Homeಅಂತರಾಷ್ಟ್ರೀಯಟೀಕೆಗೆ ಭಯಪಡಬಾರದು, ಇದು ಪಾಕಿಸ್ತಾನ, ಭಾರತವಲ್ಲ!: ಪಾಕ್ ನ್ಯಾಯಾಧೀಶನ ಹೇಳಿಕೆ

ಟೀಕೆಗೆ ಭಯಪಡಬಾರದು, ಇದು ಪಾಕಿಸ್ತಾನ, ಭಾರತವಲ್ಲ!: ಪಾಕ್ ನ್ಯಾಯಾಧೀಶನ ಹೇಳಿಕೆ

ನೀವು ಪ್ರತಿಭಟಿಸಲು ಬಯಸಿದರೆ ಪೊಲೀಸರ ಅನುಮತಿ ಪಡೆಯಿರಿ. ನಿಮಗೆ ಅನುಮತಿ ಸಿಗದಿದ್ದರೆ, ನ್ಯಾಯಾಲಯವಿದೆ ಎಂದು ಅವರು ಹೇಳಿದ್ದಾರೆ.

- Advertisement -
- Advertisement -

“ಎಲ್ಲರ ಸಾಂವಿಧಾನಿಕ ಹಕ್ಕುಗಳನ್ನು ರಕ್ಷಿಸಬೇಕು. ಇದು ಪಾಕಿಸ್ತಾನ, ಭಾರತವಲ್ಲ” ಹೀಗೆಂದು ಹೇಳಿದವರು ಪಾಕಿಸ್ತಾನದ ಇಸ್ಲಾಮಾಬಾದ್ ಹೈಕೋರ್ಟ್‌ನ ಮುಖ್ಯ ನ್ಯಾಯಾಧೀಶ ಆಥರ್ ಮಿನಲ್ಲಾ!..

ದೇಶದ್ರೋಹ ಮತ್ತು ಭಯೋತ್ಪಾದನೆಯನ್ನು ಪ್ರಚೋದಿಸಿದ ಆರೋಪಕ್ಕೆ ಸಂಬಂಧಿಸಿದ ಪ್ರಕರಣವೊಂದನ್ನು ಸೋಮವಾರ ವಿಚಾರಣೆ ನಡೆಸುತ್ತಿದ್ದ ಅವರು, ಎಲ್ಲದ್ದಕ್ಕೂ ದೇಶದ್ರೋಹ ಪ್ರಕರಣ ದಾಖಲಿಸಲು ಇದು ಭಾರತವಲ್ಲ ಎಂಬರ್ಥದ ಹೇಳಿಕೆ ನೀಡುವ ಮೂಲಕ ಭಾರತದಲ್ಲಿ ಪ್ರತಿಭಟನಾಕಾರರ ಸಾಂವಿಧಾನಿಕ ಹಕ್ಕುಗಳನ್ನು ಉಲ್ಲಂಘಿಸಲಾಗುತ್ತಿದೆ ಎಂದು ವ್ಯಾಖ್ಯಾನಿಸಿದ್ದಾರೆ ಎಂದು ದಿ ವೈರ್ ವರದಿ ಮಾಡಿದೆ.

ಪಶ್ತುನ್ ತಹಾಫುಜ್ ಮೂವ್ಮೆಂಟ್ ಪಕ್ಷದ ಮುಖಂಡ ಮತ್ತು ಖ್ಯಾತ ಮಾನವ ಹಕ್ಕುಗಳ ಹೋರಾಟಗಾರ ಮಂಜೂರ್ ಪಶ್ತೀನ್ ಅವರನ್ನು ಜನವರಿ 27 ರಂದು ಪೇಶಾವರದಲ್ಲಿ ಬಂಧಿಸಲಾಗಿತ್ತು. ಅವರ ಬಂಧನ ವಿರೋಧಿಸಿ ಜನವರಿ 28 ರಂದು ಪ್ರತಿಭಟಿಸಿದ ಅವಾಮಿ ವರ್ಕರ್ಸ್ ಪಾರ್ಟಿ ಮತ್ತು ಪಶ್ತುನ್ ತಹಾಫುಜ್ ಮೂವ್ಮೆಂಟ್ ಪಕ್ಷದ 23 ಕಾರ್ಯಕರ್ತರನ್ನು ಇಸ್ಲಾಮಾಬಾದ್ ಪೊಲೀಸರು ಬಂಧಿಸಿದ್ದಾರೆ.

