Homeಅಂತರಾಷ್ಟ್ರೀಯಟೀಕೆಗೆ ಭಯಪಡಬಾರದು, ಇದು ಪಾಕಿಸ್ತಾನ, ಭಾರತವಲ್ಲ!: ಪಾಕ್ ನ್ಯಾಯಾಧೀಶನ ಹೇಳಿಕೆ

ಟೀಕೆಗೆ ಭಯಪಡಬಾರದು, ಇದು ಪಾಕಿಸ್ತಾನ, ಭಾರತವಲ್ಲ!: ಪಾಕ್ ನ್ಯಾಯಾಧೀಶನ ಹೇಳಿಕೆ

ನೀವು ಪ್ರತಿಭಟಿಸಲು ಬಯಸಿದರೆ ಪೊಲೀಸರ ಅನುಮತಿ ಪಡೆಯಿರಿ. ನಿಮಗೆ ಅನುಮತಿ ಸಿಗದಿದ್ದರೆ, ನ್ಯಾಯಾಲಯವಿದೆ ಎಂದು ಅವರು ಹೇಳಿದ್ದಾರೆ.

- Advertisement -
- Advertisement -

“ಎಲ್ಲರ ಸಾಂವಿಧಾನಿಕ ಹಕ್ಕುಗಳನ್ನು ರಕ್ಷಿಸಬೇಕು. ಇದು ಪಾಕಿಸ್ತಾನ, ಭಾರತವಲ್ಲ” ಹೀಗೆಂದು ಹೇಳಿದವರು ಪಾಕಿಸ್ತಾನದ ಇಸ್ಲಾಮಾಬಾದ್ ಹೈಕೋರ್ಟ್‌ನ ಮುಖ್ಯ ನ್ಯಾಯಾಧೀಶ ಆಥರ್ ಮಿನಲ್ಲಾ!..

ದೇಶದ್ರೋಹ ಮತ್ತು ಭಯೋತ್ಪಾದನೆಯನ್ನು ಪ್ರಚೋದಿಸಿದ ಆರೋಪಕ್ಕೆ ಸಂಬಂಧಿಸಿದ ಪ್ರಕರಣವೊಂದನ್ನು ಸೋಮವಾರ ವಿಚಾರಣೆ ನಡೆಸುತ್ತಿದ್ದ ಅವರು, ಎಲ್ಲದ್ದಕ್ಕೂ ದೇಶದ್ರೋಹ ಪ್ರಕರಣ ದಾಖಲಿಸಲು ಇದು ಭಾರತವಲ್ಲ ಎಂಬರ್ಥದ ಹೇಳಿಕೆ ನೀಡುವ ಮೂಲಕ ಭಾರತದಲ್ಲಿ ಪ್ರತಿಭಟನಾಕಾರರ ಸಾಂವಿಧಾನಿಕ ಹಕ್ಕುಗಳನ್ನು ಉಲ್ಲಂಘಿಸಲಾಗುತ್ತಿದೆ ಎಂದು ವ್ಯಾಖ್ಯಾನಿಸಿದ್ದಾರೆ ಎಂದು ದಿ ವೈರ್ ವರದಿ ಮಾಡಿದೆ.

ಪಶ್ತುನ್ ತಹಾಫುಜ್ ಮೂವ್ಮೆಂಟ್ ಪಕ್ಷದ ಮುಖಂಡ ಮತ್ತು ಖ್ಯಾತ ಮಾನವ ಹಕ್ಕುಗಳ ಹೋರಾಟಗಾರ ಮಂಜೂರ್ ಪಶ್ತೀನ್ ಅವರನ್ನು ಜನವರಿ 27 ರಂದು ಪೇಶಾವರದಲ್ಲಿ ಬಂಧಿಸಲಾಗಿತ್ತು. ಅವರ ಬಂಧನ ವಿರೋಧಿಸಿ ಜನವರಿ 28 ರಂದು ಪ್ರತಿಭಟಿಸಿದ ಅವಾಮಿ ವರ್ಕರ್ಸ್ ಪಾರ್ಟಿ ಮತ್ತು ಪಶ್ತುನ್ ತಹಾಫುಜ್ ಮೂವ್ಮೆಂಟ್ ಪಕ್ಷದ 23 ಕಾರ್ಯಕರ್ತರನ್ನು ಇಸ್ಲಾಮಾಬಾದ್ ಪೊಲೀಸರು ಬಂಧಿಸಿದ್ದಾರೆ.

