Homeಅಂಕಣಗಳುಬಹುಜನ ಭಾರತ; ಮನುವಾದ ಸುಣ್ಣವಾದರೆ ತಾಲಿಬಾನ್ ಬೆಣ್ಣೆ ಹೇಗಾದೀತು?

ಬಹುಜನ ಭಾರತ; ಮನುವಾದ ಸುಣ್ಣವಾದರೆ ತಾಲಿಬಾನ್ ಬೆಣ್ಣೆ ಹೇಗಾದೀತು?

- Advertisement -
- Advertisement -

ನಿರಂತರ ಬಾಹ್ಯ ಮತ್ತು ಆಂತರಿಕ ದಾಳಿಗಳಿಗೆ ಗುರಿಯಾಗುತ್ತಲೇ ಬಂದಿರುವ ಪುಟ್ಟ ದೇಶ ಅಫ್ಘಾನಿಸ್ತಾನ. ಯಾರೂ ಗೆಲ್ಲಲಾಗದ ನೆಲವೆಂಬ ಪ್ರತೀತಿ. ’ಸಾಮ್ರಾಜ್ಯಗಳ ಸಮಾಧಿ’ ಎಂದೇ ಇತಿಹಾಸ ಪ್ರಸಿದ್ಧ ದಾಳಿಕೋರರ, ಧರ್ಮಾಂಧರ, ಭಯೋತ್ಪಾದಕರ, ಅತೀವ ಬಡತನ, ಭ್ರಷ್ಟಾಚಾರದ ತಿರುಗಣಿಗೆ ಸಿಲುಕಿ ನಲುಗಿರುವ ನತದೃಷ್ಟ ನಾಡು.

ಮೂರೂಕಾಲು ಕೋಟಿಯ ಪೈಕಿ ಶೇ.99.7ರಷ್ಟು ಜನ ಇಸ್ಲಾಮ್ ಅನುಯಾಯಿಗಳು. ಇಸ್ಲಾಮ್ ಕಾಲಿಟ್ಟ ಹೊತ್ತಿನಲ್ಲಿ ಈ ದೇಶದ ಬಹುಸಂಖ್ಯಾತರು ಬೌದ್ಧರು ಮತ್ತು ಜರತುಷ್ಟ್ರರು.

ಎರಡನೆಯ ವಿಶ್ವಯುದ್ಧದ ನಂತರ ಸೂಪರ್ ಪವರ್‌ಗಳ ನಡುವಣ ಶೀತಲಯುದ್ಧಕ್ಕೆ ಬಲಿಯಾಯಿತು ಈ ದೇಶ. ರಷ್ಯಾ ಅಮೆರಿಕೆಯ ನಡುವಣ ಮೇಲಾಟದ ವಸಾಹತು ಆಯಿತು. ಪರಿಣಾಮವಾಗಿ ಧರ್ಮಾಂಧರು-ಭಯೋತ್ಪಾದಕರು ತಲೆಯೆತ್ತಿದರು. ಎಲ್ಲೆಡೆ ಪುರುಷಾಧಿಪತ್ಯದ ಕ್ರೌರ್ಯಕ್ಕೆ ಸಿಲುಕಿರುವ ಮಹಿಳೆಯ ಸ್ಥಿತಿ ಈ ನೆಲದಲ್ಲಿ ದುಸ್ಥಿತಿಯ ತಳಾತಳವನ್ನು ಮುಟ್ಟಿತು.

