Homeಮುಖಪುಟನಾವು ಮಹಿಳಾ ಅಥ್ಲೀಟ್‌ಗಳೊಂದಿಗೆ ನಿಲ್ಲುತ್ತೇವೆ, ಸಾಕ್ಷಿ ನಿವೃತ್ತಿಯಿಂದ ಕ್ರೀಡಾ ಉದ್ಯಮ ಅಸಮಾಧಾನ: ವಿಜೇಂದರ್ ಸಿಂಗ್

ನಾವು ಮಹಿಳಾ ಅಥ್ಲೀಟ್‌ಗಳೊಂದಿಗೆ ನಿಲ್ಲುತ್ತೇವೆ, ಸಾಕ್ಷಿ ನಿವೃತ್ತಿಯಿಂದ ಕ್ರೀಡಾ ಉದ್ಯಮ ಅಸಮಾಧಾನ: ವಿಜೇಂದರ್ ಸಿಂಗ್

- Advertisement -
- Advertisement -

ಭಾರತೀಯ ಕುಸ್ತಿ ಫೆಡರೇಷನ್ ಮುಖ್ಯಸ್ಥರಾಗಿ (ಡಬ್ಲ್ಯೂಎಫ್ಐ) ಬಿಜೆಪಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ಆಪ್ತ ಸಂಜಯ್ ಸಿಂಗ್ ಆಯ್ಕೆಯಾಗಿದ್ದರಿಂದ ಮನನೊಂದು ಒಲಂಪಿಕ್ ಪದಕ ವಿಜೇತೆ, ಕುಸ್ತಿಪಟು ಸಾಕ್ಷಿ ಮಲ್ಲಿಕ್ ನಿವೃತ್ತಿ ಘೋಷಣೆ ಮಾಡಿದ್ದಾರೆ. ಈ ಕುರಿತು ಇಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿರುವ ಅಥ್ಲೀಟ್ ಹಾಗೂ ಕಾಂಗ್ರೆಸ್ ಮುಖಂಡ ವಿಜೇಂದರ್ ಸಿಂಗ್, ‘ನಾವು ಮಹಿಳಾ ಅಥ್ಲೀಟ್‌ಗಳ ಜತೆ ನಿಲ್ಲುತ್ತೇವೆ. ಸಾಕ್ಷಿ ಮಲ್ಲಿಕ್ ನಿವೃತ್ತಿ ನಿರ್ಧಾರದಿಂದ ಕ್ರೀಡಾ ಉದ್ಯಮ ಅಸಮಾಧಾನಗೊಂಡಿದೆ’ ಎಂದು ಹೇಳಿದ್ದಾರೆ.

ಒಲಿಂಪಿಕ್ಸ್‌ನಲ್ಲಿ ಚಿನ್ನದ ಪದಕ ಗೆದ್ದ ಭಾರತದ ಮೊದಲ ಬಾಕ್ಸರ್ ವಿಜೇಂದರ್ ಸಿಂಗ್, ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧದ ಹೋರಾಟದಲ್ಲಿ ಮುಂಚೂಣಿಯಲ್ಲಿರುವ ಕುಸ್ತಿಪಟು ಸಾಕ್ಷಿ ಮಲಿಕ್‌ಗೆ ಬೆಂಬಲ ಘೋಷಿಸಿದ್ದಾರೆ. ‘ಕ್ರೀಡಾ ಉದ್ಯಮವು ಕುಸ್ತಿಪಟು ಸಾಕ್ಷಿ ಮಲಿಕ್ ಅವರ ನಿವೃತ್ತಿಯಿಂದ ಅಸಮಾಧಾನಗೊಂಡಿದೆ. ನಾವು ಪ್ರತಿ ಆಟಗಾರ, ಪ್ರತಿ ಕ್ರೀಡಾಂಗಣ ಮತ್ತು ಪ್ರತಿ ‘ಅಖಾಡಾ’ಕ್ಕೆ ಹೋಗಿ ಅಥ್ಲೀಟ್‌ಗಳೊಂದಿಗೆ ಮಾತನಾಡುತ್ತೇವೆ. ಮಹಿಳಾ ಅಥ್ಲೀಟ್‌ಗಳ ಉದ್ಯೋಗ, ಸುರಕ್ಷತೆಗಾಗಿ ನಾವು ಅವರೊಂದಿಗೆ ನಿಲ್ಲುತ್ತೇವೆ’ ಎಂದು ಹೇಳಿದ್ದಾರೆ.

