Homeಅಂಕಣಗಳುಇನ್ನಾದರು ಈ ಪ್ರಕೃತಿ ಸಂಪತ್ತುಗಳ ಲೂಟಿಗೆ ಕಡಿವಾಣ ಹಾಕಬೇಕು: ಎಚ್ ಎಸ್ ದೊರೆಸ್ವಾಮಿ

ಇನ್ನಾದರು ಈ ಪ್ರಕೃತಿ ಸಂಪತ್ತುಗಳ ಲೂಟಿಗೆ ಕಡಿವಾಣ ಹಾಕಬೇಕು: ಎಚ್ ಎಸ್ ದೊರೆಸ್ವಾಮಿ

- Advertisement -
- Advertisement -

ಗುಡ್ಡ ಕರಗಿಸುವವರ ಹಾವಳಿ ಕಳೆದ 40 ವರ್ಷಗಳಿಂದಲೂ ನಡೆಯುತ್ತಿದೆ. ಕಲ್ಲುಬಂಡೆ ಡಿ.ಕೆ. ಶಿವಕುಮಾರ್ ಅವರ ತಮ್ಮ ಎಂಪಿ. ಡಿ.ಕೆ. ಸುರೇಶ್, ಮಾಲೂರು ಶಾಸಕ ನಂಜೇಗೌಡ, ಮೇಲುಕೋಟೆ ಶಾಸಕ ಪುಟ್ಟರಾಜು, ಚಾಮರಾಜನಗರ ಶಾಸಕ ಪುಟ್ಟರಂಗಶೆಟ್ಟಿ ಅವರ ಮಗ, ಅರಸೀಕೆರೆ ಶಾಸಕ ಶಿವಲಿಂಗೇಗೌಡ, ಹುನಗುಂದ ಶಾಸಕ ದೊಡ್ಡನಗೌಡ ಪಾಟೀಲ, ಬೆಳಗಾವಿಯ ಶಾಸಕ ಸತೀಶ್ ಜಾರಕಿಹೊಳಿ, ಶಾಸಕ ಅಮರೇಗೌಡ, ಬೈಯ್ಯಾಪುರದಲ್ಲಿ ಅವರ ಅಣ್ಣನ ಮಗ ಶರಣಗೌಡ ಪಾಟೀಲ್, ಕೊಪ್ಪಳ ಸಂಸದ ಸಂಗಣ್ಣ ಕರಡಿ ಅವರ ಮಗ ಅಮರೇಶ್ ಕರಡಿ ಶಾಸಕ ಹಾಲಪ್ಪ ಆಚಾರ್, ರಾಘವೇಂದ್ರ ಹಿಟ್ನಾಳ್, ಮಾಜಿ ಸಚಿವ ಬಸವರಾಜ ರಾಯರೆಡ್ಡಿ ಕಲ್ಲು ಕರಗಿಸುವ ಗುತ್ತಿಗೆ ಪಡೆದಿದ್ದಾರೆ. ಇವರೆಲ್ಲಾ ಭೂ ವಿಜ್ಞಾನ ನಿರ್ದೇಶಕರಿಂದ ಪರವಾನಗಿ ಪಡೆದು ಗುಡ್ಡ ಕರಗಿಸುವವರು. ಅಕ್ರಮವಾಗಿ ಬೆಟ್ಟಗಳನ್ನು ಕರಗಿಸುವವರ ವಿರುದ್ಧ ನ್ಯಾಯಾಲಯಕ್ಕೆ 2015-2020ರವರೆಗೆ 9076 ಪ್ರಕರಣಗಳು ದಾಖಲಾಗಿವೆ.

