Homeಅಂಕಣಗಳುಇನ್ನಾದರು ಈ ಪ್ರಕೃತಿ ಸಂಪತ್ತುಗಳ ಲೂಟಿಗೆ ಕಡಿವಾಣ ಹಾಕಬೇಕು: ಎಚ್ ಎಸ್ ದೊರೆಸ್ವಾಮಿ

ಇನ್ನಾದರು ಈ ಪ್ರಕೃತಿ ಸಂಪತ್ತುಗಳ ಲೂಟಿಗೆ ಕಡಿವಾಣ ಹಾಕಬೇಕು: ಎಚ್ ಎಸ್ ದೊರೆಸ್ವಾಮಿ

- Advertisement -
- Advertisement -

ಗುಡ್ಡ ಕರಗಿಸುವವರ ಹಾವಳಿ ಕಳೆದ 40 ವರ್ಷಗಳಿಂದಲೂ ನಡೆಯುತ್ತಿದೆ. ಕಲ್ಲುಬಂಡೆ ಡಿ.ಕೆ. ಶಿವಕುಮಾರ್ ಅವರ ತಮ್ಮ ಎಂಪಿ. ಡಿ.ಕೆ. ಸುರೇಶ್, ಮಾಲೂರು ಶಾಸಕ ನಂಜೇಗೌಡ, ಮೇಲುಕೋಟೆ ಶಾಸಕ ಪುಟ್ಟರಾಜು, ಚಾಮರಾಜನಗರ ಶಾಸಕ ಪುಟ್ಟರಂಗಶೆಟ್ಟಿ ಅವರ ಮಗ, ಅರಸೀಕೆರೆ ಶಾಸಕ ಶಿವಲಿಂಗೇಗೌಡ, ಹುನಗುಂದ ಶಾಸಕ ದೊಡ್ಡನಗೌಡ ಪಾಟೀಲ, ಬೆಳಗಾವಿಯ ಶಾಸಕ ಸತೀಶ್ ಜಾರಕಿಹೊಳಿ, ಶಾಸಕ ಅಮರೇಗೌಡ, ಬೈಯ್ಯಾಪುರದಲ್ಲಿ ಅವರ ಅಣ್ಣನ ಮಗ ಶರಣಗೌಡ ಪಾಟೀಲ್, ಕೊಪ್ಪಳ ಸಂಸದ ಸಂಗಣ್ಣ ಕರಡಿ ಅವರ ಮಗ ಅಮರೇಶ್ ಕರಡಿ ಶಾಸಕ ಹಾಲಪ್ಪ ಆಚಾರ್, ರಾಘವೇಂದ್ರ ಹಿಟ್ನಾಳ್, ಮಾಜಿ ಸಚಿವ ಬಸವರಾಜ ರಾಯರೆಡ್ಡಿ ಕಲ್ಲು ಕರಗಿಸುವ ಗುತ್ತಿಗೆ ಪಡೆದಿದ್ದಾರೆ. ಇವರೆಲ್ಲಾ ಭೂ ವಿಜ್ಞಾನ ನಿರ್ದೇಶಕರಿಂದ ಪರವಾನಗಿ ಪಡೆದು ಗುಡ್ಡ ಕರಗಿಸುವವರು. ಅಕ್ರಮವಾಗಿ ಬೆಟ್ಟಗಳನ್ನು ಕರಗಿಸುವವರ ವಿರುದ್ಧ ನ್ಯಾಯಾಲಯಕ್ಕೆ 2015-2020ರವರೆಗೆ 9076 ಪ್ರಕರಣಗಳು ದಾಖಲಾಗಿವೆ.

