Homeಅಂಕಣಗಳುಇನ್ನಾದರು ಈ ಪ್ರಕೃತಿ ಸಂಪತ್ತುಗಳ ಲೂಟಿಗೆ ಕಡಿವಾಣ ಹಾಕಬೇಕು: ಎಚ್ ಎಸ್ ದೊರೆಸ್ವಾಮಿ

ಇನ್ನಾದರು ಈ ಪ್ರಕೃತಿ ಸಂಪತ್ತುಗಳ ಲೂಟಿಗೆ ಕಡಿವಾಣ ಹಾಕಬೇಕು: ಎಚ್ ಎಸ್ ದೊರೆಸ್ವಾಮಿ

- Advertisement -
- Advertisement -

ಗುಡ್ಡ ಕರಗಿಸುವವರ ಹಾವಳಿ ಕಳೆದ 40 ವರ್ಷಗಳಿಂದಲೂ ನಡೆಯುತ್ತಿದೆ. ಕಲ್ಲುಬಂಡೆ ಡಿ.ಕೆ. ಶಿವಕುಮಾರ್ ಅವರ ತಮ್ಮ ಎಂಪಿ. ಡಿ.ಕೆ. ಸುರೇಶ್, ಮಾಲೂರು ಶಾಸಕ ನಂಜೇಗೌಡ, ಮೇಲುಕೋಟೆ ಶಾಸಕ ಪುಟ್ಟರಾಜು, ಚಾಮರಾಜನಗರ ಶಾಸಕ ಪುಟ್ಟರಂಗಶೆಟ್ಟಿ ಅವರ ಮಗ, ಅರಸೀಕೆರೆ ಶಾಸಕ ಶಿವಲಿಂಗೇಗೌಡ, ಹುನಗುಂದ ಶಾಸಕ ದೊಡ್ಡನಗೌಡ ಪಾಟೀಲ, ಬೆಳಗಾವಿಯ ಶಾಸಕ ಸತೀಶ್ ಜಾರಕಿಹೊಳಿ, ಶಾಸಕ ಅಮರೇಗೌಡ, ಬೈಯ್ಯಾಪುರದಲ್ಲಿ ಅವರ ಅಣ್ಣನ ಮಗ ಶರಣಗೌಡ ಪಾಟೀಲ್, ಕೊಪ್ಪಳ ಸಂಸದ ಸಂಗಣ್ಣ ಕರಡಿ ಅವರ ಮಗ ಅಮರೇಶ್ ಕರಡಿ ಶಾಸಕ ಹಾಲಪ್ಪ ಆಚಾರ್, ರಾಘವೇಂದ್ರ ಹಿಟ್ನಾಳ್, ಮಾಜಿ ಸಚಿವ ಬಸವರಾಜ ರಾಯರೆಡ್ಡಿ ಕಲ್ಲು ಕರಗಿಸುವ ಗುತ್ತಿಗೆ ಪಡೆದಿದ್ದಾರೆ. ಇವರೆಲ್ಲಾ ಭೂ ವಿಜ್ಞಾನ ನಿರ್ದೇಶಕರಿಂದ ಪರವಾನಗಿ ಪಡೆದು ಗುಡ್ಡ ಕರಗಿಸುವವರು. ಅಕ್ರಮವಾಗಿ ಬೆಟ್ಟಗಳನ್ನು ಕರಗಿಸುವವರ ವಿರುದ್ಧ ನ್ಯಾಯಾಲಯಕ್ಕೆ 2015-2020ರವರೆಗೆ 9076 ಪ್ರಕರಣಗಳು ದಾಖಲಾಗಿವೆ.

