Homeಅಂಕಣಗಳುಇನ್ನಾದರು ಈ ಪ್ರಕೃತಿ ಸಂಪತ್ತುಗಳ ಲೂಟಿಗೆ ಕಡಿವಾಣ ಹಾಕಬೇಕು: ಎಚ್ ಎಸ್ ದೊರೆಸ್ವಾಮಿ

ಇನ್ನಾದರು ಈ ಪ್ರಕೃತಿ ಸಂಪತ್ತುಗಳ ಲೂಟಿಗೆ ಕಡಿವಾಣ ಹಾಕಬೇಕು: ಎಚ್ ಎಸ್ ದೊರೆಸ್ವಾಮಿ

- Advertisement -
- Advertisement -

ಗುಡ್ಡ ಕರಗಿಸುವವರ ಹಾವಳಿ ಕಳೆದ 40 ವರ್ಷಗಳಿಂದಲೂ ನಡೆಯುತ್ತಿದೆ. ಕಲ್ಲುಬಂಡೆ ಡಿ.ಕೆ. ಶಿವಕುಮಾರ್ ಅವರ ತಮ್ಮ ಎಂಪಿ. ಡಿ.ಕೆ. ಸುರೇಶ್, ಮಾಲೂರು ಶಾಸಕ ನಂಜೇಗೌಡ, ಮೇಲುಕೋಟೆ ಶಾಸಕ ಪುಟ್ಟರಾಜು, ಚಾಮರಾಜನಗರ ಶಾಸಕ ಪುಟ್ಟರಂಗಶೆಟ್ಟಿ ಅವರ ಮಗ, ಅರಸೀಕೆರೆ ಶಾಸಕ ಶಿವಲಿಂಗೇಗೌಡ, ಹುನಗುಂದ ಶಾಸಕ ದೊಡ್ಡನಗೌಡ ಪಾಟೀಲ, ಬೆಳಗಾವಿಯ ಶಾಸಕ ಸತೀಶ್ ಜಾರಕಿಹೊಳಿ, ಶಾಸಕ ಅಮರೇಗೌಡ, ಬೈಯ್ಯಾಪುರದಲ್ಲಿ ಅವರ ಅಣ್ಣನ ಮಗ ಶರಣಗೌಡ ಪಾಟೀಲ್, ಕೊಪ್ಪಳ ಸಂಸದ ಸಂಗಣ್ಣ ಕರಡಿ ಅವರ ಮಗ ಅಮರೇಶ್ ಕರಡಿ ಶಾಸಕ ಹಾಲಪ್ಪ ಆಚಾರ್, ರಾಘವೇಂದ್ರ ಹಿಟ್ನಾಳ್, ಮಾಜಿ ಸಚಿವ ಬಸವರಾಜ ರಾಯರೆಡ್ಡಿ ಕಲ್ಲು ಕರಗಿಸುವ ಗುತ್ತಿಗೆ ಪಡೆದಿದ್ದಾರೆ. ಇವರೆಲ್ಲಾ ಭೂ ವಿಜ್ಞಾನ ನಿರ್ದೇಶಕರಿಂದ ಪರವಾನಗಿ ಪಡೆದು ಗುಡ್ಡ ಕರಗಿಸುವವರು. ಅಕ್ರಮವಾಗಿ ಬೆಟ್ಟಗಳನ್ನು ಕರಗಿಸುವವರ ವಿರುದ್ಧ ನ್ಯಾಯಾಲಯಕ್ಕೆ 2015-2020ರವರೆಗೆ 9076 ಪ್ರಕರಣಗಳು ದಾಖಲಾಗಿವೆ.

