Homeಮುಖಪುಟನಾವು ಮಹಿಳಾ ಅಥ್ಲೀಟ್‌ಗಳೊಂದಿಗೆ ನಿಲ್ಲುತ್ತೇವೆ, ಸಾಕ್ಷಿ ನಿವೃತ್ತಿಯಿಂದ ಕ್ರೀಡಾ ಉದ್ಯಮ ಅಸಮಾಧಾನ: ವಿಜೇಂದರ್ ಸಿಂಗ್

ನಾವು ಮಹಿಳಾ ಅಥ್ಲೀಟ್‌ಗಳೊಂದಿಗೆ ನಿಲ್ಲುತ್ತೇವೆ, ಸಾಕ್ಷಿ ನಿವೃತ್ತಿಯಿಂದ ಕ್ರೀಡಾ ಉದ್ಯಮ ಅಸಮಾಧಾನ: ವಿಜೇಂದರ್ ಸಿಂಗ್

- Advertisement -
- Advertisement -

ಭಾರತೀಯ ಕುಸ್ತಿ ಫೆಡರೇಷನ್ ಮುಖ್ಯಸ್ಥರಾಗಿ (ಡಬ್ಲ್ಯೂಎಫ್ಐ) ಬಿಜೆಪಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ಆಪ್ತ ಸಂಜಯ್ ಸಿಂಗ್ ಆಯ್ಕೆಯಾಗಿದ್ದರಿಂದ ಮನನೊಂದು ಒಲಂಪಿಕ್ ಪದಕ ವಿಜೇತೆ, ಕುಸ್ತಿಪಟು ಸಾಕ್ಷಿ ಮಲ್ಲಿಕ್ ನಿವೃತ್ತಿ ಘೋಷಣೆ ಮಾಡಿದ್ದಾರೆ. ಈ ಕುರಿತು ಇಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿರುವ ಅಥ್ಲೀಟ್ ಹಾಗೂ ಕಾಂಗ್ರೆಸ್ ಮುಖಂಡ ವಿಜೇಂದರ್ ಸಿಂಗ್, ‘ನಾವು ಮಹಿಳಾ ಅಥ್ಲೀಟ್‌ಗಳ ಜತೆ ನಿಲ್ಲುತ್ತೇವೆ. ಸಾಕ್ಷಿ ಮಲ್ಲಿಕ್ ನಿವೃತ್ತಿ ನಿರ್ಧಾರದಿಂದ ಕ್ರೀಡಾ ಉದ್ಯಮ ಅಸಮಾಧಾನಗೊಂಡಿದೆ’ ಎಂದು ಹೇಳಿದ್ದಾರೆ.

ಒಲಿಂಪಿಕ್ಸ್‌ನಲ್ಲಿ ಚಿನ್ನದ ಪದಕ ಗೆದ್ದ ಭಾರತದ ಮೊದಲ ಬಾಕ್ಸರ್ ವಿಜೇಂದರ್ ಸಿಂಗ್, ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧದ ಹೋರಾಟದಲ್ಲಿ ಮುಂಚೂಣಿಯಲ್ಲಿರುವ ಕುಸ್ತಿಪಟು ಸಾಕ್ಷಿ ಮಲಿಕ್‌ಗೆ ಬೆಂಬಲ ಘೋಷಿಸಿದ್ದಾರೆ. ‘ಕ್ರೀಡಾ ಉದ್ಯಮವು ಕುಸ್ತಿಪಟು ಸಾಕ್ಷಿ ಮಲಿಕ್ ಅವರ ನಿವೃತ್ತಿಯಿಂದ ಅಸಮಾಧಾನಗೊಂಡಿದೆ. ನಾವು ಪ್ರತಿ ಆಟಗಾರ, ಪ್ರತಿ ಕ್ರೀಡಾಂಗಣ ಮತ್ತು ಪ್ರತಿ ‘ಅಖಾಡಾ’ಕ್ಕೆ ಹೋಗಿ ಅಥ್ಲೀಟ್‌ಗಳೊಂದಿಗೆ ಮಾತನಾಡುತ್ತೇವೆ. ಮಹಿಳಾ ಅಥ್ಲೀಟ್‌ಗಳ ಉದ್ಯೋಗ, ಸುರಕ್ಷತೆಗಾಗಿ ನಾವು ಅವರೊಂದಿಗೆ ನಿಲ್ಲುತ್ತೇವೆ’ ಎಂದು ಹೇಳಿದ್ದಾರೆ.

