Homeಅಂಕಣಗಳುಇನ್ನಾದರು ಈ ಪ್ರಕೃತಿ ಸಂಪತ್ತುಗಳ ಲೂಟಿಗೆ ಕಡಿವಾಣ ಹಾಕಬೇಕು: ಎಚ್ ಎಸ್ ದೊರೆಸ್ವಾಮಿ

ಇನ್ನಾದರು ಈ ಪ್ರಕೃತಿ ಸಂಪತ್ತುಗಳ ಲೂಟಿಗೆ ಕಡಿವಾಣ ಹಾಕಬೇಕು: ಎಚ್ ಎಸ್ ದೊರೆಸ್ವಾಮಿ

- Advertisement -
- Advertisement -

ಗುಡ್ಡ ಕರಗಿಸುವವರ ಹಾವಳಿ ಕಳೆದ 40 ವರ್ಷಗಳಿಂದಲೂ ನಡೆಯುತ್ತಿದೆ. ಕಲ್ಲುಬಂಡೆ ಡಿ.ಕೆ. ಶಿವಕುಮಾರ್ ಅವರ ತಮ್ಮ ಎಂಪಿ. ಡಿ.ಕೆ. ಸುರೇಶ್, ಮಾಲೂರು ಶಾಸಕ ನಂಜೇಗೌಡ, ಮೇಲುಕೋಟೆ ಶಾಸಕ ಪುಟ್ಟರಾಜು, ಚಾಮರಾಜನಗರ ಶಾಸಕ ಪುಟ್ಟರಂಗಶೆಟ್ಟಿ ಅವರ ಮಗ, ಅರಸೀಕೆರೆ ಶಾಸಕ ಶಿವಲಿಂಗೇಗೌಡ, ಹುನಗುಂದ ಶಾಸಕ ದೊಡ್ಡನಗೌಡ ಪಾಟೀಲ, ಬೆಳಗಾವಿಯ ಶಾಸಕ ಸತೀಶ್ ಜಾರಕಿಹೊಳಿ, ಶಾಸಕ ಅಮರೇಗೌಡ, ಬೈಯ್ಯಾಪುರದಲ್ಲಿ ಅವರ ಅಣ್ಣನ ಮಗ ಶರಣಗೌಡ ಪಾಟೀಲ್, ಕೊಪ್ಪಳ ಸಂಸದ ಸಂಗಣ್ಣ ಕರಡಿ ಅವರ ಮಗ ಅಮರೇಶ್ ಕರಡಿ ಶಾಸಕ ಹಾಲಪ್ಪ ಆಚಾರ್, ರಾಘವೇಂದ್ರ ಹಿಟ್ನಾಳ್, ಮಾಜಿ ಸಚಿವ ಬಸವರಾಜ ರಾಯರೆಡ್ಡಿ ಕಲ್ಲು ಕರಗಿಸುವ ಗುತ್ತಿಗೆ ಪಡೆದಿದ್ದಾರೆ. ಇವರೆಲ್ಲಾ ಭೂ ವಿಜ್ಞಾನ ನಿರ್ದೇಶಕರಿಂದ ಪರವಾನಗಿ ಪಡೆದು ಗುಡ್ಡ ಕರಗಿಸುವವರು. ಅಕ್ರಮವಾಗಿ ಬೆಟ್ಟಗಳನ್ನು ಕರಗಿಸುವವರ ವಿರುದ್ಧ ನ್ಯಾಯಾಲಯಕ್ಕೆ 2015-2020ರವರೆಗೆ 9076 ಪ್ರಕರಣಗಳು ದಾಖಲಾಗಿವೆ.