ಸೋವಿಯತ್ ಆಕ್ರಮಣದ ವಿರುದ್ಧ ಮುಜಾಹಿದೀನ್ ಧರ್ಮಾಂಧ ಶಕ್ತಿಗಳನ್ನು ಅಮೆರಿಕ ಮತ್ತು ಪಾಕಿಸ್ತಾನ ಎತ್ತಿಕಟ್ಟಿ ಬೆಳೆಸಿದವು. ಅಮೆರಿಕನ್ ಆಕ್ರಮಣದ ವಿರುದ್ಧ ಪಾಕಿಸ್ತಾನದ ಗುಪ್ತ ಕುಮ್ಮಕ್ಕಿನೊಂದಿಗೆ ತಲೆಯೆತ್ತಿದ್ದು ತಾಲಿಬಾನ್. ತಾಲಿಬಾನ್ ಎಂದರೆ ಪಶ್ತೋ ಭಾಷೆಯಲ್ಲಿ ವಿದ್ಯಾರ್ಥಿಗಳು ಎಂದರ್ಥ. 1990ರ ದಶಕದಲ್ಲಿ ಉತ್ತರ ಪಾಕಿಸ್ತಾನದಲ್ಲಿ ಹೊಮ್ಮಿದ ಧಾರ್ಮಿಕ ಆಂದೋಲನವಿದು. ಸೌದಿ ಅರೇಬಿಯಾದ ಹಣದ ನೆರವಿನಿಂದ ನಡೆದ ಸುನ್ನಿ ಇಸ್ಲಾಮ್ ಕಟ್ಟರ್‌ವಾದವನ್ನು ಬೋಧಿಸುವ ಮಠ. ತನ್ನ ಮೂಲ ಅರ್ಥವನ್ನು ಕಳೆದುಕೊಂಡ ತಾಲಿಬಾನ್ ಪದ ಕಾಲಕ್ರಮೇಣ ಗಳಿಸಿಕೊಂಡ ಕುಖ್ಯಾತ ಅರ್ಥವ್ಯಾಪ್ತಿಯೇ ಬೇರೆ.

1996-2001ರ ಅವಧಿಯತಾಲಿಬಾನ್ ಆಡಳಿತ ಮತ್ತು ಆನಂತರ ಪದಚ್ಯುತಿಯ 20 ವರ್ಷಗಳ ಕಾಲ ನಡೆಸಿದ ಬರ್ಬರ ದಾಳಿಗಳ ದುಃಸ್ವಪ್ನಗಳಿಂದ ಆಪ್ಘನ್ ಜನತೆ ಭಯಭೀತಗೊಂಡಿದೆ. ಶಿಕ್ಷಣ, ಉದ್ಯೋಗ, ರಾಜಕಾರಣ ಮುಂತಾದ ಸಾರ್ವಜನಿಕ ಬದುಕಿನಿಂದ ಅದೃಶ್ಯರಾಗಿ ನಾಲ್ಕು ಗೋಡೆಗಳ ನಡುವೆ ಬದುಕಬೇಕಿರುವ ಮಹಿಳೆಯರ ಸ್ಥಿತಿ ದಾರುಣ.

ಶರಿಯಾ ಕಾನೂನುಗಳ ಪ್ರಕಾರ ಸಾರ್ವಜನಿಕ ಮರಣದಂಡನೆ ನೀಡುವ, ಅಂಗಾಂಗಗಳನ್ನು
ಕತ್ತರಿಸುವ ಶಿಕ್ಷೆಗಳು, ಗಂಡಸರು ಗಡ್ಡ ಬೆಳೆಸಬೇಕೆಂಬ ನಿರ್ಬಂಧ ಹೇರಲಾಯಿತು. ಸಿನೆಮಾ, ಟೀವಿ, ಸಂಗೀತವನ್ನು ನಿಷೇಧಿಸಲಾಯಿತು. ಉಡುಗೆತೊಡುಗೆಗಳ ವಿಧಿ ನಿಷೇಧಗಳೂ ಜಾರಿಗೆ ಬಂದವು. ಅಡಿಯಿಂದ ಮುಡಿತನಕ ಬಲವಂತದ ಬುರ್ಖಾ ಧಾರಣೆ, ಗಂಡಸು ಜೊತೆಗಿಲ್ಲದೆ ಹೊಸ್ತಿಲು ದಾಟಕೂಡದು ಮುಂತಾದ ಹತ್ತು ಹಲವು ಅಮಾನವೀಯ ನಿರ್ಬಂಧಗಳನ್ನು ಹೆಣ್ಣುಮಕ್ಕಳ ಮೇಲೆ ವಿಧಿಸಲಾಯಿತು. ಹತ್ತು ವರ್ಷ ದಾಟಿದ ಹೆಣ್ಣುಮಕ್ಕಳು ಶಾಲೆಗೆ ಹೋಗುವುದು ನಿಷಿದ್ಧವೆಂದು ಸಾರಲಾಯಿತು. ಮಾನವೀಯ ಹಕ್ಕುಗಳನ್ನು ತುಳಿಯಲಾಯಿತು. ಸಾಂಸ್ಕೃತಿಕ ಬರ್ಬರತೆ ಮೆರೆಯಿತು. ಅಂತಾರಾಷ್ಟ್ರೀಯ ಆಕ್ರೋಶವನ್ನೂ ಲೆಕ್ಕಿಸದೆ ಬಾಮಿಯಾ ಕಣಿವೆಯಲ್ಲಿ ಕೊರೆಯಲಾಗಿದ್ದ ಆರನೆಯ ಶತಮಾನದ ಬೃಹತ್ ಬುದ್ಧ ಪ್ರತಿಮೆಗಳನ್ನು ಫಿರಂಗಿಗಳಿಂದ ಸಿಡಿಸಿ ನಾಶಮಾಡಲಾಯಿತು. ಧಾರ್ಮಿಕ ಅಲ್ಪಸಂಖ್ಯಾತರಾದ ಶಿಯಾ ಮುಸಲ್ಮಾನರು ನಿರಂತರ ಹತ್ಯೆಗೆ ಈಡಾದರು. ಧಾರ್ಮಿಕ ಅಲ್ಪಸಂಖ್ಯಾತರಾದ ಹಿಂದೂಗಳು ಮತ್ತು ಸಿಖ್ಖರ ಮೇಲಿನ ದಾಳಿಗಳು ನಿರಂತರವಾದವು. ಅವರ ಪ್ರಮಾಣ ನಶಿಸುತ್ತಲೇ ಹೋಯಿತು.

