Homeಮುಖಪುಟನಾವು ಮಹಿಳಾ ಅಥ್ಲೀಟ್‌ಗಳೊಂದಿಗೆ ನಿಲ್ಲುತ್ತೇವೆ, ಸಾಕ್ಷಿ ನಿವೃತ್ತಿಯಿಂದ ಕ್ರೀಡಾ ಉದ್ಯಮ ಅಸಮಾಧಾನ: ವಿಜೇಂದರ್ ಸಿಂಗ್

ನಾವು ಮಹಿಳಾ ಅಥ್ಲೀಟ್‌ಗಳೊಂದಿಗೆ ನಿಲ್ಲುತ್ತೇವೆ, ಸಾಕ್ಷಿ ನಿವೃತ್ತಿಯಿಂದ ಕ್ರೀಡಾ ಉದ್ಯಮ ಅಸಮಾಧಾನ: ವಿಜೇಂದರ್ ಸಿಂಗ್

- Advertisement -
- Advertisement -

ಭಾರತೀಯ ಕುಸ್ತಿ ಫೆಡರೇಷನ್ ಮುಖ್ಯಸ್ಥರಾಗಿ (ಡಬ್ಲ್ಯೂಎಫ್ಐ) ಬಿಜೆಪಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ಆಪ್ತ ಸಂಜಯ್ ಸಿಂಗ್ ಆಯ್ಕೆಯಾಗಿದ್ದರಿಂದ ಮನನೊಂದು ಒಲಂಪಿಕ್ ಪದಕ ವಿಜೇತೆ, ಕುಸ್ತಿಪಟು ಸಾಕ್ಷಿ ಮಲ್ಲಿಕ್ ನಿವೃತ್ತಿ ಘೋಷಣೆ ಮಾಡಿದ್ದಾರೆ. ಈ ಕುರಿತು ಇಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿರುವ ಅಥ್ಲೀಟ್ ಹಾಗೂ ಕಾಂಗ್ರೆಸ್ ಮುಖಂಡ ವಿಜೇಂದರ್ ಸಿಂಗ್, ‘ನಾವು ಮಹಿಳಾ ಅಥ್ಲೀಟ್‌ಗಳ ಜತೆ ನಿಲ್ಲುತ್ತೇವೆ. ಸಾಕ್ಷಿ ಮಲ್ಲಿಕ್ ನಿವೃತ್ತಿ ನಿರ್ಧಾರದಿಂದ ಕ್ರೀಡಾ ಉದ್ಯಮ ಅಸಮಾಧಾನಗೊಂಡಿದೆ’ ಎಂದು ಹೇಳಿದ್ದಾರೆ.

ಒಲಿಂಪಿಕ್ಸ್‌ನಲ್ಲಿ ಚಿನ್ನದ ಪದಕ ಗೆದ್ದ ಭಾರತದ ಮೊದಲ ಬಾಕ್ಸರ್ ವಿಜೇಂದರ್ ಸಿಂಗ್, ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧದ ಹೋರಾಟದಲ್ಲಿ ಮುಂಚೂಣಿಯಲ್ಲಿರುವ ಕುಸ್ತಿಪಟು ಸಾಕ್ಷಿ ಮಲಿಕ್‌ಗೆ ಬೆಂಬಲ ಘೋಷಿಸಿದ್ದಾರೆ. ‘ಕ್ರೀಡಾ ಉದ್ಯಮವು ಕುಸ್ತಿಪಟು ಸಾಕ್ಷಿ ಮಲಿಕ್ ಅವರ ನಿವೃತ್ತಿಯಿಂದ ಅಸಮಾಧಾನಗೊಂಡಿದೆ. ನಾವು ಪ್ರತಿ ಆಟಗಾರ, ಪ್ರತಿ ಕ್ರೀಡಾಂಗಣ ಮತ್ತು ಪ್ರತಿ ‘ಅಖಾಡಾ’ಕ್ಕೆ ಹೋಗಿ ಅಥ್ಲೀಟ್‌ಗಳೊಂದಿಗೆ ಮಾತನಾಡುತ್ತೇವೆ. ಮಹಿಳಾ ಅಥ್ಲೀಟ್‌ಗಳ ಉದ್ಯೋಗ, ಸುರಕ್ಷತೆಗಾಗಿ ನಾವು ಅವರೊಂದಿಗೆ ನಿಲ್ಲುತ್ತೇವೆ’ ಎಂದು ಹೇಳಿದ್ದಾರೆ.

