Homeಅಂಕಣಗಳುಬಹುಜನ ಭಾರತ; ಮನುವಾದ ಸುಣ್ಣವಾದರೆ ತಾಲಿಬಾನ್ ಬೆಣ್ಣೆ ಹೇಗಾದೀತು?

ಬಹುಜನ ಭಾರತ; ಮನುವಾದ ಸುಣ್ಣವಾದರೆ ತಾಲಿಬಾನ್ ಬೆಣ್ಣೆ ಹೇಗಾದೀತು?

- Advertisement -
- Advertisement -

ನಿರಂತರ ಬಾಹ್ಯ ಮತ್ತು ಆಂತರಿಕ ದಾಳಿಗಳಿಗೆ ಗುರಿಯಾಗುತ್ತಲೇ ಬಂದಿರುವ ಪುಟ್ಟ ದೇಶ ಅಫ್ಘಾನಿಸ್ತಾನ. ಯಾರೂ ಗೆಲ್ಲಲಾಗದ ನೆಲವೆಂಬ ಪ್ರತೀತಿ. ’ಸಾಮ್ರಾಜ್ಯಗಳ ಸಮಾಧಿ’ ಎಂದೇ ಇತಿಹಾಸ ಪ್ರಸಿದ್ಧ ದಾಳಿಕೋರರ, ಧರ್ಮಾಂಧರ, ಭಯೋತ್ಪಾದಕರ, ಅತೀವ ಬಡತನ, ಭ್ರಷ್ಟಾಚಾರದ ತಿರುಗಣಿಗೆ ಸಿಲುಕಿ ನಲುಗಿರುವ ನತದೃಷ್ಟ ನಾಡು.

ಮೂರೂಕಾಲು ಕೋಟಿಯ ಪೈಕಿ ಶೇ.99.7ರಷ್ಟು ಜನ ಇಸ್ಲಾಮ್ ಅನುಯಾಯಿಗಳು. ಇಸ್ಲಾಮ್ ಕಾಲಿಟ್ಟ ಹೊತ್ತಿನಲ್ಲಿ ಈ ದೇಶದ ಬಹುಸಂಖ್ಯಾತರು ಬೌದ್ಧರು ಮತ್ತು ಜರತುಷ್ಟ್ರರು.

ಎರಡನೆಯ ವಿಶ್ವಯುದ್ಧದ ನಂತರ ಸೂಪರ್ ಪವರ್‌ಗಳ ನಡುವಣ ಶೀತಲಯುದ್ಧಕ್ಕೆ ಬಲಿಯಾಯಿತು ಈ ದೇಶ. ರಷ್ಯಾ ಅಮೆರಿಕೆಯ ನಡುವಣ ಮೇಲಾಟದ ವಸಾಹತು ಆಯಿತು. ಪರಿಣಾಮವಾಗಿ ಧರ್ಮಾಂಧರು-ಭಯೋತ್ಪಾದಕರು ತಲೆಯೆತ್ತಿದರು. ಎಲ್ಲೆಡೆ ಪುರುಷಾಧಿಪತ್ಯದ ಕ್ರೌರ್ಯಕ್ಕೆ ಸಿಲುಕಿರುವ ಮಹಿಳೆಯ ಸ್ಥಿತಿ ಈ ನೆಲದಲ್ಲಿ ದುಸ್ಥಿತಿಯ ತಳಾತಳವನ್ನು ಮುಟ್ಟಿತು.