ಶಿವಮೊಗ್ಗ ಜಿಲ್ಲೆಯಲ್ಲಿ ಕಲ್ಲು ತೆಗೆಯುತ್ತಿರುವ ಕ್ವಾರಿಗಳ ಸಂಖ್ಯೆ 150. ಅವುಗಳಲ್ಲಿ ಅಕ್ರಮವಾಗಿ ದೋಚುತ್ತಿರುವುದು 73 ಕ್ವಾರಿಗಳು. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 120 ಕ್ವಾರಿಗಳಲ್ಲಿ ಕಲ್ಲು ಗಣಿಗಾರಿಕೆ ನಡೆಯುತ್ತಿದೆ. ಸ್ಥಳೀಯ ರಾಜಕಾರಣಿಗಳಲ್ಲದೇ ಹೊರ ಜಿಲ್ಲೆಗಳ ರಾಜಕಾರಣಿಗಳು ಇದ್ದಾರೆ. ಅಕ್ರಮ ಗಣಿಗಾರಿಕೆ ತಡೆಗಟ್ಟುವೆನೆಂದು ಗಣಿ ಮಂತ್ರಿ ಗುಡುಗುತ್ತಾರೆ. ಬೇಲಿಯೇ ಎದ್ದು ಹೊಲ ಮೇಯುವಾಗ ಪುಂಡ ಹಸುಗಳು ಹೊಲಕ್ಕೆ ನುಗ್ಗದೇ ಇರುತ್ತವೆಯೇ? ಶಾಸಕರೇ ಭ್ರಷ್ಟರಾದ ಮೇಲೆ ಇನ್ನು ದುರುಳ ಕಲ್ಲು ಉದ್ಯಮಿಗಳ ಭ್ರಷ್ಟಾಚಾರವನ್ನು ತಡೆಗಟ್ಟುವವರು ಯಾರು?

ಯಡಿಯೂರಪ್ಪನವರಿಗೆ ತಮ್ಮ ಸುತ್ತ ಇರುವ ಭ್ರಷ್ಟರ ಮೇಲೆ ಕ್ರಮ ಕೈಗೊಳ್ಳಲು ಸಾಧ್ಯವೇ? ಆ ಜನರ ನೆರವಿನಿಂದ ಅವರ ಸಿಂಹಾಸನ ಉಳಿದಿದೆ. ಅವರನ್ನು ಎದುರುಹಾಕಿಕೊಂಡರೆ ಅವರಿಗೆ ಉಳಿಗಾಲವಿದೆಯೇ? ಮುಖ್ಯಮಂತ್ರಿ ಸ್ಥಾನದಲ್ಲಿ ಕೂರಲು ಬಿಡುತ್ತಾರಾ?

ಶಾಸಕರಿಗೂ, ಮಂತ್ರಿಗಳಿಗೂ, ಅಧಿಕಾರಿಗಳಿಗೂ ಒಂದು ಸಂದೇಶ ಕೊಡಲು ಬಯಸುತ್ತೇನೆ. ಗಾಂಧೀಜಿ ಎಚ್ಚರಿಸಿದಂತೆ ಪ್ರಕೃತಿ ಮಾನವನ ಆಸೆಯನ್ನು ಸಹಿಸಬಲ್ಲದು. ದುರಾಸೆಯನ್ನು ಸಹಿಸಲು ಸಾಧ್ಯವೇ? ನೀವೆಲ್ಲಾ ದುರಾಸೆಯನ್ನು ಸಹಿಸಿಕೊಂಡಿದ್ದೀರಿ. ಪ್ರಕೃತಿ ಬೆಟ್ಟ ಗುಡ್ಡಗಳನ್ನು ಸೃಷ್ಟಿ ಮಾಡಿದೆ. ಅರಣ್ಯ ಸೃಷ್ಟಿ ಮಾಡಿದೆ. ಖನಿಜಗಳನ್ನು ಭೂಗರ್ಭದಲ್ಲಿ ಅಡಗಿಸಿಟ್ಟಿದೆ. ಅದು ಮುಗಿದರೆ ಮತ್ತೆ ಉತ್ಪತ್ತಿಯಾಗದು. ಸಮುದ್ರದಲ್ಲಿ ಹವಳ ಮುಂತಾದ ಬೆಲೆಬಾಳುವ ಅಲಂಕಾರಿಕ ವಸ್ತುಗಳನ್ನು ತಯಾರಿಸುವ ಮುತ್ತು ರತ್ನಗಳನ್ನು ಹುದುಗಿಸಿಟ್ಟ ಪಶ್ಚಿಮ ಘಟ್ಟಗಳಂತಹ ಬೃಹದಾಕಾರದ ಅರಣ್ಯಗಳಿವೆ. ಕಪ್ಪತಗುಡ್ಡದಲ್ಲಿ ಬಂಗಾರ ಇದೆ ಎಂದು ಅದನ್ನು ಆಕ್ರಮಣ ಮಾಡಲು ಹೊಂಚುಹಾಕುತ್ತಿರುವ ಪಟ್ಟಭದ್ರರು ಇದ್ದಾರೆ.