‘ಒಬ್ಬ ಮಹಿಳಾ ಆಟಗಾರ್ತಿಯಾಗಿ ಸಾಕ್ಷಿ ಮಲಿಕ್ ಅವರು ಕುಸ್ತಿ ತೊರೆಯುವ ನಿರ್ಧಾರ ಮಾಡುವಾಗ ಅವರಿಗಾಗಿರುವ ವೇದನೆಯನ್ನು ನಾನು ಅರ್ಥಮಾಡಿಕೊಳ್ಳಬಲ್ಲೆ. ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಸರ್ಕಾರದಿಂದ ನ್ಯಾಯ ಸಿಗಲಿಲ್ಲ. ದೇಶಕ್ಕಾಗಿ ಪದಕಗಳನ್ನು ತಂದುಕೊಟ್ಟ ಕ್ರೀಡಾಪಟುಗಳಿಗೆ ಹೀಗಾದರೆ, ಇನ್ನು ಜನ ಸಾಮಾನ್ಯರ ಗತಿಯೇನು’ ಎಂದು ಆತಂಕ ವ್ಯಕ್ತಪಡಿಸಿದ್ದಾರೆ.

‘ಒಬ್ಬ ಅಥ್ಲೀಟ್ ಆಗಿರುವ ನನಗೆ ಆಕೆಯ ನೋವು ಅರ್ಥವಾಗುತ್ತದೆ. ಕುಸ್ತಿಯಲ್ಲಿ ಪದಕ ಗೆದ್ದ ಏಕೈಕ ಮಹಿಳಾ ಆಟಗಾರ್ತಿ ನ್ಯಾಯಕ್ಕಾಗಿ ಬೇಡಿಕೆಯಿಟ್ಟಳು. ಆದರೆ, ಆಕೆಗೆ ಸಿಗಲಿಲ್ಲ. ಇದರಿಂದ ನೊಂದು ನಿವೃತ್ತಿ ಘೋಷಿಸಿದ್ದಾರೆ. ಇದರಿಂದ ಇಡೀ ವಿಶ್ವದಲ್ಲಿ ಭಾರತದ ಇಮೇಜ್ ಹೆಚ್ಚಾಗುತ್ತದೋ ಅಥವಾ ಕಡಿಮೆಯಾಗುತ್ತದೆಯೋ’ ಎಂದು ಪ್ರಶ್ನಿಸಿದರು.

‘ಸಾಕ್ಷಿ ನಿರ್ಧಾರಿಂದ ಇಡೀ ಕ್ರೀಡಾ ಉದ್ಯಮ ನಿರಾಶೆಗೊಂಡಿದೆ. ಹರಿಯಾಣದಲ್ಲಿ ಹುಡುಗರು ಮತ್ತು ಹುಡುಗಿಯರ ನಡುವೆ ತಾರತಮ್ಯವಿದೆ. ಈ ಬೆಳವಣಿಗೆ ನಂತರ ನಂತರ, ಪೋಷಕರು ತಮ್ಮ ಹೆಣ್ಣು ಮಕ್ಕಳನ್ನು ಕ್ರೀಡಾಂಗಣಕ್ಕೆ ಕಳುಹಿಸುತ್ತಾರೆಯೇ’ ಎಂದರು.

‘ಒಲಿಂಪಿಕ್ ಪದಕ ವಿಜೇತರಿಗೆ ನ್ಯಾಯ ನೀಡದಿದ್ದರೆ, ನಾವಾದರು ಅದನ್ನು ಹೇಗೆ ಪಡೆಯುತ್ತೇವೆ ಎಂದು ಹೆಣ್ಣುಮಕ್ಕಳ ಪೋಷಕರು ಚಿಂತಿಸುತ್ತಾರೆ? ಪ್ರಧಾನಿ, ಉಪರಾಷ್ಟ್ರಪತಿ ಮತ್ತು ರಾಷ್ಟ್ರಪತಿ ಎಲ್ಲರೂ ಬಂದು ಇದು ಹೇಗಾಯಿತು ಎಂದು ಉತ್ತರಿಸಬೇಕು. ಈ ಫಲಿತಾಂಶ ದೇಶದ ನ್ಯಾಯಾಂಗ ವ್ಯವಸ್ಥೆ ಮತ್ತು ಪ್ರಜಾಪ್ರಭುತ್ವದ ಕುರಿತು ಬಹಳಷ್ಟು ಪ್ರಶ್ನೆಗಳನ್ನು ಹುಟ್ಟುಹಾಕುತ್ತದೆ’ ಎಂದರು.