‘ಒಬ್ಬ ಮಹಿಳಾ ಆಟಗಾರ್ತಿಯಾಗಿ ಸಾಕ್ಷಿ ಮಲಿಕ್ ಅವರು ಕುಸ್ತಿ ತೊರೆಯುವ ನಿರ್ಧಾರ ಮಾಡುವಾಗ ಅವರಿಗಾಗಿರುವ ವೇದನೆಯನ್ನು ನಾನು ಅರ್ಥಮಾಡಿಕೊಳ್ಳಬಲ್ಲೆ. ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಸರ್ಕಾರದಿಂದ ನ್ಯಾಯ ಸಿಗಲಿಲ್ಲ. ದೇಶಕ್ಕಾಗಿ ಪದಕಗಳನ್ನು ತಂದುಕೊಟ್ಟ ಕ್ರೀಡಾಪಟುಗಳಿಗೆ ಹೀಗಾದರೆ, ಇನ್ನು ಜನ ಸಾಮಾನ್ಯರ ಗತಿಯೇನು’ ಎಂದು ಆತಂಕ ವ್ಯಕ್ತಪಡಿಸಿದ್ದಾರೆ.

‘ಒಬ್ಬ ಅಥ್ಲೀಟ್ ಆಗಿರುವ ನನಗೆ ಆಕೆಯ ನೋವು ಅರ್ಥವಾಗುತ್ತದೆ. ಕುಸ್ತಿಯಲ್ಲಿ ಪದಕ ಗೆದ್ದ ಏಕೈಕ ಮಹಿಳಾ ಆಟಗಾರ್ತಿ ನ್ಯಾಯಕ್ಕಾಗಿ ಬೇಡಿಕೆಯಿಟ್ಟಳು. ಆದರೆ, ಆಕೆಗೆ ಸಿಗಲಿಲ್ಲ. ಇದರಿಂದ ನೊಂದು ನಿವೃತ್ತಿ ಘೋಷಿಸಿದ್ದಾರೆ. ಇದರಿಂದ ಇಡೀ ವಿಶ್ವದಲ್ಲಿ ಭಾರತದ ಇಮೇಜ್ ಹೆಚ್ಚಾಗುತ್ತದೋ ಅಥವಾ ಕಡಿಮೆಯಾಗುತ್ತದೆಯೋ’ ಎಂದು ಪ್ರಶ್ನಿಸಿದರು.

‘ಸಾಕ್ಷಿ ನಿರ್ಧಾರಿಂದ ಇಡೀ ಕ್ರೀಡಾ ಉದ್ಯಮ ನಿರಾಶೆಗೊಂಡಿದೆ. ಹರಿಯಾಣದಲ್ಲಿ ಹುಡುಗರು ಮತ್ತು ಹುಡುಗಿಯರ ನಡುವೆ ತಾರತಮ್ಯವಿದೆ. ಈ ಬೆಳವಣಿಗೆ ನಂತರ ನಂತರ, ಪೋಷಕರು ತಮ್ಮ ಹೆಣ್ಣು ಮಕ್ಕಳನ್ನು ಕ್ರೀಡಾಂಗಣಕ್ಕೆ ಕಳುಹಿಸುತ್ತಾರೆಯೇ’ ಎಂದರು.