ಶಿವಮೊಗ್ಗ ಜಿಲ್ಲೆಯಲ್ಲಿ ಕಲ್ಲು ತೆಗೆಯುತ್ತಿರುವ ಕ್ವಾರಿಗಳ ಸಂಖ್ಯೆ 150. ಅವುಗಳಲ್ಲಿ ಅಕ್ರಮವಾಗಿ ದೋಚುತ್ತಿರುವುದು 73 ಕ್ವಾರಿಗಳು. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 120 ಕ್ವಾರಿಗಳಲ್ಲಿ ಕಲ್ಲು ಗಣಿಗಾರಿಕೆ ನಡೆಯುತ್ತಿದೆ. ಸ್ಥಳೀಯ ರಾಜಕಾರಣಿಗಳಲ್ಲದೇ ಹೊರ ಜಿಲ್ಲೆಗಳ ರಾಜಕಾರಣಿಗಳು ಇದ್ದಾರೆ. ಅಕ್ರಮ ಗಣಿಗಾರಿಕೆ ತಡೆಗಟ್ಟುವೆನೆಂದು ಗಣಿ ಮಂತ್ರಿ ಗುಡುಗುತ್ತಾರೆ. ಬೇಲಿಯೇ ಎದ್ದು ಹೊಲ ಮೇಯುವಾಗ ಪುಂಡ ಹಸುಗಳು ಹೊಲಕ್ಕೆ ನುಗ್ಗದೇ ಇರುತ್ತವೆಯೇ? ಶಾಸಕರೇ ಭ್ರಷ್ಟರಾದ ಮೇಲೆ ಇನ್ನು ದುರುಳ ಕಲ್ಲು ಉದ್ಯಮಿಗಳ ಭ್ರಷ್ಟಾಚಾರವನ್ನು ತಡೆಗಟ್ಟುವವರು ಯಾರು?

ಯಡಿಯೂರಪ್ಪನವರಿಗೆ ತಮ್ಮ ಸುತ್ತ ಇರುವ ಭ್ರಷ್ಟರ ಮೇಲೆ ಕ್ರಮ ಕೈಗೊಳ್ಳಲು ಸಾಧ್ಯವೇ? ಆ ಜನರ ನೆರವಿನಿಂದ ಅವರ ಸಿಂಹಾಸನ ಉಳಿದಿದೆ. ಅವರನ್ನು ಎದುರುಹಾಕಿಕೊಂಡರೆ ಅವರಿಗೆ ಉಳಿಗಾಲವಿದೆಯೇ? ಮುಖ್ಯಮಂತ್ರಿ ಸ್ಥಾನದಲ್ಲಿ ಕೂರಲು ಬಿಡುತ್ತಾರಾ?

ಶಾಸಕರಿಗೂ, ಮಂತ್ರಿಗಳಿಗೂ, ಅಧಿಕಾರಿಗಳಿಗೂ ಒಂದು ಸಂದೇಶ ಕೊಡಲು ಬಯಸುತ್ತೇನೆ. ಗಾಂಧೀಜಿ ಎಚ್ಚರಿಸಿದಂತೆ ಪ್ರಕೃತಿ ಮಾನವನ ಆಸೆಯನ್ನು ಸಹಿಸಬಲ್ಲದು. ದುರಾಸೆಯನ್ನು ಸಹಿಸಲು ಸಾಧ್ಯವೇ? ನೀವೆಲ್ಲಾ ದುರಾಸೆಯನ್ನು ಸಹಿಸಿಕೊಂಡಿದ್ದೀರಿ. ಪ್ರಕೃತಿ ಬೆಟ್ಟ ಗುಡ್ಡಗಳನ್ನು ಸೃಷ್ಟಿ ಮಾಡಿದೆ. ಅರಣ್ಯ ಸೃಷ್ಟಿ ಮಾಡಿದೆ. ಖನಿಜಗಳನ್ನು ಭೂಗರ್ಭದಲ್ಲಿ ಅಡಗಿಸಿಟ್ಟಿದೆ. ಅದು ಮುಗಿದರೆ ಮತ್ತೆ ಉತ್ಪತ್ತಿಯಾಗದು. ಸಮುದ್ರದಲ್ಲಿ ಹವಳ ಮುಂತಾದ ಬೆಲೆಬಾಳುವ ಅಲಂಕಾರಿಕ ವಸ್ತುಗಳನ್ನು ತಯಾರಿಸುವ ಮುತ್ತು ರತ್ನಗಳನ್ನು ಹುದುಗಿಸಿಟ್ಟ ಪಶ್ಚಿಮ ಘಟ್ಟಗಳಂತಹ ಬೃಹದಾಕಾರದ ಅರಣ್ಯಗಳಿವೆ. ಕಪ್ಪತಗುಡ್ಡದಲ್ಲಿ ಬಂಗಾರ ಇದೆ ಎಂದು ಅದನ್ನು ಆಕ್ರಮಣ ಮಾಡಲು ಹೊಂಚುಹಾಕುತ್ತಿರುವ ಪಟ್ಟಭದ್ರರು ಇದ್ದಾರೆ.