ಶಿವಮೊಗ್ಗ ಜಿಲ್ಲೆಯಲ್ಲಿ ಕಲ್ಲು ತೆಗೆಯುತ್ತಿರುವ ಕ್ವಾರಿಗಳ ಸಂಖ್ಯೆ 150. ಅವುಗಳಲ್ಲಿ ಅಕ್ರಮವಾಗಿ ದೋಚುತ್ತಿರುವುದು 73 ಕ್ವಾರಿಗಳು. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 120 ಕ್ವಾರಿಗಳಲ್ಲಿ ಕಲ್ಲು ಗಣಿಗಾರಿಕೆ ನಡೆಯುತ್ತಿದೆ. ಸ್ಥಳೀಯ ರಾಜಕಾರಣಿಗಳಲ್ಲದೇ ಹೊರ ಜಿಲ್ಲೆಗಳ ರಾಜಕಾರಣಿಗಳು ಇದ್ದಾರೆ. ಅಕ್ರಮ ಗಣಿಗಾರಿಕೆ ತಡೆಗಟ್ಟುವೆನೆಂದು ಗಣಿ ಮಂತ್ರಿ ಗುಡುಗುತ್ತಾರೆ. ಬೇಲಿಯೇ ಎದ್ದು ಹೊಲ ಮೇಯುವಾಗ ಪುಂಡ ಹಸುಗಳು ಹೊಲಕ್ಕೆ ನುಗ್ಗದೇ ಇರುತ್ತವೆಯೇ? ಶಾಸಕರೇ ಭ್ರಷ್ಟರಾದ ಮೇಲೆ ಇನ್ನು ದುರುಳ ಕಲ್ಲು ಉದ್ಯಮಿಗಳ ಭ್ರಷ್ಟಾಚಾರವನ್ನು ತಡೆಗಟ್ಟುವವರು ಯಾರು?

ಯಡಿಯೂರಪ್ಪನವರಿಗೆ ತಮ್ಮ ಸುತ್ತ ಇರುವ ಭ್ರಷ್ಟರ ಮೇಲೆ ಕ್ರಮ ಕೈಗೊಳ್ಳಲು ಸಾಧ್ಯವೇ? ಆ ಜನರ ನೆರವಿನಿಂದ ಅವರ ಸಿಂಹಾಸನ ಉಳಿದಿದೆ. ಅವರನ್ನು ಎದುರುಹಾಕಿಕೊಂಡರೆ ಅವರಿಗೆ ಉಳಿಗಾಲವಿದೆಯೇ? ಮುಖ್ಯಮಂತ್ರಿ ಸ್ಥಾನದಲ್ಲಿ ಕೂರಲು ಬಿಡುತ್ತಾರಾ?

ಶಾಸಕರಿಗೂ, ಮಂತ್ರಿಗಳಿಗೂ, ಅಧಿಕಾರಿಗಳಿಗೂ ಒಂದು ಸಂದೇಶ ಕೊಡಲು ಬಯಸುತ್ತೇನೆ. ಗಾಂಧೀಜಿ ಎಚ್ಚರಿಸಿದಂತೆ ಪ್ರಕೃತಿ ಮಾನವನ ಆಸೆಯನ್ನು ಸಹಿಸಬಲ್ಲದು. ದುರಾಸೆಯನ್ನು ಸಹಿಸಲು ಸಾಧ್ಯವೇ? ನೀವೆಲ್ಲಾ ದುರಾಸೆಯನ್ನು ಸಹಿಸಿಕೊಂಡಿದ್ದೀರಿ. ಪ್ರಕೃತಿ ಬೆಟ್ಟ ಗುಡ್ಡಗಳನ್ನು ಸೃಷ್ಟಿ ಮಾಡಿದೆ. ಅರಣ್ಯ ಸೃಷ್ಟಿ ಮಾಡಿದೆ. ಖನಿಜಗಳನ್ನು ಭೂಗರ್ಭದಲ್ಲಿ ಅಡಗಿಸಿಟ್ಟಿದೆ. ಅದು ಮುಗಿದರೆ ಮತ್ತೆ ಉತ್ಪತ್ತಿಯಾಗದು. ಸಮುದ್ರದಲ್ಲಿ ಹವಳ ಮುಂತಾದ ಬೆಲೆಬಾಳುವ ಅಲಂಕಾರಿಕ ವಸ್ತುಗಳನ್ನು ತಯಾರಿಸುವ ಮುತ್ತು ರತ್ನಗಳನ್ನು ಹುದುಗಿಸಿಟ್ಟ ಪಶ್ಚಿಮ ಘಟ್ಟಗಳಂತಹ ಬೃಹದಾಕಾರದ ಅರಣ್ಯಗಳಿವೆ. ಕಪ್ಪತಗುಡ್ಡದಲ್ಲಿ ಬಂಗಾರ ಇದೆ ಎಂದು ಅದನ್ನು ಆಕ್ರಮಣ ಮಾಡಲು ಹೊಂಚುಹಾಕುತ್ತಿರುವ ಪಟ್ಟಭದ್ರರು ಇದ್ದಾರೆ.

