Homeಕರ್ನಾಟಕ‘ನಾವು ರೈತರ ಪರವಾಗಿ ನಿಲ್ಲುತ್ತೇವೆ, ಸಮಸ್ಯೆ ಬಗೆಹರಿಸಲು ಕೇಂದ್ರವೂ ಸಿದ್ದವಾಗಬೇಕು’: ಸಿಎಂ ಸಿದ್ದರಾಮಯ್ಯ

‘ನಾವು ರೈತರ ಪರವಾಗಿ ನಿಲ್ಲುತ್ತೇವೆ, ಸಮಸ್ಯೆ ಬಗೆಹರಿಸಲು ಕೇಂದ್ರವೂ ಸಿದ್ದವಾಗಬೇಕು’: ಸಿಎಂ ಸಿದ್ದರಾಮಯ್ಯ

- Advertisement -
- Advertisement -

ಬೆಂಗಳೂರು: ಕಬ್ಬು ಬೆಳೆಗಾರರಿಗೆ ನೆರವಾಗುವುದು ರಾಜ್ಯ ಹಾಗೂ ಕೇಂದ್ರ ಸರ್ಕಾರಗಳ ಜವಾಬ್ದಾರಿಯಾಗಿದೆ. ರೈತರ ಹಿತದೃಷ್ಟಿಯನ್ನು ಗಮನದಲ್ಲಿಟ್ಟುಕೊಂಡು ಎಫ್.ಆರ್.ಪಿ ನಿಗದಿಪಡಿಸುವುದು ಕೇಂದ್ರ ಸರ್ಕಾರದ ಕಾರ್ಯ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.

ನವೆಂಬರ್ 7, ಶುಕ್ರವಾರ ವಿಧಾನಸೌಧ ಸಭಾಂಗಣದಲ್ಲಿ ನಡೆದ ಸಕ್ಕರೆ ಕಾರ್ಖಾನೆ ಮಾಲಿಕರ ಸಭೆಯಲ್ಲಿ ಮಾತನಾಡಿದ ಅವರು ಕೇಂದ್ರ ಸರ್ಕಾರ ದಿನಾಂಕ 2025 ಮೇ 6ರಂದು ಎಫ್ಆರ್.ಪಿ ನಿಗದಿಪಡಿಸಿದೆ. ಈ ಎಫ್.ಆರ್.ಪಿಯಲ್ಲಿ ಸಾಗಾಟ ಮತ್ತು ಕಟಾವು ವೆಚ್ಚ ಸಹ ಸೇರಿದೆ. ಸಕ್ಕರೆಯ ಎಂ.ಎಸ್.ಪಿ ಹೆಚ್ಚಳ ಮಾಡುವಂತೆ ಈ ಹಿಂದೆಯೇ ಕೇಂದ್ರ ಸರ್ಕಾರಕ್ಕೆ ನಾವು ಮನವಿ ಸಲ್ಲಿಸಿದ್ದೇವೆ. ಇದೀಗ ಕೇಂದ್ರ ಸರ್ಕಾರ ಸಮಸ್ಯೆ ಹುಟ್ಟು ಹಾಕಿದೆ ಎಂದು ಹೇಳಿದರು.

ಇದೇ ವೇಳೆ ಸಕ್ಕರೆ ಕಾರ್ಖಾನೆಗಳು ಮಾರಾಟ ಮಾಡುವ ವಿದ್ಯುತ್ ಮೇಲೆ ಪ್ರತಿ ಯುನಿಟ್ಗೆ 60 ಪೈಸೆ ತೆರಿಗೆ ನಿಗದಿಪಡಿಸುವ ಪ್ರಸ್ತಾವನೆಯನ್ನು ಮರು ಪರಿಶೀಲಿಸಲಾಗುವುದು ಎಂದರು. 

ಸಭೆಯಲ್ಲಿ ತಮ್ಮ ಸಮಸ್ಯೆ ಹೇಳಿಕೊಂಡ ಕಾರ್ಖಾನೆ ಮಾಲೀಕರು ಸಕ್ಕರೆ ಉತ್ಪಾದನೆ ಮತ್ತು ಮಾರಾಟ, ಎಥಿನಾಲ್ ಉತ್ಪಾದನೆ ಮತ್ತು ಬೆಲೆ ನಿಗಧಿ, ಸಕ್ಕರೆ ರಫ್ತು ಮತ್ತು ಬೆಲೆ ನಿಗಧಿ ಎಲ್ಲವೂ ಕೇಂದ್ರ ಸರ್ಕಾರದ ಕೈಯಲ್ಲಿದೆ. ಕೇಂದ್ರದ ನೀತಿಯಿಂದ ದಕ್ಷಿಣ ಭಾರತದ ಕಾರ್ಖಾನೆಗಳು ಸಮಸ್ಯೆಯಲ್ಲಿವೆ, ಉತ್ತರ ಭಾರತದ ಕಾರ್ಖಾನೆಗಳು ಅನುಕೂಲಕರವಾಗಿವೆ ಎಂದು ಆರೋಪಿಸಿದರು. 