PC : News Express

ಭಾರತದಲ್ಲಿ ದೊರೆಯುವ ಎಲ್ಲಾ ಖನಿಜಗಳನ್ನು ಬಗೆದು ದೋಚಬೇಕೆಂಬ, ಬೆಟ್ಟಗಳನ್ನೆಲ್ಲಾ ತಮ್ಮ ತಲೆಮಾರಿನಲ್ಲೇ ಕರಗಿಸಿ ತಮ್ಮ ತಿಜೋರಿ ತುಂಬಿಕೊಳ್ಳಲು, ಅರಣ್ಯವನ್ನೆಲ್ಲಾ ಕೊಳ್ಳೆ ಹೊಡೆದು ಬರಿದಾಗಿಸಬೇಕೆಂಬ ದುರಾತ್ಮರ ಮತ್ತು ಸಮುದ್ರದ ಆದಳದಲ್ಲಿರುವ ಪೆಟ್ರೋಲಿಯಂ, ಹವಳ ಮತ್ತು ಮುತ್ತುಗಳನ್ನು ದೋಚಬೇಕೆಂದಿರುವ ಕಾರ್ಪೋರೇಟ್ ಕುಳಗಳದ್ದು ಒಂದೇ ಸಂಕಲ್ಪ. ಅದೇನೆಂದರೆ ನಮ್ಮ ತಲೆಮಾರಿನಲ್ಲೇ ಈ ಎಲ್ಲವನ್ನೂ ದೋಚಿ ಮುಂದಿನ ತಲೆಮಾರಿಗೆ ಅವು ಯಾವುದೂ ಲಭ್ಯವಾಗದಂತೆ ಮಾಡುವ ಮ್ಯಾಡ್ ರೇಸ್‌ನಲ್ಲಿ ಮುಳುಗುವುದು. ಇವರಿಗೆಲ್ಲಾ ದುಡ್ಡೇ ಆರಾಧ್ಯ ದೈವ. ದುಡ್ಡಿಗಾಗಿ ಇವರು ಎಂತಹ ಪಾತಕ ಮಾಡಲು ಹೇಸುವವರಲ್ಲ.

