Homeಅಂತರಾಷ್ಟ್ರೀಯಟೀಕೆಗೆ ಭಯಪಡಬಾರದು, ಇದು ಪಾಕಿಸ್ತಾನ, ಭಾರತವಲ್ಲ!: ಪಾಕ್ ನ್ಯಾಯಾಧೀಶನ ಹೇಳಿಕೆ

ಟೀಕೆಗೆ ಭಯಪಡಬಾರದು, ಇದು ಪಾಕಿಸ್ತಾನ, ಭಾರತವಲ್ಲ!: ಪಾಕ್ ನ್ಯಾಯಾಧೀಶನ ಹೇಳಿಕೆ

ನೀವು ಪ್ರತಿಭಟಿಸಲು ಬಯಸಿದರೆ ಪೊಲೀಸರ ಅನುಮತಿ ಪಡೆಯಿರಿ. ನಿಮಗೆ ಅನುಮತಿ ಸಿಗದಿದ್ದರೆ, ನ್ಯಾಯಾಲಯವಿದೆ ಎಂದು ಅವರು ಹೇಳಿದ್ದಾರೆ.

- Advertisement -
- Advertisement -

“ಎಲ್ಲರ ಸಾಂವಿಧಾನಿಕ ಹಕ್ಕುಗಳನ್ನು ರಕ್ಷಿಸಬೇಕು. ಇದು ಪಾಕಿಸ್ತಾನ, ಭಾರತವಲ್ಲ” ಹೀಗೆಂದು ಹೇಳಿದವರು ಪಾಕಿಸ್ತಾನದ ಇಸ್ಲಾಮಾಬಾದ್ ಹೈಕೋರ್ಟ್‌ನ ಮುಖ್ಯ ನ್ಯಾಯಾಧೀಶ ಆಥರ್ ಮಿನಲ್ಲಾ!..

ದೇಶದ್ರೋಹ ಮತ್ತು ಭಯೋತ್ಪಾದನೆಯನ್ನು ಪ್ರಚೋದಿಸಿದ ಆರೋಪಕ್ಕೆ ಸಂಬಂಧಿಸಿದ ಪ್ರಕರಣವೊಂದನ್ನು ಸೋಮವಾರ ವಿಚಾರಣೆ ನಡೆಸುತ್ತಿದ್ದ ಅವರು, ಎಲ್ಲದ್ದಕ್ಕೂ ದೇಶದ್ರೋಹ ಪ್ರಕರಣ ದಾಖಲಿಸಲು ಇದು ಭಾರತವಲ್ಲ ಎಂಬರ್ಥದ ಹೇಳಿಕೆ ನೀಡುವ ಮೂಲಕ ಭಾರತದಲ್ಲಿ ಪ್ರತಿಭಟನಾಕಾರರ ಸಾಂವಿಧಾನಿಕ ಹಕ್ಕುಗಳನ್ನು ಉಲ್ಲಂಘಿಸಲಾಗುತ್ತಿದೆ ಎಂದು ವ್ಯಾಖ್ಯಾನಿಸಿದ್ದಾರೆ ಎಂದು ದಿ ವೈರ್ ವರದಿ ಮಾಡಿದೆ.

ಪಶ್ತುನ್ ತಹಾಫುಜ್ ಮೂವ್ಮೆಂಟ್ ಪಕ್ಷದ ಮುಖಂಡ ಮತ್ತು ಖ್ಯಾತ ಮಾನವ ಹಕ್ಕುಗಳ ಹೋರಾಟಗಾರ ಮಂಜೂರ್ ಪಶ್ತೀನ್ ಅವರನ್ನು ಜನವರಿ 27 ರಂದು ಪೇಶಾವರದಲ್ಲಿ ಬಂಧಿಸಲಾಗಿತ್ತು. ಅವರ ಬಂಧನ ವಿರೋಧಿಸಿ ಜನವರಿ 28 ರಂದು ಪ್ರತಿಭಟಿಸಿದ ಅವಾಮಿ ವರ್ಕರ್ಸ್ ಪಾರ್ಟಿ ಮತ್ತು ಪಶ್ತುನ್ ತಹಾಫುಜ್ ಮೂವ್ಮೆಂಟ್ ಪಕ್ಷದ 23 ಕಾರ್ಯಕರ್ತರನ್ನು ಇಸ್ಲಾಮಾಬಾದ್ ಪೊಲೀಸರು ಬಂಧಿಸಿದ್ದಾರೆ.

