Homeಚಳವಳಿಬೆಂಗಳೂರು ಅಡ್ವೊಕೇಟ್ಸ್ ಗ್ರೂಪ್ ವತಿಯಿಂದ ಪ್ರಶಾಂತ್ ಭೂಷಣ್ ಪರ ನಾಳೆ ಮೌನ ಧರಣಿ

ಬೆಂಗಳೂರು ಅಡ್ವೊಕೇಟ್ಸ್ ಗ್ರೂಪ್ ವತಿಯಿಂದ ಪ್ರಶಾಂತ್ ಭೂಷಣ್ ಪರ ನಾಳೆ ಮೌನ ಧರಣಿ

ಪ್ರಶಾಂತ್‌ ಭೂಷಣ್‌ರವರೊಂದಿಗೆ ಐಕ್ಯಮತ್ಯ ಸಾರಲು ದಿನಾಂಕ 18.08.2020 ರಂದು, ಬೆಳಿಗ್ಗೆ 10.30 ರಿಂದ ಮಧ್ಯಾಹ್ನ 12.00 ರ ನಡುವೆ, ನಾವು ವಕೀಲರು ಮತ್ತು ಮಾನವ ಹಕ್ಕುಗಳ ಕಾರ್ಯಕರ್ತರ ಗುಂಪು, ಮೌರ್ಯ ವೃತ್ತದಲ್ಲಿ ಒಟ್ಟುಗೂಡುತ್ತೇವೆ ಎಂದು ಎಸ್‌.ಬಾಲನ್‌ರವರು ತಿಳಿಸಿದ್ದಾರೆ.

- Advertisement -
- Advertisement -

ಹಿರಿಯ ನ್ಯಾಯವಾದಿಗಳಾದ ಪ್ರಶಾಂತ್‌ ಭೂಷಣ್‌ ಟ್ವೀಟ್‌ ವಿಚಾರದ ನ್ಯಾಯಾಂಗ ನಿಂದನೆ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್‌ನ ಪೂರ್ಣ ನ್ಯಾಯಪೀಠದ ತೀರ್ಪಿನ ಬಗ್ಗೆ ತೀವ್ರ ನಿರಾಶೆಗೊಂಡಿದ್ದೇವೆ ಎಂದು ಬೆಂಗಳೂರು ಅಡ್ವೊಕೇಟ್ಸ್ ಗ್ರೂಪ್ ಹೇಳಿದೆ.

ಈ ಕುರಿತು ಪ್ರತಿಕಾ ಹೇಳಿಕೆ ನೀಡಿರುವ ಗ್ರೂಪ್‌ನ ಸಂಚಾಲಕರು ಮತ್ತು ಹಿರಿಯ ವಕೀಲರಾದ ಎಸ್.ಬಾಲನ್‌ರವರು ಪ್ರಶಾಂತ್ ಭೂಷಣ್‌ರೊಂದಿಗೆ ಐಕ್ಯಮತ್ಯ ಘೋಷಿಸಲು ಆಗಸ್ಟ್ 18ರಂದು ಬೆಂಗಳೂರಿನ ಮೌರ್ಯ ವೃತ್ತದಲ್ಲಿ ಒಟ್ಟುಗೂಡುತ್ತಿದ್ದೇವೆ ಎಂದು ತಿಳಿಸಿದ್ದಾರೆ.

12 ಜನವರಿ 2018 ರಂದು ನಡೆಸಿದ ಅಭೂತಪೂರ್ವ ಪತ್ರಿಕಾಗೋಷ್ಠಿಯಲ್ಲಿ, ಆಗಿನ ನಾಲ್ಕು ಸುಪ್ರೀಂ ಕೋರ್ಟ್ ನ್ಯಾಯಾಧೀಶರು ಮತ್ತು ನ್ಯಾಯಮೂರ್ತಿಗಳು ಅಂದಿನ ಗೌರವಾನ್ವಿತ ಮುಖ್ಯ ನ್ಯಾಯಮೂರ್ತಿಗಳೊಂದಿಗಿನ ತಮ್ಮ ಭಿನ್ನಾಭಿಪ್ರಾಯದ ಬಗ್ಗೆ, ರೋಸ್ಟರ್ ಅನ್ನು ನಿರ್ಧರಿಸುವ ವಿಧಾನ, ನ್ಯಾಯಾಂಗ ಪ್ರಕ್ರಿಯೆಯ ಸಮಗ್ರತೆ, ಸಾಂಸ್ಥಿಕ ಸಮಗ್ರತೆ ಇತ್ಯಾದಿಗಳನ್ನು ಪ್ರಶ್ನಿಸಿದರು. ನ್ಯಾಯಾಂಗದ ಪ್ರಮುಖ ತತ್ವಗಳು ಬಾಯಿಮಾತಿಗಷ್ಟೇ ಉಳಿದಿದ್ದು, ನೈತಿಕವಾಗಿ ರಾಜಿ ಮಾಡಿಕೊಂಡಿವೆ ಎಂದು ಅವರು ಬಹಿರಂಗವಾಗಿ ದೂರಿದ್ದರು. ಹೀಗಿರುವಾಗ ಮುಖ್ಯ ನ್ಯಾಯಮೂರ್ತಿಗಳ ಬಗೆಗಿನ ಟೀಕೆಯು ನ್ಯಾಯಾಂಗ ನಿಂದನೆಯಾಗಲು ಹೇಗೆ ಸಾಧ್ಯ ಎಂದು ಅವರು ಪ್ರಶ್ನಿಸಿದ್ದಾರೆ.

ಪ್ರಶಾಂತ್‌ ಭೂಷಣ್‌ರವರ ಟ್ವೀಟ್‌ಗಳು ಅಪರಾಧವಲ್ಲ. ಅವರು ಸಮಾಜದ ಅನೇಕ ದುರ್ಬಲ ವರ್ಗಗಳ ಪರವಾಗಿ ಕೆಲಸ ಮಾಡಿದ ಅಪರೂಪದ ನ್ಯಾಯವಾದಿ. ಈ ನಿರ್ಣಾಯಕ ಹಂತದಲ್ಲಿ, ನಾವು ಧ್ವನಿ ಇಲ್ಲದವರ ಧ್ವನಿಯಾದ ಪ್ರಶಾಂತ್ ಭೂಷಣ್ ಅವರೊಂದಿಗೆ ನಿಲ್ಲುತ್ತೇವೆ ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.

ಪ್ರಶಾಂತ್‌ ಭೂಷಣ್‌ರವರೊಂದಿಗೆ ಐಕ್ಯಮತ್ಯ ಸಾರಲು ದಿನಾಂಕ 18.08.2020 ರಂದು, ಬೆಳಿಗ್ಗೆ 10.30 ರಿಂದ ಮಧ್ಯಾಹ್ನ 12.00 ರ ನಡುವೆ, ನಾವು ವಕೀಲರು ಮತ್ತು ಮಾನವ ಹಕ್ಕುಗಳ ಕಾರ್ಯಕರ್ತರ ಗುಂಪು, ಮೌರ್ಯ ವೃತ್ತದಲ್ಲಿ ಒಟ್ಟುಗೂಡುತ್ತೇವೆ ಎಂದು ಎಸ್‌.ಬಾಲನ್‌ರವರು ತಿಳಿಸಿದ್ದಾರೆ.


ಇದನ್ನೂ ಓದಿ: ಪ್ರಶಾಂತ್ ಭೂಷಣ್ ಪ್ರಕರಣ: ಪುನರ್ ಪರಶೀಲನಾ ಮನವಿ ಸಲ್ಲಿಸಲು ವಕೀಲರಿಗೆ ಕರೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...