‘ಒಲಿಂಪಿಕ್ ಪದಕ ವಿಜೇತರಿಗೆ ನ್ಯಾಯ ನೀಡದಿದ್ದರೆ, ನಾವಾದರು ಅದನ್ನು ಹೇಗೆ ಪಡೆಯುತ್ತೇವೆ ಎಂದು ಹೆಣ್ಣುಮಕ್ಕಳ ಪೋಷಕರು ಚಿಂತಿಸುತ್ತಾರೆ? ಪ್ರಧಾನಿ, ಉಪರಾಷ್ಟ್ರಪತಿ ಮತ್ತು ರಾಷ್ಟ್ರಪತಿ ಎಲ್ಲರೂ ಬಂದು ಇದು ಹೇಗಾಯಿತು ಎಂದು ಉತ್ತರಿಸಬೇಕು. ಈ ಫಲಿತಾಂಶ ದೇಶದ ನ್ಯಾಯಾಂಗ ವ್ಯವಸ್ಥೆ ಮತ್ತು ಪ್ರಜಾಪ್ರಭುತ್ವದ ಕುರಿತು ಬಹಳಷ್ಟು ಪ್ರಶ್ನೆಗಳನ್ನು ಹುಟ್ಟುಹಾಕುತ್ತದೆ’ ಎಂದರು.

ಈ ಬಗ್ಗೆ ನಿನ್ನೆ ಸುದ್ದಿಗೋಷ್ಠಿ ನಡೆಸಿದ್ದ ಸಾಕ್ಷಿ ಮಲಿಕ್, ‘ಕುಸ್ತಿ ಸಂಸ್ಥೆಗೆ ಮಹಿಳಾ ಮುಖ್ಯಸ್ಥರು ಆಯ್ಕೆಯಾಗಬೇಕು ಎಂದು ನಾವು ಬಯಸಿದ್ದೆವೆ. ಆದರೆ, ಅದು ಸಾಧ್ಯವಾಗಲಿಲ್ಲ. ನಾವು ಹೋರಾಡಿದೆವು; ಆದರೆ ಹೊಸ ಅಧ್ಯಕ್ಷರು ಬ್ರಿಜ್ ಭೂಷಣ್ ಅವರ ಸಹಾಯಕ. ಅವರ ವ್ಯಾಪಾರದಲ್ಲಿ ಪಾಲುದಾರರಾಗಿದ್ದಾರೆ. ನಾನು ಕುಸ್ತಿಯನ್ನು ತ್ಯಜಿಸುತ್ತೇನೆ’ ಎಂದು ಹೇಳಿದ ಅವರು, ತನ್ನ ಬೂಟುಗಳನ್ನು ಕಳಚಿ ಮೇಜಿನ ಮೇಲಿಟ್ಟು ನಿವೃತ್ತಿ ಘೋಷಿಸಿದರು.

ಇದನ್ನೂ ಓದಿ; ಕುಸ್ತಿ ತ್ಯಜಿಸುತ್ತಿದ್ದೇನೆ…; ಬೂಟು ಕಳಚಿಟ್ಟ ಒಲಂಪಿಕ್ ಪದಕ ವಿಜೇತೆ ಸಾಕ್ಷಿ ಮಲಿಕ್!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪೆಂಗ್ವಿನ್ ಇಂಡಿಯಾ ಹಿಂದೆ ಸರಿದ ನಂತರ ಸೋನಿಯಾ ಗಾಂಧಿ ಅವರ ಆತ್ಮಚರಿತ್ರೆ ‘ಬಿಲಾಂಗಿಂಗ್’ ಅನ್ನು ಪ್ರಕಟಿಸಲಿರುವ ‘ಹಾರ್ಪರ್‌ಕಾಲಿನ್ಸ್’ 

ನವದೆಹಲಿ: ಕಾಂಗ್ರೆಸ್‌ನ ಹಿರಿಯ ನಾಯಕಿ ಸೋನಿಯಾ ಗಾಂಧಿ ಅವರ ಬಹುನಿರೀಕ್ಷಿತ ಆತ್ಮಚರಿತ್ರೆ ‘ಬಿಲಾಂಗಿಂಗ್: ಎ ಜರ್ನಿ ಆಫ್ ಲವ್’ ಇದೀಗ ಭಾರತದಲ್ಲಿ ಹಾರ್ಪರ್‌ಕಾಲಿನ್ಸ್ ಇಂಡಿಯಾ ಮೂಲಕ ಪ್ರಕಟವಾಗಲಿದೆ. ಪೆಂಗ್ವಿನ್ ರ‍್ಯಾಂಡಮ್ ಹೌಸ್ ಇಂಡಿಯಾ...

