Homeಅಂಕಣಗಳುಇನ್ನಾದರು ಈ ಪ್ರಕೃತಿ ಸಂಪತ್ತುಗಳ ಲೂಟಿಗೆ ಕಡಿವಾಣ ಹಾಕಬೇಕು: ಎಚ್ ಎಸ್ ದೊರೆಸ್ವಾಮಿ

ಇನ್ನಾದರು ಈ ಪ್ರಕೃತಿ ಸಂಪತ್ತುಗಳ ಲೂಟಿಗೆ ಕಡಿವಾಣ ಹಾಕಬೇಕು: ಎಚ್ ಎಸ್ ದೊರೆಸ್ವಾಮಿ

- Advertisement -
- Advertisement -

ಗುಡ್ಡ ಕರಗಿಸುವವರ ಹಾವಳಿ ಕಳೆದ 40 ವರ್ಷಗಳಿಂದಲೂ ನಡೆಯುತ್ತಿದೆ. ಕಲ್ಲುಬಂಡೆ ಡಿ.ಕೆ. ಶಿವಕುಮಾರ್ ಅವರ ತಮ್ಮ ಎಂಪಿ. ಡಿ.ಕೆ. ಸುರೇಶ್, ಮಾಲೂರು ಶಾಸಕ ನಂಜೇಗೌಡ, ಮೇಲುಕೋಟೆ ಶಾಸಕ ಪುಟ್ಟರಾಜು, ಚಾಮರಾಜನಗರ ಶಾಸಕ ಪುಟ್ಟರಂಗಶೆಟ್ಟಿ ಅವರ ಮಗ, ಅರಸೀಕೆರೆ ಶಾಸಕ ಶಿವಲಿಂಗೇಗೌಡ, ಹುನಗುಂದ ಶಾಸಕ ದೊಡ್ಡನಗೌಡ ಪಾಟೀಲ, ಬೆಳಗಾವಿಯ ಶಾಸಕ ಸತೀಶ್ ಜಾರಕಿಹೊಳಿ, ಶಾಸಕ ಅಮರೇಗೌಡ, ಬೈಯ್ಯಾಪುರದಲ್ಲಿ ಅವರ ಅಣ್ಣನ ಮಗ ಶರಣಗೌಡ ಪಾಟೀಲ್, ಕೊಪ್ಪಳ ಸಂಸದ ಸಂಗಣ್ಣ ಕರಡಿ ಅವರ ಮಗ ಅಮರೇಶ್ ಕರಡಿ ಶಾಸಕ ಹಾಲಪ್ಪ ಆಚಾರ್, ರಾಘವೇಂದ್ರ ಹಿಟ್ನಾಳ್, ಮಾಜಿ ಸಚಿವ ಬಸವರಾಜ ರಾಯರೆಡ್ಡಿ ಕಲ್ಲು ಕರಗಿಸುವ ಗುತ್ತಿಗೆ ಪಡೆದಿದ್ದಾರೆ. ಇವರೆಲ್ಲಾ ಭೂ ವಿಜ್ಞಾನ ನಿರ್ದೇಶಕರಿಂದ ಪರವಾನಗಿ ಪಡೆದು ಗುಡ್ಡ ಕರಗಿಸುವವರು. ಅಕ್ರಮವಾಗಿ ಬೆಟ್ಟಗಳನ್ನು ಕರಗಿಸುವವರ ವಿರುದ್ಧ ನ್ಯಾಯಾಲಯಕ್ಕೆ 2015-2020ರವರೆಗೆ 9076 ಪ್ರಕರಣಗಳು ದಾಖಲಾಗಿವೆ.