ಶಿವಮೊಗ್ಗ ಜಿಲ್ಲೆಯಲ್ಲಿ ಕಲ್ಲು ತೆಗೆಯುತ್ತಿರುವ ಕ್ವಾರಿಗಳ ಸಂಖ್ಯೆ 150. ಅವುಗಳಲ್ಲಿ ಅಕ್ರಮವಾಗಿ ದೋಚುತ್ತಿರುವುದು 73 ಕ್ವಾರಿಗಳು. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 120 ಕ್ವಾರಿಗಳಲ್ಲಿ ಕಲ್ಲು ಗಣಿಗಾರಿಕೆ ನಡೆಯುತ್ತಿದೆ. ಸ್ಥಳೀಯ ರಾಜಕಾರಣಿಗಳಲ್ಲದೇ ಹೊರ ಜಿಲ್ಲೆಗಳ ರಾಜಕಾರಣಿಗಳು ಇದ್ದಾರೆ. ಅಕ್ರಮ ಗಣಿಗಾರಿಕೆ ತಡೆಗಟ್ಟುವೆನೆಂದು ಗಣಿ ಮಂತ್ರಿ ಗುಡುಗುತ್ತಾರೆ. ಬೇಲಿಯೇ ಎದ್ದು ಹೊಲ ಮೇಯುವಾಗ ಪುಂಡ ಹಸುಗಳು ಹೊಲಕ್ಕೆ ನುಗ್ಗದೇ ಇರುತ್ತವೆಯೇ? ಶಾಸಕರೇ ಭ್ರಷ್ಟರಾದ ಮೇಲೆ ಇನ್ನು ದುರುಳ ಕಲ್ಲು ಉದ್ಯಮಿಗಳ ಭ್ರಷ್ಟಾಚಾರವನ್ನು ತಡೆಗಟ್ಟುವವರು ಯಾರು?

ಯಡಿಯೂರಪ್ಪನವರಿಗೆ ತಮ್ಮ ಸುತ್ತ ಇರುವ ಭ್ರಷ್ಟರ ಮೇಲೆ ಕ್ರಮ ಕೈಗೊಳ್ಳಲು ಸಾಧ್ಯವೇ? ಆ ಜನರ ನೆರವಿನಿಂದ ಅವರ ಸಿಂಹಾಸನ ಉಳಿದಿದೆ. ಅವರನ್ನು ಎದುರುಹಾಕಿಕೊಂಡರೆ ಅವರಿಗೆ ಉಳಿಗಾಲವಿದೆಯೇ? ಮುಖ್ಯಮಂತ್ರಿ ಸ್ಥಾನದಲ್ಲಿ ಕೂರಲು ಬಿಡುತ್ತಾರಾ?

ಶಾಸಕರಿಗೂ, ಮಂತ್ರಿಗಳಿಗೂ, ಅಧಿಕಾರಿಗಳಿಗೂ ಒಂದು ಸಂದೇಶ ಕೊಡಲು ಬಯಸುತ್ತೇನೆ. ಗಾಂಧೀಜಿ ಎಚ್ಚರಿಸಿದಂತೆ ಪ್ರಕೃತಿ ಮಾನವನ ಆಸೆಯನ್ನು ಸಹಿಸಬಲ್ಲದು. ದುರಾಸೆಯನ್ನು ಸಹಿಸಲು ಸಾಧ್ಯವೇ? ನೀವೆಲ್ಲಾ ದುರಾಸೆಯನ್ನು ಸಹಿಸಿಕೊಂಡಿದ್ದೀರಿ. ಪ್ರಕೃತಿ ಬೆಟ್ಟ ಗುಡ್ಡಗಳನ್ನು ಸೃಷ್ಟಿ ಮಾಡಿದೆ. ಅರಣ್ಯ ಸೃಷ್ಟಿ ಮಾಡಿದೆ. ಖನಿಜಗಳನ್ನು ಭೂಗರ್ಭದಲ್ಲಿ ಅಡಗಿಸಿಟ್ಟಿದೆ. ಅದು ಮುಗಿದರೆ ಮತ್ತೆ ಉತ್ಪತ್ತಿಯಾಗದು. ಸಮುದ್ರದಲ್ಲಿ ಹವಳ ಮುಂತಾದ ಬೆಲೆಬಾಳುವ ಅಲಂಕಾರಿಕ ವಸ್ತುಗಳನ್ನು ತಯಾರಿಸುವ ಮುತ್ತು ರತ್ನಗಳನ್ನು ಹುದುಗಿಸಿಟ್ಟ ಪಶ್ಚಿಮ ಘಟ್ಟಗಳಂತಹ ಬೃಹದಾಕಾರದ ಅರಣ್ಯಗಳಿವೆ. ಕಪ್ಪತಗುಡ್ಡದಲ್ಲಿ ಬಂಗಾರ ಇದೆ ಎಂದು ಅದನ್ನು ಆಕ್ರಮಣ ಮಾಡಲು ಹೊಂಚುಹಾಕುತ್ತಿರುವ ಪಟ್ಟಭದ್ರರು ಇದ್ದಾರೆ.