ಜನವರಿ 28 ರಂದು ಇಸ್ಲಾಮಾಬಾದ್ ಪೊಲೀಸರು ಪ್ರತಿಭಟನಾಕಾರರನ್ನು ಬಂಧಿಸಿ, ಗುಂಪಿನಲ್ಲಿದ್ದ ಇಬ್ಬರು ಪ್ರಮುಖ ವ್ಯಕ್ತಿಗಳ ಮೇಲೆ ದೇಶದ್ರೋಹದ ಪ್ರಕರಣ ದಾಖಲಿಸಿದ್ದರು.  ಫೆಬ್ರವರಿ 2 ರಂದು ಅವರ ವಿರುದ್ಧದ ದೇಶದ್ರೋಹ ಆರೋಪವನ್ನು ಕೈಬಿಡಲಾಗಿದೆ ಎಂದು ಸರ್ಕಾರ ನ್ಯಾಯಾಲಯಕ್ಕೆ ತಿಳಿಸಿದ್ದರೂ, ಭಯೋತ್ಪಾದನಾ ವಿರೋಧಿ ಕಾಯ್ದೆ (ಎಟಿಎ), 1997 ರ ಸೆಕ್ಷನ್ 7 ಅನ್ನು ಎಫ್‌ಐಆರ್‌ಗೆ ಸೇರಿಸಿದ್ದಾರೆ. ಪ್ರತಿಭಟನಾಕಾರರ ವಿರುದ್ಧ ಈ ಆರೋಪಗಳನ್ನು ಯಾವ ಆಧಾರದ ಮೇಲೆ ಸೇರಿಸಲಾಯಿತು ಎಂಬುದರ ಕುರಿತು ಮ್ಯಾಜಿಸ್ಟ್ರೇಟ್‌ ವಿವರಣೆ ನೀಡುವಂತೆ ನ್ಯಾಯಾಧೀಶ ಮಿನಲ್ಲಾ ಕೇಳಿದ್ದಾರೆ.

ಇದನ್ನೂ ಓದಿ: ರೈತರ ವಿರುದ್ಧವೂ ಝಳಪಿಸಿದ ಹತಾರ: ’ದೇಶದ್ರೋಹ’ವೆಂಬ ಹಳೆಯ ಹುನ್ನಾರ

ಅಲ್ಲದೆ ಬಂಧಿತರಿಗೆ ಜಾಮೀನು ನೀಡುತ್ತಾ “ಚುನಾಯಿತ ಪ್ರಜಾಪ್ರಭುತ್ವ ಸರ್ಕಾರವು ಅಭಿವ್ಯಕ್ತಿ ಸ್ವಾತಂತ್ರ್ಯದ ಮೇಲೆ ನಿರ್ಬಂಧ ಹೇರಲು ಸಾಧ್ಯವಿಲ್ಲ. ನಾವು ಟೀಕೆಗೆ ಭಯಪಡಬಾರದು. ನ್ಯಾಯಾಲಯಗಳು ಪ್ರತಿಯೊಬ್ಬರ ಸಾಂವಿಧಾನಿಕ ಹಕ್ಕುಗಳನ್ನು ರಕ್ಷಿಸುತ್ತದೆ. ಇದು ಪಾಕಿಸ್ತಾನ, ಭಾರತವಲ್ಲ” ಎಂದು ಮಿನಲ್ಲಾ ಹೇಳಿದ್ದಾರೆ.

