Homeಮುಖಪುಟನಾವು ಮಹಿಳಾ ಅಥ್ಲೀಟ್‌ಗಳೊಂದಿಗೆ ನಿಲ್ಲುತ್ತೇವೆ, ಸಾಕ್ಷಿ ನಿವೃತ್ತಿಯಿಂದ ಕ್ರೀಡಾ ಉದ್ಯಮ ಅಸಮಾಧಾನ: ವಿಜೇಂದರ್ ಸಿಂಗ್

ನಾವು ಮಹಿಳಾ ಅಥ್ಲೀಟ್‌ಗಳೊಂದಿಗೆ ನಿಲ್ಲುತ್ತೇವೆ, ಸಾಕ್ಷಿ ನಿವೃತ್ತಿಯಿಂದ ಕ್ರೀಡಾ ಉದ್ಯಮ ಅಸಮಾಧಾನ: ವಿಜೇಂದರ್ ಸಿಂಗ್

- Advertisement -
- Advertisement -

ಭಾರತೀಯ ಕುಸ್ತಿ ಫೆಡರೇಷನ್ ಮುಖ್ಯಸ್ಥರಾಗಿ (ಡಬ್ಲ್ಯೂಎಫ್ಐ) ಬಿಜೆಪಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ಆಪ್ತ ಸಂಜಯ್ ಸಿಂಗ್ ಆಯ್ಕೆಯಾಗಿದ್ದರಿಂದ ಮನನೊಂದು ಒಲಂಪಿಕ್ ಪದಕ ವಿಜೇತೆ, ಕುಸ್ತಿಪಟು ಸಾಕ್ಷಿ ಮಲ್ಲಿಕ್ ನಿವೃತ್ತಿ ಘೋಷಣೆ ಮಾಡಿದ್ದಾರೆ. ಈ ಕುರಿತು ಇಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿರುವ ಅಥ್ಲೀಟ್ ಹಾಗೂ ಕಾಂಗ್ರೆಸ್ ಮುಖಂಡ ವಿಜೇಂದರ್ ಸಿಂಗ್, ‘ನಾವು ಮಹಿಳಾ ಅಥ್ಲೀಟ್‌ಗಳ ಜತೆ ನಿಲ್ಲುತ್ತೇವೆ. ಸಾಕ್ಷಿ ಮಲ್ಲಿಕ್ ನಿವೃತ್ತಿ ನಿರ್ಧಾರದಿಂದ ಕ್ರೀಡಾ ಉದ್ಯಮ ಅಸಮಾಧಾನಗೊಂಡಿದೆ’ ಎಂದು ಹೇಳಿದ್ದಾರೆ.

ಒಲಿಂಪಿಕ್ಸ್‌ನಲ್ಲಿ ಚಿನ್ನದ ಪದಕ ಗೆದ್ದ ಭಾರತದ ಮೊದಲ ಬಾಕ್ಸರ್ ವಿಜೇಂದರ್ ಸಿಂಗ್, ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧದ ಹೋರಾಟದಲ್ಲಿ ಮುಂಚೂಣಿಯಲ್ಲಿರುವ ಕುಸ್ತಿಪಟು ಸಾಕ್ಷಿ ಮಲಿಕ್‌ಗೆ ಬೆಂಬಲ ಘೋಷಿಸಿದ್ದಾರೆ. ‘ಕ್ರೀಡಾ ಉದ್ಯಮವು ಕುಸ್ತಿಪಟು ಸಾಕ್ಷಿ ಮಲಿಕ್ ಅವರ ನಿವೃತ್ತಿಯಿಂದ ಅಸಮಾಧಾನಗೊಂಡಿದೆ. ನಾವು ಪ್ರತಿ ಆಟಗಾರ, ಪ್ರತಿ ಕ್ರೀಡಾಂಗಣ ಮತ್ತು ಪ್ರತಿ ‘ಅಖಾಡಾ’ಕ್ಕೆ ಹೋಗಿ ಅಥ್ಲೀಟ್‌ಗಳೊಂದಿಗೆ ಮಾತನಾಡುತ್ತೇವೆ. ಮಹಿಳಾ ಅಥ್ಲೀಟ್‌ಗಳ ಉದ್ಯೋಗ, ಸುರಕ್ಷತೆಗಾಗಿ ನಾವು ಅವರೊಂದಿಗೆ ನಿಲ್ಲುತ್ತೇವೆ’ ಎಂದು ಹೇಳಿದ್ದಾರೆ.