ಸೋವಿಯತ್ ಆಕ್ರಮಣದ ವಿರುದ್ಧ ಮುಜಾಹಿದೀನ್ ಧರ್ಮಾಂಧ ಶಕ್ತಿಗಳನ್ನು ಅಮೆರಿಕ ಮತ್ತು ಪಾಕಿಸ್ತಾನ ಎತ್ತಿಕಟ್ಟಿ ಬೆಳೆಸಿದವು. ಅಮೆರಿಕನ್ ಆಕ್ರಮಣದ ವಿರುದ್ಧ ಪಾಕಿಸ್ತಾನದ ಗುಪ್ತ ಕುಮ್ಮಕ್ಕಿನೊಂದಿಗೆ ತಲೆಯೆತ್ತಿದ್ದು ತಾಲಿಬಾನ್. ತಾಲಿಬಾನ್ ಎಂದರೆ ಪಶ್ತೋ ಭಾಷೆಯಲ್ಲಿ ವಿದ್ಯಾರ್ಥಿಗಳು ಎಂದರ್ಥ. 1990ರ ದಶಕದಲ್ಲಿ ಉತ್ತರ ಪಾಕಿಸ್ತಾನದಲ್ಲಿ ಹೊಮ್ಮಿದ ಧಾರ್ಮಿಕ ಆಂದೋಲನವಿದು. ಸೌದಿ ಅರೇಬಿಯಾದ ಹಣದ ನೆರವಿನಿಂದ ನಡೆದ ಸುನ್ನಿ ಇಸ್ಲಾಮ್ ಕಟ್ಟರ್‌ವಾದವನ್ನು ಬೋಧಿಸುವ ಮಠ. ತನ್ನ ಮೂಲ ಅರ್ಥವನ್ನು ಕಳೆದುಕೊಂಡ ತಾಲಿಬಾನ್ ಪದ ಕಾಲಕ್ರಮೇಣ ಗಳಿಸಿಕೊಂಡ ಕುಖ್ಯಾತ ಅರ್ಥವ್ಯಾಪ್ತಿಯೇ ಬೇರೆ.

1996-2001ರ ಅವಧಿಯತಾಲಿಬಾನ್ ಆಡಳಿತ ಮತ್ತು ಆನಂತರ ಪದಚ್ಯುತಿಯ 20 ವರ್ಷಗಳ ಕಾಲ ನಡೆಸಿದ ಬರ್ಬರ ದಾಳಿಗಳ ದುಃಸ್ವಪ್ನಗಳಿಂದ ಆಪ್ಘನ್ ಜನತೆ ಭಯಭೀತಗೊಂಡಿದೆ. ಶಿಕ್ಷಣ, ಉದ್ಯೋಗ, ರಾಜಕಾರಣ ಮುಂತಾದ ಸಾರ್ವಜನಿಕ ಬದುಕಿನಿಂದ ಅದೃಶ್ಯರಾಗಿ ನಾಲ್ಕು ಗೋಡೆಗಳ ನಡುವೆ ಬದುಕಬೇಕಿರುವ ಮಹಿಳೆಯರ ಸ್ಥಿತಿ ದಾರುಣ.

ಶರಿಯಾ ಕಾನೂನುಗಳ ಪ್ರಕಾರ ಸಾರ್ವಜನಿಕ ಮರಣದಂಡನೆ ನೀಡುವ, ಅಂಗಾಂಗಗಳನ್ನು
ಕತ್ತರಿಸುವ ಶಿಕ್ಷೆಗಳು, ಗಂಡಸರು ಗಡ್ಡ ಬೆಳೆಸಬೇಕೆಂಬ ನಿರ್ಬಂಧ ಹೇರಲಾಯಿತು. ಸಿನೆಮಾ, ಟೀವಿ, ಸಂಗೀತವನ್ನು ನಿಷೇಧಿಸಲಾಯಿತು. ಉಡುಗೆತೊಡುಗೆಗಳ ವಿಧಿ ನಿಷೇಧಗಳೂ ಜಾರಿಗೆ ಬಂದವು. ಅಡಿಯಿಂದ ಮುಡಿತನಕ ಬಲವಂತದ ಬುರ್ಖಾ ಧಾರಣೆ, ಗಂಡಸು ಜೊತೆಗಿಲ್ಲದೆ ಹೊಸ್ತಿಲು ದಾಟಕೂಡದು ಮುಂತಾದ ಹತ್ತು ಹಲವು ಅಮಾನವೀಯ ನಿರ್ಬಂಧಗಳನ್ನು ಹೆಣ್ಣುಮಕ್ಕಳ ಮೇಲೆ ವಿಧಿಸಲಾಯಿತು. ಹತ್ತು ವರ್ಷ ದಾಟಿದ ಹೆಣ್ಣುಮಕ್ಕಳು ಶಾಲೆಗೆ ಹೋಗುವುದು ನಿಷಿದ್ಧವೆಂದು ಸಾರಲಾಯಿತು. ಮಾನವೀಯ ಹಕ್ಕುಗಳನ್ನು ತುಳಿಯಲಾಯಿತು. ಸಾಂಸ್ಕೃತಿಕ ಬರ್ಬರತೆ ಮೆರೆಯಿತು. ಅಂತಾರಾಷ್ಟ್ರೀಯ ಆಕ್ರೋಶವನ್ನೂ ಲೆಕ್ಕಿಸದೆ ಬಾಮಿಯಾ ಕಣಿವೆಯಲ್ಲಿ ಕೊರೆಯಲಾಗಿದ್ದ ಆರನೆಯ ಶತಮಾನದ ಬೃಹತ್ ಬುದ್ಧ ಪ್ರತಿಮೆಗಳನ್ನು ಫಿರಂಗಿಗಳಿಂದ ಸಿಡಿಸಿ ನಾಶಮಾಡಲಾಯಿತು. ಧಾರ್ಮಿಕ ಅಲ್ಪಸಂಖ್ಯಾತರಾದ ಶಿಯಾ ಮುಸಲ್ಮಾನರು ನಿರಂತರ ಹತ್ಯೆಗೆ ಈಡಾದರು. ಧಾರ್ಮಿಕ ಅಲ್ಪಸಂಖ್ಯಾತರಾದ ಹಿಂದೂಗಳು ಮತ್ತು ಸಿಖ್ಖರ ಮೇಲಿನ ದಾಳಿಗಳು ನಿರಂತರವಾದವು. ಅವರ ಪ್ರಮಾಣ ನಶಿಸುತ್ತಲೇ ಹೋಯಿತು.