‘ಒಬ್ಬ ಮಹಿಳಾ ಆಟಗಾರ್ತಿಯಾಗಿ ಸಾಕ್ಷಿ ಮಲಿಕ್ ಅವರು ಕುಸ್ತಿ ತೊರೆಯುವ ನಿರ್ಧಾರ ಮಾಡುವಾಗ ಅವರಿಗಾಗಿರುವ ವೇದನೆಯನ್ನು ನಾನು ಅರ್ಥಮಾಡಿಕೊಳ್ಳಬಲ್ಲೆ. ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಸರ್ಕಾರದಿಂದ ನ್ಯಾಯ ಸಿಗಲಿಲ್ಲ. ದೇಶಕ್ಕಾಗಿ ಪದಕಗಳನ್ನು ತಂದುಕೊಟ್ಟ ಕ್ರೀಡಾಪಟುಗಳಿಗೆ ಹೀಗಾದರೆ, ಇನ್ನು ಜನ ಸಾಮಾನ್ಯರ ಗತಿಯೇನು’ ಎಂದು ಆತಂಕ ವ್ಯಕ್ತಪಡಿಸಿದ್ದಾರೆ.

‘ಒಬ್ಬ ಅಥ್ಲೀಟ್ ಆಗಿರುವ ನನಗೆ ಆಕೆಯ ನೋವು ಅರ್ಥವಾಗುತ್ತದೆ. ಕುಸ್ತಿಯಲ್ಲಿ ಪದಕ ಗೆದ್ದ ಏಕೈಕ ಮಹಿಳಾ ಆಟಗಾರ್ತಿ ನ್ಯಾಯಕ್ಕಾಗಿ ಬೇಡಿಕೆಯಿಟ್ಟಳು. ಆದರೆ, ಆಕೆಗೆ ಸಿಗಲಿಲ್ಲ. ಇದರಿಂದ ನೊಂದು ನಿವೃತ್ತಿ ಘೋಷಿಸಿದ್ದಾರೆ. ಇದರಿಂದ ಇಡೀ ವಿಶ್ವದಲ್ಲಿ ಭಾರತದ ಇಮೇಜ್ ಹೆಚ್ಚಾಗುತ್ತದೋ ಅಥವಾ ಕಡಿಮೆಯಾಗುತ್ತದೆಯೋ’ ಎಂದು ಪ್ರಶ್ನಿಸಿದರು.

‘ಸಾಕ್ಷಿ ನಿರ್ಧಾರಿಂದ ಇಡೀ ಕ್ರೀಡಾ ಉದ್ಯಮ ನಿರಾಶೆಗೊಂಡಿದೆ. ಹರಿಯಾಣದಲ್ಲಿ ಹುಡುಗರು ಮತ್ತು ಹುಡುಗಿಯರ ನಡುವೆ ತಾರತಮ್ಯವಿದೆ. ಈ ಬೆಳವಣಿಗೆ ನಂತರ ನಂತರ, ಪೋಷಕರು ತಮ್ಮ ಹೆಣ್ಣು ಮಕ್ಕಳನ್ನು ಕ್ರೀಡಾಂಗಣಕ್ಕೆ ಕಳುಹಿಸುತ್ತಾರೆಯೇ’ ಎಂದರು.

‘ಒಲಿಂಪಿಕ್ ಪದಕ ವಿಜೇತರಿಗೆ ನ್ಯಾಯ ನೀಡದಿದ್ದರೆ, ನಾವಾದರು ಅದನ್ನು ಹೇಗೆ ಪಡೆಯುತ್ತೇವೆ ಎಂದು ಹೆಣ್ಣುಮಕ್ಕಳ ಪೋಷಕರು ಚಿಂತಿಸುತ್ತಾರೆ? ಪ್ರಧಾನಿ, ಉಪರಾಷ್ಟ್ರಪತಿ ಮತ್ತು ರಾಷ್ಟ್ರಪತಿ ಎಲ್ಲರೂ ಬಂದು ಇದು ಹೇಗಾಯಿತು ಎಂದು ಉತ್ತರಿಸಬೇಕು. ಈ ಫಲಿತಾಂಶ ದೇಶದ ನ್ಯಾಯಾಂಗ ವ್ಯವಸ್ಥೆ ಮತ್ತು ಪ್ರಜಾಪ್ರಭುತ್ವದ ಕುರಿತು ಬಹಳಷ್ಟು ಪ್ರಶ್ನೆಗಳನ್ನು ಹುಟ್ಟುಹಾಕುತ್ತದೆ’ ಎಂದರು.