ಇದೀಗ ಪುನಃ ಆಡಳಿತ ಸೂತ್ರ ಹಿಡಿದಿರುವ ತಾಲೀಬಾನ್ ಇಸ್ಲಾಮಿಕ್ ಕಾನೂನುಗಳ ಚೌಕಟ್ಟಿನಲ್ಲೇ ಆಡಳಿತ ನಡೆಸುವುದಾಗಿ ಸಾರಿದೆ. ಆದರೆ ಹಳೆಯ ಅನುಭವಗಳ ಮೇರೆಗೆ ಮೆದು ಬದಲಾವಣೆಗಳನ್ನು ಕಾಣಬಹುದಾಗಿದೆ ಎಂದಿದೆ. ವರ್ಚಸ್ಸು ಸುಧಾರಿಸಿಕೊಳ್ಳುವ ಕಸರತ್ತಿನಲ್ಲಿ ತೊಡಗಿದೆ. ಕ್ಷಮಾದಾನ, ಮೀಡಿಯಾ ಸ್ವಾತಂತ್ರ್ಯ, ಮಹಿಳೆಯರ ಹಕ್ಕುಗಳ ಬಗ್ಗೆ ಮಾತಾಡತೊಡಗಿದೆ. ಆದರೆ ಬಾಯಲ್ಲಿನ ಬೆಣ್ಣೆಗಿಂತ ಬಗಲಲ್ಲಿನ ದೊಣ್ಣೆಯೇ ಸತ್ಯವೆಂಬುದು ಹಳೆಯ ಅನುಭವ.

ತಮ್ಮ ಸ್ವಾರ್ಥದ ಬೇಳೆ ಬೇಯಿಸಿಕೊಳ್ಳಲು ಅಪ್ಘಾನಿಸ್ತಾನವನ್ನು ಧರ್ಮಾಂಧತೆಯ ಸಂಕೋಲೆಗಳಲ್ಲಿ ಮತ್ತಷ್ಟು ಬಿಗಿಯಾಗಿ ಬಂಧಿಸಿದ್ದು ಅಮೆರಿಕ ಮತ್ತು ಪಾಕಿಸ್ತಾನ. ವಿಶೇಷವಾಗಿ ಪಾಕಿಸ್ತಾನದ ಬೆಂಬಲವಿಲ್ಲದೆ ಹೋಗಿದ್ದರೆ ತಾಲಿಬಾನ್‌ಗಳ ಈಗಿನ ಗೆಲುವು ಇಷ್ಟು ಸಲೀಸಾಗಿರುತ್ತಿರಲಿಲ್ಲ. ಆಫ್ಘನ್‌ತಾಲಿಬಾನ್ ಮುಖವಾಡ ತೊಟ್ಟ ಪಾಕಿಸ್ತಾನಿ ಆಕ್ರಮಣವಿದು ಎಂಬ ಸತ್ಯ ದಿನದಿಂದ ದಿನಕ್ಕೆ ಹೆಚ್ಚು ನಿಚ್ಚಳವಾಗತೊಡಗಿದೆ. ತಾಲೀಬಾನನ್ನು ಅದು ಹುಟ್ಟಿದಾಗಿನಿಂದ ಸತತ ಪೊರೆಯುತ್ತ ಬಂದಿರುವ ದೇಶವಿದು.