‘ಒಬ್ಬ ಮಹಿಳಾ ಆಟಗಾರ್ತಿಯಾಗಿ ಸಾಕ್ಷಿ ಮಲಿಕ್ ಅವರು ಕುಸ್ತಿ ತೊರೆಯುವ ನಿರ್ಧಾರ ಮಾಡುವಾಗ ಅವರಿಗಾಗಿರುವ ವೇದನೆಯನ್ನು ನಾನು ಅರ್ಥಮಾಡಿಕೊಳ್ಳಬಲ್ಲೆ. ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಸರ್ಕಾರದಿಂದ ನ್ಯಾಯ ಸಿಗಲಿಲ್ಲ. ದೇಶಕ್ಕಾಗಿ ಪದಕಗಳನ್ನು ತಂದುಕೊಟ್ಟ ಕ್ರೀಡಾಪಟುಗಳಿಗೆ ಹೀಗಾದರೆ, ಇನ್ನು ಜನ ಸಾಮಾನ್ಯರ ಗತಿಯೇನು’ ಎಂದು ಆತಂಕ ವ್ಯಕ್ತಪಡಿಸಿದ್ದಾರೆ.

‘ಒಬ್ಬ ಅಥ್ಲೀಟ್ ಆಗಿರುವ ನನಗೆ ಆಕೆಯ ನೋವು ಅರ್ಥವಾಗುತ್ತದೆ. ಕುಸ್ತಿಯಲ್ಲಿ ಪದಕ ಗೆದ್ದ ಏಕೈಕ ಮಹಿಳಾ ಆಟಗಾರ್ತಿ ನ್ಯಾಯಕ್ಕಾಗಿ ಬೇಡಿಕೆಯಿಟ್ಟಳು. ಆದರೆ, ಆಕೆಗೆ ಸಿಗಲಿಲ್ಲ. ಇದರಿಂದ ನೊಂದು ನಿವೃತ್ತಿ ಘೋಷಿಸಿದ್ದಾರೆ. ಇದರಿಂದ ಇಡೀ ವಿಶ್ವದಲ್ಲಿ ಭಾರತದ ಇಮೇಜ್ ಹೆಚ್ಚಾಗುತ್ತದೋ ಅಥವಾ ಕಡಿಮೆಯಾಗುತ್ತದೆಯೋ’ ಎಂದು ಪ್ರಶ್ನಿಸಿದರು.

‘ಸಾಕ್ಷಿ ನಿರ್ಧಾರಿಂದ ಇಡೀ ಕ್ರೀಡಾ ಉದ್ಯಮ ನಿರಾಶೆಗೊಂಡಿದೆ. ಹರಿಯಾಣದಲ್ಲಿ ಹುಡುಗರು ಮತ್ತು ಹುಡುಗಿಯರ ನಡುವೆ ತಾರತಮ್ಯವಿದೆ. ಈ ಬೆಳವಣಿಗೆ ನಂತರ ನಂತರ, ಪೋಷಕರು ತಮ್ಮ ಹೆಣ್ಣು ಮಕ್ಕಳನ್ನು ಕ್ರೀಡಾಂಗಣಕ್ಕೆ ಕಳುಹಿಸುತ್ತಾರೆಯೇ’ ಎಂದರು.

‘ಒಲಿಂಪಿಕ್ ಪದಕ ವಿಜೇತರಿಗೆ ನ್ಯಾಯ ನೀಡದಿದ್ದರೆ, ನಾವಾದರು ಅದನ್ನು ಹೇಗೆ ಪಡೆಯುತ್ತೇವೆ ಎಂದು ಹೆಣ್ಣುಮಕ್ಕಳ ಪೋಷಕರು ಚಿಂತಿಸುತ್ತಾರೆ? ಪ್ರಧಾನಿ, ಉಪರಾಷ್ಟ್ರಪತಿ ಮತ್ತು ರಾಷ್ಟ್ರಪತಿ ಎಲ್ಲರೂ ಬಂದು ಇದು ಹೇಗಾಯಿತು ಎಂದು ಉತ್ತರಿಸಬೇಕು. ಈ ಫಲಿತಾಂಶ ದೇಶದ ನ್ಯಾಯಾಂಗ ವ್ಯವಸ್ಥೆ ಮತ್ತು ಪ್ರಜಾಪ್ರಭುತ್ವದ ಕುರಿತು ಬಹಳಷ್ಟು ಪ್ರಶ್ನೆಗಳನ್ನು ಹುಟ್ಟುಹಾಕುತ್ತದೆ’ ಎಂದರು.

