Homeಮುಖಪುಟನಾವು ಮಹಿಳಾ ಅಥ್ಲೀಟ್‌ಗಳೊಂದಿಗೆ ನಿಲ್ಲುತ್ತೇವೆ, ಸಾಕ್ಷಿ ನಿವೃತ್ತಿಯಿಂದ ಕ್ರೀಡಾ ಉದ್ಯಮ ಅಸಮಾಧಾನ: ವಿಜೇಂದರ್ ಸಿಂಗ್

ನಾವು ಮಹಿಳಾ ಅಥ್ಲೀಟ್‌ಗಳೊಂದಿಗೆ ನಿಲ್ಲುತ್ತೇವೆ, ಸಾಕ್ಷಿ ನಿವೃತ್ತಿಯಿಂದ ಕ್ರೀಡಾ ಉದ್ಯಮ ಅಸಮಾಧಾನ: ವಿಜೇಂದರ್ ಸಿಂಗ್

- Advertisement -
- Advertisement -

ಭಾರತೀಯ ಕುಸ್ತಿ ಫೆಡರೇಷನ್ ಮುಖ್ಯಸ್ಥರಾಗಿ (ಡಬ್ಲ್ಯೂಎಫ್ಐ) ಬಿಜೆಪಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ಆಪ್ತ ಸಂಜಯ್ ಸಿಂಗ್ ಆಯ್ಕೆಯಾಗಿದ್ದರಿಂದ ಮನನೊಂದು ಒಲಂಪಿಕ್ ಪದಕ ವಿಜೇತೆ, ಕುಸ್ತಿಪಟು ಸಾಕ್ಷಿ ಮಲ್ಲಿಕ್ ನಿವೃತ್ತಿ ಘೋಷಣೆ ಮಾಡಿದ್ದಾರೆ. ಈ ಕುರಿತು ಇಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿರುವ ಅಥ್ಲೀಟ್ ಹಾಗೂ ಕಾಂಗ್ರೆಸ್ ಮುಖಂಡ ವಿಜೇಂದರ್ ಸಿಂಗ್, ‘ನಾವು ಮಹಿಳಾ ಅಥ್ಲೀಟ್‌ಗಳ ಜತೆ ನಿಲ್ಲುತ್ತೇವೆ. ಸಾಕ್ಷಿ ಮಲ್ಲಿಕ್ ನಿವೃತ್ತಿ ನಿರ್ಧಾರದಿಂದ ಕ್ರೀಡಾ ಉದ್ಯಮ ಅಸಮಾಧಾನಗೊಂಡಿದೆ’ ಎಂದು ಹೇಳಿದ್ದಾರೆ.

ಒಲಿಂಪಿಕ್ಸ್‌ನಲ್ಲಿ ಚಿನ್ನದ ಪದಕ ಗೆದ್ದ ಭಾರತದ ಮೊದಲ ಬಾಕ್ಸರ್ ವಿಜೇಂದರ್ ಸಿಂಗ್, ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧದ ಹೋರಾಟದಲ್ಲಿ ಮುಂಚೂಣಿಯಲ್ಲಿರುವ ಕುಸ್ತಿಪಟು ಸಾಕ್ಷಿ ಮಲಿಕ್‌ಗೆ ಬೆಂಬಲ ಘೋಷಿಸಿದ್ದಾರೆ. ‘ಕ್ರೀಡಾ ಉದ್ಯಮವು ಕುಸ್ತಿಪಟು ಸಾಕ್ಷಿ ಮಲಿಕ್ ಅವರ ನಿವೃತ್ತಿಯಿಂದ ಅಸಮಾಧಾನಗೊಂಡಿದೆ. ನಾವು ಪ್ರತಿ ಆಟಗಾರ, ಪ್ರತಿ ಕ್ರೀಡಾಂಗಣ ಮತ್ತು ಪ್ರತಿ ‘ಅಖಾಡಾ’ಕ್ಕೆ ಹೋಗಿ ಅಥ್ಲೀಟ್‌ಗಳೊಂದಿಗೆ ಮಾತನಾಡುತ್ತೇವೆ. ಮಹಿಳಾ ಅಥ್ಲೀಟ್‌ಗಳ ಉದ್ಯೋಗ, ಸುರಕ್ಷತೆಗಾಗಿ ನಾವು ಅವರೊಂದಿಗೆ ನಿಲ್ಲುತ್ತೇವೆ’ ಎಂದು ಹೇಳಿದ್ದಾರೆ.

‘ಒಬ್ಬ ಮಹಿಳಾ ಆಟಗಾರ್ತಿಯಾಗಿ ಸಾಕ್ಷಿ ಮಲಿಕ್ ಅವರು ಕುಸ್ತಿ ತೊರೆಯುವ ನಿರ್ಧಾರ ಮಾಡುವಾಗ ಅವರಿಗಾಗಿರುವ ವೇದನೆಯನ್ನು ನಾನು ಅರ್ಥಮಾಡಿಕೊಳ್ಳಬಲ್ಲೆ. ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಸರ್ಕಾರದಿಂದ ನ್ಯಾಯ ಸಿಗಲಿಲ್ಲ. ದೇಶಕ್ಕಾಗಿ ಪದಕಗಳನ್ನು ತಂದುಕೊಟ್ಟ ಕ್ರೀಡಾಪಟುಗಳಿಗೆ ಹೀಗಾದರೆ, ಇನ್ನು ಜನ ಸಾಮಾನ್ಯರ ಗತಿಯೇನು’ ಎಂದು ಆತಂಕ ವ್ಯಕ್ತಪಡಿಸಿದ್ದಾರೆ.