ಈ ಬಗ್ಗೆ ನಿನ್ನೆ ಸುದ್ದಿಗೋಷ್ಠಿ ನಡೆಸಿದ್ದ ಸಾಕ್ಷಿ ಮಲಿಕ್, ‘ಕುಸ್ತಿ ಸಂಸ್ಥೆಗೆ ಮಹಿಳಾ ಮುಖ್ಯಸ್ಥರು ಆಯ್ಕೆಯಾಗಬೇಕು ಎಂದು ನಾವು ಬಯಸಿದ್ದೆವೆ. ಆದರೆ, ಅದು ಸಾಧ್ಯವಾಗಲಿಲ್ಲ. ನಾವು ಹೋರಾಡಿದೆವು; ಆದರೆ ಹೊಸ ಅಧ್ಯಕ್ಷರು ಬ್ರಿಜ್ ಭೂಷಣ್ ಅವರ ಸಹಾಯಕ. ಅವರ ವ್ಯಾಪಾರದಲ್ಲಿ ಪಾಲುದಾರರಾಗಿದ್ದಾರೆ. ನಾನು ಕುಸ್ತಿಯನ್ನು ತ್ಯಜಿಸುತ್ತೇನೆ’ ಎಂದು ಹೇಳಿದ ಅವರು, ತನ್ನ ಬೂಟುಗಳನ್ನು ಕಳಚಿ ಮೇಜಿನ ಮೇಲಿಟ್ಟು ನಿವೃತ್ತಿ ಘೋಷಿಸಿದರು.

ಇದನ್ನೂ ಓದಿ; ಕುಸ್ತಿ ತ್ಯಜಿಸುತ್ತಿದ್ದೇನೆ…; ಬೂಟು ಕಳಚಿಟ್ಟ ಒಲಂಪಿಕ್ ಪದಕ ವಿಜೇತೆ ಸಾಕ್ಷಿ ಮಲಿಕ್!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗುಜರಾತ್| ಮದುವೆ ಮೆರವಣಿಗೆಯಲ್ಲಿ ಕುದುರೆ ಸವಾರಿ ಮಾಡಿದ ದಲಿತ ವರನ ಮೇಲೆ ಹಲ್ಲೆ

ಗುಜರಾತ್‌ನ ಮೆಹ್ಸಾನಾ ಜಿಲ್ಲೆಯ ಮಡಿ ಗ್ರಾಮದಲ್ಲಿ ಮದುವೆ ಮೆರವಣಿಗೆಯಲ್ಲಿ ಕುದುರೆ ಸವಾರಿ ಮಾಡುತ್ತಿದ್ದ ದಲಿತ ವರನ ಮೇಲೆ ಮೇಲ್ಜಾತಿಯ ಪುರುಷರ ಗುಂಪೊಂದು ಜಾತಿ ನಿಂದನೆ ಮಾಡಿ ನಿಂದಿಸಿದ್ದಾರೆ ಎಂದು ಆರೋಪಿಸಲಾಗಿದೆ. ಮೇ 10 ರಂದು...

ಆತಂಕಕಾರಿಯಾದ ಆನೆ ದಾಳಿ

ಆನೆ ದಾಳಿ ಹಿಂದೆಂದಿಗಿಂತಲೂ ದುಪ್ಪಟ್ಟಾಗಿದೆ. ಅರಣ್ಯಮಂತ್ರಿ ಈಶ್ವರ್ ಖಂಡ್ರೆಯವರ ಪ್ರಕಾರ ಆನೆಗಳ ಸಂಖ್ಯೆ ದುಪ್ಪಟ್ಟಾಗಿದೆ. ಕಾಡಿನ ಪ್ರಮಾಣ ಅಷ್ಟೆ ಇದೆ. ಅಂದರೆ ಕಾಡಿನ ಪ್ರಮಾಣ ಹೆಚ್ಚು ಮಾಡಬೇಕೆಂದರೆ ಮನುಷ್ಯರ ಆವಾಸ ಇಲ್ಲದೆ ಆನೆಗಳಿಗಾಗಿ...