ವಿಶ್ವದ ಶೇ.90ರಷ್ಟು ಅಫೀಮು- ಹೆರಾಯಿನ್ ಮಾದಕ ವಸ್ತುಗಳ ತವರು ಅಫ್ಘಾನಿಸ್ತಾನ. ಈ ಅಫೀಮು ದೈತ್ಯನ ಮೀರಿಸುವ ಮತ್ತೊಬ್ಬ ಮಾದಕದ್ರವ್ಯ ಎದುರಾಳಿ ಅಫ್ಘಾನಿಸ್ತಾನದಲ್ಲೇ ಮೈ ತಳೆಯುತ್ತಿದ್ದಾನೆ. ಅವನ ಹೆಸರು ಮೆಥಾಂಫೆಟಾಮೈನ್ (Methamphetamine). ನೇರವಾಗಿ ಮನುಷ್ಯ ದೇಹದ ನರಮಂಡಲ ವ್ಯವಸ್ಥೆಯ ಕೇಂದ್ರಕ್ಕೇ ಲಗ್ಗೆ ಹಾಕಿ ಮರಗಟ್ಟಿಸುವ ಮಾದಕದ್ರವ್ಯ. ಪರಮ ಅಂಟಿನ ನಂಟು. ಚಟ ಅಂಟಿದರೆ ಮರಣವೇ ಬಿಡುಗಡೆಯ ಬಾಗಿಲು. ಮೆಥ್, ಬ್ಲೂ, ಐಸ್, ಕ್ರಿಸ್ಟಲ್-ಗ್ಲ್ಯಾಸ್ ಎಂದೂ ವ್ಯಸನಲೋಕದಲ್ಲಿ ಜನಜನಿತ.
ಅಫ್ಘಾನ್ ಅಫೀಮು ಉದ್ಯಮದ ಸೊಂಟ ಮುರಿಯುವ ಅಮೆರಿಕೆಯ ಪಣ ಈಡೇರಲಿಲ್ಲ. ಬದಲಾಗಿ 2001-2018ರ ನಡುವಣ ಅವಧಿಯಲ್ಲಿ ಈ ಉದ್ಯಮ ನಾಲ್ಕು ಪಟ್ಟು ಹೆಚ್ಚಿತು. ಇದೀಗ ಭಯಾನಕ ಮೆಥ್ ಆಯಾಮವೂ ಸೇರಿಕೊಂಡಿದೆ. ಹಲವು ಪ್ರತಿಕೂಲಗಳ ಕಾರಣ ಈ ವಲಯದ ಮೆಥ್ ಉತ್ಪಾದನಾ ಕೇಂದ್ರ ಇರಾನಿನಿಂದ ಅಫ್ಘಾನ್‌ಗೆ ವರ್ಗವಾಯಿತು.