ಇದೀಗ ಪುನಃ ಆಡಳಿತ ಸೂತ್ರ ಹಿಡಿದಿರುವ ತಾಲೀಬಾನ್ ಇಸ್ಲಾಮಿಕ್ ಕಾನೂನುಗಳ ಚೌಕಟ್ಟಿನಲ್ಲೇ ಆಡಳಿತ ನಡೆಸುವುದಾಗಿ ಸಾರಿದೆ. ಆದರೆ ಹಳೆಯ ಅನುಭವಗಳ ಮೇರೆಗೆ ಮೆದು ಬದಲಾವಣೆಗಳನ್ನು ಕಾಣಬಹುದಾಗಿದೆ ಎಂದಿದೆ. ವರ್ಚಸ್ಸು ಸುಧಾರಿಸಿಕೊಳ್ಳುವ ಕಸರತ್ತಿನಲ್ಲಿ ತೊಡಗಿದೆ. ಕ್ಷಮಾದಾನ, ಮೀಡಿಯಾ ಸ್ವಾತಂತ್ರ್ಯ, ಮಹಿಳೆಯರ ಹಕ್ಕುಗಳ ಬಗ್ಗೆ ಮಾತಾಡತೊಡಗಿದೆ. ಆದರೆ ಬಾಯಲ್ಲಿನ ಬೆಣ್ಣೆಗಿಂತ ಬಗಲಲ್ಲಿನ ದೊಣ್ಣೆಯೇ ಸತ್ಯವೆಂಬುದು ಹಳೆಯ ಅನುಭವ.

ತಮ್ಮ ಸ್ವಾರ್ಥದ ಬೇಳೆ ಬೇಯಿಸಿಕೊಳ್ಳಲು ಅಪ್ಘಾನಿಸ್ತಾನವನ್ನು ಧರ್ಮಾಂಧತೆಯ ಸಂಕೋಲೆಗಳಲ್ಲಿ ಮತ್ತಷ್ಟು ಬಿಗಿಯಾಗಿ ಬಂಧಿಸಿದ್ದು ಅಮೆರಿಕ ಮತ್ತು ಪಾಕಿಸ್ತಾನ. ವಿಶೇಷವಾಗಿ ಪಾಕಿಸ್ತಾನದ ಬೆಂಬಲವಿಲ್ಲದೆ ಹೋಗಿದ್ದರೆ ತಾಲಿಬಾನ್‌ಗಳ ಈಗಿನ ಗೆಲುವು ಇಷ್ಟು ಸಲೀಸಾಗಿರುತ್ತಿರಲಿಲ್ಲ. ಆಫ್ಘನ್‌ತಾಲಿಬಾನ್ ಮುಖವಾಡ ತೊಟ್ಟ ಪಾಕಿಸ್ತಾನಿ ಆಕ್ರಮಣವಿದು ಎಂಬ ಸತ್ಯ ದಿನದಿಂದ ದಿನಕ್ಕೆ ಹೆಚ್ಚು ನಿಚ್ಚಳವಾಗತೊಡಗಿದೆ. ತಾಲೀಬಾನನ್ನು ಅದು ಹುಟ್ಟಿದಾಗಿನಿಂದ ಸತತ ಪೊರೆಯುತ್ತ ಬಂದಿರುವ ದೇಶವಿದು.