ಈ ಬಗ್ಗೆ ನಿನ್ನೆ ಸುದ್ದಿಗೋಷ್ಠಿ ನಡೆಸಿದ್ದ ಸಾಕ್ಷಿ ಮಲಿಕ್, ‘ಕುಸ್ತಿ ಸಂಸ್ಥೆಗೆ ಮಹಿಳಾ ಮುಖ್ಯಸ್ಥರು ಆಯ್ಕೆಯಾಗಬೇಕು ಎಂದು ನಾವು ಬಯಸಿದ್ದೆವೆ. ಆದರೆ, ಅದು ಸಾಧ್ಯವಾಗಲಿಲ್ಲ. ನಾವು ಹೋರಾಡಿದೆವು; ಆದರೆ ಹೊಸ ಅಧ್ಯಕ್ಷರು ಬ್ರಿಜ್ ಭೂಷಣ್ ಅವರ ಸಹಾಯಕ. ಅವರ ವ್ಯಾಪಾರದಲ್ಲಿ ಪಾಲುದಾರರಾಗಿದ್ದಾರೆ. ನಾನು ಕುಸ್ತಿಯನ್ನು ತ್ಯಜಿಸುತ್ತೇನೆ’ ಎಂದು ಹೇಳಿದ ಅವರು, ತನ್ನ ಬೂಟುಗಳನ್ನು ಕಳಚಿ ಮೇಜಿನ ಮೇಲಿಟ್ಟು ನಿವೃತ್ತಿ ಘೋಷಿಸಿದರು.

ಇದನ್ನೂ ಓದಿ; ಕುಸ್ತಿ ತ್ಯಜಿಸುತ್ತಿದ್ದೇನೆ…; ಬೂಟು ಕಳಚಿಟ್ಟ ಒಲಂಪಿಕ್ ಪದಕ ವಿಜೇತೆ ಸಾಕ್ಷಿ ಮಲಿಕ್!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎಲ್‌ಪಿಜಿ ಬಿಕ್ಕಟ್ಟು: ಹೋಟೆಲ್ ಮಾಲೀಕರಿಗೆ ವಿದ್ಯುತ್ ಒಲೆಗಳನ್ನು ಬಳಸಲು ಸೂಚಿಸಿದ ಸಚಿವ ಕೆ.ಎಚ್. ​​ಮುನಿಯಪ್ಪ

ಬೆಂಗಳೂರು: ಪಶ್ಚಿಮ ಏಷ್ಯಾ ಸಂಘರ್ಷದ ಪ್ರಭಾವ ಭಾರತೀಯರ ಅಡುಗೆ ಮನೆಯನ್ನು ಪ್ರವೇಶಿಸಿದ್ದು, ಎಲ್‌ಪಿಜಿ  ಬಿಕ್ಕಟ್ಟಿನಿಂದ ನಾಗರೀಕರು, ಸೇರಿದಂತೆ ಹೋಟೆಲ್ ಉಧ್ಯಮ ತೀವ್ರ ಸಂಕಷ್ಟಕ್ಕೆ ಸಿಲುಕಿವೆ. ಈ ನಡುವೆ ಯುದ್ಧದ ಪರಿಣಾಮ ಭಾರತದ ಮೇಲೆ...

ಹೋರಾಟಗಾರ ಸೋನಮ್ ವಾಂಗ್ಚುಕ್ ಬಂಧನ ರದ್ದುಗೊಳಿಸಿದ ಕೇಂದ್ರ

ಲಡಾಖ್‌ನಲ್ಲಿ ಶಾಂತಿಯನ್ನು ಮರುಸ್ಥಾಪಿಸಲು ಮತ್ತು ಮಾತುಕತೆಗೆ ಪೂರಕವಾದ ವಾತಾವರಣವನ್ನು ನಿರ್ಮಿಸುವ ಉದ್ದೇಶದಿಂದ, ರಾಷ್ಟ್ರೀಯ ಭದ್ರತಾ ಕಾಯ್ದೆಯಡಿ (ಎನ್‌ಎಸ್‌ಎ) ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಬಂಧನವನ್ನು ಕೇಂದ್ರ ಸರ್ಕಾರ ಹಿಂಪಡೆದಿದೆ ಎಂದು ವರದಿಯಾಗಿದೆ. ಸರ್ಕಾರ...