2018ರಲ್ಲಿ ವಿಪರೀತ ಉತ್ಪಾದನೆಯ ಕಾರಣ ಅಫೀಮು ದರ ಭಾರೀ ಕುಸಿತಎದುರಿಸಿತು. ಪರ್ಯಾಯ ಆದಾಯದ ದಾರಿಯಾಗಿ ತೆರೆದುಕೊಂಡದ್ದು ಮೆಥ್ ಉತ್ಪಾದನೆ. ಈ ಉತ್ಪಾದನೆಗೆ ಬೇಕಿರುವ ಮುಖ್ಯ ರಾಸಾಯನಿಕ ಎಫಿಡ್ರೈನ್. ಅಫ್ಘಾನಿಸ್ತಾನದಲ್ಲಿ ತಂತಾನೇ ಕಳೆಯಾಗಿ ಬೆಳೆಯುವ ಸಸ್ಯ ಎಫಿಡ್ರಾದಿಂದ ಹೇರಳ ಪ್ರಮಾಣದ ಎಫಿಡ್ರೈನ್ ಉತ್ಪಾದಿಸಬಹುದು. ಎಫಿಡ್ರೈನ್ ರಾಸಾಯನಿಕವನ್ನು ಆಮದು ಮಾಡಿಕೊಳ್ಳುವ ಗೊಡವೆಯೇ ಇಲ್ಲ. ಈ ಕಾರಣದಿಂದಾಗಿ ಆಫ್ಘನ್ ಮೆಥ್ ಮಾರಾಟ ದರಗಳು ಅತಿ ಅಗ್ಗವೆನಿಸಿದವು. ಶತಕೋಟಿ ಡಾಲರುಗಳ ಮೌಲ್ಯದ ಮೆಥ್ ತಯಾರಿಸುವ ಪ್ರಯೋಗಶಾಲೆಗಳು ಸಾವಿರಾರು ಸಂಖ್ಯೆಯಲ್ಲಿ ತಲೆಯೆತ್ತಿದವು. ಅಫೀಮು ಹೆರಾಯಿನ್ ಜೊತೆಗೆ ಮೆಥ್ ಎಂಬ ಈ ಘೋರ ದ್ರವ್ಯ ಅಫ್ಘಾನಿಸ್ತಾನದಿಂದ ಹೊರಬಿದ್ದು ವಿಶ್ವದ ನಾನಾ ದೇಶಗಳಿಗೆ ಕಳ್ಳಸಾಗಣೆಯಾಗುತ್ತಿದೆ. ಅಮೆರಿಕನ್ ಪಡೆಗಳ ನಿರ್ಗಮನ ಈ ’ಉದ್ಯಮ’ಕ್ಕೆ ರೆಕ್ಕೆಗಳನ್ನು ಹಚ್ಚುವುದು ನಿಶ್ಚಿತ.

ಅಫೀಮಿನ ಜೊತೆಜೊತೆಗೆ ಎಫಿಡ್ರಾ ಮತ್ತು ಮೆಥ್ ಮೇಲಿನ ತೆರಿಗೆಯ ಮೂಲಕ ತಾಲೀಬಾನ್ ಅಪಾರ ಆದಾಯವನ್ನು ಸಂಗ್ರಹಿಸುತ್ತಿದೆ. ಪೆಟ್ರೋಲಿಯಂ ಇಂಧನಗಳು, ಸರಕು ಸಾಗಾಣಿಕೆಯ ಮೇಲೆ ತೆರಿಗೆ
ಹೇರಿಕೆ ಹಾಗೂ ಅಮೂಲ್ಯ ಖನಿಜಗಳ ಗಣಿಗಾರಿಕೆ ಕೂಡತಾಲಿಬಾನ್‌ಗೆ ಭಾರೀ ಆದಾಯ ಮೂಲಗಳಾಗಿವೆ. ಇದೆಲ್ಲ ಆದಾಯದ ಗುರಿ ಶಸ್ತ್ರಾಸ್ತ್ರ ಖರೀದಿ ಮತ್ತು ಶರಿಯಾ ಆಡಳಿತ ಜಾರಿ.

ಖುರಾನಿನ ಪ್ರಕಾರ ಅಮಲು ಅಥವಾ ನಶೆಯ ಪದಾರ್ಥಗಳ ಸೇವನೆ ನಿಷಿದ್ಧ. ಆದರೆ ಶರಿಯಾ ಕಾನೂನಿನ ಮಾತಾಡುವತಾಲಿಬಾನ್‌ಗೆ ಅದರ ಪರಿವೆಯಿಲ್ಲ. ಗುರಿ ಸಾಧನೆಗಾಗಿ ಅಡ್ಡದಾರಿ ಹಿಡಿಯಲು ಹೇಸಿಗೆಯಿಲ್ಲ.