PC : News Express

ಭಾರತದಲ್ಲಿ ದೊರೆಯುವ ಎಲ್ಲಾ ಖನಿಜಗಳನ್ನು ಬಗೆದು ದೋಚಬೇಕೆಂಬ, ಬೆಟ್ಟಗಳನ್ನೆಲ್ಲಾ ತಮ್ಮ ತಲೆಮಾರಿನಲ್ಲೇ ಕರಗಿಸಿ ತಮ್ಮ ತಿಜೋರಿ ತುಂಬಿಕೊಳ್ಳಲು, ಅರಣ್ಯವನ್ನೆಲ್ಲಾ ಕೊಳ್ಳೆ ಹೊಡೆದು ಬರಿದಾಗಿಸಬೇಕೆಂಬ ದುರಾತ್ಮರ ಮತ್ತು ಸಮುದ್ರದ ಆದಳದಲ್ಲಿರುವ ಪೆಟ್ರೋಲಿಯಂ, ಹವಳ ಮತ್ತು ಮುತ್ತುಗಳನ್ನು ದೋಚಬೇಕೆಂದಿರುವ ಕಾರ್ಪೋರೇಟ್ ಕುಳಗಳದ್ದು ಒಂದೇ ಸಂಕಲ್ಪ. ಅದೇನೆಂದರೆ ನಮ್ಮ ತಲೆಮಾರಿನಲ್ಲೇ ಈ ಎಲ್ಲವನ್ನೂ ದೋಚಿ ಮುಂದಿನ ತಲೆಮಾರಿಗೆ ಅವು ಯಾವುದೂ ಲಭ್ಯವಾಗದಂತೆ ಮಾಡುವ ಮ್ಯಾಡ್ ರೇಸ್‌ನಲ್ಲಿ ಮುಳುಗುವುದು. ಇವರಿಗೆಲ್ಲಾ ದುಡ್ಡೇ ಆರಾಧ್ಯ ದೈವ. ದುಡ್ಡಿಗಾಗಿ ಇವರು ಎಂತಹ ಪಾತಕ ಮಾಡಲು ಹೇಸುವವರಲ್ಲ.

ನಮ್ಮ ಸರ್ಕಾರಗಳು ಈ ದೋಚುವ ಜನರಿಗೆ ಪೂರ್ಣ ಸಹಕಾರ ಕೊಡುತ್ತದೆ. 32% ಅರಣ್ಯ ಇರಬೇಕೆಂಬ ಕಾಳಜಿ ಸರ್ಕಾರಕ್ಕಿಲ್ಲ. ಅದು ಈಗ 13% ಇಳಿದಿರಬಹುದು. ಆನೆ, ಹುಲಿ, ಕರಡಿ, ತೋಳಗಳಿಗೆ ಕಾಡು ಕಿರಿದಾಗುತ್ತಿರುವುದರಿಂದ ನೆಲೆತಪ್ಪಿ ಆಹಾರ, ನೀರು, ಅಭಾವ ಕಾಣಿಸಿರುವುದರಿಂದ ಅವು ಈಗ ಕಾಡು ಬಿಟ್ಟು ನಾಡಿಗೆ ಅಧಿಕ ಸಂಖ್ಯೆಯಲ್ಲಿ ವಲಸೆ ಬರುತ್ತಿವೆ. ನಾಡಿನಲ್ಲಿ ವಾಸಿಸುವ ಜನಕ್ಕೆ ನೆಮ್ಮದಿ ತಪ್ಪಿದೆ. ಕಾಡುಪ್ರಾಣಿಗಳ ಭಯ ಕಾಡುತ್ತಿದೆ. ಅರಣ್ಯವಾಸಿ ಹುಲಿ, ಚಿರತೆಗಳೊಡನೆ ಅನಿವಾರ್ಯವಾಗಿ ಸಹಬಾಳ್ವೆ ಮಾಡುವ ಅನಿವಾರ್ಯತೆ ಉಂಟಾಗಿದೆ. ಸರ್ಕಾರಕ್ಕೆ, ಖನಿಜ ಇಲಾಖೆಯ ಅಧಿಕಾರಿಗಳಿಗೆ ಚಿನ್ನವಾಗಲಿ, ಬೆಳ್ಳಿಯಾಗಲಿ, ತಾಮ್ರವಾಗಲಿ, ಕಬ್ಬಿಣವಾಗಲಿ, ಮ್ಯಾಂಗನೀಸ್ ಆಗಲಿ, ಬೆಟ್ಟದ ಕಲ್ಲುಗಳಾಗಲಿ ಅವು ಉತ್ಪತ್ತಿಯಾಗುವುದಕ್ಕೆ ನೂರರಿಂದ ಐನೂರು ವರ್ಷಗಳು ಬೇಕಾಗುತ್ತದೆ ಎಂಬ ಪರಿಜ್ಞಾನವಿಲ್ಲ.