ಜನವರಿ 28 ರಂದು ಇಸ್ಲಾಮಾಬಾದ್ ಪೊಲೀಸರು ಪ್ರತಿಭಟನಾಕಾರರನ್ನು ಬಂಧಿಸಿ, ಗುಂಪಿನಲ್ಲಿದ್ದ ಇಬ್ಬರು ಪ್ರಮುಖ ವ್ಯಕ್ತಿಗಳ ಮೇಲೆ ದೇಶದ್ರೋಹದ ಪ್ರಕರಣ ದಾಖಲಿಸಿದ್ದರು.  ಫೆಬ್ರವರಿ 2 ರಂದು ಅವರ ವಿರುದ್ಧದ ದೇಶದ್ರೋಹ ಆರೋಪವನ್ನು ಕೈಬಿಡಲಾಗಿದೆ ಎಂದು ಸರ್ಕಾರ ನ್ಯಾಯಾಲಯಕ್ಕೆ ತಿಳಿಸಿದ್ದರೂ, ಭಯೋತ್ಪಾದನಾ ವಿರೋಧಿ ಕಾಯ್ದೆ (ಎಟಿಎ), 1997 ರ ಸೆಕ್ಷನ್ 7 ಅನ್ನು ಎಫ್‌ಐಆರ್‌ಗೆ ಸೇರಿಸಿದ್ದಾರೆ. ಪ್ರತಿಭಟನಾಕಾರರ ವಿರುದ್ಧ ಈ ಆರೋಪಗಳನ್ನು ಯಾವ ಆಧಾರದ ಮೇಲೆ ಸೇರಿಸಲಾಯಿತು ಎಂಬುದರ ಕುರಿತು ಮ್ಯಾಜಿಸ್ಟ್ರೇಟ್‌ ವಿವರಣೆ ನೀಡುವಂತೆ ನ್ಯಾಯಾಧೀಶ ಮಿನಲ್ಲಾ ಕೇಳಿದ್ದಾರೆ.

ಇದನ್ನೂ ಓದಿ: ರೈತರ ವಿರುದ್ಧವೂ ಝಳಪಿಸಿದ ಹತಾರ: ’ದೇಶದ್ರೋಹ’ವೆಂಬ ಹಳೆಯ ಹುನ್ನಾರ

ಅಲ್ಲದೆ ಬಂಧಿತರಿಗೆ ಜಾಮೀನು ನೀಡುತ್ತಾ “ಚುನಾಯಿತ ಪ್ರಜಾಪ್ರಭುತ್ವ ಸರ್ಕಾರವು ಅಭಿವ್ಯಕ್ತಿ ಸ್ವಾತಂತ್ರ್ಯದ ಮೇಲೆ ನಿರ್ಬಂಧ ಹೇರಲು ಸಾಧ್ಯವಿಲ್ಲ. ನಾವು ಟೀಕೆಗೆ ಭಯಪಡಬಾರದು. ನ್ಯಾಯಾಲಯಗಳು ಪ್ರತಿಯೊಬ್ಬರ ಸಾಂವಿಧಾನಿಕ ಹಕ್ಕುಗಳನ್ನು ರಕ್ಷಿಸುತ್ತದೆ. ಇದು ಪಾಕಿಸ್ತಾನ, ಭಾರತವಲ್ಲ” ಎಂದು ಮಿನಲ್ಲಾ ಹೇಳಿದ್ದಾರೆ.