ನಮ್ಮ ಸರ್ಕಾರಗಳು ಈ ದೋಚುವ ಜನರಿಗೆ ಪೂರ್ಣ ಸಹಕಾರ ಕೊಡುತ್ತದೆ. 32% ಅರಣ್ಯ ಇರಬೇಕೆಂಬ ಕಾಳಜಿ ಸರ್ಕಾರಕ್ಕಿಲ್ಲ. ಅದು ಈಗ 13% ಇಳಿದಿರಬಹುದು. ಆನೆ, ಹುಲಿ, ಕರಡಿ, ತೋಳಗಳಿಗೆ ಕಾಡು ಕಿರಿದಾಗುತ್ತಿರುವುದರಿಂದ ನೆಲೆತಪ್ಪಿ ಆಹಾರ, ನೀರು, ಅಭಾವ ಕಾಣಿಸಿರುವುದರಿಂದ ಅವು ಈಗ ಕಾಡು ಬಿಟ್ಟು ನಾಡಿಗೆ ಅಧಿಕ ಸಂಖ್ಯೆಯಲ್ಲಿ ವಲಸೆ ಬರುತ್ತಿವೆ. ನಾಡಿನಲ್ಲಿ ವಾಸಿಸುವ ಜನಕ್ಕೆ ನೆಮ್ಮದಿ ತಪ್ಪಿದೆ. ಕಾಡುಪ್ರಾಣಿಗಳ ಭಯ ಕಾಡುತ್ತಿದೆ. ಅರಣ್ಯವಾಸಿ ಹುಲಿ, ಚಿರತೆಗಳೊಡನೆ ಅನಿವಾರ್ಯವಾಗಿ ಸಹಬಾಳ್ವೆ ಮಾಡುವ ಅನಿವಾರ್ಯತೆ ಉಂಟಾಗಿದೆ. ಸರ್ಕಾರಕ್ಕೆ, ಖನಿಜ ಇಲಾಖೆಯ ಅಧಿಕಾರಿಗಳಿಗೆ ಚಿನ್ನವಾಗಲಿ, ಬೆಳ್ಳಿಯಾಗಲಿ, ತಾಮ್ರವಾಗಲಿ, ಕಬ್ಬಿಣವಾಗಲಿ, ಮ್ಯಾಂಗನೀಸ್ ಆಗಲಿ, ಬೆಟ್ಟದ ಕಲ್ಲುಗಳಾಗಲಿ ಅವು ಉತ್ಪತ್ತಿಯಾಗುವುದಕ್ಕೆ ನೂರರಿಂದ ಐನೂರು ವರ್ಷಗಳು ಬೇಕಾಗುತ್ತದೆ ಎಂಬ ಪರಿಜ್ಞಾನವಿಲ್ಲ.

ಈ ಖನಿಜಗಳು ಬರಿದಾಗುವುದಕ್ಕೆ ಬಿಡದೇ ನಮ್ಮ ತಲೆಮಾರಿನಲ್ಲಿ ಇಂತಿಷ್ಟು ಮಾತ್ರ ತೆಗೆಯಲು ಶಾಸನ ಮಾಡಬೇಕು. ಉಳಿದ ಖನಿಜಗಳನ್ನು ಮುಂದಿನ ತಲೆಮಾರಿನ ಜನರಿಗಾಗಿ ಮೀಸಲಿಡಬೇಕು. ಅದು ಸರ್ಕಾರದ ಧರ್ಮ.ಇನ್ನಾದರು ಈ ಪ್ರಕೃತಿ ಸಂಪತ್ತುಗಳ ಲೂಟಿಗೆ ಕಡಿವಾಣ ಹಾಕಬೇಕು. ನ್ಯಾಯದ ದೃಷ್ಟಿಯಿಂದ ನೋಡಿದರೆ ಈ ಎಲ್ಲಾ ಪ್ರಕೃತಿ ಸಂಪತ್ತನ್ನು ಸೃಷ್ಟಿಕರ್ತ ತಾನು ಸೃಷ್ಟಿಸಿದ ಎಲ್ಲಾ ಮನುಷ್ಯರಿಗೆ ದೊರೆಯುವಂತಾಗಲಿ ಎಂದು ಬಗೆದಿದ್ದ. ಅನೀತಿಯುತ ಸರ್ಕಾರಗಳು ದೋಚುವ ಮಹಾನುಭಾವರ ಪರವಾಗಿ ನಿಂತು, ಜನರಿಗೆ ಅವುಗಳು ದೊರೆಯದಂತೆ ವಂಚನೆ ಮಾಡುತ್ತಿವೆ. ಪ್ರಕೃತಿ ಸಂಪತ್ತು ಎಲ್ಲರಿಗೂ ಸುಲಭ ಬೆಲೆಯಲ್ಲಿ ದೊರೆಯುವಂತಾಗಬೇಕಾದರೆ ಪ್ರಕೃತಿ ನೀಡಿರುವ ಎಲ್ಲಾ ಸಂಪತ್ತನ್ನು ರಾಷ್ಟ್ರೀಕರಣ ಮಾಡಬೇಕು. ಸರ್ಕಾರ ಈಗಲಾದರೂ ಪ್ರಕೃತಿ ಸಂಪತ್ತಿಗೆ ಪ್ರಜೆಗಳು ಒಡೆಯರು ಎಂದು ಘೋಷಿಸಲಿ.