ವಿಶ್ವದ ಶೇ.90ರಷ್ಟು ಅಫೀಮು- ಹೆರಾಯಿನ್ ಮಾದಕ ವಸ್ತುಗಳ ತವರು ಅಫ್ಘಾನಿಸ್ತಾನ. ಈ ಅಫೀಮು ದೈತ್ಯನ ಮೀರಿಸುವ ಮತ್ತೊಬ್ಬ ಮಾದಕದ್ರವ್ಯ ಎದುರಾಳಿ ಅಫ್ಘಾನಿಸ್ತಾನದಲ್ಲೇ ಮೈ ತಳೆಯುತ್ತಿದ್ದಾನೆ. ಅವನ ಹೆಸರು ಮೆಥಾಂಫೆಟಾಮೈನ್ (Methamphetamine). ನೇರವಾಗಿ ಮನುಷ್ಯ ದೇಹದ ನರಮಂಡಲ ವ್ಯವಸ್ಥೆಯ ಕೇಂದ್ರಕ್ಕೇ ಲಗ್ಗೆ ಹಾಕಿ ಮರಗಟ್ಟಿಸುವ ಮಾದಕದ್ರವ್ಯ. ಪರಮ ಅಂಟಿನ ನಂಟು. ಚಟ ಅಂಟಿದರೆ ಮರಣವೇ ಬಿಡುಗಡೆಯ ಬಾಗಿಲು. ಮೆಥ್, ಬ್ಲೂ, ಐಸ್, ಕ್ರಿಸ್ಟಲ್-ಗ್ಲ್ಯಾಸ್ ಎಂದೂ ವ್ಯಸನಲೋಕದಲ್ಲಿ ಜನಜನಿತ.
ಅಫ್ಘಾನ್ ಅಫೀಮು ಉದ್ಯಮದ ಸೊಂಟ ಮುರಿಯುವ ಅಮೆರಿಕೆಯ ಪಣ ಈಡೇರಲಿಲ್ಲ. ಬದಲಾಗಿ 2001-2018ರ ನಡುವಣ ಅವಧಿಯಲ್ಲಿ ಈ ಉದ್ಯಮ ನಾಲ್ಕು ಪಟ್ಟು ಹೆಚ್ಚಿತು. ಇದೀಗ ಭಯಾನಕ ಮೆಥ್ ಆಯಾಮವೂ ಸೇರಿಕೊಂಡಿದೆ. ಹಲವು ಪ್ರತಿಕೂಲಗಳ ಕಾರಣ ಈ ವಲಯದ ಮೆಥ್ ಉತ್ಪಾದನಾ ಕೇಂದ್ರ ಇರಾನಿನಿಂದ ಅಫ್ಘಾನ್‌ಗೆ ವರ್ಗವಾಯಿತು.