ಶಿವಮೊಗ್ಗ ಜಿಲ್ಲೆಯಲ್ಲಿ ಕಲ್ಲು ತೆಗೆಯುತ್ತಿರುವ ಕ್ವಾರಿಗಳ ಸಂಖ್ಯೆ 150. ಅವುಗಳಲ್ಲಿ ಅಕ್ರಮವಾಗಿ ದೋಚುತ್ತಿರುವುದು 73 ಕ್ವಾರಿಗಳು. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 120 ಕ್ವಾರಿಗಳಲ್ಲಿ ಕಲ್ಲು ಗಣಿಗಾರಿಕೆ ನಡೆಯುತ್ತಿದೆ. ಸ್ಥಳೀಯ ರಾಜಕಾರಣಿಗಳಲ್ಲದೇ ಹೊರ ಜಿಲ್ಲೆಗಳ ರಾಜಕಾರಣಿಗಳು ಇದ್ದಾರೆ. ಅಕ್ರಮ ಗಣಿಗಾರಿಕೆ ತಡೆಗಟ್ಟುವೆನೆಂದು ಗಣಿ ಮಂತ್ರಿ ಗುಡುಗುತ್ತಾರೆ. ಬೇಲಿಯೇ ಎದ್ದು ಹೊಲ ಮೇಯುವಾಗ ಪುಂಡ ಹಸುಗಳು ಹೊಲಕ್ಕೆ ನುಗ್ಗದೇ ಇರುತ್ತವೆಯೇ? ಶಾಸಕರೇ ಭ್ರಷ್ಟರಾದ ಮೇಲೆ ಇನ್ನು ದುರುಳ ಕಲ್ಲು ಉದ್ಯಮಿಗಳ ಭ್ರಷ್ಟಾಚಾರವನ್ನು ತಡೆಗಟ್ಟುವವರು ಯಾರು?

ಯಡಿಯೂರಪ್ಪನವರಿಗೆ ತಮ್ಮ ಸುತ್ತ ಇರುವ ಭ್ರಷ್ಟರ ಮೇಲೆ ಕ್ರಮ ಕೈಗೊಳ್ಳಲು ಸಾಧ್ಯವೇ? ಆ ಜನರ ನೆರವಿನಿಂದ ಅವರ ಸಿಂಹಾಸನ ಉಳಿದಿದೆ. ಅವರನ್ನು ಎದುರುಹಾಕಿಕೊಂಡರೆ ಅವರಿಗೆ ಉಳಿಗಾಲವಿದೆಯೇ? ಮುಖ್ಯಮಂತ್ರಿ ಸ್ಥಾನದಲ್ಲಿ ಕೂರಲು ಬಿಡುತ್ತಾರಾ?

ಶಾಸಕರಿಗೂ, ಮಂತ್ರಿಗಳಿಗೂ, ಅಧಿಕಾರಿಗಳಿಗೂ ಒಂದು ಸಂದೇಶ ಕೊಡಲು ಬಯಸುತ್ತೇನೆ. ಗಾಂಧೀಜಿ ಎಚ್ಚರಿಸಿದಂತೆ ಪ್ರಕೃತಿ ಮಾನವನ ಆಸೆಯನ್ನು ಸಹಿಸಬಲ್ಲದು. ದುರಾಸೆಯನ್ನು ಸಹಿಸಲು ಸಾಧ್ಯವೇ? ನೀವೆಲ್ಲಾ ದುರಾಸೆಯನ್ನು ಸಹಿಸಿಕೊಂಡಿದ್ದೀರಿ. ಪ್ರಕೃತಿ ಬೆಟ್ಟ ಗುಡ್ಡಗಳನ್ನು ಸೃಷ್ಟಿ ಮಾಡಿದೆ. ಅರಣ್ಯ ಸೃಷ್ಟಿ ಮಾಡಿದೆ. ಖನಿಜಗಳನ್ನು ಭೂಗರ್ಭದಲ್ಲಿ ಅಡಗಿಸಿಟ್ಟಿದೆ. ಅದು ಮುಗಿದರೆ ಮತ್ತೆ ಉತ್ಪತ್ತಿಯಾಗದು. ಸಮುದ್ರದಲ್ಲಿ ಹವಳ ಮುಂತಾದ ಬೆಲೆಬಾಳುವ ಅಲಂಕಾರಿಕ ವಸ್ತುಗಳನ್ನು ತಯಾರಿಸುವ ಮುತ್ತು ರತ್ನಗಳನ್ನು ಹುದುಗಿಸಿಟ್ಟ ಪಶ್ಚಿಮ ಘಟ್ಟಗಳಂತಹ ಬೃಹದಾಕಾರದ ಅರಣ್ಯಗಳಿವೆ. ಕಪ್ಪತಗುಡ್ಡದಲ್ಲಿ ಬಂಗಾರ ಇದೆ ಎಂದು ಅದನ್ನು ಆಕ್ರಮಣ ಮಾಡಲು ಹೊಂಚುಹಾಕುತ್ತಿರುವ ಪಟ್ಟಭದ್ರರು ಇದ್ದಾರೆ.