ನ್ಯಾಯಾಧೀಶರು ಈ ಹೇಳಿಕೆಯ ಮೂಲಕ ಅವರು ಏನು ಹೇಳುತ್ತಿದ್ದಾರೆಂದು ಸ್ಪಷ್ಟವಾಗಿ ತಿಳಿಸದಿದ್ದರೂ, “ಸರ್ಕಾರವನ್ನು ಪ್ರಶ್ನಿಸುತ್ತಿರುವ ಭಾರತದ ಯುವಜನರ ವಿರುದ್ಧ ಹೆಚ್ಚುತ್ತಿರುವ ದೇಶದ್ರೋಹ ಪ್ರಕರಣಗಳನ್ನು ಉಲ್ಲೇಖಿಸಿದ್ದಾರೆ” ಎಂದು ಹಲವರು ಅಭಿಪ್ರಾಯಪಟ್ಟಿದ್ದಾರೆ.

ನೀವು ಪ್ರತಿಭಟಿಸಲು ಬಯಸಿದರೆ ಪೊಲೀಸರ ಅನುಮತಿ ಪಡೆಯಿರಿ. ನಿಮಗೆ ಅನುಮತಿ ಸಿಗದಿದ್ದರೆ, ನ್ಯಾಯಾಲಯವಿದೆ ಎಂದು ಅವರು ಹೇಳಿದ್ದಾರೆ.

ಬಂಧಿತರಲ್ಲಿ ಒಬ್ಬರಾದ ಅಮ್ಮರ್ ರಶೀದ್ “ನಮ್ಮ ದೇಶದಲ್ಲಿ (ಪಾಕಿಸ್ತಾನ) ಭಿನ್ನಾಭಿಪ್ರಾಯ, ಶಾಂತಿಯುತ ಪ್ರತಿಭಟನೆ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯದ ಅಪರಾಧೀಕರಣದ ವಿರುದ್ಧ ಈ ತೀರ್ಪು ಶಾಶ್ವತವಾದ ಉತ್ತಮ ನಿದರ್ಶನವಾಗಿದೆ” ಎಂದು ಟ್ವೀಟ್ ಮಾಡಿದ್ದಾರೆ.

ಭಾರತದಲ್ಲಿ ಕಳೆದ ಒಂದು ದಶಕದಲ್ಲಿ ರಾಜಕಾರಣಿಗಳು ಮತ್ತು ಸರ್ಕಾರಗಳ ವಿರುದ್ದ ಟೀಕೆ ಮಾಡಿರುವುದಕ್ಕೆ ಸಂಬಂಧಿಸಿದಂತೆ 405 ಭಾರತೀಯರ ವಿರುದ್ಧ ದೇಶದ್ರೋಹ ಪ್ರಕರಣಗಳು ದಾಖಲಾಗಿವೆ. ಇವುಗಳಲ್ಲಿ 96% ಪ್ರಕರಣಗಳು ಕೇಂದ್ರದಲ್ಲಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ನಂತರ ದಾಖಲಾಗಿರುವುದಾಗಿದೆ.

ಆರ್ಟಿಕಲ್ 14’ ಸಂಗ್ರಹಿಸಿದ ದತ್ತಾಂಶದ ವಿಶ್ಲೇಷಣೆಯು, “ಪೋಸ್ಟರ್‌ಗಳನ್ನು ಹಿಡಿದುಕೊಳ್ಳುವುದು, ಅಂಟಿಸುವುದು, ಘೋಷಣೆಗಳನ್ನು ಕೂಗುವುದು, ಸಾಮಾಜಿಕ  ಜಾಲತಾಣದಲ್ಲಿ ಬರೆಯುವುದು ಮತ್ತು ಪರಸ್ಪರ ವೈಯಕ್ತಿಕ ಸಂಭಾಷಣೆಗಳನ್ನು ಸಹ ’ದೇಶದ್ರೋಹ’ ಎಂದು ಪರಿಣಿಸಲಾಗಿದೆ” ಎಂದು ಹೇಳಿದೆ.

ಕೃಪೆ: ದಿ ವೈರ್


ಇದನ್ನೂ ಓದಿ: ಮೋದಿ-ಆದಿತ್ಯನಾಥ್ ವಿರುದ್ದ ಟೀಕೆ: 293 ಭಾರತೀಯರ ವಿರುದ್ಧ ದೇಶದ್ರೋಹ ಪ್ರಕರಣ ದಾಖಲು! ..

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...