2018ರಲ್ಲಿ ವಿಪರೀತ ಉತ್ಪಾದನೆಯ ಕಾರಣ ಅಫೀಮು ದರ ಭಾರೀ ಕುಸಿತಎದುರಿಸಿತು. ಪರ್ಯಾಯ ಆದಾಯದ ದಾರಿಯಾಗಿ ತೆರೆದುಕೊಂಡದ್ದು ಮೆಥ್ ಉತ್ಪಾದನೆ. ಈ ಉತ್ಪಾದನೆಗೆ ಬೇಕಿರುವ ಮುಖ್ಯ ರಾಸಾಯನಿಕ ಎಫಿಡ್ರೈನ್. ಅಫ್ಘಾನಿಸ್ತಾನದಲ್ಲಿ ತಂತಾನೇ ಕಳೆಯಾಗಿ ಬೆಳೆಯುವ ಸಸ್ಯ ಎಫಿಡ್ರಾದಿಂದ ಹೇರಳ ಪ್ರಮಾಣದ ಎಫಿಡ್ರೈನ್ ಉತ್ಪಾದಿಸಬಹುದು. ಎಫಿಡ್ರೈನ್ ರಾಸಾಯನಿಕವನ್ನು ಆಮದು ಮಾಡಿಕೊಳ್ಳುವ ಗೊಡವೆಯೇ ಇಲ್ಲ. ಈ ಕಾರಣದಿಂದಾಗಿ ಆಫ್ಘನ್ ಮೆಥ್ ಮಾರಾಟ ದರಗಳು ಅತಿ ಅಗ್ಗವೆನಿಸಿದವು. ಶತಕೋಟಿ ಡಾಲರುಗಳ ಮೌಲ್ಯದ ಮೆಥ್ ತಯಾರಿಸುವ ಪ್ರಯೋಗಶಾಲೆಗಳು ಸಾವಿರಾರು ಸಂಖ್ಯೆಯಲ್ಲಿ ತಲೆಯೆತ್ತಿದವು. ಅಫೀಮು ಹೆರಾಯಿನ್ ಜೊತೆಗೆ ಮೆಥ್ ಎಂಬ ಈ ಘೋರ ದ್ರವ್ಯ ಅಫ್ಘಾನಿಸ್ತಾನದಿಂದ ಹೊರಬಿದ್ದು ವಿಶ್ವದ ನಾನಾ ದೇಶಗಳಿಗೆ ಕಳ್ಳಸಾಗಣೆಯಾಗುತ್ತಿದೆ. ಅಮೆರಿಕನ್ ಪಡೆಗಳ ನಿರ್ಗಮನ ಈ ’ಉದ್ಯಮ’ಕ್ಕೆ ರೆಕ್ಕೆಗಳನ್ನು ಹಚ್ಚುವುದು ನಿಶ್ಚಿತ.

ಅಫೀಮಿನ ಜೊತೆಜೊತೆಗೆ ಎಫಿಡ್ರಾ ಮತ್ತು ಮೆಥ್ ಮೇಲಿನ ತೆರಿಗೆಯ ಮೂಲಕ ತಾಲೀಬಾನ್ ಅಪಾರ ಆದಾಯವನ್ನು ಸಂಗ್ರಹಿಸುತ್ತಿದೆ. ಪೆಟ್ರೋಲಿಯಂ ಇಂಧನಗಳು, ಸರಕು ಸಾಗಾಣಿಕೆಯ ಮೇಲೆ ತೆರಿಗೆ
ಹೇರಿಕೆ ಹಾಗೂ ಅಮೂಲ್ಯ ಖನಿಜಗಳ ಗಣಿಗಾರಿಕೆ ಕೂಡತಾಲಿಬಾನ್‌ಗೆ ಭಾರೀ ಆದಾಯ ಮೂಲಗಳಾಗಿವೆ. ಇದೆಲ್ಲ ಆದಾಯದ ಗುರಿ ಶಸ್ತ್ರಾಸ್ತ್ರ ಖರೀದಿ ಮತ್ತು ಶರಿಯಾ ಆಡಳಿತ ಜಾರಿ.

ಖುರಾನಿನ ಪ್ರಕಾರ ಅಮಲು ಅಥವಾ ನಶೆಯ ಪದಾರ್ಥಗಳ ಸೇವನೆ ನಿಷಿದ್ಧ. ಆದರೆ ಶರಿಯಾ ಕಾನೂನಿನ ಮಾತಾಡುವತಾಲಿಬಾನ್‌ಗೆ ಅದರ ಪರಿವೆಯಿಲ್ಲ. ಗುರಿ ಸಾಧನೆಗಾಗಿ ಅಡ್ಡದಾರಿ ಹಿಡಿಯಲು ಹೇಸಿಗೆಯಿಲ್ಲ.

