Homeಚಳವಳಿ’ಹೋರಾಟಕ್ಕಾಗಿ ಮತ್ತೆ ಬೀದಿಗೆ ಇಳಿಯಲಿದ್ದೇವೆ’: ಸುಪ್ರೀಂ ತೀರ್ಪಿಗೆ ಖಂಡನೆ

’ಹೋರಾಟಕ್ಕಾಗಿ ಮತ್ತೆ ಬೀದಿಗೆ ಇಳಿಯಲಿದ್ದೇವೆ’: ಸುಪ್ರೀಂ ತೀರ್ಪಿಗೆ ಖಂಡನೆ

- Advertisement -
- Advertisement -

ಸ್ವರಾಜ್ ಇಂಡಿಯಾ ಅಧ್ಯಕ್ಷ ಯೋಗೇಂದ್ರ ಯಾದವ್, ಸುಪ್ರೀಂಕೋರ್ಟ್ ವಕೀಲ ಪ್ರಶಾಂತ್‌ ಭೂಷಣ್ ಹಾಗೂ ಲೇಖಕಿ ಅರುಂಧತಿ ರಾಯ್ ಸೇರಿಂದತೆ ಹಲವಾರು ಸಾಮಾಜಿಕ ಹೋರಾಟಗಾರರು “ಹೋರಾಟಕ್ಕಾಗಿ ಮತ್ತೆ ಬೀದಿಗೆ ಇಳಿಯಲಿದ್ದೇವೆ” ಎಂದು ಘೋಷಿಸಿದರು.

ಪ್ರತಿಭಟನೆಗಾಗಿ ಸಾರ್ವಜನಿಕ ಪ್ರದೇಶವನ್ನು ಆಕ್ರಮಿಸಿಕೊಳ್ಳುವಂತಿಲ್ಲ ಹಾಗೂ ಪ್ರತಿಭಟನೆಯನ್ನು ನಿಯೋಜಿತ ಸ್ಥಳದಲ್ಲಿ ನಡೆಸಬೇಕು ಎಂದು ಈ ತಿಂಗಳ ಆರಂಭದಲ್ಲಿ ಸುಪ್ರೀಂಕೋರ್ಟ್ ನೀಡಿದ್ದ ತೀರ್ಪನ್ನು ”ಕನ್ಸರ್ನ್‌ಡ್ ಸಿಟಿಝನ್ಸ್ ಕಲೆಕ್ಟಿವ್” ನಾಗರಿಕರ ತಂಡ ಗುರುವಾರ ಹೊಸದಿಲ್ಲಿಯ ಪ್ರೆಸ್‌ಕ್ಲಬ್‌‌ ಆಫ್‌‌ ಇಂಡಿಯಾದಲ್ಲಿ ನಡೆಸಲಾಗಿದ್ದ ಚರ್ಚೆಯಲ್ಲಿ ಖಂಡಿಸಿದೆ.

ಇದನ್ನೂ ಓದಿ: ಶಾಹೀನ್ ಬಾಗ್: ನಿರ್ದಿಷ್ಟ ಸ್ಥಳಗಳಲ್ಲಿ ಮಾತ್ರ ಪ್ರತಿಭಟಿಸಬೇಕು ಎಂದ ಸುಪ್ರೀಂ

ಸಾಂಧರ್ಬಿಕ ಚಿತ್ರ

ತಂಡದಲ್ಲಿ ಸಫಾಯಿ ಕರ್ಮಚಾರಿ ಆಂದೋಲನದ ಸ್ಥಾಪಕ ಹಾಗೂ ಸಂಚಾಲಕ ಬೆಜವಾಡ ವಿಲ್ಸನ್, ಸಾಮಾಜಿಕ ಹೋರಾಟಗಾರ್ತಿ, ಜೆಎನ್‌ಯು ಪ್ರಾಧ್ಯಾಪಕಿ ನಿವೇದಿತಾ ಮೆನನ್, ಸುಪ್ರೀಂ ಕೋರ್ಟ್ ವಕೀಲ ಸಂಜಯ್ ಹೆಗ್ಡೆ, ನಾಗರಿಕ ಹಕ್ಕು ಸಂಘಟನೆ ಯುನೈಟೆಡ್ ಎಗೈನ್ಸ್‌ಟ್ ಹೇಟ್‌ನ ಸಹ ಸಂಸ್ಥಾಪಕ ನದೀಮ್ ಖಾನ್ ಮೊದಲಾದವರು ಇದ್ದರು.