ಶಿವಮೊಗ್ಗ ಜಿಲ್ಲೆಯಲ್ಲಿ ಕಲ್ಲು ತೆಗೆಯುತ್ತಿರುವ ಕ್ವಾರಿಗಳ ಸಂಖ್ಯೆ 150. ಅವುಗಳಲ್ಲಿ ಅಕ್ರಮವಾಗಿ ದೋಚುತ್ತಿರುವುದು 73 ಕ್ವಾರಿಗಳು. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 120 ಕ್ವಾರಿಗಳಲ್ಲಿ ಕಲ್ಲು ಗಣಿಗಾರಿಕೆ ನಡೆಯುತ್ತಿದೆ. ಸ್ಥಳೀಯ ರಾಜಕಾರಣಿಗಳಲ್ಲದೇ ಹೊರ ಜಿಲ್ಲೆಗಳ ರಾಜಕಾರಣಿಗಳು ಇದ್ದಾರೆ. ಅಕ್ರಮ ಗಣಿಗಾರಿಕೆ ತಡೆಗಟ್ಟುವೆನೆಂದು ಗಣಿ ಮಂತ್ರಿ ಗುಡುಗುತ್ತಾರೆ. ಬೇಲಿಯೇ ಎದ್ದು ಹೊಲ ಮೇಯುವಾಗ ಪುಂಡ ಹಸುಗಳು ಹೊಲಕ್ಕೆ ನುಗ್ಗದೇ ಇರುತ್ತವೆಯೇ? ಶಾಸಕರೇ ಭ್ರಷ್ಟರಾದ ಮೇಲೆ ಇನ್ನು ದುರುಳ ಕಲ್ಲು ಉದ್ಯಮಿಗಳ ಭ್ರಷ್ಟಾಚಾರವನ್ನು ತಡೆಗಟ್ಟುವವರು ಯಾರು?

ಯಡಿಯೂರಪ್ಪನವರಿಗೆ ತಮ್ಮ ಸುತ್ತ ಇರುವ ಭ್ರಷ್ಟರ ಮೇಲೆ ಕ್ರಮ ಕೈಗೊಳ್ಳಲು ಸಾಧ್ಯವೇ? ಆ ಜನರ ನೆರವಿನಿಂದ ಅವರ ಸಿಂಹಾಸನ ಉಳಿದಿದೆ. ಅವರನ್ನು ಎದುರುಹಾಕಿಕೊಂಡರೆ ಅವರಿಗೆ ಉಳಿಗಾಲವಿದೆಯೇ? ಮುಖ್ಯಮಂತ್ರಿ ಸ್ಥಾನದಲ್ಲಿ ಕೂರಲು ಬಿಡುತ್ತಾರಾ?

ಶಾಸಕರಿಗೂ, ಮಂತ್ರಿಗಳಿಗೂ, ಅಧಿಕಾರಿಗಳಿಗೂ ಒಂದು ಸಂದೇಶ ಕೊಡಲು ಬಯಸುತ್ತೇನೆ. ಗಾಂಧೀಜಿ ಎಚ್ಚರಿಸಿದಂತೆ ಪ್ರಕೃತಿ ಮಾನವನ ಆಸೆಯನ್ನು ಸಹಿಸಬಲ್ಲದು. ದುರಾಸೆಯನ್ನು ಸಹಿಸಲು ಸಾಧ್ಯವೇ? ನೀವೆಲ್ಲಾ ದುರಾಸೆಯನ್ನು ಸಹಿಸಿಕೊಂಡಿದ್ದೀರಿ. ಪ್ರಕೃತಿ ಬೆಟ್ಟ ಗುಡ್ಡಗಳನ್ನು ಸೃಷ್ಟಿ ಮಾಡಿದೆ. ಅರಣ್ಯ ಸೃಷ್ಟಿ ಮಾಡಿದೆ. ಖನಿಜಗಳನ್ನು ಭೂಗರ್ಭದಲ್ಲಿ ಅಡಗಿಸಿಟ್ಟಿದೆ. ಅದು ಮುಗಿದರೆ ಮತ್ತೆ ಉತ್ಪತ್ತಿಯಾಗದು. ಸಮುದ್ರದಲ್ಲಿ ಹವಳ ಮುಂತಾದ ಬೆಲೆಬಾಳುವ ಅಲಂಕಾರಿಕ ವಸ್ತುಗಳನ್ನು ತಯಾರಿಸುವ ಮುತ್ತು ರತ್ನಗಳನ್ನು ಹುದುಗಿಸಿಟ್ಟ ಪಶ್ಚಿಮ ಘಟ್ಟಗಳಂತಹ ಬೃಹದಾಕಾರದ ಅರಣ್ಯಗಳಿವೆ. ಕಪ್ಪತಗುಡ್ಡದಲ್ಲಿ ಬಂಗಾರ ಇದೆ ಎಂದು ಅದನ್ನು ಆಕ್ರಮಣ ಮಾಡಲು ಹೊಂಚುಹಾಕುತ್ತಿರುವ ಪಟ್ಟಭದ್ರರು ಇದ್ದಾರೆ.