PC : News Express

ಭಾರತದಲ್ಲಿ ದೊರೆಯುವ ಎಲ್ಲಾ ಖನಿಜಗಳನ್ನು ಬಗೆದು ದೋಚಬೇಕೆಂಬ, ಬೆಟ್ಟಗಳನ್ನೆಲ್ಲಾ ತಮ್ಮ ತಲೆಮಾರಿನಲ್ಲೇ ಕರಗಿಸಿ ತಮ್ಮ ತಿಜೋರಿ ತುಂಬಿಕೊಳ್ಳಲು, ಅರಣ್ಯವನ್ನೆಲ್ಲಾ ಕೊಳ್ಳೆ ಹೊಡೆದು ಬರಿದಾಗಿಸಬೇಕೆಂಬ ದುರಾತ್ಮರ ಮತ್ತು ಸಮುದ್ರದ ಆದಳದಲ್ಲಿರುವ ಪೆಟ್ರೋಲಿಯಂ, ಹವಳ ಮತ್ತು ಮುತ್ತುಗಳನ್ನು ದೋಚಬೇಕೆಂದಿರುವ ಕಾರ್ಪೋರೇಟ್ ಕುಳಗಳದ್ದು ಒಂದೇ ಸಂಕಲ್ಪ. ಅದೇನೆಂದರೆ ನಮ್ಮ ತಲೆಮಾರಿನಲ್ಲೇ ಈ ಎಲ್ಲವನ್ನೂ ದೋಚಿ ಮುಂದಿನ ತಲೆಮಾರಿಗೆ ಅವು ಯಾವುದೂ ಲಭ್ಯವಾಗದಂತೆ ಮಾಡುವ ಮ್ಯಾಡ್ ರೇಸ್‌ನಲ್ಲಿ ಮುಳುಗುವುದು. ಇವರಿಗೆಲ್ಲಾ ದುಡ್ಡೇ ಆರಾಧ್ಯ ದೈವ. ದುಡ್ಡಿಗಾಗಿ ಇವರು ಎಂತಹ ಪಾತಕ ಮಾಡಲು ಹೇಸುವವರಲ್ಲ.

ನಮ್ಮ ಸರ್ಕಾರಗಳು ಈ ದೋಚುವ ಜನರಿಗೆ ಪೂರ್ಣ ಸಹಕಾರ ಕೊಡುತ್ತದೆ. 32% ಅರಣ್ಯ ಇರಬೇಕೆಂಬ ಕಾಳಜಿ ಸರ್ಕಾರಕ್ಕಿಲ್ಲ. ಅದು ಈಗ 13% ಇಳಿದಿರಬಹುದು. ಆನೆ, ಹುಲಿ, ಕರಡಿ, ತೋಳಗಳಿಗೆ ಕಾಡು ಕಿರಿದಾಗುತ್ತಿರುವುದರಿಂದ ನೆಲೆತಪ್ಪಿ ಆಹಾರ, ನೀರು, ಅಭಾವ ಕಾಣಿಸಿರುವುದರಿಂದ ಅವು ಈಗ ಕಾಡು ಬಿಟ್ಟು ನಾಡಿಗೆ ಅಧಿಕ ಸಂಖ್ಯೆಯಲ್ಲಿ ವಲಸೆ ಬರುತ್ತಿವೆ. ನಾಡಿನಲ್ಲಿ ವಾಸಿಸುವ ಜನಕ್ಕೆ ನೆಮ್ಮದಿ ತಪ್ಪಿದೆ. ಕಾಡುಪ್ರಾಣಿಗಳ ಭಯ ಕಾಡುತ್ತಿದೆ. ಅರಣ್ಯವಾಸಿ ಹುಲಿ, ಚಿರತೆಗಳೊಡನೆ ಅನಿವಾರ್ಯವಾಗಿ ಸಹಬಾಳ್ವೆ ಮಾಡುವ ಅನಿವಾರ್ಯತೆ ಉಂಟಾಗಿದೆ. ಸರ್ಕಾರಕ್ಕೆ, ಖನಿಜ ಇಲಾಖೆಯ ಅಧಿಕಾರಿಗಳಿಗೆ ಚಿನ್ನವಾಗಲಿ, ಬೆಳ್ಳಿಯಾಗಲಿ, ತಾಮ್ರವಾಗಲಿ, ಕಬ್ಬಿಣವಾಗಲಿ, ಮ್ಯಾಂಗನೀಸ್ ಆಗಲಿ, ಬೆಟ್ಟದ ಕಲ್ಲುಗಳಾಗಲಿ ಅವು ಉತ್ಪತ್ತಿಯಾಗುವುದಕ್ಕೆ ನೂರರಿಂದ ಐನೂರು ವರ್ಷಗಳು ಬೇಕಾಗುತ್ತದೆ ಎಂಬ ಪರಿಜ್ಞಾನವಿಲ್ಲ.

