದ್ರ ಸಚಿವ ನಿತಿನ್ ಗಡ್ಕರಿ ’ಭಾರತವು ತನ್ನ ನೆರೆಹೊರೆಯವರ ಭೂಮಿಯನ್ನು ಕಸಿದುಕೊಳ್ಳಲು ಎಂದಿಗೂ ಪ್ರಯತ್ನಿಸಲಿಲ್ಲ ಮತ್ತು ಈ ಪ್ರದೇಶದಲ್ಲಿ ಶಾಂತಿಯನ್ನು ಮಾತ್ರ ಬಯಸಿದೆ’ ಎಂದು ಹೇಳಿದ್ದಾರೆ.

ದೇಶದ ಗಡಿಗಳನ್ನು ಭದ್ರಪಡಿಸುವುದು ನರೇಂದ್ರ ಮೋದಿ ಸರ್ಕಾರದ ದೊಡ್ಡ ಸಾಧನೆಯಾಗಿದೆ. ಬಾಹ್ಯ ಮತ್ತು ಆಂತರಿಕ ಭದ್ರತೆಗೆ ಸರ್ಕಾರ ನೀಡಿದ ಗಂಭೀರತೆಯಿಂದಾಗಿ ಇದು ಸಾಧ್ಯವಾಯಿತು ಎಂದು ಗಡ್ಕರಿ ಹೇಳಿದರು.

ಕೇಂದ್ರ ರಸ್ತೆ ಸಾರಿಗೆ, ಹೆದ್ದಾರಿಗಳು ಮತ್ತು ಎಂಎಸ್‌ಎಂಇ ಸಚಿವರಾದ ಅವರು ನಾಗ್ಪುರದ ಬಿಜೆಪಿ ಕಾರ್ಯಕರ್ತರ ವರ್ಚುವಲ್ ರ್‍ಯಾಲಿಯನ್ನು ಉದ್ದೇಶಿಸಿ ಮಾತನಾಡಿ, “ನಮ್ಮಲ್ಲಿ ಒಂದು ಕಡೆ ಚೀನಾ ಮತ್ತು ಇನ್ನೊಂದು ಕಡೆ ಪಾಕಿಸ್ತಾನವಿದೆ. ನಮಗೆ ಶಾಂತಿ ಬೇಕು. ನಮಗೆ ಅಹಿಂಸೆ ಬೇಕು” ಎಂದಿದ್ದಾರೆ.

ಮರಾಠಿ ಲೇಖಕ ಶಿವಾಜಿ ಸಾವಂತ್ ಬರೆದ ಪ್ರಸಿದ್ಧ ಕಾದಂಬರಿ ಮೃತುಂಜಯವನ್ನು ಉಲ್ಲೇಖಿಸಿದ ಅವರು ಸಮರ್ಥರು ಮಾತ್ರ ಶಾಂತಿ ಮತ್ತು ಅಹಿಂಸೆಯನ್ನು ಸ್ಥಾಪಿಸಬಹುದು ಎಂದು ಹೇಳಿದ್ದಾರೆ.


ಭಾರತ ದುರ್ಬಲ ರಾಷ್ಟ್ರವಲ್ಲ, ಚೀನಾ ಮಾತುಕತೆ ಬಯಸಿದೆ: ರಾಜನಾಥ್ ಸಿಂಗ್


“ನಾವು ಭಾರತವನ್ನು ಸಬಲೀಕರಣಗೊಳಿಸಲು ಬಯಸುತ್ತೇವೆ ಏಕೆಂದರೆ ನಾವು ಸಾಮ್ರಾಜ್ಯಶಾಹಿಗಳಲ್ಲ. ನಾವು ಎಂದಿಗೂ ಭೂತಾನ್ ಭೂಮಿಯನ್ನು ಕಸಿದುಕೊಳ್ಳಲು ಪ್ರಯತ್ನಿಸಲಿಲ್ಲ. ಪಾಕಿಸ್ತಾನದ ಭೂಮಿಯನ್ನು ತೆಗೆದುಕೊಳ್ಳಲು ನಾವು ಬಯಸುವುದಿಲ್ಲ. ಚೀನಾದ ಭೂಮಿಯನ್ನು ತೆಗೆದುಕೊಳ್ಳಲು ನಾವು ಬಯಸುವುದಿಲ್ಲ. ನಮಗೆ ಶಾಂತಿ, ಸೌಹಾರ್ದತೆ ಮತ್ತು ಪ್ರೀತಿ ಮಾತ್ರ ಬೇಕು” ಎಂದು ಗಡ್ಕರಿ ಹೇಳಿದ್ದಾರೆ.