ಈ ಖನಿಜಗಳು ಬರಿದಾಗುವುದಕ್ಕೆ ಬಿಡದೇ ನಮ್ಮ ತಲೆಮಾರಿನಲ್ಲಿ ಇಂತಿಷ್ಟು ಮಾತ್ರ ತೆಗೆಯಲು ಶಾಸನ ಮಾಡಬೇಕು. ಉಳಿದ ಖನಿಜಗಳನ್ನು ಮುಂದಿನ ತಲೆಮಾರಿನ ಜನರಿಗಾಗಿ ಮೀಸಲಿಡಬೇಕು. ಅದು ಸರ್ಕಾರದ ಧರ್ಮ.ಇನ್ನಾದರು ಈ ಪ್ರಕೃತಿ ಸಂಪತ್ತುಗಳ ಲೂಟಿಗೆ ಕಡಿವಾಣ ಹಾಕಬೇಕು. ನ್ಯಾಯದ ದೃಷ್ಟಿಯಿಂದ ನೋಡಿದರೆ ಈ ಎಲ್ಲಾ ಪ್ರಕೃತಿ ಸಂಪತ್ತನ್ನು ಸೃಷ್ಟಿಕರ್ತ ತಾನು ಸೃಷ್ಟಿಸಿದ ಎಲ್ಲಾ ಮನುಷ್ಯರಿಗೆ ದೊರೆಯುವಂತಾಗಲಿ ಎಂದು ಬಗೆದಿದ್ದ. ಅನೀತಿಯುತ ಸರ್ಕಾರಗಳು ದೋಚುವ ಮಹಾನುಭಾವರ ಪರವಾಗಿ ನಿಂತು, ಜನರಿಗೆ ಅವುಗಳು ದೊರೆಯದಂತೆ ವಂಚನೆ ಮಾಡುತ್ತಿವೆ. ಪ್ರಕೃತಿ ಸಂಪತ್ತು ಎಲ್ಲರಿಗೂ ಸುಲಭ ಬೆಲೆಯಲ್ಲಿ ದೊರೆಯುವಂತಾಗಬೇಕಾದರೆ ಪ್ರಕೃತಿ ನೀಡಿರುವ ಎಲ್ಲಾ ಸಂಪತ್ತನ್ನು ರಾಷ್ಟ್ರೀಕರಣ ಮಾಡಬೇಕು. ಸರ್ಕಾರ ಈಗಲಾದರೂ ಪ್ರಕೃತಿ ಸಂಪತ್ತಿಗೆ ಪ್ರಜೆಗಳು ಒಡೆಯರು ಎಂದು ಘೋಷಿಸಲಿ.