PC : News Express

ಭಾರತದಲ್ಲಿ ದೊರೆಯುವ ಎಲ್ಲಾ ಖನಿಜಗಳನ್ನು ಬಗೆದು ದೋಚಬೇಕೆಂಬ, ಬೆಟ್ಟಗಳನ್ನೆಲ್ಲಾ ತಮ್ಮ ತಲೆಮಾರಿನಲ್ಲೇ ಕರಗಿಸಿ ತಮ್ಮ ತಿಜೋರಿ ತುಂಬಿಕೊಳ್ಳಲು, ಅರಣ್ಯವನ್ನೆಲ್ಲಾ ಕೊಳ್ಳೆ ಹೊಡೆದು ಬರಿದಾಗಿಸಬೇಕೆಂಬ ದುರಾತ್ಮರ ಮತ್ತು ಸಮುದ್ರದ ಆದಳದಲ್ಲಿರುವ ಪೆಟ್ರೋಲಿಯಂ, ಹವಳ ಮತ್ತು ಮುತ್ತುಗಳನ್ನು ದೋಚಬೇಕೆಂದಿರುವ ಕಾರ್ಪೋರೇಟ್ ಕುಳಗಳದ್ದು ಒಂದೇ ಸಂಕಲ್ಪ. ಅದೇನೆಂದರೆ ನಮ್ಮ ತಲೆಮಾರಿನಲ್ಲೇ ಈ ಎಲ್ಲವನ್ನೂ ದೋಚಿ ಮುಂದಿನ ತಲೆಮಾರಿಗೆ ಅವು ಯಾವುದೂ ಲಭ್ಯವಾಗದಂತೆ ಮಾಡುವ ಮ್ಯಾಡ್ ರೇಸ್‌ನಲ್ಲಿ ಮುಳುಗುವುದು. ಇವರಿಗೆಲ್ಲಾ ದುಡ್ಡೇ ಆರಾಧ್ಯ ದೈವ. ದುಡ್ಡಿಗಾಗಿ ಇವರು ಎಂತಹ ಪಾತಕ ಮಾಡಲು ಹೇಸುವವರಲ್ಲ.

