Homeಅಂಕಣಗಳುಇನ್ನಾದರು ಈ ಪ್ರಕೃತಿ ಸಂಪತ್ತುಗಳ ಲೂಟಿಗೆ ಕಡಿವಾಣ ಹಾಕಬೇಕು: ಎಚ್ ಎಸ್ ದೊರೆಸ್ವಾಮಿ

ಇನ್ನಾದರು ಈ ಪ್ರಕೃತಿ ಸಂಪತ್ತುಗಳ ಲೂಟಿಗೆ ಕಡಿವಾಣ ಹಾಕಬೇಕು: ಎಚ್ ಎಸ್ ದೊರೆಸ್ವಾಮಿ

- Advertisement -
- Advertisement -

ಗುಡ್ಡ ಕರಗಿಸುವವರ ಹಾವಳಿ ಕಳೆದ 40 ವರ್ಷಗಳಿಂದಲೂ ನಡೆಯುತ್ತಿದೆ. ಕಲ್ಲುಬಂಡೆ ಡಿ.ಕೆ. ಶಿವಕುಮಾರ್ ಅವರ ತಮ್ಮ ಎಂಪಿ. ಡಿ.ಕೆ. ಸುರೇಶ್, ಮಾಲೂರು ಶಾಸಕ ನಂಜೇಗೌಡ, ಮೇಲುಕೋಟೆ ಶಾಸಕ ಪುಟ್ಟರಾಜು, ಚಾಮರಾಜನಗರ ಶಾಸಕ ಪುಟ್ಟರಂಗಶೆಟ್ಟಿ ಅವರ ಮಗ, ಅರಸೀಕೆರೆ ಶಾಸಕ ಶಿವಲಿಂಗೇಗೌಡ, ಹುನಗುಂದ ಶಾಸಕ ದೊಡ್ಡನಗೌಡ ಪಾಟೀಲ, ಬೆಳಗಾವಿಯ ಶಾಸಕ ಸತೀಶ್ ಜಾರಕಿಹೊಳಿ, ಶಾಸಕ ಅಮರೇಗೌಡ, ಬೈಯ್ಯಾಪುರದಲ್ಲಿ ಅವರ ಅಣ್ಣನ ಮಗ ಶರಣಗೌಡ ಪಾಟೀಲ್, ಕೊಪ್ಪಳ ಸಂಸದ ಸಂಗಣ್ಣ ಕರಡಿ ಅವರ ಮಗ ಅಮರೇಶ್ ಕರಡಿ ಶಾಸಕ ಹಾಲಪ್ಪ ಆಚಾರ್, ರಾಘವೇಂದ್ರ ಹಿಟ್ನಾಳ್, ಮಾಜಿ ಸಚಿವ ಬಸವರಾಜ ರಾಯರೆಡ್ಡಿ ಕಲ್ಲು ಕರಗಿಸುವ ಗುತ್ತಿಗೆ ಪಡೆದಿದ್ದಾರೆ. ಇವರೆಲ್ಲಾ ಭೂ ವಿಜ್ಞಾನ ನಿರ್ದೇಶಕರಿಂದ ಪರವಾನಗಿ ಪಡೆದು ಗುಡ್ಡ ಕರಗಿಸುವವರು. ಅಕ್ರಮವಾಗಿ ಬೆಟ್ಟಗಳನ್ನು ಕರಗಿಸುವವರ ವಿರುದ್ಧ ನ್ಯಾಯಾಲಯಕ್ಕೆ 2015-2020ರವರೆಗೆ 9076 ಪ್ರಕರಣಗಳು ದಾಖಲಾಗಿವೆ.