ಜೈಲಿನಲ್ಲಿ ಕಂಬಿ ಎಣಿಸುತ್ತಿರುವ 25 ಕ್ರಿಮಿನಲ್‌ಗಳು, ದೆಹಲಿಯ ಜಂತರ್-ಮಂತರ್‌ಗೆ ಬರುಲು ಹೇಗೆ ಸಾಧ? ತನಿಖಾ ವರದಿಯಲ್ಲಿ ಬಯಲಾಯ್ತು ಪೊಲೀಸರ ಕುತಂತ್ರ

ದೆಹಲಿಯ ಜಂತರ್ ಮಂತರ್‌ನಲ್ಲಿ ನಡೆದ ನೀಟ್-ಯುಜಿ (NEET-UG) ಪರೀಕ್ಷಾ ಅಕ್ರಮ ವಿರೋಧಿ ಪ್ರತಿಭಟನೆ ವೇಳೆ ದೆಹಲಿ ಪೊಲೀಸರು ಬಳಸಿದ್ದ ‘ಅಟೋಮೇಟೆಡ್ ಫೇಶಿಯಲ್ ರೆಕಗ್ನಿಷನ್ ಸಿಸ್ಟಮ್’ (AFRS - ಮುಖಚರ್ಯೆ ಗುರುತಿಸುವ ತಂತ್ರಜ್ಞಾನ) ಗಂಭೀರ...

ಪಶ್ಚಿಮ ಬಂಗಾಳ: ವರ್ಷದಲ್ಲಿ 1,000 ಆರ್‌ಎಸ್‌ಎಸ್‌ ಶಾಲೆ: ಶಿಕ್ಷಣ ವ್ಯವಸ್ಥೆಯನ್ನೇ ‘ರಾಷ್ಟ್ರೀಯತಾವಾದಿ’ಗೊಳಿಸುವುದಾಗಿ ಘೋಷಿಸಿದ ಸುವೇಂದು ಅಧಿಕಾರಿ

ಕೋಲ್ಕತ್ತಾ: ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಶೈಕ್ಷಣಿಕ ವಿಭಾಗವಾಗಿರುವ ವಿದ್ಯಾ ಭಾರತಿಯ ಶಾಲೆಗಳ ಸಂಖ್ಯೆಯನ್ನು ಪಶ್ಚಿಮ ಬಂಗಾಳದಲ್ಲಿ ಭಾರಿ ಪ್ರಮಾಣದಲ್ಲಿ ಹೆಚ್ಚಿಸುವುದಾಗಿ ಮುಖ್ಯಮಂತ್ರಿ ಸುವೇಂದು ಅಧಿಕಾರಿ ಘೋಷಿಸಿದ್ದಾರೆ. ರಾಜ್ಯದ ಪ್ರತಿಯೊಂದು ಜಿಲ್ಲೆ, ಪುರಸಭೆ...

SIR ನ್ಯಾಯಸಮ್ಮತವಾಗಿಲ್ಲ ಮಾಜಿ ಚುನಾವಣಾ ಆಯುಕ್ತ ಅಶೋಕ್ ಲಾವಾಸ ಆತಂಕ

ಭಾರತೀಯ ಚುನಾವಣಾ ಆಯೋಗವು (ಇಸಿಐ) ದೇಶಾದ್ಯಂತ ಕೈಗೊಂಡಿರುವ ಮತದಾರರ ಪಟ್ಟಿಯ ‘ವಿಶೇಷ ತೀವ್ರ ಪರಿಷ್ಕರಣೆ’ (SIR) ಪ್ರಕ್ರಿಯೆಯು ಶಾಸನಾತ್ಮಕವಾಗಿ ಕಾನೂನುಬದ್ಧವಾಗಿದ್ದರೂ, ನೈತಿಕವಾಗಿ ನ್ಯಾಯಸಮ್ಮತವಾಗಿಲ್ಲ ಎಂದು ಮಾಜಿ ಚುನಾವಣಾ ಆಯುಕ್ತ ಅಶೋಕ್ ಲಾವಾಸ ತೀವ್ರ...