ನೇರ ಯುದ್ಧದಲ್ಲಿ ನಮ್ಮನ್ನು ಸೋಲಿಸಲು ಸಾಧ್ಯವಿಲ್ಲ ಎಂದು ತಿಳಿದ ನಂತರ ಪಾಕಿಸ್ತಾನವು ಗಡಿಯಾಚೆಗಿನ ಭಯೋತ್ಪಾದನೆಯನ್ನು ಆಶ್ರಯಿಸುತ್ತಿದೆ ಎಂದು ಅವರು ಆದರೆ ಮೊದಲ ಬಾರಿಗೆ ನಮ್ಮ ದೇಶವು ಅಂತಹ ಜನರ ವಿರುದ್ಧ ಕಠಿಣ ಕ್ರಮ ಕೈಗೊಂಡಿದೆ ಎಂದು ತಿಳಿಸಿದ್ದಾರೆ.

ಮೋದಿ ಸರ್ಕಾರದ ಅಡಿಯಲ್ಲಿ ನಕ್ಸಲಿಸಂ ಸಮಸ್ಯೆ ದೇಶದಲ್ಲಿ ಅಂತ್ಯಗೊಳ್ಳುತ್ತಿದೆ ಎಂದು ಸಹ ನಿತಿನ್ ಗಡ್ಕರಿ ಹೇಳಿದ್ದಾರೆ. “ಇದು ಮಾವೋವಾದಿ ನಕ್ಸಲಿಸಂ ಅಥವಾ ಭಯೋತ್ಪಾದನೆ ಕೊನೆಗೊಂಡಿರುವುದಕ್ಕೆ ಖಂಡಿತವಾಗಿಯೂ ಹೆಮ್ಮೆಪಡುತ್ತೇವೆ. ನಮ್ಮ ಆಂತರಿಕ ಮತ್ತು ಬಾಹ್ಯ ಗಡಿಗಳು ಸುರಕ್ಷಿತವಾಗಿವೆ. ನಮ್ಮ ಕೆಚ್ಚೆದೆಯ ಸೈನಿಕರು ನಮ್ಮ ದೇಶವನ್ನು ರಕ್ಷಿಸುತ್ತಿದ್ದಾರೆ. ಕಳೆದ 50-55 ವರ್ಷಗಳಲ್ಲಿ ಮಾಡಲಾಗದ್ದನ್ನು ನಾವು ಕಳೆದ ಐದು ವರ್ಷಗಳಲ್ಲಿ ದೇಶವು ಎರಡು ಸನ್ನಿವೇಶಗಳಲ್ಲಿ ಬದಲಾವಣೆಯನ್ನು ಕಂಡಿದೆ. ಆಂತರಿಕ ಮತ್ತು ಬಾಹ್ಯ ಭದ್ರತೆಯನ್ನು ಸಾಧಿಸಿರುವುದಕ್ಕೆ ನಾವು ನೀಡಿದ ಆದ್ಯತೆಯ ಕಾರಣ. ಇದು ನಮ್ಮ ದೊಡ್ಡ ಸಾಧನೆ” ಎಂದು ಗಡ್ಕರಿ ಹೇಳಿದರು.