ಇದನ್ನೂ ಓದಿ: ನೂರರ ನೋಟ: ಕರ ನಿರಾಕರಣೆಯನ್ನು ನೆನಪಿಸಿದ ದೆಹಲಿ ರೈತ ಹೋರಾಟ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇರಾನ್ ಮೇಲೆ ದಾಳಿ : ಅಮೆರಿಕ ವಿಮಾನಗಳಿಗೆ ತನ್ನ ವಾಯುಪ್ರದೇಶ ಮುಚ್ಚಿದ ಸ್ಪೇನ್

ಇರಾನ್ ಮೇಲಿನ ದಾಳಿಗಳಲ್ಲಿ ಭಾಗಿಯಾಗಿರುವ ಅಮೆರಿಕದ ವಿಮಾನಗಳಿಗೆ ಸ್ಪೇನ್ ತನ್ನ ವಾಯುಪ್ರದೇಶವನ್ನು ನಿರ್ಬಂಧಿಸಿದೆ ಎಂದು ರಕ್ಷಣಾ ಸಚಿವೆ ಮಾರ್ಗರಿಟಾ ರೋಬಲ್ಸ್ (ಮಾ.30) ಸೋಮವಾರ ತಿಳಿಸಿದ್ದಾರೆ. ಜಂಟಿಯಾಗಿ ನಿರ್ವಹಿಸುವ ಸೇನಾ ನೆಲೆಗಳನ್ನು ಬಳಸಲು ಈ...

ಜನಗಣತಿ-2027 : ‘ಸ್ಥಿರ’ ಲಿವ್-ಇನ್ ಜೋಡಿಗೆ ವೈವಾಹಿಕ ಸ್ಥಾನಮಾನ

ತಮ್ಮ ಸಂಬಂಧ 'ಸ್ಥಿರ' ಎಂದು ಹೇಳಿಕೊಳ್ಳುವ ಲಿವ್-ಇನ್ ಜೋಡಿಗಳನ್ನು 2027ರ ಜನಗಣತಿಯಲ್ಲಿ ವಿವಾಹಿತ ದಂಪತಿಯೆಂದು ಪರಿಗಣಿಸಲಾಗುತ್ತದೆ ಎಂದು ವರದಿಯಾಗಿದೆ. ಜನಗಣತಿ ವೆಬ್‌ಸೈಟ್‌ನ FAQ (ಪದೇ ಪದೇ ಕೇಳಲಾಗುವ ಪ್ರಶ್ನೆಗಳು) ವಿಭಾಗದಲ್ಲಿ ಈ ಬಗ್ಗೆ ಸ್ಪಷ್ಟನೆ...

ಉನ್ನತ ಸಾಂಸ್ಥಿಕ ಹುದ್ದೆಗಳಲ್ಲಿ ‘ಬಹುಜನ’ ಪ್ರಾತಿನಿಧ್ಯದ ಕೊರತೆ: ವ್ಯವಸ್ಥಿತ ತಾರತಮ್ಯದ ರೂಪ ಎಂದ ರಾಹುಲ್ ಗಾಂಧಿ 

ಉನ್ನತ ಸಂಸ್ಥೆಗಳ ಹಿರಿಯ ನಾಯಕತ್ವದಲ್ಲಿ "ಬಹುಜನ" ಸಮುದಾಯಗಳಿಗೆ ಪ್ರಾತಿನಿಧ್ಯದ ಕೊರತೆಯಿದೆ ಎಂದು ರಾಹುಲ್ ಗಾಂಧಿ ಸೋಮವಾರ ಆರೋಪಿಸಿದ್ದಾರೆ. ಇದು ವ್ಯವಸ್ಥಿತ ತಾರತಮ್ಯದ ಒಂದು ರೂಪವಾಗಿದ್ದು ಅದನ್ನು ಪರಿಹರಿಸಬೇಕು ಎಂದು ಹೇಳಿದ್ದಾರೆ.  ಲೋಕಸಭೆಯ ವಿರೋಧ ಪಕ್ಷದ...

