Homeಮುಖಪುಟನಾವು ಮಹಿಳಾ ಅಥ್ಲೀಟ್‌ಗಳೊಂದಿಗೆ ನಿಲ್ಲುತ್ತೇವೆ, ಸಾಕ್ಷಿ ನಿವೃತ್ತಿಯಿಂದ ಕ್ರೀಡಾ ಉದ್ಯಮ ಅಸಮಾಧಾನ: ವಿಜೇಂದರ್ ಸಿಂಗ್

ನಾವು ಮಹಿಳಾ ಅಥ್ಲೀಟ್‌ಗಳೊಂದಿಗೆ ನಿಲ್ಲುತ್ತೇವೆ, ಸಾಕ್ಷಿ ನಿವೃತ್ತಿಯಿಂದ ಕ್ರೀಡಾ ಉದ್ಯಮ ಅಸಮಾಧಾನ: ವಿಜೇಂದರ್ ಸಿಂಗ್

- Advertisement -
- Advertisement -

ಭಾರತೀಯ ಕುಸ್ತಿ ಫೆಡರೇಷನ್ ಮುಖ್ಯಸ್ಥರಾಗಿ (ಡಬ್ಲ್ಯೂಎಫ್ಐ) ಬಿಜೆಪಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ಆಪ್ತ ಸಂಜಯ್ ಸಿಂಗ್ ಆಯ್ಕೆಯಾಗಿದ್ದರಿಂದ ಮನನೊಂದು ಒಲಂಪಿಕ್ ಪದಕ ವಿಜೇತೆ, ಕುಸ್ತಿಪಟು ಸಾಕ್ಷಿ ಮಲ್ಲಿಕ್ ನಿವೃತ್ತಿ ಘೋಷಣೆ ಮಾಡಿದ್ದಾರೆ. ಈ ಕುರಿತು ಇಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿರುವ ಅಥ್ಲೀಟ್ ಹಾಗೂ ಕಾಂಗ್ರೆಸ್ ಮುಖಂಡ ವಿಜೇಂದರ್ ಸಿಂಗ್, ‘ನಾವು ಮಹಿಳಾ ಅಥ್ಲೀಟ್‌ಗಳ ಜತೆ ನಿಲ್ಲುತ್ತೇವೆ. ಸಾಕ್ಷಿ ಮಲ್ಲಿಕ್ ನಿವೃತ್ತಿ ನಿರ್ಧಾರದಿಂದ ಕ್ರೀಡಾ ಉದ್ಯಮ ಅಸಮಾಧಾನಗೊಂಡಿದೆ’ ಎಂದು ಹೇಳಿದ್ದಾರೆ.

ಒಲಿಂಪಿಕ್ಸ್‌ನಲ್ಲಿ ಚಿನ್ನದ ಪದಕ ಗೆದ್ದ ಭಾರತದ ಮೊದಲ ಬಾಕ್ಸರ್ ವಿಜೇಂದರ್ ಸಿಂಗ್, ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧದ ಹೋರಾಟದಲ್ಲಿ ಮುಂಚೂಣಿಯಲ್ಲಿರುವ ಕುಸ್ತಿಪಟು ಸಾಕ್ಷಿ ಮಲಿಕ್‌ಗೆ ಬೆಂಬಲ ಘೋಷಿಸಿದ್ದಾರೆ. ‘ಕ್ರೀಡಾ ಉದ್ಯಮವು ಕುಸ್ತಿಪಟು ಸಾಕ್ಷಿ ಮಲಿಕ್ ಅವರ ನಿವೃತ್ತಿಯಿಂದ ಅಸಮಾಧಾನಗೊಂಡಿದೆ. ನಾವು ಪ್ರತಿ ಆಟಗಾರ, ಪ್ರತಿ ಕ್ರೀಡಾಂಗಣ ಮತ್ತು ಪ್ರತಿ ‘ಅಖಾಡಾ’ಕ್ಕೆ ಹೋಗಿ ಅಥ್ಲೀಟ್‌ಗಳೊಂದಿಗೆ ಮಾತನಾಡುತ್ತೇವೆ. ಮಹಿಳಾ ಅಥ್ಲೀಟ್‌ಗಳ ಉದ್ಯೋಗ, ಸುರಕ್ಷತೆಗಾಗಿ ನಾವು ಅವರೊಂದಿಗೆ ನಿಲ್ಲುತ್ತೇವೆ’ ಎಂದು ಹೇಳಿದ್ದಾರೆ.