ಜನವರಿ 28 ರಂದು ಇಸ್ಲಾಮಾಬಾದ್ ಪೊಲೀಸರು ಪ್ರತಿಭಟನಾಕಾರರನ್ನು ಬಂಧಿಸಿ, ಗುಂಪಿನಲ್ಲಿದ್ದ ಇಬ್ಬರು ಪ್ರಮುಖ ವ್ಯಕ್ತಿಗಳ ಮೇಲೆ ದೇಶದ್ರೋಹದ ಪ್ರಕರಣ ದಾಖಲಿಸಿದ್ದರು.  ಫೆಬ್ರವರಿ 2 ರಂದು ಅವರ ವಿರುದ್ಧದ ದೇಶದ್ರೋಹ ಆರೋಪವನ್ನು ಕೈಬಿಡಲಾಗಿದೆ ಎಂದು ಸರ್ಕಾರ ನ್ಯಾಯಾಲಯಕ್ಕೆ ತಿಳಿಸಿದ್ದರೂ, ಭಯೋತ್ಪಾದನಾ ವಿರೋಧಿ ಕಾಯ್ದೆ (ಎಟಿಎ), 1997 ರ ಸೆಕ್ಷನ್ 7 ಅನ್ನು ಎಫ್‌ಐಆರ್‌ಗೆ ಸೇರಿಸಿದ್ದಾರೆ. ಪ್ರತಿಭಟನಾಕಾರರ ವಿರುದ್ಧ ಈ ಆರೋಪಗಳನ್ನು ಯಾವ ಆಧಾರದ ಮೇಲೆ ಸೇರಿಸಲಾಯಿತು ಎಂಬುದರ ಕುರಿತು ಮ್ಯಾಜಿಸ್ಟ್ರೇಟ್‌ ವಿವರಣೆ ನೀಡುವಂತೆ ನ್ಯಾಯಾಧೀಶ ಮಿನಲ್ಲಾ ಕೇಳಿದ್ದಾರೆ.

ಇದನ್ನೂ ಓದಿ: ರೈತರ ವಿರುದ್ಧವೂ ಝಳಪಿಸಿದ ಹತಾರ: ’ದೇಶದ್ರೋಹ’ವೆಂಬ ಹಳೆಯ ಹುನ್ನಾರ

ಅಲ್ಲದೆ ಬಂಧಿತರಿಗೆ ಜಾಮೀನು ನೀಡುತ್ತಾ “ಚುನಾಯಿತ ಪ್ರಜಾಪ್ರಭುತ್ವ ಸರ್ಕಾರವು ಅಭಿವ್ಯಕ್ತಿ ಸ್ವಾತಂತ್ರ್ಯದ ಮೇಲೆ ನಿರ್ಬಂಧ ಹೇರಲು ಸಾಧ್ಯವಿಲ್ಲ. ನಾವು ಟೀಕೆಗೆ ಭಯಪಡಬಾರದು. ನ್ಯಾಯಾಲಯಗಳು ಪ್ರತಿಯೊಬ್ಬರ ಸಾಂವಿಧಾನಿಕ ಹಕ್ಕುಗಳನ್ನು ರಕ್ಷಿಸುತ್ತದೆ. ಇದು ಪಾಕಿಸ್ತಾನ, ಭಾರತವಲ್ಲ” ಎಂದು ಮಿನಲ್ಲಾ ಹೇಳಿದ್ದಾರೆ.