ಇದನ್ನೂ ಓದಿ: ನೂರರ ನೋಟ: ಕರ ನಿರಾಕರಣೆಯನ್ನು ನೆನಪಿಸಿದ ದೆಹಲಿ ರೈತ ಹೋರಾಟ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರತಿಭಟನೆಗೆ ಹೋಗುವ ಮಹಿಳೆಯರು ಗ್ಯಾಂಗ್‌ರೇಪ್‌ ಆನಂದಿಸುತ್ತಾರೆ ಎಂದಿದ್ದ ಟಿ.ಜಿ. ಮೋಹನ್‌ದಾಸ್‌ ವಿರುದ್ಧ ಎಫ್‌ಐಆರ್‌ ದಾಖಲು

ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವವರ ಮೇಲೆ, ನನ್ನ ಕೈಯಲ್ಲಿ ಅಧಿಕಾರವಿದ್ದರೆ ಗುಂಡು ಹಾರಿಸುತ್ತಿದ್ದೆ ಎಂದು ಇತ್ತೀಚಿನ ಯೂಟ್ಯೂಬ್ ವೀಡಿಯೊದಲ್ಲಿ ಹೇಳಿಕೆ ನೀಡಿದ್ದ ಹಿಂದುತ್ವವಾದಿ ಚಿಂತಕ ಟಿ.ಜಿ. ಮೋಹನ್‌ದಾಸ್ ವಿರುದ್ಧ ತಿರುವನಂತಪುರಂ ಸಿಟಿ...

ಫ್ರಾನ್ಸ್‌ನಲ್ಲಿ ಕೆಲಸದ ಸಮಯ ಟ್ರ್ಯಾಕಿಂಗ್ ಲೋಪ: ಇನ್ಫೋಸಿಸ್‌ಗೆ ₹1.9 ಕೋಟಿ ದಂಡ: ನಾರಾಯಣಮೂರ್ತಿಯವರ ‘70 ಗಂಟೆ ಶ್ರಮ’ದ ಮಾದರಿ ಟ್ರೋಲ್

ಭಾರತೀಯ ಐಟಿ ರಫ್ತು ಸೇವಾ ರಂಗದ ಬೃಹತ್ ಸಂಸ್ಥೆಯಾದ ಇನ್ಫೋಸಿಸ್‌ಗೆ ಫ್ರಾನ್ಸ್‌ನಲ್ಲಿ ಹಿನ್ನಡೆಯಾಗಿದೆ. ಉದ್ಯೋಗಿಗಳ ಕೆಲಸದ ಸಮಯವನ್ನು ದಾಖಲಿಸುವ ವ್ಯವಸ್ಥೆಯಲ್ಲಿನ ನ್ಯೂನತೆಗಳು ಹಾಗೂ ಸ್ಥಳೀಯ ಕಾರ್ಮಿಕ ನಿಯಮಾವಳಿಗಳ ಪಾಲನೆಯಲ್ಲಿ ಕಂಡುಬಂದ ಲೋಪಗಳ ಹಿನ್ನೆಲೆಯಲ್ಲಿ...

ವೋಟರ್ ಐಡಿ, ಬ್ಯಾಂಕ್ ಪಾಸ್‌ಬುಕ್, ಆಧಾರ್, ಜಮೀನಿನ ಹಕ್ಕು ಪತ್ರ ಇದ್ದ ಮಾತ್ರಕ್ಕೆ ಭಾರತೀಯ ಪ್ರಜೆಯಾಗಲ್ಲ: ಕಲ್ಕತ್ತಾ ಹೈಕೋರ್ಟ್

ಆಧಾರ್ ಕಾರ್ಡ್, ಪಾನ್ ಕಾರ್ಡ್, ಮತದಾರರ ಗುರುತಿನ ಚೀಟಿ, ಬ್ಯಾಂಕ್ ಪಾಸ್‌ಬುಕ್ ಮತ್ತು ಪಿತ್ರಾರ್ಜಿತ ಜಮೀನಿನ ದಾಖಲೆಗಳು ಭಾರತೀಯ ಪೌರತ್ವವನ್ನು ನಿರೂಪಿಸಲು ಅಂತಿಮ ಅಥವಾ ನಿರ್ಣಾಯಕ ಪುರಾವೆಗಳಲ್ಲ ಎಂದು ಕಲ್ಕತ್ತಾ ಹೈಕೋರ್ಟ್ ಮಹತ್ವದ...

