Homeಮುಖಪುಟನಮಗೆ ಪಾಕಿಸ್ತಾನ, ಚೀನಾದ ಭೂಮಿ ಬೇಡ ಬದಲಿಗೆ ಶಾಂತಿ ಬೇಕು: ನಿತಿನ್ ಗಡ್ಕರಿ

ನಮಗೆ ಪಾಕಿಸ್ತಾನ, ಚೀನಾದ ಭೂಮಿ ಬೇಡ ಬದಲಿಗೆ ಶಾಂತಿ ಬೇಕು: ನಿತಿನ್ ಗಡ್ಕರಿ

ಮರಾಠಿ ಲೇಖಕ ಶಿವಾಜಿ ಸಾವಂತ್ ಬರೆದ ಪ್ರಸಿದ್ಧ ಕಾದಂಬರಿ ಮೃತುಂಜಯವನ್ನು ಉಲ್ಲೇಖಿಸಿದ ಅವರು ಸಮರ್ಥರು ಮಾತ್ರ ಶಾಂತಿ ಮತ್ತು ಅಹಿಂಸೆಯನ್ನು ಸ್ಥಾಪಿಸಬಹುದು ಎಂದು ಹೇಳಿದ್ದಾರೆ.

- Advertisement -
- Advertisement -

ಲಡಾಕ್‌ನ ನೈಜ ನಿಯಂತ್ರಣ ರೇಖೆಯಲ್ಲಿ ಚೀನಾದೊಂದಿಗಿನ ಉದ್ವಿಗ್ನತೆ ಕಡಿಮೆಯಾಗುತ್ತಿದ್ದಂತೆ, ಚೀನಾ ಮತ್ತು ಪಾಕಿಸ್ತಾನವನ್ನು ಟೀಕಿಸಿರುವ ಕೇಂದ್ರ ಸಚಿವ ನಿತಿನ್ ಗಡ್ಕರಿ ’ಭಾರತವು ತನ್ನ ನೆರೆಹೊರೆಯವರ ಭೂಮಿಯನ್ನು ಕಸಿದುಕೊಳ್ಳಲು ಎಂದಿಗೂ ಪ್ರಯತ್ನಿಸಲಿಲ್ಲ ಮತ್ತು ಈ ಪ್ರದೇಶದಲ್ಲಿ ಶಾಂತಿಯನ್ನು ಮಾತ್ರ ಬಯಸಿದೆ’ ಎಂದು ಹೇಳಿದ್ದಾರೆ.

ದೇಶದ ಗಡಿಗಳನ್ನು ಭದ್ರಪಡಿಸುವುದು ನರೇಂದ್ರ ಮೋದಿ ಸರ್ಕಾರದ ದೊಡ್ಡ ಸಾಧನೆಯಾಗಿದೆ. ಬಾಹ್ಯ ಮತ್ತು ಆಂತರಿಕ ಭದ್ರತೆಗೆ ಸರ್ಕಾರ ನೀಡಿದ ಗಂಭೀರತೆಯಿಂದಾಗಿ ಇದು ಸಾಧ್ಯವಾಯಿತು ಎಂದು ಗಡ್ಕರಿ ಹೇಳಿದರು.

ಕೇಂದ್ರ ರಸ್ತೆ ಸಾರಿಗೆ, ಹೆದ್ದಾರಿಗಳು ಮತ್ತು ಎಂಎಸ್‌ಎಂಇ ಸಚಿವರಾದ ಅವರು ನಾಗ್ಪುರದ ಬಿಜೆಪಿ ಕಾರ್ಯಕರ್ತರ ವರ್ಚುವಲ್ ರ್‍ಯಾಲಿಯನ್ನು ಉದ್ದೇಶಿಸಿ ಮಾತನಾಡಿ, “ನಮ್ಮಲ್ಲಿ ಒಂದು ಕಡೆ ಚೀನಾ ಮತ್ತು ಇನ್ನೊಂದು ಕಡೆ ಪಾಕಿಸ್ತಾನವಿದೆ. ನಮಗೆ ಶಾಂತಿ ಬೇಕು. ನಮಗೆ ಅಹಿಂಸೆ ಬೇಕು” ಎಂದಿದ್ದಾರೆ.