ನಮ್ಮ ಸರ್ಕಾರಗಳು ಈ ದೋಚುವ ಜನರಿಗೆ ಪೂರ್ಣ ಸಹಕಾರ ಕೊಡುತ್ತದೆ. 32% ಅರಣ್ಯ ಇರಬೇಕೆಂಬ ಕಾಳಜಿ ಸರ್ಕಾರಕ್ಕಿಲ್ಲ. ಅದು ಈಗ 13% ಇಳಿದಿರಬಹುದು. ಆನೆ, ಹುಲಿ, ಕರಡಿ, ತೋಳಗಳಿಗೆ ಕಾಡು ಕಿರಿದಾಗುತ್ತಿರುವುದರಿಂದ ನೆಲೆತಪ್ಪಿ ಆಹಾರ, ನೀರು, ಅಭಾವ ಕಾಣಿಸಿರುವುದರಿಂದ ಅವು ಈಗ ಕಾಡು ಬಿಟ್ಟು ನಾಡಿಗೆ ಅಧಿಕ ಸಂಖ್ಯೆಯಲ್ಲಿ ವಲಸೆ ಬರುತ್ತಿವೆ. ನಾಡಿನಲ್ಲಿ ವಾಸಿಸುವ ಜನಕ್ಕೆ ನೆಮ್ಮದಿ ತಪ್ಪಿದೆ. ಕಾಡುಪ್ರಾಣಿಗಳ ಭಯ ಕಾಡುತ್ತಿದೆ. ಅರಣ್ಯವಾಸಿ ಹುಲಿ, ಚಿರತೆಗಳೊಡನೆ ಅನಿವಾರ್ಯವಾಗಿ ಸಹಬಾಳ್ವೆ ಮಾಡುವ ಅನಿವಾರ್ಯತೆ ಉಂಟಾಗಿದೆ. ಸರ್ಕಾರಕ್ಕೆ, ಖನಿಜ ಇಲಾಖೆಯ ಅಧಿಕಾರಿಗಳಿಗೆ ಚಿನ್ನವಾಗಲಿ, ಬೆಳ್ಳಿಯಾಗಲಿ, ತಾಮ್ರವಾಗಲಿ, ಕಬ್ಬಿಣವಾಗಲಿ, ಮ್ಯಾಂಗನೀಸ್ ಆಗಲಿ, ಬೆಟ್ಟದ ಕಲ್ಲುಗಳಾಗಲಿ ಅವು ಉತ್ಪತ್ತಿಯಾಗುವುದಕ್ಕೆ ನೂರರಿಂದ ಐನೂರು ವರ್ಷಗಳು ಬೇಕಾಗುತ್ತದೆ ಎಂಬ ಪರಿಜ್ಞಾನವಿಲ್ಲ.

ಈ ಖನಿಜಗಳು ಬರಿದಾಗುವುದಕ್ಕೆ ಬಿಡದೇ ನಮ್ಮ ತಲೆಮಾರಿನಲ್ಲಿ ಇಂತಿಷ್ಟು ಮಾತ್ರ ತೆಗೆಯಲು ಶಾಸನ ಮಾಡಬೇಕು. ಉಳಿದ ಖನಿಜಗಳನ್ನು ಮುಂದಿನ ತಲೆಮಾರಿನ ಜನರಿಗಾಗಿ ಮೀಸಲಿಡಬೇಕು. ಅದು ಸರ್ಕಾರದ ಧರ್ಮ.ಇನ್ನಾದರು ಈ ಪ್ರಕೃತಿ ಸಂಪತ್ತುಗಳ ಲೂಟಿಗೆ ಕಡಿವಾಣ ಹಾಕಬೇಕು. ನ್ಯಾಯದ ದೃಷ್ಟಿಯಿಂದ ನೋಡಿದರೆ ಈ ಎಲ್ಲಾ ಪ್ರಕೃತಿ ಸಂಪತ್ತನ್ನು ಸೃಷ್ಟಿಕರ್ತ ತಾನು ಸೃಷ್ಟಿಸಿದ ಎಲ್ಲಾ ಮನುಷ್ಯರಿಗೆ ದೊರೆಯುವಂತಾಗಲಿ ಎಂದು ಬಗೆದಿದ್ದ. ಅನೀತಿಯುತ ಸರ್ಕಾರಗಳು ದೋಚುವ ಮಹಾನುಭಾವರ ಪರವಾಗಿ ನಿಂತು, ಜನರಿಗೆ ಅವುಗಳು ದೊರೆಯದಂತೆ ವಂಚನೆ ಮಾಡುತ್ತಿವೆ. ಪ್ರಕೃತಿ ಸಂಪತ್ತು ಎಲ್ಲರಿಗೂ ಸುಲಭ ಬೆಲೆಯಲ್ಲಿ ದೊರೆಯುವಂತಾಗಬೇಕಾದರೆ ಪ್ರಕೃತಿ ನೀಡಿರುವ ಎಲ್ಲಾ ಸಂಪತ್ತನ್ನು ರಾಷ್ಟ್ರೀಕರಣ ಮಾಡಬೇಕು. ಸರ್ಕಾರ ಈಗಲಾದರೂ ಪ್ರಕೃತಿ ಸಂಪತ್ತಿಗೆ ಪ್ರಜೆಗಳು ಒಡೆಯರು ಎಂದು ಘೋಷಿಸಲಿ.