ಈ ಖನಿಜಗಳು ಬರಿದಾಗುವುದಕ್ಕೆ ಬಿಡದೇ ನಮ್ಮ ತಲೆಮಾರಿನಲ್ಲಿ ಇಂತಿಷ್ಟು ಮಾತ್ರ ತೆಗೆಯಲು ಶಾಸನ ಮಾಡಬೇಕು. ಉಳಿದ ಖನಿಜಗಳನ್ನು ಮುಂದಿನ ತಲೆಮಾರಿನ ಜನರಿಗಾಗಿ ಮೀಸಲಿಡಬೇಕು. ಅದು ಸರ್ಕಾರದ ಧರ್ಮ.ಇನ್ನಾದರು ಈ ಪ್ರಕೃತಿ ಸಂಪತ್ತುಗಳ ಲೂಟಿಗೆ ಕಡಿವಾಣ ಹಾಕಬೇಕು. ನ್ಯಾಯದ ದೃಷ್ಟಿಯಿಂದ ನೋಡಿದರೆ ಈ ಎಲ್ಲಾ ಪ್ರಕೃತಿ ಸಂಪತ್ತನ್ನು ಸೃಷ್ಟಿಕರ್ತ ತಾನು ಸೃಷ್ಟಿಸಿದ ಎಲ್ಲಾ ಮನುಷ್ಯರಿಗೆ ದೊರೆಯುವಂತಾಗಲಿ ಎಂದು ಬಗೆದಿದ್ದ. ಅನೀತಿಯುತ ಸರ್ಕಾರಗಳು ದೋಚುವ ಮಹಾನುಭಾವರ ಪರವಾಗಿ ನಿಂತು, ಜನರಿಗೆ ಅವುಗಳು ದೊರೆಯದಂತೆ ವಂಚನೆ ಮಾಡುತ್ತಿವೆ. ಪ್ರಕೃತಿ ಸಂಪತ್ತು ಎಲ್ಲರಿಗೂ ಸುಲಭ ಬೆಲೆಯಲ್ಲಿ ದೊರೆಯುವಂತಾಗಬೇಕಾದರೆ ಪ್ರಕೃತಿ ನೀಡಿರುವ ಎಲ್ಲಾ ಸಂಪತ್ತನ್ನು ರಾಷ್ಟ್ರೀಕರಣ ಮಾಡಬೇಕು. ಸರ್ಕಾರ ಈಗಲಾದರೂ ಪ್ರಕೃತಿ ಸಂಪತ್ತಿಗೆ ಪ್ರಜೆಗಳು ಒಡೆಯರು ಎಂದು ಘೋಷಿಸಲಿ.


ಇದನ್ನೂ ಓದಿ: ನೂರರ ನೋಟ: ಕರ ನಿರಾಕರಣೆಯನ್ನು ನೆನಪಿಸಿದ ದೆಹಲಿ ರೈತ ಹೋರಾಟ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...

ನಾವು ದಾಖಲೆಗಳನ್ನು ಕೊಟ್ಟರೂ ನಮ್ಮನ್ನು ಹಕ್ಕುಗಳಿಂದ ವಂಚಿಸಲಾಗುತ್ತದೆ ಎಚ್ಚರ- ಡಿ.ಹೆಚ್.ಕಂಬಳಿ

ಸಿಂಧನೂರು: SIR ವಿರೋಧಿಸಿ ನಡೆಸಲಾಗುತ್ತಿರುವ ಜಾಗೃತಿ ಜಾಥ ರಾಯಚೂರು ಜಿಲ್ಲೆಯ ಸಿಂಧನೂರು ಪ್ರವೇಶಿಸಿತ್ತು. ನಗರದ ಜಮಾತ್ ಎ ಇಸ್ಲಾಂ ಹಿಂದ್ ಕಚೇರಿಯಲ್ಲಿ ಹಲವು ಸಮುದಾಯದ ಮುಖಂಡರು ಹಾಗೂ ಹೋರಾಟಗಾರರು ಹಾಜರಿದ್ದರು. ಜಾಥಾದ ಭಾಗವಾಗಿ...

