Homeಚಳವಳಿ’ಹೋರಾಟಕ್ಕಾಗಿ ಮತ್ತೆ ಬೀದಿಗೆ ಇಳಿಯಲಿದ್ದೇವೆ’: ಸುಪ್ರೀಂ ತೀರ್ಪಿಗೆ ಖಂಡನೆ

’ಹೋರಾಟಕ್ಕಾಗಿ ಮತ್ತೆ ಬೀದಿಗೆ ಇಳಿಯಲಿದ್ದೇವೆ’: ಸುಪ್ರೀಂ ತೀರ್ಪಿಗೆ ಖಂಡನೆ

- Advertisement -
- Advertisement -

ಸ್ವರಾಜ್ ಇಂಡಿಯಾ ಅಧ್ಯಕ್ಷ ಯೋಗೇಂದ್ರ ಯಾದವ್, ಸುಪ್ರೀಂಕೋರ್ಟ್ ವಕೀಲ ಪ್ರಶಾಂತ್‌ ಭೂಷಣ್ ಹಾಗೂ ಲೇಖಕಿ ಅರುಂಧತಿ ರಾಯ್ ಸೇರಿಂದತೆ ಹಲವಾರು ಸಾಮಾಜಿಕ ಹೋರಾಟಗಾರರು “ಹೋರಾಟಕ್ಕಾಗಿ ಮತ್ತೆ ಬೀದಿಗೆ ಇಳಿಯಲಿದ್ದೇವೆ” ಎಂದು ಘೋಷಿಸಿದರು.

ಪ್ರತಿಭಟನೆಗಾಗಿ ಸಾರ್ವಜನಿಕ ಪ್ರದೇಶವನ್ನು ಆಕ್ರಮಿಸಿಕೊಳ್ಳುವಂತಿಲ್ಲ ಹಾಗೂ ಪ್ರತಿಭಟನೆಯನ್ನು ನಿಯೋಜಿತ ಸ್ಥಳದಲ್ಲಿ ನಡೆಸಬೇಕು ಎಂದು ಈ ತಿಂಗಳ ಆರಂಭದಲ್ಲಿ ಸುಪ್ರೀಂಕೋರ್ಟ್ ನೀಡಿದ್ದ ತೀರ್ಪನ್ನು ”ಕನ್ಸರ್ನ್‌ಡ್ ಸಿಟಿಝನ್ಸ್ ಕಲೆಕ್ಟಿವ್” ನಾಗರಿಕರ ತಂಡ ಗುರುವಾರ ಹೊಸದಿಲ್ಲಿಯ ಪ್ರೆಸ್‌ಕ್ಲಬ್‌‌ ಆಫ್‌‌ ಇಂಡಿಯಾದಲ್ಲಿ ನಡೆಸಲಾಗಿದ್ದ ಚರ್ಚೆಯಲ್ಲಿ ಖಂಡಿಸಿದೆ.

ಇದನ್ನೂ ಓದಿ: ಶಾಹೀನ್ ಬಾಗ್: ನಿರ್ದಿಷ್ಟ ಸ್ಥಳಗಳಲ್ಲಿ ಮಾತ್ರ ಪ್ರತಿಭಟಿಸಬೇಕು ಎಂದ ಸುಪ್ರೀಂ

ಸಾಂಧರ್ಬಿಕ ಚಿತ್ರ

ತಂಡದಲ್ಲಿ ಸಫಾಯಿ ಕರ್ಮಚಾರಿ ಆಂದೋಲನದ ಸ್ಥಾಪಕ ಹಾಗೂ ಸಂಚಾಲಕ ಬೆಜವಾಡ ವಿಲ್ಸನ್, ಸಾಮಾಜಿಕ ಹೋರಾಟಗಾರ್ತಿ, ಜೆಎನ್‌ಯು ಪ್ರಾಧ್ಯಾಪಕಿ ನಿವೇದಿತಾ ಮೆನನ್, ಸುಪ್ರೀಂ ಕೋರ್ಟ್ ವಕೀಲ ಸಂಜಯ್ ಹೆಗ್ಡೆ, ನಾಗರಿಕ ಹಕ್ಕು ಸಂಘಟನೆ ಯುನೈಟೆಡ್ ಎಗೈನ್ಸ್‌ಟ್ ಹೇಟ್‌ನ ಸಹ ಸಂಸ್ಥಾಪಕ ನದೀಮ್ ಖಾನ್ ಮೊದಲಾದವರು ಇದ್ದರು.

“ಕಳೆದ ಕೆಲವು ವರ್ಷಗಳಿಂದ ಭಿನ್ನಾಭಿಪ್ರಾಯವನ್ನು ದಮನಗೊಳಿಸಲಾಗುತ್ತಿದೆ. ಆದರೆ ನನ್ನ ಭರವಸೆ, ನಮ್ಮ ಪೀಳಿಗೆಯವರು ಹೋರಾಡಿದರು, ಭವಿಷ್ಯದ ಪೀಳಿಗೆಗಳು ಸಹ ಇದನ್ನು ಅನುಸರಿಸುತ್ತವೆ ಎಂಬುದಾಗಿದೆ” ಎಂದು ಸಂಜಯ್ ಹೆಗ್ಡೆ ಹೇಳಿದರು.