“ಕಳೆದ ಕೆಲವು ವರ್ಷಗಳಿಂದ ಭಿನ್ನಾಭಿಪ್ರಾಯವನ್ನು ದಮನಗೊಳಿಸಲಾಗುತ್ತಿದೆ. ಆದರೆ ನನ್ನ ಭರವಸೆ, ನಮ್ಮ ಪೀಳಿಗೆಯವರು ಹೋರಾಡಿದರು, ಭವಿಷ್ಯದ ಪೀಳಿಗೆಗಳು ಸಹ ಇದನ್ನು ಅನುಸರಿಸುತ್ತವೆ ಎಂಬುದಾಗಿದೆ” ಎಂದು ಸಂಜಯ್ ಹೆಗ್ಡೆ ಹೇಳಿದರು.

ಇದನ್ನೂ ಓದಿ: ಶಾಹಿನ್ ಬಾಗ್‍ಗಳು ಬಂಧುತ್ವ ಬೆಸೆಯುತ್ತಿವೆ

ಲೇಖಕಿ ಅರುಂಧತಿ ರಾಯ್ ಮಾತನಾಡಿ, “ಜನರು ನಿರಂತರವಾಗಿ ದ್ವೇಷದಿಂದ ತುಂಬಿದ ವಾತಾವರಣದಲ್ಲಿ ವಾಸಿಸುವುದು ಅವಮಾನಕರವಾಗಿದೆ” ಎಂದರು.

ಸಾಂಧರ್ಬಿಕ ಚಿತ್ರ

ಜೆಎನ್‌ಯುನಲ್ಲಿ ನಜೀಬ್ ಅಹ್ಮದ್ ಅವರ ನಾಪತ್ತೆ ಪ್ರಕರಣದಲ್ಲಿ ಆರೋಪಿಗಳ ಮೊಬೈಲ್ ಪ್ಯಾಟರ್ನ್ ಲಾಕ್ ತೆರೆಯಲು ಸಾಧ್ಯವಾಗುತ್ತಿಲ್ಲ ಎಂದು ಹೇಳಿಕೊಂಡ ಅದೇ ಪೊಲೀಸರು ಈಗ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವ ನೂರಾರು ಸಾಮಾಜಿಕ ಕಾರ್ಯಕರ್ತರ ಫೋನ್‌ಗಳನ್ನು ಮುಟ್ಟುಗೋಲು ಹಾಕಿಕೊಳ್ಳುತ್ತಿದ್ದಾರೆ ಎಂದು ನದೀಂ ಖಾನ್ ಹೇಳಿದರು.

ಜನರು ಶಾಂತಿಯುತವಾಗಿ ನಡೆಸುತ್ತಿದ್ದ ಪ್ರತಿಭಟನೆಯನ್ನು ನಿಲ್ಲಿಸಲು ಪ್ರಯತ್ನಿಸಿದ ಪೊಲೀಸರು ಹಾಗೂ ಸರಕಾರದ ಕ್ರಮವನ್ನು ತಂಡವು ತೀವ್ರವಾಗಿ ಟೀಕಿಸಿತು.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್: ಪಾಕಿಸ್ತಾನದ ಪ್ರತಿಭಟನೆಯೊಂದರಲ್ಲಿ ಭಾರತದ ಬಾವುಟವನ್ನು ಬಳಸಲಾಗಿದೆಯೇ?