ನ್ಯಾಯಾಧೀಶರು ಈ ಹೇಳಿಕೆಯ ಮೂಲಕ ಅವರು ಏನು ಹೇಳುತ್ತಿದ್ದಾರೆಂದು ಸ್ಪಷ್ಟವಾಗಿ ತಿಳಿಸದಿದ್ದರೂ, “ಸರ್ಕಾರವನ್ನು ಪ್ರಶ್ನಿಸುತ್ತಿರುವ ಭಾರತದ ಯುವಜನರ ವಿರುದ್ಧ ಹೆಚ್ಚುತ್ತಿರುವ ದೇಶದ್ರೋಹ ಪ್ರಕರಣಗಳನ್ನು ಉಲ್ಲೇಖಿಸಿದ್ದಾರೆ” ಎಂದು ಹಲವರು ಅಭಿಪ್ರಾಯಪಟ್ಟಿದ್ದಾರೆ.

ನೀವು ಪ್ರತಿಭಟಿಸಲು ಬಯಸಿದರೆ ಪೊಲೀಸರ ಅನುಮತಿ ಪಡೆಯಿರಿ. ನಿಮಗೆ ಅನುಮತಿ ಸಿಗದಿದ್ದರೆ, ನ್ಯಾಯಾಲಯವಿದೆ ಎಂದು ಅವರು ಹೇಳಿದ್ದಾರೆ.

ಬಂಧಿತರಲ್ಲಿ ಒಬ್ಬರಾದ ಅಮ್ಮರ್ ರಶೀದ್ “ನಮ್ಮ ದೇಶದಲ್ಲಿ (ಪಾಕಿಸ್ತಾನ) ಭಿನ್ನಾಭಿಪ್ರಾಯ, ಶಾಂತಿಯುತ ಪ್ರತಿಭಟನೆ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯದ ಅಪರಾಧೀಕರಣದ ವಿರುದ್ಧ ಈ ತೀರ್ಪು ಶಾಶ್ವತವಾದ ಉತ್ತಮ ನಿದರ್ಶನವಾಗಿದೆ” ಎಂದು ಟ್ವೀಟ್ ಮಾಡಿದ್ದಾರೆ.

ಭಾರತದಲ್ಲಿ ಕಳೆದ ಒಂದು ದಶಕದಲ್ಲಿ ರಾಜಕಾರಣಿಗಳು ಮತ್ತು ಸರ್ಕಾರಗಳ ವಿರುದ್ದ ಟೀಕೆ ಮಾಡಿರುವುದಕ್ಕೆ ಸಂಬಂಧಿಸಿದಂತೆ 405 ಭಾರತೀಯರ ವಿರುದ್ಧ ದೇಶದ್ರೋಹ ಪ್ರಕರಣಗಳು ದಾಖಲಾಗಿವೆ. ಇವುಗಳಲ್ಲಿ 96% ಪ್ರಕರಣಗಳು ಕೇಂದ್ರದಲ್ಲಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ನಂತರ ದಾಖಲಾಗಿರುವುದಾಗಿದೆ.

ಆರ್ಟಿಕಲ್ 14’ ಸಂಗ್ರಹಿಸಿದ ದತ್ತಾಂಶದ ವಿಶ್ಲೇಷಣೆಯು, “ಪೋಸ್ಟರ್‌ಗಳನ್ನು ಹಿಡಿದುಕೊಳ್ಳುವುದು, ಅಂಟಿಸುವುದು, ಘೋಷಣೆಗಳನ್ನು ಕೂಗುವುದು, ಸಾಮಾಜಿಕ  ಜಾಲತಾಣದಲ್ಲಿ ಬರೆಯುವುದು ಮತ್ತು ಪರಸ್ಪರ ವೈಯಕ್ತಿಕ ಸಂಭಾಷಣೆಗಳನ್ನು ಸಹ ’ದೇಶದ್ರೋಹ’ ಎಂದು ಪರಿಣಿಸಲಾಗಿದೆ” ಎಂದು ಹೇಳಿದೆ.

ಕೃಪೆ: ದಿ ವೈರ್


ಇದನ್ನೂ ಓದಿ: ಮೋದಿ-ಆದಿತ್ಯನಾಥ್ ವಿರುದ್ದ ಟೀಕೆ: 293 ಭಾರತೀಯರ ವಿರುದ್ಧ ದೇಶದ್ರೋಹ ಪ್ರಕರಣ ದಾಖಲು! ..

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...