ಶಿವಮೊಗ್ಗ ಜಿಲ್ಲೆಯಲ್ಲಿ ಕಲ್ಲು ತೆಗೆಯುತ್ತಿರುವ ಕ್ವಾರಿಗಳ ಸಂಖ್ಯೆ 150. ಅವುಗಳಲ್ಲಿ ಅಕ್ರಮವಾಗಿ ದೋಚುತ್ತಿರುವುದು 73 ಕ್ವಾರಿಗಳು. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 120 ಕ್ವಾರಿಗಳಲ್ಲಿ ಕಲ್ಲು ಗಣಿಗಾರಿಕೆ ನಡೆಯುತ್ತಿದೆ. ಸ್ಥಳೀಯ ರಾಜಕಾರಣಿಗಳಲ್ಲದೇ ಹೊರ ಜಿಲ್ಲೆಗಳ ರಾಜಕಾರಣಿಗಳು ಇದ್ದಾರೆ. ಅಕ್ರಮ ಗಣಿಗಾರಿಕೆ ತಡೆಗಟ್ಟುವೆನೆಂದು ಗಣಿ ಮಂತ್ರಿ ಗುಡುಗುತ್ತಾರೆ. ಬೇಲಿಯೇ ಎದ್ದು ಹೊಲ ಮೇಯುವಾಗ ಪುಂಡ ಹಸುಗಳು ಹೊಲಕ್ಕೆ ನುಗ್ಗದೇ ಇರುತ್ತವೆಯೇ? ಶಾಸಕರೇ ಭ್ರಷ್ಟರಾದ ಮೇಲೆ ಇನ್ನು ದುರುಳ ಕಲ್ಲು ಉದ್ಯಮಿಗಳ ಭ್ರಷ್ಟಾಚಾರವನ್ನು ತಡೆಗಟ್ಟುವವರು ಯಾರು?

ಯಡಿಯೂರಪ್ಪನವರಿಗೆ ತಮ್ಮ ಸುತ್ತ ಇರುವ ಭ್ರಷ್ಟರ ಮೇಲೆ ಕ್ರಮ ಕೈಗೊಳ್ಳಲು ಸಾಧ್ಯವೇ? ಆ ಜನರ ನೆರವಿನಿಂದ ಅವರ ಸಿಂಹಾಸನ ಉಳಿದಿದೆ. ಅವರನ್ನು ಎದುರುಹಾಕಿಕೊಂಡರೆ ಅವರಿಗೆ ಉಳಿಗಾಲವಿದೆಯೇ? ಮುಖ್ಯಮಂತ್ರಿ ಸ್ಥಾನದಲ್ಲಿ ಕೂರಲು ಬಿಡುತ್ತಾರಾ?

ಶಾಸಕರಿಗೂ, ಮಂತ್ರಿಗಳಿಗೂ, ಅಧಿಕಾರಿಗಳಿಗೂ ಒಂದು ಸಂದೇಶ ಕೊಡಲು ಬಯಸುತ್ತೇನೆ. ಗಾಂಧೀಜಿ ಎಚ್ಚರಿಸಿದಂತೆ ಪ್ರಕೃತಿ ಮಾನವನ ಆಸೆಯನ್ನು ಸಹಿಸಬಲ್ಲದು. ದುರಾಸೆಯನ್ನು ಸಹಿಸಲು ಸಾಧ್ಯವೇ? ನೀವೆಲ್ಲಾ ದುರಾಸೆಯನ್ನು ಸಹಿಸಿಕೊಂಡಿದ್ದೀರಿ. ಪ್ರಕೃತಿ ಬೆಟ್ಟ ಗುಡ್ಡಗಳನ್ನು ಸೃಷ್ಟಿ ಮಾಡಿದೆ. ಅರಣ್ಯ ಸೃಷ್ಟಿ ಮಾಡಿದೆ. ಖನಿಜಗಳನ್ನು ಭೂಗರ್ಭದಲ್ಲಿ ಅಡಗಿಸಿಟ್ಟಿದೆ. ಅದು ಮುಗಿದರೆ ಮತ್ತೆ ಉತ್ಪತ್ತಿಯಾಗದು. ಸಮುದ್ರದಲ್ಲಿ ಹವಳ ಮುಂತಾದ ಬೆಲೆಬಾಳುವ ಅಲಂಕಾರಿಕ ವಸ್ತುಗಳನ್ನು ತಯಾರಿಸುವ ಮುತ್ತು ರತ್ನಗಳನ್ನು ಹುದುಗಿಸಿಟ್ಟ ಪಶ್ಚಿಮ ಘಟ್ಟಗಳಂತಹ ಬೃಹದಾಕಾರದ ಅರಣ್ಯಗಳಿವೆ. ಕಪ್ಪತಗುಡ್ಡದಲ್ಲಿ ಬಂಗಾರ ಇದೆ ಎಂದು ಅದನ್ನು ಆಕ್ರಮಣ ಮಾಡಲು ಹೊಂಚುಹಾಕುತ್ತಿರುವ ಪಟ್ಟಭದ್ರರು ಇದ್ದಾರೆ.