PC : News Express

ಭಾರತದಲ್ಲಿ ದೊರೆಯುವ ಎಲ್ಲಾ ಖನಿಜಗಳನ್ನು ಬಗೆದು ದೋಚಬೇಕೆಂಬ, ಬೆಟ್ಟಗಳನ್ನೆಲ್ಲಾ ತಮ್ಮ ತಲೆಮಾರಿನಲ್ಲೇ ಕರಗಿಸಿ ತಮ್ಮ ತಿಜೋರಿ ತುಂಬಿಕೊಳ್ಳಲು, ಅರಣ್ಯವನ್ನೆಲ್ಲಾ ಕೊಳ್ಳೆ ಹೊಡೆದು ಬರಿದಾಗಿಸಬೇಕೆಂಬ ದುರಾತ್ಮರ ಮತ್ತು ಸಮುದ್ರದ ಆದಳದಲ್ಲಿರುವ ಪೆಟ್ರೋಲಿಯಂ, ಹವಳ ಮತ್ತು ಮುತ್ತುಗಳನ್ನು ದೋಚಬೇಕೆಂದಿರುವ ಕಾರ್ಪೋರೇಟ್ ಕುಳಗಳದ್ದು ಒಂದೇ ಸಂಕಲ್ಪ. ಅದೇನೆಂದರೆ ನಮ್ಮ ತಲೆಮಾರಿನಲ್ಲೇ ಈ ಎಲ್ಲವನ್ನೂ ದೋಚಿ ಮುಂದಿನ ತಲೆಮಾರಿಗೆ ಅವು ಯಾವುದೂ ಲಭ್ಯವಾಗದಂತೆ ಮಾಡುವ ಮ್ಯಾಡ್ ರೇಸ್‌ನಲ್ಲಿ ಮುಳುಗುವುದು. ಇವರಿಗೆಲ್ಲಾ ದುಡ್ಡೇ ಆರಾಧ್ಯ ದೈವ. ದುಡ್ಡಿಗಾಗಿ ಇವರು ಎಂತಹ ಪಾತಕ ಮಾಡಲು ಹೇಸುವವರಲ್ಲ.