‘ಒಬ್ಬ ಅಥ್ಲೀಟ್ ಆಗಿರುವ ನನಗೆ ಆಕೆಯ ನೋವು ಅರ್ಥವಾಗುತ್ತದೆ. ಕುಸ್ತಿಯಲ್ಲಿ ಪದಕ ಗೆದ್ದ ಏಕೈಕ ಮಹಿಳಾ ಆಟಗಾರ್ತಿ ನ್ಯಾಯಕ್ಕಾಗಿ ಬೇಡಿಕೆಯಿಟ್ಟಳು. ಆದರೆ, ಆಕೆಗೆ ಸಿಗಲಿಲ್ಲ. ಇದರಿಂದ ನೊಂದು ನಿವೃತ್ತಿ ಘೋಷಿಸಿದ್ದಾರೆ. ಇದರಿಂದ ಇಡೀ ವಿಶ್ವದಲ್ಲಿ ಭಾರತದ ಇಮೇಜ್ ಹೆಚ್ಚಾಗುತ್ತದೋ ಅಥವಾ ಕಡಿಮೆಯಾಗುತ್ತದೆಯೋ’ ಎಂದು ಪ್ರಶ್ನಿಸಿದರು.

‘ಸಾಕ್ಷಿ ನಿರ್ಧಾರಿಂದ ಇಡೀ ಕ್ರೀಡಾ ಉದ್ಯಮ ನಿರಾಶೆಗೊಂಡಿದೆ. ಹರಿಯಾಣದಲ್ಲಿ ಹುಡುಗರು ಮತ್ತು ಹುಡುಗಿಯರ ನಡುವೆ ತಾರತಮ್ಯವಿದೆ. ಈ ಬೆಳವಣಿಗೆ ನಂತರ ನಂತರ, ಪೋಷಕರು ತಮ್ಮ ಹೆಣ್ಣು ಮಕ್ಕಳನ್ನು ಕ್ರೀಡಾಂಗಣಕ್ಕೆ ಕಳುಹಿಸುತ್ತಾರೆಯೇ’ ಎಂದರು.

‘ಒಲಿಂಪಿಕ್ ಪದಕ ವಿಜೇತರಿಗೆ ನ್ಯಾಯ ನೀಡದಿದ್ದರೆ, ನಾವಾದರು ಅದನ್ನು ಹೇಗೆ ಪಡೆಯುತ್ತೇವೆ ಎಂದು ಹೆಣ್ಣುಮಕ್ಕಳ ಪೋಷಕರು ಚಿಂತಿಸುತ್ತಾರೆ? ಪ್ರಧಾನಿ, ಉಪರಾಷ್ಟ್ರಪತಿ ಮತ್ತು ರಾಷ್ಟ್ರಪತಿ ಎಲ್ಲರೂ ಬಂದು ಇದು ಹೇಗಾಯಿತು ಎಂದು ಉತ್ತರಿಸಬೇಕು. ಈ ಫಲಿತಾಂಶ ದೇಶದ ನ್ಯಾಯಾಂಗ ವ್ಯವಸ್ಥೆ ಮತ್ತು ಪ್ರಜಾಪ್ರಭುತ್ವದ ಕುರಿತು ಬಹಳಷ್ಟು ಪ್ರಶ್ನೆಗಳನ್ನು ಹುಟ್ಟುಹಾಕುತ್ತದೆ’ ಎಂದರು.

ಈ ಬಗ್ಗೆ ನಿನ್ನೆ ಸುದ್ದಿಗೋಷ್ಠಿ ನಡೆಸಿದ್ದ ಸಾಕ್ಷಿ ಮಲಿಕ್, ‘ಕುಸ್ತಿ ಸಂಸ್ಥೆಗೆ ಮಹಿಳಾ ಮುಖ್ಯಸ್ಥರು ಆಯ್ಕೆಯಾಗಬೇಕು ಎಂದು ನಾವು ಬಯಸಿದ್ದೆವೆ. ಆದರೆ, ಅದು ಸಾಧ್ಯವಾಗಲಿಲ್ಲ. ನಾವು ಹೋರಾಡಿದೆವು; ಆದರೆ ಹೊಸ ಅಧ್ಯಕ್ಷರು ಬ್ರಿಜ್ ಭೂಷಣ್ ಅವರ ಸಹಾಯಕ. ಅವರ ವ್ಯಾಪಾರದಲ್ಲಿ ಪಾಲುದಾರರಾಗಿದ್ದಾರೆ. ನಾನು ಕುಸ್ತಿಯನ್ನು ತ್ಯಜಿಸುತ್ತೇನೆ’ ಎಂದು ಹೇಳಿದ ಅವರು, ತನ್ನ ಬೂಟುಗಳನ್ನು ಕಳಚಿ ಮೇಜಿನ ಮೇಲಿಟ್ಟು ನಿವೃತ್ತಿ ಘೋಷಿಸಿದರು.

ಇದನ್ನೂ ಓದಿ; ಕುಸ್ತಿ ತ್ಯಜಿಸುತ್ತಿದ್ದೇನೆ…; ಬೂಟು ಕಳಚಿಟ್ಟ ಒಲಂಪಿಕ್ ಪದಕ ವಿಜೇತೆ ಸಾಕ್ಷಿ ಮಲಿಕ್!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...