PC : News Express

ಭಾರತದಲ್ಲಿ ದೊರೆಯುವ ಎಲ್ಲಾ ಖನಿಜಗಳನ್ನು ಬಗೆದು ದೋಚಬೇಕೆಂಬ, ಬೆಟ್ಟಗಳನ್ನೆಲ್ಲಾ ತಮ್ಮ ತಲೆಮಾರಿನಲ್ಲೇ ಕರಗಿಸಿ ತಮ್ಮ ತಿಜೋರಿ ತುಂಬಿಕೊಳ್ಳಲು, ಅರಣ್ಯವನ್ನೆಲ್ಲಾ ಕೊಳ್ಳೆ ಹೊಡೆದು ಬರಿದಾಗಿಸಬೇಕೆಂಬ ದುರಾತ್ಮರ ಮತ್ತು ಸಮುದ್ರದ ಆದಳದಲ್ಲಿರುವ ಪೆಟ್ರೋಲಿಯಂ, ಹವಳ ಮತ್ತು ಮುತ್ತುಗಳನ್ನು ದೋಚಬೇಕೆಂದಿರುವ ಕಾರ್ಪೋರೇಟ್ ಕುಳಗಳದ್ದು ಒಂದೇ ಸಂಕಲ್ಪ. ಅದೇನೆಂದರೆ ನಮ್ಮ ತಲೆಮಾರಿನಲ್ಲೇ ಈ ಎಲ್ಲವನ್ನೂ ದೋಚಿ ಮುಂದಿನ ತಲೆಮಾರಿಗೆ ಅವು ಯಾವುದೂ ಲಭ್ಯವಾಗದಂತೆ ಮಾಡುವ ಮ್ಯಾಡ್ ರೇಸ್‌ನಲ್ಲಿ ಮುಳುಗುವುದು. ಇವರಿಗೆಲ್ಲಾ ದುಡ್ಡೇ ಆರಾಧ್ಯ ದೈವ. ದುಡ್ಡಿಗಾಗಿ ಇವರು ಎಂತಹ ಪಾತಕ ಮಾಡಲು ಹೇಸುವವರಲ್ಲ.

ನಮ್ಮ ಸರ್ಕಾರಗಳು ಈ ದೋಚುವ ಜನರಿಗೆ ಪೂರ್ಣ ಸಹಕಾರ ಕೊಡುತ್ತದೆ. 32% ಅರಣ್ಯ ಇರಬೇಕೆಂಬ ಕಾಳಜಿ ಸರ್ಕಾರಕ್ಕಿಲ್ಲ. ಅದು ಈಗ 13% ಇಳಿದಿರಬಹುದು. ಆನೆ, ಹುಲಿ, ಕರಡಿ, ತೋಳಗಳಿಗೆ ಕಾಡು ಕಿರಿದಾಗುತ್ತಿರುವುದರಿಂದ ನೆಲೆತಪ್ಪಿ ಆಹಾರ, ನೀರು, ಅಭಾವ ಕಾಣಿಸಿರುವುದರಿಂದ ಅವು ಈಗ ಕಾಡು ಬಿಟ್ಟು ನಾಡಿಗೆ ಅಧಿಕ ಸಂಖ್ಯೆಯಲ್ಲಿ ವಲಸೆ ಬರುತ್ತಿವೆ. ನಾಡಿನಲ್ಲಿ ವಾಸಿಸುವ ಜನಕ್ಕೆ ನೆಮ್ಮದಿ ತಪ್ಪಿದೆ. ಕಾಡುಪ್ರಾಣಿಗಳ ಭಯ ಕಾಡುತ್ತಿದೆ. ಅರಣ್ಯವಾಸಿ ಹುಲಿ, ಚಿರತೆಗಳೊಡನೆ ಅನಿವಾರ್ಯವಾಗಿ ಸಹಬಾಳ್ವೆ ಮಾಡುವ ಅನಿವಾರ್ಯತೆ ಉಂಟಾಗಿದೆ. ಸರ್ಕಾರಕ್ಕೆ, ಖನಿಜ ಇಲಾಖೆಯ ಅಧಿಕಾರಿಗಳಿಗೆ ಚಿನ್ನವಾಗಲಿ, ಬೆಳ್ಳಿಯಾಗಲಿ, ತಾಮ್ರವಾಗಲಿ, ಕಬ್ಬಿಣವಾಗಲಿ, ಮ್ಯಾಂಗನೀಸ್ ಆಗಲಿ, ಬೆಟ್ಟದ ಕಲ್ಲುಗಳಾಗಲಿ ಅವು ಉತ್ಪತ್ತಿಯಾಗುವುದಕ್ಕೆ ನೂರರಿಂದ ಐನೂರು ವರ್ಷಗಳು ಬೇಕಾಗುತ್ತದೆ ಎಂಬ ಪರಿಜ್ಞಾನವಿಲ್ಲ.