ಮಹಿಳೆಯರು, ದಲಿತರು ಮತ್ತು ಅಲ್ಪಸಂಖ್ಯಾತರನ್ನು ಪೀಡಿಸುವ ಮನುವಾದಿಗಳು ಮತ್ತು ಧರ್ಮಾಂಧ ತಾಲಿಬಾನಿಗಳಿಗೂ ಹೆಚ್ಚು ವ್ಯತ್ಯಾಸವಿಲ್ಲ. ಅಮೆರಿಕನ್ ಸಾಮ್ರಾಜ್ಯಶಾಹಿಯ ವಿರೋಧಕ್ಕಾಗಿಯೋ, ಇಸ್ಲಾಮಿನ
ಸಮರ್ಥನೆಗಾಗಿಯೋ ಇಂತಹ ಮತಾಂಧ ಶಕ್ತಿಗಳನ್ನು ಸಮರ್ಥಿಸಿಕೊಳ್ಳುವುದು ತರವಲ್ಲ.


ಇದನ್ನೂ ಓದಿ: ಬಹುಜನ ಭಾರತ; ದಲಿತ ದ್ವೇಷವನ್ನು ಪ್ರತಿಭೆಯಿಂದ ಗೆದ್ದವರು ಪಲ್ವಂಕರ್ ಸೋದರರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಲಿತ ಮಹಿಳೆ ಮೇಲೆ ಸಾರ್ವಜನಿಕವಾಗಿ ಹಲ್ಲೆ; ಹಾಡಗಲೇ ಕೂದಲಿಡಿದು ಎಳೆದಾಡಿದ ಪಂಜಾಬ್ ಪೊಲೀಸರು

ಪಂಜಾಬ್‌ನ ಜಲಂಧರ್‌ನಲ್ಲಿ ಕಳೆದ ಶುಕ್ರವಾರ (ಮಾ.20), ಪೊಲೀಸ್ ಅಧಿಕಾರಿಯೊಬ್ಬರು ದಲಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಹಲ್ಲೆ ನಡೆಸಿ ಕೂದಲು ಹಿಡಿದು ಎಳೆದಾಡಿದ್ದಾರೆ ಎಂದು 'ಸಿಯಾಸಾಟ್.ಕಾಮ್' ವರದಿ ಮಾಡಿದೆ. ಘಟನೆಯ ಸಿಸಿಟಿವಿ ದೃಶ್ಯಾವಳಿಗಳು ಸಾಮಾಜಿಕ ಮಾಧ್ಯಮದಲ್ಲಿ...

ನ್ಯೂಯಾರ್ಕ್‌ನ ಲಾಗಾರ್ಡಿಯಾ ವಿಮಾನ ನಿಲ್ದಾಣದಲ್ಲಿ ಅಗ್ನಿಶಾಮಕ ವಾಹನಕ್ಕೆ ಡಿಕ್ಕಿ ಹೊಡೆದ ಏರ್ ಕೆನಡಾ ಎಕ್ಸ್‌ಪ್ರೆಸ್ ವಿಮಾನ; ಇಬ್ಬರು ಸಾವು

ಭಾನುವಾರ ತಡರಾತ್ರಿ ನ್ಯೂಯಾರ್ಕ್‌ನ ಲಾಗಾರ್ಡಿಯಾ ವಿಮಾನ ನಿಲ್ದಾಣದಲ್ಲಿ ಸುಮಾರು 76 ಜನರನ್ನು ಹೊತ್ತೊಯ್ಯುತ್ತಿದ್ದ ಏರ್ ಕೆನಡಾ ಎಕ್ಸ್‌ಪ್ರೆಸ್ ವಿಮಾನವು ನೆಲದ ಮೇಲೆ ಚಲಿಸುತ್ತಿದ್ದ ಅಗ್ನಿಶಾಮಕ ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ ಪೈಲಟ್ ಮತ್ತು...

‘ತೀರ್ಮಾನಿಸಲು ಏನೂ ಉಳಿದಿಲ್ಲ’ : ಸೋನಮ್ ವಾಂಗ್ಚುಕ್ ಬಂಧನ ಪ್ರಶ್ನಿಸಿದ್ದ ಅರ್ಜಿ ವಿಲೇವಾರಿ ಮಾಡಿದ ಸುಪ್ರೀಂ ಕೋರ್ಟ್

ಲಡಾಖ್‌ನ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರನ್ನು ರಾಷ್ಟ್ರೀಯ ಭದ್ರತಾ ಕಾಯ್ದೆ (ಎನ್‌ಎಸ್‌ಎ) ಅಡಿಯಲ್ಲಿ ಬಂಧಿಸಿರುವುದನ್ನು ಪ್ರಶ್ನಿಸಿ ಅವರ ಪತ್ನಿ ಗೀತಾಂಜಲಿ ಅಂಗ್ಮೋ ಸಲ್ಲಿಸಿದ್ದ ಹೇಬಿಯಸ್ ಕಾರ್ಪಸ್ ಅರ್ಜಿಯನ್ನು ಸುಪ್ರೀಂ ಕೋರ್ಟ್ ಸೋಮವಾರ (ಮಾ.23)...