ನಮ್ಮ ಸರ್ಕಾರಗಳು ಈ ದೋಚುವ ಜನರಿಗೆ ಪೂರ್ಣ ಸಹಕಾರ ಕೊಡುತ್ತದೆ. 32% ಅರಣ್ಯ ಇರಬೇಕೆಂಬ ಕಾಳಜಿ ಸರ್ಕಾರಕ್ಕಿಲ್ಲ. ಅದು ಈಗ 13% ಇಳಿದಿರಬಹುದು. ಆನೆ, ಹುಲಿ, ಕರಡಿ, ತೋಳಗಳಿಗೆ ಕಾಡು ಕಿರಿದಾಗುತ್ತಿರುವುದರಿಂದ ನೆಲೆತಪ್ಪಿ ಆಹಾರ, ನೀರು, ಅಭಾವ ಕಾಣಿಸಿರುವುದರಿಂದ ಅವು ಈಗ ಕಾಡು ಬಿಟ್ಟು ನಾಡಿಗೆ ಅಧಿಕ ಸಂಖ್ಯೆಯಲ್ಲಿ ವಲಸೆ ಬರುತ್ತಿವೆ. ನಾಡಿನಲ್ಲಿ ವಾಸಿಸುವ ಜನಕ್ಕೆ ನೆಮ್ಮದಿ ತಪ್ಪಿದೆ. ಕಾಡುಪ್ರಾಣಿಗಳ ಭಯ ಕಾಡುತ್ತಿದೆ. ಅರಣ್ಯವಾಸಿ ಹುಲಿ, ಚಿರತೆಗಳೊಡನೆ ಅನಿವಾರ್ಯವಾಗಿ ಸಹಬಾಳ್ವೆ ಮಾಡುವ ಅನಿವಾರ್ಯತೆ ಉಂಟಾಗಿದೆ. ಸರ್ಕಾರಕ್ಕೆ, ಖನಿಜ ಇಲಾಖೆಯ ಅಧಿಕಾರಿಗಳಿಗೆ ಚಿನ್ನವಾಗಲಿ, ಬೆಳ್ಳಿಯಾಗಲಿ, ತಾಮ್ರವಾಗಲಿ, ಕಬ್ಬಿಣವಾಗಲಿ, ಮ್ಯಾಂಗನೀಸ್ ಆಗಲಿ, ಬೆಟ್ಟದ ಕಲ್ಲುಗಳಾಗಲಿ ಅವು ಉತ್ಪತ್ತಿಯಾಗುವುದಕ್ಕೆ ನೂರರಿಂದ ಐನೂರು ವರ್ಷಗಳು ಬೇಕಾಗುತ್ತದೆ ಎಂಬ ಪರಿಜ್ಞಾನವಿಲ್ಲ.

ಈ ಖನಿಜಗಳು ಬರಿದಾಗುವುದಕ್ಕೆ ಬಿಡದೇ ನಮ್ಮ ತಲೆಮಾರಿನಲ್ಲಿ ಇಂತಿಷ್ಟು ಮಾತ್ರ ತೆಗೆಯಲು ಶಾಸನ ಮಾಡಬೇಕು. ಉಳಿದ ಖನಿಜಗಳನ್ನು ಮುಂದಿನ ತಲೆಮಾರಿನ ಜನರಿಗಾಗಿ ಮೀಸಲಿಡಬೇಕು. ಅದು ಸರ್ಕಾರದ ಧರ್ಮ.ಇನ್ನಾದರು ಈ ಪ್ರಕೃತಿ ಸಂಪತ್ತುಗಳ ಲೂಟಿಗೆ ಕಡಿವಾಣ ಹಾಕಬೇಕು. ನ್ಯಾಯದ ದೃಷ್ಟಿಯಿಂದ ನೋಡಿದರೆ ಈ ಎಲ್ಲಾ ಪ್ರಕೃತಿ ಸಂಪತ್ತನ್ನು ಸೃಷ್ಟಿಕರ್ತ ತಾನು ಸೃಷ್ಟಿಸಿದ ಎಲ್ಲಾ ಮನುಷ್ಯರಿಗೆ ದೊರೆಯುವಂತಾಗಲಿ ಎಂದು ಬಗೆದಿದ್ದ. ಅನೀತಿಯುತ ಸರ್ಕಾರಗಳು ದೋಚುವ ಮಹಾನುಭಾವರ ಪರವಾಗಿ ನಿಂತು, ಜನರಿಗೆ ಅವುಗಳು ದೊರೆಯದಂತೆ ವಂಚನೆ ಮಾಡುತ್ತಿವೆ. ಪ್ರಕೃತಿ ಸಂಪತ್ತು ಎಲ್ಲರಿಗೂ ಸುಲಭ ಬೆಲೆಯಲ್ಲಿ ದೊರೆಯುವಂತಾಗಬೇಕಾದರೆ ಪ್ರಕೃತಿ ನೀಡಿರುವ ಎಲ್ಲಾ ಸಂಪತ್ತನ್ನು ರಾಷ್ಟ್ರೀಕರಣ ಮಾಡಬೇಕು. ಸರ್ಕಾರ ಈಗಲಾದರೂ ಪ್ರಕೃತಿ ಸಂಪತ್ತಿಗೆ ಪ್ರಜೆಗಳು ಒಡೆಯರು ಎಂದು ಘೋಷಿಸಲಿ.