ಇದನ್ನೂ ಓದಿ: ನೂರರ ನೋಟ: ಕರ ನಿರಾಕರಣೆಯನ್ನು ನೆನಪಿಸಿದ ದೆಹಲಿ ರೈತ ಹೋರಾಟ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸತೀಶ್‌ ಜಾರಕಿಹೊಳಿ ಮೇಲಿನ ಇಡಿ ದಾಳಿಯನ್ನು ‘ಚಾರಿತ್ರ್ಯ ಹರಣ’ ಎಂದ ವಿಜಯ್ ಮಲ್ಯ

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಮನೆ ಹಾಗೂ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯವು (ಇಡಿ) ನಡೆಸಿದ ದಾಳಿಯನ್ನು ಮಾಜಿ ಸಂಸದ ಮತ್ತು ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಸಾರ್ವಜನಿಕವಾಗಿ ಚಾರಿತ್ರ್ಯ...

ಒಗ್ಗಟ್ಟಿನ ಮಾತುಗಳಷ್ಟೇ ಸಾಲದು, ಕೃತಿಯಲ್ಲಿರಲಿ ದಿಟ್ಟತನ : ಬ್ರಿಕ್ಸ್ ವಿಚಾರದಲ್ಲಿ ಕೇಂದ್ರಕ್ಕೆ ಕಾಂಗ್ರೆಸ್ ಚಾಟಿ

ಜಾಗತಿಕ ಮಟ್ಟದಲ್ಲಿ ಬ್ರಿಕ್ಸ್ (BRICS) ಒಕ್ಕೂಟದ ಪ್ರಭಾವ ಹೆಚ್ಚುತ್ತಿರುವುದನ್ನು ಸ್ವಾಗತಿಸಿರುವ ಕಾಂಗ್ರೆಸ್, ಈ ಒಕ್ಕೂಟದ ಅಧ್ಯಕ್ಷತೆಯನ್ನು ವಹಿಸಿರುವ ಭಾರತವು ‘ಗ್ಲೋಬಲ್ ಸೌತ್’ (Global South) ರಾಷ್ಟ್ರಗಳ ನಡುವೆ ತನ್ನ ರಾಜತಾಂತ್ರಿಕ ಸ್ಥಾನಮಾನವನ್ನು ಮರುಸ್ಥಾಪಿಸಲು...

9/11 ರ ಹಿಂದಿನ ದಾಳಿಯನ್ನು ಇರಾನ್ ಜೊತೆಗಿನ ಇಂದಿನ ಯುದ್ಧಕ್ಕೆ ಜೋಡಿಸಿದ ಡೊನಾಲ್ಡ್‌ ಟ್ರಂಪ್

"ಸೆಪ್ಟೆಂಬರ್ 11, 2001 ರ ದಾಳಿಯನ್ನು ಯುನೈಟೆಡ್ ಸ್ಟೇಟ್ಸ್ ಎಂದಿಗೂ ಮರೆಯುವುದಿಲ್ಲ. 25 ವರ್ಷಗಳ ನಂತರವೂ ಇರಾನ್ ಮೇಲೆ ದಾಳಿ ಮಾಡುವ ಮೂಲಕ ದೇಶವು ಭಯೋತ್ಪಾದನೆ ವಿರುದ್ಧದ ಯುದ್ಧವನ್ನು ಮುಂದುವರೆಸಿದೆ" ಎಂದು ಅಧ್ಯಕ್ಷ...