ಈ ವೇಳೆ ರೈತರ ಬೇಡಿಕೆ ಈಡೇರಿಸುವುದರಲ್ಲಿ ಕೇಂದ್ರ ಸರ್ಕಾರದ ಜವಾಬ್ದಾರಿ ಪ್ರಮುಖವಾಗಿವೆ ಮತ್ತು ಕಾರ್ಖಾನೆಗಳ ಜವಾಬ್ದಾರಿಯು ಇದೆ ಎಂದು ಸಿದ್ದರಾಮಯ್ಯ ಅಭಿಪ್ರಾಯ ಪಟ್ಟರು. ಹಾಗೆ ಕಾರ್ಖಾನೆ ಮಾಲೀಕರ ಸಮಸ್ಯೆಗಳಲ್ಲಿ ರಾಜ್ಯ ಸರ್ಕಾರದ ವ್ಯಾಪ್ತಿಗೆ ಬರುವ ಸಮಸ್ಯೆಗಳನ್ನು ಬಗೆಹರಿಸುವ ಬಗ್ಗೆಯೂ ಪರಿಶೀಲಿಸೋಣ ಎಂದು ಭರವಸೆ ನೀಡಿದರು.  

ಸಭೆಯಲ್ಲಿ ಸಕ್ಕರೆ ಕಾರ್ಖಾನೆ ಮಾಲಿಕರ ಪರವಾಗಿ ಮಾತನಾಡಿದ ಮುರುಗೇಶ್ ನಿರಾಣಿ, ಎಲ್ಲಾ ಸರ್ಕಾರಗಳಲ್ಲೂ ಕಬ್ಬು ಬೆಳೆಗಾರರ ಸಮಸ್ಯೆ ಮುಂದುವರೆಯುತ್ತಾ ಬಂದಿದೆ. ಸಕ್ಕರೆ ಕಾರ್ಖಾನೆಗಳಿಂದ ವಿದ್ಯುತ್ ಖರೀದಿ ಒಪ್ಪಂದವನ್ನು ರಾಜ್ಯ ಸರ್ಕಾರ ನವೀಕರಣ ಮಾಡಿರುವುದಿಲ್ಲ. ಮಹಾರಾಷ್ಟ್ರದಲ್ಲಿ ಸಕ್ಕರೆ ಕಾರ್ಖಾನೆಯವರಿಂದ ಖರೀದಿಸುವ ವಿದ್ಯುತ್ ಪ್ರತಿ ಯುನಿಟ್ಗೆ ರೂ. 6 ಪಾವತಿಸಲಾಗುತ್ತಿದೆ. ಇದೇ ಮಾದರಿಯಲ್ಲಿ ರಾಜ್ಯ ಸರ್ಕಾರ ಒಪ್ಪಂದ ಮಾಡಬೇಕಿದೆ. ಕಾರ್ಖಾನೆಗಳು ಮಾರಾಟ ಮಾಡುವ ವಿದ್ಯುತ್ ಮೇಲೆ ಪ್ರತಿ ಯುನಿಟ್ಗೆ 60 ಪೈಸೆ ತೆರಿಗೆ ನಿಗದಿಪಡಿಸಿರುವುದನ್ನು ಕೈಬಿಡಬೇಕು. ಸಕ್ಕರೆ ಕಾರ್ಖಾನೆಗಳ ನಡುವಿನ ಅಂತರ ಕನಿಷ್ಠ 25 ಕಿಮೀ ನಿಗದಿಪಡಿಸಬೇಕು. ಏವಿಯೇಷನ್ ಇಂಧನಕ್ಕೆ ಎಥೆನಾಲ್ ಮಿಶ್ರಣ ಅನುಮತಿಯನ್ನು ಆದಷ್ಟು ಬೇಗನೆ ನೀಡುವಂತೆ ಪ್ರಧಾನಿ ಅವರಿಗೆ ಮನವಿ ಮಾಡಬೇಕು. ಪ್ರಸ್ತುತ ರೈತರಿಗೆ ಎಫ್ಆರ್.ಪಿ ಪ್ರಕಾರ ದರ ನೀಡಲಾಗುವುದು. ಹೆಚ್ಚುವರಿ ಆದಾಯ ಸಾಧ್ಯವಾದರೆ ಸೀಸನ್ ಮುಗಿದ ಬಳಿಕ ಅದನ್ನು ರೈತರಿಗೆ ಹಂಚಿಕೆ ಮಾಡಲು ಸಿದ್ಧರಿದ್ದೇವೆ ಎಂದರು.  