ಮಹಿಳೆಯರು, ದಲಿತರು ಮತ್ತು ಅಲ್ಪಸಂಖ್ಯಾತರನ್ನು ಪೀಡಿಸುವ ಮನುವಾದಿಗಳು ಮತ್ತು ಧರ್ಮಾಂಧ ತಾಲಿಬಾನಿಗಳಿಗೂ ಹೆಚ್ಚು ವ್ಯತ್ಯಾಸವಿಲ್ಲ. ಅಮೆರಿಕನ್ ಸಾಮ್ರಾಜ್ಯಶಾಹಿಯ ವಿರೋಧಕ್ಕಾಗಿಯೋ, ಇಸ್ಲಾಮಿನ
ಸಮರ್ಥನೆಗಾಗಿಯೋ ಇಂತಹ ಮತಾಂಧ ಶಕ್ತಿಗಳನ್ನು ಸಮರ್ಥಿಸಿಕೊಳ್ಳುವುದು ತರವಲ್ಲ.


ಇದನ್ನೂ ಓದಿ: ಬಹುಜನ ಭಾರತ; ದಲಿತ ದ್ವೇಷವನ್ನು ಪ್ರತಿಭೆಯಿಂದ ಗೆದ್ದವರು ಪಲ್ವಂಕರ್ ಸೋದರರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇರಾನ್ ಮೇಲೆ ದಾಳಿ : ಅಮೆರಿಕ ವಿಮಾನಗಳಿಗೆ ತನ್ನ ವಾಯುಪ್ರದೇಶ ಮುಚ್ಚಿದ ಸ್ಪೇನ್

ಇರಾನ್ ಮೇಲಿನ ದಾಳಿಗಳಲ್ಲಿ ಭಾಗಿಯಾಗಿರುವ ಅಮೆರಿಕದ ವಿಮಾನಗಳಿಗೆ ಸ್ಪೇನ್ ತನ್ನ ವಾಯುಪ್ರದೇಶವನ್ನು ನಿರ್ಬಂಧಿಸಿದೆ ಎಂದು ರಕ್ಷಣಾ ಸಚಿವೆ ಮಾರ್ಗರಿಟಾ ರೋಬಲ್ಸ್ (ಮಾ.30) ಸೋಮವಾರ ತಿಳಿಸಿದ್ದಾರೆ. ಜಂಟಿಯಾಗಿ ನಿರ್ವಹಿಸುವ ಸೇನಾ ನೆಲೆಗಳನ್ನು ಬಳಸಲು ಈ...

ಜನಗಣತಿ-2027 : ‘ಸ್ಥಿರ’ ಲಿವ್-ಇನ್ ಜೋಡಿಗೆ ವೈವಾಹಿಕ ಸ್ಥಾನಮಾನ

ತಮ್ಮ ಸಂಬಂಧ 'ಸ್ಥಿರ' ಎಂದು ಹೇಳಿಕೊಳ್ಳುವ ಲಿವ್-ಇನ್ ಜೋಡಿಗಳನ್ನು 2027ರ ಜನಗಣತಿಯಲ್ಲಿ ವಿವಾಹಿತ ದಂಪತಿಯೆಂದು ಪರಿಗಣಿಸಲಾಗುತ್ತದೆ ಎಂದು ವರದಿಯಾಗಿದೆ. ಜನಗಣತಿ ವೆಬ್‌ಸೈಟ್‌ನ FAQ (ಪದೇ ಪದೇ ಕೇಳಲಾಗುವ ಪ್ರಶ್ನೆಗಳು) ವಿಭಾಗದಲ್ಲಿ ಈ ಬಗ್ಗೆ ಸ್ಪಷ್ಟನೆ...

ಉನ್ನತ ಸಾಂಸ್ಥಿಕ ಹುದ್ದೆಗಳಲ್ಲಿ ‘ಬಹುಜನ’ ಪ್ರಾತಿನಿಧ್ಯದ ಕೊರತೆ: ವ್ಯವಸ್ಥಿತ ತಾರತಮ್ಯದ ರೂಪ ಎಂದ ರಾಹುಲ್ ಗಾಂಧಿ 

ಉನ್ನತ ಸಂಸ್ಥೆಗಳ ಹಿರಿಯ ನಾಯಕತ್ವದಲ್ಲಿ "ಬಹುಜನ" ಸಮುದಾಯಗಳಿಗೆ ಪ್ರಾತಿನಿಧ್ಯದ ಕೊರತೆಯಿದೆ ಎಂದು ರಾಹುಲ್ ಗಾಂಧಿ ಸೋಮವಾರ ಆರೋಪಿಸಿದ್ದಾರೆ. ಇದು ವ್ಯವಸ್ಥಿತ ತಾರತಮ್ಯದ ಒಂದು ರೂಪವಾಗಿದ್ದು ಅದನ್ನು ಪರಿಹರಿಸಬೇಕು ಎಂದು ಹೇಳಿದ್ದಾರೆ.  ಲೋಕಸಭೆಯ ವಿರೋಧ ಪಕ್ಷದ...