‘ನಿಮ್ಮ ಸಮಯ ಬಂದಿದೆ’: ಟೌನ್‌ಶಿಪ್ ಯೋಜನೆ ವಿರುದ್ಧದ ಪ್ರತಿಭಟನೆಗೆ 500 ದಿನ: ‘Gen-Z’ ಯುವಕರ ಬೆಂಬಲ ಕೋರಿದ ಬಿಡದಿ ರೈತರು

ಬೆಂಗಳೂರು: ಪ್ರಸ್ತಾವಿತ ಬಿಡದಿ ಟೌನ್‌ಶಿಪ್ ಯೋಜನೆ ವಿರುದ್ಧ ಕೃಷಿ ಭೂಮಿ ಉಳಿವಿಗಾಗಿ ನಡೆಯುತ್ತಿರುವ ರೈತರ ಸುದೀರ್ಘ ಹೋರಾಟವು ಇದೀಗ ಒಂದು ಪ್ರಮುಖ ಘಟ್ಟಕ್ಕೆ ಬಂದು ತಲುಪಿದೆ. ಭೂಸ್ವಾಧೀನದ ವಿರುದ್ಧ ಸತತವಾಗಿ ನಡೆಯುತ್ತಿರುವ ಈ...

ಕೊಡಗಿನ ಆದಿವಾಸಿ ಹಾಡಿಗಳಲ್ಲಿ ಎಸ್‌ಐಆರ್ ಅವ್ಯವಸ್ಥೆ : ಬಿಎಲ್‌ಒಗಳಿಗೆ ತರಬೇತಿಯ ಕೊರತೆ, ಇನ್ನೂ ತಲುಪದ ಗಣತಿ ಫಾರಂ

ಕರ್ನಾಟಕದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಬಹಳ ಯಶಸ್ವಿಯಾಗಿ ನಡೆಯುತ್ತಿದೆ, ಮತದಾರರಿಗೆ ಎಲ್ಲಾ ರೀತಿಯ ಸಹಾಯಗಳನ್ನು ಒದಗಿಸಲಾಗುತ್ತಿದೆ ಎಂದು ರಾಜ್ಯ ಮುಖ್ಯ ಚುನಾವಣಾ ಆಯುಕ್ತ ಅನ್ಬುಕುಮಾರ್ ಅವರು ಪದೇ...

SIR: ಉಡುಪಿಯಲ್ಲಿ ಕರ್ತವ್ಯನಿರತ BLO ಮೇಲೆ ಹಲ್ಲೆಗೆತ್ನಿಸಿದ ಮಾಜಿ ಪಂಚಾಯತ್ ಅಧ್ಯಕ್ಷ, FIR ದಾಖಲು

ಚುನಾವಣಾ ಮತದಾರರ ಪಟ್ಟಿ ಪರಿಷ್ಕರಣೆ (SIR) ಕರ್ತವ್ಯದಲ್ಲಿದ್ದ ಅಂಗನವಾಡಿ ಕಾರ್ಯಕರ್ತೆ ಹಾಗೂ ಬಿಎಲ್‌ಒ (BLO) ಮಹಿಳೆ ಮೇಲೆ ಕರ್ತವ್ಯಕ್ಕೆ ಅಡ್ಡಿಪಡಿಸಿ, ಅವಾಚ್ಯ ಶಬ್ದಗಳಿಂದ ನಿಂದಿಸಿ, ಕೊಲೆ ಬೆದರಿಕೆ ಹಾಕಿದ ಗಂಭೀರ ಆರೋಪ ಉಡುಪಿ...