ನ್ಯಾಯಾಧೀಶರು ಈ ಹೇಳಿಕೆಯ ಮೂಲಕ ಅವರು ಏನು ಹೇಳುತ್ತಿದ್ದಾರೆಂದು ಸ್ಪಷ್ಟವಾಗಿ ತಿಳಿಸದಿದ್ದರೂ, “ಸರ್ಕಾರವನ್ನು ಪ್ರಶ್ನಿಸುತ್ತಿರುವ ಭಾರತದ ಯುವಜನರ ವಿರುದ್ಧ ಹೆಚ್ಚುತ್ತಿರುವ ದೇಶದ್ರೋಹ ಪ್ರಕರಣಗಳನ್ನು ಉಲ್ಲೇಖಿಸಿದ್ದಾರೆ” ಎಂದು ಹಲವರು ಅಭಿಪ್ರಾಯಪಟ್ಟಿದ್ದಾರೆ.

ನೀವು ಪ್ರತಿಭಟಿಸಲು ಬಯಸಿದರೆ ಪೊಲೀಸರ ಅನುಮತಿ ಪಡೆಯಿರಿ. ನಿಮಗೆ ಅನುಮತಿ ಸಿಗದಿದ್ದರೆ, ನ್ಯಾಯಾಲಯವಿದೆ ಎಂದು ಅವರು ಹೇಳಿದ್ದಾರೆ.

ಬಂಧಿತರಲ್ಲಿ ಒಬ್ಬರಾದ ಅಮ್ಮರ್ ರಶೀದ್ “ನಮ್ಮ ದೇಶದಲ್ಲಿ (ಪಾಕಿಸ್ತಾನ) ಭಿನ್ನಾಭಿಪ್ರಾಯ, ಶಾಂತಿಯುತ ಪ್ರತಿಭಟನೆ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯದ ಅಪರಾಧೀಕರಣದ ವಿರುದ್ಧ ಈ ತೀರ್ಪು ಶಾಶ್ವತವಾದ ಉತ್ತಮ ನಿದರ್ಶನವಾಗಿದೆ” ಎಂದು ಟ್ವೀಟ್ ಮಾಡಿದ್ದಾರೆ.

ಭಾರತದಲ್ಲಿ ಕಳೆದ ಒಂದು ದಶಕದಲ್ಲಿ ರಾಜಕಾರಣಿಗಳು ಮತ್ತು ಸರ್ಕಾರಗಳ ವಿರುದ್ದ ಟೀಕೆ ಮಾಡಿರುವುದಕ್ಕೆ ಸಂಬಂಧಿಸಿದಂತೆ 405 ಭಾರತೀಯರ ವಿರುದ್ಧ ದೇಶದ್ರೋಹ ಪ್ರಕರಣಗಳು ದಾಖಲಾಗಿವೆ. ಇವುಗಳಲ್ಲಿ 96% ಪ್ರಕರಣಗಳು ಕೇಂದ್ರದಲ್ಲಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ನಂತರ ದಾಖಲಾಗಿರುವುದಾಗಿದೆ.

ಆರ್ಟಿಕಲ್ 14’ ಸಂಗ್ರಹಿಸಿದ ದತ್ತಾಂಶದ ವಿಶ್ಲೇಷಣೆಯು, “ಪೋಸ್ಟರ್‌ಗಳನ್ನು ಹಿಡಿದುಕೊಳ್ಳುವುದು, ಅಂಟಿಸುವುದು, ಘೋಷಣೆಗಳನ್ನು ಕೂಗುವುದು, ಸಾಮಾಜಿಕ  ಜಾಲತಾಣದಲ್ಲಿ ಬರೆಯುವುದು ಮತ್ತು ಪರಸ್ಪರ ವೈಯಕ್ತಿಕ ಸಂಭಾಷಣೆಗಳನ್ನು ಸಹ ’ದೇಶದ್ರೋಹ’ ಎಂದು ಪರಿಣಿಸಲಾಗಿದೆ” ಎಂದು ಹೇಳಿದೆ.