ಎಥೆನಾಲ್ ಎಂಎಸ್.ಪಿ ಹೆಚ್ಚಳ ಕುರಿತು ಕೇಂದ್ರಕ್ಕೆ ಮನವಿ ಮಾಡಿದರೂ ಇದುವರೆಗೆ ಹೆಚ್ಚಳ ಮಾಡಿಲ್ಲ. ಇದರಿಂದ ಕರ್ನಾಟಕ ರಾಜ್ಯಕ್ಕೆ ನಿರಂತರವಾಗಿ ಅನ್ಯಾಯವಾಗಿದೆ. ಇದೇ ರೀತಿ ಸಕ್ಕರೆ ರಫ್ತಿನ ಮೇಲೆ ನಿರ್ಬಂಧ ಹೇರಿರುವುದರಿಂದ ಸಕ್ಕರೆ ಕಾರ್ಖಾನೆಗಳಿಗೆ ಆರ್ಥಿಕವಾಗಿ ನಷ್ಟ ಉಂಟಾಗಿದೆ. ಇಡೀ ದೇಶಕ್ಕೆ ಕೇವಲ 10ಲಕ್ಷ ಮೆಟ್ರಿಕ್ ಟನ್ ಮಾತ್ರ ರಫ್ತಿಗೆ ಅನುಮತಿ ನೀಡಲಾಗಿದೆ. ಕಳೆದ ಆರು ವರ್ಷಗಳಿಂದ ಸಕ್ಕರೆ ದರವನ್ನು ಸಹ ಪರಿಷ್ಕರಿಸಿಲ್ಲ. ಆದರೆ ಕಬ್ಬಿನ ದರ ಪ್ರತಿ ವರ್ಷ ಹೆಚ್ಚುತ್ತಾ ಹೋಗುತ್ತಿದೆ. ಈ ಎಲ್ಲಾ ಕಾರಣಗಳಿಂದ ಸಕ್ಕರೆ ಕಾರ್ಖಾನೆಗಳಿಗೆ ಈಗ ಎಫ್ಆರ್.ಪಿ ಪ್ರಕಾರ ರೈತರಿಗೆ ಪಾವತಿ ಮಾಡಲು ಕಷ್ಟ ಪಡಬೇಕಾದ ಪರಿಸ್ಥಿತಿಯಿದೆ. ಆದರೆ ಈ ದರ ಕಾನೂನಾತ್ಮಕವಾಗಿ ನೀಡಬೇಕಾಗಿರುವ ಹಿನ್ನೆಲೆಯಲ್ಲಿ ಕಾರ್ಖಾನೆಗಳು ಪಾವತಿಸುತ್ತಿವೆ ಎಂದು ಸಕ್ಕರೆ ಕಾರ್ಖಾನೆ ಮಾಲಿಕರ ಸಂಘದ ಅಧ್ಯಕ್ಷರು ತಿಳಿಸಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಂದೇ ಮಾತರಂ ಗೀತೆಯ 6 ಚರಣಕ್ಕೆ ಕರ್ನಾಟಕ ಸರ್ಕಾರದ ಬ್ರೇಕ್

ವಂದೇ ಮಾತರಂ ಗೀತೆಯ ಗಾಯನಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ನಿರ್ಧಾರ ಮತ್ತು ಕಡ್ಡಾಯ ನೀತಿಗೆ ಕರ್ನಾಟಕ ಸರ್ಕಾರ ನೇರವಾಗಿ ಸೆಡ್ಡು ಹೊಡೆದಿದೆ. ರಾಜ್ಯ ಸರ್ಕಾರದ ಅಧಿಕೃತ ಕಾರ್ಯಕ್ರಮಗಳಲ್ಲಿ ವಂದೇ ಮಾತರಂ ಗೀತೆಯ ಸಂಪೂರ್ಣ...