ಹುಬ್ಬಳ್ಳಿಯಲ್ಲಿ ಎಸ್‌ಐಆರ್ ವಿರೋಧಿ ಜನಜಾಗೃತಿ ಸಭೆ ; ಒಗ್ಗಟ್ಟಿನ ಹೋರಾಟಕ್ಕೆ ಕರೆ

ಚುನಾವಣಾ ಆಯೋಗ ಕೈಗೊಂಡಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರೋಧಿಸಿ ಹುಬ್ಬಳ್ಳಿಯ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಜ್ಞಾನ ಮಂಟಪದಲ್ಲಿ ಮಂಗಳವಾರ (ಜೂ.16) ಸಂಜೆ ವಿವಿಧ ಜನ ಸಂಘಟನೆಗಳು ಮತ್ತು...

ಎಸ್ಐಆರ್ ಮೂಲಕ ಮನುವಾದದ ಮರು ಜಾರಿಗೆ ಯತ್ನ : ಡಾ. ಗಣೇಶ್ ದೇವಿ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್) ಮೂಲಕ ಮನುವಾದದ ಮರು ಜಾರಿಗೆ ಪ್ರಯತ್ನಿಸಲಾಗುತ್ತಿದೆ ಎಂದು ಪದ್ಮಶ್ರೀ ಪುರಸ್ಕೃತ ಡಾ. ಗಣೇಶ್ ದೇವಿ ಹೇಳಿದರು. ಮಂಗಳವಾರ (ಜೂ.16) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಬಳಿಯ...

ಎಡದೊರೆಯ ನಾಡಿನಲ್ಲಿ ಮೊಳಗಿದ SIR ವಿರೋಧಿ ಕೂಗು

ಕರ್ನಾಟಕದಲ್ಲಿ ಅವೈಜ್ಞಾನಿಕವಾಗಿ ಜಾರಿಮಾಡಲು ಹೊರಟಿರುವ SIR ಅನ್ನು ವಿರೋಧಿಸಿ ಜನಜಾಗೃತಿ ಜಾಥಾವು ಇಂದು ಕಲ್ಯಾಣ ಕರ್ನಾಟಕ ಭಾಗದ ರಾಯಚೂರು ಜಿಲ್ಲೆಯನ್ನು ಪ್ರವೇಶಿಸಿತು. ಹೋರಾಟಗಳ ನೆಲ ರಾಯಚೂರಿನಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಹೋರಾಟಗಾರರು, ವಿವಿಧ ಸಮುದಾಯದ...

ಜೂನ್ 20ರ ಬೆಂಗಳೂರಿನ ‘SIR’ ವಿರೋಧಿ ಸಮಾವೇಶಕ್ಕೆ ಶಿವಮೊಗ್ಗದಿಂದ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಹಿರಿಯ ವಕೀಲರಾದ ಶ್ರೀಪಾಲ್ ಕರೆ

ಜೂನ್ 20 ರಂದು ಬೆಂಗಳೂರಿನಲ್ಲಿ ಹಮ್ಮಿಕೊಳ್ಳಲಾಗಿರುವ ‘SIR’ ವಿರೋಧಿ ಜನಜಾಗೃತಿ ಸಮಾವೇಶಕ್ಕೆ ಶಿವಮೊಗ್ಗ ಜಿಲ್ಲೆಯಿಂದ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಭಾಗವಹಿಸಬೇಕೆಂದು ಹಿರಿಯ ವಕೀಲರಾದ ಶ್ರೀಪಾಲ್ ಕರೆ ನೀಡಿದ್ದಾರೆ. ನಗರದ ಪತ್ರಿಕಾ ಭವನದಲ್ಲಿ ಪ್ರಗತಿಪರ ಸಂಘಟನೆಗಳ...