Homeಮುಖಪುಟಮೂಢನಂಬಿಕೆಗಳಿಗೆ ಸವಾಲು ಹಾಕಬೇಕು, ಸಾಮಾಜಿಕ ನ್ಯಾಯಕ್ಕೆ ಬದ್ಧರಾಗಬೇಕು: ಮತ್ತೆ ಗುಡುಗಿದ ಉದಯನಿಧಿ ಸ್ಟಾಲಿನ್

ಮೂಢನಂಬಿಕೆಗಳಿಗೆ ಸವಾಲು ಹಾಕಬೇಕು, ಸಾಮಾಜಿಕ ನ್ಯಾಯಕ್ಕೆ ಬದ್ಧರಾಗಬೇಕು: ಮತ್ತೆ ಗುಡುಗಿದ ಉದಯನಿಧಿ ಸ್ಟಾಲಿನ್

- Advertisement -
- Advertisement -

ಬಿಜೆಪಿಯಿಂದ ವ್ಯಾಪಕ ಟೀಕೆಗಳಿಗೆ ಒಳಗಾದ ಬಳಿಕ ಸನಾತನ ಧರ್ಮ ಕುರಿತು ತನ್ನ ಹೇಳಿಕೆಗೆ ಇನ್ನಷ್ಟು ಬಲವಾಗಿ ಅಂಟಿಕೊಂಡಿರುವಡಿಎಂಕೆ ಯುವ ಘಟಕದ ನಾಯಕ ಮತ್ತು ತಮಿಳುನಾಡು ಕ್ರೀಡಾ ಸಚಿವ ಉದಯನಿಧಿ ಸ್ಟಾಲಿನ್ ಅವರು,” ಮೂಢನಂಬಿಕೆಗಳನ್ನು ಪ್ರಶ್ನಿಸಬೇಕಾದ ಮತ್ತು ಸಾಮಾಜಿಕ ನ್ಯಾಯಕ್ಕಾಗಿ ಹೋರಾಟವನ್ನು ಮುಂದುವರಿಸುವ ಅಗತ್ಯವಿದೆ” ಎಂದು ಹೇಳಿದ್ದಾರೆ.

ರವಿವಾರ ಕುಡಲೂರು ಶಾಸಕ ಸಬಾ ರಾಜೇಂದ್ರನ್ ಅವರ ಪುತ್ರನ ವಿವಾಹ ಸಮಾರಂಭದಲ್ಲಿ ಮಾತನಾಡಿದ ಸ್ಟಾಲಿನ್, ”ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಗೃಹಸಚಿವ ಅಮಿತ್ ಶಾ ಸೇರಿದಂತೆ ಬಿಜೆಪಿ ನಾಯಕರು ರಾಜಕೀಯ ಲಾಭಗಳಿಕೆಗಾಗಿ ನನ್ನ ಹೇಳಿಕೆಯನ್ನು ತಿರುಚಿದ್ದಾರೆ ಹಾಗೂ ವದಂತಿಗಳು ಮತ್ತು ದ್ವೇಷವನ್ನು ಹರಡಿದ್ದಾರೆ. ನಾವು ಅಂಧಶ್ರದ್ಧೆಗಳು, ಕುರುಡು ನಂಬಿಕೆಗಳನ್ನು ಪ್ರಶ್ನಿಸುವ ಮತ್ತು ಸಾಮಾಜಿಕ ನ್ಯಾಯಕ್ಕೆ ಬದ್ಧರಾಗಿರಬೇಕಾದ ಅಗತ್ಯವಿದೆ. 2021ರಲ್ಲಿ ತಮಿಳುನಾಡಿನಲ್ಲಿ ನಾವು ಕಂಡಿದ್ದ ಬದಲಾವಣೆಯಂತೆ 2024ರಲ್ಲಿ ದಿಲ್ಲಿಯಲ್ಲಿ ಅಧಿಕಾರ ಬದಲಾವಣೆಯನ್ನು ನಾವು ಕಾಣಬೇಕಿದೆ” ಎಂದು ಹೇಳಿದರು.

ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಮಾತನಾಡಿದರು.

2024ರ ಸಾರ್ವತ್ರಿಕ ಚುನಾವಣೆ ಹತ್ತಿರ ಬರುತ್ತಿದ್ದಂತೆ ಕಠಿಣ ಪರಿಶ್ರಮ ಮುಂದಿದೆ ಎಂದು ಪಕ್ಷದ ಕಾರ್ಯಕರ್ತರಿಗೆ ತಿಳಿಸಿದರು.

”ಸೆ.2ರಂದು ಚೆನ್ನೈನಲ್ಲಿ ಕಾರ್ಯಕ್ರಮವೊಂದರಲ್ಲಿ ಮಾತನಾಡುತ್ತಿದ್ದ ಸಂದರ್ಭ ಅವರು, ”ಸನಾತನ ಧರ್ಮದ ನಿರ್ಮೂಲನೆ ಮಾಡುವುದು ನಮ್ಮ ಮೊದಲ ಆದ್ಯತೆಯಾಗಬೇಕು” ಎಂದು ಹೇಳಿದ್ದರು. ಅವರ ಈ ಹೇಳಿಕೆ ರಾಷ್ಟ್ರಮಟ್ಟದಲ್ಲಿ ವಿವಾದವನ್ನು ಸೃಷ್ಟಿಸಿದೆ.

”ನಾವು ನಿರ್ಮೂಲನೆ ಮಾಡಬೇಕಾದ ಕೆಲವು ವಿಷಯಗಳಿವೆ ಮತ್ತು ನಾವು ಕೇವಲ ವಿರೋಧಿಸಲು ಸಾಧ್ಯವಿಲ್ಲ. ಸೊಳ್ಳೆಗಳು, ಡೆಂಗ್ಯೂ, ಕರೋನಾ ಮತ್ತು ಮಲೇರಿಯಾಗಳನ್ನು ನಾವು ವಿರೋಧಿಸಲು ಸಾಧ್ಯವಿಲ್ಲ, ನಾವು ಅವುಗಳನ್ನು ನಿರ್ಮೂಲನೆ ಮಾಡಬೇಕು. ಸನಾತನ ಕೂಡ ಹೀಗೆಯೇ. ಸನಾತನವನ್ನು ನಿರ್ಮೂಲನೆ ಮಾಡುವುದು ಮತ್ತು ವಿರೋಧಿಸದಿರುವುದು ನಮ್ಮ ಮೊದಲ ಕಾರ್ಯವಾಗಬೇಕು” ಎಂದು ಅವರು ಮುಂದುವರಿಸಿದರು.

ಉದಯನಿಧಿಯವರ ಈ ಹೇಳಿಕೆಯನ್ನು ಬಿಜೆಪಿಯ ಐಟಿ ಸೆಲ್ ಮುಖ್ಯಸ್ಥ ಅಮಿತ್ ಮಾಳವಿಯಾ ಅವರು, ”80% ಭಾರತದ ಜನಸಂಖ್ಯೆಯನ್ನು ಹೊಂದಿರು ”ಸನಾತನಿಯರ ನರಮೇಧದ ಕರೆ” ಎಂದು ವ್ಯಾಖ್ಯಾನಿಸಿದ್ದರು. ಇದಕ್ಕೆ ಪ್ರಧಾನಿ ನರೇಂದ್ರ ಮೋದಿ ಪ್ರತಿಕ್ರಿಯಿಸಿ, ತಮಿಳುನಾಡು ಸಚಿವರಿಗೆ ಸಚಿವರು ”ಸರಿಯಾದ ಪ್ರತಿಕ್ರಿಯೆಯನ್ನು ನೀಡಬೇಕು” ಎಂದು ಹೇಳಿದ್ದರು.

ಇದನ್ನೂ ಓದಿ: ಸನಾತನ ವಿವಾದ: ಪುತ್ರನ ಹೇಳಿಕೆ ಸಮರ್ಥಿಸಿಕೊಂಡ ಸ್ಟಾಲಿನ್, ಪ್ರಧಾನಿ ಪ್ರತಿಕ್ರಿಯೆಗೆ ಆಕ್ಷೇಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...