ಇದನ್ನೂ ಓದಿ: ಶಾಹಿನ್ ಬಾಗ್‍ಗಳು ಬಂಧುತ್ವ ಬೆಸೆಯುತ್ತಿವೆ

ಲೇಖಕಿ ಅರುಂಧತಿ ರಾಯ್ ಮಾತನಾಡಿ, “ಜನರು ನಿರಂತರವಾಗಿ ದ್ವೇಷದಿಂದ ತುಂಬಿದ ವಾತಾವರಣದಲ್ಲಿ ವಾಸಿಸುವುದು ಅವಮಾನಕರವಾಗಿದೆ” ಎಂದರು.

ಸಾಂಧರ್ಬಿಕ ಚಿತ್ರ

ಜೆಎನ್‌ಯುನಲ್ಲಿ ನಜೀಬ್ ಅಹ್ಮದ್ ಅವರ ನಾಪತ್ತೆ ಪ್ರಕರಣದಲ್ಲಿ ಆರೋಪಿಗಳ ಮೊಬೈಲ್ ಪ್ಯಾಟರ್ನ್ ಲಾಕ್ ತೆರೆಯಲು ಸಾಧ್ಯವಾಗುತ್ತಿಲ್ಲ ಎಂದು ಹೇಳಿಕೊಂಡ ಅದೇ ಪೊಲೀಸರು ಈಗ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವ ನೂರಾರು ಸಾಮಾಜಿಕ ಕಾರ್ಯಕರ್ತರ ಫೋನ್‌ಗಳನ್ನು ಮುಟ್ಟುಗೋಲು ಹಾಕಿಕೊಳ್ಳುತ್ತಿದ್ದಾರೆ ಎಂದು ನದೀಂ ಖಾನ್ ಹೇಳಿದರು.

ಜನರು ಶಾಂತಿಯುತವಾಗಿ ನಡೆಸುತ್ತಿದ್ದ ಪ್ರತಿಭಟನೆಯನ್ನು ನಿಲ್ಲಿಸಲು ಪ್ರಯತ್ನಿಸಿದ ಪೊಲೀಸರು ಹಾಗೂ ಸರಕಾರದ ಕ್ರಮವನ್ನು ತಂಡವು ತೀವ್ರವಾಗಿ ಟೀಕಿಸಿತು.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್: ಪಾಕಿಸ್ತಾನದ ಪ್ರತಿಭಟನೆಯೊಂದರಲ್ಲಿ ಭಾರತದ ಬಾವುಟವನ್ನು ಬಳಸಲಾಗಿದೆಯೇ?

ಸಾಂಧರ್ಬಿಕ ಚಿತ್ರ

‘‘ಪ್ರಜಾಪ್ರಭುತ್ವ ಹಾಗೂ ಭಿನ್ನಾಭಿಪ್ರಾಯ ಜೊತೆ ಜೊತೆಯಲ್ಲಿ ಸಾಗಬೇಕು. ಆದರೆ, ಭಿನ್ನಾಭಿಪ್ರಾಯವನ್ನು ವ್ಯಕ್ತಪಡಿಸುವ ಪ್ರತಿಭಟನೆ ನಿಯೋಜಿತ ಪ್ರದೇಶದಲ್ಲಿ ಮಾತ್ರ ನಡೆಯಬೇಕು ಎಂದು ಸುಪ್ರೀಂ ಕೋರ್ಟ್ ಹೇಳಿದೆ. ಆದರೆ, ದಂಡಿ ಯಾತ್ರೆ ನಿಯೋಜಿತ ಪ್ರದೇಶದಲ್ಲಿ ನಡೆದಿದೆಯೇ ? ಜಲಿಯನ್ ವಾಲಾಬಾಗ್ ಪ್ರತಿಭಟನೆ ನಿಯೋಜಿತ ಪ್ರದೇಶದಲ್ಲಿ ನಡೆದಿದೆಯೇ ?’’ ಎಂದು ತಂಡ ಬಿಡುಗಡೆ ಮಾಡಿದ ಜಂಟಿ ಹೇಳಿಕೆ ತಿಳಿಸಿದೆ.

ಪ್ರತಿಭಟನೆ ಪ್ರಜಾಪ್ರಭುತ್ವದ ತಿರುಳು. ಈ ಮೂಲಭೂತ ಪ್ರಜಾಸತ್ತಾತ್ಮಕ ಹಕ್ಕನ್ನು ಅಪರಾಧೀಕರಣಗೊಳಿಸುವ ಮೂಲಕ ನಮ್ಮ ಹಕ್ಕನ್ನು ನಿಗ್ರಹಿಸುವ ಎಲ್ಲ ಪ್ರಯತ್ನದ ವಿರುದ್ಧ ನಾವು ಹೋರಾಟ ನಡೆಸಲಿದ್ದೇವೆ ಎಂದು ಘೋಷಿಸಿದ್ದಾರೆ.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್: ದೇಹಕ್ಕೆ ಕಬ್ಬಿಣದ ಮುಳ್ಳುತಂತಿ ಸುತ್ತಿಕೊಂಡು ಅತ್ಯಾಚಾರದ ವಿರುದ್ಧ ಪ್ರತಿಭಟನೆ?- ವಾಸ್ತವವೇನು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...