ವೈದ್ಯಕೀಯ ಸೀಟುಗಳ ಹಂಚಿಕೆ ಕೇಂದ್ರೀಕರಣಕ್ಕೆ ದಕ್ಷಿಣದ ವಿರೋಧ; ನೀಟ್ ಪರೀಕ್ಷೆಯನ್ನೇ ರದ್ದುಗೊಳಿಸಲು ಇದು ಸಕಾಲ

ರಾಜ್ಯಪಟ್ಟಿಯಲ್ಲಿದ್ದ ಶಿಕ್ಷಣದ ಹಕ್ಕನ್ನು ನೀಟ್‌ ಹೆಸರಿನಲ್ಲಿ ಕೇಂದ್ರದ ಜಂಟಿ ಪಟ್ಟಿಗೆ ಸೇರಿಸುವ ಒಕ್ಕೂಟ ಸರ್ಕಾರದ ನಿರ್ಧಾರದಿಂದ ದಕ್ಷಿಣದ ರಾಜ್ಯಗಳು ಭಾರಿ ನಷ್ಟ ಅನುಭವಿಸುತ್ತಿವೆ. ಜೊತೆಗೆ, ನೀಟ್ ಪಾಸ್‌ ಮಾಡುವ ಒತ್ತಡ ತಾಳಲಾರದೆ ದೇಶದಾದ್ಯಂತ...

‘ಮತ’ ವ್ಯರ್ಥ ಮಾಡದ ಮತದಾರ: 2026ರಲ್ಲಿ ಕುಸಿಯಿತು ‘ನೋಟಾ’ ಅಬ್ಬರ

2026ರ ವಿಧಾನಸಭಾ ಚುನಾವಣೆಯಲ್ಲಿ ಅಸ್ಸಾಂ, ಕೇರಳ, ಪುದುಚೇರಿ, ತಮಿಳುನಾಡು ಮತ್ತು ಪಶ್ಚಿಮ ಬಂಗಾಳದಾದ್ಯಂತ ಸುಮಾರು 10.9 ಲಕ್ಷ ಮತಗಳು 'ನೋಟಾ' (ಯಾರಿಗೂ ಮತವಿಲ್ಲ) ಪಾಲಾಗಿವೆ. ಆದರೆ, 2016 ಮತ್ತು 2021ರ ಚುನಾವಣೆಗಳಿಗೆ ಹೋಲಿಸಿದರೆ...

ಕೇರಳದ 13ನೇ ಮುಖ್ಯಮಂತ್ರಿ ವಿ.ಡಿ. ಸತೀಶನ್: ವಿದ್ಯಾರ್ಥಿ ನಾಯಕನಿಂದ ಸಿಎಂ ಸ್ಥಾನದವರೆಗೆ ಸತೀಶನ್ ಪಯಣ

ತಿರುವನಂತಪುರಂ: ಕೇರಳಂನ ನೂತನ ಮುಖ್ಯಮಂತ್ರಿಯಾಗಿ ವಿ.ಡಿ. ಸತೀಶನ್ ಅವರನ್ನು ಕಾಂಗ್ರೆಸ್ ಹೈಕಮಾಂಡ್ ಆಯ್ಕೆ ಮಾಡಿದೆ. ಆ ಮೂಲಕ ಹಲವು ದಿನಗಳಿಂದ ಈ ಬಗ್ಗೆ ನಡೆಯುತ್ತಿದ್ದ ಕುತೂಹಲ ಮತ್ತು ಚರ್ಚೆಗಳಿಗೆ ತೆರೆ ಬಿದ್ದಿದೆ.  ಅಖಿಲ ಭಾರತ...

ದಲಿತರ ನ್ಯಾಯಕ್ಕೆ ಹೊಸ ಅಡ್ಡಿಯಾಗಲಿದೆಯೇ ‘ಸಾರ್ವಜನಿಕ ವೀಕ್ಷಣೆ’ ನಿಯಮ? ಪರಿಶಿಷ್ಟರನ್ನು ಆತಂಕಕ್ಕೆ ತಳ್ಳಿದ ಸುಪ್ರೀಂ ತೀರ್ಪು

ಸಾರ್ವಜನಿಕರು ನೋಡದ ಜಾಗದಲ್ಲಿ, ಅಂದರೆ ಯಾರೂ ನೋಡದ ಜಾಗದಲ್ಲಿ ಜಾತಿ ನಿಂದನೆ ಅಥವಾ ಅವಮಾನ ನಡೆದರೆ, ಅದು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆ 1989ರ ಅಡಿಯಲ್ಲಿ ಅಪರಾಧ...