ಮರಾಠಿ ಲೇಖಕ ಶಿವಾಜಿ ಸಾವಂತ್ ಬರೆದ ಪ್ರಸಿದ್ಧ ಕಾದಂಬರಿ ಮೃತುಂಜಯವನ್ನು ಉಲ್ಲೇಖಿಸಿದ ಅವರು ಸಮರ್ಥರು ಮಾತ್ರ ಶಾಂತಿ ಮತ್ತು ಅಹಿಂಸೆಯನ್ನು ಸ್ಥಾಪಿಸಬಹುದು ಎಂದು ಹೇಳಿದ್ದಾರೆ.


ಭಾರತ ದುರ್ಬಲ ರಾಷ್ಟ್ರವಲ್ಲ, ಚೀನಾ ಮಾತುಕತೆ ಬಯಸಿದೆ: ರಾಜನಾಥ್ ಸಿಂಗ್


“ನಾವು ಭಾರತವನ್ನು ಸಬಲೀಕರಣಗೊಳಿಸಲು ಬಯಸುತ್ತೇವೆ ಏಕೆಂದರೆ ನಾವು ಸಾಮ್ರಾಜ್ಯಶಾಹಿಗಳಲ್ಲ. ನಾವು ಎಂದಿಗೂ ಭೂತಾನ್ ಭೂಮಿಯನ್ನು ಕಸಿದುಕೊಳ್ಳಲು ಪ್ರಯತ್ನಿಸಲಿಲ್ಲ. ಪಾಕಿಸ್ತಾನದ ಭೂಮಿಯನ್ನು ತೆಗೆದುಕೊಳ್ಳಲು ನಾವು ಬಯಸುವುದಿಲ್ಲ. ಚೀನಾದ ಭೂಮಿಯನ್ನು ತೆಗೆದುಕೊಳ್ಳಲು ನಾವು ಬಯಸುವುದಿಲ್ಲ. ನಮಗೆ ಶಾಂತಿ, ಸೌಹಾರ್ದತೆ ಮತ್ತು ಪ್ರೀತಿ ಮಾತ್ರ ಬೇಕು” ಎಂದು ಗಡ್ಕರಿ ಹೇಳಿದ್ದಾರೆ.

ನೇರ ಯುದ್ಧದಲ್ಲಿ ನಮ್ಮನ್ನು ಸೋಲಿಸಲು ಸಾಧ್ಯವಿಲ್ಲ ಎಂದು ತಿಳಿದ ನಂತರ ಪಾಕಿಸ್ತಾನವು ಗಡಿಯಾಚೆಗಿನ ಭಯೋತ್ಪಾದನೆಯನ್ನು ಆಶ್ರಯಿಸುತ್ತಿದೆ ಎಂದು ಅವರು ಆದರೆ ಮೊದಲ ಬಾರಿಗೆ ನಮ್ಮ ದೇಶವು ಅಂತಹ ಜನರ ವಿರುದ್ಧ ಕಠಿಣ ಕ್ರಮ ಕೈಗೊಂಡಿದೆ ಎಂದು ತಿಳಿಸಿದ್ದಾರೆ.

ಮೋದಿ ಸರ್ಕಾರದ ಅಡಿಯಲ್ಲಿ ನಕ್ಸಲಿಸಂ ಸಮಸ್ಯೆ ದೇಶದಲ್ಲಿ ಅಂತ್ಯಗೊಳ್ಳುತ್ತಿದೆ ಎಂದು ಸಹ ನಿತಿನ್ ಗಡ್ಕರಿ ಹೇಳಿದ್ದಾರೆ. “ಇದು ಮಾವೋವಾದಿ ನಕ್ಸಲಿಸಂ ಅಥವಾ ಭಯೋತ್ಪಾದನೆ ಕೊನೆಗೊಂಡಿರುವುದಕ್ಕೆ ಖಂಡಿತವಾಗಿಯೂ ಹೆಮ್ಮೆಪಡುತ್ತೇವೆ. ನಮ್ಮ ಆಂತರಿಕ ಮತ್ತು ಬಾಹ್ಯ ಗಡಿಗಳು ಸುರಕ್ಷಿತವಾಗಿವೆ. ನಮ್ಮ ಕೆಚ್ಚೆದೆಯ ಸೈನಿಕರು ನಮ್ಮ ದೇಶವನ್ನು ರಕ್ಷಿಸುತ್ತಿದ್ದಾರೆ. ಕಳೆದ 50-55 ವರ್ಷಗಳಲ್ಲಿ ಮಾಡಲಾಗದ್ದನ್ನು ನಾವು ಕಳೆದ ಐದು ವರ್ಷಗಳಲ್ಲಿ ದೇಶವು ಎರಡು ಸನ್ನಿವೇಶಗಳಲ್ಲಿ ಬದಲಾವಣೆಯನ್ನು ಕಂಡಿದೆ. ಆಂತರಿಕ ಮತ್ತು ಬಾಹ್ಯ ಭದ್ರತೆಯನ್ನು ಸಾಧಿಸಿರುವುದಕ್ಕೆ ನಾವು ನೀಡಿದ ಆದ್ಯತೆಯ ಕಾರಣ. ಇದು ನಮ್ಮ ದೊಡ್ಡ ಸಾಧನೆ” ಎಂದು ಗಡ್ಕರಿ ಹೇಳಿದರು.