ಇದನ್ನೂ ಓದಿ: ನೂರರ ನೋಟ: ಕರ ನಿರಾಕರಣೆಯನ್ನು ನೆನಪಿಸಿದ ದೆಹಲಿ ರೈತ ಹೋರಾಟ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿ ಗಲಭೆ ಪ್ರಕರಣ : ಶಾರ್ಜೀಲ್ ಇಮಾಮ್‌ಗೆ 10 ದಿನಗಳ ಮಧ್ಯಂತರ ಜಾಮೀನು

ದೆಹಲಿ ಗಲಭೆ ಪ್ರಕರಣದಲ್ಲಿ ಬಂಧಿತರಾಗಿರುವ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ (ಜೆಎನ್‌ಯು) ಸಂಶೋಧನಾ ವಿದ್ಯಾರ್ಥಿ ಶಾರ್ಜೀಲ್ ಇಮಾಮ್ ಅವರಿಗೆ ನ್ಯಾಯಾಲಯ ಸೋಮವಾರ (ಮಾ.9) 10 ದಿನಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ. ತನ್ನ ಸಹೋದರನ...

‘ಬಲಾಢ್ಯರ ಓಲೈಕೆಗಾಗಿ ಸಾಮಾಜಿಕ ನ್ಯಾಯದ ಸಮಾಧಿ..’; ಬಜೆಟ್‌ನಲ್ಲಿ ಅಲೆಮಾರಿ ಸಮುದಾಯಗಳಿಗೆ ಅನ್ಯಾಯ

'ಬಲಾಢ್ಯರ ಓಲೈಕೆಗಾಗಿ ಸಾಮಾಜಿಕ ನ್ಯಾಯದ ಸಮಾಧಿ ಮಾಡಲಾಗಿದೆ; ಬಜೆಟ್‌ನಲ್ಲಿ ಅಲೆಮಾರಿ ಸಮುದಾಯಗಳಿಗೆ ಅನ್ಯಾಯ ಮಾಡಲಾಗಿದೆ ಎಂದು 'ಕರ್ನಾಟಕ ಅಸ್ಪೃಶ್ಯ ಅಲೆಮಾರಿ ಸಮುದಾಯಗಳ ಮಹಾಒಕ್ಕೂಟ' ಸಿದ್ದರಾಮಯ್ಯ ಅವರ ಬಜೆಟ್‌ ಕುರಿತು ಅಸಮಾಧಾನ ಹೊರಹಾಕಿದೆ. ಈ ಕುರಿತು...

ಒಳಮೀಸಲಾತಿ ಇಲ್ಲದೇ ಉದ್ಯೋಗ ಭರ್ತಿಗೆ ವಿರೋಧ; ಕಾಂಗ್ರೆಸ್ ಸರ್ಕಾರದ ವಿರುದ್ಧ ಬೃಹತ್ ಪ್ರತಿಭಟನೆ

ಒಳಮೀಸಲಾತಿ ಇಲ್ಲದೇ 56 ಸಾವಿರ ಉದ್ಯೋಗ ಭರ್ತಿಗೆ ಮುಂದಾಗಿರುವ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಒಳಮೀಸಲಾತಿ ಹೋರಾಟಗಾರರು ವಿರೋಧ ವ್ಯಕ್ತಪಡಿಸಿದ್ದು, ಇದೇ ತಿಂಗಳ 12 ರಂದು ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆಗೆ ಕರೆ ಕೊಟ್ಟಿದ್ದಾರೆ. ಈ...