ಈ ಬಗ್ಗೆ ನಿನ್ನೆ ಸುದ್ದಿಗೋಷ್ಠಿ ನಡೆಸಿದ್ದ ಸಾಕ್ಷಿ ಮಲಿಕ್, ‘ಕುಸ್ತಿ ಸಂಸ್ಥೆಗೆ ಮಹಿಳಾ ಮುಖ್ಯಸ್ಥರು ಆಯ್ಕೆಯಾಗಬೇಕು ಎಂದು ನಾವು ಬಯಸಿದ್ದೆವೆ. ಆದರೆ, ಅದು ಸಾಧ್ಯವಾಗಲಿಲ್ಲ. ನಾವು ಹೋರಾಡಿದೆವು; ಆದರೆ ಹೊಸ ಅಧ್ಯಕ್ಷರು ಬ್ರಿಜ್ ಭೂಷಣ್ ಅವರ ಸಹಾಯಕ. ಅವರ ವ್ಯಾಪಾರದಲ್ಲಿ ಪಾಲುದಾರರಾಗಿದ್ದಾರೆ. ನಾನು ಕುಸ್ತಿಯನ್ನು ತ್ಯಜಿಸುತ್ತೇನೆ’ ಎಂದು ಹೇಳಿದ ಅವರು, ತನ್ನ ಬೂಟುಗಳನ್ನು ಕಳಚಿ ಮೇಜಿನ ಮೇಲಿಟ್ಟು ನಿವೃತ್ತಿ ಘೋಷಿಸಿದರು.

ಇದನ್ನೂ ಓದಿ; ಕುಸ್ತಿ ತ್ಯಜಿಸುತ್ತಿದ್ದೇನೆ…; ಬೂಟು ಕಳಚಿಟ್ಟ ಒಲಂಪಿಕ್ ಪದಕ ವಿಜೇತೆ ಸಾಕ್ಷಿ ಮಲಿಕ್!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನರಿಗೆ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿ

ಹಿರಿಯ ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನ ಹಿರಿಯ ಸಾಧಕರು 2026ನೇ ಸಾಲಿನ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿಗೆ ಭಾಜನರಾಗಿದ್ದಾರೆ. ರಾಯಚೂರು ಜಿಲ್ಲೆಯ ಹಿರಿಯ ದಲಿತ ಹೋರಾಟಗಾರ...

ಗಾಜಾ; ಗೊಂಬೆಯೊಂದಿಗೆ ‘ಅಂತ್ಯಕ್ರಿಯೆ’ ಆಟ ಆಡುವ ಎಳೆಯ ಮಕ್ಕಳ ವಿಡಿಯೋ ವೈರಲ್; ಸುತ್ತಲಿನ ಘಟನೆಯನ್ನು ಪುನರಾವರ್ತಿಸುವ ಮಕ್ಕಳು

ಅಕ್ಟೋಬರ್ 2023 ರಲ್ಲಿ ಇಸ್ರೇಲಿ ಮಿಲಿಟರಿ ದಾಳಿಯನ್ನು ಪ್ರಾರಂಭಿಸಿದ ನಂತರ ಗಾಜಾದಿಂದ ದುಃಖಕರ ದೃಶ್ಯಗಳು ಹೊರಹೊಮ್ಮುತ್ತಿವೆ. ಇತ್ತೀಚಿನ ಒಂದು ಘಟನೆಯಲ್ಲಿ, ಚಿಕ್ಕ ಮಕ್ಕಳು ಅಂತ್ಯಕ್ರಿಯೆಗಾಗಿ ಗೊಂಬೆಯನ್ನು ಹೊತ್ತುಕೊಂಡು ಹೋಗುವುದನ್ನು ಕಾಣಬಹುದು - ಇದು ಅವರು...

ದೆಹಲಿ| ಆಳವಾದ ಚರಂಡಿಗೆ ಬಿದ್ದು ನೈರ್ಮಲ್ಯ ಕಾರ್ಮಿಕ ಸಾವು; ನ್ಯಾಯಕ್ಕೆ ಆಗ್ರಹಿಸಿದ ಮೃತನ ಕುಟುಂಬ

ಮಾರ್ಚ್ 30 ರಂದು ಪೂರ್ವ ದೆಹಲಿಯ ದಿಲ್ಶಾದ್ ಗಾರ್ಡನ್ ಪ್ರದೇಶದಲ್ಲಿ ಸುರಕ್ಷತಾ ಸಾಧನಗಳಿಲ್ಲದೆ ಆಳವಾದ ಚರಂಡಿ ಸ್ವಚ್ಛಗೊಳಿಸುವ ಸಮಯದಲ್ಲಿ ಯುವ ನೈರ್ಮಲ್ಯ ಕಾರ್ಮಿಕ ರಾಹುಲ್ ಎಂಬುವವರು ಸಾವನ್ನಪ್ಪಿದ್ದಾರೆ. ಮಧ್ಯಾಹ್ನ 2:00 ರ ಸುಮಾರಿಗೆ...