PC : News Express

ಭಾರತದಲ್ಲಿ ದೊರೆಯುವ ಎಲ್ಲಾ ಖನಿಜಗಳನ್ನು ಬಗೆದು ದೋಚಬೇಕೆಂಬ, ಬೆಟ್ಟಗಳನ್ನೆಲ್ಲಾ ತಮ್ಮ ತಲೆಮಾರಿನಲ್ಲೇ ಕರಗಿಸಿ ತಮ್ಮ ತಿಜೋರಿ ತುಂಬಿಕೊಳ್ಳಲು, ಅರಣ್ಯವನ್ನೆಲ್ಲಾ ಕೊಳ್ಳೆ ಹೊಡೆದು ಬರಿದಾಗಿಸಬೇಕೆಂಬ ದುರಾತ್ಮರ ಮತ್ತು ಸಮುದ್ರದ ಆದಳದಲ್ಲಿರುವ ಪೆಟ್ರೋಲಿಯಂ, ಹವಳ ಮತ್ತು ಮುತ್ತುಗಳನ್ನು ದೋಚಬೇಕೆಂದಿರುವ ಕಾರ್ಪೋರೇಟ್ ಕುಳಗಳದ್ದು ಒಂದೇ ಸಂಕಲ್ಪ. ಅದೇನೆಂದರೆ ನಮ್ಮ ತಲೆಮಾರಿನಲ್ಲೇ ಈ ಎಲ್ಲವನ್ನೂ ದೋಚಿ ಮುಂದಿನ ತಲೆಮಾರಿಗೆ ಅವು ಯಾವುದೂ ಲಭ್ಯವಾಗದಂತೆ ಮಾಡುವ ಮ್ಯಾಡ್ ರೇಸ್‌ನಲ್ಲಿ ಮುಳುಗುವುದು. ಇವರಿಗೆಲ್ಲಾ ದುಡ್ಡೇ ಆರಾಧ್ಯ ದೈವ. ದುಡ್ಡಿಗಾಗಿ ಇವರು ಎಂತಹ ಪಾತಕ ಮಾಡಲು ಹೇಸುವವರಲ್ಲ.

ನಮ್ಮ ಸರ್ಕಾರಗಳು ಈ ದೋಚುವ ಜನರಿಗೆ ಪೂರ್ಣ ಸಹಕಾರ ಕೊಡುತ್ತದೆ. 32% ಅರಣ್ಯ ಇರಬೇಕೆಂಬ ಕಾಳಜಿ ಸರ್ಕಾರಕ್ಕಿಲ್ಲ. ಅದು ಈಗ 13% ಇಳಿದಿರಬಹುದು. ಆನೆ, ಹುಲಿ, ಕರಡಿ, ತೋಳಗಳಿಗೆ ಕಾಡು ಕಿರಿದಾಗುತ್ತಿರುವುದರಿಂದ ನೆಲೆತಪ್ಪಿ ಆಹಾರ, ನೀರು, ಅಭಾವ ಕಾಣಿಸಿರುವುದರಿಂದ ಅವು ಈಗ ಕಾಡು ಬಿಟ್ಟು ನಾಡಿಗೆ ಅಧಿಕ ಸಂಖ್ಯೆಯಲ್ಲಿ ವಲಸೆ ಬರುತ್ತಿವೆ. ನಾಡಿನಲ್ಲಿ ವಾಸಿಸುವ ಜನಕ್ಕೆ ನೆಮ್ಮದಿ ತಪ್ಪಿದೆ. ಕಾಡುಪ್ರಾಣಿಗಳ ಭಯ ಕಾಡುತ್ತಿದೆ. ಅರಣ್ಯವಾಸಿ ಹುಲಿ, ಚಿರತೆಗಳೊಡನೆ ಅನಿವಾರ್ಯವಾಗಿ ಸಹಬಾಳ್ವೆ ಮಾಡುವ ಅನಿವಾರ್ಯತೆ ಉಂಟಾಗಿದೆ. ಸರ್ಕಾರಕ್ಕೆ, ಖನಿಜ ಇಲಾಖೆಯ ಅಧಿಕಾರಿಗಳಿಗೆ ಚಿನ್ನವಾಗಲಿ, ಬೆಳ್ಳಿಯಾಗಲಿ, ತಾಮ್ರವಾಗಲಿ, ಕಬ್ಬಿಣವಾಗಲಿ, ಮ್ಯಾಂಗನೀಸ್ ಆಗಲಿ, ಬೆಟ್ಟದ ಕಲ್ಲುಗಳಾಗಲಿ ಅವು ಉತ್ಪತ್ತಿಯಾಗುವುದಕ್ಕೆ ನೂರರಿಂದ ಐನೂರು ವರ್ಷಗಳು ಬೇಕಾಗುತ್ತದೆ ಎಂಬ ಪರಿಜ್ಞಾನವಿಲ್ಲ.