ಗಡ್ಕರಿ ಅವರು ಅರ್ಧ ಘಂಟೆಯ ಸುದೀರ್ಘ ಭಾಷಣದಲ್ಲಿ ಕೋವಿಡ್ -19 ಸಾಂಕ್ರಾಮಿಕ ರೋಗವನ್ನು ಉಲ್ಲೇಖಿಸಿ ಶೀಘ್ರದಲ್ಲೇ ರೋಗದ ವಿರುದ್ಧ ಲಸಿಕೆ ಆವಿಷ್ಕರಿಸಲಾಗುವುದು ಎಂಬ ಆಶಾವಾದವನ್ನು ವ್ಯಕ್ತಪಡಿಸಿದರು. “ಈ ಬಿಕ್ಕಟ್ಟು ದೀರ್ಘಕಾಲ ಉಳಿಯುವುದಿಲ್ಲ.. ನಾನು ಯಾವ ಮಾಹಿತಿಯನ್ನು ಸಂಗ್ರಹಿಸಿದರೂ ಕೋವಿಡ್ -19 ವಿರುದ್ಧ ಲಸಿಕೆ ಶೀಘ್ರದಲ್ಲೇ ಲಭ್ಯವಾಗಲಿದೆ ಎಂದು ನಾನು ವಿಶ್ವಾಸದಿಂದ ಹೇಳಬಲ್ಲೆ. ಲಸಿಕೆ ಸಿಕ್ಕ ನಂತರ ಈ ಬಿಕ್ಕಟ್ಟಿನ ಬಗ್ಗೆ ನಾವು ಚಿಂತಿಸಬೇಕಾಗಿಲ್ಲ” ಎಂದು ಅವರು ಹೇಳಿದರು.

ಕಳೆದ ಆರು ವರ್ಷಗಳಲ್ಲಿ ಮೋದಿ ಸರ್ಕಾರ ಮಾಡಿದ ವಿವಿಧ ಅಭಿವೃದ್ಧಿ ಕಾರ್ಯಗಳ ಬಗ್ಗೆ ಗಡ್ಕರಿ ಪ್ರಸ್ತಾಪಿಸಿದ್ದಾರೆ. 370 ನೇ ವಿಧಿಯನ್ನು ರದ್ದುಪಡಿಸುವುದು, ಬಡವರಿಗೆ ವಸತಿ, ವಿವಿಧ ಮೂಲಸೌಕರ್ಯಗಳು ಮತ್ತು ಗಂಗಾ ಶುಚಿಗೊಳಿಸುವ ಯೋಜನೆ ಮತ್ತು ಹಸಿರು ಇಂಧನ ಉಪಕ್ರಮಗಳಂತಹ ಪರಿಸರ ಯೋಜನೆಗಳನ್ನು ಮೋದಿ ಸರ್ಕಾರದ ಸಾಧನೆಗಳೆಂದು ಉಲ್ಲೇಖಿಸಿ, ದೇಶವನ್ನು ‘ಆತ್ಮನಿರ್ಭರ್ (ಸ್ವಾವಲಂಬಿ)’ ಯನ್ನಾಗಿ ಮಾಡುವ ಅಗತ್ಯವಿದ್ದು ಅದು ಸಾಧ್ಯವಿದೆ ಎಂದು ಒತ್ತಿ ಹೇಳಿದ್ದಾರೆ.


ಇದನ್ನೂ ಓದಿ: ಸಾವಿಗೆ ಮುನ್ನ ತಾಯಿ ನೆನೆದು, ಕ್ಷಣಿಕ ಜೀವನ ಎಂದಿದ್ದ ಸುಶಾಂತ್ ಸಿಂಗ್ ರಜಪೂತ್ 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...

‘ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ’: ಮಂದಕೃಷ್ಣ ಮಾದಿಗ ಆರೋಪ

‘ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ ಎಣಿಸುತ್ತಿದೆ. ಕಾಂಗ್ರೆಸ್ ನ ಹೈಕಮಾಂಡ್ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ. ಈ ಮೂವರನ್ನು ನಿಯಂತ್ರಿಸುವವರು ಕಾಂಗ್ರೆಸ್...

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...