ಕೋಟ್ಯಾಂತರ ವಿದ್ಯಾರ್ಥಿಗಳ ಭವಿಷ್ಯದ ಜೊತೆ NTA ಚೆಲ್ಲಾಟ: RTI ನಲ್ಲಿ ಬಯಲಾಯ್ತು NTA ಕರ್ಮಕಾಂಡ

ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ಎನ್ನುವ ಈ ಸರ್ಕಾರಿ ಸಂಸ್ಥೆಯ ಮೇಲೆ ಪ್ರತಿವರ್ಷ ಕೋಟ್ಯಂತರ ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಕನಸುಗಳನ್ನು ಇಟ್ಟುಕೊಳ್ಳುತ್ತಾರೆ. 2018ರಲ್ಲಿ ಸ್ಥಾಪನೆಯಾದ ದಿನದಿಂದ ಇಲ್ಲಿಯವರೆಗೆ ಎನ್‌ಟಿಎ ಸುಮಾರು 270ಕ್ಕೂ ಹೆಚ್ಚು...

ಬಾಗಲಕೋಟೆ: ಪತಿಯಿಂದ 23 ವರ್ಷದ ಪತ್ನಿಯ ಕ್ರೂರ ಕೊಲೆ, ಪೋಷಕರಿಗೆ ವೀಡಿಯೊ ಕರೆ ಮಾಡಿ ಮಗಳ ಸಾವು-ಬದುಕಿನ ಹೋರಾಟ ತೋರಿಸಿದ ವಿಕೃತ ಪತಿ

ಬಾಗಲಕೋಟೆ: ಪತಿಯೋರ್ವ ತನ್ನ 23 ವರ್ಷದ ಪತ್ನಿಯ ಮೇಲೆ ವಿವಾಹೇತರ ಅನೈತಿಕ ಸಂಬಂಧದ ಶಂಕೆ ವ್ಯಕ್ತಪಡಿಸಿ, ಆಕೆಯ ಮೇಲೆ ಮರದ ದಿಮ್ಮಿಯಿಂದ ಕ್ರೂರವಾಗಿ ಹಲ್ಲೆ ನಡೆಸಿ, ತದನಂತರ ನೇಣಿಗೆ ಬಿಗಿದು ಅತ್ಯಂತ ಅಮಾನವೀಯವಾಗಿ...

ಕಾನೂನು-ಸುವ್ಯವಸ್ಥೆಗೆ ವಿದ್ಯಾರ್ಥಿಗಳು ಸಮಸ್ಯೆಯಾಗುತ್ತಾರೆ ಎಂದು ಪರಿಗಣಿಸಿದ್ದು ಏಕೆ: ಅಭಿಷೇಕ್ ಬ್ಯಾನರ್ಜಿ

ರಾಷ್ಟ್ರ ರಾಜಧಾನಿ ದೆಹಲಿ ಮತ್ತು ದೆಶದಾದ್ಯಂತ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಗಳ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಭಾರೀ ಪೊಲೀಸ್ ಬಲಪ್ರಯೋವನ್ನು ವಿಪಕ್ಷಗಳು ಇಂದು ಲೋಕಸಭೆಯಲ್ಲಿ ಖಂಡಿಸಿವೆ. ವಿದ್ಯಾರ್ಥಿಗಳ...

ಪಬ್ಲಿಕ್ ಟಿವಿ ನಿರೂಪಕ ಅರುಣ್ ಬಡಿಗೇರ್ ವಿರುದ್ದ ಮೈಸೂರಿನಲ್ಲಿ ದೂರು ದಾಖಲು

ಸಂವಿಧಾನಬದ್ಧ ಮೀಸಲಾತಿಯ ಕುರಿತು ಅತ್ಯಂತ ನಿಂದನಾತ್ಮಕ, ಅವಹೇಳನಕಾರಿ ಹಾಗೂ ಸಮಾಜದಲ್ಲಿ ದ್ವೇಷ ಪ್ರಚೋದಿಸುವ ರೀತಿಯ ಹೇಳಿಕೆ ನೀಡಿರುವ 'ಪಬ್ಲಿಕ್ ಟಿವಿ' ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಮೈಸೂರಿನಲ್ಲಿ ಕಾನೂನು ಕ್ರಮಕ್ಕೆ ಆಗ್ರಹಿಸಿ ಪೊಲೀಸ್‌...