ಈ ಖನಿಜಗಳು ಬರಿದಾಗುವುದಕ್ಕೆ ಬಿಡದೇ ನಮ್ಮ ತಲೆಮಾರಿನಲ್ಲಿ ಇಂತಿಷ್ಟು ಮಾತ್ರ ತೆಗೆಯಲು ಶಾಸನ ಮಾಡಬೇಕು. ಉಳಿದ ಖನಿಜಗಳನ್ನು ಮುಂದಿನ ತಲೆಮಾರಿನ ಜನರಿಗಾಗಿ ಮೀಸಲಿಡಬೇಕು. ಅದು ಸರ್ಕಾರದ ಧರ್ಮ.ಇನ್ನಾದರು ಈ ಪ್ರಕೃತಿ ಸಂಪತ್ತುಗಳ ಲೂಟಿಗೆ ಕಡಿವಾಣ ಹಾಕಬೇಕು. ನ್ಯಾಯದ ದೃಷ್ಟಿಯಿಂದ ನೋಡಿದರೆ ಈ ಎಲ್ಲಾ ಪ್ರಕೃತಿ ಸಂಪತ್ತನ್ನು ಸೃಷ್ಟಿಕರ್ತ ತಾನು ಸೃಷ್ಟಿಸಿದ ಎಲ್ಲಾ ಮನುಷ್ಯರಿಗೆ ದೊರೆಯುವಂತಾಗಲಿ ಎಂದು ಬಗೆದಿದ್ದ. ಅನೀತಿಯುತ ಸರ್ಕಾರಗಳು ದೋಚುವ ಮಹಾನುಭಾವರ ಪರವಾಗಿ ನಿಂತು, ಜನರಿಗೆ ಅವುಗಳು ದೊರೆಯದಂತೆ ವಂಚನೆ ಮಾಡುತ್ತಿವೆ. ಪ್ರಕೃತಿ ಸಂಪತ್ತು ಎಲ್ಲರಿಗೂ ಸುಲಭ ಬೆಲೆಯಲ್ಲಿ ದೊರೆಯುವಂತಾಗಬೇಕಾದರೆ ಪ್ರಕೃತಿ ನೀಡಿರುವ ಎಲ್ಲಾ ಸಂಪತ್ತನ್ನು ರಾಷ್ಟ್ರೀಕರಣ ಮಾಡಬೇಕು. ಸರ್ಕಾರ ಈಗಲಾದರೂ ಪ್ರಕೃತಿ ಸಂಪತ್ತಿಗೆ ಪ್ರಜೆಗಳು ಒಡೆಯರು ಎಂದು ಘೋಷಿಸಲಿ.


ಇದನ್ನೂ ಓದಿ: ನೂರರ ನೋಟ: ಕರ ನಿರಾಕರಣೆಯನ್ನು ನೆನಪಿಸಿದ ದೆಹಲಿ ರೈತ ಹೋರಾಟ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹಿರಿಯ ಕಾರ್ಮಿಕ ಮುಖಂಡ ಅನಂತ ಸುಬ್ಬರಾವ್ ನಿಧನ

ಕಳೆದ ನಾಲ್ಕು ದಶಕಗಳಿಂದ ಸಾರಿಗೆ ಕ್ಷೇತ್ರದ ಕಾರ್ಮಿಕರ ಪರವಾಗಿ ಧ್ವನಿ ಎತ್ತುತ್ತಿದ್ದ, ಕಾರ್ಮಿಕರ ಹಿತರಕ್ಷಣೆಗಾಗಿ ನಿರಂತರ ಹೋರಾಟ ನಡೆಸುತ್ತಿದ್ದ ಹಿರಿಯ ಕಾರ್ಮಿಕ ಮುಖಂಡ ಎಚ್‌.ವಿ ಅನಂತ ಸುಬ್ಬರಾವ್ ಅವರು ಜನವರಿ 28ರಂದು, ನಿಧನರಾಗಿದ್ದಾರೆ....