ಕೃಪೆ: ದಿ ವೈರ್


ಇದನ್ನೂ ಓದಿ: ಮೋದಿ-ಆದಿತ್ಯನಾಥ್ ವಿರುದ್ದ ಟೀಕೆ: 293 ಭಾರತೀಯರ ವಿರುದ್ಧ ದೇಶದ್ರೋಹ ಪ್ರಕರಣ ದಾಖಲು! ..

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...

ಮಶಾದ್ ವಿಮಾನ ನಿಲ್ದಾಣದ ಮೇಲೆ ಅಮೆರಿಕ ದಾಳಿ: ದೆಹಲಿಗೆ ತೆರಳುತ್ತಿದ್ದ ನೆರವು ವಿಮಾನಕ್ಕೆ ಡಿಕ್ಕಿ: ಇದು ‘ಯುದ್ಧ ಅಪರಾಧ’ ಎಂದ ಇರಾನ್ 

ಇರಾನ್‌ನ ಮಶಾದ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಮೆರಿಕದ ವಾಯುದಾಳಿಯ ಸಂದರ್ಭದಲ್ಲಿ ನವದೆಹಲಿಗೆ ಹಾರಲು ನಿಗದಿಯಾಗಿದ್ದ ಮಹಾನ್ ಏರ್ ವಿಮಾನವು ಡಿಕ್ಕಿ ಹೊಡೆದಿದೆ ಎಂದು ವರದಿಯಾಗಿದೆ.  ಈ ವಿಮಾನವು ಔಷಧಿಗಳು ಸೇರಿದಂತೆ ಮಾನವೀಯ ನೆರವು ಸಾಗಣೆಗೆ...

ಪ್ಯಾಲೆಸ್ತೀನಿಯರಿಗೆ ಮರಣದಂಡನೆ ವಿಧಿಸುವ ಕಾನೂನು ಅಂಗೀಕಾರ : ಇಸ್ರೇಲ್ ಕ್ರಮಕ್ಕೆ ಜಾಗತಿಕ ಖಂಡನೆ

ಮಾರಣಾಂತಿಕ ದಾಳಿಗಳ ಅಪರಾಧ ಸಾಬೀತಾದ ಪ್ಯಾಲೆಸ್ತೀನಿಯರಿಗೆ ಮರಣದಂಡನೆಯನ್ನು ಕಡ್ಡಾಯ ಶಿಕ್ಷೆಯನ್ನಾಗಿ ನಿಗದಿಪಡಿಸಿದ ಇಸ್ರೇಲ್‌ನ ಹೊಸ ಕಾನೂನನ್ನು ಮಾನವ ಹಕ್ಕುಗಳ ಸಂಘಟನೆಗಳು, ವಿವಿಧ ರಾಷ್ಟ್ರಗಳ ನಾಯಕರು ಸೇರಿದಂತೆ ಜಾಗತಿಕ ಸಮುಯದಾಯ ತೀವ್ರವಾಗಿ ವಿರೋಧಿಸಿದೆ. ಈ...

ಬರೇಲಿ: ಮುಸ್ಲಿಂ ಯುವಕರ ಮೇಲೆ ಹಲ್ಲೆ, ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಬಲವಂತ; ಪ್ರಮುಖ ಆರೋಪಿ ಬಂಧನ

ಉತ್ತರ ಪ್ರದೇಶದ ಬರೇಲಿಯಲ್ಲಿ ಮುಸ್ಲಿಂ ಯುವಕನ ಮೇಲೆ ಹಲ್ಲೆ, ಅವಮಾನ ಮತ್ತು ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಒತ್ತಾಯಿಸಲಾಗಿದೆ ಎಂದು ಆರೋಪಿಸಲಾಗಿದೆ. ಪ್ರಮುಖ ಆರೋಪಿ ರಿಷಭ್ ಠಾಕೂರ್ ನನ್ನು ಪೊಲೀಸರು ಬಂಧಿಸಿದ್ದು, ಮತ್ತಷ್ಟು ಬಂಧನಗಳು ನಡೆಯುವ...