ಜಂತರ್ ಮಂತರ್ ಹಲ್ಲೆ: ‘ತಲೆಬುರುಡೆ ಒಡೆದೆ, ಜೈಲಿಗೆ ಹೋಗಲಿಲ್ಲ; ಕಪಿಲ್ ಮಿಶ್ರಾ ನನ್ನ ಅಣ್ಣ’: ಬಿಜೆಪಿ ಬೆಂಬಲದ ಬಗ್ಗೆ ದಾಳಿ ಆರೋಪಿ ಬಹಿರಂಗ ಹೇಳಿಕೆ

ನವದೆಹಲಿ: ದೆಹಲಿಯ ಜಂತರ್ ಮಂತರ್‌ನಲ್ಲಿ ವಿದ್ಯಾರ್ಥಿಗಳ ಪ್ರತಿಭಟನೆಯ ವೇಳೆ ಪ್ರತಿಭಟನಾಕಾರಿಯ ತಂದೆಯ ಮೇಲೆ ನಡೆದ ಹಲ್ಲೆ ಪ್ರಕರಣ ಇದೀಗ ರಾಜಕೀಯ ವಿವಾದದ ಕೇಂದ್ರವಾಗಿದೆ. ಪ್ರಕರಣದ ಆರೋಪಿಯಾಗಿರುವ ಸ್ವತಃ ಬಲಪಂಥೀಯ ಹಾಗೂ ಹಿಂದೂತ್ವ ಕಾರ್ಯಕರ್ತ...

ದೆಹಲಿ: ‘ಖಾನ್’ ಎಂಬ ಹೆಸರಿನ ಕಾರಣಕ್ಕೆ ಪತ್ರಕರ್ತೆಯರ ಮೇಲೆ ಹಲ್ಲೆ ಆರೋಪ, FIR ದಾಖಲಿಸುವಂತೆ ಸಾಕೇತ್ ಠಾಣೆಯಲ್ಲಿ ಧರಣಿ

ದೆಹಲಿಯ ಸಾಕೇತ್ ಮ್ಯಾಕ್ಸ್ ಆಸ್ಪತ್ರೆಯ ಹೊಸ ವಿಭಾಗದ ಉದ್ಘಾಟನಾ ಕಾರ್ಯಕ್ರಮದ ವರದಿಗೆ ತೆರಳಿದ್ದ '4PM ನ್ಯೂಸ್ ನೆಟ್‌ವರ್ಕ್'ನ ಮುಸ್ಲಿಂ ಮಹಿಳಾ ಪತ್ರಕರ್ತೆಯರಾದ ಶಾಹೀನ್ ಖಾನ್ ಮತ್ತು ನಫೀಸಾ ಖಾನ್ ಅವರ ಮೇಲೆ ದಿಲ್ಲಿ...

ಮುಖ್ಯಮಂತ್ರಿಗಳನ್ನು ಪ್ರಶ್ನಿಸಿದ್ದಕ್ಕೆ ದೆಹಲಿ ಪೊಲೀಸರಿಂದ ಬಂಧನ-ಹಲ್ಲೆ: ಇಬ್ಬರು ಪತ್ರಕರ್ತೆಯರ ಆರೋಪ

ಸುದ್ದಿ ಮಾಡುತ್ತಿದ್ದಾಗ ದಕ್ಷಿಣ ದೆಹಲಿಯಲ್ಲಿ ದೆಹಲಿ ಪೊಲೀಸ್ ಸಿಬ್ಬಂದಿ ತಮ್ಮನ್ನು ವಶಕ್ಕೆ ಪಡೆದು ಥಳಿಸಿದ್ದಾರೆ ಎಂದು ಇಬ್ಬರು ಮುಸ್ಲಿಂ ಸ್ವತಂತ್ರ ಮಹಿಳಾ ಪತ್ರಕರ್ತೆಯರು ಆರೋಪಿಸಿದ್ದಾರೆ. '4 ಪಿಎಮ್ ನ್ಯೂಸ್ ನೆಟ್‌ವರ್ಕ್' (4 PM News...