ಸಾಂಧರ್ಬಿಕ ಚಿತ್ರ

‘‘ಪ್ರಜಾಪ್ರಭುತ್ವ ಹಾಗೂ ಭಿನ್ನಾಭಿಪ್ರಾಯ ಜೊತೆ ಜೊತೆಯಲ್ಲಿ ಸಾಗಬೇಕು. ಆದರೆ, ಭಿನ್ನಾಭಿಪ್ರಾಯವನ್ನು ವ್ಯಕ್ತಪಡಿಸುವ ಪ್ರತಿಭಟನೆ ನಿಯೋಜಿತ ಪ್ರದೇಶದಲ್ಲಿ ಮಾತ್ರ ನಡೆಯಬೇಕು ಎಂದು ಸುಪ್ರೀಂ ಕೋರ್ಟ್ ಹೇಳಿದೆ. ಆದರೆ, ದಂಡಿ ಯಾತ್ರೆ ನಿಯೋಜಿತ ಪ್ರದೇಶದಲ್ಲಿ ನಡೆದಿದೆಯೇ ? ಜಲಿಯನ್ ವಾಲಾಬಾಗ್ ಪ್ರತಿಭಟನೆ ನಿಯೋಜಿತ ಪ್ರದೇಶದಲ್ಲಿ ನಡೆದಿದೆಯೇ ?’’ ಎಂದು ತಂಡ ಬಿಡುಗಡೆ ಮಾಡಿದ ಜಂಟಿ ಹೇಳಿಕೆ ತಿಳಿಸಿದೆ.

ಪ್ರತಿಭಟನೆ ಪ್ರಜಾಪ್ರಭುತ್ವದ ತಿರುಳು. ಈ ಮೂಲಭೂತ ಪ್ರಜಾಸತ್ತಾತ್ಮಕ ಹಕ್ಕನ್ನು ಅಪರಾಧೀಕರಣಗೊಳಿಸುವ ಮೂಲಕ ನಮ್ಮ ಹಕ್ಕನ್ನು ನಿಗ್ರಹಿಸುವ ಎಲ್ಲ ಪ್ರಯತ್ನದ ವಿರುದ್ಧ ನಾವು ಹೋರಾಟ ನಡೆಸಲಿದ್ದೇವೆ ಎಂದು ಘೋಷಿಸಿದ್ದಾರೆ.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್: ದೇಹಕ್ಕೆ ಕಬ್ಬಿಣದ ಮುಳ್ಳುತಂತಿ ಸುತ್ತಿಕೊಂಡು ಅತ್ಯಾಚಾರದ ವಿರುದ್ಧ ಪ್ರತಿಭಟನೆ?- ವಾಸ್ತವವೇನು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಜೆಪಿ ತೊರೆದು ಪ್ರಾದೇಶಿಕ ಪಕ್ಷದತ್ತ ಅಣ್ಣಾಮಲೈ : ದ್ರಾವಿಡ ಮಣ್ಣಿನಲ್ಲಿ ವಿಫಲವಾದ ಹಿಂದುತ್ವ ರಾಜಕೀಯ

ಮಾಜಿ ಐಪಿಎಸ್‌ ಅಧಿಕಾರಿ ಹಾಗೂ ಬಿಜೆಪಿ ತಮಿಳುನಾಡು ರಾಜ್ಯ ಘಟಕದ ಮಾಜಿ ಅಧ್ಯಕ್ಷ ಕೆ. ಅಣ್ಣಾಮಲೈ ಬಿಜೆಪಿ ತೊರೆದಿದ್ದು, ಹೊಸ ಪ್ರಾದೇಶಿಕ ಪಕ್ಷ ಕಟ್ಟಲು ಮುಂದಾಗಿದ್ದಾರೆ ಎಂದು ವರದಿಯಾಗಿದೆ. ಮಂಗಳವಾರ...

45 ಲೀಟರ್ ಟ್ಯಾಂಕಿಗೆ 52 ಲೀಟರ್ ಬಿಲ್ ಕೊಟ್ಟ ಚತುರ ಕಳ್ಳರು: ಕಾನ್ಪುರದಲ್ಲಿ ಪೆಟ್ರೋಲ್ ಬಂಕ್ ವಂಚನೆ ಪತ್ತೆ

ಉತ್ತರ ಪ್ರದೇಶದ ಕಾನ್ಪುರದಲ್ಲಿ ಹೊಸ ಕಾರು ಖರೀದಿಸಿದ ಮಾಲೀಕರೊಬ್ಬರು ಸ್ಥಳೀಯ ಪೆಟ್ರೋಲ್ ಬಂಕ್‌ಗೆ ಹೋದಾಗ ಅವರಿಗೆ ಒಂದು ಶಾಕಿಂಗ್ ಅನುಭವವಾಗಿದೆ. ಅವರ ಕಾರಿನ ಗರಿಷ್ಠ ಇಂಧನ ಟ್ಯಾಂಕ್ ಸಾಮರ್ಥ್ಯ ಕೇವಲ 45 ಲೀಟರ್...

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...