‘ಒಬ್ಬ ಮಹಿಳಾ ಆಟಗಾರ್ತಿಯಾಗಿ ಸಾಕ್ಷಿ ಮಲಿಕ್ ಅವರು ಕುಸ್ತಿ ತೊರೆಯುವ ನಿರ್ಧಾರ ಮಾಡುವಾಗ ಅವರಿಗಾಗಿರುವ ವೇದನೆಯನ್ನು ನಾನು ಅರ್ಥಮಾಡಿಕೊಳ್ಳಬಲ್ಲೆ. ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಸರ್ಕಾರದಿಂದ ನ್ಯಾಯ ಸಿಗಲಿಲ್ಲ. ದೇಶಕ್ಕಾಗಿ ಪದಕಗಳನ್ನು ತಂದುಕೊಟ್ಟ ಕ್ರೀಡಾಪಟುಗಳಿಗೆ ಹೀಗಾದರೆ, ಇನ್ನು ಜನ ಸಾಮಾನ್ಯರ ಗತಿಯೇನು’ ಎಂದು ಆತಂಕ ವ್ಯಕ್ತಪಡಿಸಿದ್ದಾರೆ.

‘ಒಬ್ಬ ಅಥ್ಲೀಟ್ ಆಗಿರುವ ನನಗೆ ಆಕೆಯ ನೋವು ಅರ್ಥವಾಗುತ್ತದೆ. ಕುಸ್ತಿಯಲ್ಲಿ ಪದಕ ಗೆದ್ದ ಏಕೈಕ ಮಹಿಳಾ ಆಟಗಾರ್ತಿ ನ್ಯಾಯಕ್ಕಾಗಿ ಬೇಡಿಕೆಯಿಟ್ಟಳು. ಆದರೆ, ಆಕೆಗೆ ಸಿಗಲಿಲ್ಲ. ಇದರಿಂದ ನೊಂದು ನಿವೃತ್ತಿ ಘೋಷಿಸಿದ್ದಾರೆ. ಇದರಿಂದ ಇಡೀ ವಿಶ್ವದಲ್ಲಿ ಭಾರತದ ಇಮೇಜ್ ಹೆಚ್ಚಾಗುತ್ತದೋ ಅಥವಾ ಕಡಿಮೆಯಾಗುತ್ತದೆಯೋ’ ಎಂದು ಪ್ರಶ್ನಿಸಿದರು.

‘ಸಾಕ್ಷಿ ನಿರ್ಧಾರಿಂದ ಇಡೀ ಕ್ರೀಡಾ ಉದ್ಯಮ ನಿರಾಶೆಗೊಂಡಿದೆ. ಹರಿಯಾಣದಲ್ಲಿ ಹುಡುಗರು ಮತ್ತು ಹುಡುಗಿಯರ ನಡುವೆ ತಾರತಮ್ಯವಿದೆ. ಈ ಬೆಳವಣಿಗೆ ನಂತರ ನಂತರ, ಪೋಷಕರು ತಮ್ಮ ಹೆಣ್ಣು ಮಕ್ಕಳನ್ನು ಕ್ರೀಡಾಂಗಣಕ್ಕೆ ಕಳುಹಿಸುತ್ತಾರೆಯೇ’ ಎಂದರು.