SIR ನೋಟಿಸ್ ಮತ್ತು ವಿಚಾರಣೆಯಲ್ಲಿ ಅಕ್ರಮ : ಚು. ಆಯೋಗದ ವಿರುದ್ಧ ನಾಗರಿಕ ಸಂಘಟನೆಗಳಿಂದ 2ನೇ ಎಫ್‌ಐಆರ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಭಾಗವಾಗಿ, ಆಗಸ್ಟ್ 24ರಂದು ರಾಜ್ಯ ಚುನಾವಣಾ ಆಯೋಗ ಬಿಡುಗಡೆ ಮಾಡಿದ್ದ ಕರಡು ಮತದಾರರ ಪಟ್ಟಿಯನ್ನು ತಿರಸ್ಕರಿಸಿ ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಎಫ್‌ಐಆರ್ ಬಿಡುಗಡೆ...

‘ಕೊಂಕಣಿ – ಮಾಲ್ವಣಿ ಸಮುದಾಯಗಳು ಹಿಂದುತ್ವದ ಬೆಂಬಲಿಗರು..’; ಮಹಾರಾಷ್ಟ್ರ ಬಿಜೆಪಿ ನಾಯಕ ಅಮೀತ್ ಸತಮ್

ಮುಂಬೈನಲ್ಲಿ ವಾಸಿಸುತ್ತಿರುವ ಕೊಂಕಣಿ ಮತ್ತು ಮಾಲ್ವಣಿ ಸಮುದಾಯಗಳು ಸೇರಿದಂತೆ ಕೊಂಕಣ ಪ್ರದೇಶದ ಜನರು ಹಿಂದುತ್ವವನ್ನು ಬೆಂಬಲಿಸುತ್ತಾರೆ ಎಂದು ಬಿಜೆಪಿ ನಾಯಕ ಅಮೀತ್ ಸತಮ್ ಹೇಳಿದ್ದಾರೆ. ಮಹಾರಾಷ್ಟ್ರದ ಕೊಂಕಣ ಪ್ರದೇಶದ ಸಾವಂತವಾಡಿಗೆ ಗಣಪತಿ ಭಕ್ತರಿಗಾಗಿ ಛತ್ರಪತಿ...

SIR! ಸಾಮಾನ್ಯರಿಗೆ ಸಂಕಷ್ಟ; ಗಣ್ಯರಿಗೆ ಮನೆ ಬಾಗಿಲಲ್ಲೇ ಸೇವೆ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಕರ್ನಾಟಕದಲ್ಲಿ ಮುಂದುವರೆದಿರುವ ನಡುವೆಯೇ, ಅದರ ಜಾರಿಯಲ್ಲಿ ಸಾಮಾನ್ಯ ಮತದಾರರು ಮತ್ತು ಪ್ರಭಾವಿ ವ್ಯಕ್ತಿಗಳ ಅನುಭವದ ನಡುವಿನ ವ್ಯತ್ಯಾಸದ ಕುರಿತು ಪ್ರಶ್ನೆಗಳು ಎದ್ದಿವೆ. ಮತದಾರರ ಪಟ್ಟಿಯಲ್ಲಿನ...

ದಲಿತ ಬಾಲಕಿ ನಿಶು ಆಜಾದ್ ಕುಟುಂಬಕ್ಕೆ ನಿಲ್ಲದ ಕಿರುಕುಳ; ಅಸಭ್ಯ ಭಾಷೆ – ಬೆದರಿಕೆ ಸಂದೇಶ ರವಾನೆ

ಸಿಜೆಪಿ ಪ್ರತಿಭಟನೆಯಲ್ಲಿ ಗಮನ ಸೆಳೆದಿದ್ದ ಹದಿನಾಲ್ಕು ವರ್ಷ ವಯಸ್ಸಿನ ದಲಿತ ಸಮುದಾಯದ ಕಂಟೆಂಟ್ ಕ್ರಿಯೇಟರ್ ನಿಶು ಆಜಾದ್ ಮತ್ತು ಅವರ ಕುಟುಂಬಕ್ಕೆ ಮೊಬೈಲ್‌ ಫೋನ್‌ ಮೂಲಕ ನಿರಂತರ ಕಿರುಕುಳ ಸಂದೇಶ ಬರುತ್ತಿವೆ ಎಂದು...