ಡೋನಾಲ್ಡ್‌ ಟ್ರಂಪ್ ಕಠಿಣ ವೀಸಾ ನೀತಿಗಳಿಂದ ಸಂಕಷ್ಟಕ್ಕೆ ಸಿಲುಕಿದ ಭಾರತ-ಚೀನಾ

ಡೊನಾಲ್ಡ್‌ ಟ್ರಂಪ್ ಆಡಳಿತವು ಅನಾವರಣಗೊಳಿಸಿದ ಕಠಿಣ ವಲಸೆ ನೀತಿಯ ಗರಿಷ್ಠ ಹೊರೆಯು ಭಾರತ ಮತ್ತು ಚೀನಾ ದೇಶಗಳ ಮೇಲೆ ಬಿದ್ದಿದೆ. 2024 ರ ಅದೇ ಅವಧಿಗೆ ಹೋಲಿಸಿದರೆ 2025 ರ ಮೊದಲ ಎಂಟು...

ಉತ್ತರಾಖಂಡ| ಪೌರಿಯಲ್ಲಿ ಅಂಬೇಡ್ಕರ್ ಪ್ರತಿಮೆ ವಿರೂಪ; ದೂರು ದಾಖಲು

ಉತ್ತರಾಖಂಡದ ಪೌರಿ ಜಿಲ್ಲೆಯಲ್ಲಿ ಬಾಬಾಸಾಹೇಬ್ ಡಾ.ಬಿ.ಆರ್. ಅಂಬೇಡ್ಕರ್ ಅವರ ಪ್ರತಿಮೆಯನ್ನು ವಿರೂಪಗೊಳಿಸಿದ ನಂತರ ಪ್ರಕರಣ ದಾಖಲಾಗಿದೆ ಎಂದು ಪೊಲೀಸರು (ಮಾ.22) ತಿಳಿಸಿದ್ದಾರೆ. ಮಾರ್ಚ್ 21 ರ ಶನಿವಾರ ಸಂಜೆ 4 ಗಂಟೆ ಸುಮಾರಿಗೆ ಅಲಕನಂದಾ...

ಅಸ್ಸಾಂ : ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದ ಸಚಿವೆ ನಂದಿತಾ ಗರ್ಲೋಸಾ

ಅಸ್ಸಾಂನ ಬಿಜೆಪಿ ಸರ್ಕಾರದಲ್ಲಿ ಸಚಿವೆಯಾಗಿದ್ದ ನಂದಿತಾ ಗರ್ಲೋಸಾ ಅವರು ಭಾನುವಾರ (ಮಾ.22) ಅಧಿಕೃತವಾಗಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡಿದ್ದಾರೆ. ವಿಧಾನಸಭೆ ಚುನಾವಣೆಗೆ ಟಿಕೆಟ್ ನಿರಾಕರಿಸಿದ ಹಿನ್ನೆಲೆ ನಂದಿತಾ ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದ್ದಾರೆ. ನಂದಿತಾ ಅವರು ಪ್ರತಿನಿಧಿಸುತ್ತಿದ್ದ...

ಉತ್ತರ ಪ್ರದೇಶ| ವಾಲ್ಮೀಕಿ ಸಮುದಾಯದ ವಿರುದ್ಧ ಹೇಳಿಕೆ; ಸೋಶಿಯಲ್ ಮೀಡಿಯಾ ಇನ್‌ಫ್ಲುಯೆನ್ಸರ್ ಬಂಧನ

ವಾಲ್ಮೀಕಿ ಸಮುದಾಯದ ವಿರುದ್ಧ ಸೋಶಿಯಲ್ ಮೀಡಿಯಾ ಇನ್‌ಫ್ಲುಯೆನ್ಸರ್ ನೀಡಿದ ಆಕ್ಷೇಪಾರ್ಹ ಹೇಳಿಕೆ ಆಕ್ರೋಶ ವ್ಯಕ್ತವಾಗಿದ್ದು, ಸಮುದಾಯದಿಂದ ಪ್ರತಿಭಟನೆ ಮತ್ತು ರಸ್ತೆ ತಡೆಗೆ ಕಾರಣವಾದ ನಂತರ ಆರೋಪಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ನೌಗವಾನ್ ಪಕ್ಡಿಯಾ...