ಗಾಯಗಳ ತೀವ್ರತೆಯಿಂದಾಗಿ ನೌಕಾಪಡೆಯ ಮುಖ್ಯಸ್ಥ ತಂಗ್ಸಿರಿ ಸಾವನ್ನಪ್ಪಿದ್ದಾರೆ: ದೃಢಪಡಿಸಿದ ಇರಾನ್

ತಾನು ನಡೆಸಿದ ದಾಳಿಯಿಂದ ಇರಾನ್‌ ನೌಕಾಪಡೆಯ ರಿಯರ್ ಅಡ್ಮಿರಲ್ ಅಲಿರೆಜಾ ತಂಗ್ಸಿರಿ ಸಾವನ್ನಪ್ಪಿದ್ದಾರೆ ಎಂದು ಕಳೆದ ಗುರುವಾರ (ಮಾ.26) ಇಸ್ರೇಲ್ ಹೇಳಿಕೊಂಡಿತ್ತು. ಸುದ್ದಿ ಖಷಿತಪಡಿಸಿರುವ ಇರಾನ್, ದಾಳಿಯಿಂದ ಸಂಭವಿಸಿದ ತೀವ್ರ ಗಾಯಗಳಿಂದ ತಂಗ್ಸಿರಿ...

ಬಹುಭಾಷಾ ನಟ ಪ್ರಕಾಶ್ ರಾಜ್‌ ತಾಯಿ ಸ್ವರ್ಣಲತಾ ನಿಧನ

ಬಹುಭಾಷಾ ನಟ ಪ್ರಕಾಶ್ ರಾಜ್ ಅವರ ತಾಯಿ ಸ್ವರ್ಣಲತಾ ಅವರು ತಮ್ಮ 86 ನೇ ವಯಸ್ಸಿನಲ್ಲಿ ನಿಧನರಾಗಿದ್ದಾರೆ. ಅವರು ವಯೋಸಹಜ ಅನಾರೋಗ್ಯದಿಂದ ಸಾವನ್ನಪ್ಪಿದ್ದಾರೆ. ನಟ ಪ್ರಕಾಶ್‌ ರಾಜ್‌ ಅವರು ತಮ್ಮ ತಾಯಿಯೊಂದಿಗೆ ಇದ್ದ...

ಮುಂಬೈ: ಸ್ವ-ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ಆಕ್ರೋಶ: ದಾದರ್‌ನಲ್ಲಿ ಮೂಢನಂಬಿಕೆ ವಿರೋಧಿ ಅಭಿಯಾನ

ಮುಂಬೈ: ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ಅವರ ಚಟುವಟಿಕೆಗಳ ಸುತ್ತ ವ್ಯಾಪಕ ಆಕ್ರೋಶ ವ್ಯಕ್ತವಾಗಿರುವ ಹಿನ್ನೆಲೆಯಲ್ಲಿ, ವಿವೇಕ್ ಜಾಗರ್ ಉಪಕ್ರಮದಡಿಯಲ್ಲಿ ಮಹಾರಾಷ್ಟ್ರ ಅಂಧಾಶ್ರದ್ಧ ನಿರ್ಮೂಲನ ಸಮಿತಿ (MANS) ಮಹಾರಾಷ್ಟ್ರ ಘಟಕವು ಭಾನುವಾರ...