ಮುಡಾ ಪ್ರಕರಣ: ಸಿದ್ದರಾಮಯ್ಯಗೆ ಬಿಗ್ ರಿಲೀಫ್, ಲೋಕಾಯುಕ್ತ ಬಿ ರಿಪೋರ್ಟ್ ಪುರಸ್ಕರಿಸಿದ ಕೋರ್ಟ್

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಪೊಲೀಸರು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಅವರ ಕುಟುಂಬದ ವಿರುದ್ಧ ಪುರಾವೆಗಳಿಲ್ಲ ಎಂದು ಹೇಳಿ ‘ಕ್ಲೀನ್ ಚೀಟ್’ ನೀಡಿ ‘ಬಿ’ ರಿಪೋರ್ಟ್ ಅನ್ನು ಸಲ್ಲಿಸಿತ್ತು....

ಪಿಟಿಸಿಎಲ್‌ ಕಾಯ್ದೆ ತಿದ್ದುಪಡಿ- ಕೋರ್ಟ್‌ಗಳಲ್ಲಿ ದಲಿತರಿಗೆ ಆಗುತ್ತಿರುವ ಅನ್ಯಾಯ ಖಂಡಿಸಿ ರಾಜ್ಯದಾದ್ಯಂತ ಪ್ರತಿಭಟನೆ

ಪಿಟಿಸಿಎಲ್‌ ಕಾಯ್ದೆ, 1978ರ 2023ರ ತಿದ್ದುಪಡಿ ಕಾಯ್ದೆಯ ವಿರೋಧಿಸಿ ಹಾಗೂ ಕಂದಾಯ ಇಲಾಖೆಯ ಎಸಿ, ಡಿಸಿ ನ್ಯಾಯಾಲಯಗಳು ಹಾಗೂ ಹೈಕೋರ್ಟ್, ಸುಪ್ರೀಂ ಕೋರ್ಟ್‌ಗಳಲ್ಲಿ ಆಗುತ್ತಿರುವ ಅನ್ಯಾಯವನ್ನು ಖಂಡಿಸಿ ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ...

ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಉಚ್ಚಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಮ್‌ಕೂಟತಿಲ್‌ಗೆ ಜಾಮೀನು

ಪತ್ತನಂತಿಟ್ಟ: ಈ ತಿಂಗಳ ಆರಂಭದಲ್ಲಿ ಬಂಧಿಸಲ್ಪಟ್ಟ ಮೂರನೇ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಉಚ್ಚಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಮ್‌ಕೂಟತಿಲ್ ಅವರಿಗೆ ಕೇರಳ ನ್ಯಾಯಾಲಯ ಬುಧವಾರ ಜಾಮೀನು ನೀಡಿದೆ. ಶಾಸಕರು ಸಲ್ಲಿಸಿದ್ದ ಮೇಲ್ಮನವಿಯನ್ನು ಪರಿಗಣಿಸಿದ್ದ ಪತ್ತನಂತಿಟ್ಟ...

ವಿಮಾನ ಅಪಘಾತದಲ್ಲಿ ಅಜಿತ್ ಪವಾರ್ ಸಾವು : ಪಿತೂರಿ ಶಂಕೆ ವ್ಯಕ್ತಪಡಿಸಿದ ಮಮತಾ ಬ್ಯಾನರ್ಜಿ, ಉನ್ನತ ಮಟ್ಟದ ತನಿಖೆಗೆ ಒತ್ತಾಯಿಸಿದ ರಾಜಕೀಯ ನಾಯಕರು

ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಅವರ ಸಾವಿಗೆ ಕಾರಣವಾದ ಬಾರಾಮತಿ ವಿಮಾನ ಪತನದ ಕುರಿತು ಸುಪ್ರೀಂ ಕೋರ್ಟ್ ಮೇಲ್ವಿಚಾರಣೆಯಲ್ಲಿ ತನಿಖೆ ನಡೆಸಬೇಕೆಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬುಧವಾರ (ಜ.28) ಒತ್ತಾಯಿಸಿದ್ದಾರೆ....

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯ ತಡೆಯಲು ಯುಜಿಸಿ ಹೊಸ ನಿಯಮ; ಮುಂದುವರೆದ ಪ್ರಬಲಜಾತಿ ಗುಂಪಿನ ವಿರೋಧ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ಪರಿಹರಿಸುವ ಗುರಿಯನ್ನು ಹೊಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಯುಜಿಸಿ) ಪರಿಷ್ಕೃತ ನಿಯಮಗಳ ಕುರಿತು ದೇಶದಲ್ಲಿ ಭಾರಿ ರಾಜಕೀಯ ವಾಗ್ವಾದ ಭುಗಿಲೆದ್ದಿದೆ. ಹೊಸ ಮಾರ್ಗಸೂಚಿಗಳ ಕುರಿತು...