ದೆಹಲಿ| ‘ಮುಸ್ಲಿಮರಿಗೆ ನನ್ನ ವಾಹನದಲ್ಲಿ ಪ್ರವೇಶವಿಲ್ಲ..’ ಎಂದು ಪ್ರಯಾಣ ನಿರಾಕರಿಸಿದ ರ‍್ಯಾಪಿಡೊ ಚಾಲಕ

ದೆಹಲಿಯ ರ‍್ಯಾಪಿಡೊ ಚಾಲಕನೊಬ್ಬ, ಪ್ರಯಾಣಿಕ ಮುಸ್ಲಿಂ ಎಂದು ಗೊತ್ತಾದ ಬಳಿಕ ಪ್ರಯಾಣಿಕನನ್ನು ಕರೆದುಕೊಂಡು ಹೋಗಲು ನಿರಾಕರಿಸಿದ್ದಾನೆ ಎಂದು ಆರೋಪಿಸಲಾಗಿದೆ. ಚಾಲಕನ ನಡೆಗೆ ಆನ್‌ಲೈನ್‌ನಲ್ಲಿ ಆಕ್ರೋಶ ವ್ಯಕ್ತವಾಗಿದೆ. ವರದಿಗಳ ಪ್ರಕಾರ, ದೃಢೀಕೃತ ಬುಕಿಂಗ್ ಹೊರತಾಗಿಯೂ ಚಾಲಕ...

ಪಶ್ಚಿಮ ಏಷ್ಯಾ ಸಂಘರ್ಷ: 48 ಗಂಟೆಗಳ ಹಾರ್ಮುಜ್ ಎಚ್ಚರಿಕೆ ನೀಡಿದ್ದ ಟ್ರಂಪ್ ಅವರನ್ನು ‘ಕೆಲಸದಿಂದ ತೆಗೆದುಹಾಕಲಾಗಿದೆ’ ಎಂದು ಅಣಕಿಸಿದ ಇರಾನ್

ಟೆಹ್ರಾನ್: ಮಧ್ಯಪ್ರಾಚ್ಯದಲ್ಲಿ ಹೆಚ್ಚುತ್ತಿರುವ ಉದ್ವಿಗ್ನತೆಯ ಮಧ್ಯೆ, ಇರಾನ್‌ನ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (ಐಆರ್‌ಜಿಸಿ) ಸೋಮವಾರ ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರನ್ನು "ನಿಮ್ಮನ್ನು ಕೆಲಸದಿಂದ ತೆಗೆದುಹಾಕಲಾಗಿದೆ" ಮತ್ತು "ನಿಮ್ಮ ದಯೆಯಿಂದ ಗಮನ...

ಅಮೆರಿಕದ ಯಾವುದೇ ದಾಳಿ ಎದುರಿಸಲು ನಾವು ಸಿದ್ದ : ಟ್ರಂಪ್ ಬೆದರಿಕೆ ಬೆನ್ನಲ್ಲೇ ಕ್ಯೂಬಾ ಹೇಳಿಕೆ

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಕೆರಿಬಿಯನ್ ದ್ವೀಪ ರಾಷ್ಟ್ರ ಕ್ಯೂಬಾವನ್ನು ವಶಪಡಿಸಿಕೊಳ್ಳುವುದಾಗಿ ಬೆದರಿಕೆ ಹಾಕಿದ್ದು, ಇದಕ್ಕೆ ಪ್ರತಿಕ್ರಿಯಿಸಿರುವ ಕ್ಯೂಬಾದ ಉಪ ವಿದೇಶಾಂಗ ಸಚಿವ ಕಾರ್ಲೋಸ್ ಫೆರ್ನಾಂಡಿಸ್ ಡಿ ಕೊಸ್ಸಿಯೊ, ಅಮೆರಿಕ ಯಾವುದೇ...