ಸಿಜೆಪಿ ಪ್ರತಿಭಟನೆಯಲ್ಲಿ ಬಾಲಕಿ ನಿಶು ಆಜಾದ್‌ಗೆ ಬೆದರಿಕೆ; ಕ್ರಮಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ 14 ವರ್ಷದ ನಿಶು ಆಜಾದ್‌ಗೆ ಕಿಡಿಗೇಡಿಗಳು ಅತ್ಯಾಚಾರದ ಬೆದರಿಕೆ ಹಾಕಿದ್ದಾರೆ ಹಾಗೂ ಅವರ ಮನೆ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ ಎಂಬ...

ಜಾದವ್‌ಪುರ ವಿವಿ ವಿರುದ್ಧ ಸುವೇಂದು ಅಧಿಕಾರಿಯ ‘ಕೇಸರಿ ಯಾತ್ರೆ’: ‘ಆಜಾದಿ’, ‘ಲಾಲ್ ಸಲಾಂ’ ಕೂಗುವವರನ್ನು ಬೇರುಸಹಿತ ಕಿತ್ತುಹಾಕುತ್ತೇನೆ ಎಂದು ಬೆದರಿಕೆ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಬಿಜೆಪಿ ನಾಯಕ ಹಾಗೂ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಕೋಲ್ಕತ್ತಾದ ಜಾದವ್‌ಪುರ ವಿಶ್ವವಿದ್ಯಾಲಯದತ್ತ ನಡೆದ ‘ಗೆರುವಾ ಸಮ್ಮಾನ್ ಯಾತ್ರೆ’ (ಕೇಸರಿ ಗೌರವ ಮೆರವಣಿಗೆ) ಇದೀಗ ರಾಜ್ಯದ ರಾಜಕೀಯ ವಲಯದಲ್ಲಿ...

SIR : ಒಂದೇ ಮತಗಟ್ಟೆಯ 729 ಮತದಾರರಲ್ಲಿ 728 ಮಂದಿಯ ಹೆಸರು ಡಿಲೀಟ್!

ದೆಹಲಿಯ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್‌) ಮುನ್ನ, ಯಮುನಾ ನದಿ ಪಾತ್ರದ ಕೊಳಗೇರಿ ಪ್ರದೇಶವಾದ ಬೇಲಾ ಎಸ್ಟೇಟ್‌ನ ಭಾಗವೊಂದನ್ನು ಒಳಗೊಂಡಿರುವ ಮತಗಟ್ಟೆಯಲ್ಲಿ 729 ನೋಂದಾಯಿತ ಮತದಾರರಿದ್ದರು. ಆದರೆ, ಆಗಸ್ಟ್‌ನಲ್ಲಿ ಕರಡು...

ಬಂಗಾಳದ ನಾನ್‌ವೆಜ್ ವಿವಾದ: ಬಾಗೇಶ್ವರ್ ಬಾಬಾ ಹೇಳಿಕೆಗೆ ಹಿಂದೂ ವಲಯದಲ್ಲೇ ವಿರೋಧ; ‘ಹಿಂದೂ ಧರ್ಮ ಆಹಾರದ ಕೋಡ್ ಅಲ್ಲ!

ದುರ್ಗಾ ಪೂಜೆಯ ಸಂದರ್ಭದಲ್ಲಿ ಮೀನು, ಮಾಂಸ ಸೇವನೆ ಹಾಗೂ ಮಾರಾಟದ ವಿರುದ್ಧ ಬಾಗೇಶ್ವರ್ ಧಾಮದ ಮುಖ್ಯಸ್ಥ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿದ್ದ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ರಾಜಕೀಯ ವಿವಾದ ಹುಟ್ಟುಹಾಕಿದ ಬೆನ್ನಲ್ಲೇ, ಇದೀಗ...

SIR: ಪಂಜಾಬ್‌ ಮತದಾರರ ಪಟ್ಟಿಯಿಂದ ಡಿಲೀಟ್ ಆಗಿದ್ದ ರಾಘವ್ ಚಡ್ಡಾ ಹೆಸರು ದೆಹಲಿಯಲ್ಲಿ ಎಂಟ್ರಿ!

ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರು ಪಂಜಾಬ್‌ನ ಕರಡು ಮತದಾರರ ಪಟ್ಟಿಯಿಂದ ತೆಗೆದುಹಾಕಲ್ಪಟ್ಟ ಕೆಲವೇ ದಿನಗಳಲ್ಲಿ, ದೆಹಲಿಯ ಮತದಾರರ ಪಟ್ಟಿಯಲ್ಲಿ ದಿಢೀರನೆ ಪ್ರತ್ಯಕ್ಷವಾಗಿರುವುದು ದೇಶಾದ್ಯಂತ ಭಾರಿ ರಾಜಕೀಯ ಚರ್ಚೆಗೆ ಕಾರಣವಾಗಿದೆ. ಈ...