ಉತ್ತರ ಪ್ರದೇಶ| 8ನೇ ತರಗತಿಯ ದಲಿತ ವಿದ್ಯಾರ್ಥಿಗೆ ಶಿಕ್ಷಕಿಯಿಂದ ಜಾತಿ ತಾರತಮ್ಯ

ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಸರ್ಕಾರಿ ಉನ್ನತ ಪ್ರಾಥಮಿಕ ಶಾಲೆಯ 8ನೇ ತರಗತಿಯ ವಿದ್ಯಾರ್ಥಿಯೊಬ್ಬರು ಶಿಕ್ಷಕಿಯಿಂದ ಜಾತಿ ಆಧಾರಿತ ತಾರತಮ್ಯ ಎಸಗಲಾಗಿದೆ ಎಂದು ಆರೋಪಿಸಿದ್ದಾನೆ. ಕೃಷ್ಣ ಎಂದು ಗುರುತಿಸಲ್ಪಟ್ಟ ಈ ವಿದ್ಯಾರ್ಥಿ ಪರಿಶಿಷ್ಟ...

ಯೆಮನ್ | ಸಂಪೂರ್ಣ ರೆಡ್ ಸೀ ಕರಾವಳಿಯನ್ನು ನಿಯಂತ್ರಣಕ್ಕೆ ತೆಗೆದುಕೊಂಡ ಹೌತಿ ಪಡೆ : ಮಂದೇಬ್ ಜಲಸಂಧಿ ಮೇಲೆಯೂ ಹಿಡಿತ ಸಾಧಿಸಿರುವುದಾಗಿ ವರದಿ

ಮಹತ್ವದ ಬೆಳವಣಿಗೆಯಲ್ಲಿ, ಹೌತಿ ಬಂಡುಕೋರರು ಯೆಮನ್‌ನ ಇಡೀ ಕೆಂಪು ಸಮುದ್ರದ (ರೆಡ್ ಸೀ) ಕರಾವಳಿಯನ್ನು ತಮ್ಮ ನಿಯಂತ್ರಣಕ್ಕೆ ತೆಗೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಇರಾನ್ ಬೆಂಬಲಿತ ಹೌತಿ ಸಶಸ್ತ್ರ ಪಡೆಗಳು ಯೆಮನ್ ಸರ್ಕಾರದ ನಿಯಂತ್ರಣದಲ್ಲಿದ್ದ...

ಭಾರತದ ಚುನಾವಣಾ ಪ್ರಕ್ರಿಯೆಯು ಅತ್ಯಂತ ಪಾರದರ್ಶಕವಾಗಿದೆ: ಸಿಇಸಿ ಜ್ಞಾನೇಶ್ ಕುಮಾರ್

ಭಾರತದ ಚುನಾವಣಾ ಪ್ರಕ್ರಿಯೆಯು ವಿಶ್ವದಲ್ಲೇ ಅತ್ಯಂತ ಪಾರದರ್ಶಕವಾದದ್ದು ಎಂದು ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ (ಸೆ.11) ಹೇಳಿದ್ದಾರೆ. ಗುಜರಾತ್ ವಿಶ್ವವಿದ್ಯಾಲಯದ ಅಟಲ್ ಕಲಾಂ ಸಭಾಂಗಣದಲ್ಲಿ ನಡೆದ 'ಮತಗಟ್ಟೆ ಮಟ್ಟದ ಅಧಿಕಾರಿಗಳೊಂದಿಗೆ...