ನಾಸಿರ್–ಜುನೈದ್ ಕೊಲೆ ಪ್ರಕರಣ: ಜಾಮೀನಿನ ಮೇಲೆ ಹೊರಬಂದ ಹಿಂದುತ್ವ ಕಾರ್ಯಕರ್ತ ಮೋನು ಮಾನೇಸರ್ ಗೆ ಗುರುಗ್ರಾಮದಲ್ಲಿ ಭವ್ಯ ಸ್ವಾಗತ 

2023 ರಲ್ಲಿ ಹರಿಯಾಣದಲ್ಲಿ ಗೋರಕ್ಷಣೆ ಹೆಸರಿನಲ್ಲಿ ಇಬ್ಬರು ಮುಸ್ಲಿಂ ಪುರುಷರ ಹತ್ಯೆ ಪ್ರಕರಣದ ಆರೋಪಿಯಾಗಿರುವ ಹಿಂದುತ್ವ ಕಾರ್ಯಕರ್ತ ಮೋನು ಮಾನೇಸರ್ ಅವರಿಗೆ ರಾಜಸ್ಥಾನ ಹೈಕೋರ್ಟ್ ಜಾಮೀನು ನೀಡಿದ ನಂತರ ಶನಿವಾರ ಸಂಜೆ ಭರತ್‌ಪುರ...

ಪಶ್ಚಿಮ ಏಷ್ಯಾ ಸಂಘರ್ಷ: ಇರಾನ್ ನಾಯಕರನ್ನು ಗುರಿಯಾಗಿಸುವ ಇಸ್ರೇಲ್ ಬೆದರಿಕೆಗೆ ಚೀನಾ ವಿರೋಧ

ಇರಾನ್‌ನಲ್ಲಿ ಸರ್ವೋಚ್ಛ ನಾಯಕರಾಗಿ ಯಾರೇ ಆಯ್ಕೆಯಾದರು ಅವರು ನಮ್ಮ ಮುಂದಿನ ಗುರಿಯಾಗಿರುತ್ತಾರೆ ಎಂದು ಬೆದರಿಕೆ ಹಾಕಿದ್ದ ಇಸ್ರೇಲ್ ನಡೆಯನ್ನು ಚೀನಾ ಖಂಡಿಸಿದೆ. ಸದ್ಯ ಸರ್ವೋಚ್ಛ ನಾಯಕರಾಗಿ ನೇಮಕವಾಗಿರುವ ಅಲಿ ಖಮೇನಿ ಅವರ ಪುತ್ರ...

ಪಶ್ಚಿಮ ಏಷ್ಯಾ ಸಂಘರ್ಷ ಕುರಿತು ಚರ್ಚೆಗೆ ಒತ್ತಾಯ : ಸಂಸತ್ ಆವರಣದಲ್ಲಿ ವಿಪಕ್ಷ ಸಂಸದರಿಂದ ಪ್ರತಿಭಟನೆ

ಪಶ್ಚಿಮ ಏಷ್ಯಾ ಸಂಘರ್ಷದ ಬಗ್ಗೆ ಚರ್ಚೆಗೆ ಒತ್ತಾಯಿಸಿ ಮತ್ತು ಅದಕ್ಕೆ ಸಂಬಂಧಿಸಿದ ನಿರ್ಣಾಯಕ ವಿಷಯಗಳ ಬಗ್ಗೆ ಸರ್ಕಾರ ಮೌನ ವಹಿಸಿರುವುದನ್ನು ಖಂಡಿಸಿ, ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ವಿಪಕ್ಷ ನಾಯಕ ರಾಹುಲ್...