ಗಡ್ಕರಿ ಅವರು ಅರ್ಧ ಘಂಟೆಯ ಸುದೀರ್ಘ ಭಾಷಣದಲ್ಲಿ ಕೋವಿಡ್ -19 ಸಾಂಕ್ರಾಮಿಕ ರೋಗವನ್ನು ಉಲ್ಲೇಖಿಸಿ ಶೀಘ್ರದಲ್ಲೇ ರೋಗದ ವಿರುದ್ಧ ಲಸಿಕೆ ಆವಿಷ್ಕರಿಸಲಾಗುವುದು ಎಂಬ ಆಶಾವಾದವನ್ನು ವ್ಯಕ್ತಪಡಿಸಿದರು. “ಈ ಬಿಕ್ಕಟ್ಟು ದೀರ್ಘಕಾಲ ಉಳಿಯುವುದಿಲ್ಲ.. ನಾನು ಯಾವ ಮಾಹಿತಿಯನ್ನು ಸಂಗ್ರಹಿಸಿದರೂ ಕೋವಿಡ್ -19 ವಿರುದ್ಧ ಲಸಿಕೆ ಶೀಘ್ರದಲ್ಲೇ ಲಭ್ಯವಾಗಲಿದೆ ಎಂದು ನಾನು ವಿಶ್ವಾಸದಿಂದ ಹೇಳಬಲ್ಲೆ. ಲಸಿಕೆ ಸಿಕ್ಕ ನಂತರ ಈ ಬಿಕ್ಕಟ್ಟಿನ ಬಗ್ಗೆ ನಾವು ಚಿಂತಿಸಬೇಕಾಗಿಲ್ಲ” ಎಂದು ಅವರು ಹೇಳಿದರು.

ಕಳೆದ ಆರು ವರ್ಷಗಳಲ್ಲಿ ಮೋದಿ ಸರ್ಕಾರ ಮಾಡಿದ ವಿವಿಧ ಅಭಿವೃದ್ಧಿ ಕಾರ್ಯಗಳ ಬಗ್ಗೆ ಗಡ್ಕರಿ ಪ್ರಸ್ತಾಪಿಸಿದ್ದಾರೆ. 370 ನೇ ವಿಧಿಯನ್ನು ರದ್ದುಪಡಿಸುವುದು, ಬಡವರಿಗೆ ವಸತಿ, ವಿವಿಧ ಮೂಲಸೌಕರ್ಯಗಳು ಮತ್ತು ಗಂಗಾ ಶುಚಿಗೊಳಿಸುವ ಯೋಜನೆ ಮತ್ತು ಹಸಿರು ಇಂಧನ ಉಪಕ್ರಮಗಳಂತಹ ಪರಿಸರ ಯೋಜನೆಗಳನ್ನು ಮೋದಿ ಸರ್ಕಾರದ ಸಾಧನೆಗಳೆಂದು ಉಲ್ಲೇಖಿಸಿ, ದೇಶವನ್ನು ‘ಆತ್ಮನಿರ್ಭರ್ (ಸ್ವಾವಲಂಬಿ)’ ಯನ್ನಾಗಿ ಮಾಡುವ ಅಗತ್ಯವಿದ್ದು ಅದು ಸಾಧ್ಯವಿದೆ ಎಂದು ಒತ್ತಿ ಹೇಳಿದ್ದಾರೆ.


ಇದನ್ನೂ ಓದಿ: ಸಾವಿಗೆ ಮುನ್ನ ತಾಯಿ ನೆನೆದು, ಕ್ಷಣಿಕ ಜೀವನ ಎಂದಿದ್ದ ಸುಶಾಂತ್ ಸಿಂಗ್ ರಜಪೂತ್ 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...