ತ್ರಿಪುರಾ: ‘ದನ ಕಳ್ಳ’ ಎಂದು, ಖರೀದಿಸಿದ ದನಗಳೊಂದಿಗೆ ಹಿಂತಿರುಗುತ್ತಿದ್ದ ಮುಸ್ಲಿಂ ವ್ಯಾಪಾರಿ ಮೇಲೆ ಗುಂಪು ಹಲ್ಲೆ: 46 ವರ್ಷದ ಜಲೀಲುರ್ ರೆಹಮಾನ್ ಸಾವು

ಅಗರ್ತಲಾ: ಖರೀದಿಸಿದ ಎರಡು ದನಗಳನ್ನು ತೆಗೆದುಕೊಂಡು ಹೋಗುತ್ತಿದ್ದ ಮುಸ್ಲಿಂ ದನ ವ್ಯಾಪಾರಿಯೊಬ್ಬರನ್ನು ‘ದನ ಕಳ್ಳ’ ಎಂದು ಆರೋಪಿಸಿ ಗುಂಪೊಂದು ಥಳಿಸಿದ ಪರಿಣಾಮ ಅವರು ಮೃತಪಟ್ಟಿರುವ ಘಟನೆ ತ್ರಿಪುರಾದ ಕಲ್ಯಾಣಪುರ ಪೊಲೀಸ್ ಠಾಣೆ ವ್ಯಾಪ್ತಿಯ...

ಪ್ರಶ್ನಿಸುವವರನ್ನು ‘ದಿಮಾಗಿ ನಕ್ಸಲ್’ ಎಂದು ಕರೆಯುವುದು ಸೂಕ್ಷ್ಮತೆಯಿಲ್ಲದ ನಡವಳಿಕೆ: ಗೀತಾಂಜಲಿ ಅಂಗಮೋ

ಪ್ರಶ್ನೆ ಕೇಳುವ ವ್ಯಕ್ತಿಯನ್ನು ‘ದಿಮಾಗಿ ನಕ್ಸಲ್’ (ಬುದ್ಧಿಜೀವಿ ನಕ್ಸಲರು) ಎಂದು ಕರೆಯುವುದು ಅತ್ಯಂತ ಸೂಕ್ಷ್ಮತೆಯಿಲ್ಲದ ರೀತಿಯಾಗಿದೆ ಎಂದು ಪ್ರಸಿದ್ಧ ಹವಾಮಾನ ಕಾರ್ಯಕರ್ತ ಮತ್ತು ಶಿಕ್ಷಣ ತಜ್ಞ ಸೋನಂ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ...

ಬಸವರಾಜ ಕನ್ನಾಳೆ ಸಿಂಡಿಕೇಟ್ ಸದಸ್ಯತ್ವ ರದ್ದಾಗುತ್ತಾ? ರಾಜಭವನದ ಮೌನಕ್ಕೆ ಮೂಡಿದ ಅನುಮಾನ

ತುಮಕೂರು ವಿಶ್ವವಿದ್ಯಾಲಯದ ರಾಜ್ಯಪಾಲರ ನಾಮನಿರ್ದೇಶಿತ ಸಿಂಡಿಕೇಟ್ ಸದಸ್ಯ ಬಸವರಾಜ ಕನ್ನಾಳೆ ಬಂಧನದ ಬೆನ್ನಲ್ಲೇ, ತನಿಖಾ ಸಂಸ್ಥೆಗಳು ತಮ್ಮ ಕಾರ್ಯಾಚರಣೆಯನ್ನು ತೀವ್ರಗೊಳಿಸಿವೆ. ಪ್ರಕರಣಕ್ಕೆ ಸಂಬಂಧಿಸಿದಂತೆ ತುಮಕೂರು ವಿವಿಯ ಪ್ರಭಾರ ಕುಲಪತಿ ಪ್ರೊ. ನಾಗಭೂಷಣ ಅವರಿಂದ...