ಈ ಖನಿಜಗಳು ಬರಿದಾಗುವುದಕ್ಕೆ ಬಿಡದೇ ನಮ್ಮ ತಲೆಮಾರಿನಲ್ಲಿ ಇಂತಿಷ್ಟು ಮಾತ್ರ ತೆಗೆಯಲು ಶಾಸನ ಮಾಡಬೇಕು. ಉಳಿದ ಖನಿಜಗಳನ್ನು ಮುಂದಿನ ತಲೆಮಾರಿನ ಜನರಿಗಾಗಿ ಮೀಸಲಿಡಬೇಕು. ಅದು ಸರ್ಕಾರದ ಧರ್ಮ.ಇನ್ನಾದರು ಈ ಪ್ರಕೃತಿ ಸಂಪತ್ತುಗಳ ಲೂಟಿಗೆ ಕಡಿವಾಣ ಹಾಕಬೇಕು. ನ್ಯಾಯದ ದೃಷ್ಟಿಯಿಂದ ನೋಡಿದರೆ ಈ ಎಲ್ಲಾ ಪ್ರಕೃತಿ ಸಂಪತ್ತನ್ನು ಸೃಷ್ಟಿಕರ್ತ ತಾನು ಸೃಷ್ಟಿಸಿದ ಎಲ್ಲಾ ಮನುಷ್ಯರಿಗೆ ದೊರೆಯುವಂತಾಗಲಿ ಎಂದು ಬಗೆದಿದ್ದ. ಅನೀತಿಯುತ ಸರ್ಕಾರಗಳು ದೋಚುವ ಮಹಾನುಭಾವರ ಪರವಾಗಿ ನಿಂತು, ಜನರಿಗೆ ಅವುಗಳು ದೊರೆಯದಂತೆ ವಂಚನೆ ಮಾಡುತ್ತಿವೆ. ಪ್ರಕೃತಿ ಸಂಪತ್ತು ಎಲ್ಲರಿಗೂ ಸುಲಭ ಬೆಲೆಯಲ್ಲಿ ದೊರೆಯುವಂತಾಗಬೇಕಾದರೆ ಪ್ರಕೃತಿ ನೀಡಿರುವ ಎಲ್ಲಾ ಸಂಪತ್ತನ್ನು ರಾಷ್ಟ್ರೀಕರಣ ಮಾಡಬೇಕು. ಸರ್ಕಾರ ಈಗಲಾದರೂ ಪ್ರಕೃತಿ ಸಂಪತ್ತಿಗೆ ಪ್ರಜೆಗಳು ಒಡೆಯರು ಎಂದು ಘೋಷಿಸಲಿ.


ಇದನ್ನೂ ಓದಿ: ನೂರರ ನೋಟ: ಕರ ನಿರಾಕರಣೆಯನ್ನು ನೆನಪಿಸಿದ ದೆಹಲಿ ರೈತ ಹೋರಾಟ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...