ಜನಸೇನಾ ಶಾಸಕನಿಂದ ಅತ್ಯಾಚಾರ, ಬಲವಂತದ ಗರ್ಭಪಾತ : ಮಹಿಳೆ ಆರೋಪ

ಆಂಧ್ರ ಪ್ರದೇಶದ ರೈಲ್ವೆ ಕೊಡೂರು ವಿಧಾನಸಭಾ ಕ್ಷೇತ್ರದ ಜನ ಸೇನಾ ಶಾಸಕ ಮತ್ತು ಸರ್ಕಾರಿ ಸಚೇತಕ ಅರವ ಶ್ರೀಧರ್ ವಿರುದ್ಧ ಮಹಿಳೆಯೊಬ್ಬರು ಅತ್ಯಾಚಾರ ಮತ್ತು ಬಲವಂತದ ಗರ್ಭಪಾತ ಆರೋಪ ಮಾಡಿದ್ದಾರೆ. ಈ ಕುರಿತು ವಿಡಿಯೋ...

ಬಾರಾಮತಿ ವಿಮಾನ ಅಪಘಾತದಲ್ಲಿ ಅಜಿತ್ ಪವಾರ್ ನಿಧನ; ಸಂತಾಪ ಸೂಚಿಸಿದ ಪ್ರಮುಖರು

ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಮತ್ತು ಇತರ ಐವರು ಜನರು ಪ್ರಯಾಣಿಸುತ್ತಿದ್ದ ವಿಮಾನ ಬುಧವಾರ ಬೆಳಿಗ್ಗೆ ಪುಣೆ ಜಿಲ್ಲೆಯಲ್ಲಿ ಪತನಗೊಂಡು ಸಾವನ್ನಪ್ಪಿದ್ದಾರೆ. ಎನ್‌ಸಿಪಿ ನಾಯಕರಾದ ಅಜಿತ್ ಪವಾರ್ (66) ಮತ್ತು ಇತರರನ್ನು ಹೊತ್ತೊಯ್ಯುತ್ತಿದ್ದ...

ಗುರುಗ್ರಾಮ ಮತ್ತು ಚಂಡೀಗಢದ ಶಾಲೆಗಳಲ್ಲಿ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ: ವಿದ್ಯಾರ್ಥಿಗಳ ಸ್ಥಳಾಂತರ

ಗುರುಗ್ರಾಮ್‌ನ ಕನಿಷ್ಠ ಆರು ಖಾಸಗಿ ಶಾಲೆಗಳಿಗೆ ಬುಧವಾರ ಬೆಳಿಗ್ಗೆ ಬಾಂಬ್ ಬೆದರಿಕೆ ಇಮೇಲ್‌ಗಳು ಬಂದಿದ್ದು, ದೊಡ್ಡ ಪ್ರಮಾಣದ ಸ್ಥಳಾಂತರ ಮತ್ತು ಭದ್ರತಾ ತಪಾಸಣೆಗಳನ್ನು ನಡೆಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.  ಬೆಳಿಗ್ಗೆ 7:10 ರ ಸುಮಾರಿಗೆ...

ಜಿಲ್ಲಾ ಸಹಕಾರಿ ಬ್ಯಾಂಕ್‌ನಿಂದ ಮಹಾರಾಷ್ಟ್ರ ಡಿಸಿಎಂ ಆಗುವವರೆಗೆ: ಅಜಿತ್ ಪವಾರ್ ರಾಜಕೀಯ ಹೆಜ್ಜೆಗಳು

ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಬುಧವಾರ ಬಾರಾಮತಿಯಲ್ಲಿ ಲ್ಯಾಂಡ್‌ ಆಗಲು ಪ್ರಯತ್ನಿಸುವಾಗ ಅವರು ಪ್ರಯಾಣಿಸುತ್ತಿದ್ದ ವಿಮಾನ ಅಪಘಾತಕ್ಕೀಡಾಗಿ ನಿಧನರಾದರು. ಈ ಅಪಘಾತ ಮೂಲಕ, ಮಹಾರಾಷ್ಟ್ರದ ಅತ್ಯಂತ ಪ್ರಭಾವಶಾಲಿ ಮತ್ತು ಶಾಶ್ವತ ರಾಜಕೀಯ ವ್ಯಕ್ತಿಗಳಲ್ಲಿ...