ಗಾಯಗಳ ತೀವ್ರತೆಯಿಂದಾಗಿ ನೌಕಾಪಡೆಯ ಮುಖ್ಯಸ್ಥ ತಂಗ್ಸಿರಿ ಸಾವನ್ನಪ್ಪಿದ್ದಾರೆ: ದೃಢಪಡಿಸಿದ ಇರಾನ್

ತಾನು ನಡೆಸಿದ ದಾಳಿಯಿಂದ ಇರಾನ್‌ ನೌಕಾಪಡೆಯ ರಿಯರ್ ಅಡ್ಮಿರಲ್ ಅಲಿರೆಜಾ ತಂಗ್ಸಿರಿ ಸಾವನ್ನಪ್ಪಿದ್ದಾರೆ ಎಂದು ಕಳೆದ ಗುರುವಾರ (ಮಾ.26) ಇಸ್ರೇಲ್ ಹೇಳಿಕೊಂಡಿತ್ತು. ಸುದ್ದಿ ಖಷಿತಪಡಿಸಿರುವ ಇರಾನ್, ದಾಳಿಯಿಂದ ಸಂಭವಿಸಿದ ತೀವ್ರ ಗಾಯಗಳಿಂದ ತಂಗ್ಸಿರಿ...

ಬಹುಭಾಷಾ ನಟ ಪ್ರಕಾಶ್ ರಾಜ್‌ ತಾಯಿ ಸ್ವರ್ಣಲತಾ ನಿಧನ

ಬಹುಭಾಷಾ ನಟ ಪ್ರಕಾಶ್ ರಾಜ್ ಅವರ ತಾಯಿ ಸ್ವರ್ಣಲತಾ ಅವರು ತಮ್ಮ 86 ನೇ ವಯಸ್ಸಿನಲ್ಲಿ ನಿಧನರಾಗಿದ್ದಾರೆ. ಅವರು ವಯೋಸಹಜ ಅನಾರೋಗ್ಯದಿಂದ ಸಾವನ್ನಪ್ಪಿದ್ದಾರೆ. ನಟ ಪ್ರಕಾಶ್‌ ರಾಜ್‌ ಅವರು ತಮ್ಮ ತಾಯಿಯೊಂದಿಗೆ ಇದ್ದ...

ಮುಂಬೈ: ಸ್ವ-ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ಆಕ್ರೋಶ: ದಾದರ್‌ನಲ್ಲಿ ಮೂಢನಂಬಿಕೆ ವಿರೋಧಿ ಅಭಿಯಾನ

ಮುಂಬೈ: ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ಅವರ ಚಟುವಟಿಕೆಗಳ ಸುತ್ತ ವ್ಯಾಪಕ ಆಕ್ರೋಶ ವ್ಯಕ್ತವಾಗಿರುವ ಹಿನ್ನೆಲೆಯಲ್ಲಿ, ವಿವೇಕ್ ಜಾಗರ್ ಉಪಕ್ರಮದಡಿಯಲ್ಲಿ ಮಹಾರಾಷ್ಟ್ರ ಅಂಧಾಶ್ರದ್ಧ ನಿರ್ಮೂಲನ ಸಮಿತಿ (MANS) ಮಹಾರಾಷ್ಟ್ರ ಘಟಕವು ಭಾನುವಾರ...