ಪಶ್ಚಿಮ ಬಂಗಾಳ: “ಇದು ಬುಲ್ಡೋಜರ್ ರಾಜ್ಯವಲ್ಲ”: ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮತ್ತು ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಗುರುವಾರ ವಕೀಲರ ನಿಲುವಂಗಿಯನ್ನು ಧರಿಸಿ ಕಲ್ಕತ್ತಾ ಹೈಕೋರ್ಟ್‌ಗೆ ಬಂದ ಅವರು ವಿಧಾನಸಭಾ...

ದಾವಣಗೆರೆ ಉಪ ಚುನಾವಣೆ ಅಡ್ಡ ಪರಿಣಾಮ: ಮುಸ್ಲಿಮ್ ಮುಖಂಡರ ಮೇಲೆ ಖರ್ಗೆ-ಡಿಕೆಶಿ ಶಿಸ್ತು ಪ್ರಹಾರ ಕಾಂಗ್ರೆಸ್‌ನ ಆತ್ಮಹತ್ಯಾತ್ಮಕ ರಾಜಕಾರಣ!!

ದಾವಣಗೆರೆ ದಕ್ಷಿಣ ಉಪ ಚುನಾವಣೆ ರಾಜ್ಯದ ಆಡಳಿತಾರೂಢ ಕಾಂಗ್ರೆಸ್‌ನ ಗದ್ದುಗೆ ಗುದ್ದಾಟಕ್ಕೆ ರೋಚಕ ಆಯಾಮ ನೀಡಿಬಿಟ್ಟಿದೆ. ಅಹಿಂದ ಸಮುದಾಯವೇ ಬಹುಜನರಾಗಿರುವ ದಾವಣಗೆರೆ ದಕ್ಷಿಣ ಅಸೆಂಬ್ಲಿ ಕ್ಷೇತ್ರದಲ್ಲಿ ಕಾಂಗ್ರೆಸ್ ನ್ಯಾಯವಾಗಿ ಆ ವರ್ಗದ ಅರ್ಹರೊಬ್ಬರಿಗೆ...

ನೀಟ್ ವಿವಾದ: ಪ್ರಶ್ನೆ ಪತ್ರಿಕೆ ಸೋರಿಕೆ ಜೊತೆಗೆ ಹೆಚ್ಚುತ್ತಿರುವ ವಿದ್ಯಾರ್ಥಿಗಳ ಆತ್ಮಹತ್ಯೆ

ರಾಜಸ್ಥಾನದಲ್ಲಿ ನಡೆದ ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ (ಸಿಬಿಐ) ತನಿಖೆ ವೇಗ ಪಡೆದುಕೊಂಡಿದೆ. ದೇಶದಾದ್ಯಂತ ಹಲವು ವಿದ್ಯಾರ್ಥಿ ಸಂಘಟನೆಗಳು ಪ್ರತಿಭಟನೆ ನಡೆಸುತ್ತಿವೆ. ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಮೇಲೆ...

ಎಸ್‌ಐಆರ್‌ನಲ್ಲಿ ಮತದಾನದ ಹಕ್ಕು ಹೋಯ್ತು..ಈಗ ಸರ್ಕಾರಿ ಸೌಲಭ್ಯದ ಸರದಿ..ಮುಂದೆ ನಾಗರಿಕತ್ವ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುವುದು ಚುನಾವಣಾ ಆಯೋಗ ಭಾರತದ ಕೋಟ್ಯಾಂತರ ನಾಗರಿಕ ಅಮೂಲ್ಯವಾದ ಮತದಾನದ ಹಕ್ಕನ್ನು ಕಿತ್ತುಕೊಂಡ ಒಂದು ವ್ಯವಸ್ಥಿತ ಸಂಚು ಎನ್ನಬಹುದು. ಬಿಹಾರ, ಪಶ್ಚಿಮ ಬಂಗಾಳ, ತಮಿಳುನಾಡು,...