ರಾಜ್ಯ ಕಾಂಗ್ರೆಸ್‌ಗೆ 35 ನೂತನ ಜಿಲ್ಲಾಧ್ಯಕ್ಷರ ನೇಮಕ; ಹೈಕಮಾಂಡ್ ಪಟ್ಟಿಯಲ್ಲಿ ಮಹಿಳೆಯರಿಗಿಲ್ಲ ಪ್ರಾತಿನಿಧ್ಯ!

ಕರ್ನಾಟಕ ಕಾಂಗ್ರೆಸ್‌ನ ಬಹುನಿರೀಕ್ಷಿತ ಜಿಲ್ಲಾ ಪುನರ್‌ರಚನೆಗೆ ಕೊನೆಗೂ ಚಾಲನೆ ದೊರೆತಿದ್ದು, ರಾಜ್ಯದ 35 ಸಾಂಸ್ಥಿಕ ಜಿಲ್ಲಾ ಕಾಂಗ್ರೆಸ್ ಸಮಿತಿಗಳಿಗೆ (DCC) ನೂತನ ಅಧ್ಯಕ್ಷರನ್ನು ನೇಮಕ ಮಾಡಲಾಗಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ....

ತ್ರಿಪುರ| ಬಿಜೆಪಿ ಬೇಡಿಕೆಗೆ ಸ್ಪಂದಿಸಿದ ಇಸಿಐ; ಗ್ರಾಮ ಸಮಿತಿ ಚುನಾವಣೆ ಹಿನ್ನೆಲೆಯಲ್ಲಿ ಎಸ್‌ಐಆರ್ ಪ್ರಕ್ರಿಯೆ ಮುಂದೂಡಿಕೆ

ಆಡಳಿತರೂಢ ಭಾರತೀಯ ಜನತಾ ಪಕ್ಷ (ಬಿಜೆಪಿ) ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ಬೇಡಿಕೆಗೆ ಸ್ಪಂದಿಸಿರುವ ಭಾರತೀಯ ಚುನಾವಣಾ ಆಯೋಗ (ಇಸಿಐ), ರಾಜ್ಯದ ಬುಡಕಟ್ಟು ಪ್ರದೇಶಗಳಲ್ಲಿ ಸೆಪ್ಟೆಂಬರ್ 28 ರಂದು ನಡೆಯಲಿರುವ ಗ್ರಾಮ ಸಮಿತಿ...

SIR: ಸ್ವತಃ BLO ಗೆ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ತಾಂತ್ರಿಕ ಎಡವಟ್ಟುಗಳು ಮತ್ತು ಗೊಂದಲಗಳು ಪ್ರತಿದಿನವೂ ಒಂದಲ್ಲ ಒಂದು ವಿಲಕ್ಷಣ ಘಟನೆಗಳಿಗೆ ಕಾರಣವಾಗುತ್ತಿದ್ದು, ಇದೀಗ ಸ್ವತಃ ಮತದಾರರ ಪಟ್ಟಿ ಪರಿಷ್ಕರಣೆ...

‘ಎಸ್‌ಐಆರ್ ಪ್ರಜಾಪ್ರಭುತ್ವಕ್ಕೆ ವಂಚನೆ’: 2025ಕ್ಕೆ ಹೋಲಿಸಿದರೆ ದೆಹಲಿಯ 58.60 ಲಕ್ಷ ಮತದಾರರ ಹೆಸರುಗಳು ಮಾಯ: ನಾಗರೀಕ ಸಂಘಟನೆಗಳ ಆಕ್ರೋಶ

ನವದೆಹಲಿ: ದೆಹಲಿಯಲ್ಲಿ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಮತದಾರರ ಪಟ್ಟಿಯ ಶುದ್ಧೀಕರಣದ ಸಾಮಾನ್ಯ ಆಡಳಿತಾತ್ಮಕ ಕ್ರಮವಲ್ಲ, ಬದಲಾಗಿ ನಾಗರಿಕರ ಮತದಾನದ ಹಕ್ಕಿನ ಮೇಲೆ ಗಂಭೀರ ಪರಿಣಾಮ ಬೀರುವ...