‘ಭಾರತವನ್ನು ಬೆದರಿಸುವಲ್ಲಿ ತಿಂಗಳುಗಟ್ಟಲೆ ಕಳೆದ ಅಮೆರಿಕ ಈಗ ಜಗತ್ತನ್ನ ಬೇಡಿಕೊಳ್ಳುತ್ತಿದೆ’: ರಷ್ಯಾದ ತೈಲ ವಿಚಾರದ ಕುರಿತು ಇರಾನ್ ಟೀಕೆ

ಟೆಹ್ರಾನ್: ರಷ್ಯಾದ ತೈಲದ ವಿಷಯದಲ್ಲಿ ಅಮೆರಿಕವು ದ್ವಿಮುಖ ನೀತಿಯನ್ನು ಅನುಸರಿಸುತ್ತಿದೆ ಎಂದು ಇರಾನ್ ಶನಿವಾರ ಆರೋಪಿಸಿದೆ. ವಾಷಿಂಗ್ಟನ್ ಈಗ ಒತ್ತಡ ಮತ್ತು ನಿರ್ಬಂಧಗಳ ಮೂಲಕ ನಿರ್ಬಂಧಿಸಲು ಪ್ರಯತ್ನಿಸಿದ ಅದೇ ಕಚ್ಚಾ ತೈಲವನ್ನು ಖರೀದಿಸಲು...

ಗಾಝಾ ನರಮೇಧ : ಅಂತಾರಾಷ್ಟ್ರೀಯ ನ್ಯಾಯಾಲಯದಲ್ಲಿ ಇಸ್ರೇಲ್‌ ಪರ ಅಮೆರಿಕ ವಕಾಲತ್ತು

ಗಾಝಾ ನರಮೇಧಕ್ಕೆ ಸಂಬಂಧಿಸಿದಂತೆ ಇಸ್ರೇಲ್ ವಿರುದ್ದ ಅಂತಾರಾಷ್ಟ್ರೀಯ ನ್ಯಾಯಾಲಯದಲ್ಲಿ ದಕ್ಷಿಣ ಆಫ್ರಿಕಾ ಹೂಡಿರುವ ಪ್ರಕರಣದಲ್ಲಿ ಅಮೆರಿಕ ಸೇರಿದಂತೆ ಕೆಲ ರಾಷ್ಟ್ರಗಳು ಮಧ್ಯ ಪ್ರವೇಶಿಸಿದ್ದು, ಇಸ್ರೇಲ್ ಪರ ವಕಾಲತ್ತು ವಹಿಸಲು ಮುಂದಾಗಿವೆ ಎಂದು ವರದಿಯಾಗಿದೆ. ದಿ...

ಇರಾನ್‌ನ ಕಿರೀಟ ರತ್ನ ಖಾರ್ಗ್ ದ್ವೀಪದ ಮೇಲೆ ಅಮೆರಿಕದಿಂದ ಬಾಂಬ್ ದಾಳಿ : ಟ್ರಂಪ್ ಹೇಳಿಕೆ

ಇರಾನ್‌ನ ಖಾರ್ಗ್ ದ್ವೀಪದ ಮೇಲೆ ಅಮೆರಿಕ 'ಅತ್ಯಂತ ಶಕ್ತಿಶಾಲಿ ಬಾಂಬ್ ದಾಳಿ' ನಡೆಸಿದೆ ಎಂದು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ತಿಳಿಸಿದ್ದಾರೆ. ದ್ವೀಪದಲ್ಲಿರುವ ತೈಲ ಮೂಲಸೌಕರ್ಯಗಳನ್ನು ನಾಶಪಡಿಸದೆ ಇರಲು ನಿರ್ಧರಿಸಿದ ಅಮೆರಿಕ ಪಡೆಗಳು, ಅಲ್ಲಿನ ಮಿಲಿಟರಿ ಕೇಂದ್ರಗಳನ್ನು...

ಪಂಜಾಬ್‌| ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ನಿಂತಿದ್ದಾಗಲೇ ಕುಸಿದು ಬಿದ್ದು ಸಾವನ್ನಪ್ಪಿದ ವೃದ್ಧ

ಪಂಜಾಬ್‌ನ ಬರ್ನಾಲಾ ಜಿಲ್ಲೆಯಲ್ಲಿ, ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ಕಾಯುತ್ತಿದ್ದಾಗ 66 ವರ್ಷದ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ಶುಕ್ರವಾರ ನಡೆದಿದೆ. ದೇಶದಲ್ಲಿ ಪ್ರಸ್ತುತ ನಡೆಯುತ್ತಿರುವ ಅನಿಲ ಕೊರತೆಯಿಂದ ಉಂಟಾಗುತ್ತಿರುವ...