‘ಒಲಿಂಪಿಕ್ ಪದಕ ವಿಜೇತರಿಗೆ ನ್ಯಾಯ ನೀಡದಿದ್ದರೆ, ನಾವಾದರು ಅದನ್ನು ಹೇಗೆ ಪಡೆಯುತ್ತೇವೆ ಎಂದು ಹೆಣ್ಣುಮಕ್ಕಳ ಪೋಷಕರು ಚಿಂತಿಸುತ್ತಾರೆ? ಪ್ರಧಾನಿ, ಉಪರಾಷ್ಟ್ರಪತಿ ಮತ್ತು ರಾಷ್ಟ್ರಪತಿ ಎಲ್ಲರೂ ಬಂದು ಇದು ಹೇಗಾಯಿತು ಎಂದು ಉತ್ತರಿಸಬೇಕು. ಈ ಫಲಿತಾಂಶ ದೇಶದ ನ್ಯಾಯಾಂಗ ವ್ಯವಸ್ಥೆ ಮತ್ತು ಪ್ರಜಾಪ್ರಭುತ್ವದ ಕುರಿತು ಬಹಳಷ್ಟು ಪ್ರಶ್ನೆಗಳನ್ನು ಹುಟ್ಟುಹಾಕುತ್ತದೆ’ ಎಂದರು.

ಈ ಬಗ್ಗೆ ನಿನ್ನೆ ಸುದ್ದಿಗೋಷ್ಠಿ ನಡೆಸಿದ್ದ ಸಾಕ್ಷಿ ಮಲಿಕ್, ‘ಕುಸ್ತಿ ಸಂಸ್ಥೆಗೆ ಮಹಿಳಾ ಮುಖ್ಯಸ್ಥರು ಆಯ್ಕೆಯಾಗಬೇಕು ಎಂದು ನಾವು ಬಯಸಿದ್ದೆವೆ. ಆದರೆ, ಅದು ಸಾಧ್ಯವಾಗಲಿಲ್ಲ. ನಾವು ಹೋರಾಡಿದೆವು; ಆದರೆ ಹೊಸ ಅಧ್ಯಕ್ಷರು ಬ್ರಿಜ್ ಭೂಷಣ್ ಅವರ ಸಹಾಯಕ. ಅವರ ವ್ಯಾಪಾರದಲ್ಲಿ ಪಾಲುದಾರರಾಗಿದ್ದಾರೆ. ನಾನು ಕುಸ್ತಿಯನ್ನು ತ್ಯಜಿಸುತ್ತೇನೆ’ ಎಂದು ಹೇಳಿದ ಅವರು, ತನ್ನ ಬೂಟುಗಳನ್ನು ಕಳಚಿ ಮೇಜಿನ ಮೇಲಿಟ್ಟು ನಿವೃತ್ತಿ ಘೋಷಿಸಿದರು.

ಇದನ್ನೂ ಓದಿ; ಕುಸ್ತಿ ತ್ಯಜಿಸುತ್ತಿದ್ದೇನೆ…; ಬೂಟು ಕಳಚಿಟ್ಟ ಒಲಂಪಿಕ್ ಪದಕ ವಿಜೇತೆ ಸಾಕ್ಷಿ ಮಲಿಕ್!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

“ಎಷ್ಟೊಂದು ದುರಹಂಕಾರ!”: ಜೆ.ಪಿ.ನಡ್ಡಾ ಹೇಳಿಕೆಗೆ ಕಪಿಲ್ ಸಿಬಲ್ ತೀವ್ರ ಆಕ್ಷೇಪ; ಪ್ರತಿಭಟನಾನಿರತ ಸಿಜೆಪಿ ಬೆಂಬಲಿಸಿ ವೀಡಿಯೋ ಸಂದೇಶ

ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಕ್ರಾಂತಿಕಾರಿ ಜಿರಳೆ ಜನತಾ ಪಕ್ಷ (ಸಿಜೆಪಿ) ನಡೆಸುತ್ತಿರುವ ವಿದ್ಯಾರ್ಥಿ ಪ್ರತಿಭಟನೆಯ ವಿಚಾರದಲ್ಲಿ ಕೇಂದ್ರ ಸರ್ಕಾರದ ನಡೆಗೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ನಡುವೆ ಕೇಂದ್ರ ಸಚಿವ ಜೆ.ಪಿ....

ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ: ಮೋದಿ-ಅಮಿತ್ ಶಾ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ 'ಸಂಸತ್ ಚಲೋ' ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಕಾಂಗ್ರೆಸ್ ನಾಯಕ ರಾಹುಲ್...

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...

‘ಸಂಸತ್ ಚಲೋ’: ‘ಸೋನಮ್ ವಾಂಗ್ಚುಕ್ ಪತ್ನಿ ಮೇಲೆ ದೆಹಲಿ ಪೊಲೀಸರಿಂದ ಹಲ್ಲೆ’: ವಿದ್ಯಾರ್ಥಿಗಳ ಮೇಲೂ ಲಾಠಿ ಚಾರ್ಜ್  

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಆಯೋಜಿಸಲಾಗಿದ್ದ ‘ಸಂಸದ್ ಚಲೋ’ ಮೆರವಣಿಗೆಯ ವೇಳೆ ಶಿಕ್ಷಣ ತಜ್ಞ ಹಾಗೂ ಲಡಾಖ್ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಜೆ. ಆಂಗ್ಮೋ ಸೇರಿದಂತೆ ಹಲವಾರು ಪ್ರತಿಭಟನಾಕಾರರ ಮೇಲೆ...

ಕನಿಷ್ಠ 20 ಸಾವಿರ ‘ಕಾಕ್ರೋಚ್‌’ಗಳಿಂದ ಸಂಸತ್ತಿಗೆ ಮೆರವಣಿಗೆ; ವಿದ್ಯಾರ್ಥಿಗಳ ಮೇಲೆ ಪೊಲೀಸರಿಂದ ಲಾಠಿಚಾರ್ಜ್ – ಅಶ್ರುವಾಯು

ಧರ್ಮೇಂದ್ರ ಪ್ರಧಾನ್ ರಾಜೀನಾಮಗೆ ಒತ್ತಾಯಿಸಿ ಮುಂಗಾರು ಅಧಿವೇಶನದ ಮೊದಲ ದಿನದಂದು ಸಂಸತ್ತಿಗೆ ಮೆರವಣಿಗೆ ನಡೆಸಲು ದೆಹಲಿಯಲ್ಲಿ ಜಮಾಯಿಸಿದ್ದ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಸಾವಿರಾರು ಬೆಂಬಲಿಗರನ್ನು ಚದುರಿಸಲು ದೆಹಲಿ ಪೊಳಿಸರು ಅಶ್ರುವಾಯು ಶೆಲ್‌ಗಳನ್ನು...

ಸಿಜೆಪಿ ಪ್ರತಿಭಟನೆಗೆ ನಡುಗಿದ ಕೇಂದ್ರ ಸರ್ಕಾರ; ತರಾತುರಿಯಲ್ಲಿ ಸಂಸತ್ತಿನ ಗೇಟ್ ಮುಚ್ಚಿದ ಭದ್ರತಾ ಸಿಬ್ಬಂದಿ

ನೀಟ್‌ ಪರೀಕ್ಷೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳನ್ನು ವಿರೋಧಿಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಒತ್ತಾಯಿಸಿ ಇಂದು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಹಮ್ಮಿಕೊಂಡಿರುವ ಸಂಸತ್ ಮೆರವಣಿಗೆಗೆ ಕೇಂದ್ರ ಸರ್ಕಾರ...

ಹಕ್ಕುಗಳ ಕಾಯ್ದೆಗೆ 7 ವರ್ಷ: ಕಾಗದದಲ್ಲಷ್ಟೇ ಸಮಾನತೆ, ಉದ್ಯೋಗ ಸಿಗದೆ ಬೀದಿಗೆ ತಳ್ಳಲ್ಪಡುತ್ತಿರುವ ಟ್ರಾನ್ಸ್‌ಜೆಂಡರ್‌ ಸಮುದಾಯ

ಬೆಂಗಳೂರು: ರಾಷ್ಟ್ರೀಯ ಮಟ್ಟದಲ್ಲಿ ‘ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ಕಾಯ್ದೆ-2019’ ಜಾರಿಗೆ ಬಂದು ಏಳು ವರ್ಷಗಳು ಕಳೆದಿದ್ದರೂ, ಸಮುದಾಯದ ಆರ್ಥಿಕ ಸಬಲೀಕರಣ ಇನ್ನೂ ಕನಸಾಗಿಯೇ ಉಳಿದಿದೆ. ಬೆಂಗಳೂರಿನ ಸಾಮಾಜಿಕ ಮತ್ತು ಆರ್ಥಿಕ ಬದಲಾವಣೆ...