ನಿವೃತ್ತ ನ್ಯಾಯಮೂರ್ತಿ ಸಂತೋಷ್‌ ಹೆಗ್ಡೆ ಆಸ್ಪತ್ರೆಗೆ ದಾಖಲು; ಕಾರ್ಯಕ್ರಮದಲ್ಲಿ ಏಕಾಏಕಿ ಕುಸಿದು ಬಿದ್ದು ಅಸ್ವಸ್ಥ

ಬೆಂಗಳೂರು: ಕರ್ನಾಟಕದ ನಿವೃತ್ತ ಲೋಕಾಯುಕ್ತ ಎನ್‌.ಸಂತೋಷ್‌ ಹೆಗ್ಡೆ ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದು, ಭಾಷಣದ ವೇಳೆ ಕುಸಿದು ಬಿದ್ದು ಅಸ್ವಸ್ಥರಾಗಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಏಪ್ರಿಲ್ 4ರ, ಶುಕ್ರವಾರ ಬೆಂಗಳೂರಿನ ಕೊಂಡಜಿ ಬಸಪ್ಪ ಸಭಾಂಗಣದಲ್ಲಿ...

ಎಸ್‌ಎಸ್‌ಎಲ್‌ಸಿಯಲ್ಲಿ ತೃತೀಯ ಭಾಷೆಗೆ ಗ್ರೇಡ್: ನಿರ್ಧಾರ ಪರಿಶೀಲಿಸುವಂತೆ ರಾಜ್ಯ ಸರ್ಕಾರಕ್ಕೆ ಸೂಚಿಸಿದ ರಾಜ್ಯಪಾಲ ಗೆಹ್ಲೋಟ್ 

ಬೆಂಗಳೂರು: 10ನೇ ತರಗತಿ ಪರೀಕ್ಷೆಯಲ್ಲಿ ತೃತೀಯ ಭಾಷೆಯ ವಿಷಯಕ್ಕೆ ಅಂಕಗಳನ್ನು ಬದಲಿಸುವ ನಿರ್ಧಾರವನ್ನು ಮರುಪರಿಶೀಲಿಸುವಂತೆ ಕರ್ನಾಟಕ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ರಾಜ್ಯ ಸರ್ಕಾರವನ್ನು ಕೇಳಿದ್ದಾರೆ. ಸರ್ಕಾರವು ಈ ನಿರ್ಧಾರವನ್ನು "ಸಮಗ್ರವಾಗಿ ಪರಿಶೀಲಿಸಬೇಕು" ಎಂದು ಲೋಕಭವನವು...

ತಿರುಚ್ಚಿ ಪೂರ್ವದ ಪೆರಂಬೂರಿನಲ್ಲಿ ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಅಫಿಡವಿಟ್‌ಗಳಲ್ಲಿ ಹಲವು ವ್ಯತ್ಯಾಸಗಳಿರುವುದಾಗಿ ವರದಿ  

ಚೆನ್ನೈ: ನಟ ಮತ್ತು ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಎರಡು ಪ್ರತ್ಯೇಕ ಚುನಾವಣಾ ಅಫಿಡವಿಟ್‌ಗಳಲ್ಲಿ ವ್ಯತ್ಯಾಸಗಳು ಕಾಣಿಸಿಕೊಂಡಿದ್ದು, ವಿಧಾನಸಭಾ ಚುನಾವಣೆಗೆ ಮುನ್ನ ಕಾನೂನು ಮತ್ತು ರಾಜಕೀಯ ಪರಿಶೀಲನೆಗೆ ಅವಕಾಶ ನೀಡುವ ಸಾಧ್ಯತೆಯಿದೆ. ಪೆರಂಬೂರು ಮತ್ತು...