ನೋಟಿಸ್ ನೀಡದೆ ಮಸೀದಿ ಬಂದ್; ಉತ್ತರ ಪ್ರದೇಶ ಸರ್ಕಾರವನ್ನು ಪ್ರಶ್ನಿಸಿದ ಅಲಹಾಬಾದ್ ಹೈಕೋರ್ಟ್

ಪೂರ್ವ ಸೂಚನೆ ನೀಡದೆ ಅಥವಾ ಮಾಲೀಕರಿಗೆ ವಿಚಾರಣೆಗೆ ಅವಕಾಶ ನೀಡದೆ ಪ್ರಾರ್ಥನಾ ಸ್ಥಳಕ್ಕೆ ಬೀಗ ಹಾಕಬಹುದೇ ಎಂಬ ಬಗ್ಗೆ ವಿವರಣೆ ನೀಡಬೇಕು ಎಂದು ಅಲಹಾಬಾದ್ ಹೈಕೋರ್ಟ್ ಉತ್ತರ ಪ್ರದೇಶ ಸರ್ಕಾರವನ್ನು ಕೇಳಿದೆ. ಮುಜಫರ್‌ನಗರದಲ್ಲಿ ಮಸೀದಿಯನ್ನು...

ಬಿಜು ಪಟ್ನಾಯಕ್ ಕುರಿತು ಹೇಳಿಕೆ : ಬಿಜೆಪಿ ಸಂಸದ ನಿಶಿಕಾಂತ್ ದುಬೆ ವಿರುದ್ಧ ತೀವ್ರ ಆಕ್ರೋಶ

ಒಡಿಶಾದ ಮಾಜಿ ಮುಖ್ಯಮಂತ್ರಿ ಬಿಜು ಪಟ್ನಾಯಕ್ ಅವರ ಕುರಿತು ಬಿಜೆಪಿ ಸಂಸದ ನಿಶಿಕಾಂತ್ ದುಬೆ ನೀಡಿರುವ ಹೇಳಿಕೆಗೆ ತೀವ್ರ ಆಕ್ರೋಶ ವ್ಯಕ್ತವಾಗಿದೆ. ದುಬೆ ನೇತೃತ್ವದ ಸಂವಹನ ಮತ್ತು ಐಟಿ ಕುರಿತ ಸಂಸದೀಯ ಸ್ಥಾಯಿ...

ಮುರ್ಷಿದಾಬಾದ್ ರಾಮನವಮಿ ಹಿಂಸಾಚಾರ; ಆರ್‌ಎಸ್‌ಎಸ್ ನಾಯಕ ಸೇರಿದಂತೆ 30 ಜನರ ಬಂಧನ

ಮಾರ್ಚ್ 27 ರಂದು ಮುರ್ಷಿದಾಬಾದ್ ಜಿಲ್ಲೆಯ ಜಂಗಿಪುರ ಉಪವಿಭಾಗದ ರಘುನಾಥಗಂಜ್‌ನಲ್ಲಿ ನಡೆದ ರಾಮನವಮಿ ಮೆರವಣಿಗೆ ಹಿಂಸಾಚಾರಕ್ಕೆ ತಿರುಗಿದ ನಂತರ ಸುಮಾರು 30 ಜನರು ಗಾಯಗೊಂಡರು. ಈ ಘಟನೆಯು ವ್ಯಾಪಕ ಉದ್ವಿಗ್ನತೆಗೆ ಕಾರಣವಾಗಿದ್ದು, ಅಂಗಡಿ...

ದೆಹಲಿ ಗಲಭೆ ಪ್ರಕರಣ: ಮಧ್ಯಂತರ ಜಾಮೀನು ಅವಧಿ ಅಂತ್ಯ; ಇಂದು ತಿಹಾರ್ ಜೈಲಿಗೆ ಮರಳಲಿರುವ ಶಾರ್ಜೀಲ್ ಇಮಾಮ್

2020 ರ ಈಶಾನ್ಯ ದೆಹಲಿ ಗಲಭೆಯ ಹಿಂದಿನ ದೊಡ್ಡ ಪಿತೂರಿ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ನ್ಯಾಯಾಲಯವು ನೀಡಿದ್ದ 10 ದಿನಗಳ ಮಧ್ಯಂತರ ಜಾಮೀನು ಅವಧಿ ಮುಗಿದ ಹಿನ್ನೆಲೆಯಲ್ಲಿ ವಿದ್ಯಾರ್ಥಿ ಕಾರ್ಯಕರ್ತ ಶಾರ್ಜೀಲ್ ಇಮಾಮ್...