ಇರಾನಿನ ತೈಲ ಸಂಗ್ರಹಾಗಾರಗಳ ಮೇಲೆ ಇಸ್ರೇಲ್ ದಾಳಿ; ಅಮೆರಿಕಾ ಅಸಮಾಧಾನಗೊಂಡಿರುವುದಾಗಿ ವರದಿ

ವಾಷಿಂಗ್ಟನ್, ಡಿಸಿ: ಇರಾನಿನ ಇಂಧನ ಮೂಲಸೌಕರ್ಯವನ್ನು ಗುರಿಯಾಗಿಸಿಕೊಂಡು ಇಸ್ರೇಲ್ ನಡೆಸಿದ ದೊಡ್ಡ ಪ್ರಮಾಣದ ವೈಮಾನಿಕ ದಾಳಿಯ ಬಗ್ಗೆ ಅಮೆರಿಕ ಮತ್ತು ಇಸ್ರೇಲ್ ನಡುವೆ ಭಿನ್ನಾಭಿಪ್ರಾಯ ಹೊರಹೊಮ್ಮಿದೆ ಎಂದು ವರದಿಯಾಗಿದೆ. ಅಮೆರಿಕದ ಅಧಿಕಾರಿಗಳು ಕಾರ್ಯಾಚರಣೆಯ...

ಪಶ್ಚಿಮ ಏಷ್ಯಾ ಸಂಘರ್ಷ ಕುರಿತು ಚರ್ಚೆಗೆ ಪ್ರತಿಪಕ್ಷಗಳು ಪಟ್ಟು : ಲೋಕಸಭೆ ಕಲಾಪ ಮುಂದೂಡಿಕೆ

ಲೋಕಸಭೆಯ ಬಜೆಟ್ ಅಧಿವೇಶನದ ಎರಡನೇ ಹಂತದ ಕಾರ್ಯ ಕಲಾಪಗಳು ಸೋಮವಾರ (ಮಾ.9) ಭಾರೀ ಗದ್ದಲದೊಂದಿಗೆ ಆರಂಭಗೊಂಡಿತು. ಪಶ್ಚಿಮ ಏಷ್ಯಾದ ಪರಿಸ್ಥಿತಿಯ ಕುರಿತು ಚರ್ಚಿಸಲು ಆಗ್ರಹಿಸಿ ಪ್ರತಿಪಕ್ಷಗಳು ತೀವ್ರ ಪ್ರತಿಭಟನೆ ನಡೆಸಿದ ಹಿನ್ನೆಲೆ, ಸ್ಪೀಕರ್...

Parliament Budget Session | ಇಂಧನ ಭದ್ರತೆ ಕುರಿತು ಮಲ್ಲಿಕಾರ್ಜುನ ಖರ್ಗೆ ಪ್ರಸ್ತಾಪ : ರಾಜ್ಯಸಭೆಯಲ್ಲಿ ಗದ್ದಲ

ಸಂಸತ್ತಿನ 2026-27ನೇ ಸಾಲಿನ ಬಜೆಟ್ ಅಧಿವೇಶನದ ಎರಡನೇ ಹಂತದ ಕಾರ್ಯ ಕಲಾಪಗಳು ಸೋಮವಾರದಿಂದ (ಮಾ.9) ಪ್ರಾರಂಭಗೊಂಡಿವೆ. ಮೊದಲ ದಿನ ರಾಜ್ಯಸಭೆಯಲ್ಲಿ ವಿರೋಧ ಪಕ್ಷದ ನಾಯಕ ಹಾಗೂ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜು ಖರ್ಗೆ ಅವರು...

ಯುದ್ಧದ ನಡುವೆಯೇ ಇರಾನ್‌ನ ನೂತನ ಸರ್ವೋಚ್ಚ ನಾಯಕನಾಗಿ ಖಮೇನಿ ಪುತ್ರ ಮೊಜ್ತಬಾ ನೇಮಕ

ಇರಾನ್‌ನ ತಜ್ಞರ ಸಭೆಯು ಮೊಜ್ತಾಬಾ ಖಮೇನಿ ಅವರನ್ನು ಅವರ ತಂದೆ ಅಯತೊಲ್ಲಾ ಅಲಿ ಖಮೇನಿ ಅವರ ಸ್ಥಾನಕ್ಕೆ ದೇಶದ ಹೊಸ ಸರ್ವೋಚ್ಚ ನಾಯಕನನ್ನಾಗಿ ಘೋಷಿಸಿದೆ ಎಂದು ರಾಜ್ಯ ಮಾಧ್ಯಮ ಭಾನುವಾರ ವರದಿ ಮಾಡಿದೆ. "ತಜ್ಞರ...