ಸಂಸತ್‌ ಚಲೋ: ಕಾಕ್ರೋಚ್ ಜನತಾ ಪಾರ್ಟಿ ಪ್ರತಿಭಟನೆಗೆ ಭಾರೀ ಬೆಂಬಲ

ದೇಶಾದ್ಯಂತ ಭಾರಿ ಸಂಚಲನ ಸೃಷ್ಟಿಸಿರುವ ನೀಟ್‌ (NEET) ಪ್ರಶ್ನೆಪತ್ರಿಕೆ ಸೋರಿಕೆ, ಸಾಲು ಸಾಲು ವಿದ್ಯಾರ್ಥಿಗಳ ಆತ್ಮಹತ್ಯೆ ಹಾಗೂ ದೇಶದ ಪರೀಕ್ಷಾ ವ್ಯವಸ್ಥೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ (CJP) ಆಯೋಜಿಸಿರುವ...

ಡಿಜಿಟಲೀಕರಣಗೊಂಡ 2002ರ ಮತದಾರರ ಪಟ್ಟಿಯಿಂದ ಬೆಂಗಳೂರಿನ ಮತಗಟ್ಟೆಗಳೇ ಮಾಯ: ಮಾಹಿತಿ ಸಿಗದೆ ಆತಂಕದಲ್ಲಿ ನೂರಾರು ಮತದಾರರು

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಹಲವು ಭಾಗಗಳಲ್ಲಿ 2002ರ ಡಿಜಿಟಲೀಕರಣಗೊಂಡ ಮತದಾರರ ಪಟ್ಟಿಯಿಂದ ಇಡೀ ಮತಗಟ್ಟೆಗಳೇ ಕಾಣೆಯಾಗಿರುವ ಗಂಭೀರ ಪ್ರಕರಣವೊಂದು ಬೆಳಕಿಗೆ ಬಂದಿದೆ. ಇದರಿಂದಾಗಿ ನೂರಾರು ಮತದಾರರು ಆತಂಕ ಮತ್ತು ಗೊಂದಲಕ್ಕೊಳಗಾಗಿದ್ದಾರೆ ಎಂದು...

‘ರಾಮನಿಗೆ ಅವಮಾನಿಸಿದ್ದಕ್ಕೆ ಶಾಯಿ ಎರಚಿದೆ’: ಜಂತರ್ ಮಂತರ್‌ನಲ್ಲಿ ಅಭಿಜೀತ್ ದೀಪ್ಕೆ ಮೇಲಿನ ದಾಳಿಯನ್ನು ಸಮರ್ಥಿಸಿಕೊಂಡ ಬರ್ಖಾ ಟ್ರೆಹಾನ್

ನವದೆಹಲಿ: ದೇಶದ ರಾಜಧಾನಿಯ ಜಂತರ್ ಮಂತರ್‌ನಲ್ಲಿ ಜುಲೈ 18 ರ ಶನಿವಾರದಂದು ನಡೆದ ಪ್ರತಿಭಟನಾ ಸಭೆಯಲ್ಲಿ ಭಾಷಣ ಮಾಡುತ್ತಿದ್ದ ‘ಜಿರಳೆ ಜನತಾ ಪಕ್ಷ’ದ ಸಂಸ್ಥಾಪಕ ಅಭಿಜೀತ್ ದೀಪ್ಕೆ ಅವರ ಮೇಲೆ ಶಾಯಿ ಎರಚಿದ...