ಉತ್ತಮ್ ನಗರದಲ್ಲಿ ಶಾಂತಿ ಕಾಪಾಡುವಲ್ಲಿ ದೆಹಲಿ ಪೊಲೀಸರ ಪ್ರಯತ್ನಗಳನ್ನು ಶ್ಲಾಘಿಸಿದ ಎಪಿಸಿಆರ್

ಈದ್ ಅಲ್-ಫಿತರ್, ರಾಮ ನವಮಿ ಮತ್ತು ಹನುಮಾನ್ ಜಯಂತಿ ಸೇರಿದಂತೆ ಧಾರ್ಮಿಕ ಹಬ್ಬಗಳ ಆಚರಣೆಯ ಸಂದರ್ಭದಲ್ಲಿ ರಾಷ್ಟ್ರ ರಾಜಧಾನಿಯ ಉತ್ತಮ್ ನಗರ ಪ್ರದೇಶದಲ್ಲಿ ಶಾಂತಿ ಮತ್ತು ಭದ್ರತೆಯನ್ನು ಕಾಪಾಡಿದ್ದಕ್ಕಾಗಿ ನಾಗರಿಕ ಹಕ್ಕುಗಳ ರಕ್ಷಣಾ...

ದಲಿತ ಸಮುದಾಯಕ್ಕೆ ಕ್ಷಮೆಯಾಚಿಸಿದ ನೇಪಾಳದ ಹೊಸ ಸರ್ಕಾರ

ಪ್ರಧಾನಿ ಬಾಲೇಂದ್ರ ಶಾ ಅವರ ನೇಪಾಳದ ಹೊಸ ಸರ್ಕಾರದ 100 ಅಂಶಗಳ ಸುಧಾರಣಾ ಕಾರ್ಯಸೂಚಿಯಡಿಯಲ್ಲಿ, ಮುಂದಿನ 15 ದಿನಗಳ ಒಳಗೆ ದಲಿತರು ಮತ್ತು ಐತಿಹಾಸಿಕವಾಗಿ ಹೊರಗಿಡಲ್ಪಟ್ಟ ಇತರೆ ಸಮುದಾಯಗಳಿಗೆ 'ಔಪಚಾರಿಕ ಕ್ಷಮೆಯಾಚನೆ' ಕೇಳುವುದಾಗಿ...

‘ಯಾರು ಹೆದರುತ್ತಾನೋ ಅವನು ಸತ್ತಂತೆ’: ರಾಘವ್ ಛಡ್ಡಾಗೆ ತೀವ್ರವಾಗಿ ಪ್ರತಿಕ್ರಿಯೆ ನೀಡಿದ ಎಎಪಿ ನಾಯಕ ಸೌರಭ್ ಭಾರದ್ವಾಜ್ 

ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕ ಮತ್ತು ದೆಹಲಿ ಘಟಕದ ಮುಖ್ಯಸ್ಥ ಸೌರಭ್ ಭಾರದ್ವಾಜ್ ಅವರು ವೀಡಿಯೊ ಸಂದೇಶದಲ್ಲಿ ಆಪ್ ಸಂಸದ ರಾಘವ್ ಛಡ್ಡಾ ಅವರು ಸಂಸತ್ತಿನಲ್ಲಿ "ಸಾಫ್ಟ್ ಪಿಆರ್" ನಲ್ಲಿ ತೊಡಗಿದ್ದಾರೆ...

ಚಂಡೀಗಢ ಬಿಜೆಪಿ ಕಚೇರಿ ಸ್ಫೋಟ: ಪಂಜಾಬ್ ಕೌಂಟರ್ ಇಂಟೆಲಿಜೆನ್ಸ್ ಪಡೆಯಿಂದ ಇಬ್ಬರು ಶಂಕಿತರ ಮನೆಗಳ ಮೇಲೆ ದಾಳಿ

ಚಂಡೀಗಢದಲ್ಲಿರುವ ಪಂಜಾಬ್ ಬಿಜೆಪಿ ಕಚೇರಿಯ ಹೊರಗೆ ಸ್ಫೋಟ ನಡೆಸಿದ ಆರೋಪದ ಮೇಲೆ ಇಬ್ಬರು ಶಂಕಿತರ ಮನೆಗಳ ಮೇಲೆ  ಪಂಜಾಬ್ ಪೊಲೀಸರ ಗುಪ್ತಚರ ನಿಗ್ರಹ ದಳವು ಇಂದು ಮುಂಜಾನೆ ದಾಳಿ ನಡೆಸಿದೆ.  ರೋಪರ್ ಜಿಲ್ಲೆಯ ಮೊರಿಂಡಾ ಪ್ರದೇಶದ...