ನೋಟಿಸ್ ನೀಡದೆ ಮಸೀದಿ ಬಂದ್; ಉತ್ತರ ಪ್ರದೇಶ ಸರ್ಕಾರವನ್ನು ಪ್ರಶ್ನಿಸಿದ ಅಲಹಾಬಾದ್ ಹೈಕೋರ್ಟ್

ಪೂರ್ವ ಸೂಚನೆ ನೀಡದೆ ಅಥವಾ ಮಾಲೀಕರಿಗೆ ವಿಚಾರಣೆಗೆ ಅವಕಾಶ ನೀಡದೆ ಪ್ರಾರ್ಥನಾ ಸ್ಥಳಕ್ಕೆ ಬೀಗ ಹಾಕಬಹುದೇ ಎಂಬ ಬಗ್ಗೆ ವಿವರಣೆ ನೀಡಬೇಕು ಎಂದು ಅಲಹಾಬಾದ್ ಹೈಕೋರ್ಟ್ ಉತ್ತರ ಪ್ರದೇಶ ಸರ್ಕಾರವನ್ನು ಕೇಳಿದೆ. ಮುಜಫರ್‌ನಗರದಲ್ಲಿ ಮಸೀದಿಯನ್ನು...

ಬಿಜು ಪಟ್ನಾಯಕ್ ಕುರಿತು ಹೇಳಿಕೆ : ಬಿಜೆಪಿ ಸಂಸದ ನಿಶಿಕಾಂತ್ ದುಬೆ ವಿರುದ್ಧ ತೀವ್ರ ಆಕ್ರೋಶ

ಒಡಿಶಾದ ಮಾಜಿ ಮುಖ್ಯಮಂತ್ರಿ ಬಿಜು ಪಟ್ನಾಯಕ್ ಅವರ ಕುರಿತು ಬಿಜೆಪಿ ಸಂಸದ ನಿಶಿಕಾಂತ್ ದುಬೆ ನೀಡಿರುವ ಹೇಳಿಕೆಗೆ ತೀವ್ರ ಆಕ್ರೋಶ ವ್ಯಕ್ತವಾಗಿದೆ. ದುಬೆ ನೇತೃತ್ವದ ಸಂವಹನ ಮತ್ತು ಐಟಿ ಕುರಿತ ಸಂಸದೀಯ ಸ್ಥಾಯಿ...

ಮುರ್ಷಿದಾಬಾದ್ ರಾಮನವಮಿ ಹಿಂಸಾಚಾರ; ಆರ್‌ಎಸ್‌ಎಸ್ ನಾಯಕ ಸೇರಿದಂತೆ 30 ಜನರ ಬಂಧನ

ಮಾರ್ಚ್ 27 ರಂದು ಮುರ್ಷಿದಾಬಾದ್ ಜಿಲ್ಲೆಯ ಜಂಗಿಪುರ ಉಪವಿಭಾಗದ ರಘುನಾಥಗಂಜ್‌ನಲ್ಲಿ ನಡೆದ ರಾಮನವಮಿ ಮೆರವಣಿಗೆ ಹಿಂಸಾಚಾರಕ್ಕೆ ತಿರುಗಿದ ನಂತರ ಸುಮಾರು 30 ಜನರು ಗಾಯಗೊಂಡರು. ಈ ಘಟನೆಯು ವ್ಯಾಪಕ ಉದ್ವಿಗ್ನತೆಗೆ ಕಾರಣವಾಗಿದ್ದು, ಅಂಗಡಿ...

ದೆಹಲಿ ಗಲಭೆ ಪ್ರಕರಣ: ಮಧ್ಯಂತರ ಜಾಮೀನು ಅವಧಿ ಅಂತ್ಯ; ಇಂದು ತಿಹಾರ್ ಜೈಲಿಗೆ ಮರಳಲಿರುವ ಶಾರ್ಜೀಲ್ ಇಮಾಮ್

2020 ರ ಈಶಾನ್ಯ ದೆಹಲಿ ಗಲಭೆಯ ಹಿಂದಿನ ದೊಡ್ಡ ಪಿತೂರಿ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ನ್ಯಾಯಾಲಯವು ನೀಡಿದ್ದ 10 ದಿನಗಳ ಮಧ್ಯಂತರ ಜಾಮೀನು ಅವಧಿ ಮುಗಿದ ಹಿನ್ನೆಲೆಯಲ್ಲಿ ವಿದ್ಯಾರ್ಥಿ ಕಾರ್ಯಕರ್ತ ಶಾರ್ಜೀಲ್ ಇಮಾಮ್...