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಪದಚ್ಯುತಿಗೆ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿದ ವಿಪಕ್ಷಗಳು

ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಅವರನ್ನು ಪದಚ್ಯುತಗೊಳಿಸುವಂತೆ ಕೋರಿ ವಿರೋಧ ಪಕ್ಷದ ಸಂಸದರು ಸಂಸತ್ತಿನ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿರುವುದಾಗಿ ಶುಕ್ರವಾರ ವರದಿಯಾಗಿದೆ.  ಈ ನೋಟಿಸ್‌ಗೆ 130 ಲೋಕಸಭಾ ಸದಸ್ಯರು...

ಹಿಂದೂಯೇತರರಿಗೆ ದೇಗುಲ ಪ್ರವೇಶಕ್ಕೆ ನಿಷೇಧ ಹೇರಿದ ಬದರೀನಾಥ್-ಕೇದಾರನಾಥ ದೇವಾಲಯಗಳ ಸಮಿತಿ

ಮುಂಬರುವ ತೀರ್ಥಯಾತ್ರೆಯ ಋತುವಿನಿಂದ ಜಾರಿಗೆ ಬರುವಂತೆ ಬದರೀನಾಥ್ ಮತ್ತು ಕೇದಾರನಾಥ ದೇವಾಲಯಗಳು ಸೇರಿದಂತೆ ಅದರ ವ್ಯಾಪ್ತಿಯಲ್ಲಿರುವ 47 ಇತರ ದೇವಾಲಯಗಳಿಗೆ ಹಿಂದೂಯೇತರರ ಪ್ರವೇಶವನ್ನು ನಿಷೇಧಿಸುವ ನಿರ್ಣಯವನ್ನು ಸರ್ವಾನುಮತದಿಂದ ದೇವಾಲಯ ಸಮಿತಿಯು ಅಂಗೀಕರಿಸಿದೆ. ಬಿಕೆಟಿಸಿ ಅಧ್ಯಕ್ಷ...

‘ಮಹಿಳೆಯರನ್ನು ಯಾರೂ ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ..’; ಕಡ್ಡಾಯ ಮುಟ್ಟಿನ ರಜೆ ಕುರಿತ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್ 

ಮಹಿಳೆಯರಿಗೆ ಕಡ್ಡಾಯ ಮುಟ್ಟಿನ ರಜೆ 'ಅವರ ಉದ್ಯೋಗದ ಮೇಲೆ ಪ್ರತಿಕೂಲ ಪರಿಣಾಮ ಬೀರಬಹುದು'. ಏಕೆಂದರೆ, ನಾವು ಅಂತಹ ಕಾನೂನನ್ನು ಜಾರಿಗೆ ತಂದರೆ ಉದ್ಯೋಗದಾತರು ಮಹಿಳೆಯರನ್ನು ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ' ಎಂದು ಸುಪ್ರೀಂ ಕೋರ್ಟ್‌ ಮುಖ್ಯ...

ಪ್ಯಾಲೆಸ್ತೀನಿಯನ್ ಬಂಧಿತನ ಮೇಲೆ ಲೈಂಗಿಕ ದೌರ್ಜನ್ಯ; ಇಸ್ರೇಲ್ ಸೈನಿಕರ ವಿರುದ್ಧದ ಆರೋಪ ಕೈಬಿಟ್ಟ ಸೇನೆ

ಕ್ಯಾಮೆರಾದಲ್ಲಿ ಭಾಗಶಃ ಸೆರೆಹಿಡಿಯಲಾದ ಹಲ್ಲೆಯಲ್ಲಿ, ಬಂಧಿತ ಪ್ಯಾಲೆಸ್ತೀನಿಯನ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಹೊತ್ತಿರುವ ಐದು ಸೈನಿಕರ ವಿರುದ್ಧದ ಆರೋಪಗಳನ್ನು ಕೈಬಿಡುತ್ತಿರುವುದಾಗಿ ಇಸ್ರೇಲ್ ಸೇನೆ (ಮಾರ್ಚ್ 12) ತಿಳಿಸಿದೆ. ಈ ಘೋಷಣೆಯನ್ನು ಪ್ರಧಾನಿ...